‘ಟಾಕ್ಸಿಕ್’ ಟೀಸರ್​​: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ.

ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ.

ಟೀಸರ್​​ನಲ್ಲಿ ಯಶ್​​ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್​​ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು?

‘ಟಾಕ್ಸಿಕ್’ ಟೀಸರ್​​ನಲ್ಲಿ ಯಶ್ ಜೊತೆಗೆ ಇರುವ ನಟಿಯ ಹೆಸರು ನಟೇಲಿ ಬರ್ನ್. ಈ ನಟಿ ಮೂಲತಃ ಉಕ್ರೇನ್​​ವರು ಆದರೆ ಹಾಲಿವುಡ್​ನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಟೇಲಿ ಬರ್ನ್ ನಟಿ ಆಗಿರುವ ಜೊತೆಗೆ ನಿರ್ಮಾಪಕಿ ಮತ್ತು ಚಿತ್ರಕತೆ ಬರಹಗಾರ್ತಿಯೂ ಆಗಿದ್ದಾರೆ. ಕೆಲವು ಇಂಗ್ಲೀಷ್ ಸಿನಿಮಾಗಳಿಗೆ, ಕಿರು ಚಿತ್ರಗಳಿಗೆ ಬಂಡವಾಳ ಸಹ ಹೂಡಿದ್ದಾರೆ.

7 ಹೆವೆನ್ ಹೆಸರಿನ ಸಿನಿಮಾ ನಿರ್ಮಾಣ ಸಂಸ್ಥೆ ಹೊಂದಿರುವ ನಟೇಲಿ ಬರ್ನ್, ನಟರ ತರಬೇತಿ ಮತ್ತು ಸ್ಟುಡಿಯೋ ‘ಬಾರ್ನ್ ಟು ಬರ್ನ್’ ನ ಸಿಇಓ ಸಹ ಆಗಿದ್ದಾರೆ. ಆಕ್ಟರ್ಸ್ ಸ್ಟುಡಿಯೋ ಮತ್ತು ಟೆಲಿವಿಷನ್ ಅಕಾಡೆಮಿಯ ಸದಸ್ಯೆಯೂ ಆಗಿದ್ದಾರೆ.

ನಟೇಲಿ ಬರ್ನ್ ಹಾಲಿವುಡ್​ನ ‘ದಿ ಎಕ್ಸ್​ಪ್ಯಾಂಡೆಬಲ್ಸ್ 3’, ‘ಮೆಕ್ಯಾನಿಕ್ ರಿಸರಕ್ಷನ್’, ‘ಫಾರ್ಸೆಸ್ಟ್ರೆಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.

Published On – 3:33 pm, Thu, 8 January 26

Source link

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ – Kannada News | K Manju talks about Toxic Movie actor Yash and Gaja Kesari Yoga

ನಟ ಯಶ್ (Yash) ಅವರು ‘ಟಾಕ್ಸಿಕ್’ ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಅವರ ಪ್ಲ್ಯಾನ್ ಬಹಳ ದೊಡ್ಡದಾಗಿದೆ. ಈಗ ಬಿಡುಗಡೆ ಆಗಿರುವ ಟೀಸರ್ (Toxic Teaser) ನೋಡಿದರೆ ಇಡೀ ಸಿನಿಮಾದ ಝಲಕ್ ಕಾಣಿಸುತ್ತಿದೆ. ಯಶ್ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಆ ಬಗ್ಗೆ ನಿರ್ಮಾಪಕ ಕೆ. ಮಂಜು (K Manju) ಅವರು ಮಾತನಾಡಿದ್ದಾರೆ. ‘ಯಶ್​ಗೆ ಹುಟ್ಟುಹಬ್ಬದ ಶುಭಾಶಯಗಳು. 40ನೇ ವಯಸ್ಸಿನಲ್ಲಿ ಊಹೆ ಮಾಡಿರದಷ್ಟು ಮಟ್ಟಕ್ಕೆ ತಲುಪಿದ್ದಾನೆ. ಅವನಿಗೆ ಮೊದಲೇ ಗಜಕೇಸರಿ ಯೋಗ ಇತ್ತು. 2011-12ರ ಸಮಯದಲ್ಲಿ ಅವನಿಗೆ ಗಜಕೇಸರಿ ಯೋಗ ಶುರು ಆಯಿತು. 45 ವರ್ಷಗಳ ತನಕ ಅವನನ್ನು ಯಾರೂ ಟಚ್ ಮಾಡೋಕೆ ಆಗಲ್ಲ. ಯಶ್ ರೀತಿ ಯಾರೂ ಪ್ಲ್ಯಾನ್ ಮಾಡಲ್ಲ. ಅವನು ಯಾರಿಗೂ ಹರ್ಟ್ ಮಾಡಲ್ಲ. ಯಶ್​ಗೆ ಕನ್ನಡ ಚಿತ್ರರಂಗ ಎಂದರೆ ಪ್ರಾಣ. ಅವನು ಬೆಳೆದರೆ ಕನ್ನಡ ಚಿತ್ರಂಗಕ್ಕೆ ಒಳ್ಳೆಯದು’ ಎಂದಿದ್ದಾರೆ ಕೆ. ಮಂಜು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ! – Kannada News | India vs New Zealand T20: Tilak Varma Injury Update and World Cup Impact

