‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. ಅದು ಹೇಗೆ ಎಂಬುದನ್ನು ವಿತರಕರು ವಿವರಿಸಿದ್ದಾರೆ.

ಬಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ಮಾರುಕಟ್ಟೆ ಇದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ಮುಗಿಬಿದ್ದು ನೋಡುತ್ತಾರೆ. ಆದರೆ ‘ಧುರಂಧರ್’ ಸಿನಿಮಾವನ್ನು ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಅದರಿಂದಾಗಿ ಈ ಚಿತ್ರಕ್ಕೆ ಆಗಬೇಕಿದ್ದ ಹೆಚ್ಚುವರಿ 90 ಕೋಟಿ ರೂಪಾಯಿಗಳು ನಷ್ಟ ಆಗಿವೆ ಎಂಬುದು ವಿತರಕರ ಲೆಕ್ಕಾಚಾರ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ‘ಧುರಂಧರ್’ ಸಿನಿಮಾದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ನಡೆಸುವ ಭಯೋತ್ಪಾದಕ ಕೃತ್ಯಗಳನ್ನು ಎಳೆಎಳೆಯಾಗಿ ಈ ಸಿನಿಮಾದಲ್ಲಿ ಬಿಡಿಸಿ ಇಡಲಾಗಿದೆ. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸಲಾಗಿದೆ. ಧರ್ಮದ ಕುರಿತ ವಿಚಾರಗಳು ಪ್ರಸ್ತಾಪ ಆಗಿರುವುದರಿಂದ ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆಗಿದೆ.

ಲೆಬೆನಾನ್, ಸಿರಿಯಾ, ಇಸ್ರೇಲ್, ಜೋರ್ಡನ್, ಸೌದಿ ಅರೇಬಿಯಾ, ಯೆಮನ್, ಓಮನ್, ಬರ್ಹೇನ್, ಖತಾರ್, ಯುನೈಟೆಡ್ ಅರಬ್ ಎಮಿರೈಟ್ಸ್, ಕುವೈತ್, ಇರಾಕ್, ಇರಾನ್ ದೇಶಗಳಲ್ಲಿ ‘ಧುರಂಧರ್​’ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಪಾಕಿಸ್ತಾನದಲ್ಲಿ ಕೂಡ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪೈರಸಿ ಮೂಲಕ ಅಲ್ಲಿನ ಜನರು ಸಿನಿಮಾ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’

ಅಕ್ಷಯ್ ಖನ್ನಾ ಅವರು ‘ಧುರಂಧರ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರೂ ಕೂಡ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದಿದ್ದಾರೆ. ಸಾರಾ ಅರ್ಜುನ್ ಅವರು ನಾಯಕಿಯಾಗಿ ಮಿಂಚಿದ್ದಾರೆ. ಭಾರತೀಯ ಗೂಢಚಾರಿ ಪಾತ್ರದಲ್ಲಿ ರಣವೀರ್ ಸಿಂಗ್ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಆದಿತ್ಯ ಧಾರ್ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭೇಷ್ ಎಂದಿದ್ದಾರೆ. ಬಿಡುಗಡೆಯಾಗಿ 27 ದಿನಗಳು ಕಳೆದರೂ ಹೌಸ್​ಫುಲ್ ಪ್ರದರ್ಶನ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಧಾರಾವಾಡ: ಸೂರ್ಯರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟ: 2025ರ ಕೊನೆಯಲ್ಲಿ ಕಂಡ ಅದ್ಭುತ ದೃಶ್ಯ – Kannada News | Discover Dharwad’s Kelageri Lake: Stunning Sunsets in Karnataka’s Belavalanaadu

ಧಾರವಾಡ, ಡಿ.31: ಧಾರಾವಾಡವನ್ನು ಅರೆಮಲೆನಾಡು ಜಿಲ್ಲೆ ಎಂದು ಅನೇಕರು ಕರೆಯುತ್ತಾರೆ. ಇನ್ನು ಕೆಲವರು ಬೆಳವಲನಾಡು ( Kelageri Lake sunset) ಎನ್ನುತ್ತಾರೆ. ಇಲ್ಲಿ ಯಾವುದೇ ಬೀಜ ಎಸೆದರೂ ಮೊಳಕೆಯೊಡೆದು ಹೆಮ್ಮರವಾಗಿ ಬಿಡುತ್ತೆ ಎಂಬ ಮಾತಿದೆ. ಇದೇ ಕಾರಣಕ್ಕೆ ಈ ಊರನ್ನು ಬೆಳವಲನಾಡು ಎಂದು ಕರೆಯುತ್ತಾರೆ. ಈ ಎಲ್ಲ ಸಮೃದ್ಧಿಗೆ ಇಲ್ಲಿನ ಕೆರೆಗಳು ಕಾರಣ. ಜಿಲ್ಲೆಯ ಬಹುತೇಕ ಪ್ರದೇಶಗಳು ಕೆರೆಗಳಿಂದ ತುಂಬಿದೆ. ಅದರಲ್ಲೂ ಕೆಲಗೇರಿ ಕೆರೆ ಈ ಜಿಲ್ಲೆಯ ಜನರ ಜೀವನಾಡಿ. ಇಂತಹ ಸುಂದರವಾದ ಕೆರೆಯಲ್ಲಿ ಸುಂದರವಾದ ನೀರು-ಸೂರ್ಯನ ಆಟ ದೃಶ್ಯ ನೋಡುವುದೇ ಅದ್ಭುತ. ಹೊಸ ಆಚರಣೆಗೆ ಇಂದೊಂದು ಅದ್ಭುತ ದೃಶ್ಯ.

ಈ ಕೆರೆಯ ಸುತ್ತಮುತ್ತಲಿನ ಪರಿಸರದಲ್ಲಿ ಹೊಸ ಹೊಸ ದೃಶ್ಯಗಳು ಕಂಡು ಬಂದಿದೆ. ಸೂರ್ಯನ ಬೆಳಕಿನೊಂದಿಗೆ ನೀರಿನ ಆಟವೂ ಅಲ್ಲಿನ ಜನರ ಖುಷಿಯ ಕ್ಷಣಕ್ಕೆ ಕಾರಣವಾಗಿತ್ತು.  ಸಂಜೆಯಾಗುತ್ತಿದ್ದಂತೆ ಸೂರ್ಯ ರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟವನ್ನು ನೋಡಲು ಎರಡು ಕಣ್ಣು ಸಾಲದು, ಅಂತಹ ಅದ್ಭುತ ದೃಶ್ಯ ಕಂಡು ಬಂದಿದೆ. ಧಾರವಾಡದಿಂದ ಗೋವಾಕ್ಕೆ ಹೋಗುವ ದಾರಿಯಲ್ಲಿ ಸಿಗುವ ಕೆಲಗೇರಿ ಕೆರೆ. ಈ ಕೆರೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ನಿರ್ಮಿಸಿದ್ದು, ಸೂರ್ಯನ ಸಂಜೆಯ ಬೆಳಕು ಬಣ್ಣ ಬಣ್ಣದ ಕಲ್ಲುಗಳಿಗೆ ನೀರಿನ ಅಲೆಗಳು ಮುತ್ತಿಡುವ ಕ್ಷಣ ನೋಡಲು ಎರಡು ಕಣ್ಣುಗಳು ಸಾಲದು, ಸೂರ್ಯನ ಬಿಂಬಕ್ಕೆ ವಿವಿಧ ಬಗೆಯ ಬಣ್ಣಗಳನ್ನು ಪಡೆದುಕೊಳ್ಳುತ್ತದೆ. ಒಂದು ಬಾರಿ ಬಂಗಾರದ ಬಣ್ಣ, ಮತ್ತೊಮ್ಮೆ ವಜ್ರ, ಹರಳುಗಳಂತೆ ಕಾಣುತ್ತದೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ

ಸಂಜೆ ಹೊತ್ತಿಗೆ ಬೆಟ್ಟ-ಗುಡ್ಡಗಳ ಮರೆಯಲ್ಲಿ ನಿಧಾನವಾಗಿ ಇಳಿಯುವ ಸೂರ್ಯ, ತನ್ನೆಲ್ಲಾ ಹಳೆಯ ನೆನಪುಗಳನ್ನ ಅಳಿಸಿ ಹಾಕಿ, ಹೊಸ ವರ್ಷಕ್ಕೆ ಹೊಸ ಬದುಕು ಹಾಗೂ ಭರವಸೆಯತ್ತ ಸಾಗುತ್ತಿರುವಂತೆ ಭಾಸವಾಗುತ್ತೆ. ನಿಧಾನವಾಗಿ ನೀರಿನಲ್ಲಿ ಇಳಿಯುವಂತೆ ಕಾಣುವ ಸೂರ್ಯ, ರಕ್ತದಲ್ಲಿ ಮಿಂದೆದ್ದವನಂತೆ ಕಾಣುತ್ತಾನೆ. ತನ್ನ ಸುತ್ತಮುತ್ತಲಿನ ಪರಿಸರಕ್ಕೂ ಅದನ್ನೇ ಹೊದಿಸುತ್ತಾನೆ. ಕ್ಷಣ ಉರುಳಿದಂತೆ ಚಿನ್ನದ ಬಣ್ಣಕ್ಕೆ ತಿರುಗುತ್ತಾ, ಕೆರೆಯ ಒಡಲನ್ನು ಚಿನ್ನದ ನೀರಿನಿಂದ ತುಂಬುತ್ತಾನೆ. ಅರೆಮಲೆನಾಡು ಜಿಲ್ಲೆಗಳಲ್ಲಿ ಜೂನ್ ಆರಂಭದಿಂದ ಡಿಸೆಂಬರ್ ಕೊನೆಯವರೆಗೆ ಸೂರ್ಯನ ಪ್ರಖರತೆ ಕಡಿಮೆ. ಮಳೆಗಾಲದಲ್ಲಿ ಸೂರ್ಯ ಮೋಡದ ಮರೆಯಲ್ಲಿ ಅವಿತುಕೊಂಡರೆ, ಚಳಿಗಾಲದಲ್ಲಿ ಮಂಜಿನಿಂದ ಹೊರ ಬಾರದೇ ಮರೆಯಾಗಿರುತ್ತಾನೆ. ಆದರೆ ಡಿಸೆಂಬರ್ ಮುಗಿಯುತ್ತಾ ಬರುತ್ತೋ ಆಗ ಮೋಡ-ಮಂಜಿನಿಂದ ಪ್ರಕೃತಿಯಷ್ಟೇ ಅಲ್ಲ, ಸೂರ್ಯನೂ ಮುಕ್ತಿ ಪಡೆದು, ತನ್ನ ಅಸ್ತಿತ್ವವನ್ನ ತೋರಿಸುತ್ತಾನೆ. ಈ ವೇಳೆಯಲ್ಲಿ ಕೆರೆಯ ನೀರಿನೊಂದಿಗೆ ಈತನ ಚೆಲ್ಲಾಟವನ್ನ ನೋಡಲಿಕ್ಕೆ ಎರಡು ಕಣ್ಣು ಸಾಲದು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:09 pm, Wed, 31 December 25

Source link

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ! – Kannada News | Voter List Scam in Hungund: BJP Blames Congress for Illegal Additions

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ.

ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ಭಾರತೀಯ ಜನತಾ ಪಕ್ಷ ಆಗ್ರಹಿಸಿದೆ. ನವನಗರದ ಬಸ್ ನಿಲ್ದಾಣ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಮಾಜಿ ಶಾಸಕರಾದ ವೀರಣ್ಣ ಚರಂತಿಮಠ ಮತ್ತು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಲಾಗಿದೆ. ಹುನಗುಂದ ಕಾಂಗ್ರೆಸ್​​ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು; ವೋಟರ್​​ ಲಿಸ್ಟ್​​ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!

