ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ – Kannada News | Severe Drought Forces Migration in Raichur: Over 40,000 People Leave Lingsugur, Says BJP MLA
ರಾಯಚೂರು, ಜುಲೈ 28: ರಾಯಚೂರು ಜಿಲ್ಲೆಯಲ್ಲಿ ಭೀಕರ ಬರಗಾಲದ ಕರಿಛಾಯೆ ಆವರಿಸಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಮಳೆ ಕೈಕೊಟ್ಟ ಕಾರಣ, ಸಾಲಸೋಲ ಮಾಡಿ ಬಿತ್ತನೆ ಮಾಡಿದ್ದ ತೊಗರಿ, ಹತ್ತಿ ಸೇರಿದಂತೆ ಬಹುತೇಕ ಬೆಳೆಗಳು ಒಣಗಿ ಹೋಗಿವೆ. ಮಳೆಯ ಕೊರತೆಯ ಜೊತೆಗೆ ಕಾಲುವೆಗಳಲ್ಲಿ ನೀರಿನ ಲಭ್ಯತೆಯೂ ಇಲ್ಲದಿರುವುದು ರೈತರ ಬದುಕನ್ನು ಮತ್ತಷ್ಟು ದುಸ್ತರವಾಗಿಸಿದೆ. ಲಿಂಗಸೂರು ತಾಲ್ಲೂಕಿನ ಚತ್ತರ ಗ್ರಾಮದಂತಹ ಹಲವೆಡೆಗಳಲ್ಲಿ ಹೊಲಗಳು ಸಂಪೂರ್ಣವಾಗಿ ಬರಡಾಗಿವೆ. ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ಕೈಗೆ ಬಂದ…