ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ – Kannada News | Namma Metro Fare Hike Sparks Outrage: Bengaluru Becomes India’s Costliest Metro After 5 percent Price Increase

ಬೆಂಗಳೂರು, ಫೆಬ್ರವರಿ 6: ನಮ್ಮ ಮೆಟ್ರೋ ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಶೇ 5ರಷ್ಟು ಹೆಚ್ಚಿಸಿದ್ದು, ಇದರಿಂದಾಗಿ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಅಪಖ್ಯಾತಿಗೆ ಬೆಂಗಳೂರು ಮೆಟ್ರೋ ಒಳಗಾಗಿದೆ. ಈ ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರಲಿವೆ. ದೆಹಲಿ, ಚೆನ್ನೈ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಹೋಲಿಸಿದರೆ ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಈಗ ಗಣನೀಯವಾಗಿ ಹೆಚ್ಚಾಗಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ‘ಟಿವಿ9’ ಜತೆ ಮಾತನಾಡಿದ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಮ ವರ್ಗದ ಜನರ ಮೇಲೆ ಈ ದರ ಏರಿಕೆ ದೊಡ್ಡ ಹೊರೆಯಾಗಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನ ಹರಿಸಿ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಪದೇ ಪದೇ ದರ ಏರಿಸುವುದರಿಂದ ಜನಸಾಮಾನ್ಯರ ಬದುಕಿಗೆ ಕಷ್ಟವಾಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು, ಕೊನೆಗೂ ಗೆದ್ರು ನಮ್ಮ ಹುಡುಗಿಯರು – Kannada News | Excitement Erupts as RCB Women Secure Second WPL Title with Thrilling Victory

ನೆನ್ನೆ ನಡೆದ (ಫೆ.5) ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ ಆರ್​​ಸಿಬಿ ಮಹಿಳಾ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದು ತಂಡದ ಎರಡನೇ WPL ಪ್ರಶಸ್ತಿಯಾಗಿದೆ. ಗುಜರಾತ್‌ನ ವಡೋದರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಹುಡುಗಿಯರು ರೋಚಕ ವಿಜಯ ಸಾಧಿಸಿ ಕಪ್ ಎತ್ತಿ ಹಿಡಿದರು. ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಪಂದ್ಯದ ಆರಂಭಿಕ ಹಂತದಲ್ಲಿ ಆರ್​ಸಿಬಿ ತಂಡದ ಗೆಲುವಿನ ಬಗ್ಗೆ ಕೆಲವು ಅಭಿಮಾನಿಗಳಲ್ಲಿ ಸಂದೇಹಗಳಿದ್ದವು. ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಸ್ಕೋರ್ ಗಳಿಸಿದ್ದರಿಂದ ಚೇಸ್ ಮಾಡುವುದು ಸುಲಭವಲ್ಲ ಎಂದು ಅನೇಕರು ಭಾವಿಸಿದ್ದರು. ಆದರೆ, ನಾಯಕಿ ಸ್ಮೃತಿ ಮಂದಾನ ಮತ್ತು ಜಾರ್ಜಿಯಾ ವಾಲ್ ಅವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವು ಪಂದ್ಯದ ಗತಿಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸ್ಮೃತಿ ಮಂದಾನ 87 ರನ್ ಸಿಡಿಸಿ ತಂಡವನ್ನು ಮುನ್ನಡೆಸಿದರು. ಅವರ ನಾಯಕತ್ವದ ಇನ್ನಿಂಗ್ಸ್ ಮತ್ತು ವಾಲ್ ಅವರ ಜೊತೆಯಾಟವು ಆರ್​ಸಿಬಿ ಗೆಲುವಿಗೆ ಪ್ರಮುಖ ಕಾರಣವಾಯಿತು. ಅಭಿಮಾನಿಗಳು ಈ ಗೆಲುವಿನಿಂದ ಅತಿ ಹೆಚ್ಚು ಸಂತೋಷಗೊಂಡಿದ್ದಾರೆ. ಒಬ್ಬ ಅಭಿಮಾನಿಯಾದ ತೇಜಸ್ ಅವರ ಪ್ರಕಾರ, “ಇದು ನಮ್ಮ ಹುಡುಗರು ಗೆದ್ದಾಗ ಸಿಗುವ ಮಜಾವನ್ನೇ ನೀಡಿದೆ. ಪಂದ್ಯದ ಪ್ರತಿಯೊಂದು ಎಸೆತವೂ ರೋಮಾಂಚನಕಾರಿಯಾಗಿತ್ತು ಎಂದು ಅವರು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿಯಾದ ಶ್ರುತಿ ಮಾತನಾಡಿ, “ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು. ಆದರೆ ಕೊನೆಗೆ ಗೆಲುವು ಕಂಡಿದ್ದು ನಂಬಲಾಗದ ಸಂಗತಿಯಾಗಿತ್ತು” ಎಂದು ಹೇಳಿದ್ದಾರೆ. ಈ ವಿಜಯವು ಮಹಿಳಾ ಕ್ರಿಕೆಟ್‌ಗೆ ಒಂದು ದೊಡ್ಡ ಉತ್ತೇಜನ ನೀಡಿದೆ ಎಂದು ಹೇಳಿದ್ದಾರೆ. ಸರ್ವಮಂಗಳ ಎಂಬ ಅಭಿಮಾನಿ, “ಹೆಣ್ಣುಮಕ್ಕಳೇ ಸ್ಟ್ರಾಂಗ್ ಗುರು. ನಮ್ಮ ಹುಡುಗರು ಇಷ್ಟು ವರ್ಷ ಕಪ್ ಗೆಲ್ಲಲು ಕಾಯಿಸಿದರೂ, ನಮ್ಮ ಹುಡುಗಿಯರು ಎರಡನೇ ಸಾರಿ ಪ್ರೂವ್ ಮಾಡಿದ್ದಾರೆ” ಎಂದು ಹೇಳುವ ಮೂಲಕ ಮಹಿಳಾ ತಂಡದ ಸಾಧನೆಯನ್ನು ಶ್ಲಾಘಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಕಾಏಕಿ ಹೈವೇಗೆ ನುಗ್ಗಿದ ಬೈಕ್, ಕಾರು ಡಿಕ್ಕಿಯಾಗಿ ಫುಟ್ಬಾಲ್​ನಂತೆ ಹಾರಿ ಬಿದ್ದ ಸವಾರರು: ಭಯಾನಕ ದೃಶ್ಯ ಸಿಸಿಟಿವಿಲಿ ಸೆರೆ – Kannada News | Horrible CCTV Video: Triple Ride Bike Crashes Into Car on Surathkal Highway in Mangaluru, Two Riders Critical

ಮಂಗಳೂರು, ಫೆಬ್ರವರಿ 6: ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆ ನಡೆದಿದ್ದು, ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್​​ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಫುಟ್​​ಬಾಲ್​​ನಂತೆ ಹಾರಿ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ ಪಾರಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್! – Kannada News | Astrologer Kamalakar Bhat and Suchitra Case: Youths Panic, Delete Instagram Accounts After Husband’s Claims

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!

