ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ; ಸಣ್ಣ ಎನ್​ಬಿಎಫ್​ಸಿಗಳಿಗೆ ನೊಂದಣಿ ವಿನಾಯಿತಿ – Kannada News | RBI rises collateral free loan limit for MSMEs, exempts NBFCs with smaller asset size from registration

ನವದೆಹಲಿ, ಫೆಬ್ರುವರಿ 6: ಸಣ್ಣ ಉದ್ದಿಮೆಗಳಿಗೆ ಪುಷ್ಟಿ ನೀಡಲು ಆರ್​ಬಿಐ (RBI) ತನ್ನ ಅಡಮಾನರಹಿತ ಸಾಲದ (Collateral-free loan) ಮಿತಿಯನ್ನು ಏರಿಸಿದೆ. ಆರ್​ಬಿಐ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಎಂಎಸ್​ಎಂಇಗಳಿಗೆ ಅಡಮಾನರಹಿತವಾಗಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. 10 ಲಕ್ಷ ರೂ ಇದ್ದ ಇಂಥ ಸಾಲದ ಮಿತಿಯನ್ನು 20 ಲಕ್ಷ ರೂಗೆ ಹೆಚ್ಚಿಸಲಾಗಿದೆ.

ಇದರೊಂದಿಗೆ, ಎಂಎಸ್​ಎಂಇಗಳು ಯಾವುದೇ ಸೆಕ್ಯೂರಿಟಿ ಒದಗಿಸುವ ಅಗತ್ಯ ಇಲ್ಲದೇ 20 ಲಕ್ಷ ರೂವರೆಗೆ ಸಾಲ ಪಡೆಯಲು ಅವಕಾಶ ಇರುತ್ತದೆ. ಈ ಕ್ರಮವು ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಿಗೆ ಸುಲಭ ಸಾಲಕ್ಕೆ ಅವಕಾಶ ಕೊಡುತ್ತದೆ. ಎಂಎಸ್​ಎಂಇಗಳು ದೇಶದ ಅರ್ಥ ವ್ಯವಸ್ಥೆಯ ಪ್ರಮುಖ ಭಾಗವಾಗಿರುವುದರಿಂದ, ಅವುಗಳ ಆರೋಗ್ಯ ಕಾಪಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳಲ್ಲಿ ಇದೂ ಒಂದು.

ಇದನ್ನೂ ಓದಿ: ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ

ಸಣ್ಣ ಎನ್​ಬಿಎಫ್​ಸಿಗಳಿಗೆ ನೊಂದಣಿಯಿಂದ ವಿನಾಯಿತಿ

1,000 ಕೋಟಿ ರೂಗಿಂತ ಕಡಿಮೆ ಫಂಡಿಂಗ್ ಹೊಂದಿರುವ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್​ಬಿಎಫ್​ಸಿ) ನೊಂದಾಯಿಸಿಕೊಳ್ಳುವುದು ಕಡ್ಡಾಯಾಗಿರುವುದಿಲ್ಲ. ಹೆಚ್ಚಿನ ಗಾತ್ರದ ಎನ್​ಬಿಎಫ್​ಸಿಗಳು ಮಾತ್ರವೇ ಕಡ್ಡಾಯವಾಗಿ ನೊಂದಣಿ ಮಾಡಿಸಬೇಕು.

ಹಾಗೆಯೇ, ಕೆಲ ಎನ್​ಬಿಎಫ್​ಸಿಗಳು 1,000ಕ್ಕಿಂತ ಹೆಚ್ಚು ಶಾಖೆಗಳನ್ನು ತೆರೆಯಲು ಮುಂಚಿತವಾಗಿ ಅನುಮತಿ ಪಡೆಯಬೇಕೆಂದ ನಿಯಮವನ್ನೂ ಸಡಿಲಿಸಲಾಗಿದೆ.

ಇದನ್ನೂ ಓದಿ: ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ

ಪೇಮೆಂಟ್ ವಂಚನೆಯಾದರೆ 25,000 ರೂವರೆಗೆ ಪರಿಹಾರ

ಇದೇ ವೇಳೆ, ಆರ್​ಬಿಐ ಗವರ್ನರ್ ಅವರು ಪೇಮೆಂಟ್ ವಂಚನೆಗೊಳಗಾದ ಗ್ರಾಹಕರಿಗೆ 25,000 ರೂವರೆಗೆ ಪರಿಹಾರ ಒದಗಿಸುವ ಒಂದು ವ್ಯವಸ್ಥೆ ತರುತ್ತಿರುವುದಾಗಿ ತಿಳಿಸಿದ್ದಾರೆ. ಇದು ಸಣ್ಣ ಮೊತ್ತದ ವಂಚನೆಗೆ ಸಿಗಬಹುದಾದ ಪರಿಹಾರ. ಎಂಥ ಟ್ರಾನ್ಸಾಕ್ಷನ್​ಗಳಿಗೆ ಇದು ಅನ್ವಯ ಆಗುತ್ತದೆ ಎಂಬಿತ್ಯಾದಿ ಮಾಹಿತಿ ಗೊತ್ತಾಗಬೇಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಮಲಾಕರ ಭಟ್ ಮತ್ತೊಂದು ಸೀಕ್ರೆಟ್ ಬಯಲು! ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಗಳಿಸಿದ್ದ ಜ್ಯೋತಿಷಿ – Kannada News | Astrologer Kamalakar Bhat Under Scanner: Crores Worth Assets in Name of Goshala Surface Amid Murder Case Probe

