ಮಾದಪ್ಪನ ಭಕ್ತರು ಮೂತ್ರ ವಿಸರ್ಜನೆ, ಬಹಿರ್ದೆಸೆಗೆ ಕಾಡಿನ ಒಳ ಹೋಗುವಂತಿಲ್ಲ! ಅರಣ್ಯ ಸಿಬ್ಬಂದಿ ಕಟ್ಟಪ್ಪಣೆ, ಕಾರಣ ಇಲ್ಲಿದೆ – Kannada News | No Entry to Forest for Devotees at Male Mahadeshwara Betta: Safety Alert After Leopard Attack Ahead of Shivaratri Jatra

ಮಲೆ ಮಹದೇಶ್ವರಬೆಟ್ಟ (ಸಂಗ್ರಹ ಚಿತ್ರ)Image Credit source: tv9

ಚಾಮರಾಜನಗರ, ಫೆಬ್ರವರಿ 6: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬ ಇತ್ತೀಚೆಗೆ ಚಿರತೆ ದಾಳಿಗೆ ಬಲಿಯಾದ ಘಟನೆ ಬಳಿಕ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹೈಅಲರ್ಟ್ ಘೋಷಿಸಿದೆ. ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಪಾದಯಾತ್ರಿಗಳ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವೀಣ್ ಎಂಬ ಭಕ್ತ ಇತ್ತೀಚೆಗೆ ಸಾವನ್ನಪ್ಪಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಸುರಕ್ಷತಾ ವ್ಯವಸ್ಥೆಯನ್ನು ಬಲಪಡಿಸಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಭಕ್ತರ ಮೇಲೆ ಹದ್ದಿನ ಕಣ್ಣು ಇಡಲು ಅರಣ್ಯಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿವೆ.

ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯೆ ಹೈಅಲರ್ಟ್ ಘೋಷಿಸಲಾಗಿದ್ದು, ಪ್ರತಿ ಕಿಲೋಮೀಟರ್‌ಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ. ಒಟ್ಟು 8 ತಂಡಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ತಂಡಕ್ಕೂ ಬಂದೂಕು, ವಾಕಿಟಾಕಿ, ಮಚ್ಚು, ಲಾಠಿ ಹಾಗೂ ಪಟಾಕಿಗಳನ್ನು ವಿತರಿಸಲಾಗಿದೆ. ಡಿಆರ್‌ಎಫ್‌ಒ, ಪೊಲೀಸ್ ಸಿಬ್ಬಂದಿ, ವಾಚರ್ ಹಾಗೂ ಎಪಿಸಿ ಕ್ಯಾಂಪ್ ಸಿಬ್ಬಂದಿ ಸೇರಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಐದು ಸಿಬ್ಬಂದಿ ಈ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.

ಪಾದಯಾತ್ರೆ ಮಾಡುವವರು ಗುಂಪುಗುಂಪಾಗಿ ಬೆಟ್ಟ ಏರಲು ಸೂಚನೆ

ಪಾದಯಾತ್ರೆ ಮಾಡುವ ಭಕ್ತರು ಗುಂಪು ಗುಂಪಾಗಿ ಮಾತ್ರ ಬೆಟ್ಟ ಏರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಕಾಡಿನ ಒಳಗೆ ಒಬ್ಬರೇ ತೆರಳಬಾರದು, ಮೂತ್ರ ವಿಸರ್ಜನೆ ಅಥವಾ ಬಹಿರ್ದೆಸೆಗೆ ಕಾಡಿನೊಳಗೆ ಹೋಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಡ್ರೋನ್ ಕ್ಯಾಮರಾ ಮೂಲಕವೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 14ರಿಂದ 18ರವರೆಗೆ ಮಲೆ ಮಹದೇಶ್ವರ ಶಿವರಾತ್ರಿ ಜಾತ್ರೆ

ಫೆಬ್ರವರಿ 14ರಿಂದ 18ರವರೆಗೆ ನಡೆಯಲಿರುವ ಮಲೆ ಮಹದೇಶ್ವರ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಮನ್ವಯದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಜನವರಿ 21 ರಂದು ಮುಂಜಾನೆ ಮಲೆಮಹದೇಶ್ವರ ಬೆಟ್ಟಕ್ಕೆ ಮಾದಪ್ಪನ ದರ್ಶನಕ್ಕಾಗಿ ಮಂಡ್ಯದ ಚೀರನಹಳ್ಳಿ ಹಾಗೂ ನೆರೆಯ ಗ್ರಾಮಗಳಿಂದ 150ಕ್ಕೂ ಹೆಚ್ಚು ಜನರು ಪಾದಯಾತ್ರೆ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಪ್ರವೀಣ್ ಕುಮಾರ್ ಎಂಬವರ ಮೇಲೆ ಮುಗಿಬಿದ್ದಿದ್ದ ಚಿರತೆ ಕತ್ತು ಸೀಳಿ ರಕ್ತ ಹೀರಿ ಬಳಿಕ ಕಾಡಿನೊಳಕ್ಕೆ ಎಳೆದೊಯ್ದಿತ್ತು. ನಂತರ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸರೆಹಿಡಿದಿತ್ತು. ಆ ಬಳಿಕ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 6th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (Gold Rates) ಮತ್ತೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿಸಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,426 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,965 ರೂ
  • ಚೆನ್ನೈ: 14,120 ರೂ
  • ಮುಂಬೈ: 13,965 ರೂ
  • ದೆಹಲಿ: 13,980 ರೂ
  • ಕೋಲ್ಕತಾ: 13,965 ರೂ
  • ಕೇರಳ: 13,965 ರೂ
  • ಅಹ್ಮದಾಬಾದ್: 13,970 ರೂ
  • ಜೈಪುರ್: 13,980 ರೂ
  • ಲಕ್ನೋ: 13,980 ರೂ
  • ಭುವನೇಶ್ವರ್: 13,965 ರೂ

ಇದನ್ನೂ ಓದಿ: ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 577 ರಿಂಗಿಟ್ (13,171 ರುಪಾಯಿ)
  • ದುಬೈ: 541.75 ಡಿರಾಮ್ (13,315 ರುಪಾಯಿ)
  • ಅಮೆರಿಕ: 150.50 ಡಾಲರ್ (13,585 ರುಪಾಯಿ)
  • ಸಿಂಗಾಪುರ: 191.50 ಸಿಂಗಾಪುರ್ ಡಾಲರ್ (13,572 ರುಪಾಯಿ)
  • ಕತಾರ್: 535.50 ಕತಾರಿ ರಿಯಾಲ್ (13,263 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,263 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (13,613 ರುಪಾಯಿ)
  • ಕುವೇತ್: 44.44 ಕುವೇತಿ ದಿನಾರ್ (13,127 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗೆ 50,000 ರೂ. ಬಾಡಿಗೆ, ಆದರೆ ಅಲ್ಲಿನ ಸೌಲಭ್ಯಗಳನ್ನು ಬಳಸಲು ಸಮಯವಿಲ್ಲ – Kannada News | High Rent, No Time: Bangalore IT Pro’s Viral Work Life Balance Dilemma

