ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ತಾರತಮ್ಯದ ಬಗ್ಗೆಯೂ ಭಕ್ತರ ಅಸಮಾಧಾನ – Kannada News

ತಿರುವನಂತಪುರಂ, ಜೂನ್​​ 09: ಕೇರಳದ ಸುಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಕರ್ನಾಟಕದ ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ 1,000 ರೂಪಾಯಿ ಟಿಕೆಟ್ ಪಡೆದಿದ್ದರೂ, ಭಕ್ತರನ್ನು ಸುಮಾರು 30-40 ನಿಮಿಷಗಳ ಕಾಲ ಕ್ಯೂನಲ್ಲಿ ನಿಲ್ಲಿಸಲಾಗಿತ್ತು. ಆದರೆ, ಸ್ಥಳೀಯರಿಗೆ ಮತ್ತು ತಮ್ಮ ಭಾಷೆಯವರಿಗೆ ಹಿಂಬಾಗಿಲಿನಿಂದ ಅಥವಾ ಮಧ್ಯಪ್ರವೇಶಿಸಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಭಕ್ತರು ದೂರಿದ್ದಾರೆ. ಈ ತಾರತಮ್ಯವನ್ನು ಪ್ರಶ್ನಿಸಲು ಮತ್ತು ವಿಡಿಯೋ ಮಾಡಲು ಮುಂದಾದಾಗ, ದೇವಸ್ಥಾನದ ಸಿಬ್ಬಂದಿ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ದೌರ್ಜನ್ಯ ಮಾಡಿದ್ದಾರೆ. ಕ್ಯೂ ನಿರ್ವಹಣೆಯಲ್ಲಿ ಸಂಪೂರ್ಣ ವೈಫಲ್ಯ ಎದುರಾಗಿದ್ದು, ಭಕ್ತರೊಂದಿಗೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ. ಕರ್ನಾಟಕದಿಂದ ತೆರಳಿದ್ದ ಶೇ.50-60ರಷ್ಟು ಜನರಿಗೆ ದರ್ಶನವೇ ಆಗಿಲ್ಲ. ಹೀಗಾಗಿ ನಿರಾಸೆಯಿಂದ ಹಿಂದಿರುಗಿದ್ದಾರೆ ಎಂದು ಭಕ್ತ ಪವನ್ ವಿವರಿಸಿದ್ದಾರೆ. ದೇವರು, ದೇವಸ್ಥಾನದ ಬಗ್ಗೆ ನಮಗೆ ಯಾವುದೇ ನೆಗೆಟಿವ್ ಭಾವನೆ ಇಲ್ಲ. ಆದರೆ ಕ್ಯೂ ನಿರ್ವಹಣೆಯ ವೈಫಲ್ಯ ಮತ್ತು ದೌರ್ಜನ್ಯದ ವಿರುದ್ಧ ನಮ್ಮ ಆಕ್ಷೇಪವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ – Kannada News

ಆಟೊರಿಕ್ಷಾ ಚಾಲಕನ ಸಾಂದರ್ಭಿಕ ಚಿತ್ರImage Credit source: triloks/E+/Getty Images

ನವದೆಹಲಿ, ಜೂನ್ 9: ಚಾಲನಾ ಪರವಾನಗಿ (Driving Licence) ಮತ್ತು ವಾಹನಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದೆ. ಪ್ರಸ್ತುತ ಚಾಲನಾ ಪರವಾನಗಿಯು ಸಾಮಾನ್ಯವಾಗಿ 20 ವರ್ಷಗಳವರೆಗೆ ಸಿಂಧುವಾಗಿರುತ್ತದೆ. ಇದನ್ನು ಬದಲಾಯಿಸಿ, ಪರವಾನಗಿ ಹೊಂದಿರುವವರಿಗೆ 50 ವರ್ಷ ವಯಸ್ಸಾಗುವವರೆಗೆ ಅದರ ಸಿಂಧುತ್ವವನ್ನು (Validity) ವಿಸ್ತರಿಸುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಶೀಲಿಸುತ್ತಿದೆ. ಹಾಗೆಯೇ, ವಾಹನಗಳ ಮಾಲೀಕತ್ವ ವರ್ಗಾವಣೆ (Vehicle Ownership transfer) ಮತ್ತು ಪರ್ಮಿಟ್ ನವೀಕರಣದಂತಹ (Permit renewal) ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಆನ್‌ಲೈನ್ ಮೂಲಕವೇ ನಿರ್ವಹಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಈ ಬದಲಾವಣೆಗಳ ಹಿಂದಿರುವ ಉದ್ದೇಶ

ನಾಗರಿಕರು ಪದೇ ಪದೇ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಅಲೆದಾಡುವುದನ್ನು ತಪ್ಪಿಸುವುದು ಮತ್ತು ಆಡಳಿತಾತ್ಮಕ ಕೆಲಸಗಳನ್ನು ಸರಳಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವುದರಿಂದ ಜನಸಾಮಾನ್ಯರಿಗೆ ಮತ್ತು ಸಾರಿಗೆ ಇಲಾಖೆಗೆ ಸಮಯ ಮತ್ತು ಶ್ರಮ ಉಳಿಯಲಿದೆ. ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ಸುಲಭ ಮತ್ತು ವೇಗಗೊಳಿಸಲೂ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದನ್ನೂ ಓದಿ: ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು?

ಈ ಬದಲಾವಣೆಗಳಿಂದ ರಾಜ್ಯ ಸರ್ಕಾರಗಳಿಗೆ ಯಾವುದೇ ಆದಾಯದ ನಷ್ಟ ಉಂಟಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಾಲನಾ ಪರವಾನಗಿ ಪಡೆಯಲು ಅಥವಾ ನವೀಕರಿಸಲು ಪಾವತಿಸಬೇಕಾದ ಶುಲ್ಕವನ್ನು ಆನ್‌ಲೈನ್ ವ್ಯವಸ್ಥೆಯ ಮೂಲಕವೇ ಸಂಗ್ರಹಿಸುವುದನ್ನು ಮುಂದುವರಿಸಬಹುದು.

ಸದ್ಯ ಇರುವ ಡ್ರೈವಿಂಗ್ ಲೈಸೆನ್ಸ್ ನಿಯಮಗಳೇನು?

ಖಾಯಂ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಈಗಿರುವ ನಿಯಮಗಳ ಪ್ರಕಾರ, ಖಾಸಗಿ ವಾಹನಗಳಿಗೆ ಡಿಎಲ್ 20 ವರ್ಷಗಳವರೆಗೆ ಮಾನ್ಯವಿರುತ್ತದೆ. ಲೈಸೆನ್ಸ್​ದಾರರ ವಯಸ್ಸು 40 ವರ್ಷ ದಾಟಿದ ಬಳಿಕ ನವೀಕರಣ ಮಾಡಬೇಕಾಗುತ್ತದೆ.

40 ವರ್ಷ ವಯಸ್ಸು ದಾಟಿದ ಬಳಿಕ ಪಡೆಯಲಾಗುವ ಡಿಎಲ್​ನ ಸಿಂಧುತ್ವ 10 ವರ್ಷ ಇರುತ್ತದೆ. ಆ ಬಳಿಕ ಪ್ರತೀ ಐದು ವರ್ಷಕ್ಕೆ ನವೀಕರಣ ಮಾಡಿಸಬೇಕಾಗುತ್ತದೆ. ಕಮರ್ಷಿಯಲ್ ವಾಹನಗಳಾದರೆ ಡಿಎಲ್ ಮಾನ್ಯತೆ 3 ವರ್ಷ ಮಾತ್ರವೇ ಇರುತ್ತದೆ. ಆ ನಂತರ ನವೀಕರಿಸುತ್ತಿರಬೇಕಾಗುತ್ತದೆ.

ಇದನ್ನೂ ಓದಿ: ಎಐ ಅಬ್ಬರದಲ್ಲಿ ಮುಂದೋಡಿದ್ದ ದೇಶಗಳಿಗೆ ಅದೇ ಎಐ ಹೊಡೆತ; ಭಾರತದಕ್ಕಿಂತ ಕೆಳಗೆ ಕುಸಿದ ತೈವಾನ್, ಕೊರಿಯನ್ ಮಾರುಕಟ್ಟೆ

ಒಟ್ಟಾರೆಯಾಗಿ, ಡಿಜಿಟಲೀಕರಣದ ಮೂಲಕ ವಾಹನ ಸವಾರರಿಗೆ ಇರುವ ಕಾಗದಪತ್ರಗಳ ಕಿರಿಕಿರಿ ಮತ್ತು RTO ಕಚೇರಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ. ಹಾಗೆಯೇ, ಆರ್​ಟಿಒ ಕಚೇರಿಯೊಳಗೆ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದಾಗುವ ಲಂಚಬಾಕತನದ ಪ್ರಕರಣಗಳಿಗೂ ಕಡಿವಾಣ ಬೀಳಬಹುದು. ಸಚಿವಾಲಯವು ಈ ಬಗ್ಗೆ ವಿವರವಾಗಿ ಕೆಲಸ ಮಾಡುತ್ತಿದ್ದು, ಶೀಘ್ರದಲ್ಲೇ ಈ ಬದಲಾವಣೆಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು.

ಆದರೆ, ಲಂಕಾ ವೇಗಿ ಮೊಹಮ್ಮದ್ ಶಿರಾಜ್ ಎಸೆದ ನಾಲ್ಕನೇ ಓವರ್‌ನ ಫುಲ್-ಲೆಂತ್ ಎಸೆತವನ್ನು ಲಾಂಗ್-ಆಫ್‌ ಬೌಂಡರಿ ದಾಟಿಸಲು ಯತ್ನಿಸಿದರು. ದುರದೃಷ್ಟವಶಾತ್, ಚೆಂಡು ಸರಿಯಾಗಿ ಕನೆಕ್ಟ್ ಆಗದೆ ಮಿಡ್-ಆಫ್‌ನಲ್ಲಿದ್ದ ಶ್ರೀಲಂಕಾ ನಾಯಕ ಸಹನ್ ಅರಾಚಿಂಗೆ ಹಿಡಿದ ಅದ್ಭುತ ಡೈವಿಂಗ್ ಕ್ಯಾಚ್‌ಗೆ ಬಲಿಯಾದರು. ಇದರೊಂದಿಗೆ ವೈಭವ್ ಸೂರ್ಯವಂಶಿಯ ಮೊದಲ ಇನಿಂಗ್ಸ್ 14 ರನ್​ಗಳೊಂದಿಗೆ ಕೊನೆಗೊಂಡಿತು.

ಐಪಿಎಲ್​​ನಲ್ಲಿ ಸಿಡಿಲಬ್ಬರ:

ವೈಭವ್ ಸೂರ್ಯವಂಶಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸಿದ್ದರು. 16 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಯುವ ದಾಂಡಿಗ  776 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು.

ಈ ಭರ್ಜರಿ ಪ್ರದರ್ಶನದ ಫಲವಾಗಿ ವೈಭವ್ ಸೂರ್ಯವಂಶಿಯನ್ನು ಭಾರತ ಟಿ20 ತಂಡ ಹಾಗೂ ಭಾರತ ಎ ಏಕದಿನ ತಂಡಗಳಿಗೆ ಆಯ್ಕೆ ಮಾಡಲಾಗಿತ್ತು. ಅದರಂತೆ ಇದೀಗ ಶ್ರೀಲಂಕಾ ಎ, ಅಫ್ಘಾನಿಸ್ತಾನ್ ಎ ಹಾಗೂ ಭಾರತ ಎ ನಡುವಣ ತ್ರಿಕೋನ ಏಕದಿನ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಕಣಕ್ಕಿಳಿದಿದ್ದಾರೆ.

ಶ್ರೀಲಂಕಾ ಎ vs ಭಾರತ ಎ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಭಾರತ ಎ ತಂಡ ನಿರೀಕ್ಷಿತ ಆರಂಭ ಪಡೆದಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32 ರನ್​ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ.

ಮತ್ತೊಂದೆಡೆ ರುತುರಾಜ್ ಜೊತೆ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ಅದರಂತೆ 34 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ಎ ತಂಡ 3 ವಿಕೆಟ್ ಕಳೆದುಕೊಂಡು 160 ರನ್ ಕಲೆಹಾಕಿದೆ.

ಭಾರತ ‘ಎ’ ಪ್ಲೇಯಿಂಗ್ XI: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಆಯುಷ್ ಬದೋನಿ, ಅನ್ಕುಲ್ ರಾಯ್, ಸೂರ್ಯಂಶ್ ಶೆಡ್ಗೆ, ಅನ್ಶುಲ್ ಕಂಬೋಜ್, ಅರ್ಷಾದ್ ಖಾನ್, ವಿಪ್ರಾಜ್ ನಿಗಮ್.

ಇದನ್ನೂ ಓದಿ: ಅನ್​ಫಿಟ್​… ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಶ್ರೀಲಂಕಾ ‘ಎ’ ಪ್ಲೇಯಿಂಗ್ XI: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಸದೀರ ಸಮರವಿಕ್ರಮ, ಸಹನ್ ಅರಾಚಿಂಗೆ (ನಾಯಕ), ಚಾಮಿಕ ಕರುಣಾರತ್ನೆ, ರವಿಂದು ಫೆರ್ನಾಂಡೋ, ವನುಜಾ ಸಹನ್, ವಿಜಯಕಾಂತ್ ವಿಯಾಸ್ಕಾಂತ್, ಮೊಹಮ್ಮದ್ ಶಿರಾಜ್, ಗರುಕ ಸಂಕೇತ್.

Source link

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ – Kannada News

ಬೆಳಗಾವಿ, ಜೂನ್​ 09: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆ ಸುರಿದ ಮಳೆಯ ಪರಿಣಾಮವಾಗಿ ಪಟ್ಟಣದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಮಳೆ ನಿಂತು ಒಂದು ದಿನ ಕಳೆದರೂ ನೀರಿನ ಮಟ್ಟ ಕಡಿಮೆಯಾಗದ ಕಾರಣ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಅಥವಾ ನೀರು ಹೊರಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ – Kannada News

ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9

ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಖ್ಯಾಂಶಗಳು

  • ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ ಸ್ಫೋಟಕಗಳು ಪತ್ತೆ.
  • 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ.
  • ಪರವಾನಗಿ ಇಲ್ಲದೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಂಗ್ರಹಿಸಿದ್ದರಿಂದ ಅನುಮಾನ.

ಪರವಾನಗಿ ಇಲ್ಲದೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಂಗ್ರಹ

ಆವಲಹಳ್ಳಿ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಈ ದಿಢೀರ್ ದಾಳಿ ನಡೆಸಲಾಗಿದೆ. ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಕೇವಲ ಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಫೋಟಕಗಳ ಕಾಯಿದೆ, 1884 ರ ಅಡಿ (Explosives Act, 1884) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ರಸ್ತೆಯಲ್ಲಿ ಪತ್ತೆಯಾಗಿದ್ದ ಜಿಲೆಟಿನ್

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಭದ್ರತಾ ದೃಷ್ಟಿಯಿಂದ ಭಾರಿ ಕೋಲಾಹಲ ಸೃಷ್ಟಿಸಿತ್ತು.

ಇದನ್ನೂ ಓದಿ: ಮೋದಿ ಬೆಂಗಳೂರು ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣದ ಅಸಲಿ ಕಾರಣ ಕೊನೆಗೂ ಬಯಲು!

ಆ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಮತ್ತೆ ಅದೇ ಮಾದರಿಯ ಸ್ಫೋಟಕಗಳು ಸಿಕ್ಕಿರುವುದು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ – Kannada News

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಹೆಚ್​​ಡಿಕೆ ಸ್ಪಷ್ಟನೆImage Credit source: Tv9 Kannada

ಮಂಡ್ಯ, ಜೂನ್​​ 09: ರಾಜ್ಯಸಭಾ ಚುನಾವಣೆಗೆ ಎನ್​​ಡಿಎ ಅಭ್ಯರ್ಥಿಯಾಗಿ ಒಬಿಸಿ ನಾಯಕ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಬಿಜೆಪಿ (BJP) ಘೋಷಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್​​ ವಿರುದ್ಧ ಕಾಂಗ್ರೆಸ್​​ ಕಿಡಿಕಾರಿತ್ತು. ಮಾಜಿ ಪ್ರಧಾನಿ ದೇವೇಗೌಡಿರಿಗೆ ಟಿಕೆಟ್​​ ಕೈತಪ್ಪಿದ ಬಗ್ಗೆ ರಣದೀಪ್​​ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಮೈತ್ರಿ ಪಕ್ಷಗಳಿಂದ ತೀಕ್ಷ್ಣ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು. ಈ ನಡುವೆ ಹೆಚ್​​ಡಿಡಿಗೆ ರಾಜ್ಯಸಭಾ ಟಿಕೆಟ್​ ಅಸಲಿಗೆ ಕೈತಪ್ಪಿದ್ದೇಕೆ ಎಂಬ ಕಾರಣವನ್ನು ಸ್ವತಃ ಅವರ ಪುತ್ರ, ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರೇ ಬಹಿರಂಗಪಡಿಸಿದ್ದಾರೆ.

‘ಮೈತ್ರಿಯಲ್ಲಿ ಬಿರುಕು ತರಲು ಯತ್ನ’

ಈ ಸಂಬಂಧ ಮಂಡ್ಯ ತಾಲೂಕಿನ ತಗ್ಗಹಳ್ಳಿಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ರಾಜ್ಯಸಭೆ ಟಿಕೆಟ್‌‌ಗೆ ಹೆಚ್.ಡಿ. ದೇವೇಗೌಡರು ಅರ್ಜಿಯೇ ಹಾಕಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಹೆಚ್​.ಡಿ.ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಭಯ ಶುರುವಾಗಿದ್ದು, ನಮ್ಮ ನಡುವೆ ಬಿರುಕು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ದೇವೇಗೌಡರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದಿದ್ದರು ಎಂದು ಹೆಚ್​​ಡಿಕೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಧಿಕಾರವೊಂದೇ ಜೆಡಿಎಸ್ ಮಂತ್ರ’; ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ ಬೆನ್ನಲ್ಲೇ ಹೆಚ್​ಡಿಕೆ ವಿರುದ್ಧ ಸುರ್ಜೇವಾಲ ವ್ಯಂಗ್ಯ

ಕಳೆದ ಬಾರಿ ಹೆಚ್​ಡಿಡಿ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲ ವಿಚಾರ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ. ಬದಲಾಗಿ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಕಳೆದ ಬಾರಿ ಅಭ್ಯರ್ಥಿ ಹಾಕಲ್ಲ ಎಂದು ಯಡಿಯೂರಪ್ಪನವರು ಕರೆ ಮಾಡಿ ತಿಳಿಸಿದ್ರು. ಅದಾದ ಬಳಿಕ ನಾನು ಒತ್ತಾಯ ಮಾಡಿ ಅಭ್ಯರ್ಥಿ ಮಾಡಿದ್ದು ಎಂದವರು ಹೇಳಿದ್ದಾರೆ. ಒಕ್ಕಲಿಗರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಕಾಂಗ್ರೆಸ್ ಆರೋಪ ಸಂಬಂಧವೂ ಉತ್ತರಿಸಿದ ಅವರು, ಒಕ್ಕಲಿಗ ಸಿಎಂ ಇರಬೇಕಾದರೆ ರಾಜ್ಯಸಭೆ ಸ್ಥಾನ ಪಡೆದು ಏನು ಮಾಡುತ್ತೀರಾ ಎಂದವರು ಪ್ರಶ್ನಿಸಿದ್ದಾರೆ.

ಸಿಎಂ ಡಿಕೆಶಿ ಹೇಳಿಕೆ ಕೌಂಟರ್​​

ಹೆಚ್​ಡಿಕೆ ಸಲಹೆ ಪಡೆಯುವುದಾಗಿ ಸಿಎಂ‌ ಡಿಕೆಶಿ ಹೇಳಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿಎಂ ಡಿಕೆಶಿಗೆ ನಾನೇನು ಸಲಹೆ ನೀಡಲಿ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ಡೆ ಕೇಳುತ್ತಾರೆ. ನಾನೇನು ಮಾಡಿಲ್ಲ, ನನ್ನ ಬಳಿ ಏನು ಸಲಹೆ ಕೇಳ್ತಾರೆ? ಅವರಿಗೆ ಫೋಟೋ ಬೇಕಿದೆ, ಅದಕ್ಕೆ ಎಲ್ಲೆಡೆ ಹೋಗ್ತಿದ್ದಾರೆ. ಅತಿ ವಿನಯಂ ಧೂರ್ತ ಲಕ್ಷಣಂ ಎಂದು ಹೇಳುವ ಮೂಲಕ ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:14 pm, Tue, 9 June 26

Source link

ಸುಪ್ರೀತ್ ರೆಡ್ಡಿ ವಿರುದ್ಧ ದೂರು, ಪೊಲೀಸರ ಅತಿಥಿಯಾಗಲಿರುವ ‘ಕಾಟ್ರಾಜು’ – Kannada News

ತೆಲುಗು ಚಿತ್ರರಂಗದ (Tollywood) ಜನಪ್ರಿಯ ನಟ ಸುಪ್ರೀತ್ ರೆಡ್ಡಿ (‘ಛತ್ರಪತಿ’ ಸಿನಿಮಾದ ನಟ) ವಿವಾದಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹಲ್ಲೆ ಸೇರಿದಂತೆ ಇನ್ನೂ ಹಲವು ಆರೋಪಗಳಡಿ ದೂರು ದಾಖಲಾಗಿದೆ. ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಮಿಂಚುವ ಸುಪ್ರೀತ್ ರೆಡ್ಡಿ ನಿಜ ಜೀವನದಲ್ಲಿಯೂ ವಿಲನ್ ರೀತಿಯ ಕೃತ್ಯ ಮಾಡಿ, ಇದೀಗ ಪೊಲೀಸರಿಂದ ವಿಚಾರಣೆ ಎದುರಿಸಲಿದ್ದಾರೆ. ರಸ್ತೆಯಲ್ಲಿ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆಂಬ ಸಣ್ಣ ಕಾರಣಕ್ಕಾಗಿ ಅವರು ಕ್ಯಾಬ್ ಡ್ರೈವರ್ ಒಬ್ಬರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೇಡ್ಚಲ್ ಜಿಲ್ಲೆಯ ಕೀಸರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ನಾಗಾರಂನಲ್ಲಿ ಈ ಗಲಾಟೆ ನಡೆದಿದೆ. ಊಬರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀಹರಿ ಎಂಬ ವ್ಯಕ್ತಿ, ನಾಗಾರಂ ಚೌರಸ್ತಾ ಪ್ರದೇಶದಲ್ಲಿ ಒಂದು ಟ್ರಿಪ್ ಪೂರ್ಣಗೊಳಿಸಿ, ಮುಂದಿನ ಬುಕಿಂಗ್‌ಗಾಗಿ ತಮ್ಮ ಕ್ಯಾಬ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕಾಯುತ್ತಿದ್ದರು. ಅದೇ ಸಮಯದಲ್ಲಿ ನಟ ಸುಪ್ರೀತ್ ರೆಡ್ಡಿ ತಮ್ಮ ಫಾರ್ಚೂನರ್ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬಂದಿದ್ದಾರೆ. ಆದರೆ, ಕ್ಯಾಬ್ ರಸ್ತೆಗೆ ಸ್ವಲ್ಪ ಅಡ್ಡಲಾಗಿದೆ ಎಂಬ ಕಾರಣಕ್ಕೆ ಸುಪ್ರೀತ್ ರೆಡ್ಡಿ ತೀವ್ರ ಆಕ್ರೋಶಗೊಂಡಿದ್ದಾರೆ. ತಕ್ಷಣವೇ ತಮ್ಮ ಕಾರಿನಿಂದ ಕೆಳಗಿಳಿದು, ಡ್ರೈವರ್ ಶ್ರೀಹರಿ ಬಳಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾರೆ. ಡ್ರೈವರ್ ಪರಿಸ್ಥಿತಿಯನ್ನು ವಿವರಿಸಲು ಪ್ರಯತ್ನಿಸಿದರೂ ಕೇಳದ ನಟ, ರಸ್ತೆಯಲ್ಲಿ ಎಲ್ಲರೂ ನೋಡುತ್ತಿದ್ದಂತೆಯೇ ಶ್ರೀಹರಿ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಥಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ನಟನ ಕೈಯಿಂದ ಪೆಟ್ಟು ತಿಂದ ಕ್ಯಾಬ್ ಡ್ರೈವರ್ ಶ್ರೀಹರಿ ಘಟನಾ ಸ್ಥಳದಿಂದಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೀಸರ ಪೊಲೀಸರು ತಕ್ಷಣವೇ ಸ್ಪಂದಿಸಿ ಘಟನಾ ಸ್ಥಳಕ್ಕೆ ಆಗಮಿಸಿ ವಿವರಗಳನ್ನು ಸಂಗ್ರಹಿಸಿದ್ದಾರೆ. ತದನಂತರ ಸಂತ್ರಸ್ತನ ಲಿಖಿತ ದೂರಿನ ಮೇರೆಗೆ ಪೊಲೀಸರು ನಟ ಸುಪ್ರೀತ್ ರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗಲಾಟೆ ನಡೆದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಲಭ್ಯವಿರುವ ಆಧಾರಗಳ ಪ್ರಕಾರ ಸುಪ್ರೀತ್ ಅವರಿಗೆ ನೋಟಿಸ್ ಜಾರಿ ಮಾಡಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

2002 ರ ಸೂಪರ್ ಹಿಟ್ ಸಿನಿಮಾ ‘ಜಯಂ’ ಮೂಲಕ ನಟನೆ ಆರಂಭಿಸಿದ ಸುಪ್ರೀತ್ ರೆಡ್ಡಿ, ರಾಜಮೌಳಿ ನಿರ್ದೇಶಿಸಿ, ಪ್ರಭಾಸ್ ನಟಿಸಿದ್ದ ‘ಛತ್ರಪತಿ’ ಸಿನಿಮಾದ ‘ಕಾಟ್ರಾಜು’ ಪಾತ್ರದಿಂದ ದೊಡ್ಡ ಹೆಸರು ಗಳಿಸಿದ್ದರು. ಅದಕ್ಕೆ ಮುಂಚೆ ರಾಜಮೌಳಿ ನಿರ್ದೇಶನದ ‘ಸೈ’, ‘ಮರ್ಯಾದ ರಾಮಣ್ಣ’ ಸಿನಿಮಾಗಳಲ್ಲಿಯೂ ವಿಲನ್​​ ಆಗಿ ಸಖತ್ ಗಮನ ಸೆಳೆದಿದ್ದರು. ಪ್ರಭಾಸ್ ನಟನೆಯ ‘ಮಿರ್ಚಿ’, ಮಹೇಶ್ ಬಾಬು ನಟನೆಯ ‘ದೂಕುಡು’ ನಂತಹ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿಯೂ ಸುಪ್ರೀತ್ ರೆಡ್ಡಿ ನಟಿಸಿದ್ದಾರೆ. ತೆರೆಯ ಮೇಲೆ ತಮ್ಮ ಖಳನಾಯಕತ್ವದಿಂದ ಗಮನ ಸೆಳೆದಿದ್ದ ಈ ನಟ, ನಿಜ ಜೀವನದಲ್ಲಿ ಸಹ ವಿಲನ್ ರೀತಿಯ ಕೃತ್ಯದಿಂದ ಸುದ್ದಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More

Source link

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ.

ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ.

“ರವೀಂದ್ರ ಜಡೇಜಾ ಅವರಿಗೆ ಟೆಸ್ಟ್ ಪಂದ್ಯದ ವೇಳೆ ಕೇವಲ ವಿಶ್ರಾಂತಿ ನೀಡಲಾಗಿದೆ. ಈ ವಿಷಯ ಅವರಿಗೂ ಗೊತ್ತಿದೆ. ಅವರು ಇಂದಿಗೂ ಭಾರತೀಯ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಅವರೇ ನಮ್ಮ ನಂ. 1 ಸ್ಪಿನ್ನರ್ ಆಗಿ ಮುಂದುವರಿಯಲಿದ್ದಾರೆ” ಎಂದು ಅಗರ್ಕರ್ ಸ್ಪಷ್ಟಪಡಿಸಿದ್ದಾರೆ.

