Headlines

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್! – Kannada News | Koppal women harassment Case Takes Twist: FIR Filed Against Taluk Medical Officer for Alleged Evidence Tampering

ಕೊಪ್ಪಳ, ಜನವರಿ 1: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ. ಸದ್ಯ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಯಲಬುರ್ಗಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿವಕುಮಾರ್ ವಿರುದ್ಧ ಯಲಬುರ್ಗಾ ಸಿಪಿಐ ಮೌನೇಶ್ವರ್‌ ಮಾಲಿಪಾಟೀಲ್…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

29 ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿ ಎಸ್​ಐಆರ್​ಗಾಗಿ ಬದುಕಿ ಬಂದ್ರು – Kannada News | Declared Dead Decades Ago, Man Reappears in UP Home After 29 Years

ಲಕ್ನೋ, ಜನವರಿ 01: ಸುಮಾರು ಮೂರು ದಶಕಗಳ ಹಿಂದೆಯೇ ಸತ್ತಿದ್ದಾರೆಂದು ಭಾವಿಸಲಾದ ಹಿರಿಯ ವ್ಯಕ್ತಿಯೊಬ್ಬರು ಮನೆಗೆ ಬಂದಾಗ ಸದಸ್ಯರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅವರು ಮನೆ ಬಿಟ್ಟು ಹೋದಾಗಿನಿಂದ ಅವರನ್ನು ಹುಡುಕದೇ ಇರುವ ಸ್ಥಳವೇ ಇರಲಿಲ್ಲ, ಕೊನೆಗೆ ಮೃತಪಟ್ಟಿರಬಹುದು ಎಂದು ಭಾವಿಸಿ ಕೈ ಚೆಲ್ಲಿದ್ದರು. ಈಗ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR)ಗೆ ದಾಖಲೆಗಳನ್ನು ಪಡೆಯಲು ಊರಿಗೆ ಮರಳಿದಾಗ ಅವರನ್ನು ಕಂಡು ಕುಟುಂಬ ಸದಸ್ಯರು ಆಶ್ಚರ್ಯಚಕಿತರಾದರು. ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಭಾವನಾತ್ಮಕ ವಾತಾವರಣ…

Read More

ಗಿಲ್ಲಿಗೆ ‘ಲೋ*ರ್’, ಥರ್ಡ್​​ಕ್ಲಾಸ್ ಪದ ಬಳಕೆ ಮಾಡಿದ ಅಶ್ವಿನಿ; ಮತ್ತೆ ಬಂತು ಹಳೇ ವರ್ಷನ್ – Kannada News | Ashwini Gowda Used Lofer Third class words in Bigg Boss Ashwini Old Version Returns

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಅವರ ಹೊಸ ವರ್ಷನ್ ಇತ್ತೀಚೆಗಷ್ಟೇ ಆರಂಭ ಆಗಿತ್ತು. ಮೊದಲು ಕೂಗಾಟ, ಅವಾಚ್ಯ ಪದ ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಅವರು ನಂತರ ಬದಲಾದರು. ಇತ್ತೀಚೆಗೆ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇರುತ್ತಿದ್ದರು. ಯಾರೇ ಎಷ್ಟೇ ಟ್ರಿಗರ್ ಮಾಡಿದರೂ ಅವರು ರೇಗಾಡುತ್ತಾ ಇರಲಿಲ್ಲ. ತಾಳ್ಮೆಯಿಂದ ವರ್ತಿಸುತ್ತಿದ್ದರು. ಆದರೆ, ಈಗ ಅವರ ಹಳೆಯ ವರ್ಷನ್ ಮತ್ತೆ ಆರಂಭ ಆಗಿದೆ. ಅವರು ಗಿಲ್ಲಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಧ್ರುವಂತ್ ಹಾಗೂ…

Read More

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ – Kannada News | Doddaballapur: Police Raid Farmhouse Hosting Illegal New year Party

