Headlines

Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್ – Kannada News | Dry Fruit Price Hike in Bengaluru Likely Amid Israel Iran Conflict; Supply of Iranian Dates, Pistachios, Figs May Be Hit

ಬೆಂಗಳೂರು, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ (Israel-Iran Conflict) ಪರಿಣಾಮ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ (Dry Fruit Price) ಏರಿಕೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಪೂರೈಕೆ ಸಮಸ್ಯೆಯೂ ಎದುರಾಗಬಹುದು ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ. ನಗರಕ್ಕೆ ಆಮದಾಗುವ ಡ್ರೈ ಫ್ರೂಟ್ಸ್‌ಗಳಲ್ಲಿ ಹೆಚ್ಚಿನ ಪ್ರಮಾಣದ ವಸ್ತುಗಳು ಇರಾನ್‌ನಿಂದ ಬರುತ್ತವೆ. ಅಂಜೂರ, ಮಾಮ್ರಾ ಬಾದಾಮಿ, ಪಿಸ್ತಾ, ಪೈನ್ ಬೀಜಗಳ ಜೊತೆಗೆ ಮಜಾಫತಿ ಖರ್ಜೂರಗಳು ವಿಶೇಷವಾಗಿ ಹೆಚ್ಚು ಬೇಡಿಕೆಯಲ್ಲಿವೆ. ರಂಜಾನ್ ಸಮಯದಲ್ಲಿ ಮಜಫತಿ ಖರ್ಜೂರಗಳಿಗೆ ಹೆಚ್ಚಿನ ಬೇಡಿಕೆ…

Read More

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್…

Read More

ಉಗುರಿನಲ್ಲಿ ಕಂಡುಬರುವ ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! ಅವು ನಿಮ್ಮ ಜೀವ ಉಳಿಸಬಹುದು! – Kannada News | What Your Nails Reveal About Your Health

ಅನೇಕರು ಉಗುರುಗಳನ್ನು (Nails) ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಬಳಕೆ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ನಮ್ಮ ಉಗುರುಗಳು ನಮ್ಮ ದೇಹದ ಆರೋಗ್ಯಕ್ಕೆ ಹಿಡಿದ ಕನ್ನಡಿ ಎನ್ನುತ್ತಾರೆ. ಹೌದು, ಕೆಲವರಿಗೆ ಈ ವಿಷಯ ಬಹಳ ಆಶ್ಚರ್ಯ ಮೂಡಿಸಬಹುದು ಅಥವಾ ಇನ್ನು ಕೆಲವರು ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡದಿರಬಹುದು. ಆದರೆ ನಿಮಗೆ ಗೊತ್ತಿರಲಿ, ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಆರಂಭಿಕ ಚಿಹ್ನೆಗಳು ಉಗುರುಗಳಲ್ಲಿ…

Read More

‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ (Nayanthara) ಮತ್ತು ಅವರ ಪತಿ ವಿಘ್ನೇಶ್ ಶಿವನ್ ಅವರು ತಮಿಳುನಾಡಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಚೆನ್ನೈನ ಪೋಯಸ್ ಗಾರ್ಡನ್ನಲ್ಲಿ ಬೃಹತ್ ಐಷಾರಾಮಿ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 31.5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಾಪರ್ಟಿ ಅನಾಲಿಟಿಕ್ಸ್ ಪ್ಲಾಟ್‌ಫಾರ್ಮ್ ಜ್ಯಾಪ್‌ಕೀ (Zapkey) ಮೂಲಕ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಈ ಮನೆಯು ಚೆನ್ನೈನ ತೇನಾಂಪೇಟೆ ವ್ಯಾಪ್ತಿಯ ‘ಲೆಗಸಿ’ ಎಂಬ ಪ್ರೀಮಿಯಂ ವಸತಿ ಸಂಕೀರ್ಣದಲ್ಲಿದೆ. ಅಪಾರ್ಟ್‌ಮೆಂಟ್ ಕಟ್ಟಡದ…

Read More

Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಶ್ರೀನಗರ, ಮಾರ್ಚ್​ 12: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ(ಮಾರ್ಚ್​ 11)ರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು ಹೆಜ್ಜೆಗಳ ಅಂತರದಲ್ಲಿದ್ದ. ಆದರೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ…

Read More

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?

ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು….