ಬೆಂಗಳೂರು, ಫೆ.6: ಬೆಂಗಳೂರಿನಲ್ಲಿ ಮನೆಗಳು ದುಬಾರಿ. ಐಟಿ, ಬಿಟಿ ಕಂಪನಿಗಳಲ್ಲಿ ವರ್ಕ್​ ಮಾಡುವವರಿಗೆ ಇಲ್ಲಿ ಈ ದುಬಾರಿ ಮನೆಗಳು ವಾಸಿಸಲು ಸೂಕ್ತ. ಅದಕ್ಕಾಗಿ ಇವರು ಲಕ್ಷ ಲಕ್ಷ ಹಣವನ್ನು ಇದಕ್ಕಾಗಿ ವ್ಯಯ ಮಾಡುತ್ತಾರೆ. ಆದರೆ ಈ ದುಬಾರಿ ಮನೆಗಳಲ್ಲಿರುವ ಎಲ್ಲ ಸೌಕರ್ಯಗಳನ್ನು (Bangalore techie rent) ಸರಿಯಾಗಿ ಉಪಯೋಗ ಮಾಡುವುದಿಲ್ಲ. ಇದೀಗ ಇಂತಹದೇ ವಿಚಾರದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 50,000 ರೂಪಾಯಿ ಬಾಡಿಗೆ ಪಾವತಿಸುತ್ತಿರುವ ವ್ಯಕ್ತಿಯೊಬ್ಬರು, ತಮಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಯಾವುದೇ ಸೌಲಭ್ಯಗಳನ್ನು ಬಳಸಲು ಸಮಯವೇ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಶುಭಂ ಲೋಂಧೆ ಎಂಬ ಐಟಿ ಉದ್ಯೋಗಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ. ಅವರು ವಾಸಿಸುತ್ತಿರುವ ಅಪಾರ್ಟ್‌ಮೆಂಟ್‌ನಲ್ಲಿ ಸ್ವಿಮ್ಮಿಂಗ್ ಪೂಲ್, ಜಿಮ್ ಮತ್ತು ಸ್ನೂಕರ್ ಏರಿಯಾದಂತಹ ಐಷಾರಾಮಿ ಸೌಲಭ್ಯಗಳಿವೆ. ಆದರೆ, ದಿನವಿಡೀ ಕೆಲಸದ ಒತ್ತಡ ಮತ್ತು ಆಯಾಸದ ಕಾರಣ ಈ ಯಾವುದೇ ಸೌಲಭ್ಯಗಳನ್ನು ಬಳಸಲು ಅವರಿಗೆ ಸಮಯ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. “ಬಾಡಿಗೆ ಕಟ್ಟಲು ಹಣವಿದೆ, ಆದರೆ ಸೌಲಭ್ಯ ಅನುಭವಿಸಲು ಸಮಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ

ವಾರದ ದಿನಗಳಲ್ಲಿ ಕೆಲಸದ ಜಂಜಾಟ, ವಾರಾಂತ್ಯದಲ್ಲಿ ಕೇವಲ ವಿಶ್ರಾಂತಿ ಪಡೆಯುವುದರಲ್ಲೇ ಸಮಯ ಕಳೆದುಹೋಗುತ್ತಿದೆ. ಇದು ಕೇವಲ ಅವರೊಬ್ಬರ ಸಮಸ್ಯೆಯಲ್ಲ, ಬೆಂಗಳೂರಿನ ಬಹುತೇಕ ಐಟಿ ವೃತ್ತಿಪರರ ಕತೆಯಾಗಿದೆ ಎಂದು ಅವರು ಹೇಳಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ಸಮಯ ಮತ್ತು ನೆಮ್ಮದಿಯನ್ನು ತಲುಪಲು ಸಾಧ್ಯವಾಗದೆ ನಮ್ಮ ಜೀವನ “ಇಲಿ ಓಟ”ದಂತಾಗಿದೆ ಎಂದು ಒಬ್ಬರು ಹೇಳಿದ್ದಾರೆ. ಸಮಯ ಎನ್ನುವುದು ಆದ್ಯತೆಯ ಮೇಲೆ ನಿರ್ಧರಿತವಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವು ಹೇಳಿದ್ದು ಸರಿಯಾಗಿದೆ ಎಂದು ಮತ್ತೊಬ್ಬರು ಹೇಳಿದ್ದಾರೆ.ಪ್ರತಿಯೊಬ್ಬರಿಗೂ ಸಮಯವಿದೆ. ಆದರೆ ಅದನ್ನು ನಿಮಯಕ್ಕೆ ಅನುಗುಣವಾಗಿ ಮಾಡಿಕೊಳ್ಳಬೇಕು ಎಂದು ಒಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ – Kannada News | RBI repo rate remain unchanged on 5.25pc, while GDP and inflation forecast revised

ನವದೆಹಲಿ, ಫೆಬ್ರುವರಿ 6: ಆರ್​ಬಿಐನ ರಿಪೋ ದರದಲ್ಲಿ ಈ ಬಾರಿ ಬದಲಾವಣೆ ಮಾಡಲಾಗಿಲ್ಲ. ರಿಪೋ ದರವನ್ನು ಶೇ 5.25ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿಯ ಎಲ್ಲಾ 6 ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ.

