ಭಾರತ-ಅಮೆರಿಕ ಒಪ್ಪಂದದಿಂದ ಗಾಬರಿಗೊಂಡ ಯೂನಸ್, ಟ್ರಂಪ್ ಜತೆ ರಹಸ್ಯ ಒಪ್ಪಂದಕ್ಕೆ ಯತ್ನ – Kannada News | Bangladesh Alarmed: Yunus Secret US Trade Deal Raises Fears Amid Elections and India US Pact

ಢಾಕಾ, ಫೆಬ್ರವರಿ 06: ಭಾರತ ಹಾಗೂ ಅಮೆರಿಕ ನಡುವಿನ ಬಹು ಚರ್ಚಿತ ವ್ಯಾಪಾರ ಒಪ್ಪಂದವು ಬಾಂಗ್ಲಾದೇಶ(Bangladesh) ಸರ್ಕಾರದೊಳಗೆ ಕಳವಳವನ್ನು ಹುಟ್ಟುಹಾಕಿದೆ. ಡೊನಾಲ್ಡ್​ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಬಳಿಕ, ಬಾಂಗ್ಲಾದೇಶ ಕೂಡ ಅಮೆರಿಕದೊಂದಿಗೆ ಸಾಧ್ಯವಾದಷ್ಟು ಬೇಗ ಒಪ್ಪಂದವನ್ನು ಮಾಡಿಕೊಳ್ಳಲು ಬಯಸುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಫೆಬ್ರವರಿ 12ರ ಚುನಾವಣೆಗೆ ಮೊದಲು ಅದನ್ನು ಮುಕ್ತಾಯಗೊಳಿಸುವ ಆಶಯದೊಂದಿಗೆ ಅಮೆರಿಕದೊಂದಿಗಿನ ಈ ವ್ಯಾಪಾರ ಒಪ್ಪಂದವನ್ನು ರಹಸ್ಯವಾಗಿಟ್ಟಿದೆ.

ಅಮೆರಿಕದ ಒಪ್ಪಂದಕ್ಕೆ ಸಂಬಂಧಿಸಿದಂತೆ ಯೂನಸ್ ಅವರ ಗೌಪ್ಯತೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಒಪ್ಪಂದವನ್ನು ತಲುಪಲು ಯೂನಸ್ ಏಕೆ ಇಷ್ಟು ಆತುರದಲ್ಲಿದ್ದಾರೆ ಮತ್ತು ಚುನಾವಣೆಯ ನಂತರ ರಚನೆಯಾಗುವ ಸರ್ಕಾರಕ್ಕೆ ಅದನ್ನು ಏಕೆ ಬಿಡುತ್ತಿಲ್ಲ ಎಂದು ತಜ್ಞರು ಕೇಳುತ್ತಿದ್ದಾರೆ.

ಅಮೆರಿಕದೊಂದಿಗಿನ ಯೂನಸ್ ಅವರ ಒಪ್ಪಂದದ ಸುತ್ತಲಿನ ಗೌಪ್ಯತೆಯು ರಫ್ತು ಸಂಸ್ಥೆಗಳು ಮತ್ತು ಬಾಂಗ್ಲಾದೇಶದ ಜವಳಿ ವಲಯದ ಪಾಲುದಾರರನ್ನು ಚಿಂತೆಗೀಡು ಮಾಡಿದೆ. ಬಾಂಗ್ಲಾದೇಶದಿಂದ ಅಮೆರಿಕಕ್ಕೆ ಸಾಗಿಸಲಾಗುವ ಸರಕುಗಳಲ್ಲಿ ರೆಡಿಮೇಡ್ ಉಡುಪುಗಳು ಮತ್ತು ಜವಳಿ ಶೇ.90 ರಷ್ಟಿದೆ.
ಕಳೆದ ವರ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳಿಂದ ದೇಶದ ಜವಳಿ ಉದ್ಯಮ ದುರ್ಬಲಗೊಂಡಿದೆ ಎಂದು ಬಾಂಗ್ಲಾದೇಶದ ಉದ್ಯಮಿಗಳು ಹೇಳುತ್ತಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಈ ಕಷ್ಟದ ಸಮಯದಲ್ಲಿ ರಹಸ್ಯ ಒಪ್ಪಂದವು ಈ ವಲಯವನ್ನು ಮತ್ತಷ್ಟು ದುರ್ಬಲಗೊಳಿಸಿದರೆ, ಅದು ಬಾಂಗ್ಲಾದೇಶದ ಆರ್ಥಿಕತೆಯನ್ನು ಸಂಪೂರ್ಣವಾಗಿ ಹಳಿತಪ್ಪಿಸಬಹುದು. ಟ್ರಂಪ್ ತಮ್ಮ ದೇಶದ ಪ್ರಮುಖ ಸಿದ್ಧ ಉಡುಪು ವ್ಯಾಪಾರದ ಮೇಲೆ ತಮ್ಮ ದೃಷ್ಟಿ ನೆಟ್ಟಿದ್ದಾರೆ ಎಂದು ಬಾಂಗ್ಲಾದೇಶದ ಉದ್ಯಮಿಗಳ ವಾದ.
ಶೇಖ್ ಹಸೀನಾ ಸರ್ಕಾರ ಪತನವಾದ ನಂತರ ಮುಹಮ್ಮದ್ ಯೂನಸ್​ನನ್ನು ಮಧ್ಯಂತರ ಸರ್ಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಮಧ್ಯಂತರ ಸರ್ಕಾರದ ಪ್ರಾಥಮಿಕ ಕಾರ್ಯವೆಂದರೆ ದೇಶದಲ್ಲಿ ಚುನಾವಣೆಗಳನ್ನು ನಡೆಸುವುದು. ಬಹಳ ವಿಳಂಬದ ನಂತರ, ಅವರು ಅಂತಿಮವಾಗಿ ಫೆಬ್ರವರಿ 12 ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದರು. ಚುನಾವಣಾ ಸಮಯದಲ್ಲಿ ಒಪ್ಪಂದದಲ್ಲಿ ಅವರ ಆಸಕ್ತಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಫೆಬ್ರವರಿ 9ರಂದು ಅಮೆರಿಕ-ಬಾಂಗ್ಲಾದೇಶ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಮೂರು ದಿನಗಳ ನಂತರ ಅಂದರೆ 12ರಂದು ಬಾಂಗ್ಲಾದೇಶದಲ್ಲಿ ಚುನಾವಣೆಗಳು ನಡೆಯಲಿವೆ.