Read More

ಅಮೆರಿಕದಲ್ಲಿ ಭಾರತೀಯ ಯುವತಿಯ ನಿಗೂಢ ಸಾವು; ಕೊಲೆ ಮಾಡಿ ಭಾರತಕ್ಕೆ ಓಡಿಬಂದನಾ ಬಾಯ್​ಫ್ರೆಂಡ್​? – Kannada News | Indian Woman Nikitha Godishala Found Dead In US apartment Ex Boyfriend Fled To India

ನ್ಯೂಯಾರ್ಕ್, ಜನವರಿ 5: ಅಮೆರಿಕದಲ್ಲಿ ವಾಸಿಸುತ್ತಿದ್ದ 27 ವರ್ಷದ ಭಾರತೀಯ ಯುವತಿಯಾದ ನಿಕಿತಾ ರಾವ್ ಗೋಡಿಶಾಲ ಎಂಬಾಕೆಯನ್ನು ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಪ್ರಿಯಕರನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಆಕೆಯ ಮಾಜಿ ಪ್ರೇಮಿಯನ್ನೇ ಪ್ರಮುಖ ಶಂಕಿತ ಎಂದು ಹೆಸರಿಸಿದ್ದಾರೆ. ಆತ ಅಮೆರಿಕ (United States) ಬಿಟ್ಟು ಭಾರತಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿಕಿತಾ ಗೋಡಿಶಾಲ ಜನವರಿ 2ರಂದು ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಸಾವಿನ ನಂತರ ಆಕೆಯ ಮಾಜಿ ಪ್ರಿಯಕರನಾದ 27 ವರ್ಷದ ಅರ್ಜುನ್ ಶರ್ಮಾ…

Read More

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? – Kannada News | Bengaluru Recruitment Scam: 7 Caught in IWST Exam Impersonation Fraud

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? ಬೆಂಗಳೂರು, ಜನವರಿ 17: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ (Exam Fraud) ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಬೇರೆ ವ್ಯಕ್ತಿಗಳನ್ನು ಹಾಜರುಪಡಿಸಿ ಪರೀಕ್ಷೆ ಬರೆಸಿದ್ದ 7 ಅಭ್ಯರ್ಥಿಗಳ ಕೃತ್ಯ…

Read More

ಕಾಶ್ಮೀರದಲ್ಲಿ 20 ಬಾರಿ ಸಾವಿನಿಂದ ಪಾರಾಗಿದ್ದ ಜೈಷೆ ಉಗ್ರ ಸೇರಿ ಮೂವರನ್ನು ಕೊಂದ ಭದ್ರತಾ ಪಡೆಗಳು – Kannada News | Notorious Jaish terrorist among 3 killed in encounter with security forces in Kishtwar, Kashmir

ನವದೆಹಲಿ, ಫೆಬ್ರುವರಿ 22: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್​ನಲ್ಲಿ (Kishtwar) ಭದ್ರತಾ ಪಡೆಗಳು ಮೂವರು ಉಗ್ರಗಾಮಿಗಳನ್ನು ಕೊಂದುಹಾಕಿದ್ದಾರೆ. ಈ ಮೂವರಲ್ಲಿ ಒಬ್ಬಾತ ಪಾಕಿಸ್ತಾನದ ಜೈಷೆ ಮೊಹಮ್ಮದ್ ಸಂಘಟನೆಯ ಉಗ್ರ ಸೈಫುಲ್ಲಾ ಎಂದು ಹೇಳಲಾಗಿದೆ. ಈ ಪಾಕ್ ಮೂಲದ ಉಗ್ರಗಾಮಿ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿರುತ್ತಾನೆ. ಕಳೆದ ಎರಡು ವರ್ಷಗಳಲ್ಲಿ ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಂಡು ತಿರುಗುತ್ತಿರುತ್ತಾನೆ. 20ಕ್ಕೂ ಹೆಚ್ಚು ಬಾರಿ ಸಾವಿನ ದವಡೆಯಿಂದ ತಪ್ಪಿಸಿಕೊಂಡಿರುತ್ತಾನೆ. ಕೊನೆಗೆ ಕಿಶ್ತವಾರ್​ನಲ್ಲಿ ಎನ್​ಕೌಂಟರ್​ನಲ್ಲಿ ಆತನ ಸಂಹಾರವಾಗಿದೆ. ಕಿಶ್ತವಾರ್​ನಲ್ಲಿ…

Read More

Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ – Kannada News | Lakkundi Gold Treasure Fraud: Muslim Moulvi video viral

ಗದಗ, (ಫೆಬ್ರವರಿ 20): ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ (Lakkundi Gold Treasure Fraud)ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದಾನೆ. ಆ ದೃಶ್ಯ ಇದೀಗ ಬಯಲಿಗೆ ಬಂದಿದೆ. ಈ ಸಂಬಂಧ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಧಿಗಾಗಿ ಸಣ್ಣಬಸಪ್ಪ, ದೊಡ್ಡಬಸಪ್ಪ ಅವರಿಂದ ಮೌಲ್ವಿ…

Read More