ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ – Kannada News

ನವದೆಹಲಿ, ಜೂನ್ 3: ಜಾಗತಿಕ ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ಮೌನವಾಗಿ ಆದರೆ ಅತ್ಯಂತ ಶಕ್ತಿಯುತವಾಗಿ ನಡೆಯುತ್ತಿದೆ. ದಶಕಗಳಿಂದ ಚೀನಾವನ್ನು ತಮ್ಮ ಪ್ರಮುಖ ಹೂಡಿಕೆಯ ತಾಣವಾಗಿ ನೆಚ್ಚಿಕೊಂಡಿದ್ದ ಜಪಾನ್‌ನ ದೈತ್ಯ ಹೂಡಿಕೆದಾರರು (Japanese investors) ಮತ್ತು ಬ್ಯಾಂಕುಗಳು, ಈಗ ಚೀನಾದಿಂದ ಮುಖತಿರುಗಿಸಿ ಭಾರತದತ್ತ ಮುಖ ಮಾಡುತ್ತಿದ್ದಾರೆ. ಜಪಾನ್‌ನ ಈ ದಿಕ್ಕು ಬದಲಾವಣೆಯು (Pivot) ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಗೆ ಭಾರಿ ಪ್ರಮಾಣದ ಬಂಡವಾಳವನ್ನು ತಂದುಕೊಡಲಿದೆ ಎಂದು ಜಾಗತಿಕ ಹಣಕಾಸು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ದೀರ್ಘಕಾಲದವರೆಗೆ…

Read More

ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ, ಮಾರ್ಚ್​​ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ…

Read More

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ – Kannada News | Congress is part of Global Progressive Alliance, which support anti India narrative, alleges BJP

ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸಕ್ಕೆ ಹೋಗಿದ್ದಾಗ ಭಾರತ ವಿರೋಧಿ ಶಕ್ತಿಗಳ ಸಂಪರ್ಕದಲ್ಲಿದ್ದರು ಎಂದು ಬಿಜೆಪಿ ಆರೋಪಿಸಿದೆ. ಜರ್ಮನಿಯಲ್ಲಿ ನಡೆದ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಸಭೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಇದು ಭಾರತ ವಿರೋಧಿ ಧೋರಣೆಗಳಿರುವ ಸಂಘಟನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಈ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ ಎಂದಿದ್ದಾರೆ. ‘ರಾಹುಲ್ ಗಾಂಧಿ ಅವರ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಕಾಂಗ್ರೆಸ್ ಪಕ್ಷದ ನಿಜ…

Read More

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು: ಪಟ್ಟಿ ಇಲ್ಲಿದೆ ನೋಡಿ

ಮಲಯಾಳಂ ಸಿನಿಮಾ ‘ಮಸ್ತಿಷ್ಕ ಮರಣಂ’ ಸಿನಿಮಾ ಹಾಸ್ಯಮಯ ಕ್ರೈಂ ಥ್ರಿಲ್ಲರ್ ಸಿನಿಮಾ ಆಗಿದೆ. ಸೈಬರ್ ಅಪರಾದ ಸೇರಿದಂತೆ ಇನ್ನೂ ಕೆಲವು ವಿಷಯಗಳನ್ನು ಸಿನಿಮಾ ಒಳಗೊಂಡಿದೆ. ಈ ಸಿನಿಮಾವನ್ನು ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ವಿಜಯ್ ಸೇತುಪತಿ ನಟನೆಯ ‘ಮುತ್ತು ಅಲಿಯಾಸ್ ಕಟ್ಟನ್’ ಆಸಕ್ತಿಕರ ಕ್ರೈಂ ಡ್ರಾಮಾ ಕತೆ ಹೊಂದಿದೆ. ವ್ಯಕ್ತಿಯೊಬ್ಬನ ರುಂಡ ಹಳ್ಳಿಗರಿಗೆ ಸಿಗುತ್ತದೆ. ಕೆಲವರು ಅವನನ್ನು ಹೀರೋ ಎಂದರೆ ಇನ್ನು ಕೆಲವರು ವಿಲನ್ ಎನ್ನುತ್ತಾರೆ. ನಿಜಕ್ಕೂ ಯಾರಾತ ಎಂಬುದು ಕತೆ. ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಈ ವಾರ ಬಿಡುಗಡೆ…

Read More

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit Bumrah’s T20 WC Masterclass: Surpasses Ashwin, Sets New Bowling Economy Record

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್​ನಲ್ಲೊ ಮಿಂಚಿದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಖೋಟಾದ 4 ಓವರ್​ಗಳಲ್ಲಿ 15 ರನ್​ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರು ವಿಕೆಟ್​ ಪಡೆಯುವ ಮೂಲಕ ಬುಮ್ರಾ, ಅಶ್ವಿನ್ ಅವರ ದಾಖಲೆಯನ್ನು ಸಹ…

Read More

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ – Kannada News | Kalaburagi serial Accident: Auto Driver Critical, 9 Others Injured in Chincholi Highway Crash

ಕಲಬುರಗಿ, ಏಪ್ರಿಲ್​ 24: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಹಾಗೂ ಆಟೋ ನಡುವೆ ನಡೆದ ಈ ಅಪಘಾತದಲ್ಲಿ ಹತ್ತು ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಎದುರಿಗಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಬಸ್ಸಿಗೆ ಮುಖಾಮುಖಿ ಡಿಕ್ಕಿ…

Read More

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Source link

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ

ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 334.48 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಹೊಡೆದರು. ವೈಭವ್ ಕೇವಲ 3 ರನ್​ಗಳಿಂದ ದಾಖಲೆಯ ಶತಕದಿಂದ ವಂಚಿತರಾದರೂ ಹಲವು ದಾಖಲೆಗಳನ್ನು ಸೃಷ್ಟಿಸಿದರು (PC- PTI). ಈ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 15 ಪಂದ್ಯಗಳಲ್ಲಿ 680 ರನ್ ಕಲೆಹಾಕಿದ್ದು,…

Read More

KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ – Kannada News | Bolero Pick Up Rear Ends KSRTC Bus Near Nelamangala; CCTV Video Goes Viral

ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More