ಬಾಂಗ್ಲಾದೇಶವು ಅಮೆರಿಕದೊಂದಿಗೆ ಮಾಡಿಕೊಂಡಿರುವ ರಹಸ್ಯ ಒಪ್ಪಂದದ ಅನುಮಾನ ಮೂಡಿದೆ. ಚುನಾವಣೆಗೆ ಕೆಲವೇ ದಿನಗಳ ಮೊದಲು ಯೂನಸ್ ಬಂದರನ್ನು ಗುತ್ತಿಗೆ ನೀಡಲು ಮತ್ತು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಬಾಂಗ್ಲಾದೇಶದ ಅರ್ಥಶಾಸ್ತ್ರಜ್ಞ ಅನು ಮೊಹಮ್ಮದ್ ಹೇಳುತ್ತಾರೆ. ಇದು ಅಮೆರಿಕದೊಂದಿಗೆ ರಹಸ್ಯ ಒಪ್ಪಂದದ ಬಗ್ಗೆ ಅನುಮಾನವನ್ನು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ ಏನಾಗುತ್ತೆ ಗೊತ್ತಾ? – Kannada News | Daily Devotional: Know why Husband and wife should not eat from the same plate

ಬೆಂಗಳೂರು, ಫೆಬ್ರುವರಿ​ 06: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ ಏನಾಗುತ್ತೆ ಎಂಬುದನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಅವರು ಹೇಳುವಂತೆ ನಮ್ಮ ಸನಾತನ ಧರ್ಮದಲ್ಲಿ ಋಣಾನುಬಂಧವು ಜೀವನದ ಎಲ್ಲ ಸಂಬಂಧಗಳಿಗೆ ಆಧಾರವಾಗಿದೆ. ಆಹಾರವು ಕೇವಲ ಹಸಿವನ್ನು ನೀಗಿಸದೆ, ದೇಹ, ಮನಸ್ಸು, ಭಾವನೆಗಳು ಮತ್ತು ಆಲೋಚನೆಗಳ ಮೇಲೆ ಆಳವಾದ ಪ್ರಭಾವ ಬೀರುತ್ತದೆ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರವೂ ನಾವು ಸೇವಿಸುವ ಆಹಾರವು ನಮ್ಮ ಶಾಂತಿ ಮತ್ತು ನೆಮ್ಮದಿಯ ಮೇಲೆ ಪರಿಣಾಮ ಬೀರುತ್ತದೆ.

ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ ಮತ್ತು ಪ್ರಾಚೀನ ಕಾಲದಲ್ಲಿ ಆಹಾರ ಸೇವನೆಗೆ ಅನೇಕ ನಿಯಮಗಳಿದ್ದವು. ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡುವುದು ಅಷ್ಟು ಶುಭ ಅಥವಾ ಸಮಂಜಸವಲ್ಲ ಎಂದು ತಿಳಿಸಲಾಗಿದೆ. ಬದಲಿಗೆ, ಗಂಡ ಊಟ ಮಾಡಿದ ನಂತರ ಹೆಂಡತಿ ಅದೇ ತಟ್ಟೆಯಲ್ಲಿ ಊಟ ಮಾಡುವ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವುದು ಹೆಚ್ಚು ಸೂಕ್ತ. ಒಂದೇ ತಟ್ಟೆಯಲ್ಲಿ ಊಟ ಮಾಡುವುದರಿಂದ ದಂಪತಿಗಳಿಗೆ ಅಷ್ಟು ಶ್ರೇಯಸ್ಕರವಾಗುವುದಿಲ್ಲ ಮತ್ತು ಅನ್ನಪೂರ್ಣಾ ದೇವಿಗೂ ಸಮಾಧಾನವಾಗುವುದಿಲ್ಲ ಎಂಬ ನಂಬಿಕೆಯಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

Source link

Horoscope Today 06 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for February​ 6th 2025: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, 2026, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ, ಹಸ್ತ ನಕ್ಷತ್ರ, ಧೃತಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ.

ಇದು ಮಹಾಲಕ್ಷ್ಮಿಯ ಆರಾಧನೆಗೆ ಪ್ರಶಸ್ತ್ಯವಾದ ಶುಭ ದಿನವಾಗಿದ್ದು, ಸಂಕಲ್ಪಗಳನ್ನು ಈಡೇರಿಸಿಕೊಳ್ಳಲು, ಲಲಿತಾ ಸಹಸ್ರನಾಮ ಅಥವಾ ಮಹಾಲಕ್ಷ್ಮಿ ಅಷ್ಟಕ ಪಾರಾಯಣಕ್ಕೆ ಉತ್ತಮವಾಗಿದೆ. ಔದುಂಬರ ಪಂಚಮಿಯಾಗಿರುವುದರಿಂದ ಅತ್ತಿ ಮರದ ಪೂಜೆ ಅಥವಾ ದತ್ತಾತ್ರೇಯನ ಸ್ತೋತ್ರ ಪಠಿಸುವುದು ಶ್ರೇಯಸ್ಕರ. ಧನಿಷ್ಠ ಮಳೆ ಪ್ರಾರಂಭ, ಉಳ್ಳಾಲತಿ ಜಾತ್ರೆ, ಪಂಚಲಿಂಗೇಶ್ವರ ರಥೋತ್ಸವ ಮತ್ತು ಬಸರೀಕಟ್ಟೆಯಲ್ಲಿ ಜನಾರ್ಧನ ರಥೋತ್ಸವದಂತಹ ಪರ್ವ ದಿನವೂ ಆಗಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್​ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ – Kannada News | School That Never Closes! Yadgir Govt School’s 24×7 Teaching Experiment to Boost SSLC Results

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಪಟ್ಟಣದ ಸರ್ಕಾರಿ ಪ್ರೌಢಶಾಲೆImage Credit source: tv9

ಯಾದಗಿರಿ, ಫೆಬ್ರವರಿ 6: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳನ್ನು ಓದಿನೆಡೆಗೆ ಆಕರ್ಷಿಸುವ ನಿಟ್ಟಿನಲ್ಲಿ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ವಿನೂತನ ಹೆಜ್ಜೆಯನ್ನಿಟ್ಟಿದ್ದಾರೆ. ಟಿವಿ ಮತ್ತು ಮೊಬೈಲ್‌ನ ಗೀಳಿಗೆ ಬಿದ್ದಿರುವ ವಿದ್ಯಾರ್ಥಿಗಳನ್ನು ಓದಿನ ಕಡೆ ಸೆಳೆಯುವುದು ಕಷ್ಟಕರವಾಗಿರುವ ಇಂದಿನ ದಿನಗಳಲ್ಲಿ, ಈ ಶಾಲೆಯ ಶಿಕ್ಷಕರು ದಿನಪೂರ್ತಿ ಶಾಲೆಯನ್ನು ತೆರೆದು, ಪಾಳಿಗಳಲ್ಲಿ ಬೋಧಿಸುತ್ತಿದ್ದಾರೆ! ಈ ವಿಶೇಷ ಯೋಜನೆಯನ್ನು ‘ಬಾಗಿಲು ಮುಚ್ಚದ ಸರ್ಕಾರಿ ಶಾಲೆ’ ಎಂದು ಕರೆಯಲಾಗುತ್ತಿದೆ.

ಯಾದಗಿರಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದ್ದು, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಯಾವಾಗಲೂ ಪಟ್ಟಿಯಲ್ಲಿ ಕೆಳಗಿರುತ್ತದೆ. ಈ ಹಣೆಪಟ್ಟಿಯನ್ನು ಕಳಚಲು ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ಅದಕ್ಕೆ ಪೂರಕವಾಗಿ ಈ ನೂತನ ಕಾರ್ಯಕ್ರಮ ಸಹಕಾರಿಯಾಗಿದೆ. ಶಾಲೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು ಮತ್ತು ಪಠ್ಯಕ್ರಮದ ಸಂಪೂರ್ಣ ಕಲಿಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ತಾವು ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಶಾಲೆಗಳು ಬೆಳಗ್ಗೆ 9.30ಕ್ಕೆ ಆರಂಭವಾಗಿ ಸಂಜೆ 4ಕ್ಕೆ ಮುಕ್ತಾಯಗೊಂಡರೆ, ಕಕ್ಕೇರ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಮಾತ್ರವಲ್ಲದೆ ರಾತ್ರಿ ವೇಳೆಯೂ ಪಾಠ ಬೋಧನೆ ನಡೆಯುತ್ತದೆ. ಅಂದರೆ, ದಿನದ 24 ಗಂಟೆಯೂ ಶಾಲೆಯ ಬಾಗಿಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ತೆರೆದಿರುತ್ತದೆ. 8 ರಿಂದ 10ನೇ ತರಗತಿಯವರೆಗೆ 550ಕ್ಕೂ ಹೆಚ್ಚು ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ 129 ಮಕ್ಕಳು 10ನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.

ರಾತ್ರಿ ಶಾಲೆಯಲ್ಲೇ ಉಳಿಯುತ್ತಾರೆ ಹುಡುಗರು

ಬೆಳಗ್ಗೆ 6 ಗಂಟೆಗೆ ಗ್ರೂಪ್ ಸ್ಟಡಿ ಮೂಲಕ ಶಾಲೆಯಲ್ಲಿ ಅಧ್ಯಯನ ಆರಂಭವಾಗುತ್ತದೆ. ಹೆಣ್ಣುಮಕ್ಕಳು ಸಂಜೆ 6ರವರೆಗೆ ಶಾಲೆಯಲ್ಲಿ ಅಧ್ಯಯನ ಮಾಡಿ ಮನೆಗೆ ತೆರಳಿದರೆ, 74 ಗಂಡುಮಕ್ಕಳಿಗೆ ರಾತ್ರಿ 11ರ ತನಕ ಪಾಠ ಮುಂದುವರೆಯುತ್ತದೆ. ರಾತ್ರಿ ಶಾಲೆಯಲ್ಲಿ ಉಳಿಯುವ ಈ ವಿದ್ಯಾರ್ಥಿಗಳನ್ನು ಬೆಳಗ್ಗೆ 5 ಗಂಟೆಗೆ ಎಬ್ಬಿಸಿ ಮತ್ತೆ ಓದಿಸುವ ವ್ಯವಸ್ಥೆ ಮಾಡಲಾಗಿದೆ. ಕನ್ನಡಕ್ಕೆ 7 ರಿಂದ 8 ಗಂಟೆ, ಇಂಗ್ಲಿಷ್‌ಗೆ 8 ರಿಂದ 9 ಗಂಟೆ, ಗಣಿತಕ್ಕೆ 9 ರಿಂದ 10.30 ಗಂಟೆ ಹಾಗೂ ಬೆಳಗ್ಗೆ 5 ಗಂಟೆಗೆ ವಿಜ್ಞಾನ ವಿಷಯಗಳಿಗೆ ಪಾಠ ಮಾಡಲಾಗುತ್ತದೆ.

ಕಕ್ಕೇರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಿಗೆ ಇದೆ ಶಿಫ್ಟ್!

ಶಿಕ್ಷಕರು ಪಾಳಿ ಪ್ರಕಾರ ರಾತ್ರಿ ಶಿಫ್ಟ್​ಗಳಲ್ಲಿಯೂ ಹಾಜರಿರುತ್ತಾರೆ. ಕಳೆದ ಒಂದು ವಾರದಿಂದ ಈ ವಿನೂತನ ಶೈಕ್ಷಣಿಕ ನೆರವು ಮಕ್ಕಳಿಗಾಗಿ ಲಭ್ಯವಿದ್ದು, ಶಿಕ್ಷಕರ ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ಈ ಪ್ರಯತ್ನದಿಂದ ಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಮಹತ್ವದ ಸುಧಾರಣೆ ಕಂಡುಬರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ – Kannada News | Horoscope 06 February 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು.

ವೃಷಭ ರಾಶಿ:

ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ ಮಾಡುವುದು ಬೇಡ. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ವೇಗದಿಂದ ಕಾರ್ಯಗಳನ್ನು ಮಾಡುವುದಕ್ಕಿಂತ ಏಕಾಗ್ರತೆ ಇರಲಿ.

