ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನವದೆಹಲಿ, ಏಪ್ರಿಲ್ 11: ಸಂಸತ್ತಿನ ಆವರಣದಲ್ಲಿ ಇಂದು ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಗಮನ ಸೆಳೆದಿದೆ. ಸದಾ ಒಬ್ಬರ ಮೇಲೆ ಒಬ್ಬರು ಕೆಸರೆರಚಿಕೊಳ್ಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರಾಹುಲ್ ಗಾಂಧಿ ಇಂದು ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೋವೊಂದು ವೈರಲ್ ಆಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಅಜನ್ಮ ಶತ್ರುಗಳಂತೆ ಕಿತ್ತಾಡುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ಈ ಸಣ್ಣ ಮಾತುಕತೆ ಬಹಳ ಗಮನ ಸೆಳೆದಿದೆ. ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ದಿನಾಚರಣೆಯಂದು ಅವರಿಗೆ ಪುಷ್ಪ ನಮನ ಸಲ್ಲಿಸಲು ಪ್ರಧಾನಿ ಮೋದಿ ಸಂಸತ್ತಿನ ಆವರಣದಲ್ಲಿರುವ ಪ್ರೇರಣಾ ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಲವಾರು ಹಿರಿಯ ನಾಯಕರು ಮತ್ತು ಗಣ್ಯರು ಭಾಗವಹಿಸಿದ್ದರು. ಆಗ ಅಲ್ಲಿದ್ದ ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ.

ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ

ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಆಕೆಯನ್ನ ಪುಸಲಾಯಿಸಿದ ಹಿನ್ನೆಲೆ ಕೊಪ್ಪಳ ತಾಲೂಕಿನ‌ ಕಂಪ್ಲಿ ಗ್ರಾಮದ ಯುವಕ ಮುಸ್ತಫಾ ವಿರುದ್ಧ ಇದೀಗ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಗ್ರಾಮವೊಂದರಲ್ಲಿ ವಿದ್ಯಾರ್ಥಿನಿ ಜೊತೆಗೆ ಇದ್ದ ವೇಳೆ ಹಿಂದೂ ಯುವಕರ ಕೈಗೆ ಮುಸ್ತಫಾ ಸಿಕ್ಕಿಬಿದ್ದಿದ್ದ.