ಶಿವಮೊಗ್ಗ, ಫೆಬ್ರವರಿ 6: ರೀಲ್ಸ್ ರಾಣಿ ಸುಚಿತ್ರಾ ಜತೆ ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಸುದ್ದಿಯಲ್ಲಿರುವ ಕಮಲಾಕರ ಭಟ್ ಮತ್ತೊಂದು ರಹಸ್ಯ ಈಗ ಬಯಲಾಗಿದೆ. ಕಡಿಮೆ ಅವಧಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಎಕರೆಗಟ್ಟಲೆ ಆಸ್ತಿ ಖರೀದಿಸಿದ ವಿಚಾರ ಈಗ ಬೆಳಕಿಗೆ ಬಂದಿದ್ದು, ಆಸ್ತಿಗಳ ಕುರಿತು ಕೂಡ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದಲ್ಲಿ ಕಮಲಾಕರ್ ಭಟ್ 10 ಎಕರೆಗೂ ಹೆಚ್ಚು ಭೂಮಿಯನ್ನು ಖರೀದಿಸಿದ್ದ. ಈ ಜಮೀನನ್ನು ಗೋಶಾಲೆ, ಮಠ ಮತ್ತು ದೇವಸ್ಥಾನ ನಿರ್ಮಿಸಲು ಬಳಸುವುದಾಗಿ ಹೇಳಲಾಗಿತ್ತು. ಆದರೆ, ಸ್ಥಳದಲ್ಲಿ ಗೋವುಗಳಾಗಲೀ, ಸಿಬ್ಬಂದಿಯಾಗಲೀ ಕಂಡುಬರುತ್ತಿಲ್ಲ. ಕೇವಲ ಕೆಲವು ಶೆಡ್‌ಗಳು ಮತ್ತು ದೇವಸ್ಥಾನದ ಕಾಮಗಾರಿ ಮಾತ್ರ ಗೋಚರಿಸುತ್ತಿದೆ.

ಕಮಲಾಕರ್ ಭಟ್, ಕೆಲವೇ ವರ್ಷಗಳಲ್ಲಿ ಅಪಾರ ಆಸ್ತಿ ಸಂಪಾದಿಸಿದ್ದಾರೆ. ಶಿವಮೊಗ್ಗದಲ್ಲಿ ಮನೆ ಹೊಂದಿದ್ದ ಇವರು, ಸುಚಿತ್ರಾ ಪರಿಚಯದ ನಂತರ ಆಕೆಯ ಪತಿಯ ಅಣ್ಣ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಸುಚಿತ್ರಾ ಜೊತೆಗಿನ ಸಂಬಂಧವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಕಮಲಾಕರ್ ಭಟ್ ಅವರ ಅಕ್ರಮ ಆಸ್ತಿ ಸಂಪಾದನೆ ಕುರಿತು ಸಾರ್ವಜನಿಕ ವಲಯದಲ್ಲಿ ಈಗ ಪ್ರಶ್ನೆಗಳು ಮೂಡಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಆರ್​​ಆರ್​​ಆರ್’ ಸಿನಿಮಾ ರೀಮೇಕ್ ಆಗುತ್ತಿದೆ, ಆದರೆ ಬೇರೆ ರೂಪದಲ್ಲಿ – Kannada News | SS Rajamouli planning to remade RRR movie in Anime

ರಾಜಮೌಳಿ (Rajamouli) ಈಗ ಗ್ಲೋಬಲ್ ಐಕಾನ್ ಆಗಿದ್ದಾರೆ. ಅವರನ್ನು ಗ್ಲೋಬಲ್ ಐಕಾನ್ ಆಗುವಂತೆ ಮಾಡಿದ್ದು ಅವರ ಈ ಹಿಂದಿನ ಸಿನಿಮಾ ‘ಆರ್​​ಆರ್​​ಆರ್’. ಈ ಸಿನಿಮಾ ಭಾರಿ ಯಶಸ್ಸು ಗಳಿಸುವ ಜೊತೆಗೆ ವಿದೇಶದ ಬಾಕ್ಸ್ ಆಫೀಸ್​​ನಲ್ಲೂ ದೊಡ್ಡ ಯಶಸ್ಸು ಗಳಿಸಿತು. ಜೇಮ್ಸ್ ಕ್ಯಾಮೆರಾನ್, ಸ್ಟಿವನ್ ಸ್ಪೀಲ್​​ಬರ್ಗ್ ಇನ್ನೂ ಹಲವು ಖ್ಯಾತನಾಮ ನಿರ್ದೇಶಕರು ಸಿನಿಮಾ ನೋಡಿ ರಾಜಮೌಳಿಯ ಪ್ರತಿಭೆಯನ್ನು ಕೊಂಡಾಡಿದರು. ಇದೀಗ ಈ ಸಿನಿಮಾವನ್ನು ಇನ್ನೊಂದು ರೂಪದಲ್ಲಿ ಹೊರ ತರಲು ರಾಜಮೌಳಿ ಸಜ್ಜಾಗಿದ್ದಾರೆ.

ರಾಜಮೌಳಿ ಅವರು ತಮ್ಮ ಬ್ಲಾಕ್‌ಬಸ್ಟರ್ ಸಿನಿಮಾ ‘RRR’ ಅನ್ನು ಅನಿಮೆ (Anime) ರೂಪದಲ್ಲಿ ತರುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಸಿನಿಮಾ ಪ್ರೇಮಿಗಳಲ್ಲಿ ಮತ್ತು ವಿಶೇಷವಾಗಿ ಅನಿಮೆ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಅನಿಮೆ ಭಾರಿ ಜನಪ್ರಿಯ ಆಗಿರುವ ಹಾಗೂ ಅತಿ ಹೆಚ್ಚು ಅನಿಮೆ ಸಿನಿಮಾಗಳು ರೂಪುತಳೆಯುವ, ಜಪಾನ್‌ನಲ್ಲಿ ‘RRR’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡ ಹಿನ್ನೆಲೆಯಲ್ಲಿ, ರಾಜಮೌಳಿ ಅವರಿಗೆ ‘ಆರ್​​ಆರ್​​ಆರ್’ ಸಿನಿಮಾವನ್ನು ಅನಿಮೆ ರೂಪದಲ್ಲಿ ರೀಮೇಕ್ ಮಾಡುವ ಐಡಿಯಾ ಬಂದಿದೆ.