ಬಿಜೆಪಿ ಆರೋಪಗಳೇನು?

  • 18 ವರ್ಷ ವಯಸ್ಸಿನ ಕಡಿಮೆ ಇರುವ ವಿಧ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ
  • ಬೇರೆ ಜಿಲ್ಲೆಯ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ
  • ಹುನಗುಂದ ಮತಕ್ಷೇತ್ರದಲ್ಲಿ ಹಲವಾರು ಗ್ರಾಮ ಹಾಗೂ ನಗರಗಳಲ್ಲಿ ಅವರು ವಾಸಿಸುವ ವಾರ್ಡನ್ನು ಬಿಟ್ಟು ಪಕ್ಕದ ವಾರ್ಡಿಗೆ ಕೂಡಾ ಸೇರಿಸುವ ಬಗ್ಗೆ ಸಾರ್ವಜನಿಕ ಚರ್ಚೆ ಆಗುತ್ತಿದೆ
  • ಒಂದೇ ಮತದಾರರ ಹೆಸರು ಎರಡು ವಾರ್ಡ್​​ಗಳಲ್ಲಿ ಕಂಡುಬಂದಿದೆ

ಮತದಾರರ ಪಟ್ಟಿ ಅಕ್ರಮ ಸಂಬಂಧ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಆಗಬೇಕು. ತಪ್ಪಿತಸ್ಥರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಬೇಕು. ಒಂದು ವೇಳೆ ನ್ಯಾಯಯುತ ತನಿಖೆ ಆಗದಿದ್ದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕರು ಎಚ್ಚರಿಸಿದ್ದಾರೆ. ಮುರಡಿ ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಈ ಮೊದಲು ಹುನಗುಂದ ತಾಲೂಕು ಪಂಚಾಯತ್​ ಮಾಜಿ ಸದಸ್ಯರು ಹಾಗೂ ಸ್ಥಳೀಯರು ಕೂಡ ಆರೋಪಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ನಿರಾಶ್ರಿತರಿಗೆ ವಸತಿ ಭಾಗ್ಯ

ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮುಗಿಸಿದ್ದಾರೆ.

ಇದನ್ನೂ ಓದಿ: ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್

ನಿರಾಶ್ರಿತರ ಬಗ್ಗೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದ್ದು, 2026 ಜನವರಿ 2ರಂದು ಮನೆಗಳ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​ನಲ್ಲಿ ಸುಮಾರು 1ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಇದೇ ಅಪಾರ್ಟ್​​ಮೆಂಟ್​ನಲ್ಲಿ ನಿರಾಶ್ರಿತರಿಗೆ ಮನೆ ಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೋಗಿಲು ಲೇಔಟ್​​ ನಿರಾಶ್ರಿತರ ಬಗ್ಗೆ ಅಶೋಕ್​​ ಸ್ಫೋಟಕ ಮಾಹಿತಿ: ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ

ಹೀಗೆ ಸರ್ಕಾರ ಕೋಗಿಲಿನ ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದೆ. ಆದರೆ ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯ ಅನೇಕ ಕಡೆಯ ಜನರ ನೆರವಿಗೆ ಸರ್ಕಾರಗಳು ಹೋಗಿಲ್ಲ. ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡವರು ಕಳೆದ 65 ವರ್ಷದಿಂದ ಹಕ್ಕುಪತ್ರಕ್ಕಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರಗಳು ಇವರನ್ನ ಕಣ್ಣೆತ್ತಿಯೂ ನೋಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ ಸಂಬಂಧಿತ ವೈಜ್ಞಾನಿಕ ಕ್ಷೇತ್ರಗಳಲ್ಲಿ ಅರ್ಹತೆ ಮತ್ತು ಅಗತ್ಯ ಅನುಭವ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು:

