ಅಸೀಮ್ ಮುನೀರ್ ಮಿಲಿಟರಿ ಡ್ರೆಸ್ ಬಿಟ್ಟು ಸೂಟ್ ಧರಿಸಿ ಜೆಡಿ ವ್ಯಾನ್ಸ್​ಗೆ ಸ್ವಾಗತ ಕೋರಿದ್ದೇಕೆ?

ಅಸೀಮ್ ಮುನೀರ್ ಮಿಲಿಟರಿ ಡ್ರೆಸ್ ಬಿಟ್ಟು ಸೂಟ್ ಧರಿಸಿ ಜೆಡಿ ವ್ಯಾನ್ಸ್​ಗೆ ಸ್ವಾಗತ ಕೋರಿದ್ದೇಕೆ?

ಇಸ್ಲಮಾಬಾದ್, ಏಪ್ರಿಲ್ 11: ಅಮೆರಿಕ ಹಾಗೂ ಇರಾನ್ (Iran War) ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ನಂತರ ಲೆಬನಾನ್​ಗಾಗಿ ಮತ್ತೆ ಎರಡೂ ಕಡೆಯವರ ನಡುವೆ ಬಿಕ್ಕಟ್ಟು ಎದುರಾಗಿತ್ತು. ಇದರಿಂದ ಇರಾನ್ ಕದನವಿರಾಮವನ್ನು ಹಿಂಪಡೆಯುವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಮಾತುಕತೆ ನಡೆಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನೇತೃತ್ವದ ಯುಎಸ್ ನಿಯೋಗ ಮತ್ತು ಇರಾನಿನ ನಾಯಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇಸ್ಲಮಾಬಾದ್​ಗೆ ಬಂದ ಜೆ.ಡಿ. ವ್ಯಾನ್ಸ್ ಅವರನ್ನು ಸ್ವಾಗತಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದಕ್ಕೂ ಮೊದಲು ಇರಾನಿನ ನಿಯೋಗವನ್ನು ಮಿಲಿಟರಿ ಉಡುಗೆಯಲ್ಲಿ ಸ್ವಾಗತಿಸಿದ್ದ ಅಸೀಮ್ ಮುನೀರ್ ಅಮೆರಿಕದ ನಿಯೋಗವನ್ನು ಸ್ವಾಗತಿಸುವಾಗ ಸೂಟ್ ಧರಿಸಿ ಬಂದಿದ್ದು ಬಹಳ ಗಮನ ಸೆಳೆಯಿತು.