ಆರ್​ಬಿಐ ಪಾಲಿಸಿ ದರಗಳು

  • ರಿಪೋ ದರ: ಶೇ. 5.25
  • ರಿವರ್ಸ್ ರಿಪೋ ದರ: ಶೇ. 3.35
  • ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ದರ (ಎಸ್​ಡಿಎಫ್): ಶೇ. 5
  • ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ (ಎಂಎಸ್​ಎಫ್): ಶೇ. 5.50
  • ಬ್ಯಾಂಕ್ ದರ: ಶೇ. 5.50
  • ಸಿಆರ್​ಆರ್: ಶೇ. 3
  • ಎಸ್​ಎಲ್​ಆರ್: ಶೇ. 18

ಇದನ್ನೂ ಓದಿ: ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ

ಜಿಡಿಪಿ ಶೇ. 7.4 ಬೆಳವಣಿಗೆ ಅಂದಾಜು

ಪ್ರಸಕ್ತ ಹಣಕಾಸು ವರ್ಷಕ್ಕೆ (2025-26) ಭಾರತದ ಆರ್ಥಿಕ ಬೆಳವಣಿಗೆಯ ಅಂದಾಜನ್ನು ಎಂಪಿಸಿ ಸಭೆ ಪರಿಷ್ಕರಿಸಿದ್ದು, ಶೇ. 7.4ರಷ್ಟು ಜಿಡಿಪಿ ಹಿಗ್ಗಬಹುದು ಎಂದಿದೆ. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ಜಿಡಿಪಿ ಶೇ. 7.3 ಹೆಚ್ಚಬಹುದು ಎಂದು ಅಭಿಪ್ರಾಯ ಪಟ್ಟಿತ್ತು.

ಹಣದುಬ್ಬರ ಶೇ. 2.1 ಇರಬಹುದು

ಪ್ರಸಕ್ತ ಹಣಕಾಸು ವರ್ಷಕ್ಕೆ ಹಣದುಬ್ಬರ ಶೇ. 2.1ರಷ್ಟು ಆಗಬಹುದು ಎಂದು ಆರ್​ಬಿಐನ ಎಂಪಿಸಿ ಸಭೆಯಲ್ಲಿ ವಿಮರ್ಶಿಸಲಾಗಿದೆ. ಈ ಹಿಂದಿನ ಸಭೆಯಲ್ಲಿ ಹಣದುಬ್ಬರ ಶೇ. 2ರಷ್ಟು ಇರಬಹುದು ಎಂದು ಅಂದಾಜಿಸಲಾಗಿತ್ತು. ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಹಣದುಬ್ಬರ ಶೇ. 3.2ಕ್ಕೆ ಏರಬಹುದು ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ರೂ. ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! – Kannada News | Massive Cybercrime Ring Led by Chinese Handlers in Nepal Busted by Mangaluru Police

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು!

ಮಂಗಳೂರು, ಫೆಬ್ರುವರಿ 06: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು (Cyber Fraud Network) ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು

ಮಂಗಳೂರಿನ ಸೈಬರ್ ಎಕನಾಮಿಕ್ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಯ ಜಾಡು ಹಿಡಿದು ಆರೋಪಿಗಳವರೆಗೆ ಪೊಲೀಸರು ತಲುಪಿದ್ದರು. ಬಂಧಿತ ತಂಡದಲ್ಲಿ ಭಾರತೀಯರ ಜೊತೆಗೆ ಚೀನಾ ಮೂಲದ ವಂಚಕರು ಸೇರಿದ್ದು, ಇಡೀ ಜಾಲವನ್ನು ಚೀನಾದ ಹ್ಯಾಂಡ್ಲರ್‌ಗಳು ನಿಯಂತ್ರಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಆರೋಪಿಗಳಿಂದ ಲ್ಯಾಪ್‌ಟಾಪ್‌ಗಳು, 21 ಮೊಬೈಲ್ ಫೋನ್‌ಗಳು, 20 ವಿವಿಧ ಕಂಪನಿಯ ಸಿಮ್ ಕಾರ್ಡ್‌ಗಳು ಹಾಗೂ 20 ಬ್ಯಾಂಕ್ ಡೆಬಿಟ್–ಕ್ರೆಡಿಟ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಒಂದೇ ಖಾತೆಯಿಂದ 167 ಕೋಟಿ ರೂ ಹಣ ವರ್ಗಾವಣೆ

