ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ.
ಬೆಂಗಳೂರು, ಏಪ್ರಿಲ್ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ಆತಂಕವೂ ಖರೀದಿಗೆ ಕಾರಣವಾಗಿದೆ.
ಮುಲ್ಲನ್ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ (SRH vs PBKS) ತಂಡಕ್ಕೆ 220 ರನ್ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು ಕೇವಲ 6.2 ಓವರ್ಗಳಲ್ಲಿ ಮೊದಲ ವಿಕೆಟ್ಗೆ 99 ರನ್ಗಳನ್ನು ಸೇರಿಸಿದರು.
ಪ್ರಿಯಾಂಶ್ ಸ್ಫೋಟಕ ಅರ್ಧಶತಕ
ಎಂದಿನಂತೆ ಹೊಡಿಬಡಿ ಆಟದೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಪ್ರಿಯಾಂಶ್ ಆರ್ಯ 20 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್ಗಳೊಂದಿಗೆ 57 ರನ್ ಗಳಿಸುವ ಮೂಲಕ ಅಬ್ಬರದ ಇನ್ನಿಂಗ್ಸ್ ಆಡಿದರು. ಮುಖ್ಯವಾಗಿ, ಅವರು ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು ಅವರ ಸ್ಫೋಟಕ ಬ್ಯಾಟಿಂಗ್ಗೆ ಹಿಡಿದ ಕೈಗನ್ನಡಿಯಾಗಿತ್ತು. ಇದು ಮೊದಲ ಇನ್ನಿಂಗ್ಸ್ನಲ್ಲಿ 18 ಎಸೆತಗಳಲ್ಲಿ 50 ರನ್ ಗಳಿಸಿದ ಅಭಿಷೇಕ್ ಶರ್ಮಾ ಅವರಿಗಿಂತ ವೇಗವಾಗಿತ್ತು. ಹಾಗೆಯೇ ಐಪಿಎಲ್ ವೃತ್ತಿಜೀವನದಲ್ಲಿ ಇದು ಪ್ರಿಯಾಂಶ್ ಅವರ ವೇಗದ ಅರ್ಧಶತಕವೂ ಆಗಿದೆ.
ಅರ್ಧಶತಕ ಬಾರಿಸಿದ ಪ್ರಭಸಿಮ್ರನ್ ಸಿಂಗ್
ಪ್ರಿಯಾಂಶ್ ಜೊತೆಗೆ ಪ್ರಭ್ಸಿಮ್ರನ್ ಸಿಂಗ್ ಕೂಡ 25 ಎಸೆತಗಳಲ್ಲಿ 51 ರನ್ ಬಾರಿಸಿದರು. ಅವರ ಇನ್ನಿಂಗ್ಸ್ನಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್ಗಳು ಸೇರಿದ್ದವು. ಈ ಇಬ್ಬರು ಬ್ಯಾಟ್ಸ್ಮನ್ಗಳ ನಡುವಿನ ಪಾಲುದಾರಿಕೆಯು ಪಂಜಾಬ್ ಕಿಂಗ್ಸ್ಗೆ 220 ರನ್ಗಳ ಗುರಿಯತ್ತ ಬಲವಾದ ಆರಂಭವನ್ನು ನೀಡಿತು. 6.2 ಓವರ್ಗಳಲ್ಲಿ 99 ರನ್ಗಳ ಈ ಪಾಲುದಾರಿಕೆ SRH ಗೆ ದೊಡ್ಡ ಹೊಡೆತವಾಗಿ ಪರಿಣಮಿಸಿತು.
ಗಮನಾರ್ಹವಾಗಿ, ಇದು ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರ ಈ ಸೀಸನ್ನ ಮೊದಲ ಅರ್ಧಶತಕವಾಗಿದೆ. ಇದಕ್ಕೂ ಮೊದಲು, ಪ್ರಭ್ಸಿಮ್ರಾನ್ ಸಿಂಗ್ ಸಿಎಸ್ಕೆ ವಿರುದ್ಧ 43 ರನ್ ಮತ್ತು ಗುಜರಾತ್ ವಿರುದ್ಧ 37 ರನ್ ಗಳಿಸಿದ್ದರೆ, ಪ್ರಿಯಾಂಶ್ ಆರ್ಯ ಸಿಎಸ್ಕೆ ವಿರುದ್ಧ 39 ರನ್ ಮತ್ತು ಗುಜರಾತ್ ವಿರುದ್ಧ 7 ರನ್ ಬಾರಿಸಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏ.11: ರಾಜ್ಯದ ಬಂದೀಖಾನೆ ಮತ್ತು ಸುಧಾರಣಾ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದಂತಹ ಕೇಂದ್ರ ಕಾರಾಗೃಹಗಳಲ್ಲಿ ಪದೇ ಪದೇ ಮೊಬೈಲ್ ಫೋನ್ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಕೇವಲ ಕೈದಿಗಳಷ್ಟೇ ಅಲ್ಲದೆ ಮೊಬೈಲ್ ಸರ್ವೀಸ್ ಪ್ರೊವೈಡರ್ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಜೈಲುಗಳಲ್ಲಿ ಜಾಮರ್ ಅಳವಡಿಸಿದ್ದರೂ ಮೊಬೈಲ್ ಸಂಪರ್ಕ ಹೇಗೆ ಲಭ್ಯವಾಗುತ್ತಿದೆ ಎಂಬ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ. ತಪಾಸಣೆಯ ವೇಳೆ ಮಾತ್ರ ಸಿಗ್ನಲ್ ರೇಂಜ್ ಕಡಿತಗೊಳಿಸಿ, ನಂತರ ನೆಟ್ವರ್ಕ್ ನೀಡಲಾಗುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಜಾಮರ್ ನಿರ್ವಹಣೆಯಲ್ಲಿ ಸರ್ವೀಸ್ ಪ್ರೊವೈಡರ್ಗಳು ವಿಫಲರಾದರೆ ಅಥವಾ ಅಸಹಕಾರ ತೋರಿದರೆ ಅವರ ವಿರುದ್ಧವೇ ಕಾನೂನು ಕ್ರಮ ಜರುಗಿಸಲು ಇಲಾಖೆ ಚಿಂತನೆ ನಡೆಸಿದೆ.
ಬಂದೀಖಾನೆ ಇಲಾಖೆಯನ್ನು ಕೇವಲ ಶಿಕ್ಷಿಸುವ ಕೇಂದ್ರವನ್ನಾಗಿ ಮಾಡದೆ, ಸುಧಾರಣಾ ಕೇಂದ್ರವನ್ನಾಗಿ ಮಾಡಲು ಮುಂದಾಗಿರುವ ಇಲಾಖೆ, ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲೂ ಪೆಟ್ರೋಲ್ ಬಂಕ್ಗಳನ್ನು ನಿರ್ವಹಿಸಲು ಪ್ರಸ್ತಾವನೆ ಸಲ್ಲಿಸಿದೆ. ಶಿಕ್ಷೆ ಮುಗಿಸಿ ಹೊರಬರುವ ಕೈದಿಗಳಿಗೆ ಸಮಾಜದಲ್ಲಿ ಗೌರವಯುತ ಬದುಕು ಕಟ್ಟಿಕೊಡಲು ಈ ಬಂಕ್ಗಳಲ್ಲಿ ಅವರಿಗೆ ಉದ್ಯೋಗಾವಕಾಶ ನೀಡಲಾಗುವುದು.
ಜೈಲಿನೊಳಗೆ ಕೈದಿಗಳು ತಯಾರಿಸುವ ಗುಣಮಟ್ಟದ ಬೇಕರಿ ಪದಾರ್ಥಗಳನ್ನು ಸಾರ್ವಜನಿಕರಿಗೆ ತಲುಪಿಸಲು ಪ್ರತ್ಯೇಕ ಔಟ್ಲೆಟ್ಗಳನ್ನು ಆರಂಭಿಸುವ ಯೋಜನೆಯೂ ಸಿದ್ಧವಾಗಿದೆ. ಈ ಸಂಬಂಧ ಗೃಹ ಸಚಿವರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅನುಷ್ಠಾನಕ್ಕೆ ಬರುವ ನಿರೀಕ್ಷೆಯಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಹುಬ್ಬಳ್ಳಿ, ಏಪ್ರಿಲ್ 11: ಏಪ್ರಿಲ್ 09ರಂದು ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಬಂದಿದ್ದು, ಹೆಚ್ಚು ಅಂಕ ಪಡೆದವರು ಸಂಭ್ರಮಿಸಿದ್ದಾರೆ. ಆದರೆ ಹುಬ್ಬಳ್ಳಿಯಲ್ಲಿ ಓರ್ವ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಂದಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ (death) ಶರಣಾಗಿದ್ದಾಳೆ. ಜೀವನದಲ್ಲಿ ಹತ್ತಾರು ಕನಸು ಕಂಡವಳು ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
ನಡೆದದ್ದೇನು?
ಮೊನ್ನೆಯಷ್ಟೇ ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಸಂಭ್ರಮಸಿದ್ದಾರೆ. ಇನ್ನು ಅಂಕ ಸುಧಾರಣೆ ಬಯಸುವವರು, ಅನುತ್ತೀರ್ಣವಾದವರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಕೂಡಾ ಪಿಯು ಬೋರ್ಡ್ ಅವಕಾಶ ನೀಡಿದೆ. ಆದರೆ ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದ ವಿದ್ಯಾರ್ಥಿನಿ ಶ್ರಾವಣಿ ಕಾಳೆ, ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹುಬ್ಬಳ್ಳಿ ನಗರದ ಕನಕದಾಸ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದಿದ್ದ ಶ್ರಾವಣಿ, ಪರೀಕ್ಷೆಯನ್ನು ಕೂಡ ಚೆನ್ನಾಗಿ ಬರೆದಿದ್ದಳು. ಆಕೆಗೆ ಪರೀಕ್ಷೆಯಲ್ಲಿ 600 ಅಂಕಕ್ಕೆ ಬರೋಬ್ಬರಿ 466 ಅಂಕಗಳು ಬಂದಿದ್ದು ಶೇಕಡಾ 77.67 ಅಂಕ ಪಡೆದಿದ್ದು ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಅಜ್ಜನಿಗೆ ಊಟ ಕೊಟ್ಟು ಕೋಣೆಗೆ ಹೋಗಿದ್ದ ಶ್ರಾವಣಿ, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಜೆಯಾದರೂ ಶ್ರಾವಣಿ ರೂಮ್ನಿಂದ ಹೊರಬರದೇ ಇದ್ದಾಗ ಕುಟುಂಬದವರು ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ದುಡುಕಿನ ನಿರ್ಧಾರ
ಇನ್ನು ಶ್ರಾವಣಿ, ಎಲ್ಲಾ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಬರುವ ವಿಶ್ವಾಸದಲ್ಲಿದ್ದಳಂತೆ. ಇದನ್ನು ಅನೇಕರ ಮುಂದೆ ಹೇಳಿದ್ದಳಂತೆ. ಕನಿಷ್ಟ ಶೇಕಡಾ 90ರ ಮೇಲಾದರೂ ಅಂಕ ಬಂದೇ ಬರ್ತಾವೆ ಅಂತ ವಿಶ್ವಾಸ ಹೊಂದಿದ್ದಳಂತೆ. ಆದರೆ ನಿರೀಕ್ಷೆಗಿಂತ ಸ್ವಲ್ಪ ಕಡಿಮೆ ಅಂಕ ಬಂದಿದ್ದಕ್ಕೆ ಶ್ರಾವಣಿ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳಂತೆ. ಶ್ರಾವಣಿ ತಂದೆ ಆಟೋ ಚಾಲಕನಾಗಿದ್ದಾರೆ. ಆದರೆ ತಾನು ಚೆನ್ನಾಗಿ ಓದಬೇಕು, ದೊಡ್ಡ ಕೆಲಸ ಪಡೆಯಬೇಕು ಅಂತ ಅಜ್ಜ, ಅಜ್ಜಿ ಜೊತೆಗೆ ವಾಸವಾಗಿದ್ದ ಶ್ರಾವಣಿ, ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಿದ್ಯಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಫೇಲ್ ಆಗಬಾರದು. ಆದರೆ ಶ್ರಾವಣಿ ಉತ್ತಮ ಅಂಕ ಪಡೆದ್ರು ಕೂಡ ನಿರೀಕ್ಷಿತ ಅಂಕ ಬಂದಿಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡಿದ್ದು ದುರ್ದೈವದ ಸಂಗತಿ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ, ಹೆಚ್ಚು ಅಂಕ ಪಡೆಯಲು ಮತ್ತೆ ಅನೇಕ ಅವಕಾಶಗಳಿವೆ. ಹೀಗಾಗಿ ವಿದ್ಯಾರ್ಥಿಗಳು ಅಂಕದ ಬಗ್ಗೆ ಚಿಂತಿಸದೇ ಭವಿಷ್ಯತ್ತಿನ ಬಗ್ಗೆ ಚಿಂತಿಸಬೇಕಿದೆ.
ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡದೆ ಸಿನಿಮಾ ಬಿಡುಗಡೆ ಆಗುವುದನ್ನೇ ತಡೆದಿದೆ. ಸಿನಿಮಾ ಬಿಡುಗಡೆ ಮಾಡಲು ಸಿನಿಮಾದ ನಿರ್ಮಾಪಕರು ಮಾಡಿರುವ ಪ್ರಯತ್ನಗಳು ಫಲ ನೀಡಿಲ್ಲ. ವಿಜಯ್ ಅವರ ರಾಜಕೀಯ ಎದುರಾಳಿಗಳು ಕುತಂತ್ರದಿಂದ ರಾಜಕೀಯ ಪ್ರಭಾವ ಬಳಸಿ ಸಿನಿಮಾ ಬಿಡುಗಡೆಯನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ಇದೀಗ ಹಠಾತ್ತನೆ ‘ಜನ ನಾಯಗನ್’ ಸಿನಿಮಾ ಪೂರ್ತಿಯಾಗಿ ಎಚ್ಡಿ ಫಾರ್ಮ್ಯಾಟ್ನಲ್ಲಿ ಲೀಕ್ ಆಗಿದೆ. ಇದು ಚಿತ್ರತಂಡಕ್ಕೆ ಆಘಾತ ತಂದಿದೆ. ತಮಿಳು ಮಾತ್ರವೇ ಅಲ್ಲದೆ ಹಲವು ರಾಜ್ಯಗಳ ಸಿನಿಮಾ ಪ್ರಮುಖರು ಇದನ್ನು ಖಂಡಿಸಿದ್ದಾರೆ. ಈ ಸಿನಿಮಾ ಲೀಕ್ಗೆ ಇಬ್ಬರು ರಾಜಕೀಯ ಪ್ರಮುಖರು ಕಾರಣವೆಂದು ವಿಜಯ್ ಅಭಿಮಾನಿಗಳು ಮತ್ತು ವಿಜಯ್ ಅವರ ಟಿವಿಕೆ ರಾಜಕೀಯ ಪಕ್ಷದ ಮುಖಂಡರು ಆರೋಪಿಸುತ್ತಿದ್ದಾರೆ.
‘ಜನ ನಾಯಗನ್’ ಸಿನಿಮಾದ ಬಿಡುಗಡೆ ತಡೆ ಮತ್ತು ಈಗ ಸಿನಿಮಾದ ಲೀಕ್ ಹಿಂದೆ ಇಬ್ಬರು ರಾಜಕೀಯ ಪ್ರಮುಖರಿದ್ದಾರೆ ಎಂದು ಟಿವಿಕೆ ಹಾಗೂ ವಿಜಯ್ ಅಭಿಮಾನಿಗಳು ಆರೋಪಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ, ತಮಿಳುನಾಡು ಬಿಜೆಪಿ ಮುಖಂಡ ಎಲ್ ಮುರುಗನ್ ಮತ್ತು ತಮಿಳುನಾಡಿನ ಆಡಳಿತರೂಢ ಪಕ್ಷವಾದ ಡಿಎಂಕೆಯ ಯುವ ಮುಖಂಡ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರುಗಳೇ ‘ಜನ ನಾಯಗನ್’ ಸಿನಿಮಾ ಲೀಕ್ನ ಹಿಂದಿದ್ದಾರೆ ಎಂಬ ಆರೋಪ ವಿಜಯ್ ಅಭಿಮಾನಿಗಳಿಂದ ಕೇಳಿ ಬಂದಿದೆ.
‘ಮೊದಲಿಗೆ ‘ಜನ ನಾಯಗನ್’ ಸಿನಿಮಾ ಜನರಿಗೆ ತಲುಪದಂತೆ ತಡೆಯಲಾಯ್ತು. ಈಗ ವಿಜಯ್ ಅವರ ಸಿನಿಮಾ ಆರ್ಥಿಕವಾಗಿ ನಷ್ಟ ಹೊಂದುವಂತೆ ಮಾಡಲಾಗಿದೆ. ಕೇಂದ್ರ ಸಚಿವ ಎಲ್ ಮುರುಗನ್ ಮತ್ತು ಉದಯನಿಧಿ ಸ್ಟಾಲಿನ್ ಅವರು ಒಟ್ಟಾಗಿ ವಿಜಯ್ ಅವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ. ‘ಜನ ನಾಯಗನ್’ ಲೀಕ್ ಹಿಂದೆ ಇವರೇ ಇದ್ದಾರೆ ಎಂದು ಟಿವಿಕೆಯ ಆದವ್ ಅರ್ಜುನ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅಭಿಮಾನಿಗಳು ಸಹ ಇದೇ ಆರೋಪಗಳನ್ನು ಮಾಡುತ್ತಿದ್ದಾರೆ.
ಆರೋಪಗಳ ಬಗ್ಗೆ ಮಾತನಾಡಿರುವ ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ, ‘ಜನ ನಾಯಗನ್’ ಸಿನಿಮಾ ಲೀಕ್ ಆಗಿರುವುದು ಅನ್ಯಾಯ, ಕಾನೂನಿಗೆ ಬಾಹಿರ ಆದರೆ ಆ ಕೃತ್ಯವನ್ನು ಸಚಿವ ಎಲ್ ಮುರುಗನ್ ಅವರಿಗೆ ಲಿಂಕ್ ಮಾಡಲು ಯತ್ನಿಸುತ್ತಿರುವುದು ರಾಜಕೀಯ ದುರುದ್ದೇಶ’ ಎಂದಿದ್ದಾರೆ. ‘ಇದರಲ್ಲಿ ಬಿಜೆಪಿಯನ್ನು ಏಕೆ ಎಳೆಯಬೇಕು? ಚಿತ್ರ ಬಿಡುಗಡೆಯಾಗುವುದರಲ್ಲಿ ಅಥವಾ ಸೋರಿಕೆಯಾಗುವುದರಲ್ಲಿ ಬಿಜೆಪಿ ಪಕ್ಷದ ಪಾತ್ರ ಇಲ್ಲ? ಸೋರಿಕೆಯ ಬಗ್ಗೆ ತನಿಖೆ ನಡೆಸಿ, ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರ ಜವಾಬ್ದಾರಿ. ಸೂಕ್ತ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಬೆಳಕಿಗೆ ತರಲಿ ಅದು ಬಿಟ್ಟು ಸುಖಾ ಸುಮ್ಮನೆ ಬಿಜೆಪಿಯನ್ನು ಎಳೆದು ತಂದ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ’ ಎಂದಿದ್ದಾರೆ.
ಹೈದರಾಬಾದ್, ಏಪ್ರಿಲ್ 11: ಎನ್ಟಿಆರ್ ಜಿಲ್ಲೆಯ ಕೀಸರ ಟೋಲ್ಗೇಟ್ ಬಳಿ ಗಂಭೀರ ಅಪಘಾತ ಸಂಭವಿಸಿದೆ. ಟೋಲ್ ಗೇಟ್ ದಾಟುತ್ತಿದ್ದಾಗ, ಸಿಮೆಂಟ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿತು. ಭಾರೀ ಟ್ಯಾಂಕರ್ ಮೇಲೆ ಬಿದ್ದ ಹಿನ್ನೆಲೆಯಲ್ಲಿ ಕಾರು (Car Accident) ನಜ್ಜುಗುಜ್ಜಾಯಿತು. ತಕ್ಷಣ ಎಚ್ಚೆತ್ತ ಟೋಲ್ ಸಿಬ್ಬಂದಿ ಟ್ಯಾಂಕರ್ ಅನ್ನು ತೆಗೆದುಹಾಕಲು ಪ್ರಯತ್ನಿಸಿದರು. ಎನ್ಟಿಆರ್ ಜಿಲ್ಲೆಯ ಕೀಸರಾ ಟೋಲ್ ಗೇಟ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸಮೀಪದಲ್ಲಿ ಚಲಿಸುತ್ತಿದ್ದ ಸಿಮೆಂಟ್ ಟ್ಯಾಂಕರ್ ಟೋಲ್ ಗೇಟ್ ದಾಟುವಾಗ ನಿಯಂತ್ರಣ ತಪ್ಪಿ ಸಮೀಪದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿತು. ಭಾರೀ ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ನಜ್ಜುಗುಜ್ಜಾಯಿತು. ಟೋಲ್ ಗೇಟ್ ಬಳಿಯೇ ಅಪಘಾತ ಸಂಭವಿಸಿದ್ದು, ಟೋಲ್ ಪ್ಲಾಜಾ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ಯಾಂಕರ್ ಲೋಡ್ ಆಗುತ್ತಿದ್ದಂತೆ ಟ್ಯಾಂಕರ್ ಅನ್ನು ತೆಗೆದುಹಾಕುವಲ್ಲಿ ತೊಂದರೆ ಎದುರಿಸುತ್ತಿದೆ. ಕಾರಿನಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಇಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮುಲ್ಲನ್ಪುರದಲ್ಲಿ ನಡೆದ ಐಪಿಎಲ್ 2026 ರ 17ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾಗಿರುವ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಜೋಡಿ ಪಂಜಾಬ್ ಬೌಲರ್ಗಳನ್ನು ದುಃಸ್ವಪ್ನರಾಗಿ ಕಾಡಿದರು. ಇವರಿಬ್ಬರ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೆ ಪವರ್ಪ್ಲೇನಲ್ಲೇ ಸನ್ರೈಸರ್ಸ್ ತಂಡ 100 ರನ್ಗಳ ಗಡಿ ದಾಟಿತು. ಈ ಮೂಲಕ ಐಪಿಎಲ್ನಲ್ಲಿ ಮತ್ತೊಂದು ದಾಖಲೆಯೂ ಸೃಷ್ಟಿಯಾಯಿತು.
ಈ ಜೋಡಿ ಮೊದಲ ಆರು ಓವರ್ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 105 ರನ್ ಕಲೆಹಾಕಿದರು. ಈ ಮೂಲಕ ಈ ಮೈದಾನದಲ್ಲಿ ಪವರ್ ಪ್ಲೇ ಅತ್ಯಧಿಕ ಮೊತ್ತ ದಾಖಲಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಪಂದ್ಯದಲ್ಲಿ, ಸನ್ರೈಸರ್ಸ್ ಹೈದರಾಬಾದ್ ಕೇವಲ 5.5 ಓವರ್ಗಳಲ್ಲಿ 100 ರನ್ಗಳ ಗಡಿ ದಾಟಿತು. ಈ ಮೂಲಕ ಹೈದರಾಬಾದ್ ಮೂರನೇ ಬಾರಗೆ ಐಪಿಎಲ್ ಇತಿಹಾಸದಲ್ಲಿ ವೇಗವಾಗಿ ನೂರು ರನ್ ಗಳಿಸಿದ ತಂಡವೆಂಬ ದಾಖಲೆ ಬರೆಯಿತು.
