Headlines

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….

Read More

ಕೊನೆಯ ತ್ರೈಮಾಸಿಕದಲ್ಲಿ 7.1 ಬಿಲಿಯನ್ ಡಾಲರ್ ಹೆಚ್ಚುವರಿ; ಸರ್ವಿಸ್ ಸೆಕ್ಟರ್ ಮತ್ತು ರೆಮಿಟೆನ್ಸ್​ನಿಂದ ಭರ್ಜರಿ ಕೊಡುಗೆ – Kannada News

ನವದೆಹಲಿ, ಜೂನ್ 9: ಕಳೆದ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ (2026ರ ಜನವರಿಯಿಂದ ಮಾರ್ಚ್) ಭಾರತ ಚಾಲ್ತಿ ಖಾತೆ ಹೆಚ್ಚುವರಿಯನ್ನು (ಕರೆಂಟ್ ಅಕೌಂಟ್ ಸರ್​ಪ್ಲಸ್) ಸಾಧಿಸಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ನಾಲ್ಕನೇ ಕ್ವಾರ್ಟರ್​ನಲ್ಲಿ ಕರೆಂಟ್ ಅಕೌಂಟ್ ಸರ್​ಪ್ಲಸ್ 7.1 ಬಿಲಿಯನ್ ಡಾಲರ್ (ಸುಮಾರು 67,000 ಕೋಟಿ ರೂ) ದಾಖಲಾಗಿದೆ. ಸೇವಾ ವಲಯದ ಉತ್ತಮ ರಫ್ತು ಸಾಧಿಸಿರುವುದು ಮತ್ತು ವಿದೇಶಗಳಿಂದ ಸಾಕಷ್ಟು ಹಣದ ಹರಿವು (Remittances) ಬಂದಿರುವುದು ಚಾಲ್ತಿ ಖಾತೆ ಹೆಚ್ಚುವರಿ ಹೊಂದಲು ಸಾಧ್ಯವಾಗಿದೆ ಎಂದು…

Read More

ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ – Kannada News

ಹೆಚ್​ಡಿ ದೇವೇಗೌಡ-ಮೋದಿ-ಚಂದ್ರಬಾಬು ನಾಯ್ಡು ನವದೆಹಲಿ, ಜೂನ್ 09: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿರುವ ನರೇಂದ್ರ ಮೋದಿ(Narendra Modi) ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸತತ ಆಡಳಿತದ ದಾಖಲೆಯನ್ನು ಹಿಂದಿಕ್ಕಿ ಮುನ್ನಡೆದಿರುವ ಪ್ರಧಾನಿ ಮೋದಿ ಅವರ ಸಾಧನೆಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಭಾರತದ…

Read More

ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು – Kannada News

ಬೆಂಗಳೂರು, ಜೂನ್ 9: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ ಮತ್ತು ಆ ರೇಸ್‌ನಲ್ಲೂ ಇಲ್ಲ ಎಂದು ಶಾಸಕ ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮುದಾಯವಾರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳನ್ನು ನೀಡುವ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಇದು ಬಹಳ ಹಿಂದಿನಿಂದಲೂ ಇರುವ ವಾದ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಡಿಸಿಎಂ ಸ್ಥಾನಗಳನ್ನು ನೀಡಬೇಕೆಂಬ ವಾದಕ್ಕೆ ಬದ್ಧವಾಗಿರುವುದಾಗಿ ರಾಜಣ್ಣ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ…

Read More

ಡಿ.ಕೆ. ಶಿವಕುಮಾರ್​​ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಜೂನ್​​ 09: ಕರ್ನಾಟಕದಲ್ಲಿ ಖಾತೆ ಹಂಚಿಕೆ ಗೊಂದಲಗಳು ಮುಂದುವರಿದಿದ್ದು, ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಇಲಾಖೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದು, ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಗಳನ್ನು ತನ್ನ ಖಾತೆಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಮತ್ತು ಬಿಎಂಆರ್‌ಡಿಎ ಹೊರತುಪಡಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾವುದೇ ಮೌಲ್ಯವಿಲ್ಲ ಎಂಬುದು ಕೃಷ್ಣ ಭೈರೇಗೌಡರ ಅಭಿಪ್ರಾಯ. ಈ ಸಂಬಂಧ…

Read More

ಶ್ರೀಲಂಕಾಕ್ಕೆ ಹೊರಟ ಪ್ರಶಾಂತ್ ನೀಲ್ ಮತ್ತು ಜೂ ಎನ್​​ಟಿಆರ್ – Kannada News

ಪ್ರಶಾಂತ್ ನೀಲ್ (Prashanth Neel) ಸಾಮಾನ್ಯವಾಗಿ ತಮ್ಮ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ಚಿತ್ರೀಕರಿಸುತ್ತಾರೆ. ಅವರು ಚಿತ್ರೀಕರಣಕ್ಕಾಗಿ ಬೇರೆ ಬೇರೆ ಸ್ಥಳಗಳಿಗೆ ಹೋಗುವುದು ಬಹಳ ಕಡಿಮೆ. ಅದರಲ್ಲೂ ವಿದೇಶದಲ್ಲಿ ಚಿತ್ರೀಕರಣವೆಂದರೆ ಅವರಿಗೆ ಆಗದು. ಇದೀಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ಚಿತ್ರೀಕರಣವನ್ನು ನೀಲ್ ಮಾಡುತ್ತಿದ್ದು, ಈ ಸಿನಿಮಾಕ್ಕಾಗಿ ತಮ್ಮ ಹಳೆಯ ಪದ್ಧತಿಗಳನ್ನು ಮುರಿದಿದ್ದಾರೆ ಪ್ರಶಾಂತ್ ನೀಲ್. ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಪ್ರಶಾಂತ್ ನೀಲ್ ವಿದೇಶಗಳನ್ನು ಸುತ್ತುತ್ತಿದ್ದಾರೆ. ಈಗಾಗಲೇ ಒಂದು ದೇಶಕ್ಕೆ ಹೋಗಿ ಬಂದಿರುವ ನೀಲ್ ಮತ್ತು ಎನ್​​ಟಿಆರ್, ಈಗ ಶ್ರೀಲಂಕಾದತ್ತ…

Read More

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಹಾಗೂ ಕಾಮಪ್ರಚೋದಕವಾಗಿ ಬಿಂಬಿಸುವ ವಿಚಾರ ಸದ್ಯ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಈ ಚರ್ಚೆ ಮತ್ತಷ್ಟು ಜೋರಾಗಿದೆ. ಹಲವು ಹಿರಿಯ ನಟಿಯರು ಈ ಬಗ್ಗೆ ಮಾತನಾಡಿದ್ದರು. ಈಗ ಬಾಲಿವುಡ್ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರನೌತ್ ಕೂಡ ಈ ಬಗ್ಗೆ…

Read More

ಲ್ಯಾಡಲ್ ಸ್ಫೋಟಕ್ಕೆ 8 ಕಾರ್ಮಿಕರು ಬಲಿ, ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ – Kannada News

ವಿಶಾಖಪಟ್ಟಣಂ, ಜೂನ್ 09: ವಿಶಾಖಪಟ್ಟಣಂನ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಎಂಟು ಕಾರ್ಮಿಕರು ಬಲಿಯಾಗಿದ್ದಾರೆ. ಕರಗಿದ ಕಬ್ಬಿಣವನ್ನು ಸಾಗಿಸುವಾಗ ಕ್ರೇನ್ ಕುಸಿದು, ಬಿಸಿ ಲೋಹ ಚೆಲ್ಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಈ ಪರಿಹಾರ ಕಾಯಂ ನೌಕರರು ಹಾಗೂ ಹೊರಗುತ್ತಿಗೆ…

Read More

Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ – Kannada News

ನವದೆಹಲಿ, ಜೂನ್ 9: ಹಲವು ದಿನಗಳ ನಂತರ ಚಿನ್ನದ ಬೆಲೆ (Gold Rates) ಮೊದಲ ಬಾರಿಗೆ ಹೆಚ್ಚಳಗೊಂಡಿದೆ. ನಿನ್ನೆ 95 ರೂ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 135 ರೂ ಏರಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆಗೊಳ್ಳದೆ ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,160 ರುಪಾಯಿ…

Read More