ಆಹಾರ ವಿಶ್ಲೇಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ರಸಾಯನಶಾಸ್ತ್ರ, ಡೈರಿ ರಸಾಯನಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಆಹಾರ ತಂತ್ರಜ್ಞಾನ, ಆಹಾರ ಸುರಕ್ಷತೆ, ಕೃಷಿ ವಿಜ್ಞಾನ, ಜೀವರಸಾಯನಶಾಸ್ತ್ರ ಸೇರಿದಂತೆ 14 ಮಾನ್ಯತೆ ಪಡೆದ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ/ಪಿಜಿ/ಪಿಎಚ್‌ಡಿ ಪದವಿಯನ್ನು ಹೊಂದಿರಬೇಕು. ಇದಲ್ಲದೆ, ಇನ್‌ಸ್ಟಿಟ್ಯೂಟ್ ಆಫ್ ಕೆಮಿಸ್ಟ್ಸ್ ಇಂಡಿಯಾದಿಂದ ಆಹಾರ ವಿಶ್ಲೇಷಕ ವಿಭಾಗ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಇದಲ್ಲದೆ, ಅಭ್ಯರ್ಥಿಯು ಆಹಾರ ವಿಶ್ಲೇಷಣೆಯಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ ರೂ. 2500 ಮತ್ತು ರೂ. 5000 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು. ಅರ್ಜಿಯನ್ನು ಸಲ್ಲಿಸಿದ ನಂತರ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

FSSAI ಆಹಾರ ವಿಶ್ಲೇಷಕರ ನೇಮಕಾತಿ ಆಯ್ಕೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲ ಹಂತವು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ಇದರಲ್ಲಿ ಆಹಾರ ರಸಾಯನಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಆಹಾರ ಸುರಕ್ಷತೆ ಮತ್ತು ಸಂಬಂಧಿತ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ. CBT ಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಎರಡನೇ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಎರಡನೇ ಹಂತವು ಪ್ರಾಯೋಗಿಕ ಪರೀಕ್ಷೆಯಾಗಿದ್ದು, ಇದರಲ್ಲಿ ಪ್ರಯೋಗಾಲಯದ ಕೆಲಸ ಮತ್ತು ಆಹಾರ ವಿಶ್ಲೇಷಣೆಗೆ ಸಂಬಂಧಿಸಿದ ಕೌಶಲ್ಯಗಳನ್ನು ಪರೀಕ್ಷಿಸಲಾಗುತ್ತದೆ. ಎರಡು ಹಂತಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು FSSAI ಅಧಿಕೃತ ವೆಬ್‌ಸೈಟ್ fssai.gov.in ಗೆ ಭೇಟಿ ನೀಡಿ.
  • ಅಭ್ಯರ್ಥಿಗಳು ಮುಖಪುಟದಲ್ಲಿರುವ ಆಹಾರ ವಿಶ್ಲೇಷಕರ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅದರ ನಂತರ, ಅಭ್ಯರ್ಥಿಗಳು ಮೊದಲು ನೋಂದಾಯಿಸಿಕೊಳ್ಳಬೇಕು ಮತ್ತು ಲಾಗಿನ್ ಐಡಿಯನ್ನು ರಚಿಸಬೇಕು.
  • ಈಗ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಈಗ ಫಾರ್ಮ್ ಅನ್ನು ಸಲ್ಲಿಸಿ ಮತ್ತು ಅದರ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:58 pm, Wed, 31 December 25

Source link

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ – Kannada News | Bigg Boss Kannada: Spandana and Rashika engaged in a fight

ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳ, ಪ್ರೀತಿ, ಗಲಾಟೆ ಎಲ್ಲವೂ ಮಾಮೂಲು. ಟಾಸ್ಕ್ ಬಂದಾಗಲಂತೂ ಮೆತ್ತಗಿದ್ದವರೂ ಸಹ ಗಟ್ಟಿಯಾಗಿ ಜಗಳಕ್ಕೆ ನಿಲ್ಲುತ್ತಾರೆ. ಕೆಲವೊಮ್ಮೆ ಕೈ-ಕೈ ಮಿಲಾಯಿಸಿದ್ದೂ ಸಹ ಇದೆ. ಸ್ಪಂದನಾ ಬಿಗ್​​ಬಾಸ್ ಮನೆಯಲ್ಲಿ ದಂತದ ಬೊಂಬೆಯಂತೆ ಇದ್ದಾರೆ. ಹೆಚ್ಚಾಗಿ ಟಾಸ್ಕ್​​ಗಳಲ್ಲಿ ಇನ್ನಿತರೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಾದರೂ ತಮ್ಮ ಅಂದ, ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಆದರೆ ಅವಶ್ಯಕತೆ ಬಂದರೆ ತಾವು ಕೈ-ಕೈ ಮಾಲಿಸುವುದಕ್ಕೂ ಸೈ ಎಂಬುವನ್ನು ಅವರು ತೋರಿಸಿಕೊಟ್ಟಿದ್ದಾರೆ. ಇದೀಗ ಟಾಸ್ಕ್ ಒಂದಕ್ಕೆ ಸಂಬಂಧಿಸಿದಂತೆ ರಾಶಿಕಾ ಮೇಲೆ ಕುಸ್ತಿ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಹೊಸ ವರ್ಷಾಚರಣೆ ದಿನವೇ ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​

ಬೆಂಗಳೂರು, ಡಿ.31: ಆಹಾರ ಡೆಲಿವರಿ ಬಾಯ್​​ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಡೆಲಿವರಿ ಬಾಯ್‌ಗಳ ಮುಖ್ಯ ಬೇಡಿಕೆಗಳಲ್ಲಿ ಉತ್ತಮ ಸಂಭಾವನೆ, ವೇಗದ ಆಹಾರ ವಿತರಣೆಗೆ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವುದು, ಅಪಘಾತಗಳು ಸಂಭವಿಸಿದಾಗ ಕಂಪನಿಗಳಿಂದ ಸೂಕ್ತ ಬೆಂಬಲ ಸಿಗದಿರುವುದು ಮತ್ತು ವ್ಯವಸ್ಥಿತ ಚೌಕಟ್ಟಿನ ಕೊರತೆ ಸೇರಿವೆ. ಗ್ರಾಹಕರು 10-15 ನಿಮಿಷಗಳಲ್ಲಿ ಆಹಾರ ತಲುಪಿಸುವಂತೆ ನಿರೀಕ್ಷಿಸಿದರೆ, ರೆಸ್ಟೋರೆಂಟ್‌ಗಳಲ್ಲಿ ಆರ್ಡರ್ ಸಿದ್ಧಗೊಳ್ಳಲು 30-40 ನಿಮಿಷಗಳಿಂದ ಒಂದು ಗಂಟೆಯವರೆಗೆ ಸಮಯ ತೆಗೆದುಕೊಳ್ಳುತ್ತದೆ. ಈ ವಿಳಂಬದಿಂದಾಗಿ ಗ್ರಾಹಕರು ದೂರು ನೀಡಿದಾಗ, ಡೆಲಿವರಿ ಪಾಲುದಾರರಿಗೆ ಪೆನಾಲ್ಟಿ ವಿಧಿಸಲಾಗುತ್ತದೆ ಅಥವಾ ಅವರ ರೇಟಿಂಗ್‌ಗಳನ್ನು ಕಡಿಮೆ ಮಾಡಲಾಗುತ್ತದೆ. ಇದು ಅವರ ಆದೇಶಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ನಗರಗಳ ಸಂಚಾರ ದಟ್ಟಣೆಯು ಸಮಯಕ್ಕೆ ತಲುಪಲು ಅಡ್ಡಿಯಾಗುತ್ತದೆ, ಇದರಿಂದ ಮತ್ತಷ್ಟು ಸಮಸ್ಯೆಗಳು ಉಂಟಾಗುತ್ತವೆ. ಈ ಪ್ರತಿಭಟನೆ ಕೇವಲ ಬೆಂಗಳೂರು ಅಥವಾ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಬದಲಾಗಿ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಂದೆಯಿಂದಲೇ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದ ಆರ್. ಚಂದ್ರು – Kannada News | R Chandru Father Movie Theme Video Released Ft Darling Krishna and Prakash Raj

‘ಆರ್‌.ಸಿ. ಸ್ಟುಡಿಯೋಸ್‌’ ಮೂಲಕ ‘ಫಾದರ್’ ಸಿನಿಮಾ (Father Movie) ನಿರ್ಮಾಣ ಆಗುತ್ತಿದೆ. ಆರ್. ಚಂದ್ರು ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಬಿಡುಗಡೆಗೆ ಈ ಚಿತ್ರ ಸಿದ್ಧವಾಗಿದೆ. ಈಗ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ರಿಲೀಸ್ ಮಾಡಲಾಗಿದೆ. ಸಿನಿಮಾದ ಕಥಾವಸ್ತುವಿಗೆ ತಕ್ಕಂತೆಯೇ ಚಂದ್ರು (R, Chandru) ಅವರು ತಂದೆ ರಾಮಣ್ಣ ಅವರಿಂದಲೇ ಈ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದರು. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ಡಾರ್ಲಿಂಗ್ ಕೃಷ್ಣ (Darling Krishna), ಅಮೃತಾ ಅಯ್ಯಂಗಾರ್ ಮುಂತಾದವರು ನಟಿಸಿದ್ದಾರೆ.

ನಿರ್ದೇಶಕ ರಾಜ್‌ ಮೋಹನ್‌ ಅವರು ‘ಫಾದರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇದೊಂದು ಎಮೋಷನಲ್ ಸಿನಿಮಾ ಆಗಿರಲಿದೆ. ಅಪ್ಪ-ಮಗನ ಬಾಂಧವ್ಯದ ಕಥೆ ಈ ಚಿತ್ರದಲ್ಲಿ ಇರಲಿದೆ. ‘ಟಗರು ಪಲ್ಯ’ ಖ್ಯಾತಿಯ ನಾಗಭೂಷಣ ಅವರು ಕೂಡ ಈ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದಾರೆ.

ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮತ್ತು ವಾರಾಣಸಿಯಲ್ಲಿ ‘ಫಾದರ್’ ಸಿನಿಮಾಗೆ ಚಿತ್ರೀಕರಣ ಮಾಡಲಾಗಿದೆ. ಸುಜ್ಞಾನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ನಕುಲ್‌ ಅಭ್ಯಂಕರ್ ಅವರು ಸಂಗೀತ ನೀಡಿದ್ದಾರೆ. ‘ಎಲ್ಲರಿಗೂ ಒಳ್ಳೆಯದಾಗಲಿ. ಫಾದರ್ ಸಿನಿಮಾ ಚೆನ್ನಾಗಿ ಹಿಟ್ ಆಗಲಿ. ಎಲ್ಲ ಭಾಷೆಯ ಜನರು ಇದನ್ನು ನೋಡಲಿ. ಕಥೆ ಚೆನ್ನಾಗಿದೆ’ ಎಂದು ಆರ್. ಚಂದ್ರು ತಂದೆ ರಾಮಣ್ಣ ಅವರು ಹೇಳಿದರು.