ರಾಜಮೌಳಿ ಅವರಿಗೆ ಸಿನಿಮಾದ ವಿವಿಧ ತಂತ್ರಜ್ಞಾನಗಳ ಬಗ್ಗೆ ಬಹಳ ಆಸಕ್ತಿ. ಅವರ ನಿರ್ದೇಶನದ ‘ಬಾಹುಬಲಿ’ ಸಿನಿಮಾವನ್ನು ಕಾರ್ಟೂನ್ ರೂಪದಲ್ಲಿ ಈಗಾಗಲೇ ಹೊರ ತರುತ್ತಿದ್ದು, ಅದರ ಟ್ರೈಲರ್ ಸಹ ಈಗಾಗಲೇ ಬಿಡುಗಡೆ ಆಗಿದೆ. ಇದೀಗ ‘ಆರ್​​ಆರ್​​ಆರ್’ ಅನ್ನು ಅನಿಮೆ ರೂಪದಲ್ಲಿ ಹೊರತರುವ ಬಗ್ಗೆ ಆಲೋಚಿಸಿದ್ದಾರೆ. ರಾಜಮೌಳಿ ಅವರು ತಮ್ಮ ಕಳೆದ ಜಪಾನ್ ಪ್ರವಾಸದ ವೇಳೆ ಅವರು ಕಜುಟೊ ನಕಜಾವಾ ಹಾಗೂ ಇನ್ನೂ ಕೆಲವು ಖ್ಯಾತ ಅನಿಮೆ ನಿರ್ಮಾಪಕರನ್ನು ಭೇಟಿಯಾಗಿ, ಅನಿಮೇಷನ್ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ. “ಜಪಾನಿನ ಅನಿಮೆಗಳ ಮೇಕಿಂಗ್ ಬಗ್ಗೆ ನನಗೆ ಯಾವಾಗಲೂ ಕುತೂಹಲವಿತ್ತು” ಎಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ:ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ…

‘RRR’ ಸಿನಿಮಾದಲ್ಲಿರುವ ಅತಿಮಾನುಷ ಆಕ್ಷನ್ ದೃಶ್ಯಗಳು, ನಾಯಕರ ನಡುವಿನ ಸ್ನೇಹ ಮತ್ತು ದೃಶ್ಯ ವೈಭವವು ಅನಿಮೆ ಶೈಲಿಗೆ ಚೆನ್ನಾಗಿ ಹೊಂದಿಕೆ ಆಗುತ್ತದೆ. ಆದರೆ ‘ಆರ್​​ಆರ್​​ಆರ್’ ಸಿನಿಮಾದ ಅನಿಮೆ ರೂಪವು ಕೇವಲ ಸಿನಿಮಾದ ಯಥಾವತ್ ರೀಮೇಕ್ ಆಗಿರದೆ ಕೊಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮರಾಜು ಅವರ ಜೀವನದ ಇನ್ನಷ್ಟು ರೋಚಕ ಕಥೆಗಳನ್ನು ಒಳಗೊಂಡಿರುವ ಎನ್ನಲಾಗುತ್ತಿದೆ.

ಸದ್ಯ ರಾಜಮೌಳಿ ಅವರು ಮಹೇಶ್ ಬಾಬು ಅವರೊಂದಿಗೆ ದೊಡ್ಡ ಮಟ್ಟದ ಅಡ್ವೆಂಚರ್ ಥ್ರಿಲ್ಲರ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆಯೇ, ತಮ್ಮ ನಿರ್ಮಾಣದ ‘ಬಾಹುಬಲಿ: ದಿ ಎಟರ್ನಲ್ ವಾರ್’ ಎಂಬ ಅನಿಮೇಟೆಡ್ ಸರಣಿಯನ್ನು ಘೋಷಿಸುವ ಮೂಲಕ ಅನಿಮೇಷನ್ ಜಗತ್ತಿಗೆ ಅಡಿ ಇಟ್ಟಿದ್ದಾರೆ. ಒಂದು ವೇಳೆ ‘RRR’ ಅನಿಮೆ ಅಧಿಕೃತಗೊಂಡರೆ, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಜಾಗತಿಕ ಮಟ್ಟದ ಅನಿಮೆ ಸರಣಿಯಾಗಿ ಗುರುತಿಸಿಕೊಳ್ಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ – Kannada News | No Leadership Change in Karnataka: High Command Gives Green Signal to Siddaramaiah to Continue Full Term, Says Yathindra

ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಮುನ್ನಡೆಸಲಿದ್ದಾರೆ ಎಂದು ಯತೀಂದ್ರ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು ಯುವಕರು ಮೈಲಾರಲಿಂಗೇಶ್ವರನ ಜಾತ್ರೆಯಲ್ಲಿ ವಿಶಿಷ್ಟವಾಗಿ ಬೇಡಿಕೊಂಡಿದ್ದಾರೆ. ಇನ್ನು ಮನೆ ಕಟ್ಟುವವರು ಮೈಲಾರ ಲಿಂಗೇಶ್ವರನ ಬಳಿ ಬೇಡಿಕೊಂಡ ನೂರಾರು ಯುವಕರು ಮೈಲಾರ ಕಾರ್ಣೀಕದ ವೇಳೆ ಅಲ್ಲೇ ಸಿಗೋ ಸಣ್ಣ ಸಣ್ಣ ಕಲ್ಲುಗಳಿಂದ ಮನೆ ಆಕೃತಿ ನಿರ್ಮಿಸಲಾಗುತ್ತಾರೆ. ಹೀಗೆ ಮನೆ ಆಕೃತಿ ಮಾಡಿ ಭಕ್ತಿಯಿಂದ ಬೇಡಿಕೊಂಡ್ರೆ, ಬಹುದಿನಗಳ ಕನಸು ನನಸಾಗುತ್ತೆ ಎಂಬ ನಂಬಿಕೆ ಭಕ್ತರದ್ದು. ಇದೇ ರೀತಿ ಮದುವೆ ಆಗದ ಯುವಕರು ಹುಲ್ಲಿನಲ್ಲಿ ಹಂದರ ಕಟ್ಟಿದರೆ (ಮದುವೆ ಮಂಟಪ) ಕಂಕಣ ಭಾಗ್ಯ ಕೂಡಿ ಬರಲಿದೆ ಎಂಬ ನಂಬಿಕೆ. ಹೀಗಾಗಿ ಕಾರ್ಣೀಕದ ದಿನವೇ ಮೈಲಾರದ ಡಂಕಣಮರಡಿ ಎಂಬಲ್ಲಿ ಕುಳಿತು ಹಂದಿರ ನಿರ್ಮಿಸಿದ್ದಾರೆ.

ವರದಿ: ಅಣ್ಣಪ್ಪ ಬರ್ಕಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ.

ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಪಾಸಣೆ ಮಾಡಿ, ಟ್ಯಾಗ್ ಮಾಡಿದ್ದರು. ಆದರೆ ದುಬೈ ತಲುಪಿದಾಗ ಬ್ಯಾಗ್‌ನಲ್ಲಿ ಆಭರಣಗಳು ಇರಲಿಲ್ಲ. ಈ ಕಳ್ಳತನದ ಹಿಂದೆ ವಿಮಾನ ನಿಲ್ದಾಣದ ಸಿಬ್ಬಂದಿಯ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸಂತ್ರಸ್ತ ಮಹಿಳೆ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಜೆಸಿ’ ಸಿನಿಮಾ ವಿಮರ್ಶೆ: ಮಾಸ್ ಮಸಾಲ ಜೊತೆ ಕಲಸುಮೇಲೋಗರ – Kannada News | JC Movie Review: Dolly Dhananjay backed Surya Prakhyath Kannada action thriller’s brutal mass masala

ಕೊಲೆ, ರಕ್ತಪಾತಗಳ ಸಿನಿಮಾಗಳು ಸಾಕಷ್ಟು ಬಂದು ಹೋಗಿವೆ. ಇದಕ್ಕೆ ದೊಡ್ಡದಾದ ಅಭಿಮಾನಿ ಬಳಗವೇ ಇದೆ. ಸೂರ್ಯ ಪ್ರಖ್ಯಾತ್ ನಟನೆಯ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಇದೇ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದು ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತದೆ. ಈ ಸಿನಿಮಾಗೆ ಡಾಲಿ ಧನಂಜಯ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ವಿಮರ್ಶೆ ಇಲ್ಲಿದೆ.

ಮ್ಯಾಡಿ (ಸೂರ್ಯ ಪ್ರಖ್ಯಾತ್) ಕಾಲೇಜು ಓದೋ ವಿದ್ಯಾರ್ಥಿ. ತಾನಾಯ್ತು, ತನ್ನ ಕಾಲೇಜಾಯ್ತು ಎಂದು ಹಾಯಾಗಿ ಇರುತ್ತಾನೆ. ಬೆಂಗಳೂರಿನ ಭೂಗತ ಜಗತ್ತು ಹೀಗಿರುತ್ತದೆ ಎಂಬುದನ್ನು ಕನಸಲ್ಲೂ ಆತ ಕಂಡವನಲ್ಲ. ಆದರೂ ಆತ ಜೈಲು ಸೇರಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲಿ ನರಕಯಾತನ ಅನುಭವಿಸುತ್ತಾನೆ. ಇದಕ್ಕೆ ಕಾರಣ ಏನು? ಮುಂದೆ ಜೀವನ ಹೇಗೆ ಸಾಗುತ್ತದೆ ಎಂಬುದು ಚಿತ್ರದ ಕಥೆ. ‘ಜೆಸಿ’ ಸಿನಿಮಾ ಆರಂಭ ಆದ ಕೆಲವೇ ನಿಮಿಷಗಳಲ್ಲಿ ಹಿಂದೆ ನಡೆದಿದ್ದು, ಮುಂದೆ ನಡೆಯಬೇಕಾಗಿದ್ದನ್ನು ತೋರಿಸಿಯಾಗುತ್ತದೆ. ಪ್ರಮುಖ ವಿಲನ್ ಎಂದೆನಿಸಿಕೊಂಡವನ ಕೊಲೆ ಆಗಿದೆ ಎಂಬುದು ಬೆಂಗಳೂರಿನ ಭೂಗತಲೋಕದಲ್ಲಿ ಕಾಡ್ಗಿಚ್ಚಿನಂತೆ ಹಬ್ಬುವಾಗ ಕಥೆ ಪ್ರಸ್ತುತ ದಿನಕ್ಕೆ ತೆರೆದುಕೊಳ್ಳುತ್ತದೆ.