ತನಿಖೆಯಲ್ಲಿ ಒಟ್ಟು 624 ಬ್ಯಾಂಕ್ ಖಾತೆಗಳ ವಿವರ ಪತ್ತೆಯಾಗಿದ್ದು, ಈ ಖಾತೆಗಳ ವಿರುದ್ಧ NCRP ಪೋರ್ಟಲ್‌ನಲ್ಲಿ 4580ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಒಂದು ಖಾತೆಯಲ್ಲೇ 167 ಕೋಟಿ ರೂಪಾಯಿ ಹಣ ವರ್ಗಾವಣೆ ನಡೆದಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ತನಿಖೆ ವೇಳೆ ವಂಚಕರು ಬಳಸಿದ್ದ ಉಳಿದ 10 ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಲಾಗಿದ್ದು, ಈ ಖಾತೆಗಳ ಮೂಲಕ ಸುಮಾರು 30.70 ಕೋಟಿ ರೂಪಾಯಿ ಹಣ ವರ್ಗಾವಣೆ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ

ಹೇಗೆ ನಡೀತಿತ್ತು ವಂಚನೆ?

ಸಾಮಾಜಿಕ ಜಾಲತಾಣಗಳ ಮೂಲಕ ಖಾತೆದಾರರು ಹಾಗೂ ಏಜೆಂಟರನ್ನು ನೇಮಿಸಿಕೊಂಡು, ದಿನಕ್ಕೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚನೆ ಮಾಡಲಾಗುತ್ತಿತ್ತು. ವಂಚನೆಯ ಹಣವನ್ನು ಯುಎಸ್ ಡಾಲರ್‌ಗೆ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸಲಾಗುತ್ತಿತ್ತು. ಈ ಜಾಲಕ್ಕೆ ಕಾಂಬೋಡಿಯಾದಲ್ಲಿರುವ ವಂಚನಾ ಬಿಪಿಓ ಸಹ ಬೆಂಬಲ ನೀಡುತ್ತಿದ್ದುದೂ ಪತ್ತೆಯಾಗಿದೆ.

ಬಂಧಿತ ಆರೋಪಿಗಳಿವರು!

ಗುಜರಾತಿ​​ನ ಬಾವಾ ನಗರ್ ಜಿಲ್ಲೆ ನಿವಾಸಿ ಮಕವನ್ ವಿಕ್ರಂ(25), ಪಶ್ಚಿಮ ಬಂಗಾಳದ ಸೌಮ್ಯಾದಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್​​​ನ ಸಿಂಗಬುಮ್ ಜಿಲ್ಲೆಯ ಪುಪ್ಲ ಶಿವಕುಮಾರ್ ರಾವ್(32), ಉತ್ತರಪ್ರದೇಶದ ಮಾವೋ ಜಿಲ್ಲೆ ನಿವಾಸಿ ಗೌರವ್ ಪಾಂಡೆ(24), ಉತ್ತರ ಪ್ರದೇಶದ ಸುಲ್ತಾನ್ ಪುರ್ ಜಿಲ್ಲೆ ಹರ್ಷ್ ಮಿಸ್ರಾ(22), ಜಾರ್ಖಂಡ್​​ ಮೂಲದ ರಾಜೇಶ್ ಮಂಡನ್(30), ಲಖನೌ ಮೂಲದ ಮೊಹಮ್ಮದ್ ಆಕೀಬ್ ಅಲಿ(27), ಬಿಹಾರದ ನಲಂದಾ ಜಿಲ್ಲೆಯ ರಾಜೀವ್ ರಂಜನ್ ಕುಮಾರ್(30), ಜಾರ್ಖಂಡ್​​ ನಿವಾಸಿ ಮಿಥುನ್ ಕುಮಾರ್ ಮಂಗರಾಜ್(38), ರಾಜಸ್ಥಾನದ ಜೈಪುರದ ಓಂ ಪ್ರಕಾಶ್ ಯಾಧವ್ (37), ಝಾನ್ಸಿ ಮೂಲದ ನೌಶಾದ್ ಅಲಿ(34) ಸೇರಿ ಒಟ್ಟು 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ – Kannada News | Rajpal Yadav Surrenders to Tihar Jail After Delhi HC Denies Relief in Check Bounce Case

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ (ರಾಜ್​ಪಾಲ್ ಯಾದವ್) ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ.

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ ಪತ್ನಿ ಕೊಟ್ಟ ಚೆಕ್ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್​ ಪಾಲ್ ಯಾದವ್ ಹಾಗೂ ಆತನ ಪತ್ನಿ ಅಪರಾಧಿ ಎಂದು ಘೋಷಣೆ ಮಾಡಿತ್ತು. 2019ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.