ಇರಾನ್​ನ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನೇತೃತ್ವದ 71 ಸದಸ್ಯರ ನಿಯೋಗವನ್ನು ಸ್ವಾಗತಿಸುವಾಗ ಅಸೀಮ್ ಮುನೀರ್ ಮಿಲಿಟರಿ ಡ್ರೆಸ್ ಧರಿಸಿದ್ದರು. ಅದಾದ ಕೆಲವು ಗಂಟೆಗಳ ನಂತರ ಜೆಡಿ ವ್ಯಾನ್ಸ್ ಅವರ ನಿಯೋಗವನ್ನು ಸ್ವಾಗತಿಸುವಾಗ ಸೂಟು-ಬೂಟು ಧರಿಸಿ ಬಂದಿದ್ದರು. ಇದು ಅವರ ರಾಜತಾಂತ್ರಿಕ ದೃಷ್ಟಿಕೋನವನ್ನು ಸೂಚಿಸುತ್ತದೆ. ಇದು ಇರಾನ್ ಮತ್ತು ಯುಎಸ್ ಎರಡನ್ನೂ ಗುರಿಯಾಗಿಟ್ಟುಕೊಂಡು ಉದ್ದೇಶಪೂರ್ವಕವಾಗಿ ಸಂದೇಶ ಕಳುಹಿಸುವಿಕೆ ಎಂದು ಹಲವಾರು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸೇನಾ ಅಧಿಕಾರಿಯೊಬ್ಬರು ವಿದೇಶಿ ನಾಯಕರನ್ನು ಸ್ವೀಕರಿಸುವಾಗ ಯಾವಾಗಲೂ ಸಮವಸ್ತ್ರದಲ್ಲಿರಬೇಕು. ಅಸಿಮ್ ಮುನೀರ್ ಅವರು ಅಮೆರಿಕನ್ನರೊಂದಿಗೆ ರಾಜತಾಂತ್ರಿಕ ಮತ್ತು ಇರಾನ್‌ನೊಂದಿಗೆ ಸೈನಿಕ ಎಂದು ತೋರಿಸಲು ಈ ರೀತಿ ತಮ್ಮ ಡ್ರೆಸ್ ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ಬೆಂಗಳೂರು, ಏಪ್ರಿಲ್​ 11: ದಾವಣಗೆರೆ ಬೈ-ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ಬಳಸಿಕೊಂಡಿರುವುದು ಆಶ್ಚರ್ಯ ಎಂದಿದ್ದಾರೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್, ಒಂದು ವೇಳೆ ಸೋಲುಂಟಾದರೆ ಅದನ್ನು ನಮ್ಮ ಮೇಲೆ ಹೊರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ತಕ್ಷಣವೇ ರಾಜಿನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಕಾಂಗ್ರೆಸ್​​ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆ ಇದೆ. ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್​​ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.

ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕವನ್ನು ವರದಿ ಎತ್ತಿ ತೋರಿಸಿದೆ. ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಆ್ಯಕ್ಷನ್ ಆರಂಭವಾಗುವ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷವು ಸಸ್ಪೆಂಡ್ ಮಾಡುವ ಮುನ್ಸೂಚನೆ ಅರಿತ ಜಬ್ಬಾರ್, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಸದ್ಯದ ಬೆಳವಣಿಗೆಗಳು ಸಚಿವ ಜಮೀರ್ ಅಹ್ಮದ್ ಅವರನ್ನೇ ಗುರಿಯಾಗಿಸಿಕೊಂಡಿವೆ. ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಜಮೀರ್ ಅವರ ‘ತಲೆದಂಡ’ವಾಗುವುದು ಬಹುತೇಕ ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಇತ್ತ ಈ ಭಾರಿ ಬೆಳವಣಿಗೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತರ ಕಾಯ್ದುಕೊಂಡಿದ್ದಾರೆ. ದಾವಣಗೆರೆ ವಿದ್ಯಮಾನ ಮತ್ತು ರಾಜೀನಾಮೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೇನೂ ಗೊತ್ತಿಲ್ಲ” ಎನ್ನುವ ಮೂಲಕ ಜಾಣ್ಮೆಯ ಮೌನ ವಹಿಸಿದ್ದಾರೆ.

ವರದಿ: ಈರಣ್ಣ ಬಸವ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅಮೆರಿಕ-ಅಮೆರಿಕ’ಕ್ಕೆ 30 ವರ್ಷ, ಬರಲಿದೆ ‘ಅಮೆರಿಕ-ಅಮೆರಿಕ 2’

‘ಅಮೆರಿಕ-ಅಮೆರಿಕ’ (America America) ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಇಂದಿಗೂ ಹಲವಾರು ಜನರ ನೆಚ್ಚಿನ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಏಪ್ರಿಲ್ 11) 30 ವರ್ಷಗಳಾಗಿವೆ. 1997ರ ಏಪ್ರಿಲ್ 11ರಂದು ಸಿನಿಮಾ ಬಿಡುಗಡೆ ಆಗಿತ್ತು. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳೆತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿತ್ತು.

