Headlines

ಕಮಲಾಕರ ಭಟ್ ಮತ್ತೊಂದು ಸೀಕ್ರೆಟ್ ಬಯಲು! ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಗಳಿಸಿದ್ದ ಜ್ಯೋತಿಷಿ – Kannada News | Astrologer Kamalakar Bhat Under Scanner: Crores Worth Assets in Name of Goshala Surface Amid Murder Case Probe

ಶಿವಮೊಗ್ಗ, ಫೆಬ್ರವರಿ 6: ರೀಲ್ಸ್ ರಾಣಿ ಸುಚಿತ್ರಾ ಜತೆ ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಸುದ್ದಿಯಲ್ಲಿರುವ ಕಮಲಾಕರ ಭಟ್ ಮತ್ತೊಂದು ರಹಸ್ಯ ಈಗ ಬಯಲಾಗಿದೆ. ಕಡಿಮೆ ಅವಧಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಎಕರೆಗಟ್ಟಲೆ ಆಸ್ತಿ ಖರೀದಿಸಿದ ವಿಚಾರ ಈಗ ಬೆಳಕಿಗೆ ಬಂದಿದ್ದು, ಆಸ್ತಿಗಳ ಕುರಿತು ಕೂಡ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದಲ್ಲಿ ಕಮಲಾಕರ್ ಭಟ್ 10 ಎಕರೆಗೂ ಹೆಚ್ಚು ಭೂಮಿಯನ್ನು ಖರೀದಿಸಿದ್ದ. ಈ ಜಮೀನನ್ನು ಗೋಶಾಲೆ, ಮಠ ಮತ್ತು…

Read More

‘ಆರ್​​ಆರ್​​ಆರ್’ ಸಿನಿಮಾ ರೀಮೇಕ್ ಆಗುತ್ತಿದೆ, ಆದರೆ ಬೇರೆ ರೂಪದಲ್ಲಿ – Kannada News | SS Rajamouli planning to remade RRR movie in Anime

ರಾಜಮೌಳಿ (Rajamouli) ಈಗ ಗ್ಲೋಬಲ್ ಐಕಾನ್ ಆಗಿದ್ದಾರೆ. ಅವರನ್ನು ಗ್ಲೋಬಲ್ ಐಕಾನ್ ಆಗುವಂತೆ ಮಾಡಿದ್ದು ಅವರ ಈ ಹಿಂದಿನ ಸಿನಿಮಾ ‘ಆರ್​​ಆರ್​​ಆರ್’. ಈ ಸಿನಿಮಾ ಭಾರಿ ಯಶಸ್ಸು ಗಳಿಸುವ ಜೊತೆಗೆ ವಿದೇಶದ ಬಾಕ್ಸ್ ಆಫೀಸ್​​ನಲ್ಲೂ ದೊಡ್ಡ ಯಶಸ್ಸು ಗಳಿಸಿತು. ಜೇಮ್ಸ್ ಕ್ಯಾಮೆರಾನ್, ಸ್ಟಿವನ್ ಸ್ಪೀಲ್​​ಬರ್ಗ್ ಇನ್ನೂ ಹಲವು ಖ್ಯಾತನಾಮ ನಿರ್ದೇಶಕರು ಸಿನಿಮಾ ನೋಡಿ ರಾಜಮೌಳಿಯ ಪ್ರತಿಭೆಯನ್ನು ಕೊಂಡಾಡಿದರು. ಇದೀಗ ಈ ಸಿನಿಮಾವನ್ನು ಇನ್ನೊಂದು ರೂಪದಲ್ಲಿ ಹೊರ ತರಲು ರಾಜಮೌಳಿ ಸಜ್ಜಾಗಿದ್ದಾರೆ. ರಾಜಮೌಳಿ ಅವರು ತಮ್ಮ ಬ್ಲಾಕ್‌ಬಸ್ಟರ್ ಸಿನಿಮಾ…

Read More

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ – Kannada News | No Leadership Change in Karnataka: High Command Gives Green Signal to Siddaramaiah to Continue Full Term, Says Yathindra

ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು. ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ…

Read More

‘ಜೆಸಿ’ ಸಿನಿಮಾ ವಿಮರ್ಶೆ: ಮಾಸ್ ಮಸಾಲ ಜೊತೆ ಕಲಸುಮೇಲೋಗರ – Kannada News | JC Movie Review: Dolly Dhananjay backed Surya Prakhyath Kannada action thriller’s brutal mass masala