ಕಾರವಾರ, ಫೆಬ್ರುವರಿ 06: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ (Kamalakar Bhat and Suchitra Case) ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್​ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಸುಚಿತ್ರಾ ಪತಿ ಹೇಳಿಕೆಗೆ ಹುಡುಗರು ಕಂಗಾಲು

ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡಿವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆ ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್‌ಸ್ಟಾಗ್ರಾಂ ಖಾತೆಗಳನ್ನು ಡಿಲಿಟ್ ಮಾಡಿಕೊಂಡರೆ, ಇನ್ನೂ ಕೆಲವರು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.

ಸುಚಿತ್ರಾ ಹಲವು ಯುವಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದಳು, ತನ್ನ ಮೇಲೆ ಹಲ್ಲೆ ನಡೆಸಲು ಯುವಕರ ಸಹಾಯ ಕೇಳಿದ್ದಳು ಎಂದು ಆಕೆಯ ಪತಿ ಆರೋಪ ಹೊರೆಸಿದ್ದಾನೆ . ಈ ಕುರಿತು ಪೊಲೀಸರು ಒಂದೊಂದಾಗಿ ತನಿಖೆ ಮುಂದುವರಿಸುತ್ತಿದ್ದು, ಸುಚಿತ್ರಾ ಪ್ರಕರಣ ಹಲವಾರು ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ.

ಇದನ್ನೂ ಓದಿ ‘ಅವಳಿಗಾಗಿ ನಾಯಿ ತರ ಅಲೆದಾಡಿದ್ದೆ’: ಕಮಲಾಕರನ ಒಂದೊಂದೇ ರಂಗಿನಾಟ ಬಯಲು!

ಸಿದ್ದಾಪುರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳ ವರ್ಗ

ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರ ವೈಫಲ್ಯವಿದೆ ಎಂಬ ಸ್ಥಳೀಯರ ಆರೋಪಗಳ ಹಿನ್ನೆಲೆಯಲ್ಲಿ, ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಎಎಸ್‌ಐ ಗಣಪತಿ ಭಟ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಸಿದ್ದಾಪುರ ಪೊಲೀಸ್ ಠಾಣೆಯ ಕಾರ್ಯವೈಖರಿಯ ಕುರಿತು ತನಿಖೆಗೆ ಆದೇಶ ನೀಡಿದ್ದಾರೆ. ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ದೀಪನ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Rouble Nagi: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ – Kannada News | Rouble Nagi: India’s Global Teacher Prize Winner Empowering Slum Kids with Art Education

ಭಾರತದ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆ ತರುವ ಸಾಧನೆಯನ್ನು ಮಾಡಿರುವ ರೂಬಲ್ ನಾಗಿ ಅವರು ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ನೀಡಲಾಗುವ ವಿಶ್ವದ ಪ್ರತಿಷ್ಠಿತ GEMS Education Global Teacher Prize ಪ್ರಶಸ್ತಿಯನ್ನು ಅವರು ಇತ್ತೀಚೆಗೆ ಪಡೆದಿದ್ದು, ಸುಮಾರು 1 ಮಿಲಿಯನ್ ಡಾಲರ್ (8 ಕೋಟಿ ರೂ.) ಬಹುಮಾನವನ್ನು ಗೆದ್ದಿದ್ದಾರೆ. ದುಬೈನಲ್ಲಿ ನಡೆದ ಈ ಸಮಾರಂಭದಲ್ಲಿ ಸಾವಿರಾರು ನಾಮನಿರ್ದೇಶಿತರ ನಡುವೆ ಅತ್ಯುತ್ತಮ ಶಿಕ್ಷಕಿಯಾಗಿ ಆಯ್ಕೆಯಾಗಿರುವುದು ಅವರ ಸಮಾಜಮುಖಿ ಸೇವೆಗೆ ದೊರೆತ ದೊಡ್ಡ ಗೌರವವಾಗಿದೆ.

ರೂಬಲ್ ನಾಗಿ (Rouble Nagi) ಯಾರು?

ರೂಬಲ್ ನಾಗಿ ಕೇವಲ ಶಿಕ್ಷಕಿಯಲ್ಲ, ಒಬ್ಬ ಶಿಲ್ಪಕಲಾವಿದೆ ಮತ್ತು ಸಮಾಜ ಸೇವಕಿ. ಅವರು ಸ್ಥಾಪಿಸಿದ Rouble Nagi Art Foundation ಮೂಲಕ ಭಾರತದ ಕೊಳೆಗೇರಿ ಪ್ರದೇಶಗಳ ಮಕ್ಕಳಿಗೆ ಶಿಕ್ಷಣ ತಲುಪಿಸುವ ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಶಿಕ್ಷಣದಿಂದ ದೂರ ಉಳಿದ ಬಡ ಮಕ್ಕಳಿಗೆ ಕಲಿಕೆಯ ಆಸಕ್ತಿ ಮೂಡಿಸಲು ಅವರು ಗೋಡೆಗಳನ್ನೇ ತರಗತಿ ಕೊಠಡಿಗಳಾಗಿ ಪರಿವರ್ತಿಸಿದ್ದಾರೆ. ಸ್ಮಮ್ ಪ್ರದೇಶಗಳ ಗೋಡೆಗಳ ಮೇಲೆ ಅಕ್ಷರಮಾಲೆ, ಗಣಿತ, ವಿಜ್ಞಾನ ಮತ್ತು ಇತಿಹಾಸದ ಚಿತ್ರಗಳನ್ನು ಬಿಡಿಸುವ ಮೂಲಕ ಮಕ್ಕಳು ಆಟವಾಡುತ್ತಲೇ ಕಲಿಯುವ ವ್ಯವಸ್ಥೆಯನ್ನು ನಿರ್ಮಿಸಿದ್ದಾರೆ. ಬೀದಿಬದಿಯ ಗೋಡೆಗಳನ್ನು ಬೋಧನಾ ಮಾಧ್ಯಮವಾಗಿ ಪರಿವರ್ತಿಸಿದ್ದು, ಈ ಹೊಸ ಪ್ರಯೋಗವು ಸಾವಿರಾರು ಮಕ್ಕಳನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತಂದಿದೆ.

‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ಖಷಿಯಲ್ಲಿ ರೂಬಲ್ ನಾಗಿ ಹಂಚಿಕೊಂಡ ಪೋಸ್ಟ್​:

ಇದನ್ನೂ ಓದಿ: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು!

