ಕಪ್ಪೆ ಚಿಪ್ಪುಗಾಗಿ ಹೋದವರು ಜಲಸಮಾಧಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – Kannada News | Death toll rises to 10 In Bhatkal Hakkalu River Tragedy
ಕಾರವಾರ, (ಮೇ 24): ಕಪ್ಪೆ ಚಿಪ್ಪು ಹೆಕ್ಕಲು ನದಿಗೆ ಹೋದವರು ವಾಪಸ್ ಬಾರಲೇ ಇಲ್ಲ. ನೀರಿನ ಹರಿವು ತಿಳಿಯದೇ ಆಳಕ್ಕಿಳಿದವರು ಮೇಲೇಳಲೇ ಇಲ್ಲ. ಒಬ್ಬರಲ್ಲ ಇಬ್ಬರಲ್ಲ ಇಡೀ ಕುಟುಂಬವೇ ಜಲಸಮಾಧಿಯಾಗಿದೆ. ಉತ್ತರ ಕನ್ನಡದ ಭಟ್ಕಳ (Bhatkal) ತಟ್ಟೆ ಹಕ್ಕಲು ನದಿಯಲ್ಲಿ ಘನಘೋರ ದುರಂತ (Hakkalu River Tragedy) ನಡೆದುಹೋಗಿದ್ದು, ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರು ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹೌದು..ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕಲ್ಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ…