ಮೈದಾನದಲ್ಲಿ ಜಗಳ ಮಾಡಿಕೊಂಡಿದ್ದ ವೈಭವ್ ಬೆನ್ನಿಗೆ ನಿಂತ ಶ್ರೀಲಂಕಾದ ಮಾಜಿ ಕ್ರಿಕೆಟಿಗರು – Kannada News | Vaibhav Sooryavanshi Cleared: India A Star Avoids Ban After Sri Lanka A Cricket Controversy

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ (Vaibhav Sooryavanshi), ಶ್ರೀಲಂಕಾ ಎ ತಂಡದ ಆಟಗಾರರೊಂದಿಗೆ ಜಗಳ ಮಾಡಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದ ಕಾರಣ, ನಿಯಮ ಉಲ್ಲಂಘಿಸಿದ ವೈಭವ್ ಸೂರ್ಯವಂಶಿ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅಂದರೆ ವೈಭವ್​ಗೆ ಡಿಮೆರಿಟ್ ಅಂಕಗಳೊಂದಿಗೆ ಪಂದ್ಯದಿಂದ ನಿಷೇಧಿಸುವ ಶಿಕ್ಷೆ ಸಿಗಬಹುದೆಂದು ಹೇಳಲಾಗುತಿತ್ತು. ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ, ವೈಭವ್​ಗೆ ಆ ರೀತಿಯ ಯಾವುದೇ ಶಿಕ್ಷೆಯನ್ನು ವಿಧಿಸಲಾಗುತ್ತಿಲ್ಲ ಎಂದು ವರದಿಯಾಗಿದೆ.

ಇಡೀ ಘಟನೆಯ ಹಿಂದಿರುವ ಕಾರಣವೇನು?

ದಂಬುಲ್ಲಾದ ರೆವ್ ಸ್ಪೋರ್ಟ್ಸ್‌ನ ಕ್ರೀಡಾ ಪತ್ರಕರ್ತ ರೋಹಿತ್ ಜುಗ್ಲಾನ್ ಇಡೀ ಘಟನೆಯ ಬಗ್ಗೆ ಮಾತನಾಡಿದ್ದು, ಅದರಲ್ಲಿ ಅವರು, ವೈಭವ್ ಸೂರ್ಯವಂಶಿ ಅವರನ್ನು ಪಂದ್ಯದಿಂದ ನಿಷೇಧಿಸಲಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪಂದ್ಯದ ರೆಫರಿ, ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಮತ್ತು ತಂಡದ ವ್ಯವಸ್ಥಾಪಕರೊಂದಿಗೆ ದೀರ್ಘ ಸಂಭಾಷಣೆ ನಡೆಸಿದ್ದಾರೆ. ಈ ಸಂಭಾಷಣೆಯ ಸಮಯದಲ್ಲಿ ಇಡೀ ಘಟನೆಗೆ ಕಾರಣ ಏನು ಎಂಬುದನ್ನು ತಿಲಕ್ ವರ್ಮಾ ರೆಫರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಸಲಿಗೆ ಈ ಜಗಳಕ್ಕೆ ಪ್ರಮುಖ ಕಾರಣ, ಲಂಕಾ ಆಟಗಾರರ ಅತಿರೇಕತನ. ಪಂದ್ಯ ಪ್ರಾರಂಭವಾದಾಗಿನಿಂದಲೂ ಶ್ರೀಲಂಕಾ ಎ ಆಟಗಾರರು ವೈಭವ್ ಸೂರ್ಯವಂಶಿ ಬಗ್ಗೆ ನಿರಂತರವಾಗಿ ಕಾಮೆಂಟ್ ಮಾಡುತ್ತಿದ್ದರು ಮತ್ತು ಅವರ ಬಗ್ಗೆ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದರು.

ಇದರ ಜೊತೆಗೆ ಪಂದ್ಯ ಮುಗಿದ ಬಳಿಕ ನಡೆದ ಘಟನೆಯ ಸಮಯದಲ್ಲಿ ವೈಭವ್​ಗೆ ಆಟಗಾರನನ್ನು ತಳ್ಳುವ ಉದ್ದೇಶವಿರಲಿಲ್ಲ. ಆದರೆ ಶ್ರೀಲಂಕಾ ತಂಡದ ಆಟಗಾರ, ತನ್ನ ಬಳಿ ಬರುತ್ತಿರುವುದನ್ನು ನೋಡಿದ ವೈಭವ್, ಅವನನ್ನು ದೂರದಲ್ಲೇ ನಿಂತು ಮಾತನಾಡುವಂತೆ ಹೇಳುತ್ತ ಹಿಂದಕ್ಕೆ ತಳ್ಳಿದನು ಎಂಬುದನ್ನು ತಿಲಕ್, ರೆಫರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಳಿಕ ಶ್ರೀಲಂಕಾದ ಕೆಲವು ಹಿರಿಯ ಆಟಗಾರರು ವೈಭವ್ ಸೂರ್ಯವಂಶಿ ಅವರೊಂದಿಗೆ ಮಾತನಾಡಿದ್ದಾರೆಂದು ವರದಿಯಾಗಿದೆ. ಐಪಿಎಲ್‌ನಲ್ಲಿ ಸೂರ್ಯವಂಶಿ ಅವರೊಂದಿಗೆ ಆಡಿದ ಆಟಗಾರರು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

80ನೇ ವಯಸ್ಸಿನಲ್ಲಿ 161 ಕಿ.ಮೀ ಪ್ರಯಾಣ ಮಾಡಿ ವೈಭವ್​ನನ್ನು ಭೇಟಿಯಾದ ದಿಗ್ಗಜ ಕ್ರಿಕೆಟಿಗ

ಟೀಕಾಕಾರರಿಗೆ ವೈಭವ್ ಉತ್ತರ ಏನಿರಲಿದೆ?

ಇದೀಗ ತನ್ನನ್ನು ಟೀಕಿಸಿದವರಿಗೆ ಸರಿಯಾಗಿ ಉತ್ತರ ನೀಡುವ ಅವಕಾಶ ವೈಭವ್​ಗಿದೆ. ವಾಸ್ತವವಾಗಿ ಈ ಸರಣಿಯಲ್ಲಿ ವೈಭವ್ ಒಂದೇ ಒಂದು ಅರ್ಧಶತಕ ಗಳಿಸಿಲ್ಲ. ಇದು ಟೀಕಾಕಾರರ ಬಾಯಿಗೆ ಆಹಾರವಾಗುವಂತೆ ಮಾಡಿದೆ. ಇದೀಗ ವೈಭವ್ ಬುಧವಾರ ನಡೆಯಲಿರುವ ಅಫ್ಘಾನಿಸ್ತಾನ ಎ ವಿರುದ್ಧದ ಪಂದ್ಯದಲ್ಲಿ ಅವರು ದೊಡ್ಡ ಇನ್ನಿಂಗ್ಸ್ ಆಡಿ ಭಾರತ ಎ ತಂಡವನ್ನು ಗೆಲುವಿನತ್ತ ಕೊಂಡೊಯ್ದರೆ, ಅದು ಅವರಿಗೆ ಮತ್ತು ತಂಡಕ್ಕೆ ಪ್ರಯೋಜನವನ್ನು ನೀಡುತ್ತದೆ. ಅಫ್ಘಾನಿಸ್ತಾನ ಎ ವಿರುದ್ಧ ಭಾರತ ಎ ತಂಡ ಗೆಲ್ಲುವುದು ನಿರ್ಣಾಯಕ, ಏಕೆಂದರೆ ಈ ಪಂದ್ಯದಲ್ಲಿ ಸೋತರೆ ತ್ರಿಕೋನ ಸರಣಿಯಿಂದ ಹೊರಗುಳಿಯುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:26 pm, Tue, 16 June 26