ಇದುವರೆಗೆ ದೇಶಾದ್ಯಂತ 800ಕ್ಕೂ ಹೆಚ್ಚು ಕಲಿಕೆ ಕೇಂದ್ರಗಳನ್ನು ಸ್ಥಾಪಿಸಿರುವ ರೂಬಲ್ ನಾಗಿ, ಶಿಕ್ಷಣವನ್ನು ಹಕ್ಕು ಎಂದು ಪರಿಗಣಿಸಿ ಬಡ ಮತ್ತು ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಜ್ಞಾನ ನೀಡುತ್ತಿದ್ದಾರೆ. ಅವರ ಪ್ರಯತ್ನದಿಂದ ಅನೇಕ ಮಕ್ಕಳ ಬದುಕು ಬದಲಾಗಿದ್ದು, ಆತ್ಮವಿಶ್ವಾಸ ಮತ್ತು ಹೊಸ ಭವಿಷ್ಯ ದೊರಕಿದೆ. ಕಲೆಯ ಮೂಲಕ ಶಿಕ್ಷಣವನ್ನು ತಲುಪಿಸುವ ಈ ವಿಭಿನ್ನ ಕಾರ್ಯಶೈಲಿಯೇ ಅವರಿಗೆ ಜಾಗತಿಕ ಶಿಕ್ಷಕ ಪ್ರಶಸ್ತಿಯನ್ನು ತಂದುಕೊಟ್ಟಿದೆ. ರೂಬಲ್ ನಾಗಿಯ ಸಾಧನೆ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆಯಾಗಿದ್ದು, ಒಬ್ಬ ವ್ಯಕ್ತಿಯ ಸೇವಾಭಾವ ಸಮಾಜವನ್ನೇ ಬದಲಾಯಿಸಬಹುದು ಎಂಬುದಕ್ಕೆ ಅವರು ಜೀವಂತ ಉದಾಹರಣೆಯಾಗಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ: 

Published On – 12:13 pm, Fri, 6 February 26

Source link

ಅಮೆರಿಕದಲ್ಲಿ ಜನವರಿಯಲ್ಲಿ ಅತಿಹೆಚ್ಚು ಉದ್ಯೋಗನಷ್ಟ; ಗಂಭೀರ ಸಮಸ್ಯೆಯ ಮುನ್ಸೂಚನೆಯಾ? – Kannada News | Number of US job cuts in January rise to over lakh, highest since 2009, multiple data suggest deeper crisis

ವಾಷಿಂಗ್ಟನ್, ಫೆಬ್ರುವರಿ 6: ಅಮೆರಿಕದಲ್ಲಿ ನಿರುದ್ಯೋಗ ಪರಿಸ್ಥಿತಿ (US unemployment) ಆತಂಕಕಾರಿ ಮಟ್ಟ ತಲುಪಿರುವಂತಿದೆ. ಆರ್ಥಿಕ ತಜ್ಞರು ನಿರೀಕ್ಷಿಸಿಸುದಕ್ಕಿಂತಲೂ ಹೆಚ್ಚು ಕಳವಳಕಾರಿಯಾಗಿದೆ ಅಲ್ಲಿಯ ಉದ್ಯೋಗನಷ್ಟದ ತೀವ್ರತೆ ಎಂದು ಹೇಳಲಾಗುತ್ತಿದೆ. ಚಾಲೆಂಜರ್, ಗ್ರೇ ಅಂಡ್ ಕ್ರಿಸ್ಮಸ್ (ಸಿಜಿಸಿ) ಎನ್ನುವ ಎಂಪ್ಲಾಯ್ಮೆಂಟ್ ಸರ್ವಿಸ್ ಕಂಪನಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜನವರಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಕಡಿತ ಮಾಡಲಾಗಿದೆಯಂತೆ. ಇದು 2009ರ ನಂತರ ಯಾವುದೇ ಜನವರಿ ತಿಂಗಳಲ್ಲಿ ಅಮೆರಿಕದಲ್ಲಿ ಕಂಡ ಅತಿಹೆಚ್ಚು ಉದ್ಯೋಗ ಕಡಿತದ ಸಂಖ್ಯೆ ಎನ್ನಲಾಗಿದೆ.

ಚಾಲೆಂಜರ್ ರಿಪೋರ್ಟ್ ಪ್ರಕಾರ 2026ರ ಜನವರಿಯಲ್ಲಿ 1,08,435 ಉದ್ಯೋಗಕಡಿತ ಆಗಿದೆ. ಅಮೆರಿಕದ ಕಾರ್ಮಿಕ ಕ್ಷೇತ್ರ ಈ ಹಿಂದೆ ಮಾಡಿದ್ದ ಅಂದಾಜಿಗಿಂತಲೂ ಹೆಚ್ಚು ದುರ್ಬಲ ಸ್ಥಿತಿಯಲ್ಲಿರುವುದರ ಸೂಚಕ ಇದು ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಎಂಪ್ಲಾಯ್ಮೆಂಟ್ ಸರ್ವಿಸಸ್ ಕಂಪನಿಯ ಈ ವರದಿ ಮಾತ್ರವಲ್ಲ, ಸರ್ಕಾರದ ಲೇಬರ್ ಸ್ಟಾಟಿಸ್ಟಿಕ್ಸ್ ಬ್ಯೂರೋ ಬಿಡುಗಡೆ ಮಾಡಿದ ದತ್ತಾಂಶವೂ ಕೂಡ ಇಂಥದ್ದೇ ಸ್ಥಿತಿಯತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ

ಲೇಬರ್ ಡಿಪಾರ್ಟ್ಮೆಂಟ್​ನ ಡಿಸೆಂಬರ್ ಡಾಟಾ

ಅಮೆರಿಕದ ಬ್ಯೂರೋ ಆಫ್ ಲೇಬರ್ ಸ್ಟಾಟಿಸ್ಟಿಕ್ಸ್ ಬಿಡುಗಡೆ ಮಾಡಿದ ಮತ್ತೊಂದು ದತ್ತಾಂಶದ ಪ್ರಕಾರ ಡಿಸೆಂಬರ್ ತಿಂಗಳಲ್ಲಿ ಜಾಬ್ ಓಪನಿಂಗ್ಸ್ 65 ಲಕ್ಷಕ್ಕೆ ಇಳಿಕೆ ಆಗಿದೆ. ನವೆಂಬರ್​ನಲ್ಲಿ ಇದು 69 ಲಕ್ಷ ಇತ್ತು. ಡಿಸೆಂಬರ್​ನಲ್ಲಿ ಜಾಬ್ ಓಪನಿಂಗ್ಸ್ ಅಥವಾ ಹೊಸ ಉದ್ಯೋಗಾವಕಾಶ ಪ್ರಮಾಣದಲ್ಲಿ 4 ಲಕ್ಷ ಕಡಿಮೆ ಆಗಿದೆ. 2020ರ ನಂತರ ಇದು ಅತ್ಯಂತ ಕಡಿಮೆ ಮಟ್ಟದ ಜಾಬ್ ಓಪನಿಂಗ್ಸ್ ಎಂದು ಹೇಳಲಾಗುತ್ತಿದೆ.

ಎಡಿಪಿ ಎನ್ನುವ ಖಾಸಗಿ ಎಚ್​ಆರ್ ಸರ್ವಿಸ್ ಕಂಪನಿ ಬಿಡುಗಡೆ ಮಾಡಿದ ಮತ್ತೊಂದು ದತ್ತಾಂಶ ಕೂಡ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿನ ಮಟ್ಟದಲ್ಲಿರುವುದನ್ನು ಸೂಚಿಸಿದೆ. ಎಡಿಪಿ ಬಿಡುಗಡೆ ಮಾಡಿದ ಡಾಟಾ ಪ್ರಕಾರ, ಖಾಸಗಿ ವಲಯದ ಕಂಪನಿಗಳು ಜನವರಿಯಲ್ಲಿ 22,000 ನೇಮಕಾತಿ ಮಾತ್ರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ

ಹಾಗೆಯೇ, ಮತ್ತೊಂದು ದತ್ತಾಂಶದ ಪ್ರಕಾರ ಜನವರಿಯಲ್ಲಿ ನಿರುದ್ಯೋಗ ವಿಮೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇವೆಲ್ಲವೂ ಕೂಡ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು ಗಂಭೀರ ಸ್ಥಿತಿಗೆ ಜಾರುವ ಲಕ್ಷಣಗಳನ್ನು ಸೂಚಿಸುತ್ತಿವೆ. ಆದರೆ, ಈ ದತ್ತಾಂಶಗಳು ನಿರುದ್ಯೋಗ ಹೆಚ್ಚುತ್ತಿರುವುದನ್ನು ಸಂಕೇತಿಸಿದರೆ, ಡಿಸೆಂಬರ್ ತಿಂಗಳ ನಿರುದ್ಯೋಗ ದರ ಶೇ. 4.4ರಷ್ಟು ಮಾತ್ರವೇ ಇದೆ. ಇದು ಕಳವಳಕಾರಿ ಎಂದು ಹೇಳುವಷ್ಟು ದೊಡ್ಡ ಮಟ್ಟದ ನಿರುದ್ಯೋಗ ಸಮಸ್ಯೆಯಲ್ಲ. ಆದರೆ, ಜನವರಿಯಿಂದ ಅಮೆರಿಕದಲ್ಲಿ ನಿರುದ್ಯೋಗ ದರ ಏರಿಕೆಯ ಟ್ರೆಂಡ್​ಗೆ ಹೋಗುತ್ತಾ ಕಾದು ನೋಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪೂರ್ವ ನಾಗಾಲ್ಯಾಂಡ್​ನ ದಶಕಗಳಷ್ಟು ಹಳೆಯದಾದ ಸಮಸ್ಯೆಗೆ ಒಂದು ಒಪ್ಪಂದದ ಮೂಲಕ ಮುಕ್ತಿ – Kannada News | Decades Old Eastern Nagaland Issue Resolved Through Agreement, Says PM Modi

ನವದೆಹಲಿ, ಫೆಬ್ರವರಿ 06: ಭಾರತ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ಪೂರ್ವ ನಾಗಾಲ್ಯಾಂಡ್ ಪೀಪಲ್ಸ್​ ಆರ್ಗನೈಸೇಷನ್ (ENPO)ಪ್ರತಿನಿಧಿಗಳ ನಡುವೆ ನಡೆದ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ಲಾಘಿಸಿದ್ದಾರೆ. ಈ ಒಪ್ಪಂದವು ಜನರಿಗೆ ಹೊಸ ಅವಕಾಶ ಮತ್ತು ಸಮೃದ್ಧಿಯ ಹೊಸ ಮಾರ್ಗವನ್ನು ತೆರೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ನಿಜಕ್ಕೂ ಐತಿಹಾಸಿಕ ಒಪ್ಪಂದವಾಗಿದ್ದು, ವಿಶೇಷವಾಗಿ ಪೂರ್ವ ನಾಗಾಲ್ಯಾಂಡ್​ಗೆ ಅಭಿವೃದ್ಧಿಯ ಹಾದಿಯನ್ನು ಸುಧಾರಿಸುತ್ತದೆ ಎಂದು ಬರೆದಿದ್ದಾರೆ.

ಇದು ಈಶಾನ್ಯದ ಎಲ್ಲರಿಗೂ ಶಾಂತಿ ಪ್ರಗತಿ ಮತ್ತು ಅಭಿವೃದ್ಧಿಗೆ ದೃಢ ಬದ್ಧತೆಯನ್ನು ಪ್ರದರ್ಶಿಸುತ್ತದೆ.
ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಂದವನ್ನು ಘೋಷಿಸಿದ್ದಾರೆ. ಪೂರ್ವ ನಾಗಾಲ್ಯಾಂಡ್​​ನಲ್ಲಿ ದಶಕಗಳಿಂದ ಇದ್ದ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಭಾರತ ಸರ್ಕಾರ ನ್ಯಾಗಾಲ್ಯಾಂಡ್ ಸರ್ಕಾರ ಮತ್ತು ಇಎಪಿಒ ನಡುವೆ ಐತಿಹಾಸಿಕ ಒಪ್ಪಂದಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ವಿವಾದಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಶಾಂತಿಯುತ ಮತ್ತು ಸಮೃದ್ಧ ಈಶಾನ್ಯಕ್ಕಾಗಿ ನರೇಂದ್ರ ಮೋದಿ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ

ಇಎನ್​ಪಿಒ ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನೀಫಿಯು ರಿಯೊ ಅವರ ಸಮ್ಮುಖದಲ್ಲಿ ಗುರುವಾರ ಓ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವು ನಾಗಾಲ್ಯಾಂಡ್​ನ ಆರು ಜಿಲ್ಲೆಗಳಿಗೆ(ಟ್ಯೂನ್​ಸಾಂಗ್, ಮಾನ್, ಕಿಫಿರೆ, ಲಾಂಗ್ಲೆಂಗ , ನೋಕ್ಲಾಕ್ ಮತ್ತು ಶಮಟೋರ್) ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರವನ್ನು ಸ್ಥಾಪಿಸುತ್ತಿದೆ.

ಎಫ್​ಎನ್​ಟಿಎಗೆ 46 ವಿಷಯಗಳ ಮೇಲೆ ಅಧಿಕಾರ ನೀಡಲಾಗುವುದು. ಈ ಒಪ್ಪಂದವು ಎಫ್​ ಎನ್​ಟಿಎಗಾಗಿ ಹೆಚ್ಚುವರು ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಒಂದು ಮಿನಿ-ಸೆಕ್ರೆಟರಿಯೇಟ್ ಅನ್ನು ರಚಿಸಲು ಅವಕಾಶ ನೀಡುತ್ತದೆ. ಇದು ಪೂರ್ವ ನಾಗಾಲ್ಯಾಂಡ್ ಪ್ರದೇಶದ ಅಭಿವೃದ್ಧಿ ವೆಚ್ಚವನ್ನು ಅದರ ಜನಸಂಖ್ಯೆ ಮತ್ತು ಪ್ರದೇಶಕ್ಕೆ ಅನುಗುಣವಾಗಿ ಹಂಚಿಕೆ ಮಾಡಲು ಕೂಡ ಅವಕಾಶ ನೀಡುತ್ತದೆ. ಈಶಾನ್ಯ ಜನರ ನಿಜವಾದ ಆಕಾಂಕ್ಷೆಗಳನ್ನು ಪೂರೈಸಲು ಎಲ್ಲಾ ವಿವಾದಾತ್ಮಕ ಸಮಸ್ಯೆಗಳನ್ನು ಸಂವಾದದ ಮೂಲಕ ಪರಿಹರಿಸುವ ಭಾರತ ಸರ್ಕಾರದ ಬದ್ಧತೆಯನ್ನು ಈ ಒಪ್ಪಂದವು ಪ್ರತಿಬಿಂಬಿದುತ್ತದೆ.

