ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ! – Kannada News | High Drama at Parappana Agrahara Jail: Inmates Attempt Attack on Officials; Staff Resort to Lathi Charge During Raid
ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೈಲಿನಿಂದಲೇ ವಿಡಿಯೋ ಮಾಡಿ ಹೊರಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್,…