ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ – Kannada News | Dokulagi Village Mystery: Strange Ground Sounds Terrify Bidar Residents, Officials Investigate

ಗ್ರಾಮಕ್ಕೆ ಅಧಿಕಾರಿಗಳ ಭೇಟಿImage Credit source: tv9 kannada

ಬೀದರ್, ಫೆಬ್ರವರಿ 05: ಜಿಲ್ಲೆಯ ಹುಮ್ನಾಬಾದ್ (Humnabad) ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ಬರುತ್ತಿದ್ದ ಭಯಂಕರ ಶಬ್ದದಿಂದಾಗಿ (sound) ಜನರು ಆತಂಕಗೊಂಡಿದ್ದಾರೆ. ಬುಧವಾರ ರಾತ್ರಿ ನಾಲ್ಕೈದು ಭಾರೀ ಭೂಮಿ ಒಳಗಡೆಯಿಂದ ಬರುತ್ತಿದ್ದ ಶಬ್ಧದಿಂದಾಗಿ ಜನ ಮನೆಯೊಳಗಿರಲು ಹೆದರುತ್ತಿದ್ದಾರೆ. ರಾತ್ರಿ ಭಯಂಕರ ಶಬ್ದ ಬಂದು ಭೂಮಿ ನಡುಗಿದಂತಾಗಿದ್ದು, ಜನರು ಮನೆಯಿಂದ ಹೊರ ಓಡಿಬಂದಿದ್ದಾರೆ. ಸದ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

ಭೂಮಿಯಿಂದ ವಿಚಿತ್ರ ಶಬ್ಧ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಾಲ್ಕೈದು ಸಲ ಬಾಂಬ್ ಬಿದ್ದ ಹಾಗೆ ಸೌಂಡ್ ಆಗಿದ್ದು, ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ. ದೊಡ್ಡ ಮಟ್ಟದ ಸೌಂಡ್​ ಆಗಿದ್ದರಿಂದ ನಿನ್ನೆ ಇಡೀ ರಾತ್ರಿ ಗ್ರಾಮಸ್ಥರು ನಿದ್ರೆ ಮಾಡದೆ ರಾತ್ರಿ ಇಡೀ  ಜಾಗರಣೆ ಮಾಡಿದ್ದಾರೆ. ಭೂಮಿಯಿಂದ ವಿಚಿತ್ರ ಶಬ್ಧ ಬರುತ್ತಿದೆ. ಈ ರೀತಿಯ ಶಬ್ದ ಭೂಮಿಯಿಂದ ಬಂದಾಗ ಭೂಮಿ ಕಂಪನವಾಗುತ್ತದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಇನ್ನು ಈ ವಿಚಾರವನ್ನು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪಿಡಿಓ, ತಹಶಿಲ್ದಾರ್, ತಾಲೂಕು ಪಂಚಾಯತ್ ಇಓ ಸೇರಿಕೊಂಡು ಗ್ರಾಮಕ್ಕೆ ಬಂದು ಗ್ರಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ. ಅಧಿಕಾರಿಗಳು ಗ್ರಾಮಕ್ಕೆ ಭೆಟ್ಟಿ ಕೊಟ್ಟಾಗಲೂ ಎರಡು ಸಲ ಭೂಮಿಯಿಂದ ಶಬ್ಧ ಕೇಳಿಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರ ಗನಮಕ್ಕೆ ಅಧಿಕಾರಿಗಳು ತಂದಿದ್ದಾರೆ.

