Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ:

ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ ಯೋಜನೆಗಳು ನಿಧಾನಗತಿಯಲ್ಲಿ ಇರಬಹುದು. ಇಂದು ನಿಮ್ಮ ವಿರುದ್ಧ ಮಾತನಾಡುವವರಿಗೆ ಉತ್ತರವನ್ನು ಕೊಡುವ ಅವಶ್ಯಕ ಇರುವುದಿಲ್ಲ. ಉದ್ಯೋಗದಲ್ಲಿ ವಿಶ್ವಾಸಗಳಿಸುವುದು ಮುಖ್ಯ. ನಿಮ್ಮನ್ನು ದಿಕ್ಕು ತಪ್ಪಿಸಿ ಕಾರ್ಯದ ವೇಗವನ್ನು ಕಡಿಮೆ‌ ಮಾಡಿಸಬಹುದು.

ವೃಷಭ ರಾಶಿ:

ಅಧಿಕಾರದ ಚುಕ್ಕಾಣಿ ನಿಮ್ಮ ಕೈಯಲ್ಲಿ ಬಂದರೂ ಒತ್ತಡ ಹೆಚ್ಚಾಗುತ್ತದೆ. ದುರಭ್ಯಾಸ ನಿಯಂತ್ರಿಸಿದರೆ ಸ್ಪಷ್ಟ ನಿರ್ಧಾರ ಸಾಧ್ಯ. ಮಾತಿನಲ್ಲಿ ಸಂಯಮ ಅಗತ್ಯ. ಪೂರ್ವಾರ್ಜಿತ ಆಸ್ತಿಯ ಬಗ್ಗೆ ನಿಮಗೆ ಪೂರ್ಣ ಸಮಾಧಾನ ಇರದು. ನಿಮ್ಮ ತಪ್ಪುಗಳು ಅರ್ಥವಾಗದೇ ಬೇರೆಯವರ ಮೂಲಕ ನೀವು ತಿಳಿದುಕೊಳ್ಳಬೇಕಾದೀತು. ಸಾಲವನ್ನು ಮಾಡುವಾಗ ಯಾರದ್ದಾದರೂ ಸಲಹೆಯನ್ನು ಪಡೆಯುವುದು ಉತ್ತಮ. ರಾಜಕೀಯ ವ್ಯಕ್ತಿಗಳು ನಿಮ್ಮನ್ನು ಬಳಸಿಕೊಳ್ಳಬಹುದು. ಯಾವ ಕೆಲಸವನ್ನು ಒಪ್ಪಿಕೊಳ್ಳುವಾಗಲೂ ಜಾಗರೂಕತೆ ಇರಲಿ. ಇನ್ನೊಬ್ಬರ ಒತ್ತಾಯಕ್ಕೆ ನೀವು ಮಣಿದು ಹಣದ ಹೂಡಿಕೆಯನ್ನು ಮಾಡುವಿರಿ. ಇಂದು ಹೊಸ ಉದ್ಯಮ ಆಲೋಚನೆಗಳು ಮನಸ್ಸಿನಲ್ಲಿ ಮೂಡುತ್ತವೆ. ಸಾಮಾಜಿಕ ಕಾರ್ಯಗಳಲ್ಲಿ ನಾಯಕತ್ವ ಸಿಗಬಹುದು. ಚರಾಸ್ತಿಯನ್ನು ಕೊಟ್ಟು ಅಲ್ಪ ಲಾಭವನ್ನು ಮಾಡಿಕೊಳ್ಳುವಿರಿ. ನಿಮ್ಮ ಮಾತಿಗೆ ಬೆಲೆ ಕೊಡದೇ ಇರುವುದರಿಂದ ಬೇಸರವಾದೀತು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ.

ಮಿಥುನ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಶ್ರಮ ಮೌಲ್ಯ ಪಡೆಯುತ್ತದೆ. ದುರಭ್ಯಾಸಗಳಿಂದ ಆರೋಗ್ಯ ಹಾನಿ ಸಾಧ್ಯ. ಮಾತಿನಲ್ಲಿ ಕಠಿಣತೆ ಕುಟುಂಬದಲ್ಲಿ ಬೇಸರ ಉಂಟುಮಾಡಬಹುದು. ಮೇಲಧಿಕಾರಿಗಳ ವರ್ತನೆಯನ್ನು ಸಹಿಸಲು ಕಷ್ಟವಾದೀತು. ಹಿರಿಯರ ಮಾರ್ಗದರ್ಶನವನ್ನು ನೀವು ಅಲ್ಲಗಳೆಯುವಿರಿ. ಧನವ್ಯಯವಾಗುವ ಸಂದರ್ಭವು ಬರಬಹುದು.‌ ತುರ್ತು ಹಣ‌ ಸಂಪಾದನೆಯನ್ನು ಮಾಡಬೇಕಾದೀತು. ಸಂಗಾತಿಯ ಜೊತೆ ವಾಗ್ವಾದ ಮಾಡಿ ಮನಸ್ಸನ್ನು ಕೆಡಿಸಿಕೊಳ್ಳುವಿರಿ. ನಿಮ್ಮ ಸತ್ಯದಿಂದ ಸಹೋದ್ಯೋಗಿಯ ಕೆಲಸವು ಹೋಗಬಹುದು. ನಿಮ್ಮ ನಡೆಯುವುದು ಇತರರಿಗೆ ತೊಂದರೆಯನ್ನು ಉಂಟುಮಾಡೀತು. ಕೈಗಾರಿಕಾ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅಧಿಕಾರದ ಹೊಣೆಗಾರಿಕೆ ಒತ್ತಡ ತಂದರೂ ಅನುಭವ ಸಹಾಯ ಮಾಡುತ್ತದೆ. ಸಾಮಾಜಿಕ ಗೌರವವನ್ನು ನೀವು ಪಡೆಯಲಿದ್ದೀರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕರ್ಕಾಟಕ ರಾಶಿ:

ವಿಭಿನ್ನ ಉದ್ಯಮ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಕಾಣಿಸುತ್ತವೆ. ಅಧಿಕಾರ ಸಂಬಂಧಿತ ನಿರ್ಧಾರಗಳಲ್ಲಿ ಧೈರ್ಯ ಅಗತ್ಯ. ಒತ್ತಡ ಇದ್ದರೂ ಆಶಾವಾದ ನಿಮ್ಮ ಶಕ್ತಿ. ಎಲ್ಲವನ್ನೂ ತಿಳಿದೆನೆಂಬ ಅಹಂ ನಿಂದ ಸೋಲಾಗುವುದು. ಕುಟುಂಬದವರ ಜೊತೆ ನಿಮ್ಮ ಒಡಾನಾಟವು ಕಡಿಮೆ ಆಗಬಹುದು. ಕೃಷಿಯ ಚಟುವಟಿಕೆಯಿಂದ ಲಾಭವಾಗುವುದು. ಮಿತ್ರರ ಸಹಾಯವನ್ನು ನೀವು ಉಪೇಕ್ಷಿಸುವಿರಿ. ಓಡಾಟದಿಂದ ಕೆಲಸವಾಗದು. ಜಾಣ್ಮೆಯಿಂದ ಕೆಲಸವನ್ನು ಮುಗಿಸುಕೊಳ್ಳಿ. ನಿಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬೀಳಬಹುದು. ನೀವು ಆಪ್ತರಿಗೆ ಎಲ್ಲವನ್ನೂ ಹೇಳಬೇಕು ಎಂದುಕೊಂಡರೂ ನಿಮಗೆ ಹೇಳಲಾಗದೆ ದುಃಖವಾಗುವುದು. ಪರಿಚಿತರಿಂದಲೇ ಭೂಮಿಗೆ ಸಂಬಂಧಿಸಿದ ವಿಚಾರದಲ್ಲಿ ವಂಚನೆಯಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮಾನಸಿಕ ತೃಪ್ತಿ. ದುರಭ್ಯಾಸ ತ್ಯಜಿಸಿದರೆ ಮುಂದಿನ ದಾರಿಗಳು ಸುಗಮ. ಮೇಲಧಿಕಾರಿಗಳು ನಿಮ್ಮ ಮೇಲಿಟ್ಟ ವಿಶ್ವಾಸಕ್ಕೆ ಭಂಗಬಾರದಂತೆ ನಿಮ್ಮ ವರ್ತಿಸಿ. ತಂದೆಯಿಂದ ಕೇಳಿದ್ದು ಸಿಗಲಿಲ್ಲ ಎಂದು ಬೇಸರವಾಗಬಹುದು.

ಸಿಂಹ ರಾಶಿ:

ಉದ್ಯಮದಲ್ಲಿ ಪಾಲುದಾರರೊಂದಿಗೆ ಸ್ಪಷ್ಟತೆ ಅಗತ್ಯ. ಸಾಮಾಜಿಕ ಕಾರ್ಯಗಳು ನಿಮ್ಮ ಒಳಗಿನ ಶಕ್ತಿಯನ್ನು ಹೊರತರುತ್ತವೆ. ದುರಭ್ಯಾಸಗಳು ಪ್ರಗತಿಗೆ ಅಡ್ಡಿಯಾಗಬಹುದು. ನಿಮಗೆ ಆಸಕ್ತಿ ಇಲ್ಲದಿದ್ದರೂ ಹೊಸ ಕೆಲಸವನ್ನು ಮಾಡಬೇಕಾದೀತು. ಪರರ ಮನೆಯಲ್ಲಿ ಆಹಾರವನ್ನು ಸ್ವೀಕಾರ ಮಾಡುವಿರಿ. ನಿಮ್ಮ ಮಾತು ನಿಮಗೇ ಹೆಚ್ಚಾದಂತೆ ತೋರುವುದು. ಬರಹಗಾರರು ಪ್ರಶಂಸೆಯನ್ನು ಗಳಿಸುವರು. ಆರ್ಥಿಕ ನಷ್ಟದಿಂದ ನಿಮಗೆ ಚಿಂತೆಯಾಗಬಹುದು. ಸಾಮೂಹಿಕ ಕೆಲಸವು ನಿಮಗೆ ಕಿರಿಕಿರಿ ಕೊಡಬಹುದು. ತಂದೆಯಿಂದ ನಿಮಗೆ ಬೇಕಾದ ಕೆಲಸವು ಮಾಡಿಸಿಕೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ನಿಮಗೆ ಆಸಕ್ತಿ ಹೆಚರಚಾಗುವುದು. ಇಂದು ಕೆಲಸದ ಒತ್ತಡ ಮತ್ತು ಮಾನಸಿಕ ಚಡಪಡಿಕೆ ಕಾಣಿಸಿಕೊಳ್ಳಬಹುದು. ಅಧಿಕಾರಿಗಳೊಂದಿಗೆ ಮಾತುಕತೆ ಜಾಗರೂಕವಾಗಿರಲಿ. ನಿಮ್ಮ ಯೋಜನೆಯನ್ನು ಯಾರ ಬಳಿಯೂ ಪ್ರಕಟಮಾಡಿಕೊಳ್ಳುವುದು ಬೇಡ. ಯಾರೋ‌ ಮಾಡಿದ ನಿಯಮಕ್ಕೆ ನಿಮಗೆ ತೊಂದರೆಯಾಗಬಹುದು.