ಅಶ್ಲೀಲ ವಿಡಿಯೋಗಳು ಪತ್ತೆ

ಈ ವೇಳೆ ಮುಸ್ತಫಾ ಮೊಬೈಲ್ ಪರಿಶೀಲನೆ ಮಾಡಿದಾಗ ಹಲವು ಹಿಂದೂ ಯವತಿಯರ ಜೊತೆಗಿರುವ ಫೋಟೋಗಳು ಸೇರಿದಂತೆ 10ಕ್ಕೂ ಹೆಚ್ಚು ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ. ಅಷ್ಟೇ ಅಲ್ಲದೆ ಯುವತಿಯರಿಗೆ ಬಿಯರ್​​ ಕುಡಿಸಿದ್ದಾನೆ. ಮಟ್ಕಾ ಬರೆಯುತ್ತಿರುವುದೂ ಪತ್ತೆ ಆಗಿದೆ. ಈ ವೇಳೆ ಕೂಡಲೇ ಮೊಬೈಲ್ ಕಸಿದುಕೊಂಡ ಮುಸ್ತಫಾ ರೀಸೆಟ್ ಮಾಡಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಇನ್ನು ನಾನು ಹಿಂದೂ ಯುವತಿಯನ್ನು ಮದುವೆ ಆಗಿರುವುದಾಗಿ ಮುಸ್ತಫಾ ಹೇಳುತ್ತಿದ್ದಾನೆ. ಆದರೆ ಇತ್ತ ಮುಸ್ತಫಾ ವಿರುದ್ಧ ಕ್ರಮಕೈಗೊಳ್ಳುವಂತೆ ಹಿಂದೂ ಯುವಕರು ಆಗ್ರಹಿಸಿದ್ದಾರೆ. ಕೊಪ್ಪಳ ನಗರ ಠಾಣೆ ಎದುರು ಹಿಂದೂ ಯುವಕರು ಜಮಾವಣೆಗೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಜಿಲ್ಲಾಧ್ಯಕ್ಷ ಡಾ.ಸಂಗಮೇಶ್ ಹಿರೇಮಠ ಸೇರಿದಂತೆ ಹಿಂದೂ ಕಾರ್ಯಕರ್ತರಿಂದ ಮುಸ್ತಫಾ ವಿರುದ್ಧ ಎಸ್​ಪಿಗೆ ದೂರು ಕೂಡ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ ಹಾಕಲಾದ ಎಲ್ಲಾ ಗಣಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗವನ್ನು ಹೊಂದಿರುವ ಈ ಚಾಕ್‌ಪಾಯಿಂಟ್ ಅನ್ನು ಕೂಡಲೆ ಮತ್ತೆ ತೆರೆಯಲು ಮತ್ತು ಅದರ ಮೂಲಕ ಹೆಚ್ಚಿನ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಡೊನಾಲ್ಡ್ ಟ್ರಂಪ್ ಟೆಹ್ರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಜೊತೆಗಿನ ಇರಾನ್​ ಶಾಂತಿ ಮಾತುಕತೆಗಳು ನಡೆಯಲಿವೆ. ಅದರ ನಡುವೆ ಇರಾನ್ ಈ ಎಡವಟ್ಟು ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಸ್ಥಗಿತಗೊಂಡ ಪರಮಾಣು ಮಾತುಕತೆಗಳ ಕುರಿತು ಯುಎಸ್ ಮತ್ತು ಇಸ್ರೇಲ್ ಇರಾನ್‌ನಾದ್ಯಂತ ಜಂಟಿ ವೈಮಾನಿಕ ದಾಳಿ ನಡೆಸಿದ ಕೂಡಲೇ ಇರಾನ್ ಕಳೆದ ತಿಂಗಳು ಹಾರ್ಮುಜ್ ಅನ್ನು ಗಣಿಗಳನ್ನು ಹಾಕಲು ಸಣ್ಣ ಹಡಗುಗಳನ್ನು ಬಳಸಿತ್ತು. ಇರಾನ್ ಹಾಕಿದ ಕೆಲವು ಗಣಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಇರಾನಿನ ಅಧಿಕಾರಿಗಳು ಜಲಸಂಧಿಯನ್ನು ಅವ್ಯವಸ್ಥಿತವಾಗಿ ಗಣಿ ಹಾಕಿದ್ದಾರೆ ಮಾಡಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ವಿಷಯವು ಪಾಕಿಸ್ತಾನದಲ್ಲಿ ಇರಾನಿನ ಅಧಿಕಾರಿಗಳು ಮತ್ತು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ಅಮೆರಿಕದ ನಿಯೋಗದ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬಿಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಬೇಕೆಂದು ನೌಕರರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ. ಬಿಸಿಲಿನಿಂದ ಆರೋಗ್ಯ ಹಾಗೂ ಸುಸ್ತು ಹೆಚ್ಚಾಗಿದೆ. ಸೆಕೆಗೆ ಸರಿಯಾಗಿ ಕೆಲಸ ಮಾಡಲಾಗುತ್ತಿಲ್ಲ. ಆ ಕಾರಣಕ್ಕೆ ಕೆಲಸ ಸಮಯದಲ್ಲಿ ಬದಲಾವಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಉತ್ತರ ಕರ್ನಾಟಕದ ಉಳಿದ 9 ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲಿನ ಕಾರಣದಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ, ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನವಿದ್ದರೂ ಸಮಯ ಬದಲಾವಣೆ ಮಾಡದಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ್ ಬಳ್ಳಾರಿ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ನೌಕರರು ಜಿಲ್ಲಾಡಳಿತ ಭವನದ ಮುಂದೆ ಜಮಾಯಿಸಿ ತಮ್ಮ ಬೇಡಿಕೆಯನ್ನು ಮಂಡಿಸಿದರು.

ಇದನ್ನೂ ಓದಿ: ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು!