ಕೊಲೆ, ರಕ್ತಪಾತಗಳ ಸಿನಿಮಾಗಳು ಸಾಕಷ್ಟು ಬಂದು ಹೋಗಿವೆ. ಇದಕ್ಕೆ ದೊಡ್ಡದಾದ ಅಭಿಮಾನಿ ಬಳಗವೇ ಇದೆ. ಸೂರ್ಯ ಪ್ರಖ್ಯಾತ್ ನಟನೆಯ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಇದೇ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದು ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತದೆ. ಈ ಸಿನಿಮಾಗೆ ಡಾಲಿ ಧನಂಜಯ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ವಿಮರ್ಶೆ ಇಲ್ಲಿದೆ. ಮ್ಯಾಡಿ (ಸೂರ್ಯ ಪ್ರಖ್ಯಾತ್) ಕಾಲೇಜು ಓದೋ ವಿದ್ಯಾರ್ಥಿ. ತಾನಾಯ್ತು, ತನ್ನ ಕಾಲೇಜಾಯ್ತು ಎಂದು ಹಾಯಾಗಿ ಇರುತ್ತಾನೆ. ಬೆಂಗಳೂರಿನ ಭೂಗತ ಜಗತ್ತು ಹೀಗಿರುತ್ತದೆ ಎಂಬುದನ್ನು ಕನಸಲ್ಲೂ…

Read More

Video: ಬೈಕ್​​ನಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿ ರಸ್ತೆಯಿಂದ ಎಳೆದೊಯ್ದ ಹುಲಿ – Kannada News | Arunachal Policeman Killed in Suspected Tiger Attack Near Roadside

ಅರುಣಾಚಲಪ್ರದೇಶ, ಫೆಬ್ರವರಿ 06: ಬೈಕ್​ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ದುರ್ಬಲವಾದ ಪರ್ವತ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮತ್ತೆ ಭಯ ಹುಟ್ಟಿದೆ. ಚಿಕ್ಸೆನ್ ಮಂಗ್‌ಪಾಂಗ್, ಹೆಡ್ ಕಾನ್‌ಸ್ಟೆಬಲ್, ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದಟ್ಟವಾದ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಕೆಲವೇ ಸೆಕೆಂಡುಗಳಲ್ಲಿ ಅವರನ್ನು ಎಳೆದುಕೊಂಡು ಹೋಗಿದೆ. ಅರಣ್ಯ…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ? – Kannada News | Get Urgent Train Tickets: Apply for Railways Emergency Quota

ಭಾರತೀಯ ರೈಲ್ವೆಯಲ್ಲಿನ ತುರ್ತು ಕೋಟಾ (EQ) ಸೇರಿದಂತೆ ಹಲವಾರು ಬುಕಿಂಗ್ ಕೋಟಾಗಳನ್ನು ಪರಿಚಯಿಸಿದೆ. ಇದರಿಂದ ಯಾರಿಗೆಲ್ಲ ಲಾಭವಾಗಲಿದೆ. ಇದನ್ನು ಪಡೆಯುವುದು ಹೇಗೆ ಎಂಬಲ್ಲ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಸೀಟುಗಳು ಭರ್ತಿಯಾದಾಗ ‘ವೈಟಿಂಗ್ ಲಿಸ್ಟ್’ (Waiting List) ಇರುತ್ತದೆ. ಆದರೆ, ಅತೀ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸಬೇಕಾದವರಿಗಾಗಿ ರೈಲ್ವೆ ಇಲಾಖೆಯು ಕೆಲವು ಸೀಟುಗಳನ್ನು ಮೀಸಲಿಟ್ಟಿರುತ್ತದೆ. ಇದು ಎಲ್ಲರಿಗೂ ಮುಕ್ತವಾಗಿಲ್ಲ ಮತ್ತು ಕೆಲವು ವರ್ಗದ ಪ್ರಯಾಣಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಈ ಕೋಟಾವನ್ನು ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಇದನ್ನು…

Read More

Viral: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ? – Kannada News | Bengaluru: Bengaluru woman takes a break from 14 hour office work

ಬೆಂಗಳೂರು, ಫೆಬ್ರವರಿ 06: ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಹೀಗಾಗಿ ಎಷ್ಟೇ ಜನರು ಒತ್ತಡಭರಿತ ವಾತಾವರಣಕ್ಕೆ ಬೇಸೆತ್ತು ಜಾಬ್ ರಿಸೈನ್ ಮಾಡುವ ನಿರ್ಧಾರ ಕೂಡ ಮಾಡ್ತಾರೆ. ಆದರೆ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ದಿನದ 14 ಗಂಟೆ ಕೆಲಸ ಮಾಡಿದ್ದಕ್ಕೆ ಆರೋಗ್ಯವೂ ಹದಗೆಟ್ಟಿತು. ತನ್ನ ಈ ಒಂದು ನಿರ್ಧಾರದಿಂದ ಚೇತರಿಸಿಕೊಂಡೆ ಎಂದು ಹೇಳಿದ್ದಾರೆ. ಲಿಂಕ್ಡ್ ಇನ್‌ನಲ್ಲಿ ಮಾಡಿದ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡಿ ಸಲಹೆ…

Read More

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search

ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…

Read More