Source link

ಭವಾನಿಪುರದ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಮಮತಾ ಬ್ಯಾನರ್ಜಿ – Kannada News | Mamata Banerjee files plea in Calcutta High Court challenging Assembly Election result in Bhabanipur

ಕೊಲ್ಕತ್ತಾ, ಜೂನ್ 16: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಭವಾನಿಪುರ ಕ್ಷೇತ್ರದಲ್ಲಿ 15,105 ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಮೇ 4ರಂದು ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಗಳಿಸಿ, ಸುವೇಂದು ಅಧಿಕಾರಿ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭವಾನಿಪುರ ಕ್ಷೇತ್ರದ ಸೋಲನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮದೇ ಭದ್ರಕೋಟೆಯಾಗಿದ್ದ ಸೀಟಿನಲ್ಲಿ ಎದುರಾದ ಈ ಸೋಲನ್ನು ಒಪ್ಪದ ಮಮತಾ ಬ್ಯಾನರ್ಜಿ, ಇಂದು ಖುದ್ದಾಗಿ ಕೊಲ್ಕತ್ತಾ ಹೈಕೋರ್ಟ್‌ನ ರಿಜಿಸ್ಟ್ರಿಗೆ ಭೇಟಿ ನೀಡಿ ಫಲಿತಾಂಶವನ್ನು ಪ್ರಶ್ನಿಸುವ ಅರ್ಜಿಯನ್ನು ದೃಢೀಕರಿಸಿದ್ದಾರೆ.

ಇದರ ನಡುವೆ, ಲೋಕಸಭೆಯ 20 ಸಂಸದರು ಬಂಡಾಯ ಎದ್ದಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ಪಕ್ಷದ ಯುವ ಘಟಕದ ಅಧ್ಯಕ್ಷೆ ಸಾಯೋನಿ ಘೋಷ್ ಸೇರಿದಂತೆ ಹಲವು ನಾಯಕರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಪಕ್ಷದ ಮೇಲಿನ ಹಿಡಿತ ಬಿಗಿಗೊಳಿಸಲು ಭಾರಿ ಸರ್ಜರಿ ನಡೆಸಿದ್ದಾರೆ.

ಇದನ್ನೂ ಓದಿ: ‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ

ಲೋಕಸಭೆಯಲ್ಲಿ ಟಿಎಂಸಿಯ ಒಟ್ಟು 28 ಸಂಸದರ ಪೈಕಿ 20 ಸಂಸದರು ಮಮತಾ ಬ್ಯಾನರ್ಜಿ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದಾರೆ. ಈ ಬಂಡಾಯಗಾರರು ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ತಮಗೇ “ನೈಜ ಟಿಎಂಸಿ” ಎಂದು ಮಾನ್ಯತೆ ನೀಡಬೇಕು ಹಾಗೂ ತಾವು ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟವನ್ನು ಬೆಂಬಲಿಸುವುದಾಗಿ ಪತ್ರ ನೀಡಲು ಸಿದ್ಧತೆ ನಡೆಸಿದ್ದಾರೆ. ಈ ಬಂಡಾಯದ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ತಕ್ಷಣದ ಕ್ರಮ ಕೈಗೊಂಡಿದ್ದಾರೆ.

ಟಿಎಂಸಿ ಯುವ ಘಟಕದ ಅಧ್ಯಕ್ಷೆಯಾಗಿದ್ದ ಸಂಸದೆ ಸಾಯೋನಿ ಘೋಷ್ ಅವರನ್ನು ಹುದ್ದೆಯಿಂದ ಕಿತ್ತೊಗೆಯಲಾಗಿದ್ದು, ಅವರ ಜಾಗಕ್ಕೆ ಯುವ ನಾಯಕ ಅರ್ನಾಬ್ ಬ್ಯಾನರ್ಜಿ ಅವರನ್ನು ನೇಮಿಸಲಾಗಿದೆ. ಕೊಲ್ಕತ್ತಾ ದಕ್ಷಿಣ ಕ್ಷೇತ್ರದ ಸಂಸದೆ ಮಾಲಾ ರಾಯ್ ಅವರನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ಥಾನದಿಂದ ತೆಗೆದುಹಾಕಿ, ನಾಡಿಯಾ ಜಿಲ್ಲೆಯ ಕಾಲಿಗಂಜ್ ಶಾಸಕಿ ಅಲಿಫಾ ಅಹ್ಮದ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ

ಟಿಎಂಸಿ ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಕೂಡ ಬಂಡಾಯ ಕ್ಯಾಂಪ್ ಸೇರಿರುವುದರಿಂದ, ಅವರಿಂದ ತೆರವಾದ ಉತ್ತರ ಕೋಲ್ಕತ್ತಾ ಸಾಂಸ್ಥಿಕ ಜಿಲ್ಲೆಯ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ಮೊಟ್ಟೆ ದಾಳಿ ಎದುರಿಸಿದ್ದ ಬೆಲೆಘಾಟಾ ಶಾಸಕ ಕುನಾಲ್ ಘೋಷ್ ಅವರನ್ನು ನಿಯೋಜಿಸಲಾಗಿದೆ.

ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರು ಬಂಗಾಳದ ಎಲ್ಲಾ ಹಳೆಯ ಸಮಿತಿಗಳನ್ನು ರದ್ದುಗೊಳಿಸಿ, ತಮ್ಮ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮರುನೇಮಕ ಮಾಡುವ ಮೂಲಕ ಪಕ್ಷವನ್ನು ಪುನರ್ ರಚಿಸಿದ್ದರು. ಆದರೆ, ಇಷ್ಟೆಲ್ಲಾ ಮಾಡಿದರೂ ಸಂಸದರು ದ್ರೋಹ ಬಗೆದಿರುವುದಕ್ಕೆ ಟಿಎಂಸಿ ನಿಷ್ಠಾವಂತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು – Kannada News | E20 Fuel & Car Insurance: Government Clarifies No Claim Rejection for E20 Use

ನವದೆಹಲಿ, ಜೂನ್ 16: ಇ20 ಇಂಧನ ಬಳಸುವ ಕಾರಿಗೆ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗಬಹುದು ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಟ್ಟಿದ್ದು, ಆ ರೀತಿ ಆಗುವುದಿಲ್ಲ ಎಂದು ಹೇಳಿದೆ. ಶೇ. 20ರಷ್ಟು ಎಥೆನಾಲ್ ಮಿಶ್ರಣವಿರುವ ಇ20 ಪೆಟ್ರೋಲ್ (E20 fuel) ಅನ್ನು ಹಳೆಯ ವಾಹನಗಳು ಬಳಸಿದರೆ ಇನ್ಷೂರೆನ್ಸ್ ಕ್ಲೇಮ್ ಸಾಧ್ಯವಾಗದೇ ಹೋಗಬಹುದು ಎಂದು ಐಸಿಐಸಿಐ ಲೊಂಬಾರ್ಡ್ ಎನ್ನುವ ವಿಮಾ ಕಂಪನಿ ಕಳೆದ ವಾರ ತನ್ನ ಬ್ಲಾಗ್​ನಲ್ಲಿ ಮಾಹಿತಿ ಹಂಚಿಕೊಂಡಿತ್ತು. ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬಿ ವಾಹನ ಸವಾರರು ಇ20 ಇಂಧನದ ಬಗ್ಗೆ ಆತಂಕ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸ್ವತಃ ಐಸಿಐಸಿಐ ಲೊಂಬಾರ್ಡ್ ಕಂಪನಿ ಸ್ಪಷ್ಟನೆ ನೀಡಿ ಗೊಂದಲಕ್ಕೆ ತೆರೆ ಎಳೆಯಲು ಯತ್ನಿಸಿವೆ.

ವಿಮೆ ಸಂಪೂರ್ಣ ಸಿಂಧು

“ವಾಹನಗಳಲ್ಲಿ E20 ಇಂಧನವನ್ನು ಬಳಸುವುದರಿಂದ ನಿಮ್ಮ ಮೋಟಾರ್ ಇನ್ಶೂರೆನ್ಸ್ ಪಾಲಿಸಿಗಳು ರದ್ದಾಗುವುದಿಲ್ಲ, ಅವು ಸಂಪೂರ್ಣವಾಗಿ ಚಾಲ್ತಿಯಲ್ಲಿರುತ್ತವೆ” ಎಂದು ಕೇಂದ್ರ ಸರ್ಕಾರ ಮತ್ತು ಐಸಿಐಸಿಐ ಲೊಂಬಾರ್ಡ್ ಸಂಸ್ಥೆ ಸ್ಪಷ್ಟಪಡಿಸಿವೆ.

ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್

ಇದನ್ನೂ ಓದಿ: ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು

ಇಂಧನದ ಆಧಾರದ ಮೇಲೆ ಕ್ಲೈಮ್ ತಿರಸ್ಕರಿಸಲ್ಲ

ಬ್ಯಾಂಕುಗಳು ಮತ್ತು ವಿಮಾ ನಿಯಂತ್ರಕರು ತಿಳಿಸಿರುವಂತೆ, ಅಪಘಾತ ಅಥವಾ ಕಳ್ಳತನದಂತಹ ಸಂದರ್ಭಗಳಲ್ಲಿ ಕ್ಲೈಮ್ ನೀಡಲು ವಾಹನದಲ್ಲಿ ಯಾವ ಇಂಧನ (ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಅಥವಾ E20) ಬಳಸಲಾಗಿದೆ ಎಂಬುದು ಮುಖ್ಯವಾಗುವುದಿಲ್ಲ. ಸಾಮಾನ್ಯ ಇಂಧನ ಬಳಸಿದಾಗ ಯಾವೆಲ್ಲಾ ಅಪಘಾತದ ಕ್ಲೈಮ್‌ಗಳು ಸಿಗುತ್ತವೆಯೋ, ಅವೆಲ್ಲವೂ E20 ಇಂಧನ ಬಳಸುವ ವಾಹನಗಳಿಗೂ ಸಿಗಲಿವೆ.

ಹಳೆಯ ವಾಹನಗಳ ಬಳಕೆ ‘ಬೇಜವಾಬ್ದಾರಿತನ’ ಅಲ್ಲ

“ಹಳೆಯ ವಾಹನಗಳಲ್ಲಿ E20 ಪೆಟ್ರೋಲ್ ಹಾಕಿಸುವುದನ್ನು ನಾವು ‘ಗ್ರಾಹಕರ ನಿರ್ಲಕ್ಷ್ಯ’ ಎಂದು ಪರಿಗಣಿಸುವುದಿಲ್ಲ. ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯು ಪರಿಸರಸ್ನೇಹಿಯಾಗಿದ್ದು, ಇದರ ಕಾರಣಕ್ಕಾಗಿ ಯಾವುದೇ ಕ್ಲೈಮ್ ಅನ್ನು ತಿರಸ್ಕರಿಸಲಾಗುವುದಿಲ್ಲ” ಎಂದು ಇನ್ಶೂರೆನ್ಸ್ ಕಂಪನಿ ತನ್ನ ಹಳೆಯ ಹೇಳಿಕೆಯನ್ನು ತಿದ್ದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಎಂಬಿಎ ಕಾಲಘಟ್ಟ ಮುಗಿಯಿತು, ಈಗ ಬೇಕಿರೋದು ಟ್ರೇಡ್ ಸ್ಕಿಲ್ಸ್: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಸಲಹೆ

ಗ್ರಾಹಕರು ಗಮನಿಸಬೇಕಾದ ಸಂಗತಿ

ಅಪಘಾತದಿಂದ ವಾಹನ ಜಖಂಗೊಂಡರೆ ವಿಮೆ ಸಿಗುತ್ತದೆ. ಆದರೆ, E20 ಹೊಂದಾಣಿಕೆಯಾಗದ ಹಳೆಯ ವಾಹನಗಳಲ್ಲಿ (ಏಪ್ರಿಲ್ 2023 ಕ್ಕಿಂತ ಮುಂಚಿನ ಮಾಡೆಲ್‌ಗಳು) ಈ ಇಂಧನವನ್ನು ಸತತವಾಗಿ ಬಳಸುವುದರಿಂದ ಇಂಜಿನ್‌ನ ರಬ್ಬರ್ ಪಾರ್ಟ್ಸ್ ಅಥವಾ ಪೈಪ್‌ಗಳು ಕಾಲಕ್ರಮೇಣ ಕೆಟ್ಟುಹೋದರೆ (Chemical Corrosion/Wear and tear), ಅಂತಹ ‘ಪರಿಣಾಮಕಾರಿ ಹಾನಿಗಳಿಗೆ’ (Consequential Damages) ಸಾಮಾನ್ಯ ಇನ್ಶೂರೆನ್ಸ್ ಪಾಲಿಸಿಗಳಲ್ಲಿ ಪರಿಹಾರ ಸಿಗುವುದಿಲ್ಲ. ಏಕೆಂದರೆ ಇನ್ಶೂರೆನ್ಸ್ ಕೇವಲ ದಿಢೀರ್ ಆಗುವ ಅಪಘಾತಗಳನ್ನು ಮಾತ್ರ ಕವರ್ ಮಾಡುತ್ತದೆ, ಸಮಯ ಕಳೆದಂತೆ ಆಗುವ ಸವೆತಗಳನ್ನಲ್ಲ.

ಹೀಗಾಗಿ ಹಳೆಯ ವಾಹನ ಸವಾರರು ಇನ್ಶೂರೆನ್ಸ್ ರದ್ದಾಗುವ ಭಯಪಡುವ ಅಗತ್ಯವಿಲ್ಲದಿದ್ದರೂ, ಇಂಧನ ವ್ಯವಸ್ಥೆಯ ಬಿಡಿಭಾಗಗಳನ್ನು ನಿಯಮಿತವಾಗಿ ಸರ್ವಿಸಿಂಗ್ ಮಾಡಿಸಿಕೊಳ್ಳುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೀರೋ ಆದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ; ಕೈ ಜೋಡಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’ – Kannada News | BBK 12 Gilli Nataraj turns hero KVN Productions new movie announcement

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ (Gilli Nata) ಅವರಿಗೆ ಸಿನಿಮಾಗಳಿಂದ ಸಖತ್ ಆಫರ್ ಬರುತ್ತಿವೆ. ಈಗಾಗಲೇ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ವಿಶೇಷ ಏನೆಂದರೆ ಅವರು ಈಗ ಹೀರೋ ಆಗುತ್ತಿದ್ದಾರೆ. ಅವರು ನಾಯಕ ನಟನಾಗಿ ಅಭಿನಯಿಸಲಿರುವ ಹೊಸ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಬೆಂಬಲ ಸಿಕ್ಕಿದೆ. ‘ಜನ ನಾಯಗನ್’, ‘ಟಾಕ್ಸಿಕ್’ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸಿದ ಈ ಸಂಸ್ಥೆಯು ಗಿಲ್ಲಿ ನಟನ ಸಿನಿಮಾಗೆ ಸಾಥ್ ನೀಡುತ್ತಿರುವುದು ವಿಶೇಷ.