ಈ ತಿಂಗಳು ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದ್ದು, ಆ ಬಳಿಕ ಫೆಬ್ರವರಿ 7 ರಿಂದ ಆರಂಭವಾಗುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದು ತಂಡವನ್ನು ಸಂಕಷ್ಟಕ್ಕೀಡುಮಾಡಿದೆ. ಏಕೆಂದರೆ ತಿಲಕ್ ವರ್ಮಾ ಭಾರತ ಟಿ20 ತಂಡದ ಆಧಾರಸ್ತಂಭವೂ ಆಗಿದ್ದಾರೆ. ಒಂದು ವೇಳೆ ತಿಲಕ್ ವಿಶ್ವಕಪ್ ವೇಳೆಗೆ ಗುಣಮುಖರಾಗದಿದ್ದರೆ, ಅವರ ಬದಲಿಗೆ ಶ್ರೇಯಸ್ ಅಯ್ಯರ್​ಗೆ ಆಡುವ ಅವಕಾಶ ಸಿಗಬಹುದು.

Source link

ದಾಯಾದಿಗಳ ಜಗಳ: ಅಣ್ಣನ ಮನೆಗೆ ಬೆಂಕಿಯಿಟ್ಟ ತಮ್ಮ; ತಾನೂ ಸುಟ್ಟುಕೊಂಡು ಆಸ್ಪತ್ರೆ ಸೇರಿದ – Kannada News | Devanahalli: Property Dispute; Arson Attempt Over Land Dispute Injures Accused

ದೇವನಹಳ್ಳಿ, ಜನವರಿ 08: ಅವರಿಬ್ಬರು ಒಂದೇ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು. ಒಂದೇ ಮನೆ, ಒಂದೇ ತಟ್ಟೆಯಲ್ಲಿ ತಿಂದವರು. ಆದರೆ ಸಹೋದರರ (Brother) ನಡುವೆ ಆಸ್ತಿ ವಿಚಾರಕ್ಕೆ ಶುರುವಾದ ಕಲಹ ಬೆಂಕಿ (fire) ಹಚ್ಚಿ ಇಡೀ ಕುಟುಂಬವನ್ನೇ ಮುಗಿಸಲು ಹೋಗಿದ್ದ ತಮ್ಮ, ತನ್ನದೆ ಪ್ಲಾನ್​​ನಿಂದ ಆಸ್ಪತ್ರೆ ಸೇರುವಂತಾಗಿದೆ. ಆ ಮೂಲಕ ಪೊಲೀಸರ ವಿಚಾರಣೆ ವೇಳೆ ಹೊಸ ಟ್ವಿಸ್ಟ್ ನೀಡಿದ್ದಾನೆ.‘

ನಡೆದದ್ದೇನು?