‘ಫಾದರ್’ ಚಿತ್ರದ ಥೀಮ್ ವಿಡಿಯೋ:

ಈ ವೇಳೆ ಡಾರ್ಲಿಂಗ್ ಕೃಷ್ಣ ಅವರು ಮಾತನಾಡಿದರು. ‘ಈ ರೀತಿಯ ಕಥೆ ಬಹಳ ಅಪರೂಪ. ಒಮ್ಮೆ ಕೇಳಿದ ತಕ್ಷಣ ವಾವ್ ಎನಿಸಿತು. ತಂದೆ-ಮಗನ ಎಮೋಷನ್ ಮೀರಿದ ಹಲವು ಅಂಶಗಳು ಈ ಚಿತ್ರದಲ್ಲಿ ಇವೆ. ಇದನ್ನು ನಾನು ಮಾಡಬಹುದಾ ಅಂತ ಭಯ ಆಗಿತ್ತು. ಕ್ಲೈಮ್ಯಾಕ್ಸ್​​ನಲ್ಲಿ ಆ ರೀತಿಯ ಅಂಶಗಳು ಇವೆ. ಈ ರೀತಿಯ ಕಥೆಯನ್ನು ನಾನು ಎಲ್ಲಿಯೂ ಕೇಳಿಲ್ಲ. ನಿರ್ದೇಶಕರು ಇಂತಹ ಒಂದು ಒಳ್ಳೆಯ ಕಥೆಯನ್ನು ಬರೆದಿದ್ದಕ್ಕೆ ಧನ್ಯವಾದಗಳು’ ಎಂದು ಡಾರ್ಲಿಂಗ್ ಕೃಷ್ಣ ಹೇಳಿದರು.

ಇದನ್ನೂ ಓದಿ: ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್

ಆರ್. ಚಂದ್ರ ಕೂಡ ಈ ವೇಳೆ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡರು. ‘ಸದಭಿರುಚಿಯ ಸಿನಿಮಾಗಳನ್ನು ಜನರು ಇಷ್ಟಪಟ್ಟು ನೋಡುತ್ತಾರೆ. ಎಲ್ಲರಿಗೂ ತಂದೆಯ ಮಹತ್ವನ್ನು ಥೀಮ್ ವಿಡಿಯೋದಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಸಾಕಷ್ಟು ವಿಷಯ ಇದೆ. ನಿರ್ದೇಶಕ ರಾಜ್ ಮೋಹನ್ ಅವರು ತುಂಬ ಚೆನ್ನಾಗಿ ಕಥೆ ಬರೆದಿದ್ದಾರೆ. ಅವರು ಒಂದು ಲೈನ್ ಹೇಳಿದಾಗಲೇ ನನಗೆ ಇಷ್ಟ ಆಗಿತ್ತು’ ಎಂದು ಆರ್​. ಚಂದ್ರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬುರುಡೆ ಕೇಸ್​​ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆ – Kannada News | Dharmasthala Temple Submits Advocacy Petition in Belthangady Court Over Mass Burial Case

ಬೆಳ್ತಂಗಡಿ, ಡಿಸೆಂಬರ್​​ 31: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ವಕಾಲತ್ತು ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಕೂಡ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು ಬಹಿರಂಗವಾಗಿದ್ದರೂ ಆರೋಪಿಗಳ ವಿರುದ್ದ ಎಸ್ಐಟಿ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ವಾದಮಂಡನೆ ನಡೆಯಲಿದೆ. ಎಸ್​​ಐಟಿ ವರದಿ ಸಂಬಂಧ ಜ.3ರಂದು ಬೆಳ್ತಂಗಡಿ ಕೋರ್ಟ್ ಅದೇಶ ಮಾಡಲಿರುವ ಕಾರಣ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​; SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ SIT ತನಿಖೆಯಲ್ಲಿಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ. ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು ಎಂಬುದು ಬಯಲಾಗಿತ್ತು.

ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು ಎಂಬುದನ್ನು ಎಸ್​ಐಟಿ ವರದಿ ಈಗಾಗಲೇ ಬಹಿರಂಗಗೊಳಿಸಿದೆ. ಈ ನಡುವೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆಯಾಗಿರೋದು ಪ್ರಕರಣಕ್ಕೆ ಹೊಸ ದಿಕ್ಕು ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version