ಗಿಲ್ಲಿ ನಟ ಅವರ ಈ ಹೊಸ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಅರ್ಪಿಸಲಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಮತ್ತು ಹರೀಶ್ ಅವರು ಚೊಚ್ಚಲ ಬಾರಿಗೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ವಿಷಯವನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

ಸಿನಿಮಾದಲ್ಲಿ ಗಿಲ್ಲಿ ನಟ ಹೀರೋ ಎಂದಮೇಲೆ ಕಾಮಿಡಿ ಇರಲೇಬೇಕು. ಹೌದು, ಇದು ಅಪ್ಪಟ ಕಾಮಿಡಿ ಸಿನಿಮಾ. ಹಾಸ್ಯಮಯ ಸಿನಿಮಾಗಳಿಂದ ಖ್ಯಾತರಾದ ನಿರ್ದೇಶಕ ಚಂದ್ರಮೋಹನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥಾಪಕ ಕೆ. ವೆಂಕಟ ನಾರಾಯಣ ಮತ್ತು ಬಿಸ್ನೆಸ್ ಹೆಡ್ ಸುಪ್ರಿತ್ ಅವರು ಹರೀಶ್ ಹಾಗೂ ನವೀನ್ಗೆ ಸಾಥ್ ನೀಡುತ್ತಿದ್ದಾರೆ.

ಗಿಲ್ಲಿ ನಟನ ಹೊಸ ಸಿನಿಮಾದ ಅನೌನ್ಸ್​ಮೆಂಟ್ ವಿಡಿಯೋ:

ಜೂನ್ 21ರಂದು ಈ ಚಿತ್ರ ಸೆಟ್ಟೇರಲಿದೆ. ಈ ವಿಷಯವನ್ನು ತಿಳಿಸಲು ವಿಭಿನ್ನವಾದ ಪ್ರೋಮೋ ಮಾಡಿ ಚಿತ್ರತಂಡ ಗಮನ ಸೆಳೆಯುತ್ತಿದೆ. ಗಿಲ್ಲಿ ನಟ ಅವರ ಜನ್ಮದಿನವಾದ ಜೂನ್ 21ರಂದೇ ಈ ಸಿನಿಮಾಗೆ ಮುಹೂರ್ತ ನೆರವೇರಿಸಲಿರುವುದು ವಿಶೇಷ. ಗಿಲ್ಲಿ ಜೊತೆ ಸಿನಿಮಾದ ಪಾತ್ರವರ್ಗದಲ್ಲಿ ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

ಸಿನಿಮಾ ಘೋಷಣೆ ಮಾಡುವ ಸಲುವಾಗಿ ಗಿಲ್ಲಿ, ಚಂದ್ರಮೋಹನ್, ನವೀನ್ ಮತ್ತು ಹರೀಶ್ ಅವರು ಕೆ. ವೆಂಕಟ ನಾರಾಯಣ ಅವರನ್ನು ಭೇಟಿ ಮಾಡಿದ್ದಾರೆ. ‘ಹೀರೋ ಆಗಿ ನಟಿಸುತ್ತಿರುವ ಗಿಲ್ಲಿಯವರೇ ನಿಮಗೆ ಅಭಿನಂದನೆಗಳು. ನಾನು ಮೊದಲೇ ಈ ಕಥೆ ಕೇಳಿದ್ದೇನೆ. ನಿಮಗೆ ಈ ಕಥೆ ಹೊಂದಿಕೆ ಆಗುತ್ತದೆ. ಪ್ರತಿಭೆ ಇರುವವರಿಗೆಲ್ಲ ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲ ಯಾವಾಗಲೂ ಇರುತ್ತದೆ’ ಎಂದು ಕೆ. ವೆಂಕಟ ನಾರಾಯಣ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಳ್ಳು ಆರೋಪ ಮಾಡುವುದೇ ಕಾಂಗ್ರೆಸ್‌ ಕೆಲಸ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ತಿರುಗೇಟು – Kannada News | VHP International President Alok Kumar hits back to Priyank Kharge open letter on RSS

ನವದೆಹಲಿ, ಜೂನ್ 16: ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಬರೆದಿದ್ದ ಬಹಿರಂಗ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ನವದೆಹಲಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್‌ನ ನೋಂದಣಿ ಮತ್ತು ಆದಾಯದ ಮೂಲಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ಪ್ರಶ್ನೆಗಳಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಅಲೋಕ್ ಕುಮಾರ್ ಉತ್ತರಿಸಿದ್ದಾರೆ. “ದೇಶದ ಎಲ್ಲಾ ಸಂಸ್ಥೆಗಳೂ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳುವ ಕಾನೂನು ಎಲ್ಲಿದೆ ಎಂಬುದನ್ನು ಮೊದಲು ಖರ್ಗೆ ಉಲ್ಲೇಖಿಸಲಿ” ಎಂದು ಸವಾಲು ಹಾಕಿರುವ ಅವರು, ಸಂಘದ ‘ಗುರುದಕ್ಷಿಣೆ’ ನಿಧಿಗೆ ಆದಾಯ ತೆರಿಗೆಯಿಂದ ವಿನಾಯಿತಿ ಇದೆ ಎಂದು ಹೈಕೋರ್ಟ್ ನೀಡಿರುವ ಹಳೆಯ ತೀರ್ಪುಗಳನ್ನು ನೆನಪಿಸಿದ್ದಾರೆ. ಅಲ್ಲದೆ, ಇಂತಹ ಟೀಕೆಗಳ ಮೂಲಕ ಆರ್‌ಎಸ್‌ಎಸ್ ವರ್ಚಸ್ಸಿಗೆ ಮಸಿ ಬಳಿಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಎಸ್‌ಎಸ್ ಸಂಸ್ಥೆಯ ಆರ್ಥಿಕ ಪಾರದರ್ಶಕತೆ ಮತ್ತು ನಿಧಿ ಸಂಗ್ರಹಣೆಯ ಬಗ್ಗೆ ಮಾತನಾಡಿರುವ ಅಲೋಕ್ ಕುಮಾರ್, ಸಂಘದ ಕಾರ್ಯವೈಖರಿಯನ್ನು ಸ್ಪಷ್ಟಪಡಿಸಿದ್ದಾರೆ. ಆರ್‌ಎಸ್‌ಎಸ್ ವಿಶ್ವಾದ್ಯಂತ ಯಾವುದೇ ಬಾಹ್ಯ ಸಂಸ್ಥೆಗಳಿಂದ, ವಿದೇಶಗಳಿಂದ ಅಥವಾ ಸಾರ್ವಜನಿಕರಿಂದ ದೇಣಿಗೆಯ ರೂಪದಲ್ಲಿ ಹಣವನ್ನು ಸ್ವೀಕರಿಸುವುದಿಲ್ಲ. ಸಂಘದ ಒಳಗೆ ವರ್ಷಕ್ಕೊಮ್ಮೆ ‘ಗುರುದಕ್ಷಿಣೆ’ ಕಾರ್ಯಕ್ರಮ ನಡೆಯುತ್ತದೆ. ಸಂಘದ ಸ್ವಯಂಸೇವಕರು ಮಾತ್ರ ತಮ್ಮ ಶಕ್ತ್ಯಾನುಸಾರ ನೀಡುವ ಕಾಣಿಕೆಯಿಂದಲೇ ಸಂಘದ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ

ಆದಾಯ ತೆರಿಗೆ ಇಲಾಖೆಯು 1967-68 ಮತ್ತು 1975-76ರಲ್ಲಿ ಆರ್‌ಎಸ್‌ಎಸ್ ತನ್ನ ಆದಾಯದ ಮೇಲೆ ತೆರಿಗೆ ಪಾವತಿಸಬೇಕು ಎಂದು ಮೌಲ್ಯಮಾಪನ ಅಧಿಕಾರಿಯ ಮೂಲಕ ಆದೇಶಗಳನ್ನು ಹೊರಡಿಸಿತ್ತು. ಆದರೆ, ಈ ಎರಡೂ ಪ್ರಕರಣಗಳಲ್ಲಿ ಪರಸ್ಪರ ನಂಬಿಕೆಯ ಕಾನೂನುಗಳ ಅಡಿಯಲ್ಲಿ ಗುರು ದಕ್ಷಿಣೆಯಿಂದ ಬರುವ ಆದಾಯಕ್ಕೆ ಆದಾಯ ತೆರಿಗೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯೂ ಕಡ್ಡಾಯವಾಗಿ ಸರ್ಕಾರದ ಅಡಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎನ್ನುವ ಯಾವುದೇ ಕಡ್ಡಾಯ ಕಾನೂನು ಭಾರತದಲ್ಲಿ ಇಲ್ಲ. ಪ್ರಿಯಾಂಕ್ ಖರ್ಗೆಗೆ ಅಂತಹ ಕಾನೂನು ಗೊತ್ತಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ. ಆರ್‌ಎಸ್‌ಎಸ್ ಆದಾಯ ತೆರಿಗೆ ಪಾವತಿಸುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ನಿರಂತರ ಆರೋಪಗಳಿಗೆ ವಿಎಚ್​ಪಿ ನಾಯಕ ಅಲೋಕ್ ಕುಮಾರ್ ಐತಿಹಾಸಿಕ ಮತ್ತು ಕಾನೂನಾತ್ಮಕ ದಾಖಲೆಗಳನ್ನು ನೆನಪಿಸಿದ್ದಾರೆ.

ಈ ಹಿಂದೆ 1967-68 ಮತ್ತು 1975-76ರ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆಯ ಮೌಲ್ಯಮಾಪನ ಅಧಿಕಾರಿಗಳು ಆರ್‌ಎಸ್‌ಎಸ್ ತನ್ನ ಆದಾಯಕ್ಕೆ ತೆರಿಗೆ ಪಾವತಿಸಬೇಕು ಎಂದು ಆದೇಶ ಹೊರಡಿಸಿದ್ದರು. ಆದರೆ, ಈ ಎರಡೂ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆದಾಗ ಮಾನ್ಯ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪು ನೀಡಿತ್ತು. “ಪರಸ್ಪರ ನಂಬಿಕೆಯ ಕಾನೂನುಗಳ” ಅಡಿಯಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ನೀಡುವ ‘ಗುರು ದಕ್ಷಿಣೆ’ ಹಣಕ್ಕೆ ಯಾವುದೇ ಆದಾಯ ತೆರಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೀಗಾಗಿ, ಸಂಘದ ಆದಾಯ ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ನೆನಪಿಸುತ್ತಾ ತೀವ್ರ ವಾಗ್ದಾಳಿ ನಡೆಸಿದ ಅಲೋಕ್ ಕುಮಾರ್, “1948ರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹತ್ಯೆಯಾದಾಗಿನಿಂದಲೂ ಕಾಂಗ್ರೆಸ್ ಪಕ್ಷವು ಆರ್‌ಎಸ್‌ಎಸ್ ವಿರುದ್ಧ ಇಂತಹದ್ದೇ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಾ ಬಂದಿದೆ. ಪ್ರಿಯಾಂಕ್ ಖರ್ಗೆ ಅವರು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೂ ಸದ್ದು ಮಾಡುವುದಕ್ಕಾಗಿಯೇ ಇಂತಹ ಹಗುರವಾದ ವಾಗ್ದಾಳಿಗಳ ಮೂಲಕ ಸಂಘದ ಗೌರವಕ್ಕೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಆದರೆ, ಇಂತಹ ಸುಳ್ಳುಗಳು ಸಂಘದ ಸತ್ಕಾರ್ಯಗಳ ಮುಂದೆ ಎಂದಿಗೂ ಗೆಲ್ಲಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?

ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ (Vijay) ಅಧಿಕಾರ ಸ್ವೀಕರಿಸಿದ ನಂತರ, ತಮಿಳು ಚಿತ್ರರಂಗದ ಹಲವು ನಟರು, ತಂತ್ರಜ್ಞರು ಅವರನ್ನು ಭೇಟಿಯಾಗಿ ಅಭಿನಂದಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ.

ಸಿಎಂ ಜೊತೆಗಿನ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೊಸ್ಟ್ ಹಂಚಿಕೊಂಡಿರುವ ವಿಜಯ್, ‘ನನ್ನ ಆತ್ಮೀಯ ‘ಡಾರ್ಲಿಂಗ್’ ಸಿಎಂ ವಿಜಯ್, ಲಯೋಲಾ ಕಾಲೇಜಿನಲ್ಲಿ ನಮಗೆ ಪರಿಚಯವಾದಾಗಿನಿಂದ ನಾನು ನಿಮ್ಮನ್ನು ‘ಡಾರ್ಲಿಂಗ್’ ಎಂದೇ ಕರೆಯುತ್ತಿದ್ದೇನೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಒಬ್ಬ ಸಾಮಾನ್ಯ ನಟನಾಗಿ ನಿಮ್ಮ ಪಯಣ ಪ್ರಾರಂಭವಾಯಿತು, ಹಲವು ಅಡೆತಡೆಗಳು ಮತ್ತು ಟೀಕೆಗಳನ್ನು ಮೆಟ್ಟಿ ನಿಂತು, ನಿಮ್ಮ ಮೌನ ಮತ್ತು ಯಶಸ್ಸಿನ ಮೂಲಕ ಅವೆಲ್ಲವನ್ನೂ ದೂರ ತಳ್ಳಿದ್ದೀರಿ. ಒಬ್ಬ ಸೂಪರ್‌ಸ್ಟಾರ್‌ ಆಗಿ ಉನ್ನತ ಶಿಖರವನ್ನು ಏರಿದ ನೀವು, ಇಂದು ತಮಿಳುನಾಡಿನ ಗೌರವಾನ್ವಿತ ಮುಖ್ಯಮಂತ್ರಿಯಾಗಿದ್ದೀರಿ’ ಎಂದಿದ್ದಾರೆ.

‘ಇಂದು ನಿಮ್ಮ ಹುದ್ದೆ ಬದಲಾಗಿದೆ, ಆದರೆ ನೀವು ಬದಲಾಗಿಲ್ಲ. ನಿಮ್ಮನ್ನು ಭೇಟಿಯಾದದ್ದು ನನಗೆ ತುಂಬಾ ಸಂತೋಷವನ್ನು ನೀಡಿತು, ಅದೇ ಹಿಂದಿನ ಅನ್ಯೋನ್ಯತೆಯನ್ನು ಮತ್ತೆ ಅನುಭವಿಸಿದೆ. ನಮ್ಮ ರಾಜ್ಯದ ಮುಖ್ಯಮಂತ್ರಿಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ನನಗೆ ತುಂಬಾ ವಿಶೇಷ ಎನಿಸುತ್ತದೆ. ಈ ಮಧುರ ಕ್ಷಣಗಳು ನನ್ನ ಜೀವನದಲ್ಲಿ ಸದಾ ಉಳಿಯುತ್ತವೆ’ ಎಂದು ವಿಶಾಲ್ ತಿಳಿಸಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

‘ನಿಮಗಾಗಿ ಕೊಡಲಿಚ್ಛಿಸಿದ್ದ ಹೂಗುಚ್ಛ ಮತ್ತು ಶಾಲಿನ ಬದಲಾಗಿ, ಆ ಹಣವನ್ನು ನಿಮ್ಮ ಹೆಸರಿನಲ್ಲಿ ತಮಿಳುನಾಡಿನ ಮೂವರು ಅರ್ಹ ಬಡ ಬಾಲಕಿಯರ ವಿದ್ಯಾಭ್ಯಾಸಕ್ಕಾಗಿ ಬಳಸಿದ್ದೇನೆ. ಆ ಮಕ್ಕಳಿಗಾಗಿ ನೀವು ಪಡುತ್ತಿರುವ ಶ್ರಮವನ್ನು ನೋಡಿ ಅವರು ಖಂಡಿತವಾಗಿಯೂ ಹೆಮ್ಮೆಪಡುತ್ತಾರೆ ಮತ್ತು ನಿಮ್ಮನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತಾರೆ. ನನ್ನ ಹೃತ್ಪೂರ್ವಕ ಧನ್ಯವಾದಗಳು’ ಎಂದು ವಿಶಾಲ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಶಾಲ್ ಅವರು ವಿಜಯ್ ಅವರ ಹೆಸರಿನಲ್ಲಿ ಮಾಡಿರುವ ಕಾರ್ಯವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಆದರೆ ಇದೇ ವೇಳೆ, ವಿಜಯ್ ಅವರನ್ನು ‘ಡಾರ್ಲಿಂಗ್’ ಎಂದು ಕರೆದಿರುವ ಬಗ್ಗೆ ಸಾಕಷ್ಟು ಟೀಕೆಯನ್ನು ಸಹ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇಸ್ರೇಲ್ ಕೈಲಾಗದಿದ್ದರೆ ಸಿರಿಯಾ ನಿಭಾಯಿಸಲಿ; ಹೆಜ್ಬುಲ್ಲಾ ನಿಗ್ರಹಕ್ಕೆ ಟ್ರಂಪ್ ಐಡಿಯಾ – Kannada News | Let Syria handle Hezbollah if Israel can’t avoid mass killings; Donald Trump suggests

ವಾಷಿಂಗ್ಟನ್, ಜೂನ್ 16: ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ಅಲ್ಲಿ ಹೆಜ್ಬುಲ್ಲಾ ವಿರುದ್ಧ ಹೋರಾಡುವಲ್ಲಿ ಇಸ್ರೇಲ್‌ಗಿಂತ ಸಿರಿಯಾ ದೇಶವೇ ಉತ್ತಮ ಕೆಲಸ ಮಾಡಬಲ್ಲದು ಎಂದು ಪ್ರತಿಪಾದಿಸಿದ್ದಾರೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಕತಾರ್‌ನ ಎಮಿರ್ ಅವರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಟ್ರಂಪ್, ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆಯ ವಿರುದ್ಧ ಬೆಂಜಮಿನ್ ನೆತನ್ಯಾಹು ಅವರ ಮಿಲಿಟರಿ ಕಾರ್ಯಾಚರಣೆಯು ಇರಾನ್ ಜೊತೆಗಿನ ಶಾಂತಿ ಮಾತುಕತೆಗಳನ್ನು ಬಹುತೇಕ ಹಳಿ ತಪ್ಪಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿಯ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸಾವುನೋವುಗಳು ಹೆಚ್ಚುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. “ಇಸ್ರೇಲ್ ತನ್ನ ಗಡಿಯಲ್ಲಿ ಸುರಕ್ಷತೆಯನ್ನು ಬಯಸುವುದು ಸರಯಾಗಿದೆ. ಆದರೆ, ಹೆಜ್ಬುಲ್ಲಾವನ್ನು ಮುಗಿಸುವ ಪ್ರಕ್ರಿಯೆಯಲ್ಲಿ ಅಮಾಯಕ ಜನರ ಹತ್ಯೆಗಳನ್ನು ತಪ್ಪಿಸಲು ಇಸ್ರೇಲ್‌ಗೆ ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಇಸ್ರೇಲ್ ಇದನ್ನು ನಿಯಂತ್ರಿಸಲು ವಿಫಲವಾದರೆ, ಹೆಜ್ಬುಲ್ಲಾವನ್ನು ಸಿರಿಯಾ ದೇಶವೇ ಹ್ಯಾಂಡಲ್ ಮಾಡಲು ಬಿಡುವುದು ಉತ್ತಮ. ಸಿರಿಯಾ ಮತ್ತು ಲೆಬನಾನ್ ನೆರೆಹೊರೆಯ ರಾಷ್ಟ್ರಗಳಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಲ್ಲವು.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್

ಟ್ರಂಪ್ ಅವರ ಈ ನಿಲುವು ಸದ್ಯ ಅಮೆರಿಕ ಹೊಂದಿರುವ ವಿದೇಶಾಂಗ ನೀತಿಗಿಂತ ಸಂಪೂರ್ಣ ಭಿನ್ನವಾಗಿದೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಸರ್ಕಾರ, ಇರಾನ್ ಮತ್ತು ಹೆಜ್ಬುಲ್ಲಾ ಮೂರೂ ಒಟ್ಟಾಗಿ ಕೆಲಸ ಮಾಡುತ್ತವೆ. ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ಹೆಜ್ಬುಲ್ಲಾಗೆ ಇರಾನ್‌ನಿಂದ ಬರುವ ಶಸ್ತ್ರಾಸ್ತ್ರಗಳು ಸಿರಿಯಾ ಮೂಲಕವೇ ಸರಬರಾಜಾಗುತ್ತವೆ. ಹೀಗಿರುವಾಗ, “ಸಿರಿಯಾ ದೇಶವೇ ಹೆಜ್ಬುಲ್ಲಾವನ್ನು ನಿಭಾಯಿಸಲಿ” ಎಂದು ಟ್ರಂಪ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಅಮೆರಿಕವು ಮಧ್ಯಪ್ರಾಚ್ಯದ ಯುದ್ಧಗಳಲ್ಲಿ ನಿರಂತರವಾಗಿ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ವ್ಯಯಿಸುವುದನ್ನು ನಿಲ್ಲಿಸಬೇಕು ಎಂಬುದು ಟ್ರಂಪ್ ಅವರ ‘ಅಮೆರಿಕಾ ಫಸ್ಟ್’ ನೀತಿಯಾಗಿದೆ. ಪ್ರಾದೇಶಿಕ ಬಿಕ್ಕಟ್ಟುಗಳನ್ನು ಅಲ್ಲಿನ ಸ್ಥಳೀಯ ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿ, ಇದರಲ್ಲಿ ಅಮೆರಿಕ ನೇರವಾಗಿ ಭಾಗಿಯಾಗಬಾರದು ಎಂಬ ಸಂದೇಶವನ್ನು ಅವರು ನೀಡುತ್ತಿದ್ದಾರೆ. ಇಸ್ರೇಲ್‌ನ ಆಪ್ತ ಮಿತ್ರ ರಾಷ್ಟ್ರವಾಗಿದ್ದರೂ, ಯುದ್ಧದಿಂದಾಗಿ ಜಾಗತಿಕವಾಗಿ ಇಸ್ರೇಲ್ ಅನುಭವಿಸುತ್ತಿರುವ ಮಾನವೀಯ ಬಿಕ್ಕಟ್ಟಿನ ಅಪಕೀರ್ತಿಯಿಂದ ದೂರವಿರಲು ಟ್ರಂಪ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ಜಿ7 ಶೃಂಗಸಭೆ: ಫ್ರಾನ್ಸ್‌ಗೆ ಪ್ರಧಾನಿ ಮೋದಿ ಭೇಟಿ, ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಹತ್ವದ ಮಾತುಕತೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಚೌಕಟ್ಟು ಸಿದ್ಧವಾದ ಮರುದಿನವೇ ಈ ಹೇಳಿಕೆ ಬಂದಿದ್ದು, ಇದು ಇಸ್ರೇಲ್‌ಗೆ ನೀಡಿದ ನೇರ ಪೆಟ್ಟಾಗಿದೆ. ಈ ಶಾಂತಿ ಒಪ್ಪಂದವು ಲೆಬನಾನ್‌ನಲ್ಲಿನ ಮಿಲಿಟರಿ ಕಾರ್ಯಾಚರಣೆಗಳ ಅಂತ್ಯವನ್ನೂ ಒಳಗೊಂಡಿದೆ ಎಂದು ಇರಾನ್ ಮತ್ತು ಪಾಕಿಸ್ತಾನ ಪ್ರತಿಪಾದಿಸುತ್ತಿವೆ. ಇದು ಇಸ್ರೇಲ್‌ನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಎಂಬಿಎ ಕಾಲಘಟ್ಟ ಮುಗಿಯಿತು, ಈಗ ಬೇಕಿರೋದು ಟ್ರೇಡ್ ಸ್ಕಿಲ್ಸ್: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಸಲಹೆ – Kannada News | No MBA, future jobs will be of trade skills, says Chief Economic Advisor V Anantha Nageswaran

ವಿ. ಅನಂತ ನಾಗೇಶ್ವರನ್Image Credit source: PTI

ನವದೆಹಲಿ, ಜೂನ್ 16: ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ (CEA) ವಿ. ಅನಂತ ನಾಗೇಶ್ವರನ್ ಅವರು ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಮಾರುಕಟ್ಟೆಯ ಕುರಿತು ಅತ್ಯಂತ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ. “ಕೇವಲ ದೊಡ್ಡ ಪದವಿಗಳನ್ನು (Degrees) ಪಡೆಯುವುದರಿಂದ ಉದ್ಯೋಗ ಸಿಗುವುದಿಲ್ಲ. ಇಂದಿನ ಮಾರುಕಟ್ಟೆಗೆ ಬೇಕಿರುವುದು ಉದ್ಯೋಗದ ಕೌಶಲ್ಯಗಳು (Employability). ಯುವಜನರು ಕೇವಲ ಸರ್ಟಿಫಿಕೇಟ್‌ಗಳ ಹಿಂದೆ ಓಡುವ ಬದಲು ಪ್ರಾಯೋಗಿಕ ಕೌಶಲ್ಯ ಮತ್ತು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ. ಎಎನ್​ಐ ಪಾಡ್​ಕ್ಯಾಸ್ಟ್​ನಲ್ಲಿ ಮಾತನಾಡುತ್ತಿದ್ದ ಅವರು, ಇಂದಿನ ವಿದ್ಯಾರ್ಥಿಗಳು ಪದವಿ ಮುಗಿಸಿ ಎಂಬಿಎ, ಯುಪಿಎಸ್​ಸಿ ಇತ್ಯಾದಿಯತ್ತ ಓಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದವಿ ಮತ್ತು ಉದ್ಯೋಗದ ನಡುವಿನ ಅಂತರ

ಅನಂತ ನಾಗೇಶ್ವರನ್ ಅವರ ಪ್ರಕಾರ, ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಯುವಕರು ಪದವಿ ಮುಗಿಸಿ ಹೊರಬರುತ್ತಿದ್ದರೂ, ಕಂಪನಿಗಳಿಗೆ ಬೇಕಾದ ಕೌಶಲ್ಯಗಳು ಅವರಲ್ಲಿ ಇರುತ್ತಿಲ್ಲವಂತೆ (The Skill Gap). ಬರೀ ಶೈಕ್ಷಣಿಕ ಅಂಕಗಳು ಅಥವಾ ಪದವಿ ಪತ್ರಗಳು ಯುವಕರಿಗೆ ಕೆಲಸ ಗಿಟ್ಟಿಸಿಕೊಡಲಾರವು. ಉದ್ಯಮ ರಂಗಕ್ಕೆ ನೇರವಾಗಿ ಕೆಲಸಕ್ಕೆ ಬಳಸಿಕೊಳ್ಳಬಹುದಾದ (Trade Skills) ಹಾಗೂ ತಾಂತ್ರಿಕ ಜ್ಞಾನವಿರುವ ಉದ್ಯೋಗಿಗಳ ಅಗತ್ಯವಿದೆ. ಶಿಕ್ಷಣ ಸಂಸ್ಥೆಗಳು ಕೇವಲ ಥಿಯರಿ ಹೇಳಿಕೊಡದೆ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಬೇಕು ಎಂಬುದು ಅವರ ಸಲಹೆ.

ಇದನ್ನೂ ಓದಿ: ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು?

ದೈಹಿಕ ಮತ್ತು ಮಾನಸಿಕ ಆರೋಗ್ಯವೇ ಅಡಿಪಾಯ

ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಯುವ ಪೀಳಿಗೆಯ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಿಇಎ ಒತ್ತಿ ಹೇಳಿದ್ದಾರೆ. “ಒಬ್ಬ ವ್ಯಕ್ತಿಯ ಉತ್ಪಾದಕತೆ (Productivity) ಆತನ ಆರೋಗ್ಯದ ಮೇಲೆಯೇ ನಿರ್ಧರಿತವಾಗುತ್ತದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರುವ ಯುವ ಶಕ್ತಿಯಿಂದ ಮಾತ್ರ ದೇಶದ ಆರ್ಥಿಕತೆಗೆ ಕೊಡುಗೆ ನೀಡಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೆಚ್ಚುತ್ತಿರುವ ಜೀವನಶೈಲಿ ಕಾಯಿಲೆಗಳು ಮತ್ತು ಮಾನಸಿಕ ಒತ್ತಡಗಳು ಅವರ ವೃತ್ತಿಜೀವನದ ಬೆಳವಣಿಗೆಗೆ ಅಡ್ಡಿಯಾಗುತ್ತಿವೆ” ಎಂದಿದ್ದಾರೆ.

ಕರಕುಶಲ ಮತ್ತು ವೃತ್ತಿಪರ ಕೌಶಲ್ಯಗಳಿಗೆ ಆದ್ಯತೆ

ಕೇವಲ ಸಾಫ್ಟ್‌ವೇರ್ ಅಥವಾ ಕಾರ್ಪೊರೇಟ್ ಕೆಲಸಗಳಷ್ಟೇ ಅಲ್ಲದೆ, ವಿಭಿನ್ನ ವೃತ್ತಿಪರ ಕೌಶಲ್ಯಗಳನ್ನು (Vocational and Trade Skills) ಕಲಿಯುವುದಕ್ಕೆ ಯುವಕರು ಆದ್ಯತೆ ನೀಡಬೇಕು. ಕೊಳಾಯಿ ಕೆಲಸ (Plumbing), ಎಲೆಕ್ಟ್ರಿಷಿಯನ್, ಕಾರ್ಪೆಂಟಿಂಗ್, ಹೊಸ ಉತ್ಪಾದನಾ ತಂತ್ರಜ್ಞಾನಗಳು (Advanced Manufacturing) ಸೇರಿದಂತೆ ಪ್ರಾಯೋಗಿಕ ಕೆಲಸಗಳಿಗೆ ಜಾಗತಿಕವಾಗಿ ಭಾರಿ ಬೇಡಿಕೆ ಸೃಷ್ಟಿಯಾಗುತ್ತಿದೆ. ಇಂತಹ ಕ್ಷೇತ್ರಗಳಲ್ಲಿ ನೈಪುಣ್ಯತೆ ಸಾಧಿಸಿದರೆ ಉದ್ಯೋಗದ ಕೊರತೆ ಎದುರಾಗುವುದಿಲ್ಲ ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರರಾದ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ಯುವಜನರಿಗೆ ಸಿಇಎ ಸಂದೇಶ