ಸನ್ರೈಸರ್ಸ್ ತಂಡದ ಆರಂಭಿಕರು ಈ ಹಿಂದಿನ ಆವೃತ್ತಿಗಳಲ್ಲಿ ದೆಹಲಿ ಮತ್ತು ಲಕ್ನೋ ವಿರುದ್ಧವೂ ಇದೇ ರೀತಿಯ ಪ್ರದರ್ಶನ ನೀಡಿದ್ದರು. ಈ ಶತಕದ ಜೊತೆಯಾಟದ ಮೂಲಕ ಅಭಿಷೇಕ್-ಹೆಡ್ ಜೋಡಿ ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳ ಆರಂಭಿಕ ಪಾಲುದಾರಿಕೆಯನ್ನು ಗಳಿಸಿದ ಜೋಡಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇದು ಇವರಿಬ್ಬರ ಐದನೇ ಶತಕದ ಪಾಲುದಾರಿಕೆಯಾಗಿದೆ.
ಇದರೊಂದಿಗೆ, ಅವರು ವಿರಾಟ್ ಕೊಹ್ಲಿ-ಫಾಫ್ ಡು ಪ್ಲೆಸಿಸ್ ಮತ್ತು ವಾರ್ನರ್-ಬೈರ್ಸ್ಟೋವ್ ಅವರ ದಾಖಲೆಗಳನ್ನು ಸರಿಗಟ್ಟಿದ್ದಾರೆ. ಈ ಜೋಡಿ ಇನ್ನೂ ಒಂದು ಶತಕದ ಪಾಲುದಾರಿಕೆಯನ್ನು ನಿರ್ಮಿಸಿದರೆ, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಅವರ ಆರು ಶತಕಗಳ ಪಾಲುದಾರಿಕೆಯ ಸಾರ್ವಕಾಲಿಕ ದಾಖಲೆಯನ್ನು ಮುರಿಯಲಿದೆ.
ಆರಂಭಿಕರ ಈ ಅಬ್ಬರದ ಪ್ರದರ್ಶನದ ಹೊರತಾಗಿಯೂ ಸನ್ರೈಸರ್ಸ್ ಹೈದರಾಬಾದ್ ತಂಡ 250 ರನ್ ದಾಖಲಿಸುವಲ್ಲಿ ಎಡವಿತು. ಆರಂಭಿಕರ ವಿಕೆಟ್ ಪತನದ ಬಳಿಕ ಬಂದವರು ಹೆಚ್ಚು ಪರಿಣಾಮಕಾರಿಯಾಗಲಿಲ್ಲ. ಹೀಗಾಗಿ ಸನ್ರೈಸರ್ಸ್ 20 ಓವರ್ಗಳಲ್ಲಿ 219 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಆಚಾರ್ಯ ಚಾಣಕ್ಯರು (Acharya Chanakya) ನಮ್ಮ ಜೀವನ ಸರಿಯಾದ ದಿಕ್ಕಿನಲ್ಲಿ ಸಾಗಲು ಹಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಅವರು ಕೇವಲ ಯಶಸ್ಸಿಗೆ ಮಾತ್ರವಲ್ಲದೆ ಆರ್ಥಿಕ ಬಲಕ್ಕೆ, ಶ್ರೀಮಂತಿಕೆ ಗಳಿಸಲು, ಬಡತನದಿಂದ ಪಾರಾಗಲು ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಇಂದಿನ ದುಬಾರಿ ದುನಿಯಾದಲ್ಲಿ ನಮಗೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತಲೇ ಇರುತ್ತವೆ. ಈ ಆರ್ಥಿಕ ಸಂಕಷ್ಟಗಳಿಂದ ಪಾರಾಗುವುದು ಹೇಗೆ, ಆರ್ಥಿಕ ಸಂಕಷ್ಟಗಳು ಬಾರದಂತೆ ನೋಡಿಕೊಳ್ಳಲು ಯಾವ ಅಭ್ಯಾಸಗಳನ್ನು ಬೆಸೆಸಿಕೊಳ್ಳಬೇಕು ಎಂಬುದನ್ನು ಸಹ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವಿವರಿಸಿದ್ದಾರೆ. ನಿಮಗೂ ಕೂಡ ಪದೇ ಪದೇ ಆರ್ಥಿಕ ಸಂಕಷ್ಟ ಎದುರಾಗುತ್ತಿದೆಯೇ? ಈ ಒಂದು ಸಮಸ್ಯೆಯಿಂದ ಮುಕ್ತಿ ಪಡೆಯಲು ಯಾವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.
ಆರ್ಥಿಕ ಸಂಕಷ್ಟದಿಂದ ಪಾರಾಗಲು ನೀವು ಬೆಳೆಸಿಕೊಳ್ಳಬೇಕಾದ ಅಭ್ಯಾಸಗಳು:
ಉಳಿತಾಯದ ಅಭ್ಯಾಸ ಬೆಳೆಸಿಕೊಳ್ಳಿ: ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಭಾಗವನ್ನು ಉಳಿಸಬೇಕು. ಉಳಿತಾಯವು ಭವಿಷ್ಯದ ತೊಂದರೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಲ್ಲದೆ ಉಳಿತಾಯ ಮಾಡುವುದರಿಂದ ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟದಿಂದಲೂ ಪಾರಾಗಬಹುದು.