ಸಿನಿಮಾ ನಿರ್ದೇಶಿಸಿರುವ ನಾಗತಿಹಳ್ಳಿ ಚಂದ್ರಶೇಖರ್ ಅವರು ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ನಾನು ರೂಪಿಸಿದ್ದಲ್ಲ; ನನ್ನನ್ನೇ ರೂಪಿಸಿದ ಸಿನಿಮಾ! ಕೋಟಿ ಕೋಟಿ ಕಂಗಳಿಗೆ ಕನಸು ಕೊಟ್ಟ ಸಿನಿಮಾ. ಕೋಟಿ ಕೋಟಿ ಮನಗಳಿಗೆ ಮಮಕಾರವಿತ್ತ ಸಿನಿಮಾ. ಕನ್ನಡ ಜನತೆಗೆ ಕೋಟಿ ಕೋಟಿ ಕೃತಜ್ಞತೆಗಳು’ ಎಂದಿದ್ದಾರೆ. ಇದರ ಜೊತೆಗೆ ‘ಸದ್ಯದಲ್ಲೇ ನಿಮ್ಮೆದುರು ‘ಅಮೆರಿಕ-ಅಮೆರಿಕ 2’ ಎಂದು ಸಹ ನಾಗತಿಹಳ್ಳಿ ಚಂದ್ರಶೇಖರ್ ಅವರು ಘೋಷಿಸಿದ್ದಾರೆ.

‘ಅಮೆರಿಕ-ಅಮೆರಿಕ 2’ ಸಿನಿಮಾವನ್ನು ನಾಗತಿಹಳ್ಳಿ ಅವರು ಘೋಷಿಸಿದ್ದಾರಾದರೂ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ. ಆದರೆ ನಾಗತಿಹಳ್ಳಿ ಅವರ ಪೋಸ್ಟ್​​ಗೆ ಕಮೆಂಟ್ ಮಾಡಿರುವ ಹಲವರು, ‘ಅಮೆರಿಕ-ಅಮೆರಿಕ’ ಸಿನಿಮಾವನ್ನು ಮರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ‘ಅಮೆರಿಕ-ಅಮೆರಿಕ 2’ ಸಿನಿಮಾನಲ್ಲಿ ಹಳೆಯ ಮುಖಗಳನ್ನೇ ಅಂದರೆ ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಅವರನ್ನೇ ಹಾಕಿಕೊಳ್ಳಿ ಎಂದು ಇನ್ನಿತರೆ ಸಲಹೆಗಳನ್ನು ನೀಡಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಇತ್ತೀಚೆಗೆ ಸಿನಿಮಾ ನಿರ್ದೇಶನ ತುಸು ಕಡಿಮೆ ಮಾಡಿದ್ದಾರೆ. ಅವರು ಕೊನೆಯದಾಗಿ ನಿರ್ದೇಶಿಸಿದ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು 2020ರಲ್ಲಿ ‘ಇಂಡಿಯಾ vs ಇಂಗ್ಲಂಡ್’. ಅದಕ್ಕೆ ಮುಂಚೆ 2015 ರಲ್ಲಿ ‘ಇಷ್ಟಕಾಮ್ಯ’ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಬಹಳ ವರ್ಷಗಳ ಬಳಿಕ ತಮಗೆ ದೊಡ್ಡ ಯಶಸ್ಸು, ಹೆಸರು ತಂದುಕೊಟ್ಟ ‘ಅಮೆರಿಕ-ಅಮೆರಿಕ’ ಸಿನಿಮಾದ ಸೀಕ್ವೆಲ್ ನಿರ್ದೇಶಿಸಲು ಮುಂದಾಗಿದ್ದಾರೆ. ನಾಗತಿಹಳ್ಳಿ ಅವರ ಸಿನಿಮಾಗಳನ್ನು ನೋಡುತ್ತಾ ಬಂದಿರುವ, ಅವರ ಸಿನಿಮಾಗಳ ಮೆಚ್ಚುವ ಅಭಿಮಾನಿಗಳು ನಾಗತಿಹಳ್ಳಿ ಅವರಿಂದ ಒಂದು ಸುಂದರ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Quiet Quitting: ಸಂಬಳಕ್ಕಾಗಿ ಮಾತ್ರ ಕೆಲಸ: ‘ಕ್ವೈಟ್ ಕ್ವಿಟಿಂಗ್’ನಲ್ಲಿ ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ!