ಭಾರತವು ಸದ್ಯ ಜನಸಂಖ್ಯಾ ಬಲ (Demographic Dividend) ಹೊಂದಿರುವ ದೇಶವಾಗಿದೆ. ಇದರ ಪೂರ್ಣ ಲಾಭವನ್ನು ಭಾರತ ಪಡೆದುಕೊಳ್ಳಬೇಕಾದರೆ ಯುವಜನರು ತಮ್ಮ ಯೋಚನಾ ಲಹರಿಯನ್ನು ಬದಲಾಯಿಸಿಕೊಳ್ಳಬೇಕು. ಸರ್ಕಾರದ ನೀತಿಗಳು ಕೌಶಲ್ಯ ಅಭಿವೃದ್ಧಿಗೆ ಪೂರಕವಾಗಿದ್ದರೂ, ಸ್ವತಃ ವಿದ್ಯಾರ್ಥಿಗಳು ಮತ್ತು ಪೋಷಕರು ಕೇವಲ ‘ಪದವಿಗಳ ವ್ಯಾಮೋಹ’ದಿಂದ ಹೊರಬಂದು, ನೈಜ ಮಾರುಕಟ್ಟೆಯ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ವಿ ಅನಂತ ನಾಗೇಶ್ವರನ್ ಎಚ್ಚರಿಸಿದ್ದಾರೆ. ನೈಜ ಮಾರುಕಟ್ಟೆ ಕೌಶಲ್ಯಗಳೆಂದರೆ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೊಬೈಲ್ ಅತಿಯಾಗಿ ಬಳಸಿದ್ರೆ ಮಣಿಕಟ್ಟು ನೋವು ಬರುತ್ತಾ? ಹಾಗಿದ್ರೆ ನೀವು ಈ ಸಿಂಡ್ರೋಮ್ ಬಗ್ಗೆ ತಿಳಿಯಲೇಬೇಕು – Kannada News | How Excessive Screen Time Is Damaging Your Wrist Health

ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಹಾಗೂ ಗೇಮಿಂಗ್ ಸಾಧನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇವುಗಳ ಅತಿಯಾದ ಬಳಕೆ ಮಣಿಕಟ್ಟಿನ (Wrist) ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಮತ್ತು ಮೊಬೈಲ್‌ ಹೆಚ್ಚು ಬಳಸುವವರಲ್ಲಿ ‘ಕಾರ್ಪಲ್ ಟನಲ್ ಸಿಂಡ್ರೋಮ್’ (CTS) ಸಮಸ್ಯೆ ಹೆಚ್ಚುತ್ತಿದೆ. ಹೆಸರು ಕೇಳಿದಾಗ ವಿಚಿತ್ರ ಎನಿಸಬಹುದು ಆದರೆ ಇದರ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ಹಾಗಾದರೆ ಕಾರ್ಪಲ್ ಟನಲ್ ಸಿಂಡ್ರೋಮ್ ಎಂದರೇನು, ಲಕ್ಷಣಗಳು ಹೇಗಿರುತ್ತವೆ ಮತ್ತು ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಾರ್ಪಲ್ ಟನಲ್ ಸಿಂಡ್ರೋಮ್ ಎಂದರೇನು?

ನಮ್ಮ ಮಣಿಕಟ್ಟಿನೊಳಗೆ ‘ಕಾರ್ಪಲ್ ಟನಲ್’ ಎಂಬ ಸಣ್ಣ ದಾರಿ ಇರುತ್ತದೆ. ಇದರ ಮೂಲಕ ‘ಮೀಡಿಯನ್ ನರ್ವ್’ ಎಂಬ ಪ್ರಮುಖ ನರ ಸಾಗುತ್ತದೆ. ಗಂಟೆಗಳ ಕಾಲ ಟೈಪಿಂಗ್ ಮಾಡುವುದು, ಫೋನ್ ಸ್ಕ್ರೋಲ್ ಮಾಡುವುದು ಅಥವಾ ಗೇಮಿಂಗ್ ನಲ್ಲಿ ಮುಳುಗಿರುವುದರಿಂದ ಮಣಿಕಟ್ಟಿನ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಇದರಿಂದ ನರ ಒತ್ತಡಕ್ಕೆ ಒಳಗಾಗಿ ಕಾರ್ಪಲ್ ಟನಲ್ ಸಿಂಡ್ರೋಮ್ (CTS) ಉಂಟಾಗುತ್ತದೆ. ಇದು ಮಣಿಕಟ್ಟು, ಕೈ ಮತ್ತು ಬೆರಳುಗಳಲ್ಲಿ ನೋವು, ಮರಗಟ್ಟುವಿಕೆ ಮತ್ತು ಜುಮ್ಮೆನಿಸುವಿಕೆಯನ್ನು ಉಂಟುಮಾಡುತ್ತದೆ.

ಮುಖ್ಯ ಲಕ್ಷಣಗಳು:

  • ಬೆರಳುಗಳಲ್ಲಿ ಸುಡುವ ಭಾವನೆ
  • ಮಣಿಕಟ್ಟಿನಲ್ಲಿ ನಿರಂತರ ನೋವು ಕಾಣಿಸಿಕೊಳ್ಳುವುದು
  • ವಸ್ತುಗಳನ್ನು ಗಟ್ಟಿಯಾಗಿ ಹಿಡಿಯಲು ಕಷ್ಟವಾಗುವುದು
  • ಕೈ ಬಲ ಕುಂಠಿತವಾಗುವುದು
  • ವಿಶೇಷವಾಗಿ ರಾತ್ರಿ ಸಮಯದಲ್ಲಿ ನೋವು ಹೆಚ್ಚಾಗುವುದು

ಈ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ನರಗಳಿಗೆ ಶಾಶ್ವತ ಹಾನಿಯಾಗುವ ಅಪಾಯವಿದೆ. ಮಧುಮೇಹ, ಥೈರಾಯ್ಡ್ ಸಮಸ್ಯೆ ಅಥವಾ ಅತಿಯಾದ ತೂಕ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ಸಮಸ್ಯೆ ತಡೆಯಲು ಏನು ಮಾಡಬೇಕು?

ಪ್ರತಿ 45 ರಿಂದ 60 ನಿಮಿಷಕ್ಕೊಮ್ಮೆ ಕೆಲಸದಿಂದ ಸಣ್ಣ ವಿರಾಮ ತೆಗೆದುಕೊಳ್ಳಬೇಕು. ಟೈಪಿಂಗ್ ಮಾಡುವಾಗ ಮಣಿಕಟ್ಟನ್ನು ಸಹಜ ಸ್ಥಿತಿಯಲ್ಲಿ ಇರಿಸಬೇಕು. ಎರ್ಗೋನಾಮಿಕ್ ಕೀಬೋರ್ಡ್ ಮತ್ತು ಮೌಸ್ ಬಳಸುವುದು ಉತ್ತಮ. ಮಣಿಕಟ್ಟು ಹಾಗೂ ಬೆರಳಿನ ಸ್ಟ್ರೆಚಿಂಗ್ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡಬೇಕು. ಸಾಧ್ಯವಾದಷ್ಟು ವಾಯ್ಸ್ ಟೈಪಿಂಗ್ ಬಳಸುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಮಣಿಕಟ್ಟು ನೋವು ಅಥವಾ ಬೆರಳುಗಳಲ್ಲಿ ಜುಮ್ ಎನಿಸುವ ಸಮಸ್ಯೆ ಮುಂದುವರಿದರೆ ಅದನ್ನು ಸಾಮಾನ್ಯ ದಣಿವು ಎಂದು ನಿರ್ಲಕ್ಷ್ಯ ಮಾಡಬೇಡಿ. ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ – Kannada News | 59 Live Bullets Found In Garbage At Belagavi, Police investigation underway

ಬೆಳಗಾವಿ, (ಜೂನ್ 16): ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಆಗಿದೆ. ಸದ್ಯ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version