‘ನಡುವೆ ಅಂತರವಿರಲಿ’ ಹೆಸರಿನ ಸಿನಿಮಾದಲ್ಲಿ ರೊಮ್ಯಾಂಟಿಕ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಸೂರ್ಯ ಪ್ರಖ್ಯಾತ್, ಜೆಸಿ ಸಿನಿಮಾದಲ್ಲಿ ಚೂರಿಗಳ ಜೊತೆ, ಗನ್​​ಗಳ ಜೊತೆ ಆಟ ಆಡಿದ್ದಾರೆ. ರಕ್ತದಲ್ಲೇ ಸ್ನಾನ ಮಾಡಿದ್ದಾರೆ. ಕೆನ್ನೆಗೆ ಬಿದ್ದ ಏಟೊಂದನ್ನು ಗಂಭೀರವಾಗಿ ತೆಗೆದುಕೊಂಡು, ಕನಸಿನಲ್ಲೂ ಕಾಣದ ದಾರಿ ತುಳಿಯುತ್ತಾನೆ ಕಥಾ ನಾಯಕ. ಅಲ್ಲಿಂದ ಆತನ ಓಟ ಶುರು. ಲವರ್ ಬಾಯ್ ಆಗಿ, ಅಪ್ಪನ ಮುದ್ದಿನ ಮಗನಾಗಿದ್ದ ಕಥಾ ನಾಯಕ, ಎದುರುಗಿದ್ದವರನ್ನು ಮನಸೋ ಇಚ್ಛೆ ಕೊಚ್ಚೋ ರಾಕ್ಷಸನಾಗುತ್ತಾನೆ. ಅವರ ನಟನೆ ಗಮನ ಸೆಳೆಯುತ್ತದೆ. ಸಿನಿಮಾ ಉದ್ದಕ್ಕೂ ಅವರು ಆವರಿಸಿಕೊಂಡಿದ್ದಾರೆ.

ಪ್ರಖ್ಯಾತ್ ಪ್ರೇಯಸಿ ಪಾತ್ರದಲ್ಲಿ ಭಾವನಾ ರೆಡ್ಡಿ ಕಾಣಿಸಿಕೊಂಡಿದ್ದು, ಮುದ್ದಾಗಿ ಕಾಣಿಸುತ್ತಾರೆ. ನಟನೆಯ ವಿಷಯದಲ್ಲಿ ಅವರು ಮತ್ತಷ್ಟು ಪಳಗಬೇಕಿದೆ. ಥ್ರಿಲ್ಲರ್ ಮಂಜು ಪಾತ್ರಕ್ಕೆ ಮತ್ತಷ್ಟು ತೂಕ ಬೇಕಿತ್ತು. ರಂಗಾಯಣ ರಘು ಕೊಟ್ಟ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ವಿಲನ್​​ಗಳ ದಂಡೇ ಇದ್ದು, ಕವಳ, ರಾಕಾ ಪಾತ್ರಗಳು ಹೈಲೈಟ್ ಆಗಿವೆ. ಟ್ವಿನ್ಸ್ ಪಾತ್ರ ಕೂಡ ಮೆಚ್ಚುಗೆ ಪಡೆಯುತ್ತದೆ.

ಕೆಟ್ಟ ಕೆಲಸ ಮಾಡಿ ಜೈಲು ಸೇರಿದರೆ ಅದು ನಮ್ಮನ್ನು ಕಾಡುವ ಪಶ್ಚತಾಪಕ್ಕಿಂತಲೂ ಕ್ರೂರವಾಗಿರುತ್ತದೆ ಎಂಬುದನ್ನು ನಿರ್ದೇಶಕರು ಮನದಟ್ಟು ಮಾಡೋ ಪ್ರಯತ್ನ ಮಾಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಆಗಾಗ ಅಕ್ರಮಗಳ ಬಗ್ಗೆ ವರದಿ ಆಗುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳನ್ನು ಕಣ್ಣಿಗೆ ಕಟ್ಟುವಂತೆ ನಿರ್ದೇಶಕ ಚೇತನ್ ಜಯರಾಮ್ ಬರೆದಿದ್ದಾರೆ. A-Z, ಟ್ವಿನ್ಸ್, ಕವಳ, ರಾಕಾ ರೀತಿಯ ಪಾತ್ರದ ಹೆಸರುಗಳು ಗಮನ ಸೆಳೆಯುತ್ತವೆ. ಇದೊಂದು ಪಕ್ಕಾ ರಾ ಚಿತ್ರ. ಇಲ್ಲಿ ಸಾಕಷ್ಟು ರಕ್ತ ಹರಿಯುತ್ತವೆ. ಕೊಲೆಗಳಾಗುತ್ತವೆ. ಈ ಕಾರಣದಿಂದಲೇ ಚಿತ್ರಕ್ಕೆ ಎ ಪ್ರಮಾಣ ಪತ್ರ ನೀಡಲಾಗಿದೆ. ಹೀಗಾಗಿ, ಆ ಬಗ್ಗೆ ಯಾರೂ ತಕರಾರು ತೆಗೆಯುವಂತಿಲ್ಲ.

