Bengaluru Air Quality: ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 174 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 88 ಇದ್ದರೆ, PM10 124 ಇದೆ.

ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ?

ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಅರೆಕೆರೆ-179, ಬಾಪೂಜಿ ನಗರ-171, ಬ್ರಿಗೇಡ್ ರೋಡ್-179, ಬ್ರೂಕ್ ಫೀಲ್ಡ್- 179, BTM ಲೇಔಟ್- 168, ಹೆಬ್ಬಾಳ- 173 , ಜಯನಗರ-175, ಕೋರಮಂಗಲ-172, ಸಿಲ್ಕ್ ಬೋರ್ಡ್-168​, ತಾವರೆಕೆರೆ-170, ವೈಟ್​ಫೀಲ್ಡ್- 189 ಇದ್ದು, ಇಷ್ಟು ಹದಗೆಟ್ಟ ಏರ್ ಕ್ವಾಲಿಟಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ.

ಸೂಕ್ಷ್ಮಕಣಗಳಿಂದಲೂ ಬರುತ್ತೆ ಶ್ವಾಸಕೋಶದ ತೊಂದರೆ

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –173
  • ಮಂಗಳೂರು-136
  • ಮೈಸೂರು – 174
  • ಬೆಳಗಾವಿ – 142
  • ಕಲಬುರ್ಗಿ – 107
  • ಶಿವಮೊಗ್ಗ – 73
  • ಬಳ್ಳಾರಿ – 185
  • ಹುಬ್ಬಳ್ಳಿ- 96
  • ಉಡುಪಿ –110
  • ವಿಜಯಪುರ –117

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ… – Kannada News | Another impactful knock from Vaibhav Suryavanshi in the VHT

ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ.

Source link

Video: ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ – Kannada News | Tiger Enters Village Near Bandhavgarh, Injures Man

ಉಮಾರಿಯಾ, ಡಿಸೆಂಬರ್ 30: ಮಧ್ಯಪ್ರದೇಶದ ಬಾಂಧವ್‌ಗಢ ಹುಲಿ ಅಭಯಾರಣ್ಯದ ಹೊರವಲಯದಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ನಂತರ ಮಂಚದ ಮೇಲೆ ಮಲಗಿರುವ ಘಟನೆ ನಡೆದಿದೆ. ಹುಲಿ ಗೋಪಾಲ್ ಕೋಲ್ ಎಂಬ ಯುವಕನ ಮೇಲೆ ದಾಳಿ ಮಾಡಿ, ಒಂದೇ ದಾಳಿಯಲ್ಲಿ ಅವರನ್ನು ನೆಲಕ್ಕೆ ಉರುಳಿಸಿತ್ತು. ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಕಟ್ನಿ ಜಿಲ್ಲೆಯ ಬರ್ಹಿ ಆಸ್ಪತ್ರೆಗೆ ಕಳುಹಿಸಲಾಯಿತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಟ್ನಿಗೆ ಕರೆದೊಯ್ಯಲಾಯಿತು, ಅವರ ಜೊತೆ ಬಾಂಧವಗಢ ಹುಲಿ ಮೀಸಲು ಪ್ರದೇಶದ ಅಧಿಕಾರಿಗಳ ತಂಡವೂ ಇತ್ತು. ಗೋಪಾಲ್ ಮೇಲೆ ದಾಳಿ ಮಾಡಿದ ನಂತರ, ಹುಲಿ ದುರ್ಗಾ ಪ್ರಸಾದ್ ದ್ವಿವೇದಿ ಅವರ ಮನೆಗೆ ನುಗ್ಗಿ ಹಾಸಿಗೆಯ ಮೇಲೆ ಮಲಗಿತ್ತು, ಇದರಿಂದ ಗ್ರಾಮಸ್ಥರು ಭಯಭೀತರಾದರು, ಅನೇಕ ನಿವಾಸಿಗಳು ಭಯದಿಂದ ತಮ್ಮ ಮನೆಗಳ ಛಾವಣಿಯ ಮೇಲೆ ಹತ್ತಬೇಕಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು.

ಈ ಮೂಲಕ ರಶೀದ್ ಖಾನ್ ಒಂದೇ ವರ್ಷದಲ್ಲಿ ಟಿ೨೦ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. 8 ವರ್ಷಗಳ ಹಿಂದೆ ಬರೆದಿದ್ದ ಈ ವರ್ಲ್ಡ್ ರೆಕಾರ್ಡ್ ಅನ್ನು ಇದೀಗ ಜೇಸನ್ ಹೋಲ್ಡರ್ ಅಳಿಸಿ ಹಾಕಿದ್ದಾರೆ.