ಕನ್ಯಾ ರಾಶಿ:

ಉದ್ಯಮ ಹಾಗೂ ಕೈಗಾರಿಕಾ ವ್ಯವಹಾರಗಳಲ್ಲಿ ಲಾಭದ ಸೂಚನೆ. ಅಧಿಕಾರದ ಚುಕ್ಕಾಣಿ ನಿಮ್ಮ ಕೈಗೆ ಬರುವ ಸಾಧ್ಯತೆ. ಒತ್ತಡದ ನಡುವೆಯೂ ಸಮತೋಲನ ಕಾಯ್ದುಕೊಳ್ಳುವಿರಿ. ಹಠದ ಸ್ವಭಾವದಿಂದ ಉದ್ಯೋಗವನ್ನು ಕಳೆದುಕೊಳ್ಳುವುದು ಅನಿವಾರ್ಯವಾಗಬಹುದು. ಧೃತಿಗೆಡದೇ ಹೊಸ ಉದ್ಯೋಗಕ್ಕೆ ತೆರಳುವಿರಿ. ವ್ಯವಹಾರದ ನಷ್ಟವು ನಿಮ್ಮ ಮನಸ್ಸನ್ನು ವಿಚಲಿತ ಮಾಡೀತು. ಯಾರದೋ ಮಾತಿನ ಮೇಲೆ ನಿಮ್ಮ ಗೆಳೆತನವನ್ನು ದೂರ ಮಾಡಿಕೊಳ್ಳಬಹುದು. ಅನಿರೀಕ್ಷಿತವಾಗಿ ಸಿಕ್ಕ ಉನ್ನತ ಅಧಿಕಾರದಿಂದ ಸಂತೋಷವಾಗಬಹುದು. ಸಾಮಾಜಿಕ ಕಾರ್ಯಗಳಲ್ಲಿ ಗೌರವ ಹೆಚ್ಚುತ್ತದೆ. ದುರಭ್ಯಾಸದಿಂದ ದೂರವಿದ್ದರೆ ಆರೋಗ್ಯ ಸುಧಾರಣೆ. ಬೇಸರ ಮಾತುಗಳನ್ನು ತಪ್ಪಿಸಿ. ದಾಂಪತ್ಯದಲ್ಲಿ ಬರುವ ಸಮಸ್ಯೆಗಳನ್ನು ಪರಸ್ಪರ ಮಾತು ಕತೆಯಿಂದ ಸರಿ ಮಾಡಿಕೊಳ್ಳಿ. ಬಹಿರಂಗಪಡಿಸಿ ನಿಮ್ಮ ಮಾನವನ್ನು ಕಳೆದುಕೊಳ್ಳಬೇಕಾಗಬಹುದು. ಸಾಧ್ಯವಾದಷ್ಟು ಮಾತನ್ನು ಕಡಿಮೆ ಮಾಡಿ, ಕಾರ್ಯದಲ್ಲಿ ತೋರಿಸುವಿರಿ. ನೀವು ಸಣ್ಣ ನೋವನ್ನೂ ನಿರ್ಲಕ್ಷಿಸುವುದು ಬೇಡ. ಅನುಮಾನದಿಂದ ಸ್ನೇಹವು ಹಾಳುಗುವುದು.

ತುಲಾ ರಾಶಿ:

ಕೆಲಸದ ಒತ್ತಡ ಹೆಚ್ಚು ಅನುಭವವಾಗಬಹುದು. ಅಧಿಕಾರ ಸಂಬಂಧಿತ ಹೊಣೆಗಾರಿಕೆ ಹೆಚ್ಚುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ನಿಮ್ಮ ಶ್ರಮ ಗುರುತಿಸಲಾಗುತ್ತದೆ. ಉದ್ಯೋಗವನ್ನು ಬದಲಿಸುವ ಮನಸ್ಸಿದ್ದರೂ ನಿಯಮಕ್ಕೆ ಕಟ್ಟುಬಿದ್ದು ಕಷ್ಟವಾದೀತು. ಪಾಲುದಾರಿಕೆಯಲ್ಲಿ ಹಣದ ವ್ಯವಹಾರದಿಂದ ನಿಮಗೆ ಅಸಮಾಧಾನವಾಗುವುದು. ಸಾಲವನ್ನು ತೀರಿಸಲು ಏನಾದರೂ ಮಾಡಬೇಕು ಏನಿಸಬಹುದು. ಬಂಧುಗಳ ಮಾತಿನಿಂದ ಸಮಾಧಾನ ಸಿಕ್ಕೀತು. ಉದ್ಯೋಗವನ್ನು ಹುಡುಕಿಕೊಂಡು ಅಲೆದಾಡಬೇಕಾದೀಯು. ಆಗಾಗ ಬರುವ ಸಾಲದ ವಿಚಾರದಿಂದ ಮನೆಯ ವಾತಾವರಣವು ಸರಿಯಾಗಿ ಇರದು. ಉದ್ಯಮದಲ್ಲಿ ಹೊಸ ಪ್ರಯೋಗ ಮಾಡುವ ಮುನ್ನ ವಿಶ್ಲೇಷಣೆ ಅಗತ್ಯ. ಮಾತಿನಲ್ಲಿ ಅತಿಸ್ಪಷ್ಟತೆ ಕೆಲವರಿಗೆ ನೋವು ತರಬಹುದು. ಕಳೆದುಹೋದ ವಿಷಯವನ್ನು ಯಾರೋ ಪುನಃ ನೆನಪಿಸಿಕೊಂಡು ಮನಸ್ಸು ಭಾರವಾಗುವುದು. ಇಂದಿನ‌ ನಿಮ್ಮ ಪ್ರಯಾಣವು ಕೆಲವು ಅಡೆತಡೆಗಳಿಂದ ಇರಲಿದೆ. ನಿಮ್ಮ ಆಸಕ್ತಿಯ ವಿಚಾರವನ್ನು ಬದಲಿಸುವಿರಿ. ನಿಮ್ಮ ಅಂತಶ್ಶಕ್ತಿ ನಿಮ್ಮರಿಗೆ ಗೊತ್ತಾಗುವುದು.

ವೃಶ್ಚಿಕ ರಾಶಿ:

ಇಂದು ಅಧಿಕಾರದ ಸ್ಥಾನದಲ್ಲಿ ನಿಮ್ಮ ಮಾತಿಗೆ ತೂಕ ಇರುತ್ತದೆ. ಆದರೆ ಅಹಂಕಾರದಿಂದ ಬೇಸರ ಮಾತು ಹೊರಬರುವ ಸಾಧ್ಯತೆ. ಒತ್ತಡವನ್ನು ನಿಯಂತ್ರಿಸಲು ಸಾಮಾಜಿಕ ಸೇವೆ ಸಹಾಯಕ. ಧಾರ್ಮಿಕ ನಾಯಕರ ನಡುವೆ ವಾಗ್ವಾದ ಮಾಡುವಿರಿ. ಕಳೆದುಕೊಂಡ ವಸ್ತುಗಳ ಬಗ್ಗೆ ನಿಮಗೆ ಮೋಹವಿರದು. ಭೂಮಿಯ ವ್ಯವಹಾರದಿಂದ ಹೊರಬರಲು ಪ್ರಯತ್ನಿಸುವಿರಿ. ಇಂದು ಇನ್ನೊಬ್ಬರ ವಾಹನದಿಂದ ನೋವಾಗುವ ಸಾಧ್ಯತೆ ಇದೆ. ಹಳೆಯ ಸಂಸ್ಥೆಯೊಂದನ್ನು ಮುನ್ನಡೆಸುವ ಜವಾಬ್ದಾರಿಯು ನಿಮಗೆ ಬರಬಹುದು. ಹೆಚ್ಚು ಆದಾಯವನ್ನು ಇಂದಿನ ಕಾರ್ಯದಿಂದ ನಿರೀಕ್ಷಿಸುವಿರಿ. ನಿಮ್ಮ ಕರ್ತವ್ಯದ ಕಡೆ ಗಮನ ಅತಿಯಾಗಿ ಇರಲಿ. ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಸಂಪರ್ಕಗಳು ಲಾಭ ತರುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಹಾಗೂ ದೈಹಿಕ ಶಕ್ತಿ ಹೆಚ್ಚುತ್ತದೆ. ನಿಮ್ಮ ಕೆಲಸವನ್ನು ನೀವು ಮಾಡಿ. ಮಾತಿಗೆ ತಪ್ಪಿದ್ದಕ್ಕೆ ನಿಮ್ಮನ್ನು ಅವಮಾನಿಸಿಯಾರು. ಆರ್ಥಿಕ ಬಲವು ನಿಮಗೆ ಅಗತ್ಯವಾಗಿ ಬೇಕಾಗುವುದು. ಬೇರೆ ಕೆಲಸಗಳಿಂದ ಹೆಚ್ಚು ಆದಾಯ ಬರುವಂತೆ ನೀವು ನೋಡಿಕೊಳ್ಳುವಿರಿ.