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ…

Read More

‘ಮಾರ್ಕ್’ ವೀಕ್ಷಿಸುವಾಗ ಕಿಚ್ಚನ ಎದುರೇ ಗಿಲ್ಲಿ ಗೆಲ್ಲಬೇಕು ಎಂದ ಫ್ಯಾನ್ಸ್; ಸುದೀಪ್ ರಿಯಾಕ್ಷನ್ ಏನು? – Kannada News | Kichcha Sudeep Ignores Gilli Must Win Chant ahead of Bigg Boss Kannada 12 Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ಹಲವು ವರ್ಷಗಳಿಂದ ಬಿಗ್ ಬಾಸ್ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಈಗಾಗಲೇ 11 ಸೀಸನ್ ಪೂರ್ಣಗೊಂಡಿದ್ದು, 12ನೇ ಸೀಸನ್ ನಡೆಯುತ್ತಿದೆ. ಅವರು ಒಮ್ಮೆ ವೇದಿಕೆ ಏರಿದರೆ ಮುಗಿಯಿತು, ಯಾರ ಪರವಾಗಿಯೂ ಬ್ಯಾಟ್ ಬೀಸೋದಿಲ್ಲ. ಅವರು ಎಷ್ಟೇ ಆಪ್ತರಾಗಿದ್ದರೂ ತಪ್ಪು ಮಾಡಿದಾಗ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಈಗ ಸುದೀಪ್ ಎದುರು ‘ಗಿಲ್ಲಿ ಗೆಲ್ಲಬೇಕು’ ಎನ್ನುವ ಘೋಷಣೆ ಕೂಗಲಾಗಿದೆ. ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಯಿತು. ಈ ಚಿತ್ರ ಉತ್ತಮ ಕಲೆಕ್ಷನ್ ಮಾಡುತ್ತಿದೆ….

Read More

Daily Devotional: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು? – Kannada News | The Spiritual Practice: Ayyappa Swamis Image in Your Home

ಬೆಂಗಳೂರು, ಜ.1: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ ಎಂಬ ಪ್ರಶ್ನೆಗೆ ಸ್ಪಷ್ಟ ಮಾಹಿತಿಯನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಮಾಲಾಧಾರಿಗಳು ಮಾತ್ರವಲ್ಲದೆ, ಶ್ರದ್ಧಾ ಭಕ್ತಿ ಇರುವ ಯಾರಾದರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಪೂಜಿಸಬಹುದು. ಅಯ್ಯಪ್ಪ ಸ್ವಾಮಿ ಚಿನ್ಮುದ್ರೆಯಲ್ಲಿ, 18 ಮೆಟ್ಟಿಲುಗಳೊಂದಿಗೆ ಕುಳಿತಿರುವ ಭಂಗಿಯಲ್ಲಿರುವ ಫೋಟೋ ಜನಪ್ರಿಯವಾಗಿದೆ. ಇನ್ನು ಅಯ್ಯಪ್ಪನ ಫೋಟೋವನ್ನು ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಸಿಂಹದ್ವಾರದ ಮೇಲೆ ಅಥವಾ ವಾಹನಗಳಲ್ಲಿ ವರ್ಷವಿಡೀ…

Read More

ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು? – Kannada News | Kogilu Displaced Families to Get Houses a Day After New Year: Survey of 187 Homes Completed

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ ಬೆಂಗಳೂರು, ಜನವರಿ 1: ಜನವರಿ 2 ರಂದು ಕೋಗಿಲು (Kogilu Layout) ನಿರಾಶ್ರಿತರಿಗೆ ಮನೆ ಹಸ್ತಾಂತರ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ನಲ್ಲಿ ಮನೆ ನೀಡಲು ನಿರ್ಧರಿಸಲಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳು ಈ ಅಪಾರ್ಟ್​ಮೆಂಟ್​ನಲ್ಲಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಆದರೆ, ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ…

Read More

Horoscope Today 1 January: ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ – Kannada News | Dr. Basavaraj Gurujis Astrological Insights: Daily Horoscope for All 12 Zodiac Signs

ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ – Kannada News | Bengaluru and Karnataka Weather Forecast: Dry, Foggy Conditions and Cold Nights

ಬೆಂಗಳೂರು, ಜ.1: ಹೊಸ ವರ್ಷಕ್ಕೆ ವಾತಾವರಣದಲ್ಲೂ (Karnataka Weather Forecast) ಕೂಡ ಬದಲಾವಣೆಗಳು ಆಗಿವೆ. ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ…

Read More