ಈ ವರ್ಷ ಈವರೆಗೆ 69 ಇನಿಂಗ್ಸ್ ಆಡಿರುವ ಜೇಸನ್ ಹೋಲ್ಡರ್ ಒಟ್ಟು 97 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಜೇಸನ್ ಹೋಲ್ಡರ್ ಹಾಗೂ ರಶೀದ್ ಖಾನ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​ನಲ್ಲಿ ಯಾವುದೇ ಬೌಲರ್ ಒಂದೇ ವರ್ಷದಲ್ಲಿ 90 ಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ. ಇದೀಗ ಭರ್ಜರಿ ದಾಖಲೆಯೊಂದಿಗೆ ಹೋಲ್ಡರ್ ಐಪಿಎಲ್​ಗಾಗಿ ಸಜ್ಜಾಗುತ್ತಿದ್ದಾರೆ.

Published On – 8:00 am, Tue, 30 December 25

Source link

Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ – Kannada News | Vaikuntha Ekadashi Celebrations: Special Prayers Across India Including Tirumala and Bengaluru Temples

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ ಪೂಜೆ ಮತ್ತು ಪುನಸ್ಕಾರದ ಸಡಗರ ಆವರಿಸಿದೆ. ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದ ಶ್ರೀನಿವಾಸ ದೇಗುಲಗಳಲ್ಲಿ ಹಬ್ಬದ ಕಳೆಗಟ್ಟಿದೆ. ಭಕ್ತರು ‘ಗೋವಿಂದ’ ನಾಮಸ್ಮರಣೆ ಮಾಡುತ್ತಾ ಭಕ್ತಿಯಿಂದ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಅಮೃತ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ದೇವರ ದರ್ಶನ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ

ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್, ನಾಲ್ವರು ಸಾವು, 9 ಮಂದಿಗೆ ಗಾಯ – Kannada News | BEST Bus Ploughs Into Crowd in Bhandup, Four Killed

ಮುಂಬೈ, ಡಿಸೆಂಬರ್ 30: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 9ಮಂದಿ ಗಾಯಗೊಂಡಿದ್ದಾರೆ. ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today 30 December: ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ – Kannada News | Daily Horoscope for 30 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 30, ಮಂಗಳವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವೈಕುಂಠ ಏಕಾದಶಿ, ಮುಕ್ಕೋಟಿ ಏಕಾದಶಿ ಮತ್ತು ಮೋಕ್ಷದ ಏಕಾದಶಿ ಎಂಬ ಮಹಾಪರ್ವ ದಿನವಾಗಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಶ್ರೀ ವಿಷ್ಣುವಿನ ಉತ್ತರ ದ್ವಾರ ದರ್ಶನದಿಂದ ಪುಣ್ಯವನ್ನು ಗಳಿಸುವ ಮತ್ತು ಪಾಪಗಳನ್ನು ನಾಶಪಡಿಸಿಕೊಳ್ಳುವ ವಿಶೇಷ ಅವಕಾಶ ಈ ದಿನವಿದೆ.

ಇಂದು ರವಿ ಧನುಷ್ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿಯೊಂದು ರಾಶಿಚಕ್ರ ಚಿಹ್ನೆಗಳಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು, ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ವಿಶೇಷ ಮಂತ್ರಗಳ ಕುರಿತು ಮಾಹಿತಿ ನೀಡಿದ್ದಾರೆ. ಮೇಷ ರಾಶಿಗೆ ಆರು ಗ್ರಹಗಳ ಶುಭಫಲ, ವೃಷಭ ರಾಶಿಗೆ ಸಂಗಾತಿಯಿಂದ ಲಾಭ, ಮಿಥುನ ರಾಶಿಗೆ ಅನಿರೀಕ್ಷಿತ ಧನಯೋಗ, ಕರ್ಕ ರಾಶಿಗೆ ಆರ್ಥಿಕ ಯೋಗ, ಸಿಂಹ ರಾಶಿಗೆ ವೃತ್ತಿಯಲ್ಲಿ ಬಡ್ತಿ, ಕನ್ಯಾ ರಾಶಿಗೆ ಹಿರಿಯರ ಸಹಕಾರ, ತುಲಾ ರಾಶಿಗೆ ಸಾಲ ವಸೂಲಿ, ವೃಶ್ಚಿಕ ರಾಶಿಗೆ ಮಾತಿನಲ್ಲಿ ಅದೃಷ್ಟ, ಧನುಷ್ ರಾಶಿಗೆ ಶತ್ರು ಮಿತ್ರರಾಗುವ ಯೋಗ, ಮಕರ ರಾಶಿಗೆ ಮಕ್ಕಳಿಂದ ಶುಭ, ಕುಂಭ ರಾಶಿಗೆ ತಂದೆ ತಾಯಿ ಆಶೀರ್ವಾದ ಮತ್ತು ಮೀನ ರಾಶಿಗೆ ಆರ್ಥಿಕ ಲಾಭವಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Source link

ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು? – Kannada News | Mark, 45 Box Office Collection Devil’s Collection Dips After Christmas Releases

ಸೋಮವಾರವೂ ‘ಮಾರ್ಕ್’, ‘45’ ಅಬ್ಬರ; ಡೆವಿಲ್ ಕಥೆ ಏನು?