ಹಾಗಾದರೆ ಇದು ಪರ್ಫೆಕ್ಟ್ ಚಿತ್ರನಾ? ಇಲ್ಲ. ಚಿತ್ರದ ಅವಧಿ 2.43 ಗಂಟೆ ಇದೆ. ಭೂತಕಾಲ, ಭವಿಷ್ಯತ್ ಕಾಲ, ಪ್ರಸ್ತುತಗಳ ನಡುವೆ ಮೊದಲಾರ್ಧದ ಕಥೆ ಪ್ರೇಕ್ಷಕನ ನೋಡಿಸಿಕೊಂಡು ಸಾಗುತ್ತದೆ. ಇಂಟರ್​​​ವಲ್ ಬ್ಲಾಕ್ ಚಿತ್ರವನ್ನು ಮತ್ತೊಂದು ಹಂತಕ್ಕೆ ಕರೆದೊಯ್ಯುತ್ತದೆ. ಆದರೆ, ದ್ವಿತೀಯಾರ್ಧದ ಬಳಿಕ ಎಳೆದಾಟ ಶುರು. ತೆರೆಮೇಲೆ ಕತ್ತಿಗಳನ್ನು ಝಳಪಿಸಿದಂತೆ, ಕೆಲವು ದೃಶ್ಯಗಳಿಗೂ ಅವರು ಲಾಂಗ್ ಪ್ರಯೋಗ ಮಾಡಬೇಕಿತ್ತು. ಅನಗತ್ಯ ದೃಶ್ಯಗಳನ್ನು ತೆಗೆದಿದ್ದರೆ ಸಿನಿಮಾ ಮತ್ತಷ್ಟು ಸುಂದರವಾಗುತ್ತಿತ್ತು. ಅಪ್ಪ-ಮಗನ ಸೆಂಟಿಮೆಂಟ್ ತೋರಿಸಲು ಸಾಕಷ್ಟು ಶ್ರಮ ಹಾಕಿ ಅದನ್ನು ವ್ಯರ್ಥ ಮಾಡಿದಂತಿದೆ. ಸಿನಿಮಾದಲ್ಲಿ ನಾಲ್ಕೈದು ಹಾಡುಗಳು ಬರುತ್ತವೆಯಾದರೂ ಸಂಗೀತ ಕಿವಿಯಲ್ಲಿ, ಸಾಹಿತ್ಯ ಮನಸ್ಸಿನಲ್ಲಿ ಉಳಿದುಕೊಳ್ಳುವುದಿಲ್ಲ. ಮಾಸ್ತಿ ಡೈಲಾಗ್ ಚಿತ್ರಕ್ಕೆ ಕೆಲವು ಕಡೆ ಪ್ಲಸ್ ಆದರೆ, ಇನ್ನೂ ಕೆಲವು ಕಡೆ ಮೈನಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಬೈಕ್​​ನಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿ ರಸ್ತೆಯಿಂದ ಎಳೆದೊಯ್ದ ಹುಲಿ – Kannada News | Arunachal Policeman Killed in Suspected Tiger Attack Near Roadside

ಅರುಣಾಚಲಪ್ರದೇಶ, ಫೆಬ್ರವರಿ 06: ಬೈಕ್​ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ದುರ್ಬಲವಾದ ಪರ್ವತ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮತ್ತೆ ಭಯ ಹುಟ್ಟಿದೆ. ಚಿಕ್ಸೆನ್ ಮಂಗ್‌ಪಾಂಗ್, ಹೆಡ್ ಕಾನ್‌ಸ್ಟೆಬಲ್, ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದಟ್ಟವಾದ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಕೆಲವೇ ಸೆಕೆಂಡುಗಳಲ್ಲಿ ಅವರನ್ನು ಎಳೆದುಕೊಂಡು ಹೋಗಿದೆ. ಅರಣ್ಯ ಪ್ರದೇಶದಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ? – Kannada News | Get Urgent Train Tickets: Apply for Railways Emergency Quota

ಭಾರತೀಯ ರೈಲ್ವೆಯಲ್ಲಿನ ತುರ್ತು ಕೋಟಾ (EQ) ಸೇರಿದಂತೆ ಹಲವಾರು ಬುಕಿಂಗ್ ಕೋಟಾಗಳನ್ನು ಪರಿಚಯಿಸಿದೆ. ಇದರಿಂದ ಯಾರಿಗೆಲ್ಲ ಲಾಭವಾಗಲಿದೆ. ಇದನ್ನು ಪಡೆಯುವುದು ಹೇಗೆ ಎಂಬಲ್ಲ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಸೀಟುಗಳು ಭರ್ತಿಯಾದಾಗ ‘ವೈಟಿಂಗ್ ಲಿಸ್ಟ್’ (Waiting List) ಇರುತ್ತದೆ. ಆದರೆ, ಅತೀ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸಬೇಕಾದವರಿಗಾಗಿ ರೈಲ್ವೆ ಇಲಾಖೆಯು ಕೆಲವು ಸೀಟುಗಳನ್ನು ಮೀಸಲಿಟ್ಟಿರುತ್ತದೆ. ಇದು ಎಲ್ಲರಿಗೂ ಮುಕ್ತವಾಗಿಲ್ಲ ಮತ್ತು ಕೆಲವು ವರ್ಗದ ಪ್ರಯಾಣಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಈ ಕೋಟಾವನ್ನು ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಯಾರಿಗೆ ಈ ಕೋಟಾ ಅನ್ವಯವಾಗುತ್ತದೆ?

ಗಣ್ಯ ವ್ಯಕ್ತಿಗಳು: ಕೇಂದ್ರ ಮತ್ತು ರಾಜ್ಯ ಸಚಿವರು, ಸಂಸದರು (MP), ಶಾಸಕರು (MLA), ಸಾಂವಿಧಾನಿಕ ಹುದ್ದೆಯಲ್ಲಿರುವವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಈ ಕೋಟಾವನ್ನು ಬಳಸಿಕೊಳ್ಳಬಹುದು.

ತುರ್ತು ಅಗತ್ಯವಿರುವ ಸಾಮಾನ್ಯ ಪ್ರಯಾಣಿಕರು: ಕುಟುಂಬದಲ್ಲಿ ಸಾವು ಸಂಭವಿಸಿದಾಗ, ವೈದ್ಯಕೀಯ ತುರ್ತು ಪರಿಸ್ಥಿತಿ (Serious Medical Cases), ಅಥವಾ ಉದ್ಯೋಗದ ಸಂದರ್ಶನಕ್ಕೆ ಹೋಗುವವರು ಈ ಕೋಟಾದಡಿ ಅರ್ಜಿ ಸಲ್ಲಿಸಬಹುದು.

