Headlines

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ – Kannada News | Supreme Court upholds Kuldeep Sengar sentence in Unnao rape case Stays Delhi High Court Order

ನವದೆಹಲಿ, ಡಿಸೆಂಬರ್ 29: ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಮೂಲಕ ಕುಲದೀಪ್ ಸೆಂಗಾರ್​​ಗೆ ಭಾರೀ ಹಿನ್ನಡೆಯಾಗಿದೆ. ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಈ ಹಿಂದಿನ ಶಿಕ್ಷೆಯನ್ನು ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನೋಟಿಸ್ ನೀಡಿದೆ. ಕುಲದೀಪ್ ಸೆಂಗಾರ್ ಅವರ…

Read More

ನೆಲಮಂಗಲ: ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್, ಕಾರಿನಲ್ಲಿದ್ದ ಕುಟುಂಬ ಪವಾಡಸದೃಶ ಪಾರು – Kannada News | Bengaluru Rural: Water Tanker Crash in Nelamangala; Family Survives!

ಬೆಂಗಳೂರು, ಡಿ.29: ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕಾಮಗಾರಿ ಮಾಡಲಾಗುತ್ತಿದ್ದ ರಸ್ತೆಗೆ ನೀರು ಹಾಕುತ್ತಿದ್ದ ವೇಳೆ, ಟ್ರ್ಯಾಕ್ಟರ್​ನಿಂದ ಕಳಚಿ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದೀಗ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ ತಾಯಿ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಡಿಯೋ ಸುದ್ದಿಗಳನ್ನು ಓದಲು…

Read More

VHT 2025-26: 78 ಎಸೆತಗಳಲ್ಲಿ ಶತಕ, ಮುಂದಿನ 19 ಎಸೆತಗಳಲ್ಲಿ 150 ರನ್ ಚಚ್ಚಿದ ಧ್ರುವ್ ಜುರೆಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಶತಕ ಗಳಿಸಿದ ಜುರೇಲ್​ಗೆ ಇದು ಏಕದಿನ ವೃತ್ತಿಜೀವನದ ಮೊದಲ ಶತಕವಾಗಿದೆ. ಜುರೇಲ್ ಶತಕದ ಬಲದಿಂದ ಉತ್ತರ ಪ್ರದೇಶ ಬರೋಡಾ ವಿರುದ್ಧ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 359 ರನ್ ಕಲೆಹಾಕಿತು. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ 101 ಎಸೆತಗಳನ್ನು ಎದುರಿಸಿದ ಧ್ರುವ್ ಜುರೆಲ್ 160…

Read More

ಕೋಗಿಲು ಲೇಔಟ್​​ಗೆ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 29: ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಗಿಲು ಲೇಔಟ್​ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ಸಂತ್ರಸ್ತರ ಮನವಿ ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರು ಕೂಡ ಗಮನಕ್ಕೆ ತಂದು ಮಾತನಾಡಿದ್ದಾರೆ. ಕಸದ ಗುಂಡಿ ಇತ್ತು, ಅದರ ಮೇಲೆಯೇ ಮನೆ ಕಟ್ಟಿಕೊಂಡಿದ್ದಾರೆ, ಆದರೆ ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸಿಎಂ ಆದಿಯಾಗಿ ಎಲ್ಲರೂ ರಾಜಕೀಯ ಬೆರೆಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ…

Read More

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಕಥೆ ಬಹಿರಂಗ: 2ನೇ ಟ್ರೇಲರ್ ಇಲ್ಲಿದೆ.. – Kannada News | Prabhas starrer The Raja Saab second trailer gives hit about movie story

ಟಾಲಿವುಡ್ ನಟ ಪ್ರಭಾಸ್ ಅವರು ‘ದಿ ರಾಜಾ ಸಾಬ್’ (The Raja Saab) ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದಿಂದ 2ನೇ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇದು ಹಾರರ್ ಸಿನಿಮಾ ಎಂಬ ಕಾರಣಕ್ಕೆ ಪ್ರಭಾಸ್ (Prabhas) ಅವರ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮನೆ ಮಾಡಿದೆ. 2026ರ ಜನವರಿ 9ರಂದು ಸಂಕ್ರಾಂತಿ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಲಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ‘ದಿ ರಾಜಾ ಸಾಬ್’ ಸಿನಿಮಾದ ಎರಡನೇ ಟ್ರೇಲರ್ (The Raja Saab Trailer…