ಬಿಸಿಲಿನ ತೀವ್ರತೆ ಹೆಚ್ಚಾಗುವ ಮುನ್ನವೇ ಕೆಲಸ ಮುಗಿಸಲು ಅನುಕೂಲವಾಗುವಂತೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಕೆಲಸದ ಸಮಯವನ್ನು ನಿಗದಿಪಡಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ. “ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಜಮೀನುಗಳಿಗೆ ಭೇಟಿ ನೀಡಿ ಜಿಪಿಎಸ್ (GPS) ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಮಧ್ಯಾಹ್ನದ ಕೆಂಡದಂಥ ಬಿಸಿಲಿನಲ್ಲಿ ಹೊಲಗಳಿಗೆ ಹೋಗುವುದು ಅಸಾಧ್ಯವಾಗಿದೆ. ಅದರಲ್ಲೂ ಮಹಿಳಾ ಸಿಬ್ಬಂದಿಗಳು ಮತ್ತು ವಯಸ್ಸಾದ ನೌಕರರು ಬಿಸಿಲಿಗೆ ತಲೆಸುತ್ತು ಬಂದು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಕ್ಕಪಕ್ಕದ ಜಿಲ್ಲೆಗಳ ಮಾದರಿಯಲ್ಲೇ ಗದಗ ಜಿಲ್ಲೆಗೂ ಸಮಯ ಬದಲಾವಣೆಯ ಆದೇಶವನ್ನು ಕೂಡಲೇ ಹೊರಡಿಸಬೇಕು, ಇಲ್ಲದಿದ್ದರೆ ಕೆಲಸ ನಿರ್ವಹಿಸುವುದು ಕಷ್ಟವಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಙಾನ ಶಾಸ್ತ್ರವು ಸೂಚಿಸುವಂತೆ ಏಪ್ರಿಲ್ 2026ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು

​​ಅಧಿಕಾರ ಮತ್ತು ಉದ್ಯೋಗ :

ನಿಮ್ಮ ರಾಶ್ಯಾಧಿಪತಿ ಗುರುವು ಏಳನೇ ಮನೆಯಲ್ಲಿ ಇದ್ದು ನಿಮ್ಮ ರಾಶಿಯನ್ನು ನೋಡುತ್ತಿರುವುದು ಅತ್ಯಂತ ದೊಡ್ಡ ಬಲ. ಇದು ನಿಮಗೆ ಸಮಾಜದಲ್ಲಿ ಗೌರವ ಮತ್ತು ಕೆಲಸದಲ್ಲಿ ಅಧಿಕಾರ ತಂದುಕೊಡಲಿದೆ. ನಿಮ್ಮ ರಾಶಿಯ ಹಿಂದಿನ ಮನೆಯಲ್ಲಿ (ವೃಶ್ಚಿಕ) ಮಂಗಳ-ಚಂದ್ರ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಅಥವಾ ಮಾನಸಿಕ ಆತಂಕ ಇರಬಹುದು, ಆದರೆ ಯಶಸ್ಸು ನಿಮ್ಮದಾಗುತ್ತದೆ.

ಆರ್ಥಿಕತೆ ಮತ್ತು ಆದಾಯ :

ಮೂರನೇ ಮನೆಯಲ್ಲಿ ರಾಹು ಮತ್ತು ಬುಧ ಇರುವುದರಿಂದ ನಿಮ್ಮ ಬುದ್ಧಿವಂತಿಕೆಯಿಂದ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಹಠಾತ್ ಧನಲಾಭದ ಯೋಗವಿದೆ. ಆದರೆ ನಾಲ್ಕನೇ ಮನೆಯಲ್ಲಿ ಶನಿ-ರವಿ ಇರುವುದರಿಂದ ಮನೆ ಅಥವಾ ವಾಹನದ ಮೇಲಿನ ಖರ್ಚು ಹೆಚ್ಚಾಗಬಹುದು.

ಗೃಹ ನಿರ್ಮಾಣ ಮತ್ತು ಕೃಷಿ :

ನಾಲ್ಕನೇ ಮನೆಯಲ್ಲಿ ಶನಿ ಮತ್ತು ರವಿಯ ಯುತಿ ಇರುವುದರಿಂದ ಗೃಹ ನಿರ್ಮಾಣ ಕಾರ್ಯಗಳಲ್ಲಿ ವಿಳಂಬ ಅಥವಾ ತಾಂತ್ರಿಕ ಅಡೆತಡೆಗಳು ಎದುರಾಗಬಹುದು. ಎಚ್ಚರಿಕೆಯಿಂದ ಮುಂದುವರಿಯಿರಿ. ಕೃಷಿಯಲ್ಲಿ, ವಿಶೇಷವಾಗಿ ಅಡಿಕೆ ಅಥವಾ ತೋಟಗಾರಿಕೆಯಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮಣ್ಣಿನ ಸತ್ವ ಹೆಚ್ಚಿಸಲು ನೀವು ಮಾಡುತ್ತಿರುವ ನೈಸರ್ಗಿಕ ವಿಧಾನಗಳು ದೀರ್ಘಕಾಲದ ಲಾಭ ನೀಡಲಿವೆ.

ಸಾಲ ಮತ್ತು ಸಮಾಜ ಸೇವೆ:

ಒಂಭತ್ತನೇ ಮನೆಯಲ್ಲಿ ಕೇತು ಇರುವುದರಿಂದ ಆಧ್ಯಾತ್ಮಿಕ ಚಿಂತನೆ ಹೆಚ್ಚಲಿದೆ. ಸಮಾಜ ಸೇವೆಗೆ ಇದು ಸಕಾಲ. ಅನಗತ್ಯ ಸಾಲ ಮಾಡುವುದರಿಂದ ದೂರವಿರಿ, ಏಕೆಂದರೆ 4ನೇ ಮನೆಯ ಶನಿಯು ಮಾನಸಿಕ ನೆಮ್ಮದಿಯನ್ನು ಸ್ವಲ್ಪ ಕಡಿಮೆ ಮಾಡಬಹುದು.

ವಿದ್ಯಾಭ್ಯಾಸ ಮತ್ತು ವಿದೇಶ ಪ್ರವೇಶ :

ವಿದ್ಯಾರ್ಥಿಗಳಿಗೆ ಜ್ಞಾನ ವೃದ್ಧಿಯಾಗಲಿದೆ. ಮೂರನೇ ಮನೆಯ ರಾಹುವು ಧೈರ್ಯವನ್ನು ನೀಡುವುದರಿಂದ ವಿದೇಶ ಪ್ರವೇಶ ಅಥವಾ ದೂರದ ಪ್ರಯಾಣದ ಪ್ರಯತ್ನಗಳು ಫಲಪ್ರದವಾಗಲಿವೆ.

ಆಹಾರ ಉದ್ಯಮ ಮತ್ತು ಸಂಬಂಧ:

ಏಳನೇ ಮನೆಯ ಗುರುವು ಆಹಾರ ಉದ್ಯಮದಲ್ಲಿರುವವರಿಗೆ ಮತ್ತು ವ್ಯಾಪಾರಸ್ಥರಿಗೆ ಅತ್ಯಂತ ಶುಭಕರ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯವಿರಲಿದ್ದು, ಹೊಸ ಒಪ್ಪಂದಗಳಿಗೆ ಇದು ಸರಿಯಾದ ಸಮಯ.

– ಲೋಹಿತ ಹೆಬ್ಬಾರ್

Source link

ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು!

ಶಿವಮೊಗ್ಗ, ಏ.11: ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ (Hamsini Hippo) ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ ಕಾರಣವಾಗಿತ್ತು. ಈಗ ಅದೇ ನೀರಾನೆಯ ಮರಿಯು ಗರ್ಭದಲ್ಲೇ ಸಾವನ್ನಪ್ಪಿದೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಹೀಗೆ ಸರಣಿ ದುರಂತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇದೀಗ ಹಂಸಿನಿಯ ಮರಿಯು ಸಾವನ್ನಪ್ಪಿರುವುದಕ್ಕೆ ಸಫಾರಿ ಸಿಬ್ಬಂದಿ ಹಾಗೂ ಪ್ರಾಣಿ ಪ್ರೇಮಿಗಳಲ್ಲಿ ತೀವ್ರ ವಿಷಾದ ಮೂಡಿಸಿದೆ.

ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ಕರ್ತವ್ಯದಲ್ಲಿದ್ದ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ ಆರೋಗ್ಯ ತಪಾಸಣೆ ನಡೆಸಲು ಮುಂದಾಗಿದ್ದರು. ಈ ವೇಳೆ ಹಂಸಿನಿ ಏಕಾಏಕಿ ದಾಳಿ ಮಾಡಿತ್ತು. ಈ ಭೀಕರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದು ಅಲ್ಲಿನ ಸ್ಥಳೀಯರನ್ನು ಹಾಗೂ ಸಮೀಕ್ಷಾ ಅವರ ಮನೆಯವರ ಆಕ್ರೋಶಕ್ಕೆ ಕಾರಣವಾಗಿತ್ತು. ಸರಿಯಾದ ಸುರಕ್ಷತೆಯ ಕ್ರಮಗಳು ಇಲ್ಲದೆ ಕಳಿಸಿರುವುದು ಅರಣ್ಯಾ ಹಾಗೂ ಅಲ್ಲಿನ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

ಹಂಸಿನಿ ನೀರಾನೆಯು ಮರಿಯನ್ನು ಕಳೆದುಕೊಳ್ಳುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆಯೂ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿದ್ದ ಹಂಸಿನಿ, ಹುಟ್ಟಿದ ಕೆಲವೇ ದಿನಗಳಲ್ಲಿ ಅವುಗಳನ್ನು ಕಳೆದುಕೊಂಡಿತ್ತು. ಈ ಬಾರಿಯಾದರೂ ಮರಿ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಫಾರಿ ಸಿಬ್ಬಂದಿಗೆ ಈಗ ನಿರಾಸೆಯಾಗಿದೆ. ವನ್ಯಜೀವಿ ತಜ್ಞರ ಪ್ರಕಾರ, ಮಾರ್ಚ್‌ನಲ್ಲಿ ನಡೆದ ಆ ಅನಿರೀಕ್ಷಿತ ಘಟನೆಯ ಸಮಯದಲ್ಲಿ ಹಂಸಿನಿ ತೀವ್ರ ದೈಹಿಕ ಅನಾರೋಗ್ಯ ಮತ್ತು ಮಾನಸಿಕ ಒತ್ತಡಕ್ಕೆ (Stress) ಒಳಗಾಗಿತ್ತು. ಸಾಮಾನ್ಯವಾಗಿ ಗರ್ಭಿಣಿ ಪ್ರಾಣಿಗಳು ಅತಿಯಾದ ಸೂಕ್ಷ್ಮತೆಯನ್ನು ಹೊಂದಿರುತ್ತವೆ. ವೈದ್ಯೆಯ ಮೇಲೆ ದಾಳಿ ಮಾಡಿದ ಆಘಾತ ಮತ್ತು ನಂತರದ ಚಿಕಿತ್ಸಾ ಪ್ರಕ್ರಿಯೆಗಳು ಹಂಸಿನಿಯ ದೈಹಿಕ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಿದ್ದವು. ಈ ಮಾನಸಿಕ ಆಘಾತ ಮತ್ತು ಹಾರ್ಮೋನುಗಳ ಏರುಪೇರಿನಿಂದಾಗಿ ಮರಿಯು ಗರ್ಭದಲ್ಲೇ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಪ್ರಸ್ತುತ ಹಂಸಿನಿಯ ಆರೋಗ್ಯದ ಮೇಲೆ ಅರಣ್ಯ ಇಲಾಖೆ ಮತ್ತು ಪಶುವೈದ್ಯರು ತೀವ್ರ ನಿಗಾ ಇರಿಸಿದ್ದಾರೆ. ಗರ್ಭದಲ್ಲಿರುವ ಮೃತ ಮರಿಯನ್ನು ಹೊರತೆಗೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಹಂಸಿನಿಯ ಜೀವಕ್ಕೆ ಅಪಾಯವಾಗದಂತೆ ವೈದ್ಯಕೀಯ ತಂಡ ಜಾಗ್ರತೆ ವಹಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

PBKS vs SRH IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Punjab Kings vs Sunrisers Hyderabad IPL 2026 Live Cricket Score PBKS vs SRH Match on 11th April latest news in Kannada

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಅವಕಾಶವನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ತಂಡಕ್ಕೆ ಮಳೆ ಅವಕಾಶ ಕಸಿದುಕೊಂಡಿತು. ಆದಾಗ್ಯೂ, ಈ ಬಾರಿ ಅಂತಹ ಯಾವುದೇ ಅಡಚಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಏತನ್ಮಧ್ಯೆ, ಇಶಾನ್ ಕಿಶನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ನಂತರ ಎರಡನೇ ಗೆಲುವನ್ನು ಎದುರು ನೋಡುತ್ತಿದೆ.

Source link

ಈ ವಾರ ಒಟಿಟಿಗೆ ಬಂದಿವೆ ಕೆಲ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

Source link

Weekly Love Horoscope: ಪ್ರೇಮ – ಪ್ರೀತಿ ಭವಿಷ್ಯ; ಈ ವಾರ ಈ ರಾಶಿಯ ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಲಿದೆ

ಏಪ್ರಿಲ್ 12ರಿಂದ ಏಪ್ರಿಲ್ 18ರವರೆಗಿನ ಎರಡನೇ ವಾರವಾಗಿದ್ದು ಈ ವಾರದಲ್ಲಿ ಪರಿಚಿತವು ಪ್ರೇಮವಾಗಬಹುದು, ವರ್ತನೆ ನೇರವಾಗಿರಲಿ, ಅನುಮಾನಕ್ಕೆ ಆಸ್ಪದ ಬೇಡ. ಪ್ರೀತಿಯ ಕೊರತೆ ಕೆಲವರಿಗೆ ಆಗಲಿದ್ದು, ಮನಸ್ಸಿನೊಳಗೇ ದುಃಖಿಸಬೇಕಾಗುವುದು.

​ಮೇಷ:

​ಜೀವನ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಪ್ರೀತಿ ಗಟ್ಟಿಯಾಗಿರುತ್ತದೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಬಹುದು. ಮಾತಿನಲ್ಲಿ ಸಂಯಮವಿರಲಿ, ಆಪ್ತತೆಯು ಹೆಚ್ಚಾಗಲಿದೆ.

​ವೃಷಭ:

​ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಗೌರವ ಮತ್ತು ನಂಬಿಕೆ ವೃದ್ಧಿಯಾಗುವ ಸಮಯವಿದು.

​ಮಿಥುನ:

​ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ದೊರೆಯಬಹುದು. ಪ್ರೀತಿಯ ವಿಷಯದಲ್ಲಿ ಗೊಂದಲಗಳಿದ್ದರೆ ಈ ವಾರ ನಿವಾರಣೆಯಾಗಲಿವೆ. ಸ್ನೇಹ ಸಂಬಂಧಗಳು ಗಾಢವಾಗಲಿದ್ದು, ಪ್ರೇಮಿಗಳಿಗೆ ಮನೆಯವರ ಬೆಂಬಲ ಸಿಗಬಹುದು.

​ಕರ್ಕಾಟಕ:

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ದಾಂಪತ್ಯದಲ್ಲಿನ ಕಹಿ ಮರೆತು ಹೊಸ ಆರಂಭಕ್ಕೆ ನಾಂದಿ ಹಾಡುವಿರಿ. ಭಾವನಾತ್ಮಕವಾಗಿ ಸಂಗಾತಿಗೆ ಹತ್ತಿರವಾಗುವಿರಿ. ಹೊಸ ಪರಿಚಯಗಳು ಸ್ನೇಹಕ್ಕೆ ತಿರುಗಲಿವೆ.

​ಸಿಂಹ:

​ಆಪ್ತ ಸಂಬಂಧಗಳಲ್ಲಿ ಸ್ವಲ್ಪ ಬಿಗುವಿನ ವಾತಾವರಣ ಇರಬಹುದು. ಅಹಂಕಾರ ಬಿಟ್ಟು ನಡೆದರೆ ಪ್ರೇಮ ಜೀವನ ಸುಖಮಯವಾಗಿರುತ್ತದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಾಳ್ಮೆ ಇಲ್ಲಿ ಅತಿ ಮುಖ್ಯ.

​ಕನ್ಯಾ:

​ನಿಮ್ಮ ಸಂವಹನ ಶೈಲಿಯಿಂದ ಪ್ರೀತಿ ಪಾತ್ರರ ಮನ ಗೆಲ್ಲುವಿರಿ. ಒಂಟಿಯಾಗಿರುವವರಿಗೆ ಆಕರ್ಷಕ ವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆಯಿದೆ. ದಾಂಪತ್ಯದಲ್ಲಿ ಸುಖ-ಶಾಂತಿ ನೆಲೆಸಲಿದ್ದು, ಆಪ್ತತೆ ಹೆಚ್ಚಾಗಲಿದೆ.

​ತುಲಾ:

ಸಂಬಂಧಗಳಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ಸಂಗಾತಿಯ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರೇಮಿಗಳು ವಿವಾಹದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯ. ಹಳೆಯ ಸ್ನೇಹ ಮರುಕಳಿಸಬಹುದು.

​ವೃಶ್ಚಿಕ:

​ಭಾವನಾತ್ಮಕವಾಗಿ ಸ್ವಲ್ಪ ಏರಿಳಿತಗಳಿರಬಹುದು. ಪ್ರೀತಿಪಾತ್ರರ ಮೇಲೆ ಸಂಶಯ ಬೇಡ, ಮುಕ್ತವಾಗಿ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ದಾಂಪತ್ಯದಲ್ಲಿ ರೊಮ್ಯಾಂಟಿಕ್ ಕ್ಷಣಗಳು ಹೆಚ್ಚಾಗಲಿವೆ.

​ಧನು:

ಹೊಸ ಸ್ನೇಹವು ಪ್ರೇಮಕ್ಕೆ ತಿರುಗುವ ಸಾಧ್ಯತೆಯಿದೆ. ಸಾಮಾಜಿಕ ಸಮಾರಂಭಗಳಲ್ಲಿ ಭಾಗವಹಿಸುವುದರಿಂದ ಸಂಬಂಧಗಳು ವೃದ್ಧಿಯಾಗುತ್ತವೆ. ಸಂಗಾತಿಯೊಡನೆ ದೂರದ ಪ್ರಯಾಣ ಕೈಗೊಳ್ಳುವ ಸಂಭವವಿದೆ.

​ಮಕರ:

​ಕೆಲಸದ ಒತ್ತಡದ ನಡುವೆಯೂ ಸಂಗಾತಿಗೆ ಸಮಯ ನೀಡುವಿರಿ. ದಾಂಪತ್ಯದಲ್ಲಿ ಪ್ರೀತಿ ಮತ್ತು ಜವಾಬ್ದಾರಿ ಸಮಾನವಾಗಿರುತ್ತದೆ. ಆಪ್ತ ಸ್ನೇಹಿತರ ಮಾರ್ಗದರ್ಶನ ನಿಮ್ಮ ಪ್ರೇಮ ಜೀವನಕ್ಕೆ ಸಹಕಾರಿಯಾಗಲಿದೆ.

​ಕುಂಭ:

ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲು ಇದು ಸಕಾಲ. ನಿಮ್ಮ ಆಕರ್ಷಣೆ ಹೆಚ್ಚಾಗಲಿದ್ದು, ಪ್ರೇಮಿಗಳ ನಡುವೆ ಬಾಂಧವ್ಯ ಗಟ್ಟಿಯಾಗುತ್ತದೆ. ಸಂಗಾತಿಯಿಂದ ವಿಶೇಷ ಪ್ರೋತ್ಸಾಹ ಸಿಗಲಿದ್ದು, ನೆಮ್ಮದಿಯ ವಾರವಿದು.

​ಮೀನ:

​ಸಂಬಂಧಗಳಲ್ಲಿ ಮೃದುತ್ವವಿರಲಿ. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡಿ. ಸಣ್ಣ ವಿವಾದಗಳನ್ನು ಬೆಳೆಸಬೇಡಿ. ವಾರದ ಅಂತ್ಯಕ್ಕೆ ಪ್ರೇಮ ಜೀವನದಲ್ಲಿ ಹೊಸ ಚೈತನ್ಯ ಮೂಡಲಿದೆ ಮತ್ತು ಆಪ್ತತೆ ಹೆಚ್ಚಲಿದೆ.

– ಲೋಹಿತ ಹೆಬ್ಬಾರ್

Source link

‘ಜನ ನಾಯಗನ್’ ಲೀಕ್ ವೀಷಯ; ಸುತ್ತಿ ಬಳಸಿ ವಿಜಯ್ ಮೇಲೆ ಬಂತು ಆರೋಪ

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್​​ಗೂ ಮೊದಲೇ ಲೀಕ್ ಆಗಿದೆ. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಜನರು ಈ ಬಗ್ಗೆ ಸಾಕಷ್ಟು ಪ್ರಶ್ನೆ ಮಾಡುತ್ತಿದ್ದಾರೆ. ಅನೇಕರು ಲೀಕ್ ಮಾಡಿದವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಹೀಗಿರುವಾಗಲೇ ‘ಜನ ನಾಯಗನ್’ ಸಿನಿಮಾ ಕ್ಲಿಪ್ ಸೋರಿಕೆಗೆ ವಿಜಯ್ ಕೈವಾಡವೇ ಇದೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ವಿಜಯ್ ಅಭಿಮಾನಿಗಳು ಖಡಕ್ ಆಗಿ ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ.

ಎಲ್ಲಾ ಹೀರೋಗಳಿಗೆ ತಾವು ಮಾಡಿದ ಸಿನಿಮಾಗಳ ಮೇಲೆ ಪ್ರೀತಿ ಇರುತ್ತದೆ. ಅದು ಲೀಕ್ ಆಗಲಿ ಎಂದು ಯಾರೊಬ್ಬರೂ ಬಯಸುವುದಿಲ್ಲ. ಹಾಗಿದ್ದರೂ ವಿಜಯ್ ಮೇಲೆ ಈ ರೀತಿಯ ಗಂಭೀರ ಆರೋಪವನ್ನು ಕೆಲವರು ಮಾಡಿದ್ದಾರೆ. ‘ಜನ ನಾಯಗನ್ ಲೀಕ್ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳುವ ಪ್ಲ್ಯಾನ್ ವಿಜಯ್ ಅವರದ್ದು’ ಎಂದು ಕೆಲವರು ಆರೋಪ ಮಾಡಿದ್ದಾರೆ.

‘ಜನ ನಾಯಗನ್’ ಎಲ್ಲಿಯೂ ಪ್ರದರ್ಶನ ಆಗಿಲ್ಲ. ಹೀಗಾಗಿ, ಇದರ ಲೀಕ್ ಹಿಂದೆ ತಂಡದವರಲ್ಲಿದ್ದವರ ಕೈವಾಡ ಇರಬಹುದು ಎಂಬುದು ಕೆಲವರ ಅನುಮಾನ. ಈ ಕಾರಣದಿಂದ ಈಗಾಗಲೇ ಕೆವಿಎನ್ ಸಂಸ್ಥೆ ತನಿಖೆಗೆ ಆದೇಶ ಮಾಡಿದೆ. ಈ ವರದಿ ಹೊರ ಬಂದ ಬಳಿಕ ಅಸಲಿಯತ್ತು ತಿಳಿಯಲಿದೆ. ಇದರ ವರದಿ ಬರೋದಕ್ಕೂ ಮೊದಲೇ ಕೆಲವರು ವಿಜಯ್ ಹಾಗೂ ಅವರ ತಂಡದ ಮೇಲೆ ಸುಖಾಸುಮ್ಮನೆ ಆರೋಪ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

ಇನ್ನು, ಸಿನಿಮಾ ಲೀಕ್ ಬಗ್ಗೆ ವಿಜಯ್ ಮೌನವಹಿಸಿದ್ದಾರೆ. ಅವರು ಸಂಪೂರ್ಣವಾಗಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ. ಇನ್ನು, ಕೆಲವು ಪೈರಸಿ ಸೈಟ್​​ಗಳು ಒಳ್ಳೆಯತನ ಮೆರೆಯುವ ಕೆಲಸ ಮಾಡುತ್ತಿವೆ. ಸಿನಿಮಾ ರಿಲೀಸ್ ಆದ ಹೊರತಾಗಿಯೂ ಪೈರಸಿ ಕಾಪಿಯನ್ನು ಅಪ್​​ಲೋಡ್ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿವೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version