ಇದು ಹೇಗೆ ಕೆಲಸ ಮಾಡುತ್ತದೆ?:

ರೈಲ್ವೆಯ ಪ್ರತಿಯೊಂದು ವಿಭಾಗದಲ್ಲೂ ಈ ಸೀಟುಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳಿರುತ್ತಾರೆ. ಪ್ರಯಾಣಿಕರು ಮೊದಲು ವೈಟಿಂಗ್ ಲಿಸ್ಟ್ ಟಿಕೆಟ್ ಹೊಂದಿರಬೇಕು. ನಂತರ ಸಂಬಂಧಪಟ್ಟ ವಲಯದ ಹಿರಿಯ ಅಧಿಕಾರಿಗಳಿಗೆ ಅಥವಾ ‘ವಿಭಾಗೀಯ ರೈಲ್ವೆ ಮ್ಯಾನೇಜರ್’ (DRM) ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ಜೊತೆಗೆ ತುರ್ತು ಪರಿಸ್ಥಿತಿಯ ದಾಖಲೆಗಳನ್ನು (ವೈದ್ಯಕೀಯ ವರದಿ ಅಥವಾ ಇನ್ಯಾವುದೇ ಪುರಾವೆ) ಲಗತ್ತಿಸುವುದು ಕಡ್ಡಾಯ.

ಇದನ್ನೂ ಓದಿ: ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಸೀಟು ಹಂಚಿಕೆ ಯಾವಾಗ ನಡೆಯುತ್ತದೆ?

ಚಾರ್ಟ್ ತಯಾರಾಗುವ ಮುನ್ನ (ಸಾಮಾನ್ಯವಾಗಿ ರೈಲು ಹೊರಡುವ 4 ಗಂಟೆಗಳ ಮೊದಲು) ಈ ಕೋಟಾವನ್ನು ಪರಿಶೀಲಿಸಲಾಗುತ್ತದೆ. ಆದ್ಯತೆಯ ಮೇರೆಗೆ ಯಾರಿಗೆ ಸೀಟು ನೀಡಬೇಕು ಎಂದು ಅಧಿಕಾರಿಗಳು ನಿರ್ಧರಿಸುತ್ತಾರೆ. ಒಂದು ವೇಳೆ ಯಾವುದೇ ಗಣ್ಯ ವ್ಯಕ್ತಿಗಳ ಬೇಡಿಕೆ ಇಲ್ಲದಿದ್ದರೆ, ಆ ಸೀಟುಗಳನ್ನು ತುರ್ತು ಪರಿಸ್ಥಿತಿಯಲ್ಲಿರುವ ಸಾಮಾನ್ಯ ಜನರಿಗೆ ನೀಡಲಾಗುತ್ತದೆ. ಈ ಕೋಟಾದಡಿ ಸೀಟು ಸಿಗುವುದು ಗ್ಯಾರಂಟಿ ಇರುವುದಿಲ್ಲ. ಇದರ ಲಭ್ಯತೆ ಮತ್ತು ಅಧಿಕಾರಿಯ ವಿವೇಚನೆಗೆ ಬಿಟ್ಟಿರುತ್ತದೆ. ಬೆಂಗಳೂರಿನಂತಹ ನಗರಗಳಲ್ಲಿ ಈ ಕೋಟಾಗೆ ಅತೀ ಹೆಚ್ಚು ಬೇಡಿಕೆ ಇರುತ್ತದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ? – Kannada News | Bengaluru: Bengaluru woman takes a break from 14 hour office work

ಬೆಂಗಳೂರು, ಫೆಬ್ರವರಿ 06: ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಹೀಗಾಗಿ ಎಷ್ಟೇ ಜನರು ಒತ್ತಡಭರಿತ ವಾತಾವರಣಕ್ಕೆ ಬೇಸೆತ್ತು ಜಾಬ್ ರಿಸೈನ್ ಮಾಡುವ ನಿರ್ಧಾರ ಕೂಡ ಮಾಡ್ತಾರೆ. ಆದರೆ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ದಿನದ 14 ಗಂಟೆ ಕೆಲಸ ಮಾಡಿದ್ದಕ್ಕೆ ಆರೋಗ್ಯವೂ ಹದಗೆಟ್ಟಿತು. ತನ್ನ ಈ ಒಂದು ನಿರ್ಧಾರದಿಂದ ಚೇತರಿಸಿಕೊಂಡೆ ಎಂದು ಹೇಳಿದ್ದಾರೆ. ಲಿಂಕ್ಡ್ ಇನ್‌ನಲ್ಲಿ ಮಾಡಿದ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡಿ ಸಲಹೆ ನೀಡಿದ್ದಾರೆ.

ಮೀನಲ್ ಗೋಯೆಲ್ (Meenal Goel) ಹೆಸರಿನ ಲಿಂಕ್ಡ್ ಇನ್ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್‌ನಲ್ಲಿ ಜಾಗತಿಕ ಸಲಹಾ ಸಂಸ್ಥೆಗಳಾದ ಕೆಪಿಎಂಜಿ ಮತ್ತು ಡೆಲಾಯ್ಟ್‌ನೊಂದಿಗೆ ಕೆಲಸ ಮಾಡಿದ್ದ ಮೀನಲ್ ಗೋಯೆಲ್, ಸತತ 6 ತಿಂಗಳ ಕಠಿಣ ಕೆಲಸದ ನಂತರ ಬಳಿಕ ತನ್ನ ನಿರ್ಧಾರದಿಂದ ಹೇಗೆ ದೈಹಿಕ ಆರೋಗ್ಯವು ಸುಧಾರಿಸುವಂತೆ ಮಾಡಿತು ಎಂದು ವಿವರಿಸಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ನಾನು ಆರು ತಿಂಗಳು ಸತತವಾಗಿ 14 ಗಂಟೆಗಳ ಕಾಲ ದಿನ ಕೆಲಸ ಮಾಡಿದೆ. ಕಳೆದ ವಾರ ನನಗೆ ಏನು ಮಾಡಲು ಸಾಧ್ಯವಿಲ್ಲ ಎನ್ನುವಂತಾಯಿತು. ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಅಲಾರಾಂ ಬಾರಿಸಿತು. ನನಗೆ ಹಾಸಿಗೆಯಿಂದ ಏಳಲು ಸಾಧ್ಯವಾಗಲಿಲ್ಲ. ನಾನು ಸೋಮಾರಿಯಾಗಿದ್ದ ಕಾರಣವಲ್ಲ. ಆ ವೇಳೆ ನನ್ನ ದೇಹವು ಯಾವುದಕ್ಕೂ ತಯಾರಾಗಿರಲಿಲ್ಲ ಎಂದು ವಾಸ್ತವ ಸ್ಥಿತಿಯ ಬಗ್ಗೆ ಹೇಳಿಕೊಂಡಿದ್ದಾರೆ.