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋವಿಂದಪುರ ನಿವಾಸಿ ಮುನಿರಾಜು, ಕಳೆದ ಹಲವು ವರ್ಷಗಳಿಂದ ಪಟಾಕಿ ಚೀಟಿ ನಡೆಸಿ ಲಾಸ್ ಆಗಿದ್ದು, ಚೀಟಿ ಕಟ್ಟಿದವರಿಗೆ ಹಣ ಕೊಡುವುದಕ್ಕೆ ಜಮೀನು ಮಾರಾಟ ಮಾಡುವಂತೆ ತಂದೆ ಮತ್ತು ಸಹೋದರನಿಗೆ ಒತ್ತಡ ಹೇರಿದ್ದಾರೆ. ಆದರೆ ಈ ಹಿಂದೆ ಸ್ವಲ್ಪ ಜಮೀನು ಮಾರಾಟ ಮಾಡಿ ಸಾಲ ತೀರಿಸುವುದಕ್ಕೆ ಅಂತ ಹಣ ನೀಡಿದ್ದ ಕುಟುಂಬಸ್ಥರು ಇದೀಗ ಇರುವ ಜಮೀನು ಮಾರಾಟ ಮಾಡುವುದು ಬೇಡ ಅಂದಿದ್ದರಂತೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಮನೆಯವರು ಜಮೀನು ಮಾರಾಟ ಬೇಡ ಎನ್ನುತ್ತಿದ್ದಂತೆ ಇತ್ತ ಸಾಲಗಾರರು ಮುನಿರಾಜು ಮೇಲೆ ಒತ್ತಡ ಹೇರಿದ್ದಾರೆ. ಸಾಲಗಾರರ ಕಾಟದಿಂದ ಬೆಸತ್ತ ತಮ್ಮ, ಅಣ್ಣನ ಕುಟುಂಬವನ್ನೇ ಮುಗಿಸುವ ಸಂಚು ಮಾಡಿದ್ದಾನೆ. ಬೆಂಕಿ ಹಚ್ಚುವುದಕ್ಕೆ ಅಂತ ಪಂಜು ಸಿದ್ದಪಡಿಸಿದ್ದು, ಪೆಟ್ರೋಲ್ ಕೂಡ ಖರೀದಿಸಿ ಮನೆಗೆ ಬಂದಿದ್ದ. ಸುತ್ತಿಗೆಯಿಂದ ಕಿಟಕಿ ಗ್ಲಾಸ್ ಒಡೆದು ಮನೆ ಒಳಗಡೆ ಪೆಟ್ರೋಲ್ ಸುರಿದಿದ್ದಾನೆ. ಇನ್ನೂ ಪೆಟ್ರೋಲ್ ಸುರಿಯುತ್ತಿದ್ದಂತೆ ರೂಮ್​ನಲ್ಲಿ ಮಲಗಿದ್ದ ಅಣ್ಣ ರಾಮಕೃಷ್ಣ ಅತ್ತಿಗೆ ಮತ್ತು ಮಗು ಎಚ್ಚರಗೊಂಡು ಕಿರುಚಾಡಿದ್ದಾರೆ. ಮನೆಯವರು ಕಿರುಚಾಡುತ್ತಿದ್ದಂತೆ ಗಡಿಬಿಡಿಯಲ್ಲಿ ಸ್ವಲ್ಪ ಪೆಟ್ರೋಲ್ ಮನೆ ಒಳಗಡೆ ಸುರಿದು ಉಳಿದದ್ದು, ಕೈಯಲ್ಲಿ ಹಿಡಿದುಕೊಂಡು ಬೆಂಕಿ ಹಚ್ಚಿದ್ದಾನೆ. ಇನ್ನೂ ಪೆಟ್ರೋಲ್​​ ಕೈಯಲ್ಲಿದ್ದ ಕಾರಣ ಮನೆ ಒಳಗಡೆ ಹಾಗೂ ಹೊರಗಡೆ ಎರಡು ಕಡೆ ಬೆಂಕಿ ಶರವೇಗದಲ್ಲಿ ಆವರಿಸಿದ್ದು, ಬೆಂಕಿ ಹಚ್ಚಿದ ಮುನಿರಾಜು ಸಹ ಅದೇ ಬೆಂಕಿಗೆ ಸಿಲುಕಿ ಸುಟ್ಟುಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೆಂಕಿ ತನಗೂ ಹೊತ್ತಿಕೊಳ್ಳುತ್ತಿದ್ದಂತೆ ಮುನಿರಾಜು ಹೊರಗಡೆ ಕಿರುಚಾಡಿದರೆ, ಒಳಗಡೆ ಪುಟ್ಟ ಮಗು ಜೊತೆ ಸಹೋದರ ರಾಮಕೃಷ್ಣ ಸಹ ಬೆಂಕಿಯ ಹೊಗೆಯಲ್ಲಿ ನರಳಾಡಿ ಅಕ್ಕಪಕ್ಕದವರನ್ನ ಸಹಾಯಕ್ಕೆ ಕೂಗಿದ್ದಾರೆ. ಜೊತೆಗೆ ಮನೆಯಿಂದ ಹೊರಗಡೆ ಬರಲು ಯತ್ನಿಸಿದರೆ ಬೆಂಕಿ ಹಚ್ಚುವ ಮೊದಲೇ ಮುನಿರಾಜು ಮನೆಯ ಬಾಗಿಲನ್ನು ಲಾಕ್​ ಮಾಡಿದ್ದು, ಹೊರ ಬರಲಾಗದೆ ಪರದಾಡಿದ್ದಾರೆ. ಇನ್ನು ಅಕ್ಕ ಪಕ್ಕದ ಮನೆಯವರು ಕಿರುಚಾಟ ಕೇಳಿ ಅಣ್ಣ, ತಮ್ಮಂದಿರ ಸಹಾಯಕ್ಕೆ ಬಂದಿದ್ದು ರಾಮಕೃಷ್ಣ ಕುಟುಂಬವನ್ನ ರಕ್ಷಿಸಿದ್ದಾರೆ. ಜೊತೆಗೆ ಬೆಂಕಿಯಲ್ಲಿ ಬೆಂದು ನರಳಾಡುತ್ತಿದ್ದ ಮುನಿರಾಜು ನನ್ನು ಸಹ ರಕ್ಷಿಸಿದ್ದಾರೆ. ಬಳಿಕ ಹೊಸಕೋಟೆ ಆಸ್ವತ್ರೆಗೆ ದಾಖಲಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಅಣ್ಣ ರಾಮಕೃಷ್ಣ ನೀಡಿದ ದೂರಿನನ್ವಯ ತಿರಮಲಶೆಟ್ಟಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಏಕೆ ಹೀಗೆ ಮಾಡಿದೆ ಅಂತ ಗಾಯಗೊಂಡ ಮುನಿರಾಜು ನನ್ನ ಕೇಳಿದರೆ ನನಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಮನೆಯವರು ನನ್ನ ಮುಂದೆ ಜಮೀನು ಮಾರಾಟ ಮಾಡುವುದಾಗಿ ಹೇಳಿ ಖರೀದಿದಾರರನ್ನ ಕರೆದುಕೊಂಡು ಹೋದರೆ ಮಾರುವುದಿಲ್ಲ ಎನ್ನುತ್ತಿದ್ದಾರೆ. ಹೀಗಾಗೆ ಅವರನ್ನು ಸಾಯಿಸಿ ನಾನು ಸಾಯಬೇಕು ಅಂತ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಹೋಗಿದ್ದೆ ಅಂತ ಹೊಸ ಕಥೆ ಹೇಳಿದ್ದಾನೆ.