ಮಿಥುನ ರಾಶಿ:

ಕನಸುಗಳೆಲ್ಲವೂ ನನಸಾಗಿಲ್ಲ ಎಂದು ಹತಾಶರಾಗದೇ ಅದಕ್ಕೆ ಸಮಯವಿದೆ ಎಂದು ಸಕಾರಾತ್ಮಕ ಯೋಚನೆ ಮಾಡಿ. ಸ್ತ್ರೀಯರಿಗೆ ಅನಾರೋಗ್ಯದ ಅಧಿಕವಾಗುವುದು. ಇಂದು ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ನೀವು ಎಲ್ಲರ ಜೊತೆ ಸಭ್ಯತೆಯನ್ನು ಮೀರದೇ ಮಾತನಾಡಬೇಕು. ನಿಮ್ಮದೇ ಕೆಲಸದ ಒತ್ತಡಗಳು ನಿಮಗೆ ಬರುವುದು. ಓಡಾಟವು ಹೆಚ್ಚಾಗಿದ್ದು, ಉತ್ಸಾಹವನ್ನು ಕಳೆದುಕೊಂಡು ಸುಮ್ಮನೆ ಕುಳಿತುಕೊಳ್ಳುವಿರಿ.

ಕರ್ಕಾಟಕ ರಾಶಿ:

ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಎಂತಹ ಸಮಸ್ಯೆಗೂ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಳ ಆಗಬಹುದು. ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯ ಉತ್ಸಾಹದಲ್ಲಿ ಮಾತು ಅತಿಯಾಗುವುದು ಬೇಡ. ಕೌಟುಂಬಿಕ ಜೀವನ ಸುಖಕರವಾಗಿರಬಹುದು. ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಸಂಗಾತಿಯಿಂದ ಅನಿರೀಕ್ಷಿತ ಕೊಡುಗೆಯನ್ನು ಪಡೆಯುವಿರಿ.

ಸಿಂಹ ರಾಶಿ:

ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಇಂದು ಯಾವುದೇ ಕೆಲಸ ಮಾಡುವಾಗ, ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು. ಆಪ್ತರ ಮಾತುಗಳು ನಿಮ್ಮ‌ ತಲೆಯಲ್ಲಿ ಕೊರೆಯಬಹುದು. ಉತ್ತಮ ಕಾರ್ಯಕ್ಕೆ ಎಲ್ಲ ಕಡೆಯಿಂದ ಅಭಿನಂದನೆಗಳು ಹರಿದುಬರಬಹುದು. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ನಿಮ್ಮ ಮಿತವಾದ ಮಾತಿನಿಂದ ಇತರರಿಗೆ ಅಚ್ಚರಿಯಾದೀತು.

ಕನ್ಯಾ ರಾಶಿ:

ಆತುರದಲ್ಲಿ ತೆಗೆದುಕೊಂಡ ನಿರ್ಧಾರದಿಂದ ತಪ್ಪು ನಿಮಗೇ ಗೊತ್ತಾದೀತು. ಉದ್ಯೋಗ ಕ್ಷೇತ್ರಗಳಲ್ಲಿ ಕೆಲವು ರೀತಿಯ ರಾಜಕೀಯವನ್ನು ಎದುರಿಸುವಿರಿ. ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹಿತೈಷಿಗಳ ಸಹಾಯದಿಂದ ನಿಮ್ಮ ಯಾವುದೇ ಆಸೆಗಳನ್ನು ಈಡೇರಿಸಲಾಗುವುದು. ಸಣ್ಣ ವ್ಯಾಪಾರಿಗಳು ಅಲ್ಪ ಲಾಭವನ್ನು ಗಳಿಸಿ, ಖುಷಿಪಡುವರು. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸು

ತುಲಾ ರಾಶಿ:

ಯಾವುದೇ ಸಮಾಜಕ್ಕೆ ಸಂಬಂಧಿಸಿದ ವಿಷಯಗಳು ನಿಮ್ಮ ಪರವಾಗಿ ಬರಬಹುದು. ವ್ಯವಹಾರದ ದೃಷ್ಟಿಯಿಂದ ಎಲ್ಲವೂ ಚೆನ್ನಾಗಿರುತ್ತದೆ. ವಾದಗಳ ಕಡೆ ಹೆಚ್ಚು ಗಮನವಿರುವುದು. ನಿಮ್ಮ ವೈಯಕ್ತಿಕ ವಿಚಾರವನ್ನು ಹೊರಗಿನವರಿಗೆ ಹೇಳಬೇಡಿ. ಎಂದೋ ಬರುವ ಸಮಸ್ಯೆಗಳಿಗೆ ಇಂದು ಚಿಂತೆಪಡುವಿರಿ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ.

