Headlines

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

ಟಿ20 ಯಲ್ಲಿ ಟೆಸ್ಟ್ ಆಡಿ ಅರ್ಧಶತಕ ಬಾರಿಸಿದ ಬಾಬರ್ ಆಝಂ – Kannada News | Babar Azam’s BBL Brilliance: Unbeaten Half Century Seals Sydney Sixers Victory

ಕಳೆದ ವರ್ಷವನ್ನು ಫಾರ್ಮ್​ ಕಂಡುಕೊಳ್ಳುವುದರಲ್ಲೇ ಕಳೆದ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಈ ಹೊಸ ವರ್ಷವನ್ನು ಭರ್ಜರಿಯಾಗಿ ಆರಂಭಿಸಿದ್ದಾರೆ. ಪ್ರಸ್ತುತ ಬಿಗ್ ಬ್ಯಾಷ್ ಲೀಗ್​ನಲ್ಲಿ ಆಡುತ್ತಿರುವ ಬಾಬರ್ ಆಝಂ ಅಜೇಯ ಅರ್ಧಶತಕ ಸಿಡಿಸುವುದರೊಂದಿಗೆ ತಂಡಕ್ಕೆ ಗೆಲುವು ಕೂಡ ತಂದುಕೊಟ್ಟಿದ್ದಾರೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ತಂಡದ ಪರ ಆಡುತ್ತಿರುವ ಬಾಬರ್ ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ವಿರುದ್ಧ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು 20 ಓವರ್‌ಗಳಲ್ಲಿ 165…

Read More

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ – Kannada News | Congress leader Nana Patole compares Rahul Gandhi with Lord Sri Ram

ನವದೆಹಲಿ, ಜನವರಿ 1: ಕಾಂಗ್ರೆಸ್ ನಾಯಕ ನಾನಾ ಪಟೋಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ (Ram Temple) ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. “ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ”…

Read More

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು? – Kannada News | I and B ministry orders edits to Dhurandhar removes two words

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾ 1000 ಕೋಟಿ ಗಳಿಕೆ ದಾಟಿದೆ. ಸಿನಿಮಾವನ್ನು ಮುಗಿಬಿದ್ದು ಜನ ವೀಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಭಾರತೀಯ ಸೇನೆಗೆ ಮಾಹಿತಿ ರವಾನೆ ಮಾಡುವ ಕತೆಯನ್ನು ‘ಧುರಂಧರ್’ ಸಿನಿಮಾ ಒಳಗೊಂಡಿದೆ. ಕೆಲವು ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ. ಸಿನಿಮಾನಲ್ಲಿ ಕೆಲ ನಿಜ ವ್ಯಕ್ತಿಗಳ ಪಾತ್ರಗಳು, ಸ್ಥಳಗಳು ಸಹ ಇವೆ….

Read More

ಈ ಆರೋಗ್ಯ ಸಮಸ್ಯೆ ಇರುವವರು ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ವಾಕಿಂಗ್ ಹೋಗಬಾರದು! – Kannada News | Protect Your Heart: Avoid Early Morning Walks in Winter

ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಅನಿವಾರ್ಯವಾಗುತ್ತದೆ. ಸ್ವಲ್ಪ ನಿರ್ಲಕ್ಷ್ಯ ಮಾಡಿದರೂ ಕೂಡ ಜೀವಕ್ಕೆ ಅಪಾಯ ಉಂಟುಮಾಡಬಹುದು. ಅದಲ್ಲದೆ ಚಳಿಗಾಲದಲ್ಲಿ ಬೆಳಗಿನ ನಡಿಗೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈ ಅಭ್ಯಾಸ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು ಎಂದರೆ ನಂಬುತ್ತೀರಾ.. ಹೌದು, ಮಾಲಿನ್ಯ, ಮಂಜು ಮತ್ತು ಚಳಿ ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಬೆಳಿಗ್ಗೆ ವಾಕಿಂಗ್ (Walk) ಹೋಗುವುದು ಅತ್ಯಂತ ಅಪಾಯಕಾರಿ ಎಂದು ಆರೋಗ್ಯ…