ಭಾರತದಲ್ಲಿ ಈಗ ಹೊಸದೊಂದು ಟ್ರೆಂಡ್ ಸದ್ದು ಮಾಡುತ್ತಿದೆ, ಅದೇ ‘ಮೌನ ನಿರ್ಗಮನ’ ಅಥವಾ ಕ್ವೈಟ್ ಕ್ವಿಟಿಂಗ್. ಕಚೇರಿಗೆ ಹೋದರೂ ಕೆಲಸದ ಬಗ್ಗೆ ಉತ್ಸಾಹವಿಲ್ಲದೆ, ಕೇವಲ ಸಂಬಳಕ್ಕಾಗಿ ಯಾಂತ್ರಿಕವಾಗಿ ದುಡಿಯುವವರ ಸಂಖ್ಯೆಯಲ್ಲಿ ಭಾರತ ಈಗ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ!

ಏನಿದು ‘ಮೌನ ನಿರ್ಗಮನ’ (Quiet Quitting)?

ಒಬ್ಬ ಉದ್ಯೋಗಿ ತನ್ನ ಕೆಲಸವನ್ನು ಪೂರ್ಣವಾಗಿ ಬಿಡುವುದಿಲ್ಲ, ಯಾವುದೇ ಆಸಕ್ತಿ ತೋರದೇ ಕೆಲಸ ಮಾಡುವುದು. ತನಗೆ ವಹಿಸಿದ ಕನಿಷ್ಠ ಜವಾಬ್ದಾರಿಯನ್ನು ಮಾತ್ರ ಪೂರೈಸಿ, ಉಳಿದ ಸಮಯ ಕೇವಲ ದೇಹದ ಉಪಸ್ಥಿತಿಯಷ್ಟೇ ಇರುವುದನ್ನು ಮನಶ್ಶಾಸ್ತ್ರಜ್ಞರು ‘ಕ್ವೈಟ್ ಕ್ವಿಟಿಂಗ್’ ಎನ್ನುತ್ತಾರೆ. ಇತ್ತೀಚಿನ ಅಧ್ಯಯನಗಳ ಪ್ರಕಾರ, ವಿಶ್ವದ ಇತರ ದೇಶಗಳಿಗಿಂತ ಭಾರತೀಯರಲ್ಲಿ ಈ ಪ್ರವೃತ್ತಿ ಗರಿಷ್ಠ ಮಟ್ಟದಲ್ಲಿದೆ.

ಉದ್ಯೋಗಿಗಳ ಈ ನಿರಾಸಕ್ತಿಗೆ ಪ್ರಮುಖ ಕಾರಣಗಳು:

ಕೆಲಸದ ಅತಿಯಾದ ಹೊರೆ ಮತ್ತು ಒತ್ತಡ:

ಬೆಳಿಗ್ಗೆಯಿಂದ ರಾತ್ರಿಯವರೆಗೆ ಕಚೇರಿ ಕೆಲಸದಲ್ಲೇ ಮುಳುಗಿರುವ ಉದ್ಯೋಗಿಗಳಿಗೆ ತಮ್ಮ ವೈಯಕ್ತಿಕ ಜೀವನಕ್ಕೆ (Work-Life Balance) ಸಮಯವೇ ಸಿಗುತ್ತಿಲ್ಲ. ಕುಟುಂಬದೊಂದಿಗೆ ಕಳೆಯುವ ಸಮಯ ಕಡಿತವಾಗುತ್ತಿರುವುದು ಉದ್ಯೋಗಿಗಳನ್ನು ಮಾನಸಿಕ ಖಿನ್ನತೆಗೆ ದೂಡುತ್ತಿದೆ.