ಸುದೀಪ್ ಅಭಿನಯದ ‘ಮಾರ್ಕ್’ (Mark Movie) ಹಾಗೂ ಮಲ್ಟಿ ಸ್ಟಾರರ್ ಸಿನಿಮಾ ‘45’ ಕ್ರಿಸ್​ಮಸ್ ಪ್ರಯುಕ್ತ ಡಿಸೆಂಬರ್ 25ರಂದು ರಿಲೀಸ್ ಆದವು. ಎರಡೂ ಸಿನಿಮಾಗಳು ಪಾಸಿಟಿವ್ ವಿಮರ್ಶೆ ಪಡೆದಿವೆ. ಈ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಎರಡೂ ಚಿತ್ರಗಳು ಸೋಮವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಎರಡೂ ಚಿತ್ರಗಳ ಅಬ್ಬರದ ಮಧ್ಯೆ ‘ಡೆವಿಲ್’ ಚಿತ್ರದ ಕಥೆ ಏನಾಗಿದೆ? ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಮಾರ್ಕ್’​ ಗಳಿಕೆ

‘ಮಾರ್ಕ್’ ಸಿನಿಮಾ ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ತಂಡದವರೇ ಹೇಳಿಕೊಂಡಿದ್ದಾರೆ. ಈ ಚಿತ್ರ ಮೊದಲ ದಿನ 15 ಕೋಟಿ ರೂಪಾಯಿ ಗಳಿಕೆ ಮಾಡಿತ್ತು ಎನ್ನಲಾಗಿದೆ. ಈ ಚಿತ್ರ ಸೋಮವಾರವೂ ಕೋಟಿಗಳಲ್ಲಿ ಗಳಿಕೆ ಮಾಡಿದೆ. ಸೋಮವರಾದ ಕಲೆಕ್ಷನ್ ಸುಮಾರು ಒಂದೂವರೆ ಕೋಟಿ ರೂಪಾಯಿ ಗಳಿಸಿದೆ ಎಂದು sacnilk ವರದಿ ಮಾಡಿದೆ. ಚಿತ್ರತಂಡ ನೀಡಿದ ನಾಲ್ಕು ದಿನಗಳ ಕಲೆಕ್ಷನ್ ಹಾಗೂ ಸೋಮವಾರದ sacnilk ವರದಿ ಸೇರಿದರೆ ಸಿನಿಮಾದ ಗಳಿಕೆ ಸುಮಾರು 37 ಕೋಟಿ ರೂಪಾಯಿ ಆಗಲಿದೆ. ಇದು ನಿಜಕ್ಕೂ ದೊಡ್ಡ ಗಳಿಕೆಯೇ ಸರಿ.

45 ಗಳಿಕೆ

ಇನ್ನು, 45 ಸಿನಿಮಾ ಕೂಡ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಚಿತ್ರತಂಡದವರು ಸಿನಿಮಾದ ಗಳಿಕೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, sacnilk ವರದಿ ಪ್ರಕಾರ ಈ ಚಿತ್ರ ಈವರೆಗೆ ಸುಮಾರು 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಸೋಮವಾರ ಈ ಚಿತ್ರ ಕೋಟಿಗಳಲ್ಲಿ ವ್ಯವಹಾರ ಮಾಡಿದೆ.

ಇದನ್ನೂ ಓದಿ: ನಾಲ್ಕು ದಿನಕ್ಕೆ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಮಾರ್ಕ್’; ದಾಖಲೆ ನಿರ್ಮಾಣ

ಡೆವಿಲ್ ಕಲೆಕ್ಷನ್

ಇನ್ನು, ಈ ಎರಡೂ ಚಿತ್ರಗಳ ಅಬ್ಬರದ ಮಧ್ಯೆ ‘ಡೆವಿಲ್’ ಕಲೆಕ್ಷನ್ ಡಲ್ ಆಗಿದೆ. ಭಾನುವಾರ ಈ ಚಿತ್ರ 21 ಲಕ್ಷ ರೂಪಾಯಿ ಗಳಿಕೆ ಮಾಡಿತ್ತು. ಈಗ ಸೋಮವಾರ ಸಿನಿಮಾದ ಕಲೆಕ್ಷನ್ 7 ಲಕ್ಷ ರೂಪಾಯಿಗೆ ಕುಸಿದಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಮತ್ತಷ್ಟು ಕುಗ್ಗುವ ಸಾಧ್ಯತೆ ಇದೆ. ಈ ಚಿತ್ರದ ಒಟ್ಟಾರೆ ಗಳಿಕೆ 34 ಕೋಟಿ ರೂಪಾಯಿ ಆಗಿದೆ (sacnilk ವರದಿ ಪ್ರಕಾರ) ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು 40-50 ಪಿಜಿ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಅವರಿಗೆ ತಾತ್ಕಾಲಿಕವಾಗಿ ಬೇರೆಡೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version