ವೃಶ್ಚಿಕ ರಾಶಿ:

ಕೆಲವು ಜನರು ನಿಮ್ಮ ಸರಳ ಸ್ವಭಾವವನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಆತುರದಲ್ಲಿ ನೀವು ಕೆಲವು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಗಾತಿಯ ಪೂರ್ಣ ಬೆಂಬಲ ಸಿಗುವುದು. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಹಿರಿಯರಿಗೆ ಗೌರವವನ್ನು ಕೊಡುವಿರಿ.

ಧನು ರಾಶಿ:

ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ಯುವಕರು ಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥ ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತದೆ. ಹಣಕಾಸಿನ ವಿಷಯದಲ್ಲಿ ಕೆಲವು ರೀತಿಯ ಆತುರ ಉಂಟಾಗಬಹುದು. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯುವುದು ಪ್ರಯೋಜನಕಾರಿಯಾಗಿದೆ.

ಮಕರ ರಾಶಿ:

ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯುತ್ ಉಪಕರಣದಿಂದ ತೊಂದರೆಯಾದೀತು. ಮನೆಯ ಸರಿಯಾದ ಕ್ರಮವನ್ನು ಕಾಪಾಡಿಕೊಳ್ಳಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ತಾಳ್ಮೆಯಿಂದಿರಿ, ನಿಮ್ಮ ಕೋಪವು ನಿಮಗೆ ಹಾನಿಕಾರಕವಾಗಿರುತ್ತದೆ. ಆದಾಯದಲ್ಲಿಯೂ ನಿಮಗೇ ಪೂರ್ಣತೃಪ್ತಿ ಇರದು. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕುಂಭ ರಾಶಿ:

ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ. ಅಧ್ಯಾತ್ಮದ ಬಗ್ಗೆ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಅತ್ಯುತ್ತಮ ಜ್ಞಾನವನ್ನೂ ಪಡೆಯುವಿರಿ. ಯುವಕರ ವೃತ್ತಿ ಸಂಬಂಧಿತ ಯೋಜನೆಗಳು ದಾರಿ ತಪ್ಪಬಹುದು. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ.

ಮೀನ ರಾಶಿ:

ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ತೊಂದರೆ ಸಾಧ್ಯತೆಯೂ ಇದೆ. ತಾಳ್ಮೆಯಿಂದ ಸಮಯ ಕಳೆಯಿರಿ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ಹೂಡಿಕೆಯಿಂದ ಲಾಭವು ಸಿಗಲಿದೆ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಅತಿಗಂಡ, ಕರಣ : ಬವ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 24 pm, ಇಂದಿನ ಶುಭಾಶುಭ ಕಾಲ : ರಾಹು 11:12 – 12:39, ಯಮಗಂಡ ಕಾಲ 15:32 – 16:58, ಗುಳಿಕ ಕಾಲ 08:19 – 09:45