ವಿಷಕಾರಿ ಕಚೇರಿ ವಾತಾವರಣ (Toxic Work Culture):

ಕಷ್ಟಪಟ್ಟು ಕೆಲಸ ಮಾಡಿದರೂ ಸರಿಯಾದ ಮನ್ನಣೆ ಸಿಗದಿರುವುದು, ಮೇಲಧಿಕಾರಿಗಳ ಕಿರುಕುಳ ಮತ್ತು ಕಚೇರಿ ರಾಜಕೀಯವು ನೌಕರರ ಮಾನಸಿಕ ಸ್ಥಿತಿಯನ್ನು ಹದಗೆಡಿಸುತ್ತಿದೆ. ಇದು ಸಂಸ್ಥೆಯ ಬೆಳವಣಿಗೆಗಿಂತ ಕೇವಲ “ತಿಂಗಳ ಸಂಬಳ ಬಂದರೆ ಸಾಕು” ಎಂಬ ಮನೋಭಾವನೆಗೆ ಕಾರಣವಾಗಿದೆ.

ವೇತನ ಮತ್ತು ವೆಚ್ಚದ ನಡುವಿನ ಅಂತರ:

ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ವೇತನ ಏರಿಕೆಯಾಗುತ್ತಿಲ್ಲ ಎಂಬುದು ಬಹುತೇಕರ ದೂರು. ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡಿದರೂ ಅದಕ್ಕೆ ಸರಿಯಾದ ಪ್ರತಿಫಲ ಸಿಗದಿದ್ದಾಗ, ಉದ್ಯೋಗಿಗಳು ತಮಗೆ ಸಿಗುವ ಸಂಬಳಕ್ಕೆ ಎಷ್ಟು ಬೇಕೋ ಅಷ್ಟೇ ಕೆಲಸ ಮಾಡಲು ನಿರ್ಧರಿಸುತ್ತಿದ್ದಾರೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ವೃತ್ತಿಜೀವನದ ಮೇಲೆ ಇದರ ಪರಿಣಾಮವೇನು?

ಈ ‘ಮೌನ ನಿರ್ಗಮನ’ ಕೇವಲ ಕಂಪನಿಗಳಿಗೆ ಮಾತ್ರವಲ್ಲ, ಉದ್ಯೋಗಿಗಳ ವೈಯಕ್ತಿಕ ಬೆಳವಣಿಗೆಗೂ ಅಪಾಯಕಾರಿ ಎನ್ನುತ್ತಾರೆ ತಜ್ಞರು. ಕೆಲಸದಲ್ಲಿ ಆಸಕ್ತಿ ಇಲ್ಲದಿದ್ದಾಗ ಹೊಸ ಆಲೋಚನೆಗಳು ಬರುವುದಿಲ್ಲ. ಹೊಸ ವಿಷಯಗಳನ್ನು ಕಲಿಯುವ ಹಸಿವು ಇಲ್ಲದೆ ಹೋಗುವುದರಿಂದ ವೃತ್ತಿಜೀವನ ಒಂದೇ ಕಡೆ ಸ್ಥಗಿತಗೊಳ್ಳಬಹುದು.

ಪರಿಹಾರವೇನು?

ಈ ಸಮಸ್ಯೆಯನ್ನು ಹೋಗಲಾಡಿಸಲು ಕಂಪನಿಗಳು ತಮ್ಮ ನೀತಿಗಳಲ್ಲಿ ಬದಲಾವಣೆ ತರಬೇಕಿದೆ. ಉದ್ಯೋಗಿಗಳ ಮಾನಸಿಕ ಸ್ಥಿತಿಯನ್ನು ಅರಿತು ಅವರಿಗೆ ಬೆಂಬಲ ನೀಡಬೇಕು. ಉತ್ತಮವಾಗಿ ಕೆಲಸ ಮಾಡುವವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಗೌರವ ನೀಡಬೇಕು. ಉದ್ಯೋಗಿಗಳಿಗೆ ತಮ್ಮ ಕುಟುಂಬದೊಂದಿಗೆ ಕಳೆಯಲು ಪೂರಕವಾದ ಸಮಯಾವಕಾಶ ಕಲ್ಪಿಸಬೇಕು. ಆರೋಗ್ಯಕರ ಕೆಲಸದ ವಾತಾವರಣ ನಿರ್ಮಾಣವಾದಾಗ ಮಾತ್ರ ಇಂತಹ ‘ಸಾಂಕ್ರಾಮಿಕ’ ಪ್ರವೃತ್ತಿಯನ್ನು ತಡೆಗಟ್ಟಲು ಸಾಧ್ಯ. ಉದ್ಯೋಗಿ ಮತ್ತು ಸಂಸ್ಥೆ ಇಬ್ಬರೂ ಪರಸ್ಪರ ಗೌರವದಿಂದ ಸಾಗಿದಾಗ ಮಾತ್ರ ಪ್ರಗತಿ ಸಾಧ್ಯ ಎಂಬುದು ತಜ್ಞರ ಅಭಿಪ್ರಾಯ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ವ್ಯವಸ್ಥಿತವಾದ ಜಾಲವಾಗಿದ್ದು, ಇಡೀ ದೇಶದಲ್ಲಿ ನಡೆಯುತ್ತಿದೆ. ವಿಶೇಷವಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ ಎಂದು ಆರೋಪಿಸಿದರು. ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ, ಜನ ಬೀದಿಗಳಿಯುವಂತಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತರಬಾರದು ಎಂದು ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನವದೆಹಲಿ, ಏಪ್ರಿಲ್ 11: ಸಂಸತ್ತಿನ ಆವರಣದಲ್ಲಿ ಇಂದು ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಗಮನ ಸೆಳೆದಿದೆ. ಸದಾ ಒಬ್ಬರ ಮೇಲೆ ಒಬ್ಬರು ಕೆಸರೆರಚಿಕೊಳ್ಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರಾಹುಲ್ ಗಾಂಧಿ ಇಂದು ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೋವೊಂದು ವೈರಲ್ ಆಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಅಜನ್ಮ ಶತ್ರುಗಳಂತೆ ಕಿತ್ತಾಡುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ಈ ಸಣ್ಣ ಮಾತುಕತೆ ಬಹಳ ಗಮನ ಸೆಳೆದಿದೆ. ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ದಿನಾಚರಣೆಯಂದು ಅವರಿಗೆ ಪುಷ್ಪ ನಮನ ಸಲ್ಲಿಸಲು ಪ್ರಧಾನಿ ಮೋದಿ ಸಂಸತ್ತಿನ ಆವರಣದಲ್ಲಿರುವ ಪ್ರೇರಣಾ ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಲವಾರು ಹಿರಿಯ ನಾಯಕರು ಮತ್ತು ಗಣ್ಯರು ಭಾಗವಹಿಸಿದ್ದರು. ಆಗ ಅಲ್ಲಿದ್ದ ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ.

ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ

ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಆಕೆಯನ್ನ ಪುಸಲಾಯಿಸಿದ ಹಿನ್ನೆಲೆ ಕೊಪ್ಪಳ ತಾಲೂಕಿನ‌ ಕಂಪ್ಲಿ ಗ್ರಾಮದ ಯುವಕ ಮುಸ್ತಫಾ ವಿರುದ್ಧ ಇದೀಗ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಗ್ರಾಮವೊಂದರಲ್ಲಿ ವಿದ್ಯಾರ್ಥಿನಿ ಜೊತೆಗೆ ಇದ್ದ ವೇಳೆ ಹಿಂದೂ ಯುವಕರ ಕೈಗೆ ಮುಸ್ತಫಾ ಸಿಕ್ಕಿಬಿದ್ದಿದ್ದ.

