ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ – Kannada News | India Has Right To Defend Itself From Bad Neighbours s Jaishankars Warning Over Terrorism
ಚೆನ್ನೈ, ಜನವರಿ 2: ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇಂದು (ಶುಕ್ರವಾರ) ಪಾಕಿಸ್ತಾನದ ಮೇಲೆ ತೀಕ್ಷ್ಣವಾದ ದಾಳಿ ನಡೆಸಿದರು. ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ಮುಂದುವರಿಸುವ “ಕೆಟ್ಟ ನೆರೆಹೊರೆಯವರು” ಎಂದು ಪಾಕಿಸ್ತಾನವನ್ನು ಟೀಕಿಸಿದ್ದಾರೆ. ಅಂತಹ ಬೆದರಿಕೆಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲಾ ಹಕ್ಕನ್ನು ಭಾರತ ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಐಐಟಿ ಮದ್ರಾಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಎಸ್. ಜೈಶಂಕರ್, ಭಾರತವು ತನ್ನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ…