Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

 

Source link

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ.

ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ, ಎಲ್ಲೆಡೆ ಇದು ವಾಡಿಕೆಯಲ್ಲ. ಅವರ ಆತ್ಮ ಶಾಂತಿಗಾಗಿ ಬೇರೆ ಮಾರ್ಗಗಳಿವೆ. ಹೂವಿನ ಅಲಂಕಾರ, ಹಣ್ಣುಗಳ ಅಲಂಕಾರ, ಅಭಿಷೇಕಗಳು ಹಾಗೂ ಎಲ್ಲಕ್ಕಿಂತ ಮಿಗಿಲಾಗಿ ಅನ್ನದಾನ ಮಾಡುವುದು ಹೆಚ್ಚು ಸೂಕ್ತ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ ಹೋಟೆಲ್ ಮಾಲೀಕರು ಉಡಾಫೆ ಉತ್ತರ ನೀಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿದ ಗ್ರಾಹಕರು ಹೋಟೆಲ್ ಲೈಸೆನ್ಸ್ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಘಟನೆ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾದ ನಂತರ, ನೆಲಮಂಗಲ ನಗರಸಭೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಹೋಟೆಲ್‌ಗೆ 20,000 ದಂಡ ವಿಧಿಸಿದ್ದಾರೆ. ಹೋಟೆಲ್ ಮಾಲೀಕರು ನಂತರ ಕ್ಷಮೆ ಯಾಚಿಸಿ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ಮೇಷ ರಾಶಿ:

ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ.

ವೃಷಭ ರಾಶಿ:

ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ ಮಾತನಾಡಿ ಮುಂದಡಿಯಿಡಿ. ನಿಮಗೆ ಸಿಕ್ಕ ಗೌರವವನ್ನು ಬೇರೆಯವರಿಗೆ ಬಿಟ್ಟುಕೊಡುವಿರಿ. ಅಪರಿಚಿತ ಕ್ಷೇತ್ರಕ್ಕೆ ಮುಂದಡಿಯಿಡುವಾಗ ಜಾಗರೂಕತೆ ಇರಲಿ. ನಿಮ್ಮ ವಸ್ತುವಿಗಾದ ತೊಂದರೆಗೆ ಪರಿಹಾರವನ್ನು ಕೇಳುವಿರಿ. ವಿದೇಶದಲ್ಲಿ ವಾಸಿಸುವವರಿಂದ ಶುಭವಾರ್ತೆ ಸಿಗುವುದು. ನಿಯಮ‌ಪಾಲನೆಯಲ್ಲಿ ನೀವು ನಿಸ್ಸೀಮರು. ಅನಾದರದಿಂದ ನಿಮಗೆ ಬೇಸರವಾದೀತು.

ಮಿಥುನ ರಾಶಿ:

ನಿಮ್ಮ ಸ್ವಂತ ವಾಹನದಲ್ಲಿ ಇಂದು ಎಲ್ಲಿಗೂ ಪ್ರಯಾಣ ಮಾಡಬೇಡಿ. ಹಿರಿಯರ, ತಜ್ಞರ ಮಾತುಗಳು ನಿಮಗೆ ನಿಮ್ಮ ಬಹುದಿನದಿಂದ ಬೆಳವಣಿಗೆ ಕಾಣದ ಯೋಜನೆಯೊಂದು ಆರಂಭವಾಗುತ್ತದೆ. ಉದ್ಯೋಗದ ವಿಚಾರದಲ್ಲಿ ಪ್ರಭಾವಿಗಳಿಂ ಒತ್ತಡ ಬರಲಿದೆ. ವೃತ್ತಿಯಲ್ಲಿ ನಿಮ್ಮನ್ನು ಸೋಲಿಸಬಹುದು. ಮಕ್ಕಳ ಜೊತೆ ಖುಷಿಯಿಂದ ಕಳೆಯಿರಿ. ಹೊಸತನಕ್ಕೆ ತೆರೆದುಕೊಳ್ಳುವ ಅಗತ್ಯತೆಯು ಇದೆ. ಭೂವ್ಯವಹಾರದ ಪ್ರಸ್ತಾಪವು ಕುಟುಂಬದಲ್ಲಿ ನಡೆಯಬಹುದು. ಆರೋಪಮುಕ್ತದಿಂದ ಮನಸ್ಸು ಹಗುರ.

ಕರ್ಕಾಟಕ ರಾಶಿ:

ಹಣಕಾಸಿನ ವಿಚಾರದಲ್ಲಿ ವಂಚನೆ ಸಾಧ್ಯವಾಗಬಹುದು. ಕರೆ ಸಂದೇಶಗಳಿಗೆ ಪ್ರತ್ಯುತ್ತರ ಬೇಡ. ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ಬಂಧುಗಳ ಜೊತೆ ನಿಮ್ಮ ಹೊಂದಾಣಿಕೆ ಕಷತಡವಾಗಬಹುದು. ಅದನ್ನೇ ಗಟ್ಟಿಗೊಳಿಸಿಕೊಂಡು ಮುನ್ನಡೆಯಿರಿ. ಅನೇಕ ಉತ್ತಮಮಾರ್ಗಗಳು ತೆರೆದುಕೊಳ್ಳಬಹುದು. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ಅತಿಯಾದ ಆತ್ಮವಿಶ್ವಾಸವೂ ನಿಮಗೇ ತೊಂದರೆಯನ್ನು ಉಂಟುಮಾಡೀತು. ಎಲ್ಲರಿಂದ ಹೇಳಿಸಿಕೊಳ್ಳುಬಿರಿ.

ಸಿಂಹ ರಾಶಿ:

ಇಂದು ಮೋಸಮಾಡುವ ಮನಸ್ಸುಳ್ಳವರಾಗಿರುತ್ತೀರಿ. ನಿಮ್ಮ ವಿರೋಧಿಗಳಗೆ ಮಾತಿನಿಂದ ಉತ್ತರಿಸಿ ಉಪಯೋಗವಿಲ್ಲ. ಮನೆಯಿಂದ ನಿಮಗೆ ಶುಭಸಂದೇಶದ ಆಗಮನವಾಗಲಿದೆ. ಉದ್ಯಮಕ್ಕೆ ವಿದೇಶದ ಸಹಕಾರ ಸಿಕ್ಕಿದ್ದು, ಇನ್ನಷ್ಟು ಉತ್ಸಾಹ ಬರವುದು. ಸಹೋದ್ಯೋಗಿಗಳ ಬೆಂಬಲವು ಉದ್ಯೋಗದಲ್ಲಿ ಸಿಗಲಿದೆ. ಪರಿಚಯದವರ ಜೊತೆ ವೃತ್ತಿಯನ್ನು ಮಾಡಬೇಕಾದೀತು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಅಧಿಕವಾಗುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು.

ಕನ್ಯಾ ರಾಶಿ :

ಯಾರ್ಯಾರದೋ ಒತ್ತಾಯಕ್ಕೂ ಮಣಿಯಬೇಡಿ. ಪ್ರಭಾವಿಗಳ ವ್ಯಕ್ತಿತ್ವವು ನಿಮಗೆ ಅನುಸರೀಣಯವಾಗಬಹುದು. ಮಕ್ಕಳ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಅರಗಿಸಿಕೊಳ್ಳಲಾರಿರಿ. ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ‌. ಕುಟುಂಬದವರ ಜೊತೆ ಸಂತೋಷದಿಂದ ದಿನವನ್ನು ಕಳೆಯುವಿರಿ. ನಿಮ್ಮ ಪ್ರಮಾಣಿಕತೆಯೇ ನಿಮಗೆ ಮುಳ್ಳಾಗಬಹುದು. ಕೌಟುಂಬಿಕ ವಿಷಯಗಳಲ್ಲಿ, ನೀವು ಬಾಹ್ಯ ವ್ಯಕ್ತಿಯನ್ನು ಸಂಪರ್ಕಿಸುವುದು ಬೇಡ.

ತುಲಾ ರಾಶಿ :

ಸಾಮಾಜಿಕ ಕಾರ್ಯದಲ್ಲಿ ತೊಡಗುವ ಮನಸ್ಸಿದ್ದರೂ ದೇಹವು ಅದಕ್ಕೆ ಸಹಕರಿಸದೇ ಇರಬಹುದು. ನ್ಯಾಯಾಲಯದಿಂದ ಸಿಕ್ಕ ತೀರ್ಪು ನಿಮಗೆ ಸಂತೋಷಕೊಡುವುದು. ಭವಿಷ್ಯದ ಆರ್ಥಿಕತೆಯ ಚಿಂತನೆಯನ್ನು ನಡಸುವಿರಿ. ಸಂಗಾತಿಯ ಜೊತೆ ಶೀತಲಸಮರವು ನಡೆಯಬಹುದು. ಅನಿರೀಕ್ಷತ ಸಂಕಟಕ್ಕೆ ಹಣದ ಕೊರತೆ ಕಾಣಿಸುವುದು. ಅದನ್ನು ಹೊಂದಿಸುವುದು ಕಷ್ಟವಾದೀತು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು.

ವೃಶ್ಚಿಕ ರಾಶಿ:

ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನವು ವ್ಯರ್ಥವೇ ಸರಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸವನ್ನು ಮಾಡಿ. ವಿದೇಶ ಪ್ರವಾಸ ದಾಖಲೆಗಳ ಕೊರೆತೆಯಿಂದ ಸ್ಥಗತಿವಾಗಲಿದೆ. ಯಾರಿಗೂ ಭರವಸೆಯನ್ನು ನೀಡಲು ಹೋಗಬೇಡಿ. ಸಂಗತಿಯ ಜೊತೆ ಈ ದಿನವನ್ನು ಆನಂದದಿಂದ ಕಳೆಯಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ಹಳೆಯ ಯೋಜನೆಗಳಿಗೆ ಮರುಜೀವ ಕೊಡುವಿರಿ. ಸಾಮಾಜಿಕ ಸೇವೆಗೆ ಪ್ರಶಂಸೆ.

ಧನು ರಾಶಿ:

ಕುಟುಂಬದ ಕಾಳಜಿಯೇ ನಿಮ್ಮೆದುರು ಮತ್ತೆ ಮತ್ತೆ ಬರಬಹುದು. ಸಜ್ಜನರ ಸಹವಾಸವನ್ನು ದುರಪಯೋಗ ಮಾಡಿಕೊಳ್ಳುವಿರಿ. ಅನ್ಯಚಿಂತೆಯಿಂದ ಕೆಲಸಗಳು ಹಾಗೆಯೇ ಉಳಿದಿರಬಹುದು. ಇಂದು ನೀವು ಕೆಲವು ವಿಷಯಗಳನ್ನು ರಹಸ್ಯವಾಗಿ ಇಡಬೇಕಾಗುತ್ತದೆ. ಭರವಸೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಪ್ರಯತ್ನಿಸಿ. ದಾಂಪತ್ಯ ಜೀವನದಲ್ಲಿ ಮಾಧುರ್ಯವಿರುತ್ತದೆ ಮತ್ತು ಕುಟುಂಬ ಸಂಬಂಧಗಳಿಗೆ ಪ್ರಾಮುಖ್ಯವನ್ನು ನೀಡುತ್ತದೆ.

ಮಕರ ರಾಶಿ:

ನಿಮ್ಮನ್ನು ಇಷ್ಟಪಟ್ಟವರಿಗೆ ಇಂದು ನಿಮ್ಮಿಂದ‌ ಅಸಮಾಧಾನವಾಗುವ ಸಾಧ್ಯತೆ ಇದೆ. ಯಾವುದಾರೂ ಸ್ಪರ್ಧೆಯಲ್ಲಿ ಭಾಗವಹಿಸುವುದಿದ್ದರೆ ಇಂದು ಜಯ ನಿಮ್ಮದೇ. ಎಲ್ಲದಕ್ಕೂ ಹೊಂದಾಣಿಕೆ ಮಾಡಿಕೊಂಡು ಬೇಸರವಾಗಿದ್ದರೂ ಅದನ್ನು ಮಾಡಿಕೊಳ್ಳದೇ ವಿಧಿಯಿಲ್ಲ. ನಿಮ್ಮ ಅಗತ್ಯ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಬಹುದು. ನೆರಮನೆಯವರ ಜೊತೆ ಭೂಮಿಯ ವಿಚಾರಕ್ಕೆ ವಾಗ್ವಾದವು ಆಗಬಹುದು. ಗೃಹನಿರ್ಮಾಣದ ದಾಖಲೆ ಪಡೆಯಲು ನೀವು ಓಡಾಟ ಮಾಡಬೇಕಾಗುವುದು.

ಕುಂಭ ರಾಶಿ:

ಉತ್ತಮವಾದ ಅಭ್ಯಾಸವನ್ನು ಆರಂಭಿಸಲು ಸಕಾಲ. ಉತ್ಸಾಹಕ್ಕೆ ಭಂಗವಾಗುವ ಯಾವ ವಿಚಾರಗಳೂ ಇಂದ ಆಗದು.‌ ನಿಶ್ಚಿಂತೆಯಿಂದ ಇರಬಹುದು. ಗೆಳಯರ ಜೊತೆ ಕಳೆದ ದಿನಗಳನ್ನು ನೆನಪಿಸಿಕೊಂಡು ಖುಷಿಪಡುವಿರಿ. ಅವಸರದಲ್ಲಿ ಯಾವುದೇ ಕಾರ್ಯವನ್ನು ಮಾಡುವುದು ಬೇಡ. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನೀವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಕಾರ್ಯನಿರ್ವಹಣೆಗೆ ಪ್ರಶಂಸೆಯು ಸಿಗಲಿದೆ. ಗ್ರಾಹಕರಿಂದ ಮೋಸ ಹೋಗಬೇಕಾದೀತು.

ಮೀನ ರಾಶಿ:

ಮಾತುಗಳನ್ನು ಆಡುವಾಗ ಯಾರ ಜೊತೆ ಮಾತನಾಡುತ್ತಿದ್ದೀರಿ ಎಂಬ ಗಮನವಿರಲಿ. ಸ್ನೇಹಿತರ ಬೆಂಬಲವು ನಿಮಗೆ ಅಗತ್ಯವಾಗಿ ಸಿಗಲಿದೆ. ಕೆಲವು ಅಪರಿಚಿತರ ಜೊತೆ ನೀವು ಎಚ್ಚರಿಕೆಯಿಂದ ಇರುವುದು ಮುಖ್ಯವಾಗಲಿ. ಬಹುಕಾಲದಿಂದ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸುವ ದಿನವಾಗಿದೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದಿಂದ ಪ್ರಯೋಜನವುದೆ. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 14 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 10:53, ಯಮಗಂಡ ಕಾಲ 15:36 – 12:25, ಗುಳಿಕ ಕಾಲ 15:31 – 17:04

-ಲೋಹಿತ ಹೆಬ್ಬಾರ್ – 8762924271 (what’s app only)

Source link

‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು: ವಿಡಿಯೋ

ಧರ್ಮ ಕೀರ್ತಿ (Dharma Keerthy) ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿ ಮಾತನಾಡಿದರು. ಧರ್ಮ ಕೀರ್ತಿ ಹಾಗೂ ಅನುಷಾ ರೈ ಒಟ್ಟಿಗೆ ನಟಿಸಿರುವ ಮೂರನೇ ಸಿನಿಮಾ ಇದು. ಅನುಷಾ ರೈ ಅವರೊಟ್ಟಿಗಿನ ತಮ್ಮ ಕೆಮಿಸ್ಟ್ರಿ ಬಗ್ಗೆ ಹಾಗೂ ಅನುಷಾ ರೈ ಅವರ ನಟನೆ, ವ್ಯಕ್ತಿತ್ವದ ಬಗ್ಗೆ ಧರ್ಮ ಕೀರ್ತಿ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ, ಏಪ್ರಿಲ್​ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್​​ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್​​ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ.‌ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್​​ಸಿ ಆಗಿದ್ದಾರೆ.‌ ಪಕ್ಷದ ಕೆಲಸ ಬಂದು ಮಾಡಿಬೇಕು. ಅದನ್ನ ಬಿಟ್ಟು ಕರೆದಿಲ್ಲ ಎಂದರೇ ಹೇಗೆ. ನನ್ನ ಸಹೋದರ ಸಾಧಿಕ್ ಪೈಲ್ವಾನ್ ಸ್ಪರ್ಧೆ ಮಾಡಲು ಮುಂದಾಗ ಸಿಎಂ ಸಿದ್ದರಾಮಯ್ಯ ನಮಗೆ ಫೋನ್​ ಮಾಡಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಗಿದೆ. ಒಂದಂತು ಸತ್ಯ ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಗೆಲ್ಲುತ್ತಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ನವದೆಹಲಿ, ಏಪ್ರಿಲ್ 11: ಬಿಹಾರದ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಂದು 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ (Accident) ಬಸ್ ಮತ್ತು ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ.

ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಸುಮಾರು 20 ಗಂಭೀರ ಗಾಯಗೊಂಡ ರೋಗಿಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಪೂರ್ಣಿಯಾ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ

ಹತ್ತಿರದಲ್ಲೇ ಚಲಿಸುತ್ತಿದ್ದ 2 ಬೈಕ್​ಗಳು ಸಹ ಅಪಘಾತದಲ್ಲಿ ಸಿಲುಕಿಕೊಂಡಿದ್ದು, ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಅಧಿಕಾರಿಗಳ ಪ್ರಕಾರ, ಪಿಕಪ್ ಟ್ರಕ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪೂರ್ಣಿಯಾ ಜಿಲ್ಲೆಯ ಧಮ್ದಾಹಾ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ಜಾತ್ರೆಯಿಂದ ಮನೆಗೆ ಮರಳುತ್ತಿದ್ದರು. ಈ ಘಟನೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸದಾನಂದ ಹಸ್ದಾ ಕೂಡ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ.

ಆರ್ಥಿಕತೆ, ಆದಾಯ ಮತ್ತು ಸಾಲ :

​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ ಉದ್ದೇಶಕ್ಕೆ ಖರ್ಚು ಆಗುವ ಸಾಧ್ಯತೆ ಹೆಚ್ಚು. ಎಂಟನೇ ರಾಶಿಲ್ಲಿ ಕೇತು ಇರುವುದರಿಂದ ಹಳೆಯ ಸಾಲದ ವಿಚಾರದಲ್ಲಿ ಸ್ವಲ್ಪ ಆತಂಕ ಎದುರಾಗಬಹುದು ಅಥವಾ ವಿಮೆಗೆ ಸಂಬಂಧಿಸಿದ ಹಣ ಸಿಗುವಲ್ಲಿ ವಿಳಂಬವಾಗಬಹುದು.

ಉದ್ಯೋಗ, ಅಧಿಕಾರ ಮತ್ತು ಸರ್ಕಾರಿ ಕಾರ್ಯ :

​ಮೂರನೇ ಮನೆಯಲ್ಲಿ ಶನಿ ಮತ್ತು ಸೂರ್ಯ ಇರುವುದರಿಂದ ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದೆ. ಸವಾಲುಗಳನ್ನು ಎದುರಿಸಿ ಯಶಸ್ವಿಯಾಗುವಿರಿ. ಸರ್ಕಾರಿ ಕಾರ್ಯಗಳಿಗೆ ಈ ಸಮಯ ಅತ್ಯಂತ ಪೂರಕವಾಗಿದೆ. ಹೊಸ ಜವಾಬ್ದಾರಿ ಅಥವಾ ಅಧಿಕಾರ ಸಿಗುವ ಲಕ್ಷಣಗಳಿವೆ.

ಗೃಹ ನಿರ್ಮಾಣ ಮತ್ತು ಕೃಷಿ :

​ನಾಲ್ಕನೇ ಮನೆಯಲ್ಲಿ ಶುಕ್ರನ ಸಂಚಾರವು ಮನೆಯಲ್ಲಿ ಸುಖ-ಸಂತೋಷವನ್ನು ನೀಡುತ್ತದೆ. ಗೃಹಾಲಂಕಾರ ಅಥವಾ ಹೊಸ ವಾಹನ ಖರೀದಿಗೆ ಹಣ ವಿನಿಯೋಗಿಸುವಿರಿ. ಎರಡನೇ ಮನೆಯಲ್ಲಿರುವ ಮಂಗಳ ಕೃಷಿ ಭೂಮಿಯ ಆದಾಯವನ್ನು ಹೆಚ್ಚಿಸುತ್ತಾನೆ. ಅಡಿಕೆ ಬೆಳೆಗಾರರಿಗೆ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ಸಿಗಬಹುದು.

ವಿದ್ಯಾಭ್ಯಾಸ ಮತ್ತು ವಿದೇಶ ಪ್ರವೇಶ :

​ಮೂರನೇ ಮನೆಯಲ್ಲಿರುವ ಶನಿ ಮತ್ತು ರಾಹುವಿನ ದೃಷ್ಟಿಯು ನಿಮ್ಮನ್ನು ವಿದೇಶಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿಗೊಳಿಸುತ್ತದೆ. ವಿದೇಶ ಪ್ರವೇಶ ಬಯಸುವವರಿಗೆ ಶುಭ ವಾರ್ತೆ ಸಿಗಲಿದೆ.

ಆಹಾರ ಉದ್ಯಮ ಮತ್ತು ಸಮಾಜ ಸೇವೆ :

​ಆಹಾರ ಮತ್ತು ಹೋಟೆಲ್ ಉದ್ಯಮದಲ್ಲಿ ಇರುವವರಿಗೆ ಉತ್ತಮ ಲಾಭವಿದೆ. ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಮೂರನೇ ಮನೆಯ ಗ್ರಹಗಳ ಬಲದಿಂದಾಗಿ ಮನ್ನಣೆ ಸಿಗಲಿದೆ.

ಸಂಬಂಧ :

​ಕುಟುಂಬ ಸ್ಥಾನದಲ್ಲಿ ಎರಡನೇ ರಾಹು ಮತ್ತು ಮಂಗಳ ಸಂಯೋಗ ಇರುವುದರಿಂದ ಕೌಟುಂಬಿಕ ಮಾತುಕತೆಗಳಲ್ಲಿ ಜಾಗರೂಕರಾಗಿರಿ. ನಿಮ್ಮ ನೇರ ಮಾತುಗಳು ಸಂಬಂಧಿಕರಿಗೆ ನೋವುಂಟು ಮಾಡಬಹುದು.

ಹನುಮಾನ್ ಚಾಲಿಸ್ ಪಠವನ್ನು ಪ್ರತಿ ದಿನ‌ ಅಥವಾ ಪ್ರತಿ ಶನಿವಾರದಂದು ಮಾಡಿ. ಬರುವ ವಿಘ್ನವನ್ನು ಎದುರಿಸುವ ಧೈರ್ಯ ಬರಲಿದೆ.

– ಲೋಹಿತ ಹೆಬ್ಬಾರ್

Source link

ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ: ಸಹೋದರಿಯರ ಮೇಲೆ ರಾಡ್, ವೈರ್‌ನಿಂದ ಹಲ್ಲೆ ಆರೋಪ

ಧಾರವಾಡ, ಏ.11: ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮಾಜಿ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಹೊರಬೀಳುವ ಹಂತದಲ್ಲಿದೆ. ಆದರೆ, ಇತ್ತ ಯೋಗೀಶ್ ಗೌಡ ಅವರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದ ಕಿತ್ತಾಟ ಶುರುವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ತೋಟದ ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಯೋಗೀಶ್ ಗೌಡ ಅವರ ಸಹೋದರ ಗುರುನಾಥ ಗೌಡ ಮತ್ತು ಸಹೋದರಿಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗುರುನಾಥ ಗೌಡ ಮತ್ತು ಅವರ ಪತ್ನಿ ಜ್ಯೋತಿ ಗೌಡ ಅವರು ಕಬ್ಬಿಣದ ರಾಡ್ ಹಾಗೂ ವೈರ್‌ನಿಂದ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಹೋದರಿಯರು ಆರೋಪಿಸಿದ್ದಾರೆ. ಸಹೋದರಿಯರಾದ ಜಗದೀಶ್ವರಿ ಮತ್ತು ಅಕ್ಕಮಹಾದೇವಿ ಅವರು ಈ ಘಟನೆಯ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುನಾಥ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕಿತ್ತಾಟದ ಆಡಿಯೋ ಸಂಭಾಷಣೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಗ್ರಾಮಾಂತರ ಪೊಲೀಸರು ಗುರುನಾಥ ಗೌಡ ಹಾಗೂ ಅವರ ಪತ್ನಿ ಜ್ಯೋತಿ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದ ಅಂತಿಮ ಹಂತದಲ್ಲಿ ಕುಟುಂಬದ ಈ ಆಂತರಿಕ ಕಲಹ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

‘ಬೆಂಗಳೂರು ಇನ್’ (Bengaluru Inn) ಹೆಸರಿನ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version