ಇದನ್ನೂ ಓದಿ: ಪೊಲೀಸರ ಕಿರುಕುಳಕ್ಕೆ ಹೊಸಕೋಟೆಯಲ್ಲಿ ವ್ಯಕ್ತಿ ಬಲಿ?: ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಒಟ್ಟಾರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಎಂಬಂತೆ ಜಮೀನು ಮಾರಾಟ ಮಾಡಲ್ಲ ಅಂತ ಕುಟುಂಬವನ್ನು ಮುಗಿಸುವ ಸಂಚು ಮಾಡಿದ್ದವನು ಇದೀಗ ಆಸ್ವತ್ರೆ ಬೆಡ್​ನಲ್ಲಿ ನರಳಾಡುತ್ತಿದ್ದಾನೆ. ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತಿಗೆ ಈ ಸ್ಟೋರಿ ಸೂಕ್ತ ಉದಾಹರಣೆ ಅಂದರು ತಪ್ಪಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಈ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ರಾಯಾ ಎಂಬ ಪಾತ್ರ ಮಾಡಿದ್ದಾರೆ. ಈ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ಈ ಟೀಸರ್ ಮೂಲಕ ತೋರಿಸಲಾಗಿದೆ. ಈ ಸಿನಿಮಾ ತುಂಬಾ ಬೋಲ್ಡ್ ಆಗಿರಲಿದೆ ಎಂಬುದು ಖಚಿತವಾಗಿದೆ. ಈಗಾಗಲೇ ಬೋಲ್ಡ್ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಸಂದೀಪ್ ರೆಡ್ಡಿ ವಂಗಾ ಕೂಡ ‘ಟಾಕ್ಸಿಕ್’ ಟೀಸರ್ ನೋಡಿ ಭೇಷ್ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಂದೀಪ್ ರೆಡ್ಡಿ ವಂಗಾ ಅವರು ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್ ಟೀಸರ್ ನನ್ನನ್ನು ತಟ್ಟಿತು. ಸ್ಟೈಲ್, ಆ್ಯಟಿಟ್ಯೂಟ್, ಕೆಯಾಸ್.. ಹುಟ್ಟುಹಬ್ಬದ ಶುಭಾಶಯಗಳು ಯಶ್’ ಎಂದು ಸಂದೀಪ್ ರೆಡ್ಡಿ ವಂಗಾ ಅವರು ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್​​ನಲ್ಲಿ ಇಷ್ಟು ಬೋಲ್ಡ್ ಸೀನ್ ಇರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಸಿನಿಮಾ ಯಾವ ರೀತಿ ಇರಬಹುದು ಎಂಬ ಕೌತುಕ ನಿರ್ಮಾಣ ಆಗಿದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಧುರಂಧರ್ 2’ ಕೂಡ ರಿಲೀಸ್ ಆಗಲಿದ್ದು, ಸಖತ್ ಪೈಪೋಟಿ ಏರ್ಪಡಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆ ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಶಿ, ಕಿಯಾರಾ ಅಡ್ವಾಣಿ, ನಯನತಾರಾ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಏಕಕಾಲಕ್ಕೆ ಈ ಸಿನಿಮಾ ಸಿದ್ಧವಾಗುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಿಗೆ ಡಬ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ – Kannada News | 14 year old girl gangraped by YouTuber and Police sub inspector in Kanpur