Read More

VHT 2025-26: ತಮಿಳುನಾಡು ತಂಡವನ್ನು ಮಣಿಸಿ ಹ್ಯಾಟ್ರಿಕ್ ಜಯ ದಾಖಲಿಸಿದ ಕರ್ನಾಟಕ – Kannada News | Karnataka Dominates Tamil Nadu in Vijay Hazare Trophy, Secures Third Win

ವಿಜಯ್ ಹಜಾರೆ ಟ್ರೋಫಿಯ ತನ್ನ ಮೂರನೇ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಎದುರಿಸಿದ್ದ ಕರ್ನಾಟಕ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಅಹಮದಾಬಾದ್​ನಲ್ಲಿರುವ ಗುಜರಾತ್ ಕಾಲೇಜು ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ತಮಿಳುನಾಡು ತಂಡ 50ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 281 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 6 ವಿಕೆಟ್‌ಗಳನ್ನು ಕಳೆದುಕೊಂಡು ಇನ್ನು 17 ಎಸೆತಗಳು…

Read More

ಕನ್ನಡ ಮಾತನಾಡಿ ಕನ್ನಡಿಗರನ್ನು ಮೋಡಿ ಮಾಡಿದ ಬಿಹಾರ ಪೋರಿ – Kannada News | 10 Year Old Bihar Girl Masters Kannada in Bangalore: Inspiring Story

ಬೆಂಗಳೂರಿನಲ್ಲಿ ಕನ್ನಡಿಗರಾಗಿ ಕನ್ನಡ ಮಾತನಾಡಲು ಹಿಂಜರಿಯುವ ಜನರ ಮಧ್ಯೆ ಬಿಹಾರದ ಪುಟ್ಟ  ಬಾಲಕಿಯಬ್ಬಳು (Bihar girl) ಕನ್ನಡ ಮಾತನಾಡಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಶಿಯಲ್​​​ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಹಾರದ 10 ವರ್ಷದ ಬಾಲಕಿಯ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕಂಡು ಒಮ್ಮೆ ಅಚ್ಚರಿಯಾಗುವುದು ಖಂಡಿತ ಎಂದು ನೆಟ್ಟಿಗರು ಕಮೆಂಟ್​​ ಮಾಡಿದ್ದಾರೆ. ಇದು ಈ ಹುಡುಗಿಯ ಅಸಾಧಾರಣ ಸಾಧನೆ ಎಂದು ಹೇಳಲಾಗಿದೆ. “ಕನ್ನಡದಲ್ಲಿ ಟಾಪರ್…

Read More

78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru

ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…

Read More

ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ – Kannada News | Tumakuru: Mother Dies by Suicide After Jumping Into Lake With 8 Year Old Son

ತುಮಕೂರು, ಡಿಸೆಂಬರ್ 29: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಭೂಪಸಂದ್ರ ಗ್ರಾಮದ…

Read More

‘ಕೈ’ ನಾಯಕರಿಗೆ ಶಾಕ್​​ ಕೊಟ್ಟ ಖಾಕಿ: ದಾವಣಗೆರೆಯಲ್ಲಿ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಕೋರರು! – Kannada News | Davangere Drugs Scandal: Minister Aides Nabbed in Major Police Crackdown

ದಾವಣಗೆರೆ, ಡಿಸೆಂಬರ್​​ 29: ರಾಜ್ಯ ಸರ್ಕಾರದಲ್ಲಿನ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಯಲ್ಲಿ ಭಾಗಿಯಾಗಿರೋದನ್ನು ದಾವಣಗೆರೆ ಪೊಲೀಸರು ಬಟಾಬಯಲು ಮಾಡಿದ್ದಾರೆ. ಡಿ.23ರಂದು ನಡೆದಿದ್ದ ಡ್ರಗ್ಸ್ ದಂಧೆಕೋರರ ಗ್ಯಾಂಗ್​​ ಮೇಲಿನ ದಾಳಿ ಪ್ರಕರಣ ಸಂಬಂಧ ಮತ್ತೊಬ್ಬ ಸಚಿವರ ಪರಮಾಪ್ತನನ್ನು ಖಾಕಿ ಹೆಡೆಮುರಿ ಕಟ್ಟಿದೆ. ಆ ಮೂಲಕ ಸಿಂಥೆಟಿಕ್ ಡ್ರಗ್ಸ್ ಕೇಸ್‌ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳ ಬಂಧನ ಆದಂತಾಗಿದೆ. ದಾವಣಗೆರೆ ಡ್ರಗ್ಸ್‌ ಕೇಸ್‌ನಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಪಕ್ಷದ ಘಟಾನುಘಟಿಗಳೇ ಬಂಧನ ಆಗಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಡಿ.23ರಂದು…

Read More