Read More

‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು – Kannada News | Job Seekers Write Unusual Letter to Mantralaya Raghavendra Swamy Seeking Recruitment to Vacant Posts

ಧಾರವಾಡ, ಜನವರಿ 01: ರಾಜ್ಯದಲ್ಲಿ ಹಲವು ವರ್ಷಗಳಿಂದ ಯಾವುದೇ ಸರ್ಕಾರಿ ನೇಮಕಾತಿಗಳು ಆಗಿಲ್ಲ. ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇತ್ತೀಚೆಗೆ ಬೃಹತ್​ ಪ್ರತಿಭಟನೆ ಕೂಡ ಮಾಡಲಾಯಿತು. ಆದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು (Job seekers) ಇದೀಗ ರಾಯರ ಮೊರೆ ಹೋಗಿದ್ದಾರೆ. ನಮ್ಮ ಮೇಲೆ ಕೃಪೆ ತೋರುವಂತೆ ವಿಚಿತ್ರ ಪತ್ರವೊಂದನ್ನು ಬರೆಯುವ ಮೂಲಕ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮೀಜಿ (mantralaya raghavendra swamy)  ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ. ರಾಯರ ಮೊರೆಹೋದ ಉದ್ಯೋಗಾಕಾಂಕ್ಷಿಗಳು …

Read More

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್ – Kannada News | Kichcha Sudeep said he will be in weekend episode of Bigg Boss

ಬಿಗ್​​ಬಾಸ್​ ಕನ್ನಡ 12 (Bigg Boss Kannada) ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಬಿಗ್​​ಬಾಸ್ ಶೋ 96 ದಿನಗಳನ್ನು ಪೂರೈಸಿದೆ. ಆದರೆ ಸುದೀಪ್ ಅವರು ಕಳೆದ ವಾರ ಸುದೀಪ್ ಅವರು ವೀಕೆಂಡ್ ಶೋ ನಡೆಸಿಕೊಡಲು ಬಂದಿಲ್ಲ. ‘ಮಾರ್ಕ್’ ಸಿನಿಮಾದ ಬಿಡುಗಡೆ ಮತ್ತು ಪ್ರಚಾರದಲ್ಲಿ ಸುದೀಪ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು ಇನ್ನೂ ಕೆಲವೆಡೆಗೆ ತೆರಳಿ ಅಭಿಮಾನಿಗಳೊಟ್ಟಿಗೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ. ಮೈಸೂರಿನಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಸುದೀಪ್ ಅವರು ಬಿಗ್​​ಬಾಸ್​​ ಬಗ್ಗೆ ಸಹ ಮಾತನಾಡಿದ್ದು, ಈ ವೀಕೆಂಡ್ ಎಪಿಸೋಡ್​​ನಲ್ಲಿ…

Read More

ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ: ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆ; ಬೇಡಿಕೆಗಳೇನು? – Kannada News | Kogilu eviction pil submitted to high court seeking rehabilitation and basic facilities

ಬೆಂಗಳೂರು, ಜನವರಿ 01: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜೈಬಾ ತಬಸ್ಸುಮ್ ಮತ್ತಿತರರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್​ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು…

Read More

ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ….

Read More

ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ – Kannada News | New Vande Bharat sleeper train to To Run on Guwahati Kolkata Route it has advanced safety system, world class coaches

ನವದೆಹಲಿ, ಜನವರಿ 1: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು (Vande Bharat Sleeper Train) ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಲಿದ್ದಾರೆ. ಕೊಲ್ಕತ್ತಾದಿಂದ ಗುವಾಹಟಿಗೆ ಹೋಗುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಮುಂದಿನ 15-20 ದಿನಗಳಲ್ಲಿ ಅಂದರೆ ಜನವರಿ 18 ಅಥವಾ 19ರ ಸುಮಾರಿಗೆ ವಂದೇ ಭಾರತ್ ಸ್ಲೀಪರ್ ರೈಲಿನ ಉದ್ಘಾಟನೆ ನಡೆಯುವ ನಿರೀಕ್ಷೆಯಿದೆ ಎಂದು ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್…

Read More