Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…

Read More

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ…

Read More

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ – Kannada News | Gurugram: Student Brutally Attacked in Live in Relationship; Warning for Urban Couples

ಗುರುಗ್ರಾಮ, ಫೆ.23: ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್​ಶಿಪ್​​​ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ…

Read More

ಇರಾನ್ ಮೇಲೆ ಟ್ರಂಪ್ ಯುದ್ಧ ಘೋಷಿಸಲು ಕಾರಣರಾದ ಪೀಟ್ ಹೆಗ್ಸೆತ್ ಯಾರು?

ವಾಷಿಂಗ್ಟನ್, ಮಾರ್ಚ್ 24: ಅಮೆರಿಕ-ಇಸ್ರೇಲ್-ಇರಾನ್ ಯುದ್ಧದಲ್ಲಿ ಇದೀಗ ಗಮನ ಸೆಳೆಯುತ್ತಿರುವ ವ್ಯಕ್ತಿ ಅಮೆರಿಕದ ಪೀಟ್ ಹೆಗ್ಸೆತ್. ಇವರು ಡೊನಾಲ್ಡ್ ಟ್ರಂಪ್ (Donald Trump) ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು. ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿರುವ ಪೀಟ್ ಹೆಗ್ಸೆತ್ ಅವರೇ ಇರಾನ್ ಮೇಲೆ ದಾಳಿ ನಡೆಸೋಣ ಎಂದು ಟ್ರಂಪ್​ ಕಿವಿಯೂದಿದ್ದಾರೆ ಎಂಬ ವಿಷಯ ಬಯಲಾಗಿದೆ. ಹೀಗಾಗಿ, ಈ ಪೀಟ್ ಹೆಗ್ಸೆತ್ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿವೆ. ಇರಾನ್ ಮೇಲೆ ಯುದ್ಧ ಮಾಡೋಣ ಎಂದು ಮೊದಲು ಹೇಳಿದ್ದೇ ಪೀಟ್ ಹೆಗ್ಸೆತ್ ಎಂದು…

Read More

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು…

Read More

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ? – Kannada News | Rakkasapuradhol Kannada movie first half review ft Raj B Shetty

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು…

Read More

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ – Kannada News | Gadag Village Accountant Writes to President, Seeks Euthanasia Alleging Harassment by Officers

ದಯಾಮರಣ ಕೋರಿ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ ಗದಗ, ಜನವರಿ 20: ನೌಕರರ ಮೇಲೆ ಅಧಿಕಾರಿಗಳ ಕಿರುಕುಳವು ಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನೌಕರರ ಮೇಲೆ ಅನಗತ್ಯ ಒತ್ತಡ, ಮಾನಸಿಕ ಹಿಂಸೆ, ಬೆದರಿಕೆ ಹಾಗೂ ಅವಮಾನಕರ ವರ್ತನೆ ತೋರುವ ಘಟನೆಗಳು ಹೆಚ್ಚುತ್ತಿವೆ. ಈ ನಡುವೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೋರ್ವ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಡಂಬಳ…

Read More

400 ಕೋಟಿ ದರೋಡೆಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​: ಹಣ ಆ ಪವರ್​​ಫುಲ್​ ರಾಜಕಾರಣಿಗೆ ಸೇರಿದ್ದಾ? – Kannada News | Chorla Ghat Robbery Case: Does the 400 Crore Belong to a Gujarat Politician? SIT Probe Continues

ಬೆಳಗಾವಿ, ಜನವರಿ 26: ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ ಬಳಿ 400 ಕೋಟಿ ರಾಬರಿ ಪ್ರಕರಣ ವಿಚಾರವಾಗಿ ಬಗೆದಷ್ಟು ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಹಣ ತುಂಬಿದ್ದ ಕಂಟೇನರ್​​ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್‌ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್​​ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ…

Read More

ವೇತನ ನಿರಾಕರಿಸಿದ ಇಬ್ಬರು ಸಂಸದರು ಯಾರು? ಸರ್ಕಾರಿ ಸೌಲಭ್ಯಗಳೂ ಬೇಡವಂತೆ

ನವದೆಹಲಿ, ಮಾರ್ಚ್​ 10: ವೇತನ ಮತ್ತು ಭತ್ಯೆಗಳನ್ನು ಹೆಚ್ಚಿಸುವಂತೆ ಸಂಸದ(Member Of Parliament)ರು ಆಗಾಗ ಸದನದಲ್ಲಿ ಕೂಗು ಕೇಳಿರಬರುತ್ತೆ. ಆದರೆ ಈ ಇಬ್ಬರು ಸಂಸದರು ತಮಗೆ ವೇತನವೂ ಬೇಡ, ಸರ್ಕಾರಿ ಸೌಲಭ್ಯಗಳು ಬೇಡ ಎಂದು ನಿರಾಕರಿಸಿರುವುದು ಅಚ್ಚರಿ ಮೂಡಿಸಿದೆ. ಲೋಕಸಭೆಯಲ್ಲಿ ಕೇವಲ ಇಬ್ಬರು ಸಂಸದರು (ಬಿಜೆಪಿಯಿಂದ ಒಬ್ಬರು ಮತ್ತು ಕಾಂಗ್ರೆಸ್‌ನಿಂದ ಒಬ್ಬರು) ತಮ್ಮ ಸಂಬಳವನ್ನು ಪಡೆಯದಿರಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುರುಕ್ಷೇತ್ರದ ಬಿಜೆಪಿ ಸಂಸದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಕಾಂಗ್ರೆಸ್ ಸಂಸದ ಡಾ….

Read More

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ! – Kannada News | Male Mahadeshwara Betta Hundi Collection Records Rs 2.73 Crore in Just 27 Days

ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ…

Read More