Headlines

WPL 2026: ಆರ್​ಸಿಬಿಗೆ ಆಘಾತ; 2026 ರ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದ ಎಲ್ಲಿಸ್ ಪೆರ್ರಿ – Kannada News | Ellyse Perry Exits WPL 2026: RCB Faces Major Setback Before Season Start

ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್ (Women’s Premier League) ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಚಾಂಪಿಯನ್ ಆಟಗಾರ್ತಿ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ (Ellyse Perry) ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ ಹಿಂದೆ…

Read More

ವಿಜಯಪುರ PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್​ಗೆ ಟ್ವಿಸ್ಟ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ – Kannada News | Vijayapura Police Officer Illicit Affair Case: Victim Clarifies Rumours

ವಿಜಯಪುರ, ಡಿಸೆಂಬರ್​​ 30: ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದವಳ ಜೊತೆ ಪೊಲೀಸ್ ಅಧಿಕಾರಿ ಸಂಬಂಧ ಆರೋಪ ವಿಚಾರವಾಗಿ ಸ್ವತಃ ಮಹಿಳೆಯೇ ಟವಿ9 ಕನ್ನಡದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಭೀಮಾಶಂಕರ ಪತ್ನಿ ಅನುರಾಧಾ ತನಗಾದ ಸಮಸ್ಯೆಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದು, ಗಂಡನ ಕಿರುಕುಳದಿಂದ ನಾನು ಆತನಿಂದ ದೂರವಾಗಿದ್ದೇನೆ. ಕುಡಿದು ಬಂದು ಹಲ್ಲೆ ಜೊತೆಗೆ ಕೊಲೆಗೂ ಆತ ಯತ್ನಿಸಿದ್ದ. ಹೀಗಾಗಿ ಗಂಡನಿಂದ ದೂರವಾಗಿ 4 ವರ್ಷಗಳು ಕಳೆದಿವೆ ಎಂದು ತಿಳಿಸಿದ್ದಾರೆ. ಊರಲ್ಲಿದ್ದ ಜಮೀನು ಮಾರಿ ಬೆಂಗಳೂರಿನಲ್ಲಿ ನಿವೇಶನ ಖರೀದಿ…

Read More

ಬೆಂಗಳೂರು: ಬಯೋಕಾನ್ ಕಂಪನಿಯ 3ನೇ ಮಹಡಿಯಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆ – Kannada News | Bengaluru: Biocon Employee Dies by Suicide After Jumping From Third Floor

ಬೆಂಗಳೂರು, ಡಿಸೆಂಬರ್​ 30: ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ (biocon company) ಉದ್ಯೋಗಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಅನಂತ್ ಭಟ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅನಾರೋಗ್ಯ: ಮನನೊಂದು ಆಟೋ ಡ್ರೈವರ್ ಆತ್ಮಹತ್ಯೆ ಅನಾರೋಗ್ಯದ ಹಿನ್ನೆಲೆ ಮನನೊಂದು ಆಟೋ…

Read More

Video: ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು, ಐವರ ಮೇಲೆ ಬಿತ್ತು ಎಫ್​​​ಐಆರ್​​ – Kannada News | Devanahalli Bypass: Drunk Driving Check Turns Violent, Youths Assault Police

ದೇವನಹಳ್ಳಿ, ಡಿ.30: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿದ್ದ ಯುವಕರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಬೈಪಾಸ್​​​ನಲ್ಲಿ ನೆನ್ನೆ (ಡಿ.29) ರಾತ್ರಿ ನಡೆದಿದೆ. ಡಿಡಿ ಕೇಸ್ ಚೇಕಿಂಗ್ (ಮದ್ಯಪಾನ ಮಾಡಿ ವಾಹನ ಚಲಾಯಿಸುವುದು) ವೇಳೆ ಅವಾಜ್ ಹಾಕಿದ್ದ ಈ ಯುವಕರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕನನ್ನು ಬ್ರೆತ್ ಅನಾಲೈಸರ್​​ಗೆ ಊದಲು ಹೇಳಿದ್ದಾರೆ. ಆದರೆ ಇದಕ್ಕೆ ಚಾಲಕ ನಿರಾಕರಿಸಿದ್ದಾನೆ. ಈ ವಿಚಾರವಾಗಿ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರಿನಿಂದ ಕೆಳಗಿಳಿದು…

Read More

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | India Post GDS Recruitment 2026: Apply for 30,000+ Posts | 10th Pass Jobs

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಉತ್ತಮ ಅವಕಾಶವಾಗುತ್ತದೆ. ಪ್ರತಿ ವರ್ಷ, ಸಾವಿರಾರು ಯುವಕರು ಅಂಚೆ ಇಲಾಖೆಯ ಉದ್ಯೋಗ ಜಾಹೀರಾತಿಗಾಗಿ ಕಾಯುತ್ತಿರುತ್ತಾರೆ. ಈ ಕ್ರಮದಲ್ಲಿ, ಭಾರತೀಯ ಅಂಚೆ…

Read More

ಹೊಸ ವರ್ಷದ ಹೊತ್ತಲ್ಲಿ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ಇಡಿ ಪ್ರಕರಣದಲ್ಲಿ ಜಾಮೀನು – Kannada News | Chitradurga MLA Veerendra Pappy Gets Bail in ED Money Laundering Case