2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್​​ ಅಲ್ಲಿ ರಾಜ್​​ಪಾಲ್ ಯಾದವ್ ಪ್ರಶ್ನೆ ಮಾಡಿದರು. ಸೆಟಲ್​​ಮೆಂಟ್​ಗೆ ದಾರಿ ಹುಡುಕುತ್ತಿದ್ದೇವೆ ಎಂದು ಹೇಳಿದ ಕಾರಣದಿಂದ 2024ರಲ್ಲಿ ಹೈಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ಈವರೆಗೆ ನಟ ಹಣವನ್ನು ಹಿಂದಿರುಗಿಸಿಲ್ಲ. ಹೀಗಾಗಿ, ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ.
ಹೆಚ್ಚುವರಿಯಾಗಿ ಕೆಲ ವಾರ ಅವಕಾಶ ಕೊಟ್ಟರೆ ಹಣ ಹೊಂದಿಸಲು ಪ್ರಯತ್ನಿಸೋದಾಗಿ ರಾಜ್​​ಪಾಲ್ ಪರ ವಕೀಲರು ಹೇಳಿದ್ದರು. ಆದರೆ, ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಬುಧವಾರ ನಾಲ್ಕು ಗಂಟೆ ಒಳಗೆ ಸರೆಂಡರ್ ಆಗಲು ಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ಎಸೆದ ಹಾಸ್ಯ ನಟ ರಾಜ್​ಪಾಲ್ ಯಾದವ್

‘ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಬೇಡಿ. ನಿರಂತರವಾಗಿ ಅದೇ ತಪ್ಪು ಆಗುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ – Kannada News | Bengaluru temperature: Dry weather all over Karnataka, cold and clear sky in Bengaluru

ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ

ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಫೋರ್ ಹೊಡೆದು ಗೆಲ್ಲಿಸಿದ ರಾಧಾ ಹಿಟ್ ವಿಕೆಟ್ ಆಗಿದ್ರಾ? ನಡೆಯಿತಾ ಮೋಸದಾಟ? – Kannada News | RCB Women Lift Second Title: The Truth Behind Final Over hit wicket Controversy

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಎರಡನೇ ಬಾರಿಗೆ ವುಮನ್ಸ್ ಪ್ರೀಮಿಯರ್ ಲೀಗ್ ಅಲ್ಲಿ ಕಪ್ ಎತ್ತಿದೆ. ಅದ್ಭುತ ರನ್ ಚೇಸ್ ಮೂಲಕ ಆರ್​​ಸಿಬಿ ಮತ್ತೊಮ್ಮೆ ಕಪ್​​​ನ ತನ್ನದಾಗಿಸಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಫೈನಲ್​​ಗೆ ಬಂದು ಸೋತಿದೆ. ಈ ಮಧ್ಯೆ ಆರ್​​ಸಿಬಿ ಕಳ್ಳಾಟ ಆಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಈಗ ಸ್ಪಷ್ಟನೆ ಕೂಡ ಸಿಕ್ಕಿದೆ.

ಟಾಸ್​ ಗೆದ್ದ ಆರ್​​ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಉತ್ತಮ ಆರಂಭ ಕಂಡಿತು. ಸಂಘಟಿತ ಆಟದಿಂದ ಡೆಲ್ಲಿ ತಂಡ ಅಂತಿಮವಾಗಿ 20 ಓವರ್​​ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 203 ರನ್​​​ ಕಲೆ ಹಾಕಿತು. ಈ ಬೃಹತ್ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭಿಕ ಆಘಾತ ಎದುರಾಯಿತು. ತಂಡದ ಮೊತ್ತ 9 ರನ್ ಇದ್ದಾಗ ಗ್ರೇಸ್ ಹ್ಯಾರಿಸ್ ಅವರು ವಿಕೆಟ್ ಒಪ್ಪಿಸಿದರು.