ಪರಸ್ಪರ ಗೌರವ ಮತ್ತು ಸಂವಾದದ ಆಧಾರದ ಮೇಲೆ ಸಂವಾದದ ಮೂಲಕ ಮಾತ್ರ ಪರಿಹಾರ ಕಂಡುಕೊಳ್ಳಬಹುದು. ಹಿಂಸೆ ಮತ್ತು ಸಶಸ್ತ್ರ ಸಂಘರ್ಷದ ಮೂಲಕವಲ್ಲ ಎಂಬ ಪ್ರಜಾಪ್ರಭುತ್ವದ ಮೂಲಭೂತ ತತ್ವವನ್ನು ಇದು ಪುನರುಚ್ಚರಿಸುತ್ತದೆ.

ಈ ಒಪ್ಪಂದವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿಯವರ ನೇತೃತ್ವದಲ್ಲಿ FNTA ಗಾಗಿ ಮಿನಿ-ಸೆಕ್ರೆಟರಿಯಟ್ ರಚನೆಗೆ ಅವಕಾಶ ನೀಡುತ್ತದೆ. ಇದಲ್ಲದೆ, ಪೂರ್ವ ನಾಗಾಲ್ಯಾಂಡ್ ಪ್ರದೇಶದ ಅಭಿವೃದ್ಧಿ ವೆಚ್ಚವನ್ನು ಅದರ ಜನಸಂಖ್ಯೆ ಮತ್ತು ಪ್ರದೇಶಕ್ಕೆ ಅನುಗುಣವಾಗಿ ಹಂಚಲಾಗುತ್ತದೆ. ಆದಾಗ್ಯೂ, ಒಪ್ಪಂದವು ಭಾರತದ ಸಂವಿಧಾನದ 371 (A) ವಿಧಿಯ ನಿಬಂಧನೆಗಳ ಮೇಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಾರು ಗುದ್ದಿ ಪರಾರಿ: ಹಿರಿಯ ನಟನ ಬಂಧನ – Kannada News | Malayalam Actor Maniyanpilla Raju arrested in Hit and Run case

ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ (Producer) ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್‌ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಢಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಾಗಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಫೆಬ್ರವರಿ 5ರಂದು ಗುರುವಾರ ರಾತ್ರಿ ತಿರುವನಂತಪುರದಲ್ಲಿ ನಡೆದಿದೆ.

ಫೆಬ್ರವರಿ 5ರಂದು ತಿರುವನಂತಪುರದ ವಝುತಕಾಡ್‌ನಲ್ಲಿರುವ ‘ತ್ರಿವೇಂಡ್ರಮ್ ಕ್ಲಬ್’ ಬಳಿ ರಾತ್ರಿ ಸುಮಾರು 9:30ಕ್ಕೆ ಈ ಅಪಘಾತ ಸಂಭವಿಸಿದೆ. ಮಣಿಯನ್‌ಪಿಳ್ಳ ರಾಜು ಅವರು ಚಲಾಯಿಸುತ್ತಿದ್ದ ಕಾರು (KL-01-CJ-0004), ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಹೋಗುತ್ತಿದ್ದ ಸೂರಜ್ ಮತ್ತು ನಿವೇದಿತ್ ಕೃಷ್ಣ ಎಂಬ ಇಬ್ಬರು ಸುಮಾರು 20 ವರ್ಷದ ಯುವಕರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಯುವಕರು ರಸ್ತೆಗೆ ಬಿದ್ದಿದ್ದು, ಒಬ್ಬರಿಗೆ ಕಾಲಿನ ಮೂಳೆ ಮುರಿತ ಹಾಗೂ ಮತ್ತೊಬ್ಬರಿಗೆ ತಲೆ ಮತ್ತು ಬೆನ್ನುಮೂಳೆಯ ಗಂಭೀರ ಗಾಯಗಳಾಗಿವೆ.

ಅಪಘಾತವಾದ ತಕ್ಷಣ ನಟ ರಾಜು ಅವರು ಗಾಯಾಳುಗಳಿಗೆ ಸಹಾಯ ಮಾಡದೆ ಸ್ಥಳದಿಂದ ಪರಾರಿಯಾಗಿದ್ದರು. ಅಪಘಾತದ ಸ್ಥಳದಲ್ಲಿ ಬಿದ್ದಿದ್ದ ಕಾರಿನ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಾಥಮಿಕವಾಗಿ ತಲೆಮರೆಸಿಕೊಂಡಿದ್ದ ರಾಜು, ಶುಕ್ರವಾರ ಬೆಳಿಗ್ಗೆ ಮ್ಯೂಸಿಯಂ ಪೊಲೀಸ್ ಠಾಣೆಗೆ ಹಾಜರಾದರು. ಪೊಲೀಸರು ಅವರನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಅಪಘಾತದ ಸಮಯದಲ್ಲಿ ಮಣಿಯನ್‌ಪಿಳ್ಳ ರಾಜು ಅವರು ಕಾರನ್ನು ವೇಗವಾಗಿ ಮತ್ತು ಅಜಾಗರೂಕವಾಗಿ ಓಡಿಸಿದ್ದು ಖಾತ್ರಿ ಆಗಿದೆ ಎನ್ನಲಾಗುತ್ತಿದೆ. ಪೊಲೀಸರು ನಟನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಿದ್ದು, ಘಟನೆಯ ಸಮಯದಲ್ಲಿ ನಟ ಮದ್ಯ ಸೇವಿಸಿದ್ದು ಖಚಿತವಾದಲ್ಲಿ ಹೆಚ್ಚುವರಿ ಸೆಕ್ಷನ್​​ಗಳ ಅಡಿಯಲ್ಲಿ ದೂರು ದಾಖಲಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು

ಪೊಲೀಸರ ಮುಂದೆ ಹೇಳಿಕೆ ನೀಡಿದ ರಾಜು, “ಬೈಕ್ ಅತಿ ವೇಗವಾಗಿ ಬಂದು ನನ್ನ ಕಾರಿಗೆ ಡಿಕ್ಕಿ ಹೊಡೆಯಿತು. ಅಪಘಾತದ ನಂತರ ನಾನು ಗಾಬರಿಗೊಂಡಿದ್ದೆ, ಆ ಕ್ಷಣದಲ್ಲಿ ಏನು ಮಾಡಬೇಕೆಂದು ತಿಳಿಯದೆ ಅಲ್ಲಿಂದ ಹೊರಟುಹೋದೆ” ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ, ತಾನು ಕ್ಯಾನ್ಸರ್‌ನಿಂದ ಚೇತರಿಸಿಕೊಳ್ಳುತ್ತಿರುವುದು ಮತ್ತು ಚಿಕನ್ ಗುನ್ಯಾದಿಂದ ಬಳಲುತ್ತಿದ್ದೆ, ಅಲ್ಲದೆ ನನ್ನ ಪತ್ನಿಯೂ ಸಹ ಮನೆಯಲ್ಲಿ ಒಬ್ಬರೇ ಇದ್ದರು. ಹಾಗಾಗಿ ಆ ಸಮಯದಲ್ಲಿ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ‘ನಾನು ಅಲ್ಲಿಂದ ಆ ಕ್ಷಣದಲ್ಲಿ ಹೊರಟು ಹೋದೆನಾದರೂ ಬೇರೊಬ್ಬರಿಗೆ ಕರೆ ಮಾಡಿ ಗಾಯಾಳುಗಳಿಗೆ ಸಹಾಯ ಮಾಡಿರೆಂದು ಸೂಚಿಸಿದ್ದೆ’ ಎಂದಿದ್ದಾರೆ.