ಅರ್ಧ ವರ್ಷ ಕಾಲ ತಾನು ಶಿಕ್ಷಾರ್ಹ ವೇಳಾಪಟ್ಟಿಯನ್ನು ಅನುಸರಿಸಿದೆ ಬೆಳಿಗ್ಗೆ 6 ಗಂಟೆಗೆ ಎಚ್ಚರಗೊಳ್ಳುವುದು, ರಾತ್ರಿ 11 ಗಂಟೆಯವರೆಗೆ ಕೆಲಸ ಮಾಡುವುದು, ವಾರಾಂತ್ಯಗಳನ್ನು ಸಾಮಾನ್ಯ ಕೆಲಸದ ದಿನಗಳಂತೆ ಪರಿಗಣಿಸುವುದು. ರಜಾದಿನಗಳಲ್ಲಿಯೂ ತನ್ನ ಲ್ಯಾಪ್‌ಟಾಪ್ ಅನ್ನು ಆನ್‌ನಲ್ಲಿ ಇಡುವುದು. ಆದರೆ ನನಗೆ ಮನವರಿಕೆ ಆಯಿತು. ಕ್ಲೈಂಟ್ ಕರೆಯ ಸಮಯದಲ್ಲಿ ಇದ್ದಕ್ಕಿದ್ದಂತೆ ನಾನು ಅಸ್ವಸ್ಥಳಾದೆ. ಹೃದಯ ಬಡಿತ ಜೋರಾಗಿತ್ತು. ಉಸಿರಾಡಲು ಸಾಧ್ಯವಾಗಲಿಲ್ಲ. ಫೋನ್ ಕಟ್ ಮಾಡಬೇಕಾಯಿತು. ಈ ರೀತಿ ಕೆಲಸ ಮಾಡಿ ನನ್ನ ಆರೋಗ್ಯವೇ ಹಾಳಾಗುತ್ತಿದೆ. ನಾನು ಎಲ್ಲಾ ಕ್ಷಣವನ್ನು ಆನಂದಿಸಲು ಬಯಸಿದರೂ ದೇಹವು ದಣಿದಿರುತ್ತದೆ. ಹಾಗಿದ್ದಾಗ ಈ ಯಶಸ್ಸಿನ ಅರ್ಥವೇನು ಎಂದು ಮನವರಿಕೆ ಆಯಿತು ಎಂದು ಹೇಳಿದ್ದಾರೆ.

ಆದ್ದರಿಂದ ನಾನು ಒಂದು ನಿರ್ಧಾರ ತೆಗೆದುಕೊಂಡೆ. ರಾತ್ರಿ 8 ಗಂಟೆಯ ನಂತರ ಕೆಲಸ ಮಾಡಲ್ಲ. ತ್ವರಿತ ಇಮೇಲ್‌ ಕಳುಹಿಸುವುದು. ಭಾನುವಾರಗಳು ಸಂಪೂರ್ಣವಾಗಿ ಆಫ್ ಆಗಿರುತ್ತವೆ. ಫೋನ್ ಆಫ್ ಆಗಿರುತ್ತದೆ. ಇದಾದ ಒಂದು ವಾರದಲ್ಲೇ ನನ್ನ ಉತ್ಪಾದಕತೆ? ನಿಜವಾಗಿಯೂ ಹೆಚ್ಚಾಗಿದೆ. ನನ್ನ ಮಾನಸಿಕ ಆರೋಗ್ಯ ಉತ್ತಮವಾಯಿತು. ಒತ್ತಡವು ನಮ್ಮಳೊಗಿನ ಉತ್ಸಾಹವನ್ನು ಚಿವುಟಿ ಹಾಕುತ್ತದೆ ಎಂದು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: “ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ದಯವಿಟ್ಟು ವಿಶ್ರಾಂತಿ ಪಡೆಯಿರಿ. ಇಲ್ಲದಿದ್ದರೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ. ನಾವು ಅತಿಯಾದ ಕೆಲಸವನ್ನು ಎಷ್ಟು ವೈಭವೀಕರಿಸುತ್ತೇವೆ ಎಂದರೆ ಆರೋಗ್ಯವೇ ಸರ್ವಸ್ವ ಎಂಬುದನ್ನು ನಾವು ಮರೆತುಬಿಡುತ್ತೇವೆ” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಆರೋಗ್ಯಕ್ಕಿಂತ ಕೆಲಸ ಮುಖ್ಯವಲ್ಲ. ನೀವು ಆರೋಗ್ಯಯುತವಾಗಿದ್ದರೆ ಉತ್ತಮವಾಗಿ ಕೆಲಸ ಮಾಡ್ಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:03 pm, Fri, 6 February 26

Source link

Exit mobile version