ಬೆಂಗಳೂರು, ಡಿಸೆಂಬರ್​​ 30: ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್​​ ರಿಲೀಫ್​​ ನೀಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೋರ್ಟ್ ಜಾಮೀನು ನೀಡಿದ್ದು,​​ ಆ ಮೂಲಕ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಾಸಕರಿಗೆ ಹೊಸ ವರ್ಷದ ಹೊತ್ತಲ್ಲಿ ಶುಭಸುದ್ದಿ ಸಿಕ್ಕಿದೆ. ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ…

Read More

ವಿಶ್ವದ ಅತ್ಯಂತ ಶ್ರೀಮಂತ ದೇಶದಲ್ಲಿ ಜನರ ಸರಾಸರಿ ವಾರ್ಷಿಕ ಆದಾಯ 2 ಕೋಟಿ ರೂ; ಇಲ್ಲಿದೆ ಟಾಪ್-10 ಪಟ್ಟಿ – Kannada News | USA is 10th in the list of richest nations, despite having world’s biggest economy

ನವದೆಹಲಿ, ಡಿಸೆಂಬರ್ 30: ಭಾರತ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ. ಆದರೆ, ಅತೀ ಶ್ರೀಮಂತ ದೇಶಗಳನ್ನು ಒಂದು ಸಾಲಿಗೆ ಜೋಡಿಸಿದರೆ ಭಾರತವು ಶ್ರೀಲಂಕಾಗಿಂತಲೂ ಹಿಂದಕ್ಕೆ ಹೋಗುತ್ತದೆ. ಒಂದು ದೇಶ ಎಷ್ಟು ಶ್ರೀಮಂತಿಕೆ ಹೊಂದಿದೆ ಎಂಬುದನ್ನು ಅದರ ಆರ್ಥಿಕ ಗಾತ್ರ ಮಾತ್ರವಲ್ಲದೆ, ಜನರ ತಲಾದಾಯವನ್ನೂ ಪರಿಗಣಿಸಲಾಗುತ್ತದೆ. ಈ ಜಿಡಿಪಿ ತಲಾದಾಯದಲ್ಲಿ ಚೀನಾ ದೇಶವೇ 74ನೇ ಸ್ಥಾನದಲ್ಲಿರುವುದು ಅಚ್ಚರಿ ಎನಿಸಬಹುದು. ಮಾಲ್ಡೀವ್ಸ್​ನಂತಹ ದೇಶವೇ ಚೀನಾಗಿಂತ ಮೇಲಿದೆ ಎಂದರೆ ಅಚ್ಚರಿ ಎನಿಸಬಹುದು. ಜಿಡಿಪಿ ಪಿಪಿಪಿ ತಲಾದಾಯದಲ್ಲಿ ಟಾಪ್-10 ದೇಶಗಳ ಪಟ್ಟಿ ಲೀಕ್ಟನ್​ಸ್ಟೇನ್:…

Read More

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ – Kannada News | Bigg Boss Kannada: Gilli unfaithful decision to help Kavya

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ….

Read More

ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ – Kannada News | West Bengal CM Mamata Banerjee labelled amit Shah and PM Modi as Dushyasahan and Duryodhana

ಕೊಲ್ಕತ್ತಾ, ಡಿಸೆಂಬರ್ 30: ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಯೋತ್ಪಾದಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ತಮ್ಮ ಕೊಲ್ಕತ್ತಾ ಭೇಟಿಯ ವೇಳೆ ಆರೋಪಿಸಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಹಾಭಾರತದ ಇಬ್ಬರು ಖಳ ನಾಯಕರಾದ ದುಶ್ಯಾಸನ ಮತ್ತು ದುರ್ಯೋಧನನಿಗೆ ಹೋಲಿಸಿದ್ದಾರೆ. ಬಂಗಾಳದ ಬಂಕುರಾದ ಬಿರ್ಸಿಂಗ್‌ಪುರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ…

Read More

Govt Internships 2026: 2026 ರಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪದವೀಧರರಿಗೆ ನೂರಾರು ಇಂಟರ್ನ್‌ಶಿಪ್ ಅವಕಾಶ – Kannada News | Govt Internships 2026: Kickstart Your Career in Public Policy and Administration in India

ನೀವು ದೇಶದ ನೀತಿಗಳನ್ನು ಅರ್ಥಮಾಡಿಕೊಳ್ಳಲು, ಆಡಳಿತದ ಭಾಗವಾಗಲು ಅಥವಾ ಸರ್ಕಾರಿ ಸೇವೆ ಮತ್ತು ಸಾರ್ವಜನಿಕ ನೀತಿಯಲ್ಲಿ ವೃತ್ತಿಜೀವನದ ಕನಸು ಕಾಣಲು ಬಯಸಿದರೆ , 2026 ರ ವರ್ಷವು ನಿಮಗೆ ಹಲವು ಅವಕಾಶಗಳನ್ನು ತರುತ್ತಿದೆ. ಭಾರತ ಸರ್ಕಾರ ಮತ್ತು ಅದರ ಪ್ರಮುಖ ಸಂಸ್ಥೆಗಳು 2026 ರಲ್ಲಿ ನೂರಾರು ಇಂಟರ್ನ್‌ಶಿಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿವೆ . ಈ ಇಂಟರ್ನ್‌ಶಿಪ್‌ಗಳು ವಿದ್ಯಾರ್ಥಿಗಳು ಮತ್ತು ಹೊಸ ಪದವೀಧರರಿಗೆ ಕಲಿಯುವ ಅವಕಾಶವನ್ನು ಒದಗಿಸುವುದಲ್ಲದೆ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳನ್ನು ಗಮನಿಸುವ ಮತ್ತು ಅರ್ಥಮಾಡಿಕೊಳ್ಳುವ ಮೊದಲ…

Read More