Headlines

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ – Kannada News | Arjun Tendulkar Weds Sania Chandok: Sachin’s Son Ties Knot in Star Studded Mumbai Ceremony

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಬಹುದಿನಗಳ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಆಗಸ್ಟ್​ನಲ್ಲಿ ತೀರ ಖಾಸಗಿಯಾಗಿ ಕುಟುಂಬದವರ ಸಮ್ಮುಖದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಾಗೆಯೇ ಮಾರ್ಚ್ 3 ರಂದು ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್‌ನಲ್ಲಿ ಮೆಹಂದಿ ಸಮಾರಂಭವು ನಡೆದಿತ್ತು. ಆ ಸಮಾರಂಭದಲ್ಲಿ ಕ್ರಿಕೆಟ್ ಜಗತ್ತಿನ ಅನೇಕ ದಂತಕಥೆಗಳು ಉಪಸ್ಥಿತರಿದ್ದರು. ಸಚಿನ್ ಅವರ ಆಪ್ತರು, ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಮೆಹಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು,…

Read More

ರಾಜ್ಯದ 1,800 ಹಳ್ಳಿಗಿಲ್ಲ ಬಸ್​​ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್​​ ಮಾಹಿತಿ – Kannada News | 1,800 Karnataka villages lack direct bus access, reveals Minister Ramalinga Reddy in the Legislative Council

ಬೆಂಗಳೂರು, ಡಿಸೆಂಬರ್​​ 18: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನಗಳಲ್ಲೊಂದಾದ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಪ್ರಯೋಜನವನ್ನು ಪ್ರತಿನಿತ್ಯ ಲಕ್ಷಾಂತರ ಮಂದಿ ಪಡೆಯುತ್ತಿದ್ದಾರೆ. ಈ ನಡುವೆಯೂ ಸುಮಾರು 1,800 ಗ್ರಾಮಗಳಲ್ಲಿ ಮಹಿಳೆಯರು ಬಸ್ ಏರಲು ಕನಿಷ್ಠ 2 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಹಿರಂಗೊಂಡಿದೆ. ಬಹುತೇಕ ಪ್ರದೇಶಗಳಲ್ಲಿ ಬಸ್​​ಗಳ ಲಾಸ್ಟ್​​ ಸ್ಟಾಪ್​​ ಕನೆಕ್ಟಿವಿಟಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸೇರಿದಂತೆ ಪ್ರಯಾಣಿಕರು ಪ್ರತಿದಿನ ಕಿಲೋಮೀಟರ್​​ಗಟ್ಟಲೆ ದೂರವನ್ನು ನಡೆಯಬೇಕಾದ ಸ್ಥಿತಿ…

Read More

IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್ – Kannada News | Reasons for England Lost against India in Semi Final

ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್​ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್​ಗಳಿಂದಾಗಿ ಭಾರತ ತಂಡವು ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್…

Read More

ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್ – Kannada News | BBK 12 Rajath Kishan talks about Kichcha Sudeep and Darshan fans war

ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಡಿಸೆಂಬರ್ 25ರಂದು ‘ಮಾರ್ಕ್’ ಚಿತ್ರ ಬಿಡುಗಡೆ ಆಗಲಿದೆ. ಈ ಸಮಯಕ್ಕೆ ವಿವಾದ ಆರಂಭ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಟ ರಜತ್ ಕಿಶನ್ (Rajath Kishan) ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಯಾನ್ಸ್ ವಾರ್ ಬಗ್ಗೆ ಟಿವಿ9 ಜೊತೆ…

Read More

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

World Bee Day: ಮೇ 20 ‘ವಿಶ್ವ ಜೇನುನೊಣ ದಿನ’; ಜೇನುನೊಣ ಉಳಿದರೆ ಮಾತ್ರ ಮನುಕುಲದ ಉಳಿವು! – Kannada News | World Bee Day: India’s Fight Against Honey Adulteration and Bee Conservation

ಪ್ರತಿ ವರ್ಷ ಮೇ 20ರಂದು ವಿಶ್ವದಾದ್ಯಂತ ‘ವಿಶ್ವ ಜೇನುನೊಣ ದಿನ’ವನ್ನು (World Bee Day) ಆಚರಿಸಲಾಗುತ್ತದೆ. ಆಧುನಿಕ ಜೇನುಸಾಕಣೆಯ ಪ್ರವರ್ತಕರಾದ ಸ್ಲೊವೇನಿಯಾದ ಆಂಟನ್ ಜಾನ್ಸಾ (Anton Jansa) ಅವರ ಜನ್ಮ ದಿನದ ನೆನಪಿಗಾಗಿ ಈ ದಿನವನ್ನು ನಿಗದಿಪಡಿಸಲಾಗಿದೆ. ಆದರೆ, ಜೇನುಸಾಕಣೆಯ ಇತಿಹಾಸವನ್ನು ಗಮನಿಸಿದಾಗ ನಾವಿಲ್ಲಿ ಒಂದು ಮಹತ್ವದ ವಿಚಾರವನ್ನು ಮರೆಯಬಾರದು. ಅದೇನೆಂದರೆ, ಪಾಶ್ಚಾತ್ಯ ಜಗತ್ತು ಇದನ್ನು ಗುರುತಿಸುವ ಸಾವಿರಾರು ವರ್ಷಗಳ ಹಿಂದೆಯೇ ಭಾರತದಲ್ಲಿ ಜೇನುಸಾಕಣೆ ಮತ್ತು ಜೇನುತುಪ್ಪದ ಬಳಕೆ ಅತ್ಯಂತ ಪ್ರಚಲಿತದಲ್ಲಿತ್ತು. ನಮ್ಮ ಋಗ್ವೇದ, ಅಥರ್ವವೇದ, ಪುರಾಣಗಳು…

Read More

‘ಧುರಂಧರ್ 2’ ಚಿತ್ರಕ್ಕೆ ಶಾಕ್; ಬ್ಯಾನ್ ಆಗುತ್ತಾ ಆದಿತ್ಯ ಧಾರ್ ನಿರ್ಮಾಣ ಸಂಸ್ಥೆ? – Kannada News | Dhurandhar 2 Controversy: Aditya Dhar’s B62 Studios Faces BMC Blacklist Threat

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿದೆ. ಈ ಚಿತ್ರದ ಮುಂದುವರಿದ ಭಾಗಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ‘ಧುರಂಧರ್ 2’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗ ಸಿನಿಮಾ ಬಗ್ಗೆ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಈ ವಿವಾದವು ಧುರಂಧರ್ ನಿರ್ಮಾಪಕರು ಮತ್ತು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಡುವೆ ಇದೆ. ಚಿತ್ರೀಕರಣದ ಸಮಯದಲ್ಲಿ ತಂಡವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ಆರೋಪಿಸಿದೆ. ನಿರ್ಮಾಣ ಕಂಪನಿಯ ವಿರುದ್ಧ ಮುನ್ಸಿಪಲ್ ಕಾರ್ಪೊರೇಷನ್ ಹಲವು ಆರೋಪಗಳನ್ನು…

Read More

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ…

Read More

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More