ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ – Kannada News | Jayamala takes charge as new president of Karnataka Film Chamber of Commerce

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka…

Read More

ಚಾಂಪಿಯನ್ ಯುವ ಭಾರತಕ್ಕೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ – Kannada News | India U19 Lifts Record 6th World Cup: BCCI Announces ₹7.5 Cr Cash Prize for Champions

ಇದಕ್ಕೂ ಮುನ್ನ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…

Read More

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ. ಮುಖ್ಯಾಂಶಗಳು  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು…

Read More

ಕೊನೆಗೂ ಕೊಪ್ಪಳ ಜನರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಕೊಪ್ಪಳ, ಮಾರ್ಚ್​​ 11: ಜಿಲ್ಲೆಯ ಜನತೆಗೆ ಈಗ ಉಸಿರಾಡುವುದೇ ದೊಡ್ಡ ಸಾಹಸವಾಗಿದೆ. ಕಾರ್ಖಾನೆಗಳು (Factory) ಹೊರಸೂಸುವ ವಿಷಕಾರಿ ಹೊಗೆಗೆ ರೋಸಿ ಹೋಗಿದ್ದಾರೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಜಿಲ್ಲಾಡಳಿತ ಈಗ ಎಚ್ಚೆತ್ತುಕೊಂಡಿದೆ. ನಿಯಮ ಉಲ್ಲಂಘಿಸಿದ 5 ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದ್ದು, 3 ಕಾರ್ಖಾನೆಗಳಿಗೆ ಬೀಗ ಬೀಳುವುದು ಫಿಕ್ಸ್ ಆಗಿದೆ. ಕಪ್ಪು ಹೊಗೆ ಉಗಳೋ ಕಾರ್ಖಾನೆಗಳು ಬಹುತೇಕ ಬಂದ್ ಆಗೋ ಸಾಧ್ಯತೆ ಇದೆ. ಕಾರ್ಖಾನೆಗಳು ಬಂದ್ ಆಗಿದ್ದೆ ನಿಜವಾದರೆ ಜನ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಗವಿಸಿದ್ದೇಶ್ವರನ ನಾಡು ಕೊಪ್ಪಳದಲ್ಲಿ ಒಂದು…

Read More

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ…

Read More

‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ಪ್ರಭಾಕರ್ ಮಾತು ನೆನೆದ ವಿನೋದ್ – Kannada News | Tiger Prabhakar’s Emotional Advice to Son Vinod Prabhakar Revealed at Balaramana Dinagalu Teaser Launch.

ಪ್ರಭಾಕರ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಪೊಲೀಸ್​ ಆಗಿ, ಹೀರೋ ಆಗಿ, ವಿಲನ್ ಆಗಿ ಮಿಂಚಿದ್ದರು. ಅವರು ಹೇಳಿದ ಒಂದು ಮಾತನ್ನು ವಿನೋದ್ ಪ್ರಭಾಕರ್ ನೆನಪಿಸಿಕೊಂಡಿದ್ದಾರೆ.‘ಬಲರಾಮನ ದಿನಗಳು’ ಸಿನಿಮಾ ಟೀಸರ್ ಲಾಂಚ್ ವೇಳೆ ಮಾತನಾಡಿದ ಪ್ರಭಾಕರ್ ಅವರು, ‘ನಾನು ಇಷ್ಟೆಲ್ಲ ಸಿನಿಮಾ ಮಾಡಿದರೂ ನನಗೆ ಸಿನಿಮಾ ಏನು ಅನ್ನೋದು ಗೊತ್ತಾಗಿಲ್ಲ ಮಗನೆ ಎಂದು ಪ್ರಭಾಕರ್ ಹೇಳುತ್ತಿದ್ದರು’ ಎಂದು ವಿನೋದ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ

ಕಿರುತೆರೆ ನಟಿ ಸಂಜನಾ ಬುರ್ಲಿ (Sanjana Burli) ಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು…

Read More