Headlines

ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್ – Kannada News | Ruckus Against MLA Pradeep Eshwar During Kempegowda Jayanthi Event In Chikkaballapura

ಚಿಕ್ಕಬಳ್ಳಾಪುರ, (ಜೂನ್ 27): ರಾಜ್ಯಾದೆಲ್ಲೆಡೆ ಇಂದು (ಜೂನ್ 27) ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮ ಆಚರಣೆ ಮಾಡಲಾಯ್ತು. ಆದ್ರೆ, ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. ಹೌದು…ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ ಸಂಬಂಧ ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಕಾರ್ಯಕ್ರಮ ವೇದಿಕೆಯಿಂದ ಅವರನ್ನು ಹೊರಕಳಿಸುವಂತೆ ಯುವಕರ ಗುಂಪು ಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಯಿತು….

Read More

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು – Kannada News | Hassan Accident: 3 Dead as Pickup Overturns on NH 69 Near Areseekere

ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು…

Read More

Ugadi 2026: ಯುಗಾದಿ ಬಳಿಕ ಈ ರಾಶಿಯ ಕ್ರೀಡಾಪಟುಗಳಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುವ ಯೋಗ

ಹಿಂದೂ ಪಂಚಾಂಗದ ಪ್ರಕಾರ, 2026ರ ಯುಗಾದಿ ಹಬ್ಬವನ್ನು ಮಾರ್ಚ್ 19 ಗುರುವಾರದಂದು ಆಚರಿಸಲಾಗುತ್ತಿದೆ. ಈ ವರ್ಷ 12 ರಾಶಿಗಳ ಪೈಕಿ ಕೆಲವು ರಾಶಿಗಳಿಗೆ ಸಾಕಷ್ಟು ಶುಭ ಫಲಗಳು ಒದಗಿಬರಲಿದೆ. ಅದರಲ್ಲೂ ಕುಂಭ ರಾಶಿಯ ಕ್ರೀಡಾಪಟುಗಳಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುವ ಯೋಗವಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. ಕುಂಭ ರಾಶಿಯವರಿಗೆ ಗುರುವು ಐದನೇ ಮನೆಯಿಂದ ಆರನೇ ಮನೆಗೆ ಸಾಗಲಿದ್ದಾನೆ. ಶನಿ ಗ್ರಹವು ವರ್ಷ ಪೂರ್ತಿ ಎರಡನೇ ಮನೆಯಲ್ಲೇ…

Read More

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ… ಸಿನಿಮಾ…

Read More

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ – Kannada News | Congress leader Nana Patole compares Rahul Gandhi with Lord Sri Ram

ನವದೆಹಲಿ, ಜನವರಿ 1: ಕಾಂಗ್ರೆಸ್ ನಾಯಕ ನಾನಾ ಪಟೋಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ (Ram Temple) ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. “ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ”…

Read More

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ…

Read More

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ! ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ…

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು. ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು…

Read More

Medical Career Without NEET: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್! – Kannada News | Medical Career Without NEET: Top 13 Allied Health Courses via 12th Marks

NEET ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ ನವದೆಹಲಿ: ಜೂನ್ 21 ರಂದು ದೇಶಾದ್ಯಂತ ನೀಟ್ ಯುಜಿ (NEET UG 2026) ಮರುಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವರ್ಷ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ದೇಶದಲ್ಲಿ ಲಭ್ಯವಿರುವ ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಕೇವಲ 1.5 ಲಕ್ಷಕ್ಕಿಂತ ಕಡಿಮೆ ಇದೆ. ಇಂತಹ ಕಠಿಣ ಪೈಪೋಟಿಯ ನಡುವೆ, ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಸ್ಕೋರ್ ಗಳಿಸಿದರೂ ಎಂಬಿಬಿಎಸ್ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ…

Read More