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ಆರೋಪದ ಮೇಲೆ ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ದಿನೇಶ್ ಚಂದ್ರ ತ್ರಿಪಾಠಿ ಅವರನ್ನು ವಜಾಗೊಳಿಸಿದ್ದಾರೆ. ಸಚೇಂಡಿ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಮುಂಬೈ: 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ, ಆರೋಪಿಯ ಬಂಧನ

ಏನಿದು ಘಟನೆ?:

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. 7ನೇ ತರಗತಿಯ ವಿದ್ಯಾರ್ಥಿನಿಯನ್ನು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಸ್ಕಾರ್ಪಿಯೋದಲ್ಲೇ ರೈಲ್ವೆ ಹಳಿಯ ಬಳಿಯ ದೂರದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಸುಮಾರು ಎರಡು ಗಂಟೆಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯ ಮನೆಯ ಹೊರಗೆ ಎಸೆಯಲಾಗಿತ್ತು.

ಇದನ್ನೂ ಓದಿ: ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು

ಆಕೆಯ ಹೇಳಿಕೆಯ ಆಧಾರದ ಮೇಲೆ, ಸಬ್-ಇನ್ಸ್‌ಪೆಕ್ಟರ್ ಅಮಿತ್ ಕುಮಾರ್ ಮೌರ್ಯ ಮತ್ತು ಯೂಟ್ಯೂಬರ್ ಶಿವಬರನ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಶಿವಬರನ್ ಯಾದವ್ ಅವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಎಸ್‌ಐ ಅನ್ನು ಬಂಧಿಸಲು ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎಸ್‌ಯುವಿಯನ್ನು ಮೌರ್ಯ ಅವರ ಹೆಸರಿನಲ್ಲಿಯೇ ನೋಂದಾಯಿಸಲಾಗಿದೆ.

ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:52 pm, Thu, 8 January 26

Source link

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್ – Kannada News | Stray Dog Attack on 3 year old Child in Sangareddy

ಸಂಗಾರೆಡ್ಡಿ, ಜನವರಿ 8: ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ (Stray Dogs) ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಬೀದಿ ನಾಯಿಗಳ ದಾಳಿಯಿಂದ ಮೂರು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನ ಕಿರುಚಾಟ ಕೇಳಿ ಅಲ್ಲಿದ್ದ ಮಹಿಳೆಯರು ಓಡಿ ಬಂದರು. ಅವರು ನಾಯಿಗಳ ಮೇಲೆ ಕಲ್ಲು ತೂರಿ ಬಾಲಕನನ್ನು ರಕ್ಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? – Kannada News | T20 World Cup 2026: Bangladesh ICC Row Over India Matches; Who Replaces Them?

ಈಗ ಪ್ರಶ್ನೆಯೆಂದರೆ, ಅಂತಿಮವಾಗಿ ಎಲ್ಲಾ ಪ್ರಯತ್ನಗಳು ನಡೆದ ಬಳಿಕವೂ ಐಸಿಸಿ, ಬಾಂಗ್ಲಾದೇಶದ ಬೇಡಿಕೆಯನ್ನು ಸ್ವೀಕರಿಸದಿದ್ದರೆ, ಇತ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ ಏನಾಗುತ್ತದೆ? ಎಂಬುದು. ಐಸಿಸಿ ಹೇಳಿದಂತೆ ಬಾಂಗ್ಲಾ ಕೇಳದಿದ್ದರೆ, ಅದನ್ನು ಟಿ 20 ವಿಶ್ವಕಪ್‌ನಿಂದ ಹೊರಹಾಕಲಾಗುತ್ತದೆ. ಇದು ನಡೆದರೆ ಬಾಂಗ್ಲಾದೇಶ ತಂಡದ ಬದಲು ಬೇರೆ ತಂಡಕ್ಕೆ ಟಿ20 ವಿಶ್ವಕಪ್‌ ಆಡುವ ಅವಕಾಶ ಸಿಗಲಿದೆ. ಹಾಗಿದ್ದರೆ ಆ ತಂಡ ಯಾವುದು?

Source link

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು.

ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ ಪ್ರೇಮಿ ಅದಕ್ಕಾಗಿ ಆಕೆಯ ಮನೆಯವರನ್ನು ಮೆಚ್ಚಿಸಲು ಅಪಘಾತದ ನಾಟಕವನ್ನು ಆಡಿದನು. ಆ ಯುವತಿ ಹೋಗುತ್ತಿದ್ದ ಸ್ಕೂಟಿಗೆ ತಾನೇ ಅಪಘಾತ ಮಾಡಿಸಿದನು. ಬಳಿಕ ತಾನೇ ಆಕೆಯನ್ನು ರಕ್ಷಿಸಿ ಹೀರೋ ಆಗಲು ಪ್ಲಾನ್ ಮಾಡಿದ್ದನು. ಈ ವಿಚಿತ್ರ ಘಟನೆ ಕೇರಳದ ಪಥನಂತಿಟ್ಟದಲ್ಲಿ ನಡೆದಿದೆ.