ಧನು ರಾಶಿ:

ಕೆಲಸದ ಒತ್ತಡದಿಂದ ಬೇಸರ ಹೆಚ್ಚಾಗಬಹುದು. ಆದರೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಸಮಾಧಾನ. ಉದ್ಯಮ ಹಾಗೂ ಕೈಗಾರಿಕೆ ಸಂಬಂಧಿತ ನಿರ್ಧಾರಗಳಲ್ಲಿ ಕುಟುಂಬದ ಸಲಹೆ ಉಪಯುಕ್ತ. ಇಂದು ನಿಮಗೆ ಹಣದ ಅಗತ್ಯತೆಗಳು ತುಂಬಾ ಎದುರಾಗಬಹುದು. ರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು. ಕೆಲವನ್ನು ನೀವು ಹೇಳಿ ಮಾಡುವುದು ಸಾಧ್ಯವಾಗದು. ಕಳ್ಳತನದ ಭೀತಿ ಇರಲಿದೆ. ಅಕಸ್ಮಾತ್ ವಾಹನದಿಂದ ಬೀಳಬಹುದು. ಸಣ್ಣ ಗಾಯಗಳೂ ಆಗಬಹುದು. ಮನೆಯ ಸ್ವಚ್ಛತೆಯ ಕಡೆ ಗಮನ ಇರಲಿದೆ. ಅಧಿಕಾರಿಗಳೊಂದಿಗೆ ಮಾತುಕತೆ ಮೃದುವಾಗಿರಲಿ. ದುರಭ್ಯಾಸಗಳಿಂದ ದೂರವಿರುವುದು ಆರೋಗ್ಯಕ್ಕೆ ಒಳಿತು. ಉದ್ಯೋಗದ ನಿಮಿತ್ತ ಸುತ್ತಾಡುವುದರಿಂದ ಅನಾರೋಗ್ಯಕ್ಕೆ ಕಾರಣವಾಗಬಹುದು. ಅಧಿಕ ಒತ್ತಡವು ನಿಮ್ಮ ಕಾರ್ಯಕ್ಕೆ ಭಂಗ ತರಬಹುದು. ಕಬ್ಬಿಣದ ವ್ಯಾಪರದಿಂದ ಲಾಭವನ್ನು ಪಡೆಯುವಿರಿ. ವೃತ್ತಿಯಲ್ಲಿ ನಿಮ್ಮ ಬಗ್ಗೆ ಸಲ್ಲದ ಮಾತುಗಳು ಕೇಳಿ ಆತಂಕವಾಗಬಹುದು. ನಿಮ್ಮನ್ನು ಅವಲಂಬಿಸಿದವರ ಅವಶ್ಯಕತೆಗಳನ್ನು ಪೂರೈಸುವಿರಿ.

ಮಕರ ರಾಶಿ:

ವಿಭಿನ್ನ ಉದ್ಯಮ ಆಲೋಚನೆಗಳು ಇಂದು ಕಾರ್ಯರೂಪಕ್ಕೆ ಬರಬಹುದು. ಅಧಿಕಾರದ ಚುಕ್ಕಾಣಿ ಸಿಕ್ಕರೂ ಸಹನೆ ಅಗತ್ಯ. ಒತ್ತಡದಿಂದ ಮಾತು ಕಠಿಣವಾಗುವ ಸಾಧ್ಯತೆ ಇದೆ. ತಂದೆಯ ಜೊತೆಗಿನ ಮನಸ್ತಾಪವನ್ನು ನೀವು ಕುಳಿತು ಬಗೆಹರಿಸಿಕೊಳ್ಳುವುದು ಸೂಕ್ತ. ಕಲಾವಿದರು ಹೊಸ ಅವಕಾಶಗಳನ್ನು ಪಡೆದುಕೊಳ್ಳುವರು. ನಿಮ್ಮ ವಿದ್ಯೆಗೆ ಗೌರವ ಸಿಗುವುದು. ಬರಬೇಕಾದ ಹಣವನ್ನು ಬಹಳ ಮುತುವರ್ಜಿಯಿಂದ ಪಡೆಯಬೇಕು. ಅತಿಯಾದ ಅಸೆಯಿಂದ ನಿಮ್ಮಲ್ಲಿರುವ ವಸ್ತುವು ನಿಮಗೆ ದುಃಖಕೊಟ್ಟೀತು. ಅಪರಿಚಿತರ ಸಲಹೆಗಳು ನಿಮಗೆ ಯೋಗ್ಯವೆನಿಸಬಹುದು. ಸಾಮಾಜಿಕ ಕಾರ್ಯಗಳು ನಿಮ್ಮ ವ್ಯಕ್ತಿತ್ವವನ್ನು ಮೆಚ್ಚುವಂತೆ ಮಾಡುತ್ತವೆ. ದುರಭ್ಯಾಸ ತ್ಯಜಿಸಿದರೆ ಮಾನಸಿಕ ಸ್ಪಷ್ಟತೆ ಹೆಚ್ಚುತ್ತದೆ. ಸಂಗಾತಿಯನ್ನು ನೋಡುವ ದೃಷ್ಟಿಯು ಬದಲಾದೀತು‌. ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಲು ನಿಮ್ಮವರು ಕಷ್ಟಪಟ್ಟಾರು. ಇಂದು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಅವಕಾಶ ಇರಲಿದೆ. ಶ್ರಮದ ಕೆಲಸಕ್ಕೆ ನೀವು ಹೋಗುವುದಿಲ್ಲ.

ಕುಂಭ ರಾಶಿ:

ಮಾನಸಿಕ ಒತ್ತಡ ನಿಧಾನವಾಗಿ ಹೆಚ್ಚಾಗಬಹುದು. ಅಧಿಕಾರ ಸಂಬಂಧಿತ ವಿಚಾರಗಳಲ್ಲಿ ಜವಾಬ್ದಾರಿ ಹೆಚ್ಚುತ್ತದೆ. ಸಾಮಾಜಿಕ ಸೇವೆಯಲ್ಲಿ ಭಾಗವಹಿಸಿದರೆ ಗೌರವ ಸಿಗುತ್ತದೆ. ದುರಭ್ಯಾಸದಿಂದ ಆರೋಗ್ಯಕ್ಕೆ ತೊಂದರೆ ಸಂಭವ. ರಪ್ತು ವ್ಯಾಪಾರವು ಸುಗಮವಾಗಿ ಸಾಗುವುದು. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಿರಿ. ಅಪರಿಚಿತರಿಗೆ ನಿಮ್ಮ ವಾಹನವನ್ನು ಕೊಟ್ಟು ಕೆಡಿಸಿಕೊಳ್ಳುವಿರಿ. ದೂರಪ್ರಯಾಣವನ್ನು ಮಾಡಲು ಮನಸ್ಸು ಒಪ್ಪದು. ಸಮಯಪ್ರಜ್ಞೆಯಿಂದ ನೀವು ಯೋಗ್ಯ ಮಾತುಗಳನ್ನು ಆಡುವಿರಿ. ನಿಮ್ಮ ಆತಂಕವನ್ನು ನೀವು ಆಪ್ತರ ಜೊತೆ ಹೇಳಿಕೊಳ್ಳಿ. ಉದ್ಯಮ, ಕೈಗಾರಿಕೆ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಮೊದಲು ಸೂಕ್ತ ಸಲಹೆ ಪಡೆಯಿರಿ. ಅನಗತ್ಯ ಮಾತು ವಿವಾದ ಉಂಟುಮಾಡಬಹುದು. ಯಾರದೋ ಪ್ರೇರಣೆಯಿಂದ ನಿಮ್ಮ ಬದುಕು ಬದಲಾವಣೆಯ ಕಡೆ ಹೋಗಲಿದೆ. ಪ್ರೀತಿಯು ಸಿಗದೇ ಮೀನಿನಂತೆ ಒದ್ದಾಡುವಿರಿ. ಕೊಟ್ಟ ಹಣವನ್ನು ಪುನಃ ಹಿಂದಿರುಗಿಸಿ ಪ್ರಶಂಸೆ ಪಡೆಯುವಿರಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ:

ಇಂದು ದುರಭ್ಯಾಸಗಳಿಂದ ದೂರ ಉಳಿಯುವ ಸಂಕಲ್ಪ ಅಗತ್ಯ. ಕೆಲಸದ ಒತ್ತಡ ಹೆಚ್ಚಿದರೂ ನಿರ್ಣಯಾಧಿಕಾರ ನಿಮ್ಮ ಕೈಯಲ್ಲಿರುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ. ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ನಿಮ್ಮ ಮುಂದಿನ ಕೆಲಸವನ್ನು ಮಾಡಿ. ಕಳೆದುಕೊಂಡ ವಸ್ತುವಿನ ಮೌಲ್ಯವನ್ನು ಪಡೆಯುವಿರಿ. ಹದಗೆಡುವ ಆರೋಗ್ಯವನ್ನು ಮೊದಲೇ ಸರಿಮಾಡಿಕೊಂಡು ಜಾಣರಾಗಿರಿ. ನಿಮ್ಮ ಯೋಜನೆಗೆ ಕೆಲವು ಅಪಸ್ವರಗಳು ಕೇಳಿಸುವುದು. ಒಂದೇ ವಿಚಾರದ ಬಗ್ಗೆ ಹೆಚ್ಚು ಹೊತ್ತು ಚಿಂತಿಸಿದರೂ ಪ್ರಯೋಜನವಾಗದು. ಉದ್ಯಮ ಹಾಗೂ ಕೈಗಾರಿಕಾ ವಿಚಾರಗಳಲ್ಲಿ ಹೊಸ ಯೋಜನೆಗಳ ಚಿಂತನೆ ಬರಲಿದೆ. ಮಾತಿನಲ್ಲಿ ತೀಕ್ಷ್ಣತೆ ಬೇಸರಕ್ಕೆ ಕಾರಣವಾಗಬಹುದು. ಆಕಸ್ಮಿಕವಾಗಿ ಆರ್ಥಿಕಲಾಭವಿದ್ದರೂ ಸಂತೋಷವಾಗದು. ಸಂತೋಷವನ್ನು ಹೇಳಿಕೊಳ್ಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಆಪ್ತರ ಮಾತಿಗೆ ಕಿವಿಯಾಗಿರುವಿರಿ. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ಅವರವರ ಭಾರ ಅವರಿಗೇ ಗೊತ್ತಾಗುವ ದಿನ.

31 ಡಿಸೆಂಬರ್​​ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಏಕಾದಶೀ ನಿತ್ಯನಕ್ಷತ್ರ : ಭರಣೀ, ಯೋಗ : ಐಂದ್ರ, ಕರಣ : ಭದ್ರ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:28 – 13:52, ಯಮಗಂಡ ಕಾಲ 08:14 – 09:39, ಗುಳಿಕ ಕಾಲ 11:03 – 12:28

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು – Kannada News | Agriculture University Program Cancelled After Dalit Organisations Oppose Chakravarthy Sulibele’s Participation

ಕೃಷಿ ವಿಶ್ವ ವಿದ್ಯಾಲಯದ ಗೇಟ್​​ ಬಳಿ ಪ್ರತಿಭಟನೆ

ಧಾರವಾಡ, ಡಿಸೆಂಬರ್​​ 30: ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ ಧರಣಿ ನಡೆಸಿದ್ದು, ಕಾರ್ಯಕ್ರಮ ರದ್ದಾದರೂ ಪ್ರತಿಭಟನೆ ಮುಂದುವರಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಪ್ರತಿಭಟನಾನಿರತರನ್ನು ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ವಿವಿ ಕುಲಪತಿ ಪಿ.ಎಲ್. ಪಾಟೀಲ್ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್​​ ಒಳಗೆ ನಡೆಯುವ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಶಾಸಕರು, ಸಚಿವರನ್ನು ಕರೆಯದೆ ಸೂಲಿಬೆಯವರನ್ನೇ ಕರೆದಿದ್ದು ಯಾಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ. ಮನವಿ ಸ್ವೀಕರಿಸಲು ಬಂದಿದ್ದ ಡೀನ್​​ರನ್ನು ಕೂಡ ತರಾಟೆಗೆ ಪಡೆಯಲಾಗಿದ್ದು, ಕುಲಪತಿಗಳೇ ಬಂದು ನಮ್ಮ ಮನವಿ ಸ್ವೀಕಾರ ಮಾಡಲಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಜೊತೆಗೆ ಕೆಲ ಉದ್ರಿಕ್ತರು ವಿಶ್ವವಿದ್ಯಾಲಯದ ಗೇಟ್ ಏರಿ ಪ್ರತಿಭಟನೆ ನಡೆಸಿದ ಕಾರಣ ಹೈಡ್ರಾಮಾವೇ ನಡೆದಿದೆ.

ಇದನ್ನೂ ಓದಿ:  ಶಿಕ್ಷಕರ ಕೊರತೆ; ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಚಿಂತನೆ

ಸಮಾಜದಲ್ಲಿ ಕೋಮು ಗಲಭೆಗೆ ಕಾರಣವಾಗುವಂತವರನ್ನು ಕರೆದು ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಬಾರದು. ಅದರ ಬದಲು, ಕೃಷಿ ಸಾಧಕರನ್ನೋ, ವಿಜ್ಞಾನಿಗಳನ್ನೋ ಕರೆಸಬಹುದಿತ್ತು. ಸಿಂಂಡಿಕೇಟ್​​​ ಮೆಂಬರ್​​ಗಳಿಗೆ ತಿಳಿಸದೆ ಕುಲಪತಿಗಳು ಕಾರ್ಯಕ್ರಮ ಮಾಡಲು ಹೊರಟಿದ್ದಾರೆ. ಇದೇ ರೀತಿ ಅವರು ಉದ್ಧಟತನ ಮುಂದುವರಿಸಿದರೆ ಅವರ ಕಚೇರಿಗೆ ನುಗ್ಗಿ ದಾಂಧಲೆ ನಡೆಸುತ್ತೇವೆ ಎಂದು ಡಿಎಸ್​​ಎಸ್​​ ಮುಖಂಡ ಪರಮೇಶ್​​ ಎಚ್ಚರಿಸಿದ್ದಾರೆ. ಮೊನ್ನೆ ನಡೆದ ಬೋರ್ಡ್​​ ಮೀಟಿಂಗ್​​ನಲ್ಲಿಯೂ ಕುಲಪತಿಗಳು ಈ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಶಿಷ್ಟಾಚಾರ ಉಲ್ಲಂಘಿಸಿ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗ್ತಿದೆ. ಚಕ್ರವರ್ತಿ ಸೂಲಿಬೆಲೆ ಏನು ಚಿನ್ನದ ರಸ್ತೆ ಮಾಡಲು ಇಲ್ಲಿ ಬರುತ್ತಿದಾರಾ? ಎಂದು ಸಿಂಡಿಕೇಟ್​​ ಸದಸ್ಯ ರವಿ ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:06 pm, Tue, 30 December 25

Source link

ಟೈಟಲ್ ಪ್ರೋಮೋದಿಂದಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದ ಕನ್ನಡದ ‘ಕೆ ಪಾಪ್’ ಸಿನಿಮಾ – Kannada News | K Pop Kannada Movie Title Promo ft Sanjay Garuda Ram

ಹೊಸ ಚಿತ್ರತಂಡಗಳು ಬಣ್ಣದ ಲೋಕಕ್ಕೆ ಬಂದರೆ ಹೊಸತನ ಹೊತ್ತು ತರುತ್ತವೆ. ಅದಕ್ಕೆ ಲೇಟೆಸ್ಟ್ ಉದಾಹಣೆ ಎಂದರೆ ‘ಕೆ ಪಾಪ್’ ಸಿನಿಮಾ. ಕೊರಿಯನ್ (Korean) ಪಾಪ್ ಸಂಸ್ಕೃತಿಯನ್ನು ಬಿಂಬಿಸುವ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾ ಒಂದು ಹೊಸ ಅಲೆ ಸೃಷ್ಟಿ ಮಾಡಲಿದೆ ಎಂಬ ಭರವಸೆ ಮೂಡಿದೆ. ಕೇವಲ ಟೈಟಲ್ ಪ್ರೋಮೋ ಮೂಲಕ ಎಲ್ಲರ ಗಮನ ಸೆಳೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಗರುಡ ರಾಮ್ (Garuda Ram) ಅವರು ಯಮ ಧರ್ಮರಾಯನ ಪಾತ್ರ ಮಾಡಲಿದ್ದಾರೆ. ಟೈಟಲ್ ಪ್ರೋಮೋ ನೋಡಿದ ಎಲ್ಲರಿಗೂ ‘ಕೆ ಪಾಪ್’ (K Pop) ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

‘ಕೆ ಪಾಪ್’ ಸಿನಿಮಾಗೆ ಕೆವಿನ್ ಲೂಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಫ್ಯಾಂಟಸಿ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಲಿದ್ದಾರೆ. ಭಾರತ ಹಾಗೂ ಜಗತ್ತಿನ ವಿವಿಧ ದೇಶಗಳಲ್ಲಿ ಕೊರಿಯನ್‌ ಪಾಪ್ ಸಂಸ್ಕೃತಿ ಹೇಗೆ ಪ್ರಭಾವ ಬೀರಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕರು. ಶೀರ್ಷಿಕೆಯನ್ನು ತಿಳಿಸುವ ಸಲುವಾಗಿ ಪ್ರೋಮೋ ಬಿಡುಗಡೆ ಮಾಡಲಾಗಿದೆ.

‘ಕೆ ಪಾಪ್’ ಟೈಟಲ್ ಪ್ರೋಮೋ:

ಪ್ರೋಮೋ‌ ಬಿಡುಗಡೆ ನಂತರ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ನಿರ್ದೇಶಕ ಕೆವಿನ್ ಲೂಕ್ ಅವರಿಗೆ ಈ ಸಿನಿಮಾದ ಬರವಣಿಗೆಯಲ್ಲಿ ಲಾವಣ್ಯ ಅವರು ಸಾಥ್ ನೀಡಿದ್ದಾರೆ. ಪ್ರೋಮೋದಲ್ಲಿ ಶನಿ‌ಮಹಾತ್ಮ ಹಾಗೂ ಯಮ‌ರಾಜನ ಪಾತ್ರಗಳು ಕಾಣಿಸಿಕೊಂಡಿವೆ. ಆದ್ದರಿಂದ ಕೌತುಕ ಮೂಡಿದೆ. ಸಂಜಯ್, ಗರುಡ ರಾಮ್, ವಿಷ್ಣು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

K Pop Kannada Movie Team

ಇದು ಕನಸಿನಲ್ಲಿ ನಡೆಯುವ ಕಹಾನಿ. ಕಥೆಯಲ್ಲಿ 60 ದಿನದ ಗಡುವು ಇದೆ. ಅದು ಯಾಕೆ ಎನ್ನುವುದೇ ಕುತೂಹಲ. ಈ ಪ್ರೋಮೋಗಾಗಿ ಆರು ತಿಂಗಳು ಕೆಲಸ ಮಾಡಿದ್ದೇವೆ. 7 ವಿಎಫ್ ತಂಡಗಳು ಕೆಲಸ ಮಾಡಿವೆ. 60ರಿಂದ 65 ದಿನಗಳ ಕಾಲ ಶೂಟಿಂಗ್ ಮಾಡಲಾಗುವುದು ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ. ಈ ಸಿನಿಮಾಗೆ ಶಶಿಧರ್ ಅವರ ಸಂಕಲನ, ರಾಜ್ ಕಾಂತ್ ಅವರ ಛಾಯಾಗ್ರಹಣ ಇರಲಿದೆ.