“ರವೀಂದ್ರ ಜಡೇಜಾ ಅಥವಾ ಅಕ್ಷರ್ ಪಟೇಲ್ ಅವರ ಸಾಮರ್ಥ್ಯ ಏನೆಂಬುದು ನಮಗೆ ಚೆನ್ನಾಗಿ ತಿಳಿದಿದೆ. ಆದ್ದರಿಂದ ಈ ಸಣ್ಣ ಸರಣಿಗಳಲ್ಲಿ ಹರ್ಷ ದುಬೆ ಅವರಂತಹ ಇತರ ಹೊಸ ಆಟಗಾರರನ್ನು ಕಣಕ್ಕಿಳಿಸಿ ನಮ್ಮಲ್ಲಿರುವ ಪರ್ಯಾಯ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಸಣ್ಣ ಸರಣಿಗಳಿಗೆ ಅಕ್ಷರ್ ಪಟೇಲ್ ಮತ್ತು ಜಡೇಜಾ ಇಬ್ಬರನ್ನೂ ಒಟ್ಟಿಗೆ ಕರೆದೊಯ್ಯುವುದರಲ್ಲಿ ಯಾವುದೇ ಅರ್ಥವಿಲ್ಲ. ಇಬ್ಬರಲ್ಲಿ ಒಬ್ಬರು ಬೆಂಚ್ ಕಾಯಬೇಕಾಗುತ್ತದೆ”.

“ಬದಲಿಗೆ ಸುದೀರ್ಘ ಕ್ರಿಕೆಟ್ ಸರಣಿಗಳನ್ನು ಆಡಲು ಅವರ ಫಿಟ್ನೆಸ್ ಮತ್ತು ಕೆಲಸದ ಹೊರೆಯನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಬಿಸಿಸಿಐ ಈಗ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ” ಎಂದು ಅಜಿತ್ ಅಗರ್ಕರ್ ಹೇಳಿದ್ದಾರೆ.

ಇದೇ ವೇಳೆ ಜಡೇಜಾ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, “ರವೀಂದ್ರ ಜಡೇಜಾ ಅವರು  ನಮ್ಮ 2027 ರ ವಿಶ್ವಕಪ್ ಯೋಜನೆಗಳಲ್ಲಿದ್ದಾರೆ. ಅವರ ಅನುಭವ ಮತ್ತು ಆಲ್-ರೌಂಡರ್ ಪ್ರದರ್ಶನ ತಂಡಕ್ಕೆ ಸದಾ ಮುಖ್ಯ” ಎಂದಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ರವೀಂದ್ರ ಜಡೇಜಾ ಆಯ್ಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸರಿಯಾದ ನಿರ್ಧಾರ… ರಜತ್ ಪಾಟಿದಾರ್ ಆಯ್ಕೆಯಾಗದಿರಲು ಇದುವೇ ಕಾರಣ!

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಜುಲೈ 14 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

Source link

ಕೊನೆಯ ತ್ರೈಮಾಸಿಕದಲ್ಲಿ 7.1 ಬಿಲಿಯನ್ ಡಾಲರ್ ಹೆಚ್ಚುವರಿ; ಸರ್ವಿಸ್ ಸೆಕ್ಟರ್ ಮತ್ತು ರೆಮಿಟೆನ್ಸ್​ನಿಂದ ಭರ್ಜರಿ ಕೊಡುಗೆ – Kannada News

ನವದೆಹಲಿ, ಜೂನ್ 9: ಕಳೆದ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ (2026ರ ಜನವರಿಯಿಂದ ಮಾರ್ಚ್) ಭಾರತ ಚಾಲ್ತಿ ಖಾತೆ ಹೆಚ್ಚುವರಿಯನ್ನು (ಕರೆಂಟ್ ಅಕೌಂಟ್ ಸರ್​ಪ್ಲಸ್) ಸಾಧಿಸಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ನಾಲ್ಕನೇ ಕ್ವಾರ್ಟರ್​ನಲ್ಲಿ ಕರೆಂಟ್ ಅಕೌಂಟ್ ಸರ್​ಪ್ಲಸ್ 7.1 ಬಿಲಿಯನ್ ಡಾಲರ್ (ಸುಮಾರು 67,000 ಕೋಟಿ ರೂ) ದಾಖಲಾಗಿದೆ. ಸೇವಾ ವಲಯದ ಉತ್ತಮ ರಫ್ತು ಸಾಧಿಸಿರುವುದು ಮತ್ತು ವಿದೇಶಗಳಿಂದ ಸಾಕಷ್ಟು ಹಣದ ಹರಿವು (Remittances) ಬಂದಿರುವುದು ಚಾಲ್ತಿ ಖಾತೆ ಹೆಚ್ಚುವರಿ ಹೊಂದಲು ಸಾಧ್ಯವಾಗಿದೆ ಎಂದು ಆರ್​ಬಿಐ ನಿನ್ನೆ ಸೋಮವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಈ 7.1 ಬಿಲಿಯನ್ ಡಾಲರ್ ಮೊತ್ತವು ದೇಶದ ಜಿಡಿಪಿಯ ಶೇ. 0.7ರಷ್ಟಾಗುತ್ತದೆ.

ಆದರೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ (13.7 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ 1.4%) ಈ ಬಾರಿಯ ಹೆಚ್ಚುವರಿ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ದೇಶದ ಸರಕು ವ್ಯಾಪಾರ ಕೊರತೆಯು (Merchandise Trade Deficit) ಈ ತ್ರೈಮಾಸಿಕದಲ್ಲಿ 83.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿದೆ (ಕಳೆದ ವರ್ಷ ಇದು 59.3 ಶತಕೋಟಿ ಡಾಲರ್ ಇತ್ತು). ಅಂದರೆ ನಾವು ಆಮದು ಮಾಡಿಕೊಂಡ ಪ್ರಮಾಣ ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೊಮಾಟೊ ಡೆಲಿವರಿ ಬಾಯ್ ಆಗಿದ್ದ ಸೂರಜ್ ಈಗ ಎಐ ಸ್ಟಾರ್ಟಪ್ ಫೌಂಡರ್

ಸೇವಾ ವಲಯದ ಗಳಿಕೆ: ಟ್ರೇಡ್ ಡೆಫಿಸಿಟ್ ಹೆಚ್ಚಾಗಿರುವುದರ ಹೊರತಾಗಿಯೂ, ಸಾಫ್ಟ್‌ವೇರ್ ಮತ್ತು ಇತರ ವ್ಯವಹಾರ ಸೇವೆಗಳ ರಫ್ತು ಹೆಚ್ಚಾದ ಕಾರಣ ಸೇವಾ ವಲಯದ ನಿವ್ವಳ ಆದಾಯವು 60.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿದೆ. ಇದು ಕೊರತೆಯನ್ನು ಸರಿದೂಗಿಸಲು ಸಹಾಯ ಮಾಡಿದೆ.

ವಿದೇಶಿ ಭಾರತೀಯರ ಹಣ: ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರು ತಾಯ್ನಾಡಿಗೆ ಕಳುಹಿಸಿದ ಹಣವು (Remittances) ಈ ಬಾರಿ 43.5 ಶತಕೋಟಿ ಡಾಲರ್‌ಗೆ ತಲುಪಿದೆ. ಇದು ದೇಶದ ಆರ್ಥಿಕ ಸ್ಥಿರತೆಗೆ ದೊಡ್ಡ ಆಸರೆಯಾಗಿದೆ.

ಬಂಡವಾಳ ಹರಿವು ಮತ್ತು ಮೀಸಲು ನಿಧಿ

ಈ ತ್ರೈಮಾಸಿಕದಲ್ಲಿ ನಿವ್ವಳ ಎಫ್‌ಡಿಐ ಹರಿವು 4.2 ಶತಕೋಟಿ ಡಾಲರ್‌ಗೆ ಏರಿಕೆಯಾಗಿದೆ. ಕಳೆದ ವರ್ಷ ಕೇವಲ 0.4 ಶತಕೋಟಿ ಡಾಲರ್ ಇತ್ತು. ಆದರೆ, ವಿದೇಶಿ ಪೋರ್ಟ್‌ಫೋಲಿಯೊ ಹೂಡಿಕೆದಾರರು (FPI) ಈ ಅವಧಿಯಲ್ಲಿ 12 ಶತಕೋಟಿ ಡಾಲರ್ ಹಣವನ್ನು ಭಾರತೀಯ ಮಾರುಕಟ್ಟೆಯಿಂದ ಹೊರತೆಗೆದಿದ್ದಾರೆ. ಇದೇ ವೇಳೆ, ಕೊನೆಯ ತ್ರೈಮಾಸಿಕದ ಮೂರು ತಿಂಗಳಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಗೆ (Forex Reserves) 7.2 ಶತಕೋಟಿ ಡಾಲರ್ ಸೇರ್ಪಡೆಯಾಗಿದೆ.

ಇದನ್ನೂ ಓದಿ: ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು?

ಇಡೀ ಆರ್ಥಿಕ ವರ್ಷದ (FY26) ಒಟ್ಟಾರೆ ಚಿತ್ರಣ

ಸಂಪೂರ್ಣ 2025-26ರ ಹಣಕಾಸು ವರ್ಷವನ್ನು ಲೆಕ್ಕ ಹಾಕಿದರೆ, ಭಾರತವು ಒಟ್ಟಾರೆಯಾಗಿ 25.2 ಶತಕೋಟಿ ಡಾಲರ್ ಚಾಲ್ತಿ ಖಾತೆ ಕೊರತೆಯನ್ನು (Current Account Deficit) ಎದುರಿಸಿದೆ. ಇದು ದೇಶದ ಜಿಡಿಪಿಯ ಶೇಕಡಾ 0.6 ರಷ್ಟಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version