ನಂತರ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವಾಲ್ ಅವರ ಜೊತೆಯಾಟದಿಂದ ಆರ್​​ಸಿಬಿ ಗೆಲುವಿನ ಹಾದಿ ಹಿಡಿಯಿತು. ಸುಲಭದಲ್ಲಿ ಕಪ್ ನಮ್ಮದಾಯಿತು ಎನ್ನುವಾಗ ಮತ್ತೆ ಸಂಕಷ್ಟ ಎದುರಾಯಿತು. ತಂಡದ ಮೊತ್ತ 174 ರನ್ ಇರುವಾಗ ಆರ್​ಸಿಬಿ 2ನೇ ವಿಕೆಟ್ ಕಳೆದುಕೊಂಡಿತು. ಜಾರ್ಜಿಯಾ ವಾಲ್(54 ಬಾಲ್​​ಗೆ 79 ರನ್) ಔಟ್ ಆದರು. ನಂತರ ರಿಚಾ ಘೋಷ್ ಕೇವಲ 6 ರನ್​​ಗೆ ವಿಕೆಟ್ ಒಪ್ಪಿಸಿದರು. ಸ್ಮೃತಿ ಕೂಡ ಔಟ್ ಆದರು. ತಂಡದ ಮೊತ್ತ 191 ಇರುವಾಗ ನಾಲ್ಕು ವಿಕೆಟ್ ಬಿದ್ದಿತ್ತು.

ಕೊನೆಯ ಓವರ್​​ನಲ್ಲಿ ಬೇಕಿದ್ದಿದ್ದು 10 ರನ್​​ಗಳು. ಆಗ, ಮೊದಲ ಎರಡು ಬಾಲ್, ಎರಡು ಸಿಂಗಲ್ ಬಂತು. ಕ್ರೀಜ್​​ನಲ್ಲಿ ಇದ್ದ ರಾಧಾ ಅವರು ಮೂರನೇ ಬಾಲ್​​ನ ಫೋರ್​​ಗಡಿಗೆ ಅಟ್ಟಿದರು. ನಾಲ್ಕನೇ ಬಾಲ್​ ಕೂಡ ಫೋರ್ ಬಾರಿಸಿದರು. ಈ ವೇಳೆ ರಾಧಾ ಅವರ ಬ್ಯಾಟ್ ಸ್ಟಂಪ್​​ಗೆ ತಾಗಿದೆ ಎಂದು ಕೆಲವರು ಹೇಳಿದ್ದಾರೆ.

ಅಸಲಿಗೆ ಸ್ಟಂಪ್​​ಗೆ ತಾಗಿದ್ದು ಕೀಪರ್ ಕೈ. ವಿಡಿಯೋದಲ್ಲಿ ಅದು ಸ್ಪಷ್ಟವಾಗಿ ಕಾಣಿಸಿದೆ. ಆದಾಗ್ಯೂ ಕೆಲವರು ಈ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಪ್ರಯತ್ನ ಮಾಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:41 am, Fri, 6 February 26

Source link

Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು? – Kannada News | Terrifying Moment After Train Hits Log Obstruction on Tracks in Bihar

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ.

ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ಪಹಾರ್‌ಪುರ ನಿಲ್ದಾಣದ ಬಳಿ ಪ್ಯಾಸೆಂಜರ್ ರೈಲಿನಲ್ಲಿ ಮರಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದಲ್ಲದೆ, ಮರಗಳನ್ನು ಇಳಿಸಿ ರೈಲ್ವೆ ಹಳಿಗಳ ಪಕ್ಕದಲ್ಲಿಯೇ ಸಂಗ್ರಹಿಸಲಾಗುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ.

​ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು ಕೊಂಚ ಕಠಿಣವಾಗಿರುತ್ತವೆ.

​ಶುಭ ಫಲಗಳು:

​ಮಕರ ಮತ್ತು ಕುಂಭ ರಾಶಿ:

ನಿಮ್ಮ ರಾಶ್ಯಾಧಿಪತಿ ಶನಿಯೇ ಆಗಿರುವುದರಿಂದ, ಕೆಲಸದಲ್ಲಿ ಶಿಸ್ತು ಮತ್ತು ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಹಳೆಯ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ.

​ವೃಷಭ ರಾಶಿ:

ಹತ್ತನೇ ಮನೆಯಲ್ಲಿ ಈ ಸ್ಥಿತಿ ಇರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಸಿಗುತ್ತವೆ. ಅಧಿಕಾರದಲ್ಲಿರುವವರಿಂದ ಗೌರವ ದೊರೆಯುತ್ತದೆ.