ಇದನ್ನೂ ಓದಿ: ಕೊರಿಯನ್ ಸ್ಟಾರ್ ಜೊತೆ ದಿಶಾ ಪಟಾನಿ ಡೇಟಿಂಗ್

ಅಲಗಾನಿ ಕಿರಣ್ ಕುಮಾರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಮೊದಲಿನಿಂದಲೂ ಹೀರೋ ಆಗಬೇಕು ಎನ್ನುವ ಅಸೆ ಇತ್ತು. ಆದರೆ ಆದು ಆಗಲಿಲ್ಲ. ಈಗ ಸಹೋದರ ಹೀರೋ ಆಗಿದ್ದು, ಆತನ ಆಸೆಗೆ ಬೆಂಬಲವಾಗಿದ್ದೇನೆ. ಶೀಘ್ರದಲ್ಲೇ ಚಿತ್ರೀಕರಣ ಆರಂಭಿಲಾಗುವುದು. ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ ವರ್ಷಗಳಿಂದ ಎಲ್ಲ ಹಬ್ಬಗಳನ್ನೂ ವಿಜಯ್ ಅವರ ಮನೆಯಲ್ಲೇ ಆಚರಿಸುತ್ತಿದ್ದಾರೆ. ಈ ಇಬ್ಬರೂ ಅಕ್ಟೋಬರ್​​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಂತೆ. ಇದೀಗ ಈ ಜೋಡಿಯ ಮದುವೆ ಸುದ್ದಿ ಹರಿದಾಡುತ್ತಿದೆ. ಇಬ್ಬರ ಮದುವೆ ಮುಂದಿನ ವರ್ಷ ನಡೆಯಲಿದ್ದು, ಮದುವೆ ಎಲ್ಲಿ ನಡೆಯಲಿದೆ, ಯಾವಾಗ ನಡೆಯಲಿದೆ ಎಂದು ಅಭಿಮಾನಿಗಳು ಕುತೂಹಲ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರುಗಳು ತಮ್ಮ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಜೋಡಿಯ ವಿವಾಹ ಫೆಬ್ರವರಿ ತಿಂಗಳಲ್ಲಿ ಬಲು ಅದ್ಧೂರಿಯಾಗಿ ನಡೆಯಲಿದೆ. ರಾಜಸ್ಥಾನದ ಜೈಪುರದಲ್ಲಿ ಐಶಾರಾಮಿ ಅರಮನೆಯಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ ರಶ್ಮಿಕಾ ಮತ್ತು ವಿಜಯ್. ಚಿತ್ರರಂಗದ ಹಲವು ಗಣ್ಯರು, ಎರಡೂ ಕಡೆಯ ಕುಟುಂಬದವರು ಮದುವೆಗೆ ಹಾಜರಾಗಲಿದ್ದಾರೆ. ಜೈಪುರದಲ್ಲಿ ಅದ್ಧೂರಿ ವಿವಾಹದ ಬಳಿಕ ಹೈದರಾಬಾದ್​​ನಲ್ಲಿ ನಿಶ್ಚಿತಾರ್ಥವನ್ನೂ ಸಹ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಆಯ್ತು ಈಗ ಶ್ರೀಲೀಲಾಗೂ ಶುರುವಾಯ್ತು ಕಾಟ

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಬ್ಬರೂ ಸಹ ಮದುವೆಗೆ ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಇಬ್ಬರೂ ಸಹ ಮದುವೆ ಶಾಪಿಂಗ್ ಇತ್ಯಾದಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ, ತಮ್ಮ ಕೆಲವು ಆಪ್ತ ಗೆಳತಿಯರೊಟ್ಟಿಗೆ ಶ್ರೀಲಂಕಾಕ್ಕೆ ತೆರಳಿ ಬ್ಯಾಚುಲರ್ ಪಾರ್ಟಿ ಸಹ ಮಾಡಿದ್ದಾರೆ. ತಮ್ಮ ಬ್ಯಾಚುಲರ್ ಪಾರ್ಟಿಯ ಚಿತ್ರಗಳನ್ನು ಸಹ ರಶ್ಮಿಕಾ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

ಇನ್ನು ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಮತ್ತೆ ತೆರೆ ಮೇಲೆ ಸಹ ಕಾಣಿಸಿಕೊಳ್ಳಲಿದ್ದಾರೆ. 2019 ರಲ್ಲಿ ‘ಡಿಯರ್ ಕಾಮ್ರೆಡ್’ ಸಿನಿಮಾನಲ್ಲಿ ಈ ಜೋಡಿ ಒಟ್ಟಿಗೆ ನಟಿಸಿತ್ತು, ಅದಾದ ಬಳಿಕ ಒಟ್ಟಿಗೆ ನಟಿಸಿರಲಿಲ್ಲ. ಇದೀಗ ‘ಗೀತ ಗೋವಿಂದಂ 2’ ಸಿನಿಮಾನಲ್ಲಿ ಮತ್ತೊಮ್ಮೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಟ್ಟಿಗೆ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ – Kannada News | 6 PM Cutoff: Snacks That Are Messing with Your Health

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ (Snacks) ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೋಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಸಂಜೆ ಮೇಲೆ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು ಮತ್ತು ಯಾಕೆ? ಇವುಗಳ ಬದಲು ಸಂಜೆ ತಿನ್ನಬಹುದಾದ ಆರೋಗ್ಯಕರ ತಿಂಡಿಗಳು ಯಾವವು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಂಜೆ 6 ಗಂಟೆಯ ನಂತರ ಈ ಆಹಾರಗಳಿಂದ ದೂರವಿರಿ

ಬಾಯಿಯ ರುಚಿಗಾಗಿ ನಾವು ಸೇವಿಸುವ ಕೆಲವು ಆಹಾರಗಳು ದೇಹದಲ್ಲಿ ಕೊಬ್ಬು ಮತ್ತು ಸಕ್ಕರೆ ಮಟ್ಟವನ್ನು ಇದ್ದಕ್ಕಿದ್ದಂತೆ ಹೆಚ್ಚಿಸಬಹುದು. ಹಾಗಾಗಿ ಈ ಆಹಾರಗಳಿಂದ ದೂರವಿರುವುದು ಒಳ್ಳೆಯದು.

ಹುರಿದ ಆಹಾರಗಳು: ಸಮೋಸಾ, ಪಕೋಡಾಗಳು.

ಜಂಕ್ ಫುಡ್: ಹೆಚ್ಚಿನ ಬೆಣ್ಣೆ ಅಂಶವಿರುವ ಬರ್ಗರ್‌ಗಳು ಮತ್ತು ಪಿಜ್ಜಾಗಳು.

ಸಿಹಿತಿಂಡಿ: ಜಲೇಬಿ ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಇತರ ಸಿಹಿತಿಂಡಿಗಳು.

ಬೀದಿ ಆಹಾರ: ಮಸಾಲಾ ಪುರಿಯಂತಹ ಮಸಾಲೆಯುಕ್ತ ಆಹಾರಗಳು.

ಇದನ್ನೂ ಓದಿ: ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ!

ಯಾಕೆ ಸೇವನೆ ಮಾಡಬಾರದು?

ಹುರಿದ ಆಹಾರಗಳು ನೇರವಾಗಿ ಟೈಪ್-2 ಮಧುಮೇಹಕ್ಕೆ ಸಂಬಂಧಿಸಿವೆ. ಅವು ಇನ್ಸುಲಿನ್ ಪ್ರತಿರೋಧವನ್ನು ಹೆಚ್ಚಿಸುತ್ತವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅಡ್ಡಿಪಡಿಸುತ್ತವೆ. ರಾತ್ರಿಯಲ್ಲಿ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಅಷ್ಟೇ ಅಲ್ಲ, ಗ್ಯಾಸ್, ಆಮ್ಲೀಯತೆ ಮತ್ತು ಉಬ್ಬರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಜೊತೆಗೆ ಕರಿದ ಆಹಾರಗಳು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ಉರಿಯೂತವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳಿಂದ ಸಾಬೀತಾಗಿದೆ. ಅವುಗಳಲ್ಲಿರುವ ಹೆಚ್ಚಿನ ಕ್ಯಾಲೋರಿ ದೇಹದಲ್ಲಿ ತ್ವರಿತ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತವೆ.

ಸಂಜೆ ತಿನ್ನಬಹುದಾದ ಆರೋಗ್ಯಕರ ತಿಂಡಿಗಳು:

  • ಬೆಣ್ಣೆ ಇಲ್ಲದೆ ಹುರಿದ ಮಖಾನ ಆರೋಗ್ಯಕ್ಕೆ ಒಳ್ಳೆಯದು.
  • ಬೇಯಿಸಿದ ಸಿಹಿ ಕಾರ್ನ್.
  • ಬಿಸಿ ತರಕಾರಿ ಸೂಪ್.
  • ಕಡಿಮೆ ಎಣ್ಣೆ ಬಳಸಿ ಮಾಡಿದ ಪನೀರ್ ಫ್ರೈ ಅಥವಾ ಮಸಾಲೆಯುಕ್ತ ಕಡಲೆ.
  • ಗೋಧಿ ಹಿಟ್ಟಿನಿಂದ ಮಾಡಿದ ಡಂಪ್ಲಿಂಗ್‌ಗಳು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ ಕೆಲಸಕ್ಕೆ ನಾಲ್ಕಾರು ಸಲ ಓಡಾಡುವಂತೆ ಆಗಲಿದ್ದು, ನೀವು ಯಾವ ಕಾರ್ಯಕ್ಕೆ ಪ್ರಯತ್ನ ಮಾಡುತ್ತಿದ್ದೀರಿ ಅದರ ಎಲ್ಲ ದಾಖಲೆ- ಪತ್ರಗಳು ಇವೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ನಿಮ್ಮಲ್ಲಿ ಕೆಲವರಿಗೆ ತೀವ್ರ ಬಗೆಯಲ್ಲಿ ಹಲ್ಲು ನೋವು ಕಾಡಬಹುದು. ಈ ಸಮಸ್ಯೆಗೆ ಮನೆ ಮದ್ದು ಮಾಡುವುದಕ್ಕಿಂತ ವೈದ್ಯರ ಭೇಟಿ ಮಾಡಿ, ಔಷಧೋಪಚಾರ ಮಾಡಿಕೊಳ್ಳುವುದು ಕ್ಷೇಮ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮಲ್ಲಿ ಕೆಲವರು ಮನೆಯಲ್ಲಿ ಸಮಾರಂಭ- ಕಾರ್ಯಕ್ರಮ ಆಯೋಜಿಸುವಂಥ ಯೋಗ ಇದೆ. ನಿಮ್ಮ ಸಂಬಂಧಿಗಳ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಂದೆ ನಿಂತು ಕೆಲಸ- ಕಾರ್ಯ ಮಾಡಬೇಕಾದ ಜವಾಬ್ದಾರಿ ವಹಿಸುವ ಸಾಧ್ಯತೆಯಾದರೂ ಇದೆ. ಹಣಕಾಸು ವಿಚಾರದಲ್ಲಿ ವೇಗವಾಗಿ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಳ ಬಾರದು. ಷೇರು- ಮ್ಯೂಚುವಲ್ ಫಂಡ್ ಹೂಡಿಕೆಗೆ ಸಲಹೆ ನೀಡುವಂಥ ಫೈನಾನ್ಷಿಯಲ್ ಅಡ್ವೈಸರ್- ಕನ್ಸಲ್ಟಂಟ್ ಆಗಿ ಕಾರ್ಯ ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಒತ್ತಡದ ದಿನ ಆಗಿರುತ್ತದೆ. ಕಣ್ತಪ್ಪಿನಿಂದ ಆದ ಸಮಸ್ಯೆಯನ್ನು ಬಗೆಹರಿಸಲು ಕಲಿತ ವಿದ್ಯೆ- ಬುದ್ಧಿಯನ್ನೆಲ್ಲ ಖರ್ಚು ಮಾಡುವಂತೆ ಆಗಲಿದೆ. ನಿಮ್ಮ ಜವಾಬ್ದಾರಿ ಇತರರಿಗೆ ವರ್ಗಾಯಿಸಬೇಡಿ. ಸಂಖ್ಯೆಗಳನ್ನು ಒಂದಕ್ಕೆ ನಾಲ್ಕು ಬಾರಿಗೆ ಪರೀಕ್ಷೆ ಮಾಡಿದ ನಂತರದಲ್ಲಿ ವ್ಯವಹಾರ ಮಾಡಿ. ಮೃದುವಾದ ಆಹಾರ ಪದಾರ್ಥಗಳ ಸೇವನೆಗೆ ಈ ದಿನ ಆದ್ಯತೆಯನ್ನು ನೀಡಿ. ಗಟ್ಟಿಯಾದ ಆಹಾರ ಪದಾರ್ಥಗಳಿಂದ ದೂರವಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಆದಾಯ ಜಾಸ್ತಿ ಮಾಡಿಕೊಳ್ಳಲು ಹಲವು ರೀತಿ ಪ್ರಯತ್ನಗಳನ್ನು ಮಾಡಲಿದ್ದೀರಿ. ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುವವರು, ಬರವಣಿಗೆ ಮೂಲಕ ಆದಾಯ ಪಡೆಯುವವರು ಇಂಥವರಿಗೆ ಹೊಸ ಅವಕಾಶಗಳು ಹುಡುಕಿ ಬರಲಿವೆ. ಮಕ್ಕಳ ಅನಾರೋಗ್ಯ ಸಮಸ್ಯೆ ಚಿಂತೆ ತಂದೊಡ್ಡಲಿದೆ. ಶೀತ, ಕಫ, ಕೆಮ್ಮು ಈ ರೀತಿಯ ತೊಂದರೆಗಳು ಜಾಸ್ತಿ ಆಗಲಿದ್ದು, ವೈದ್ಯರಿಗೆ ತೋರಿಸಿದ ನಂತರದಲ್ಲಿಯೂ ಹತೋಟಿಗೆ ಬಾರದೆ ಆತಂಕಕ್ಕೆ ಕಾರಣ ಆಗಲಿದೆ. ಹೆಣ್ಣುಮಕ್ಕಳ ಜೊತೆ ಮಾತನಾಡುವಾಗ, ಅದರಲ್ಲಿಯೂ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಬಳಕೆ ಮಾಡುವ ಪದಗಳ ಬಗ್ಗೆ ಜಾಗ್ರತೆಯಿಂದ ಇರಿ. ಅತ್ಯುತ್ಸಾಹದಲ್ಲೋ ಅಥವಾ ತಮಾಷೆ ಎಂದುಕೊಂಡು ನೀವಾಡಿದ ಮಾತುಗಳಿಂದ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ತನಕ ಹೋಗಬಹುದು. ಯಾವ ಉದ್ದೇಶಕ್ಕೆ ಹಣವನ್ನು ಉಳಿತಾಯ ಅಥವಾ ಹೂಡಿಕೆ ಮಾಡಿದ್ದೀರೋ ಆ ಮೊತ್ತವನ್ನು ಉದ್ದೇಶಿತ ಕಾರ್ಯಗಳಿಗೇ ಬಳಸಿಕೊಳ್ಳಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಮರಳು, ಇಟ್ಟಿಗೆ, ಸಿಮೆಂಟ್ ಮಾರಾಟದಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಇನ್ನು ಯಾರು ಮನೆ ನಿರ್ಮಾಣದ ಕಾಂಟ್ರಾಕ್ಟ್ ತೆಗೆದುಕೊಂಡು ಕೆಲಸ ಮಾಡಿಸುತ್ತೀರೋ ಅಂಥವರಿಗೆ ಹೊಸ ಕೆಲಸವೊಂದು ಸ್ನೇಹಿತರ ಮೂಲಕ ಬರಲಿದೆ. ಸಿವಿಲ್ ಎಂಜಿನಿಯರ್ ಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಉದ್ಯೋಗದ ಆಫರ್ ಬರಲಿದೆ. ಅಥವಾ ಈ ಹಿಂದೆ ಇಂಟರ್ ವ್ಯೂ ತೆಗೆದುಕೊಂಡಿದ್ದಲ್ಲಿ ಅದರಲ್ಲಿ ಆಯ್ಕೆ ಆಗಿರುವ ಬಗ್ಗೆ ಮಾಹಿತಿ ಬರಲಿದೆ. ಹಳೇ ಸ್ನೇಹ- ಪರಿಚಯಗಳನ್ನು ಮತ್ತೊಮ್ಮೆ ಮುಂದುವರಿಸಲು ಬೇಕಾದ ವೇದಿಕೆಯೊಂದು ಈ ದಿನ ನಿಮಗೆ ಸಿಗಲಿದೆ. ಹಣದ ವಿಚಾರಕ್ಕೆ ಸೋದರ- ಸೋದರಿಯರ ಜೊತೆಗೆ ಇರುವ ಅಭಿಪ್ರಾಯ ಭೇದಗಳನ್ನು ಬಗೆಹರಿಸಿಕೊಳ್ಳಲು ತಂದೆ- ತಾಯಿ ಸಹಾಯ ಮಾಡಲಿದ್ದಾರೆ. ದೂರ ಪ್ರಯಾಣ ಮಾಡುವುದರಿಂದ ನಿಮ್ಮಲ್ಲಿ ಕೆಲವರಿಗೆ ದೈಹಿಕವಾಗಿ ಒತ್ತಡ ಏರ್ಪಡಲಿದೆ. ಇತರರ ವೈಯಕ್ತಿಕ ವಿಷಯಗಳಿಗೆ ತಲೆ ಹಾಕಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮಗೆ ಗೊತ್ತಿರುವುದು ಮಾತ್ರ ಹೇಳ್ತೀನಿ ಎಂಬ ಮನಸ್ಥಿತಿಯಲ್ಲಿ ನೀವು ಇರುತ್ತೀರಿ. ಆದರೆ ತಮಗೆ ಏನು ಬೇಕೋ ಅದನ್ನು ತಿಳಿದು, ಆ ನಂತರ ಹೇಳಬೇಕು ಎಂದು ನೀವು ಕೆಲಸ ಮಾಡುವಂಥ ಉದ್ಯೋಗದಾತರು, ನಿಮ್ಮಿಂದ ಸೇವೆ ಪಡೆಯುವ ಕ್ಲೈಂಟ್ ಗಳು ಒತ್ತಡ ಹಾಕಲಿದ್ದಾರೆ. ಪೊಂಜಿ ಯೋಜನೆಗಳಿಂದ ದೂರ ಇರುವುದು ಬಹಳ ಮುಖ್ಯ. ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ರಿಟರ್ನ್ಸ್ ಸಿಗುತ್ತದೆ ಎಂಬ ಆಸೆ ತೋರಿಸಿ, ನಿಮ್ಮ ಸ್ನೇಹಿತರೋ ಸಂಬಂಧಿಗಳೋ ನಿಮಗಿಂತ ಮೇಲಿನ ಹುದ್ದೆಯಲ್ಲಿ ಕೆಲಸ ಮಾಡುವಂಥವರೋ ಒತ್ತಾಯ ಮಾಡಿದಲ್ಲಿ ಅಂಥವುಗಳಿಂದ ದೂರ ಉಳಿಯುವುದು ಸವಾಲಾಗಲಿದೆ. “ಇಲ್ಲ” ಎಂಬುದನ್ನು ಗಟ್ಟಿಯಾಗಿ ಹೇಳಿ. ಬಾಯಿ ರುಚಿಗೆ ಬಿದ್ದು, ನಿಮ್ಮ ದೇಹ ಪ್ರಕೃತಿಗೆ ಒಗ್ಗದ ಖಾದ್ಯ- ತಿನಿಸುಗಳನ್ನು ಸೇವಿಸಿ, ಕೆಲವು ದೈಹಿಕ ತೊಂದರೆ ಅನುಭವಿಸುವಂತೆ ಆಗಲಿದೆ. ಎಚ್ಚರಿಕೆ ವಹಿಸಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನೀವು ಬಹಳ ಪ್ರೀತಿಸುವ ವ್ಯಕ್ತಿಗಳನ್ನು ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ. ಬಿಡುವೇ ಸಿಗದಷ್ಟು ಕೆಲಸಗಳಲ್ಲಿ ಮುಳುಗಿ ಹೋಗುವಂತೆ ಆಗಲಿದ್ದು, ಸಮಯಕ್ಕೆ ಸರಿಯಾಗಿ ಊಟ- ತಿಂಡಿ ಸಹ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಲಿದೆ. ಮಾರ್ಕೆಟಿಂಗ್- ಜಾಹೀರಾತು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಹುದ್ದೆಯಲ್ಲಿ ಬಡ್ತಿ ಸಿಗುವ ಬಗ್ಗೆ ಮಾಹಿತಿ ಸಿಗಲಿದೆ. ರಾಜಕಾರಣಿಗಳಿಗೆ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮಹತ್ವಾಕಾಂಕ್ಷೆಯಿಂದ ನಡೆಸುವಂಥ ಸಮಾವೇಶದ ಮುಂದಾಳತ್ವ ನೀವೇ ವಹಿಸಬೇಕು, ಅದರ ಸಂಘಟನೆ, ಜನ ಸೇರಿಸುವುದು ಸೇರಿದಂತೆ ಇತರ ಕೆಲಸಗಳ ಹೊಣೆ ನೀವೇ ಹೊರಬೇಕು ಎಂದು ಸಹ ಸೂಚನೆ ಬರಲಿದೆ. ಸ್ಥೂಲಕಾಯದಿಂದ ಬಳಲುತ್ತಾ ಇರುವವರು ಸೂಕ್ತ ವೈದ್ಯೋಪಚಾರ ಪಡೆಯುವ ಕಡೆಗೆ ಗಮನ ನೀಡಲಿದ್ದೀರಿ. ಸರ್ಜರಿ ಮೂಲಕ ದೇಹದ ತೂಕ ಇಳಿಸುವುದಕ್ಕೆ ನಿಮ್ಮಲ್ಲಿ ಕೆಲವರು ನಿರ್ಧಾರ ಮಾಡುತ್ತೀರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಾ ನೀವು ಒಪ್ಪಿಸಿದ ಕೆಲಸಗಳನ್ನು ಆಗ- ಈಗ ಎಂದು ಮುಂದಕ್ಕೆ ಹಾಕುತ್ತಾ ಇರುವವರ ಬಳಿ ಗೆರೆ ಕೊಯ್ದಂತೆ ಮಾತನಾಡಲಿದ್ದೀರಿ. ಒಂದು ವೇಳೆ ಈಗಾಗಲೇ ಆ ಕೆಲಸದ ಸಲುವಾಗಿ ಅಡ್ವಾನ್ಸ್ ರೂಪದಲ್ಲಿ ಹಣವನ್ನು ನೀಡಿದ್ದಲ್ಲಿ ಅದನ್ನು ಹಿಂತಿರುಗಿಸುವಂತೆ ಕೇಳಲಿದ್ದೀರಿ. ನಿಮ್ಮ ಸ್ನೇಹಿತರ ಪೈಕಿ ಒಬ್ಬರು ತಮಗೆ ಸಾಲದ ಅಗತ್ಯ ಇದ್ದು, ಜಾಮೀನು ನೀವು ನೀಡಬೇಕು ಎಂದು ಕೇಳಿಕೊಂಡು ಬರಬಹುದು. ಆಟೋ ಚಾಲಕರು ಸಂಚಾರ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹೆಚ್ಚಿನ ಮೊತ್ತದ ದಂಡವನ್ನು ಪಾವತಿಸುವಂಥ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮ್ಮಲ್ಲಿ ಕೆಲವರಿಗೆ ಗಂಭೀರ ಸ್ವರೂಪದಲ್ಲಿ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳಲಿದ್ದು, ವೈದ್ಯರನ್ನು ಭೇಟಿ ಮಾಡಲೇಬೇಕು ಎಂಬ ಪರಿಸ್ಥಿತಿ ಎದುರಾಗಲಿದೆ. ವೈದ್ಯಕೀಯ ವೃತ್ತಿಯಲ್ಲಿ ಇರುವವರಿಗೆ ವಿವಿಧ ಅವಕಾಶಗಳು ದೊರೆಯಲಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಇತರರಿಗೆ ಹೊಳೆಯದ ಕೆಲವು ಸಂಗತಿಗಳು ನಿಮಗೆ ಸುಲಭವಾಗಿ ಮಾಡಿ ಮುಗಿಸುವುದಕ್ಕೆ ದಾರಿಗಳು ಗೋಚರ ಆಗಲಿವೆ. ನಿಮ್ಮನ್ನು ಯಾವುದಾದರೂ ಹಗರಣದಲ್ಲಿ ಸಿಲುಕಿಸಬೇಕು ಎಂದು ಪ್ರಯತ್ನ ಮಾಡುತ್ತಾ ಇರುವವರು ತಾವೇ ತೊಂದರೆಗೆ ಸಿಕ್ಕಿ ಹಾಕಿಕೊಳ್ಳಲಿದ್ದಾರೆ. ನಿಮ್ಮ ವೃತ್ತಿ ಅಥವಾ ಉದ್ಯೋಗಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಮಾಹಿತಿಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಕಮಿಷನ್ ಆಧಾರದಲ್ಲಿ ಕೆಲಸ ಮಾಡುತ್ತಾ ಇದ್ದೀರಿ, ಅಂಥವರಿಗೆ ಪ್ರಭಾವಶಾಲಿ ಆದ ವ್ಯಕ್ತಿಯೊಬ್ಬರ ಮೂಲಕ ಹಲವು ಸಂಸ್ಥೆಗಳ ಸಂಪರ್ಕ ದೊರೆಯಲಿದ್ದು, ಆದಾಯದ ಪ್ರಮಾಣ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ. ಇನ್ನು ನಿಮ್ಮಲ್ಲಿ ಕೆಲವರು ಸಂಗಾತಿಯ ಸಲುವಾಗಿ ಕೆಲವು ದುಬಾರಿ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಅಚಾನಕ್ಕಾಗಿ ದೂರ ಪ್ರಯಾಣ ಮಾಡಲೇ ಬೇಕಾದ ಸನ್ನಿವೇಶಗಳು ಸೃಷ್ಟಿ ಆಗಲಿದ್ದು, ಇದಕ್ಕಾಗಿ ಹೆಚ್ಚಿನ ಖರ್ಚು ಸಹ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಚಿಕ್ಕ- ಪುಟ್ಟ ಕಟ್ಟಡ ದುರಸ್ತಿ ಕಾರ್ಯಗಳನ್ನು ಮಾಡಿಸುತ್ತಾ ಇರುವವರಿಗೆ ದೊಡ್ಡ ಕೆಲಸವೊಂದು ಈ ದಿನ ದೊರೆಯುವಂಥ ಯೋಗ ಇದೆ. ಈ ಹಿಂದೆ ನೀವು ವ್ಯಕ್ತಿಯೊಬ್ಬರಿಗೆ ಮಾಡಿಕೊಟ್ಟ ಕೆಲಸ ಹಾಗೂ ಆ ಸಮಯದಲ್ಲಿ ನೀವು ಪಟ್ಟ ಶ್ರಮ, ತೋರಿಸಿದ ನಿಷ್ಠೆ- ಪ್ರಾಮಾಣಿಕತೆಗೆ ಫಲ ದೊರೆಯಲಿದೆ. ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಅಥವಾ ನಿಮಗೆ ಇವೆಲ್ಲ ಗೊತ್ತಿದೆ ಅಂತಲೋ ಹೇಳುವುದಕ್ಕೆ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಅದರಲ್ಲಿ ಬದಲಾವಣೆ ಮಾಡಬೇಕು ಎಂಬ ಸಲಹೆಯನ್ನು ವೈದ್ಯರು ನೀಡುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

Source link

‘ಸೂರ್ಯ ನನಗೆ ಬಿಟ್ಟು ಬಿಡದೆ ಮೆಸೇಜ್ ಮಾಡ್ತಿದ್ದ’; ಬಾಲಿವುಡ್​ ನಟಿಯ ಅಚ್ಚರಿಯ ಹೇಳಿಕೆ – Kannada News | Khushi Mukherjee’s Shocking Claim: Suryakumar Yadav and Cricketers Messaged Her

ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡು ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup) ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ (Khushi Mukherjee) ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ ಎಂದಿದ್ದಾರೆ.

ನನಗೆ ಮೆಸೇಜ್​ಗಳನ್ನು ಕಳುಹಿಸುತ್ತಿದ್ದರು

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವಾರು ಕ್ರಿಕೆಟಿಗರು ತಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಟಿ20 ತಂಡದ ನಾಯಕ ಸೂರ್ಯಕುಮಾರ್ ನನಗೆ ಬಹಳಷ್ಟು ಮೆಸೇಜ್​ಗಳನ್ನು ಕಳುಹಿಸುತ್ತಿದ್ದರು. ಆದರೆ ಈಗ ಅವರು ಹೆಚ್ಚು ಸಂವಹನ ನಡೆಸುತ್ತಿಲ್ಲ. ಹಾಗೆಯೇ ನಾನು ಯಾರೊಂದಿಗೂ ರಿಲೇಷನ್​ಶಿಪ್​ನಲ್ಲಿ ಇರಲು ಬಯಸುವುದಿಲ್ಲ ಮತ್ತು ಯಾವುದೇ ಲಿಂಕ್-ಅಪ್ ವದಂತಿಗಳನ್ನು ಇಷ್ಟಪಡುವುದಿಲ್ಲ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ, ನಟಿ ಖುಷಿ ಮುಖರ್ಜಿ ಸೂರ್ಯಕುಮಾರ್ ಯಾದವ್ ಬಗ್ಗೆ ಹೀಗೆ ಹೇಳಿದ್ದಾರೆ, ‘ಅನೇಕ ಕ್ರಿಕೆಟಿಗರು ನನ್ನ ಫಾಲೋ ಮಾಡುತ್ತಿದ್ದಾರೆ. ಸೂರ್ಯಕುಮಾರ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು. ಈಗ ನಾವು ಹೆಚ್ಚು ಮಾತನಾಡುವುದಿಲ್ಲ. ನಾನು ಯಾರೊಂದಿಗೂ ರಿಲೇಷನ್​ಶಿಪ್​ನಲ್ಲಿ ಇರಲು ಬಯಸುವುದಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಖುಷಿ ಮುಖರ್ಜಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 1.5 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಆದರೆ ಅವರು ಮಾತ್ರ ಯಾರನ್ನೂ ಫಾಲೋ ಮಾಡುತ್ತಿಲ್ಲ.