ಇದನ್ನೂ ಓದಿ: 20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

ಕೇರಳದ ಪಥನಂತಿಟ್ಟದ ರಂಜಿತ್ ರಾಜನ್ ಎಂಬ ಯುವಕ ಒಬ್ಬಳು ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಆಕೆಯ ಮನೆಯವರಿಗೆ ತನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ಬಂದರೆ ಮಾತ್ರ ಅವರು ಆಕೆಯನ್ನು ತನಗೆ ಮದುವೆ ಮಾಡಿಕೊಡುತ್ತಾರೆ ಎಂದು ಅವನು ಭಾವಿಸಿದ್ದ. ಆಕೆಯ ಮನೆಯವರನ್ನು ಹೇಗೆ ಮೆಚ್ಚಿಸಬಹುದು? ಎಂದು ಯೋಚಿಸಿದ ಆತ ತನ್ನ ಸ್ನೇಹಿತರೊಂದಿಗೆ ಕುಳಿತು ತನ್ನ ಗೆಳತಿಯ ಪೋಷಕರ ದೃಷ್ಟಿಯಲ್ಲಿ ತನ್ನನ್ನು ತಾನು ಹೀರೋ ಎಂದು ತೋರಿಸಲು ಅಪಘಾತದ ಪ್ಲಾನ್ ಮಾಡಿದ್ದ. ಆ ಪ್ಲಾನ್​​ನಂತೆ ತನ್ನ ಸ್ನೇಹಿತ ಅಜೇಶ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ತನ್ನ ಪ್ರೇಯಸಿಗೆ ಕಾರಿನಿಂದ ಡಿಕ್ಕಿ ಹೊಡೆಸಿದ್ದ. ಆ ವೇಳೆ ಇನ್ನೊಂದು ಕಾರಿನಲ್ಲಿ ಹಾದುಹೋಗುತ್ತಿದ್ದ ರಂಜಿತ್ ತಾನೇ ಅವಳನ್ನು ಉಳಿಸಿ ಆಸ್ಪತ್ರೆಗೆ ಕರೆದೊಯ್ದಂತೆ ನಾಟಕ ಮಾಡಿದ್ದ.

ಆದರೆ, ಈ ಅಪಘಾತದಲ್ಲಿ ಆಕೆಯ ಮೊಣಕೈ ಮತ್ತು ಬೆರಳು ಮುರಿದಿತ್ತು. ಕಳೆದ ವರ್ಷ ಡಿಸೆಂಬರ್ 23ರಂದು ಈ ಘಟನೆ ನಡೆದಿತ್ತು. ರಂಜಿತ್‌ನ ಪ್ರೇಯಸಿ ಕೋಚಿಂಗ್ ಸೆಂಟರ್‌ನಿಂದ ಸ್ಕೂಟಿಯಲ್ಲಿ ಬರುತ್ತಿದ್ದಾಗ ಆತನ ಸ್ನೇಹಿತ ಕಾರಿನಲ್ಲಿ ಆಕೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಈ ಅಪಘಾತದಲ್ಲಿ ತಮ್ಮ ಮಗಳನ್ನು ರಕ್ಷಿಸಿದ್ದಕ್ಕಾಗಿ ಆಕೆಯ ಪೋಷಕರು ಮೆಚ್ಚಿ, ಆಕೆಯನ್ನು ತನಗೆ ಮದುವೆ ಮಾಡಿಕೊಡುತ್ತಾರೆ ಎಂದು ರಂಜಿತ್ ಭಾವಿಸಿದ್ದ.

ಇದನ್ನೂ ಓದಿ: ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ

ಆದರೆ ಈ ಕಥೆ ಬೇರೆ ತಿರುವು ಪಡೆದುಕೊಂಡಿತು. ರಂಜಿತ್​​ನ ಈ ಪ್ಲಾನ್ ಬಗ್ಗೆ ತಿಳಿದಿಲ್ಲದ ಆ ಯುವತಿ ಪೊಲೀಸರಿಗೆ ದೂರು ನೀಡಿದಳು. ಅವರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಪೊಲೀಸ್ ತನಿಖೆಯ ಸಮಯದಲ್ಲಿ, ಹಿಟ್-ಆ್ಯಂಡ್ ರನ್‌ ಕೇಸ್​​ನಲ್ಲಿ ರಂಜಿತ್​​ನ ಗೆಳೆಯ ಅಜೇಶ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆತನ ವಿಚಾರಣೆ ವೇಳೆ ರಂಜಿತ್​​ನ ಪ್ಲಾನ್ ಬಯಲಾಯಿತು. ಇದೀಗ ಪೊಲೀಸರು ರಂಜಿತ್ ಮತ್ತು ಅಜೇಶ್ ಇಬ್ಬರ ವಿರುದ್ಧವೂ ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್

Source link

Exit mobile version