ಸದ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮೋಟಾರು ವಾಹನ ಕಾಯ್ದೆಯಡಿ ನಿರ್ಲಕ್ಷ್ಯದ ಚಾಲನೆ ಮತ್ತು ಅಪಘಾತದ ಬಗ್ಗೆ ಮಾಹಿತಿ ನೀಡದೆ ಪರಾರಿಯಾದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಸಮಯದಲ್ಲಿ ನಟ ಮದ್ಯ ಸೇವಿಸಿರುವುದು ಖಾತ್ರಿ ಆದಲ್ಲಿ ಹೆಚ್ಚುವರಿ ಪ್ರಕರಣಗಳು ನಟನ ವಿರುದ್ಧ ದಾಖಲಾಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:53 am, Fri, 6 February 26

Source link

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ? – Kannada News | Rakkasapuradhol Kannada movie first half review ft Raj B Shetty

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು ಮರ್ಡರ್ ಮಿಸ್ಟರಿ ಕಥೆ ಈ ಸಿನಿಮಾದಲ್ಲಿ ಇದೆ. ‘ರಕ್ಕಸಪುರದೋಳ್’ ಚಿತ್ರದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಅದಕ್ಕೆ ಉತ್ತರ ಇಲ್ಲಿದೆ..

  1. ಸಸ್ಪೆನ್ಸ್ ಮೂಲಕವೇ ರಕ್ಕಸಪುರದೋಳ್ ಸಿನಿಮಾದ‌ ಕಥೆ ಶುರು ಆಗುತ್ತದೆ. ಜೊತೆಗೆ ಕಾಮಿಡಿ ದೃಶ್ಯಗಳು ಕೂಡ ಇದೆ.
  2. ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪೊಲೀಸ್ ಆದರೂ ಆ ಪಾತ್ರ ಬಹಳ ಡಿಫರೆಂಟ್ ಆಗಿದೆ.
  3. ಸಿದ್ದಯ್ಯ ಸ್ವಾಮಿ ಹಾಡಿನಲ್ಲಿ ಅರ್ಜುನ್ ಜನ್ಯ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಬಳಿಕ ಕುತೂಹಲ ಹೆಚ್ಚುತ್ತದೆ.
  4. ರಕ್ಕಸಪುರದೋಳ್ ಸಿನಿಮಾದ ಫಸ್ಟ್ ಹಾಫ್‌ನಲ್ಲಿ ಹಾರರ್ ಎಲಿಮೆಂಟ್ ಕೂಡ ಇದೆ. ಕೊಳ್ಳಿ ದೆವ್ವದ ಕಥೆ ಹೇಳಲಾಗಿದೆ.
  5. ಸರಣಿ ಕೊಲೆ ನಡೆಯುತ್ತದೆ. ಸೀರಿಯಲ್ ಕಿಲ್ಲರ್ ಯಾರು ಎಂಬ ಕುತೂಹಲ‌ ಪ್ರತಿ ಹಂತದಲ್ಲೂ ಹೆಚ್ಚುತ್ತಾ ಸಾಗುತ್ತದೆ
  6. ಈ ಸಿನಿಮಾದ ಮೊದಲಾರ್ಧದಲ್ಲೇ ಸಾಕಷ್ಟು ಟ್ವಿಸ್ಟ್‌ಗಳಿವೆ. ಕೊಲೆ ಮಾಡಿದ್ದು ಮನುಷ್ಯನಾ ಅಥವಾ ದೆವ್ವನಾ ಎಂಬ ಕೌತುಕ ಮೂಡುತ್ತೆ.
  7. ಸಖತ್ ಥ್ರಿಲ್ಲಿಂಗ್ ಕಥೆ ಆದ್ದರಿಂದ ಈ ಸಿನಿಮಾದ ಮೊದಲಾರ್ಧ ಪಟಪಟನೆ ಸಾಗುತ್ತದೆ. ಇಂಟರ್‌ವಲ್ ವೇಳೆಗೆ ಮಹತ್ವದ ಟ್ವಿಸ್ಟ್.
  8. ಹಲವು ಪಾತ್ರದ ಮೇಲೆ ಕೊಲೆಯ ಅನುಮಾನ ಮೂಡುತ್ತದೆ. ಕೊಲೆಗಾರ ಸಿಕ್ಕೇ ಬಿಟ್ಟ ಎಂಬಷ್ಟರಲ್ಲಿ ಹೊಸ ಟ್ವಿಸ್ಟ್ ಬರುತ್ತದೆ.
  9. ರಾಜ್ ಬಿ. ಶೆಟ್ಟಿ ಅವರಿಗೆ ಇದೊಂದು ಡಿಫರೆಂಟ್ ಸಿನಿಮಾ. ಅವರ ಆಭಿಮಾನಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದೆ.
  10. ಮೂಢನಂಬಿಕೆ ವರ್ಸಸ್ ವಿಜ್ಞಾನ ಎಂಬ ಕಾನ್ಸೆಪ್ಟ್ ಮೇಲೆ ರಕ್ಕಸಪುರದೋಳ್ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ – Kannada News | PM Modi’s Pariksha Pe Charcha 2026: Dream Big, Achieve Success and Manage Time

ನವದೆಹಲಿ, ಫೆಬ್ರವರಿ 06: ಕನಸು ಕಾಣದಿರುವುದು ಅಪರಾಧ, ಕನಸ್ಸನ್ನು ಪ್ರತಿಯೊಬ್ಬರೂ ಕಾಣಲೇಬೇಕು, ಕೇವಲ ಕನಸ್ಸಿನ ಬಗ್ಗೆ ಮಾತನಾಡುತ್ತಾ ಇರುವುದಲ್ಲ, ಸಫಲತೆಯ ಹಾದಿ ಹಿಡಿದು ಸಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಪರೀಕ್ಷಾ ಪೆ ಚರ್ಚಾ(Pariksha Pe Charcha) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ನೀವು ಸಮರ್ಥರಾಗಿ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ ಎಂದರು.
ಒಬ್ಬ ವಿದ್ಯಾರ್ಥಿ ಗಗನಯಾತ್ರಿಯಾಗಲು ಬಯಸಿದರೆ, ಸಂಪೂರ್ಣವಾಗಿ ಅಧ್ಯಯನ ಮಾಡಬೇಕು, ಜ್ಞಾನವನ್ನು ವಿಸ್ತರಿಸುವುದನ್ನು ಮುಂದುವರಿಸಬೇಕು. ಕೇವಲ ನನ್ನ ಕನಸು ಇದಿದೆ ಎನ್ನುತ್ತಾ ಜಪ ಮಾಡುತ್ತಿರುವುದಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

