ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು, ಜೂನ್ 09: ಕರ್ನಾಟಕದಲ್ಲಿ ಖಾತೆ ಹಂಚಿಕೆ ಗೊಂದಲಗಳು ಮುಂದುವರಿದಿದ್ದು, ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಇಲಾಖೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದು, ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಗಳನ್ನು ತನ್ನ ಖಾತೆಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಮತ್ತು ಬಿಎಂಆರ್ಡಿಎ ಹೊರತುಪಡಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾವುದೇ ಮೌಲ್ಯವಿಲ್ಲ ಎಂಬುದು ಕೃಷ್ಣ ಭೈರೇಗೌಡರ ಅಭಿಪ್ರಾಯ. ಈ ಸಂಬಂಧ…