ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸರ್ಕಾರಕ್ಕೆ ಸಿಜೆಪಿ ಕೊನೆಯ ಎಚ್ಚರಿಕೆ – Kannada News | Withdraw FIRs; CJP Threatens To Restart Fresh Protests As Deadline Ends Today
ನವದೆಹಲಿ, ಜುಲೈ 28: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಹೊಸ ಹಂತದ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸಿಜೆಪಿ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ CJP ವಕ್ತಾರ ಸೌರವ್ ದಾಸ್, “ದೇಶಾದ್ಯಂತ ನಡೆಯುತ್ತಿದ್ದ ಹೋರಾಟವನ್ನು ಹಿಂಪಡೆಯಲು ನೀಡಿದ್ದ ಭರವಸೆಗಳನ್ನು ಈಡೇರಿಸುವ ಸಮಯ ಕೇಂದ್ರ ಸರ್ಕಾರಕ್ಕೆ ಬಂದಿದೆ” ಎಂದು ಹೇಳಿದ್ದಾರೆ. “ಭಾರತ ಸರ್ಕಾರವು ತನ್ನ ಭರವಸೆಗಳನ್ನು…