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮೊದಲಿಗೆ ತುಳಸಿ ಗಿಡಕ್ಕೆ ನಮಸ್ಕಾರ ಮಾಡಿಕೊಂಡು ಹೊರಡಿ. ಸಾಧ್ಯವಾದಲ್ಲಿ ನೀರನ್ನು ಗಿಡಕ್ಕೆ ಹಾಕಿದಲ್ಲಿ ಮತ್ತೂ ಒಳ್ಳೆಯದು. ದೀರ್ಘ ಕಾಲದಿಂದ ಬಾಕಿ ಉಳಿದುಹೋಗಿದ್ದ ಕೆಲಸಗಳು ಸರಾಗವಾಗಿ ಆಗಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಹಣಕಾಸಿನ ಹರಿವು ನೀವು ನಿರೀಕ್ಷೆಗೂ ಮೀರಿ ಸರಾಗವಾಗಿ ಆಗಲಿದೆ. ನಿಮ್ಮಲ್ಲಿ ಕೆಲವರು ಸಂಗೀತ ಅಥವಾ ಸಂಗೀತದ ಸಾಧನಗಳನ್ನು ಕಲಿಯುವುದಕ್ಕೆ ಸೇರಿಕೊಳ್ಳುವ ನಿರ್ಧಾರ ಮಾಡುವ ಯೋಗ ಇದೆ. ಅತಿಯಾದ ಖಾರದ ಪದಾರ್ಥಗಳನ್ನು ಸೇವನೆ ಮಾಡುವ ರೂಢಿ ಇರುವವರು ಈ ದಿನ ಸಾಧ್ಯವಾದಷ್ಟು ಆ ರೀತಿ ಆಹಾರ ಪದಾರ್ಥಗಳಿಂದ ದೂರ ಇರುವುದು ಕ್ಷೇಮ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮಲ್ಲಿ ಯಾರು ಈಗಿರುವ ಹುದ್ದೆಯಿಂದ ಕೆಳಗೆ ಇಳಿಯಬೇಕು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವರು ಆ ಹುದ್ದೆಗೆ ಮುಂದೆ ಯಾರನ್ನು ನೇಮಿಸಬೇಕು ಎಂಬ ಬಗ್ಗೆ ಆಪ್ತರಾದವರ ಜೊತೆಗೆ ಚರ್ಚೆಯನ್ನು ಮಾಡಲಿದ್ದೀರಿ. ಈಗಾಗಲೇ ಇಂಟರ್ ವ್ಯೂ ನೀಡಿಯಾಗಿದೆ, ಅದರ ಫಲಿತಾಂಶ ಏನಾಗಿದೆ ಎಂಬುದು ತಿಳಿದಿಲ್ಲ ಎಂದಾಗಿದ್ದಲ್ಲಿ ಆ ಬಗ್ಗೆ ಅಪ್ ಡೇಟ್ ದೊರೆಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮಲ್ಲಿ ಕೆಲವರಿಗೆ ಈ ದಿನ ಭಾವನೆಗಳ ಏರಿಳಿತ ಇರುತ್ತದೆ. ಇನ್ನು ನಿಮಗೆ ದೊರೆಯುವ ಯಶಸ್ಸನ್ನು ಹೇಗೆ ನಿಭಾಯಿಸಬೇಕು ಎಂಬುದು ಕೂಡ ಗೊಂದಲ ತಂದೊಡ್ಡುತ್ತದೆ. ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಂಥ ಸಂಸ್ಥೆಗಳಲ್ಲಿ ಉಪನ್ಯಾಸ ನೀಡುವಂತೆ ನಿಮಗೆ ಆಹ್ವಾನ ಬರುವ ಯೋಗ ಇದೆ. ಪ್ರೀತಿಯಲ್ಲಿ ಇರುವವರು ನೀವು ಪ್ರೀತಿಸುವ ವ್ಯಕ್ತಿಗೆ ಸಂಬಂಧಿಸಿದ ಕೆಲವು ಕೆಲಸಗಳನ್ನು ಮಾಡಿಕೊಡುವುದಕ್ಕೆ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

ಸಂಪೂರ್ಣ ವಿಷಯ ತಿಳಿಯದೆಯೇ ಅಥವಾ ಗೊತ್ತಿದ್ದೂ ಹಿರಿಯರಿಗೆ ಬೈದಂಥ ಘಟನೆಗಳ ವಿಚಾರವಾಗಿ ನಿಮ್ಮ ಮನಸ್ಸಿನಲ್ಲಿ ಚಿಂತೆ- ಪಾಪ ಪ್ರಜ್ಞೆ ಕಾಡುತ್ತಾ ಇದ್ದಲ್ಲಿ ಅದರ ನಿವಾರಣೆಗೆ ಹಸುವಿಗೆ ಯಥಾ ಶಕ್ತಿ ಬಾಳೇಹಣ್ಣು ನೀಡುವುದು ಒಳ್ಳೆಯದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸಂತೋಷವೋ ಸಂಭ್ರಮವೋ ಅಥವಾ ಭಾವನಾತ್ಮಕ ಕ್ಷಣಗಳೋ ನಿಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದಕ್ಕೆ ಪ್ರಯತ್ನಿಸಿ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಕಡಿಮೆ ಖರ್ಚಿನಲ್ಲಿ ಉಡುಗೊರೆ ನೀಡಬೇಕು ಎಂದು ನೀವು ಅಂದುಕೊಂಡಿರುತ್ತೀರಿ, ನಾನಾ ಕಾರಣಗಳಿಂದ ಅದು ಬಜೆಟ್ ಮೀರಿ ಹೋಗುವಂತೆ ಆಗಲಿದೆ. ಇತರರ ಜೊತೆಗೆ ನಿಮ್ಮನ್ನು ಹೋಲಿಕೆ ಮಾಡಿಕೊಳ್ಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಹಣವನ್ನು ಮಾನದಂಡವಾಗಿ ಇರಿಸಿಕೊಂಡು ಕೆಲವರು ನಿಮ್ಮನ್ನು ನಿರ್ಲಕ್ಷ್ಯ- ತಿರಸ್ಕಾರ ಭಾವನೆಯಿಂದ ನೋಡುತ್ತಾರೆ ಎಂಬ ಭಾವನೆ ಮನದಲ್ಲಿ ಗಟ್ಟಿಯಾಗಿ ಕೂರಲಿದೆ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಡುವ ಮುನ್ನ ಹನುಮಾನ್ ಚಾಲೀಸಾ ಕೇಳಿಸಿಕೊಳ್ಳುವುದು ಅಥವಾ ಪಠಿಸುವುದರಿಂದ ಹಲವು ನಕಾರಾತ್ಮಕ ಬೆಳವಣಿಗೆಗಳು ದೂರವಾಗುತ್ತವೆ. ನಿಮ್ಮ ಜೊತೆಯಲ್ಲಿ ಉದ್ಯೋಗ ಮಾಡುವವರು ಸಹಾಯ ಕೇಳಿಕೊಂಡು ಬಂದಲ್ಲಿ ಅವರಿಗೆ ಸ್ಪಂದಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮಲ್ಲಿ ಯಾರು ಸಿನಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂಥವರು ಸೋಷಿಯಲ್ ಮೀಡಿಯಾದಲ್ಲಿ ಹಾಕುವಂಥ ಪೋಸ್ಟ್ ನಿಂದಲೋ ಅಥವಾ ಮಾಧ್ಯಮಗಳ ಎದುರಿಗೆ ನೀವು ಆಡಿದ ಮಾತಿನಿಂದ ಕೆಲವು ವಿವಾದಕ್ಕೆ ಸಿಲುಕಿಕೊಳ್ಳುವಂತೆ ಆಗಲಿದೆ. ಆಕಸ್ಮಿಕವಾಗಿ ನಿಮಗೆ ಪರಿಚಯ ಆದಂಥ ವ್ಯಕ್ತಿಯೊಬ್ಬರ ಒಡನಾಟದಿಂದ ಉದ್ಯೋಗಕ್ಕೆ ಸಂಬಂಧಿಸಿದ ಕೆಲವು ಮುಖ್ಯವಾದ ರೆಫರೆನ್ಸ್ ಗಳು ದೊರೆಯುವ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