​ತುಲಾ ರಾಶಿ:

ಸಂಶೋಧನೆ ಅಥವಾ ತಾಂತ್ರಿಕ ಕ್ಷೇತ್ರದಲ್ಲಿ ಇರುವವರಿಗೆ ಈ ಕಾಲವು ಬಹಳ ಅನುಕೂಲಕರವಾಗಿದೆ. ಶ್ರಮಕ್ಕೆ ತಕ್ಕಂತೆ ಆರ್ಥಿಕ ಲಾಭವಾಗಲಿದೆ.

​ಮಿಶ್ರ ಫಲಗಳು:

​ಮೇಷ ರಾಶಿ:

ಏಕಾದಶ ರಾಶಿಯಲ್ಲಿ ಸೂರ್ಯ ಇರುವುದರಿಂದ ಆರ್ಥಿಕ ಲಾಭವಿರುತ್ತದೆ, ಆದರೆ ಸ್ನೇಹಿತರೊಂದಿಗೆ ಅಥವಾ ಹಿರಿಯ ಸಹೋದರರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ.

​ಧನು ರಾಶಿ:

ನಿಮ್ಮ ಧೈರ್ಯ ಹೆಚ್ಚಾಗುತ್ತದೆ. ಸಣ್ಣ ಪ್ರಯಾಣಗಳಿಂದ ಲಾಭವಾಗಬಹುದು, ಆದರೆ ಕೆಲಸದಲ್ಲಿ ವಿಳಂಬ ಉಂಟಾಗಬಹುದು.

​ಅಶುಭ ಫಲಗಳು:

​ಸಿಂಹ ರಾಶಿ:

ಸೂರ್ಯನು ನಿಮ್ಮ ರಾಶ್ಯಾಧಿಪತಿ. ಸಪ್ತಮ ಸ್ಥಾನದಲ್ಲಿ ಶತ್ರು ರಾಶಿಯಲ್ಲಿದ್ದು ಶನಿ ದ್ರೇಕ್ಕಾಣದಲ್ಲಿರುವುದು ದಾಂಪತ್ಯ ಜೀವನದಲ್ಲಿ ಉದ್ವಿಗ್ನತೆ ಅಥವಾ ಪಾಲುದಾರಿಕೆಯಲ್ಲಿ ನಷ್ಟ ತರಬಹುದು. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.

​ಕರ್ಕಾಟಕ ರಾಶಿ:

ಅಷ್ಟಮ ಸ್ಥಾನದಲ್ಲಿ ಸೂರ್ಯ ಮತ್ತು ಶನಿಯ ಪ್ರಭಾವ ಇರುವುದರಿಂದ ಅನಗತ್ಯ ಮಾನಸಿಕ ಒತ್ತಡ, ಅಪವಾದ ಅಥವಾ ತಂದೆಯ ಆರೋಗ್ಯದಲ್ಲಿ ಏರುಪೇರಾಗಬಹುದು.

​ವೃಶ್ಚಿಕ ರಾಶಿ:

ಚತುರ್ಥದಲ್ಲಿ ಈ ಸ್ಥಿತಿ ಇರುವುದರಿಂದ ಮನೆಯ ಸುಖ-ಶಾಂತಿಗೆ ಭಂಗ ಬರಬಹುದು ಅಥವಾ ಆಸ್ತಿ ವಿಚಾರದಲ್ಲಿ ವಿವಾದಗಳು ತಲೆದೂರಬಹುದು.

​ಸೂರ್ಯ-ಶನಿ ಸಂಬಂಧವು ತಂದೆ-ಮಗನ ನಡುವಿನ ಭಿನ್ನಾಭಿಪ್ರಾಯ ಅಥವಾ ಮೇಲಧಿಕಾರಿಗಳೊಂದಿಗೆ ಸಂಘರ್ಷವನ್ನು ಸೂಚಿಸುತ್ತದೆ.

​ಈ ಸಮಯದಲ್ಲಿ ಪ್ರತಿದಿನ ಶಿವ ಪಂಚಾಕ್ಷರಿ ಮಂತ್ರ ಜಪಿಸುವುದು ಅಥವಾ ಸೂರ್ಯನಿಗೆ ನಮಸ್ಕಾರ ಅಶುಭ ಫಲಗಳನ್ನು ಕಡಿಮೆ ಮಾಡಲು ಸಹಕಾರಿ.

– ಲೋಹಿತ ಹೆಬ್ಬಾರ್

Source link

Exit mobile version