ನಿಮಗೆ ಸೌಲಭ್ಯಗಳು ಯಶಸ್ಸಿಗೆ ಕಾರಣವಾಗುವುದಿಲ್ಲ: ಮೋದಿ
ಸೌಲಭ್ಯಗಳು ಯಶಸ್ಸಿಗೆ ಕಾರಣವಾಗುವುದಿಲ್ಲ, ನೀವು ಪಂಚತಾರಾ ಹೋಟೆಲ್‌ನಲ್ಲಿ ವಾಸಿಸುತ್ತಿದ್ದೀರಿ ಎಂದ ಮಾತ್ರಕ್ಕೆ ನೀವು ನಿಮ್ಮ ಅಧ್ಯಯನದ ಮೇಲೆ ಹೆಚ್ಚು ಗಮನಹರಿಸುತ್ತೀರಿ ಎಂದರ್ಥವಲ್ಲ. ಸೌಲಭ್ಯಗಳು ಗಮನವನ್ನು ಸುಧಾರಿಸುವುದಿಲ್ಲ. ನೀವು ಸೂಕ್ಷ್ಮವಾಗಿ ಗಮನಿಸಿದರೆ, ಟಾಪರ್‌ಗಳಲ್ಲಿ ಹೆಚ್ಚಿನವರು ಬಡತನದಲ್ಲಿ ಬೆಳೆದ ಮಕ್ಕಳೇ ಇರುತ್ತಾರೆ.

ಮಕ್ಕಳಿಗೆ ಹೊಸ ವಿಷಯಗಳನ್ನು ಕಲಿಸಲು ಒತ್ತು
ನೀವು ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ಹೊಸ ವಿಷಯಗಳನ್ನು ಕಲಿಯುವತ್ತ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಕಡಿಮೆ ಅಂಕಗಳನ್ನು ಪಡೆದರೂ ಭಯಪಡಬೇಡಿ, ಬದಲಾಗಿ, ನಿಮ್ಮನ್ನು ನೀವು ಸುಧಾರಿಸಿಕೊಳ್ಳಿ ಮತ್ತು ಉತ್ತಮವಾಗಿ ಕೆಲಸ ಮಾಡಿ.

ಸಮಯಕ್ಕೆ ಸರಿಯಾಗಿ ಕೆಲಸ ಪೂರ್ಣಗೊಳಿಸಲು ಪ್ರಧಾನಿ ಮೋದಿ ಸಲಹೆ
ಪ್ರಧಾನಿ ಮೋದಿ ಮಕ್ಕಳು ತಮ್ಮ ದೈನಂದಿನ ಕೆಲಸಗಳನ್ನು ಡೈರಿಯಲ್ಲಿ ಬರೆಯುವಂತೆ ಪ್ರೋತ್ಸಾಹಿಸಿದರು. ನಂತರ, ಮರುದಿನ, ಯಾವ ಕೆಲಸಗಳು ಪೂರ್ಣಗೊಂಡಿವೆ ಮತ್ತು ಯಾವುದನ್ನು ಪೂರ್ಣಗೊಳಿಸಲಾಗಿಲ್ಲ ಎಂಬುದರ ಬಗ್ಗೆ ಆಲೋಚನೆ ಮಾಡಿ, ಇದು ಅವರಿಗೆ ಸಮಯ ನಿರ್ವಹಣೆಯನ್ನು ಕಲಿಯಲು ಸಹಾಯ ಮಾಡುತ್ತದೆ. ಇದು ಅವರ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪೋಷಕರಿಗೆ ಪ್ರಧಾನಿ ಮೋದಿ ಈ ಸಲಹೆ
ಮಕ್ಕಳು ಅಧ್ಯಯನದ ಒತ್ತಡವನ್ನು ಅನುಭವಿಸದಂತೆ ಪೋಷಕರು ಅವರ ಮೇಲೆ ಅನಗತ್ಯ ಒತ್ತಡ ಹೇರಬಾರದು ಎಂದು ಪ್ರಧಾನಿ ಮೋದಿ ಹೇಳಿದರು.

12ನೇ ತರಗತಿ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಹೇಗೆ?
ಎರಡೆರಡು ಪರೀಕ್ಷೆಗಳಿಗೆ ಒಮ್ಮೆಲೆ ತಯಾರಿ ನಡೆಸುವುದು ಎಂದರೆ ಸುಲಭದ ಮಾತಲ್ಲ, ಆದರೆ ನಿಮಗೆ ಬೋರ್ಡ್​ ಪರೀಕ್ಷೆಗಳು ಅತಿ ಮುಖ್ಯ ಹೀಗಾಗಿ ನೀವು ಬೋರ್ಡ್​ ಪರೀಕ್ಷೆಗಳತ್ತ ಗಮನಗರಿಸಿದರೆ ಬೇರೆ ಪರೀಕ್ಷೆಗಳ ಬಗ್ಗೆಯೂ ಗಮನಹರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಓದುವಾಗ ಏಕಾಗ್ರತೆ ಕೊರತೆ

ನಾವು ಯಾವುದಾದರೂ ವಿಷಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದನ್ನು ಎಷ್ಟು ವರ್ಷವಾದರೂ ಮರೆಯದೇ ನೆನಪಿಸಿಕೊಳ್ಳುತ್ತೇವೆ. ನಿಮಗಿಂತ ದುರ್ಬಲರಾಗಿರುವ ಮಕ್ಕಳಿಗೆ ನೀವು ಪ್ರತಿದಿನ ಕಲಿಸಬೇಕು ಮತ್ತು ತರಬೇತಿ ನೀಡಬೇಕು. ಇದು ನಿಮ್ಮ ಆಲೋಚನೆಗಳನ್ನು ಪುನರಾವರ್ತಿಸಲು ನಿಮಗೆ ಸಹಾಯ ಮಾಡುತ್ತದೆ. ಇದಲ್ಲದೆ, ನಿಮಗಿಂತ ಬುದ್ಧಿವಂತ ಮಕ್ಕಳೊಂದಿಗೆ ಕುಳಿತು ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ನಿಮಗೆ ಉತ್ತಮವಾಗಿರುತ್ತದೆ.