ಅಶ್ಲೀಲ ವಿಡಿಯೋಗಳು ಪತ್ತೆ

ಈ ವೇಳೆ ಮುಸ್ತಫಾ ಮೊಬೈಲ್ ಪರಿಶೀಲನೆ ಮಾಡಿದಾಗ ಹಲವು ಹಿಂದೂ ಯವತಿಯರ ಜೊತೆಗಿರುವ ಫೋಟೋಗಳು ಸೇರಿದಂತೆ 10ಕ್ಕೂ ಹೆಚ್ಚು ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ. ಅಷ್ಟೇ ಅಲ್ಲದೆ ಯುವತಿಯರಿಗೆ ಬಿಯರ್​​ ಕುಡಿಸಿದ್ದಾನೆ. ಮಟ್ಕಾ ಬರೆಯುತ್ತಿರುವುದೂ ಪತ್ತೆ ಆಗಿದೆ. ಈ ವೇಳೆ ಕೂಡಲೇ ಮೊಬೈಲ್ ಕಸಿದುಕೊಂಡ ಮುಸ್ತಫಾ ರೀಸೆಟ್ ಮಾಡಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಇನ್ನು ನಾನು ಹಿಂದೂ ಯುವತಿಯನ್ನು ಮದುವೆ ಆಗಿರುವುದಾಗಿ ಮುಸ್ತಫಾ ಹೇಳುತ್ತಿದ್ದಾನೆ. ಆದರೆ ಇತ್ತ ಮುಸ್ತಫಾ ವಿರುದ್ಧ ಕ್ರಮಕೈಗೊಳ್ಳುವಂತೆ ಹಿಂದೂ ಯುವಕರು ಆಗ್ರಹಿಸಿದ್ದಾರೆ. ಕೊಪ್ಪಳ ನಗರ ಠಾಣೆ ಎದುರು ಹಿಂದೂ ಯುವಕರು ಜಮಾವಣೆಗೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಜಿಲ್ಲಾಧ್ಯಕ್ಷ ಡಾ.ಸಂಗಮೇಶ್ ಹಿರೇಮಠ ಸೇರಿದಂತೆ ಹಿಂದೂ ಕಾರ್ಯಕರ್ತರಿಂದ ಮುಸ್ತಫಾ ವಿರುದ್ಧ ಎಸ್​ಪಿಗೆ ದೂರು ಕೂಡ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ ಹಾಕಲಾದ ಎಲ್ಲಾ ಗಣಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗವನ್ನು ಹೊಂದಿರುವ ಈ ಚಾಕ್‌ಪಾಯಿಂಟ್ ಅನ್ನು ಕೂಡಲೆ ಮತ್ತೆ ತೆರೆಯಲು ಮತ್ತು ಅದರ ಮೂಲಕ ಹೆಚ್ಚಿನ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಡೊನಾಲ್ಡ್ ಟ್ರಂಪ್ ಟೆಹ್ರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಜೊತೆಗಿನ ಇರಾನ್​ ಶಾಂತಿ ಮಾತುಕತೆಗಳು ನಡೆಯಲಿವೆ. ಅದರ ನಡುವೆ ಇರಾನ್ ಈ ಎಡವಟ್ಟು ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಸ್ಥಗಿತಗೊಂಡ ಪರಮಾಣು ಮಾತುಕತೆಗಳ ಕುರಿತು ಯುಎಸ್ ಮತ್ತು ಇಸ್ರೇಲ್ ಇರಾನ್‌ನಾದ್ಯಂತ ಜಂಟಿ ವೈಮಾನಿಕ ದಾಳಿ ನಡೆಸಿದ ಕೂಡಲೇ ಇರಾನ್ ಕಳೆದ ತಿಂಗಳು ಹಾರ್ಮುಜ್ ಅನ್ನು ಗಣಿಗಳನ್ನು ಹಾಕಲು ಸಣ್ಣ ಹಡಗುಗಳನ್ನು ಬಳಸಿತ್ತು. ಇರಾನ್ ಹಾಕಿದ ಕೆಲವು ಗಣಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಇರಾನಿನ ಅಧಿಕಾರಿಗಳು ಜಲಸಂಧಿಯನ್ನು ಅವ್ಯವಸ್ಥಿತವಾಗಿ ಗಣಿ ಹಾಕಿದ್ದಾರೆ ಮಾಡಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ವಿಷಯವು ಪಾಕಿಸ್ತಾನದಲ್ಲಿ ಇರಾನಿನ ಅಧಿಕಾರಿಗಳು ಮತ್ತು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ಅಮೆರಿಕದ ನಿಯೋಗದ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬಿಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಬೇಕೆಂದು ನೌಕರರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ. ಬಿಸಿಲಿನಿಂದ ಆರೋಗ್ಯ ಹಾಗೂ ಸುಸ್ತು ಹೆಚ್ಚಾಗಿದೆ. ಸೆಕೆಗೆ ಸರಿಯಾಗಿ ಕೆಲಸ ಮಾಡಲಾಗುತ್ತಿಲ್ಲ. ಆ ಕಾರಣಕ್ಕೆ ಕೆಲಸ ಸಮಯದಲ್ಲಿ ಬದಲಾವಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಉತ್ತರ ಕರ್ನಾಟಕದ ಉಳಿದ 9 ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲಿನ ಕಾರಣದಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ, ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನವಿದ್ದರೂ ಸಮಯ ಬದಲಾವಣೆ ಮಾಡದಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ್ ಬಳ್ಳಾರಿ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ನೌಕರರು ಜಿಲ್ಲಾಡಳಿತ ಭವನದ ಮುಂದೆ ಜಮಾಯಿಸಿ ತಮ್ಮ ಬೇಡಿಕೆಯನ್ನು ಮಂಡಿಸಿದರು.