ಹಣವನ್ನು ಗೌರವಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಚಾಣಕ್ಯರ ಪ್ರಕಾರ, ಸಂಪತ್ತನ್ನು ಯಾರು ಗೌರವಿಸುತ್ತಾರೆಯೋ ಅವರ ಬಳಿ ಸದಾ ಸಂಪತ್ತು ನೆಲೆಸುತ್ತದೆ. ಯಾವ ಕಾರಣಕ್ಕೂ ದುಂದು ವೆಚ್ಚ ಮಾಡಬಾರದು. ಹಣವನ್ನು ಗೌರವದಿಂದ ಬಳಸಬೇಕು. ದುಂದುಗಾರಿಕೆ, ಆಡಂಬರ ಮತ್ತು ಅಜಾಗರೂಕತೆಯನ್ನು ತಪ್ಪಿಸಿ, ವಿವೇಕಯುತವಾಗಿ ಖರ್ಚು ಮಾಡಿದರೆ ಮಾತ್ರ ನೀವು ಆರ್ಥಿಕವಾಗಿ ಸದೃಢವಾಗಲು ಸಾಧ್ಯ.
ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳಿ: ಕೇವಲ ಒಂದು ಆದಾಯವನ್ನು ಅವಲಂಬಿಸಬೇಡಿ. ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳಿ. ಹೊಸ ಕೌಶಲ್ಯಗಳನ್ನು ಕಲಿಯುವ ಮೂಲಕ ಅಥವಾ ಹೆಚ್ಚುವರಿ ಕೆಲಸವನ್ನು ತೆಗೆದುಕೊಳ್ಳುವ ಮೂಲಕ ಹೆಚ್ಚುವರಿ ಆದಾಯದ ಮೂಲಗಳನ್ನು ಅಭಿವೃದ್ಧಿಪಡಿಸುವುದರಿಂದ ನೀವು ಆರ್ಥಿಕವಾಗಿ ಸಬಲರಾಗಬಹುದು ಎನ್ನುತ್ತಾರೆ ಚಾಣಕ್ಯ.
ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಿ: ಆರ್ಥಿಕ ಸಮಸ್ಯೆಗಳನ್ನು ತಪ್ಪಿಸಲು ಸಕಾರಾತ್ಮಕ ಚಿಂತನೆಯು ನಿರ್ಣಾಯಕವಾಗಿದೆ ಎನ್ನುತ್ತಾರೆ ಚಾಣಕ್ಯ. ನಕಾರಾತ್ಮಕ ಆಲೋಚನೆಗಳು ವ್ಯಕ್ತಿಯ ಪ್ರಗತಿಗೆ ಅಡ್ಡಿಯಾಗುತ್ತವೆ, ಅದೇ ಸಕಾರಾತ್ಮಕ ಮನೋಭಾವವು ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ. ಹಾಗಾಗಿ ಸವಾಲುಗಳನ್ನು ಅವಕಾಶಗಳಾಗಿ ನೋಡಿ.
ಸಮಯದ ಸರಿಯಾದ ಬಳಕೆ: ಚಾಣಕ್ಯನ ಪ್ರಕಾರ ಸಮಯ ಮತ್ತು ಹಣ ಎರಡೂ ಅಮೂಲ್ಯ. ನಿಷ್ಪ್ರಯೋಜಕ ವಿಷಯಗಳಿಗೆ ಸಮಯ ವ್ಯರ್ಥ ಮಾಡುವುದನ್ನು ತಪ್ಪಿಸಬೇಕು. ಸಮಯವನ್ನು ಗೌರವಿಸುವವರು ಮಾತ್ರ ಜೀವನದಲ್ಲಿ ಪ್ರಗತಿ ಹೊಂದುತ್ತಾರೆ. ಅಲ್ಲದೆ ಸಮಯವನ್ನು ಬುದ್ಧಿವಂತಿಕೆಯಿಂದ ಬಳಸಿದರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ.
ಕೆಟ್ಟ ಸಹವಾಸದಿಂದ ದೂರವಿರಿ: ಕೆಟ್ಟ ಸಹವಾಸವು ವ್ಯಕ್ತಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಾನಿಯನ್ನುಂಟುಮಾಡಬಹುದು. ಆದ್ದರಿಂದ, ಯಾವಾಗಲೂ ಕಠಿಣ ಪರಿಶ್ರಮಿ, ಸಕಾರಾತ್ಮಕ ಮತ್ತು ಗುರಿ-ಆಧಾರಿತ ಜನರಿಂದ ನಿಮ್ಮನ್ನು ಸುತ್ತುವರೆದಿರಿ ಎನ್ನುತ್ತಾರೆ ಚಾಣಕ್ಯ.