ಜೀವನಕ್ಕೆ ಅಂಕಗಳು ಎಷ್ಟು ಮುಖ್ಯ?
ನಮ್ಮೊಳಗಿನ ವಿದ್ಯಾರ್ಥಿಯನ್ನು ಸದಾ ಎಚ್ಚರವಾಗಿರಿಸಿಕೊಳ್ಳಬೇಕು, ಅರ್ಧಂಬರ್ಧ ಶಿಕ್ಷಣವು ಯಶಸ್ವಿ ಜೀವನಕ್ಕೆ ಕಾರಣವಾಗುವುದಿಲ್ಲವಾದ್ದರಿಂದ ನಾವು ನಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಕಳೆದ ವರ್ಷದ ಬೋರ್ಡ್ ಪರೀಕ್ಷೆಗಳಲ್ಲಿ ಟಾಪ್ 10 ವಿದ್ಯಾರ್ಥಿಗಳ ಹೆಸರುಗಳು ನಿಮಗೆ ನೆನಪಿದೆಯೇ? ಅವರ ಫೋಟೋಗಳು ಪತ್ರಿಕೆಯಲ್ಲಿ ಪ್ರಕಟವಾಗಿದ್ದರೂ, ನಮಗೆ ಅವರ ನೆನಪಿಲ್ಲ. ಇದರರ್ಥ ಅಂಕಗಳ ಪರಿಣಾಮವು ಸ್ವಲ್ಪ ಸಮಯ ಮಾತ್ರ ಇರುತ್ತದೆ. ಆದ್ದರಿಂದ, ಅಂಕಗಳ ಮೇಲೆ ಕೇಂದ್ರೀಕರಿಸುವ ಬದಲು, ನಾವು ನಮ್ಮ ಜೀವನದ ನಿಜವಾದ ಉದ್ದೇಶದ ಮೇಲೆ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.

ಪರೀಕ್ಷೆಗೆ  ಓದುವುದು ಹೇಗೆ?
ಶಿಕ್ಷಕರು ತಮಗೆ ಅಂಕಗಳನ್ನು ತಂದುಕೊಡುವ ವಿಷಯಗಳನ್ನು ಕಲಿಸಲು ಪ್ರಯತ್ನಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ, ಉತ್ತಮ ಶಿಕ್ಷಕರು ಇಡೀ ಪಠ್ಯಕ್ರಮದ ಮೇಲೆ ಕೇಂದ್ರೀಕರಿಸುತ್ತಾರೆ, ಇದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಬೌಲರ್ ಭುಜದ ವ್ಯಾಯಾಮ ಮಾಡುವುದರಿಂದ ಮಾತ್ರ ಫಿಟ್ ಆಗಿರಬಹುದೇ ಎಂದು ಅವರು ಕೇಳಿದರು? ಬೌಲರ್ ಚೆನ್ನಾಗಿ ಬೌಲಿಂಗ್ ಮಾಡಲು ಬಯಸಿದರೆ, ಅವನು ತನ್ನ ಇಡೀ ದೇಹವನ್ನು ಫಿಟ್ ಆಗಿರಿಸಿಕೊಳ್ಳಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಒಬ್ಬ ಕ್ರಿಕೆಟಿಗ ತನ್ನ ದೇಹವನ್ನು ಫಿಟ್ ಆಗಿರಿಸಿಕೊಳ್ಳಬೇಕಾದಂತೆಯೇ, ಶಿಕ್ಷಣವು ನಮ್ಮ ಜೀವನವನ್ನು ಯಶಸ್ವಿಗೊಳಿಸಲು ಒಂದು ಮಾಧ್ಯಮವಾಗಿದೆ. ಅಂತಿಮ ಗುರಿ ಪರೀಕ್ಷೆಯ ಅಂಕಗಳಾಗಿರಬಾರದು. ಅಂತಿಮ ಗುರಿ ಜೀವನದ ಅಭಿವೃದ್ಧಿಯ ಗುರಿಯಾಗಿರಬೇಕು.

ಮಕ್ಕಳಿಗೆ ಕೌಶಲ್ಯ ಮುಖ್ಯವೇ ಅಥವಾ ಅಂಕಗಳೇ ಹೆಚ್ಚು ಮುಖ್ಯವೇ?

ಮಕ್ಕಳಿಗೆ ಕೌಶಲ್ಯ ಹೆಚ್ಚು ಮುಖ್ಯವೇ ಅಥವಾ ಅಂಕಗಳು ಹೆಚ್ಚು ಮುಖ್ಯವೇ ಎಂದು ಕೇಳಿದಾಗ, ಎಲ್ಲದರಲ್ಲೂ ಸಮತೋಲನ ಇರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾವು ಒಂದು ಕಡೆ ವಾಲಿದರೆ, ನಾವು ಬೀಳುತ್ತೇವೆ, ಆದರೆ ಸಮತೋಲನವನ್ನು ಕಾಯ್ದುಕೊಳ್ಳುವುದು ಅದನ್ನು ತಡೆಯುತ್ತದೆ. ಎರಡು ರೀತಿಯ ಕೌಶಲ್ಯಗಳಿವೆ: ಮೊದಲನೆಯದಾಗಿ, ಜೀವನ ಕೌಶಲ್ಯಗಳು ಮತ್ತು ಎರಡನೆಯದಾಗಿ, ವೃತ್ತಿಪರ ಕೌಶಲ್ಯಗಳು. ಎರಡೂ ಕೌಶಲ್ಯಗಳಿಗೆ ಗಮನ ಕೊಡುವುದು ಅತ್ಯಗತ್ಯ. ಅಭ್ಯಾಸವಿಲ್ಲದೆ ಯಾವುದೇ ಕೌಶಲ್ಯವನ್ನು ಪಡೆಯಲು ಸಾಧ್ಯವಿಲ್ಲ, ಮತ್ತು ಎಲ್ಲವೂ ಜ್ಞಾನದಿಂದ ಪ್ರಾರಂಭವಾಗುತ್ತದೆ. ಆದ್ದರಿಂದ, ಅಧ್ಯಯನ ಮಾಡದೆ ಯಾವುದೇ ಕೌಶಲ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಸ್ವದೇಶಿ ವಸ್ತುಗಳನ್ನು ಗೌರವಿಸಿ
ನಾವೇ ಸ್ವದೇಶಿ ವಸ್ತುಗಳನ್ನು ಗೌರವಿಸದಿದ್ದರೆ ಬೇರೆ ದೇಶದವರು ಅದನ್ನು ಗೌರವಿಸುತ್ತಾರಾ, ವಿಕಸಿತ ಭಾರತ ನಿರ್ಮಾಣ ಮಾಡುವಾಗ ಇದೆಲ್ಲಾ ಅಂಶಗಳ ಕಡೆಗೆ ಹೆಚ್ಚು ಗಮನಹರಿಸಬೇಕು, ನಮ್ಮ ದೇಶದಲ್ಲೇ ಸಿದ್ಧಪಡಿಸಿರುವ ವಸ್ತುಗಳನ್ನು ನಾವು ಗೌರವಿಸಬೇಕು ಎಂದರು. ಭಾರತದಲ್ಲಿ ಇಂಟರ್ನೆಟ್ ಅಗ್ಗವಾಗಿದೆ ಎಂಬ ಕಾರಣಕ್ಕೆ ಸಮಯ ವ್ಯರ್ಥ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version