ಇದನ್ನೂ ಓದಿ: ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು!

ಬಿಸಿಲಿನ ತೀವ್ರತೆ ಹೆಚ್ಚಾಗುವ ಮುನ್ನವೇ ಕೆಲಸ ಮುಗಿಸಲು ಅನುಕೂಲವಾಗುವಂತೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಕೆಲಸದ ಸಮಯವನ್ನು ನಿಗದಿಪಡಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ. “ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಜಮೀನುಗಳಿಗೆ ಭೇಟಿ ನೀಡಿ ಜಿಪಿಎಸ್ (GPS) ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಮಧ್ಯಾಹ್ನದ ಕೆಂಡದಂಥ ಬಿಸಿಲಿನಲ್ಲಿ ಹೊಲಗಳಿಗೆ ಹೋಗುವುದು ಅಸಾಧ್ಯವಾಗಿದೆ. ಅದರಲ್ಲೂ ಮಹಿಳಾ ಸಿಬ್ಬಂದಿಗಳು ಮತ್ತು ವಯಸ್ಸಾದ ನೌಕರರು ಬಿಸಿಲಿಗೆ ತಲೆಸುತ್ತು ಬಂದು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಕ್ಕಪಕ್ಕದ ಜಿಲ್ಲೆಗಳ ಮಾದರಿಯಲ್ಲೇ ಗದಗ ಜಿಲ್ಲೆಗೂ ಸಮಯ ಬದಲಾವಣೆಯ ಆದೇಶವನ್ನು ಕೂಡಲೇ ಹೊರಡಿಸಬೇಕು, ಇಲ್ಲದಿದ್ದರೆ ಕೆಲಸ ನಿರ್ವಹಿಸುವುದು ಕಷ್ಟವಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version