Headlines

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

ಇರಾನ್ ಜತೆ ಚೀನಾ ಕೈಜೋಡಿಸಿದರೆ ಕಾದಿದೆ ಆಪತ್ತು, ಡೊನಾಲ್ಡ್​ ಟ್ರಂಪ್ ಅಂತಿಮ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 12: ಜಾಗತಿಕ ರಾಜಕೀಯದ ರಣರಂಗದಲ್ಲಿ ಈಗ ಅಮೆರಿಕ, ಇರಾನ್(Iran) ಮತ್ತು ಚೀನಾ ನಡುವಿನ ಸಂಘರ್ಷ ತಾರಕಕ್ಕೇರಿದೆ. ಇರಾನ್ ಬೆನ್ನಿಗೆ ನಿಂತಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆ ಈಗ ಮೂರನೇ ಮಹಾಯುದ್ಧದ ಭೀತಿಯನ್ನು ಹುಟ್ಟುಹಾಕಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಬಿಕ್ಕಟ್ಟು ಈಗ ಅಮೆರಿಕ ಮತ್ತು ಡ್ರ್ಯಾಗನ್ ದೇಶ ಚೀನಾವನ್ನು ಮುಖಾಮುಖಿಯಾಗಿಸಿದೆ. ಇರಾನ್​ಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಚೀನಾಗೆ ಡೊನಾಲ್ಡ್​ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಷಿ ಜಿನ್​ಪಿಂಗ್ ಅವರೇ, ಇರಾನ್​ಗೆ ಶಸ್ತ್ರಾಸ್ತ್ರ…

Read More

ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್…

Read More

IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ… ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ. ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ…

Read More

ನನ್ನ ಯಶಸ್ಸಿಗೆ ದಾವುದ್ ಇಬ್ರಾಹಿಂ ಕಾರಣ: ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ

ವಿವಾದಾತ್ಮಕ ಮತ್ತು ಪ್ರತಿಭಾವಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೆ ಸುದ್ದಿಯಲ್ಲಿದ್ದಾರೆ. ಭೂಗತ ಜಗತ್ತಿನ ಕಥೆಗಳನ್ನು ತೆರೆಯ ಮೇಲೆ ಅಚ್ಚುಕಟ್ಟಾಗಿ ಚಿತ್ರಿಸುವ ವರ್ಮಾ, ಈಗ ಭೂಗತ ಪಾತಕಿ ದಾವುದ್ ಇಬ್ರಾಹಿಂ (Dawood Ibrahim) ಬಗ್ಗೆ ನೀಡಿರುವ ಹೇಳಿಕೆ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಫಿಲ್ಮ್‌ಫೇರ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆರ್‌ಜಿವಿ, ತಮ್ಮ ಆತ್ಮಚರಿತ್ರೆಯಾದ ‘ಗನ್ಸ್ ಆ್ಯಂಡ್ ಥೈಸ್’ ಪುಸ್ತಕವನ್ನು ಭೂಗತ ಪಾತಕಿ ದಾವುದ್ ಇಬ್ರಾಹಿಂಗೆ ಅರ್ಪಿಸಲು ಬಯಸಿದ್ದಾಗಿ ಬಹಿರಂಗಪಡಿಸಿದ್ದಾರೆ. ‘ನಾನು ನನ್ನ ಪುಸ್ತಕವನ್ನು ದಾವುದ್ ಇಬ್ರಾಹಿಂಗೆ…

Read More

ಬೆಂಗಳೂರಿನಲ್ಲಿ ವಿದ್ಯುತ್ ಬೇಡಿಕೆ ಏರಿಕೆ! ಹಾಗಾದ್ರೆ ಇನ್ನು ಪವರ್ ಕಟ್ ಜಾಸ್ತಿಯಾಗತ್ತಾ?

ಬೆಂಗಳೂರು, ಏಪ್ರಿಲ್ 12: ನಗರದಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ವಿದ್ಯುತ್ ಬಳಕೆಯ ಏರಿಕೆಯಿಂದಾಗಿ ಇತ್ತೀಚೆಗೆ ವಿದ್ಯುತ್ ವ್ಯತ್ಯಯಗಳು ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ. ಹೀಗಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶುಕ್ರವಾರ ಬೆಳಿಗ್ಗೆ 10.30ಕ್ಕೆ ಇತಿಹಾಸದಲ್ಲೇ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಮತ್ತು ಸರಬರಾಜನ್ನು ದಾಖಲಿಸಿದೆ. ಒಟ್ಟು 173.58 ಮಿಲಿಯನ್ ಯೂನಿಟ್ (8,802 ಮೆಗಾವಾಟ್) ವಿದ್ಯುತ್ ಬಳಕೆ ಆಗಿದೆ. ಟ್ರಾನ್ಸ್‌ಫಾರ್ಮರ್ ಹಾಗೂ ಫೀಡರ್‌ಗಳ ಮೇಲೆ ಅಧಿಕ ಒತ್ತಡ ಸಾಮಾನ್ಯವಾಗಿ ನಗರದಲ್ಲಿ ಹೆಚ್ಚು ಎಂದರೆ ಸುಮಾರು 7,800 ಮೆಗಾವಾಟ್…

Read More

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (Samantha ruth prabhu) ತಮ್ಮ ನಟನಾ ಕೌಶಲ್ಯಕ್ಕೆ ಮಾತ್ರವಲ್ಲದೆ ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್‌ನೆಸ್ ಮತ್ತು ಆರೋಗ್ಯವನ್ನು‌ ಕಾಪಾಡಿಕೊಳ್ಳಲು  ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿಯವರೆಗೆ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More

Bengaluru Air Quality: ಉಳಿದ ಮೆಟ್ರೋ ಸಿಟಿಗಳಿಗಿಂತ ಒಳಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 12: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್​ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು.  ಈ…

Read More

Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಬೀಡ್, ಏಪ್ರಿಲ್ 12: ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ ಆಯ್ಕೆಯಾದ ನಂತರ ಆಚರಿಸಿದ ರೀತಿ ಈಗ ಇಡೀ ದೇಶದ ಗಮನ ಸೆಳೆದಿದೆ. ಅವರು ತನ್ನ ಯಶಸ್ಸಿಗೆ ಕಾರಣರಾದ ತಂದೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿಯುವ ಮೂಲಕ ಸಂಭ್ರಮಪಟ್ಟಿದ್ದಾರೆ. ಇದು ಕೇವಲ ದೈಹಿಕ ಶಕ್ತಿಯ ಪ್ರದರ್ಶನವಲ್ಲ, ಬದಲಿಗೆ ತನ್ನನ್ನು ಬೆಳೆಸಲು ತಂದೆ ಅನುಭವಿಸಿದ…

Read More