ಸಣ್ಣ ಖರ್ಚುಗಳ ಬಗ್ಗೆ ನಿಗಾ ಇರಿಸಿ: ಸಣ್ಣ ಖರ್ಚುಗಳು ಕ್ರಮೇಣ ಗಣನೀಯ ಖರ್ಚುಗಳಾಗಿ ಬದಲಾಗಬಹುದು. ಪ್ರತಿಯೊಂದು ಖರ್ಚಿನ ಬಗ್ಗೆ ನಿಗಾ ಇಡುವುದು ಮತ್ತು ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಆರ್ಥಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ.
ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ: ಹೂಡಿಕೆ ಮಾಡುವ ಮೊದಲು ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವುದು ಮುಖ್ಯ. ಆತುರದ ನಿರ್ಧಾರಗಳು ನಷ್ಟಕ್ಕೆ, ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಬಹುದು, ಆದ್ದರಿಂದ ಸುರಕ್ಷಿತವಾಗಿ ಮತ್ತು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ.
ಭಾರತ ಟಿ20 ತಂಡದ ಬೌಲಿಂಗ್ ವಿಭಾಗದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಅರ್ಷದೀಪ್ ಸಿಂಗ್ಗೆ ಈ ಬಾರಿಯ ಐಪಿಎಲ್ ದುಃಸ್ವಪ್ನದಂತೆ ಕಾಡುತ್ತಿದೆ. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಅರ್ಷದೀಪ್ಗೆ ಮೊದಲ ಮೂರು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಸಿಕ್ಕಿರಲಿಲ್ಲ. ಇತ್ತ ಅರ್ಷದೀಪ್ ರನ್ಗೂ ಕಡಿವಾಣ ಹಾಕುತ್ತಿರಲಿಲ್ಲ. ಇದು ಪಂಜಾಬ್ಗೆ ದೊಡ್ಡ ತಲೆನೋವಾಗಿತ್ತು. ಇಂದು ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅರ್ಷದೀಪ್ ತುಂಬಾ ದುಬಾರಿಯಾದರು. ಆದರೆ ಕೊನೆಗೂ ತಮ್ಮ ವಿಕೆಟ್ಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದರು.
ಈ ಪಂದ್ಯದಲ್ಲಿ 4 ಓವರ್ಗಳನ್ನು ಬೌಲ್ ಮಾಡಿದ ಅರ್ಷದೀಪ್ ಬರೋಬ್ಬರಿ 50 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರು. ಅಂದರೆ ಅರ್ಷದೀಪ್ ವಿಕೆಟ್ ಪಡೆದರೂ ರನ್ಗೆ ಕಡಿವಾಣ ಹಾಕುವಲ್ಲಿ ವಿಫಲರಾದರು. ಈ ಆವೃತ್ತಿಯಲ್ಲಿ ಅರ್ಷದೀಪ್ ಅವರ ಮೊದಲ ವಿಕೆಟ್ ಇಶಾನ್ ಕಿಶನ್ ಅವರ ರೂಪದಲ್ಲಿ ಬಂತು. ಅರ್ಷದೀಪ್ ಅವರ ಎಸೆತವನ್ನು ಕಿಶನ್ ಸಿಕ್ಸರ್ಗಟ್ಟಲು ಯತ್ನಿಸಿದರು. ಆದರೆ ಬೌಂಡರಿ ಗೆರೆ ಬಳಿ ನಿಂತಿದ್ದ ಮಾರ್ಕೋ ಯಾನ್ಸನ್ 15 ಮೀಟರ್ ಓಡಿ ಬಂದು ಕೇವಲ ಒಂದೇ ಒಂದು ಕೈನಲ್ಲಿ ಅದ್ಭುತ ಕ್ಯಾಚ್ ತೆಗೆದುಕೊಂಡರು.
ಯಾನ್ಸನ್ ಹಿಡಿದ ಈ ಕ್ಯಾಚ್ ಅರ್ಷದೀಪ್ ಅವರಿಗೂ ಅಚ್ಚರಿಯನ್ನುಂಟು ಮಾಡಿತು. ಅರ್ಷದೀಪ್ ತಮ್ಮ ಎರಡನೇ ವಿಕೆಟ್ ರೂಪದಲ್ಲಿ ಸಲೀಲ್ ಅರೋರಾ ಅವರ ಭೇಟೆಯಾಡಿದರು. ಆದಾಗ್ಯೂ ಇದೇ ಪಂದ್ಯದಲ್ಲಿ ಅರ್ಷದೀಪ್ ಒಂದೇ ಓವರ್ನಲ್ಲಿ ಬರೋಬ್ಬರಿ 24 ರನ್ಗಳನ್ನು ಬಿಟ್ಟುಕೊಟ್ಟರು. ಇದರಲ್ಲಿ ಅಭಿಷೇಕ್ ಶರ್ಮಾ ಬೌಂಡರಿ ಸಿಕ್ಸರ್ಗಳಿಂದ 20ರನ್ ಕಲೆಹಾಕಿದರೆ, ಮಿಕ್ಕ 4 ರನ್ಗಳು ವೈಡ್ನಿಂದ ಬಂದವು.