WPL 2026 Final: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಆರ್​ಸಿಬಿ ಸಿಂಹಿಣಿಯರು; ವಿಡಿಯೋ – Kannada News | WPL 2026 Final: RCB Crowned Champions After Thrilling Chase vs Delhi Capitals

ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಕಿರೀಟವನ್ನು ಅಲಂಕರಿಸಿತು. ಡೆಲ್ಲಿ ನೀಡಿದ 203 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್​​ಸಿಬಿ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸಿತು.

ಕೊನೆಕೊನೆಯಲ್ಲಿ ಜಾರ್ಜಿಯಾ ವಾಲ್, ರಿಚಾ ಘೋಷ್ ಹಾಗೂ ಸ್ಮೃತಿ ಮಂಧಾನ ವಿಕೆಟ್ ಕಳೆದುಕೊಂಡು ಆರ್​ಸಿಬಿ ಕೊಂಚ ಒತ್ತಡಕ್ಕೆ ಸಿಲುಕಿತ್ತು. ಅಲ್ಲದೆ ಸ್ಮೃತಿ ವಿಕೆಟ್ ಬಳಿಕ ಬಂದ ರಾಧಾ ಯಾದವ್ ಕೂಡ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿದ್ದರು. ಆದರೆ ಡೆಲ್ಲಿ ತಂಡ ಕ್ಯಾಚ್ ಕೈಚೆಲ್ಲಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ರಾಧಾ 20 ನೇ ಓವರ್​ನಲ್ಲಿ ಸತತ ಎರಡು ಬೌಂಡರಿಗಳನ್ನು ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ರಾಧಾ ಎರಡನೇ ಬೌಂಡರಿ ಬಾರಿಸುತ್ತಿದ್ದಂತೆ ಡಗೌಟ್​ನಲ್ಲಿ ಕುಳಿತಿದ್ದ ಇಡೀ ತಂಡ ಗೆಲುವಿನ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸಿತು. ಒಬ್ಬರನೊಬ್ಬರು ತಬ್ಬಿಕೊಂಡು ಸಂಭ್ರಮಿಸಿದರು. ಇತ್ತ ಬೌಂಡರಿ ಬಾರಿಸಿ ತಂಡವನ್ನು ಗೆಲ್ಲಿಸಿದ ರಾಧಾ ಯಾದವ್, ನಾನ್ ಸ್ಟ್ರೈಕ್​ನಲ್ಲಿದ್ದ ನಡಿನ್ ಡಿ ಕ್ಲರ್ಕ್​ ಅವರನ್ನು ತಬ್ಬಿಕೊಂಡು ಗೆಲುವನ್ನು ಆಚರಿಸಿದರು. ಆ ಬಳಿಕ ಇಡೀ ತಂಡ ಮೈದಾನದಲ್ಲಿ ನೆರೆದು ಗೆಲುವನ್ನು ಸಂಭ್ರಮಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version