ಟಿ20 ವಿಶ್ವಕಪ್ ತಯಾರಿಯಲ್ಲಿ ಸೂರ್ಯ

ಖುಷಿ ಮುಖರ್ಜಿ ಅವರ ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆಯಾದರೂ ಈ ಬಗ್ಗೆ ಸೂರ್ಯಕುಮಾರ್ ಯಾದವ್ ಯಾವುದೇ ಸ್ಪಷ್ಟನೇ ನೀಡಿಲ್ಲ. ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್, ತಮ್ಮ ಹಳೆಯ ಲಯವನ್ನು ಕಂಡುಕೊಳ್ಳುವುದರ ಜೊತೆಗೆ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟದತ್ತ ಕೊಂಡೊಯ್ಯಬೇಕಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್‌ಗೆ ಮುನ್ನ ತಯಾರಿ ನಡೆಸಲು ಇದು ಟೀಂ ಇಂಡಿಯಾಕ್ಕೆ ಕೊನೆಯ ಅವಕಾಶವಾಗಿದೆ. ಇದರ ನಂತರ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಫೆಬ್ರವರಿಯಲ್ಲಿ ಟಿ20 ವಿಶ್ವಕಪ್ ಆಡಲಿದೆ. ಐಸಿಸಿ ಟೂರ್ನಮೆಂಟ್‌ನಲ್ಲಿ ಸೂರ್ಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಇದೇ ಮೊದಲು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:38 pm, Tue, 30 December 25

Source link

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು – Kannada News | Bengaluru: New Year Security Preparations Underway on MG Road and Brigade Road

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು? – Kannada News | Siddaramaiah’s Letter to PM Modi: Karnataka CM Demands Halt to VB G Ramji Act

ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್​​ 30: ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು ಶೇ. 90 ಮತ್ತು ಶೇ.10 ರಾಜ್ಯದ ಹಂಚಿಕೆಯಿತ್ತು. ಆದರೆ ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದ್ದು, 258, 250ನೇ ವಿಧಿಯ ಉಲ್ಲಂಘನೆ ಆಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಪ್ರಸ್ತುತ MGNREGA ಚೌಕಟ್ಟಿನಡಿ, ಪ್ರಮುಖ ರಾಜ್ಯಗಳಲ್ಲಿ ಕೇಂದ್ರ–ರಾಜ್ಯಗಳ ನಡುವೆ 90:10ರ ಅನುದಾನ ಹಂಚಿಕೆಯ ವ್ಯವಸ್ಥೆ ಇದೆ. ಹೊಸ ಕಾಯ್ದೆಯು ಇದನ್ನು ಬಹುತೇಕ ರಾಜ್ಯಗಳಿಗೆ 60:40ಕ್ಕೆ ಬದಲಾಯಿಸಿದೆ. ಇದು ಈಗಾಗಲೇ ಜಿಎಸ್‌ಟಿ ಪರಿಹಾರದ ಕೊರತೆ ಹಾಗೂ ಅನ್ಯಾಯಕರ ಹಣಕಾಸು ವಿಂಗಡಣೆ ಕಾರಣದಿಂದ ಆರ್ಥಿಕ ಒತ್ತಡದಲ್ಲಿರುವ ರಾಜ್ಯಗಳ ಮೇಲೆ ಹೆಚ್ಚಿನ ಭಾರ ಹೇರುತ್ತಿದೆ. ಈ ಬದಲಾವಣೆಯನ್ನು ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು 

ಬಿತ್ತನೆ ಹಾಗೂ ಕೊಯ್ಲಿನ ಗರಿಷ್ಠ ಕಾಲಘಟ್ಟದಲ್ಲಿ ಒಟ್ಟು 60 ದಿನಗಳ ಅವಧಿಯಲ್ಲಿ ಈ ಕಾಯ್ದೆಯಡಿ ಯಾವುದೇ ಕೆಲಸಗಳನ್ನು ಕೈಗೊಳ್ಳಬಾರದೆಂದು ರಾಜ್ಯಗಳು ಮುಂಚಿತವಾಗಿ ಅಧಿಸೂಚನೆ ಹೊರಡಿಸಬೇಕೆಂದು ಹೊಸ ಕಾಯ್ದೆಯು ಸೂಚಿಸುತ್ತದೆ. ಆ ಅವಧಿಯಲ್ಲಿ ಕೃಷಿ ಚಟುವಟಿಕೆ ಹೆಚ್ಚಾಗಬಹುದಾದರೂ ಇಂತಹ ಸಾಮಾನ್ಯ ನಿಷೇಧವು ಕೂಲಿ ಉದ್ಯೋಗಕ್ಕೆ ಅವಲಂಬಿತರಾಗಿರುವವರ, ವಿಶೇಷವಾಗಿ ಅತೀ ದುರ್ಬಲ ವರ್ಗಗಳಾದ ಆದಿವಾಸಿ ಮತ್ತು ಹಿಂದುಳಿದ ಸಮುದಾಯಗಳ ಹಕ್ಕನ್ನು ಕುಗ್ಗಿಸುತ್ತದೆ.

ಮುಖ್ಯವಾಗಿ, ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಆತುರವಾಗಿ ಜಾರಿಗೊಳಿಸಿರುವುದು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಈ ವಿಧಿಗಳು, ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟುಗಳನ್ನು ಜಾರಿಗೊಳಿಸುವ ಮೊದಲು, ಹಣಕಾಸು ಫೆಡರಲಿಸಂ, ಸಮಾನ ಅಭಿವೃದ್ಧಿ ಮತ್ತು ಸ್ಥಳೀಯ ಆಡಳಿತದ ಬಲವರ್ಧನೆಗೆ ಒತ್ತು ನೀಡುತ್ತಾ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸ್ಪಷ್ಟವಾಗಿ ಹೇಳುತ್ತವೆ. ಇಂತಹ ನಡೆ ಸಹಕಾರಿ ಫೆಡರಲಿಸಂನ ಮೂಲಾಧಾರವನ್ನೇ ದುರ್ಬಲಗೊಳಿಸುತ್ತದೆ.

ಉದ್ಯೋಗ ಭರವಸೆ ಕಾಯ್ದೆ ಕೇವಲ ಕಲ್ಯಾಣ ಯೋಜನೆಯಲ್ಲ; ಅದು ಮಹಾತ್ಮ ಗಾಂಧಿಯವರ ಹೆಸರನ್ನು ಹೊತ್ತಿರುವ, ಗ್ರಾಮ ಸ್ವರಾಜ್ಯ ಮತ್ತು ಅಂತ್ಯೋದಯದ ಮೌಲ್ಯಗಳನ್ನು ಪ್ರತಿಬಿಂಬಿಸುವ, ಐತಿಹಾಸಿಕ ಹಾಗೂ ಜಾಗತಿಕವಾಗಿ ಪ್ರಶಂಸಿತ ಹಕ್ಕು ಆಧಾರಿತ ಕಾನೂನು. ಈ ಕಾಯ್ದೆಯಿಂದ ಅವರ ಹೆಸರನ್ನು ತೆಗೆದುಹಾಕುವುದು ದುರ್ಭಾಗ್ಯಕರ ಸಂದೇಶವನ್ನು ನೀಡುತ್ತದೆ ಮತ್ತು ಅದರ ನೈತಿಕ ಶಕ್ತಿಯನ್ನು ಕುಗ್ಗಿಸುತ್ತದೆ. ಈ ವಿಧಾನವು ಸಹಕಾರಿ ಒಕ್ಕೂಟದ ನಾಶಕ್ಕೆ ದಾರಿಯಾಗಿರುವ ಕಾರಣ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಸ್ಥಗಿತಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IND-W vs SL-W: ವರ್ಷದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ – Kannada News | India Women vs Sri Lanka T20 Final: Kamalini Debuts, IND Aims for Clean Sweep

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಭಾರತ ಇದುವರೆಗೆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿರುವ ನಾಲ್ಕು ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕ ಪಂದ್ಯವಾಗಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ನೋಡುತ್ತಿದೆ. ಹಾಗೆಯೇ ಟೀಂ ಇಂಡಿಯಾಗೆ ಇದು ವರ್ಷದ ಕೊನೆಯ ಪಂದ್ಯವಾಗಿದ್ದು, ಗೆಲುವಿನೊಂದಿಗೆ ವರ್ಷವನ್ನು ಅಂತ್ಯಗೊಳಿಸಲು ಪ್ರಯತ್ನಿಸಲಿದೆ.

ಟಾಸ್ ಗೆದ್ದ ಶ್ರೀಲಂಕಾ

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಪರ ಜಿ ಕಮಲಿನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಸ್ಮೃತಿ ಮಂಧಾನ ಮತ್ತು ರೇಣುಕಾ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕಮಲಿನಿ ಜೊತೆಗೆ, ಸ್ನೇಹ್ ರಾಣಾ ಅವರಿಗೆ ಕೂಡ ಆಡುವ ಅವಕಾಶ ನೀಡಲಾಗಿದೆ. ಏತನ್ಮಧ್ಯೆ, ಶ್ರೀಲಂಕಾ ತಂಡವು ಆಡುವ ಹನ್ನೊಂದರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ.

ಉಭಯ ತಂಡಗಳು

ಭಾರತ ತಂಡ: ಶಫಾಲಿ ವರ್ಮಾ, ಜಿ ಕಮಲಿನಿ, ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹ ರಾಣಾ, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಶ್ರೀ ಚರಣಿ.

ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಮರಿ ಅಟಾಪಟ್ಟು (ನಾಯಕ), ಇಮಿಶಾ ದುಲಾನಿ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ರಶ್ಮಿಕಾ ಸೇವಂಡಿ, ಕೌಶಾನಿ ನುತ್ಯಂಗನಾ (ವಿಕೆಟ್‌ಕೀಪರ್), ನಿಮಾಶಾ ಮದುಶಾನಿ, ಇನೋಕಾ ರಣವೀರ, ಮಾಲ್ಕಿ ಮಾದರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:49 pm, Tue, 30 December 25

Source link

Exit mobile version