ಈ ಬಗ್ಗೆ ತಹಶಿಲ್ದಾರ್ ಅಜುಂ ತಬಸುಮ್ ಮಾತನಾಡಿ, ಗ್ರಾಮಸ್ಥರು ಮಾಹಿತಿ ಕೊಟ್ಟ ತಕ್ಷಣ ಗ್ರಾಮಕ್ಕೆ ಭೇಟಿ ಕೊಟ್ಟಿದ್ದೇವೆ. ಭೂಕಂಪನವಾದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ. ಆದರೆ ಪದೇ ಪದೇ ಭೂಮಿಯಿಂದ ಶಬ್ಧ ಬರುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಭೂಮಿಯಿಂದ ಏಕೆ ಸೌಂಡ್ ಬರುತ್ತಿದೆ ಎಂದು ಪತ್ತೆ ಹಚ್ಚಲು ತನಿಖಾ ತಂಡ ರಚನೆ ಮಾಡುತ್ತೇವೆ. ನೀವು ಯಾವುದೇ ಕಾರಣಕ್ಕೂ ಹೆದರಬೇಡಿ. ಭೂಮಿಯಲ್ಲಿ ನೀರು ಜಾಸ್ತಿಯಾಗಿ ಹೀಗೆ ಶಬ್ಧ ಬರುತ್ತಿದೆ. ಭಯಗೊಳ್ಳುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ

ಬಾಂಬ್ ಬ್ಲಾಸ್ಟ್ ಆದ ಹಾಗೆ ಭೂಮಿಯ ಒಳಗಡೆಯಿಂದ ಸೌಂಡ್ ಬರುತ್ತಿದೆ. ಜನರು ಹಗಲು-ರಾತ್ರಿ ಮನೆಯಿಂದ ಹೊರಗಿರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಏನು ಭಯಪಡುವ ಅವ್ಯಶ್ಯಕತೆಯಿಲ್ಲ ಎಂದಿದ್ದಾರೆ. ಆದರು ಕೂಡ ಸೌಂಡ್​​ ಬರುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು ಬಯಸಿದರೆ ರೆಡ್‌ ರೋಸ್‌ ನೀಡುವುದರ ಜೊತೆಗೆ ನಿಮ್ಮ ಸಂಗಾತಿಗೆ ನಿಮ್ಮ ಕೈಯಾರೇ ಪ್ರೀತಿಯಿಂದ ಗುಲಾಬಿ ಹೂವಿನ ಖಾದ್ಯಗಳನ್ನು ತಯಾರಿಸಬಹುದು. ಇಲ್ಲಿದೆ ನಿಮಗಾಗಿ ಈಸಿ ರೆಸಿಪಿ.

ರೋಸ್‌ ಡೇ ಯ ಸ್ಪೆಷಲ್‌ ರೆಸಿಪಿ ಲಿಸ್ಟ್:‌

ರೋಸ್ ಪುಡಿಂಗ್:

ಬೇಕಾಗುವ ಸಾಮಾಗ್ರಿಗಳು: ಹಾಲು – 100 ಮಿಲಿ, ಸಕ್ಕರೆ – 2 ಚಮಚ, ಚೈನಾ ಗ್ರಾಸ್‌ (ಅಗರ್‌ ಅಗರ್) – 2 ಗ್ರಾಂ, ಗುಲಾಬಿ ಸಿರಪ್ – 1 ಚಮಚ, ನೀರು.

ರೋಸ್ ಪುಡ್ಡಿಂಗ್ ತಯಾರಿಸುವ ವಿಧಾನ: ಮೊದಲು ಚೈನಾಗ್ರಾಸ್ ತೆಗೆದುಕೊಂಡು ಅದನ್ನು 10 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ, ಒಂದು ಪಾತ್ರೆಯನ್ನು ತೆಗೆದುಕೊಂಡು ಅದನ್ನು ಕಡಿಮೆ ಉರಿಯಲ್ಲಿ ಒಲೆಯ ಮೇಲೆ ಇರಿಸಿ. ಚೈನಾಗ್ರಾಸ್ ಮತ್ತು ನೀರನ್ನು ಸೇರಿಸಿ. ಚೈನಾಗ್ರಾಸ್ ಸಂಪೂರ್ಣವಾಗಿ ಕರಗುವವರೆಗೆ ಕುದಿಸಿ. ಈಗ, ಇನ್ನೊಂದು ಪಾತ್ರೆಯನ್ನು ತೆಗೆದುಕೊಂಡು, ಹಾಲು ಮತ್ತು ಸಕ್ಕರೆಯನ್ನು ಸೇರಿಸಿ, ಬಿಸಿ ಮಾಡಿ. ಹಾಲು ಕುದಿಯಲು ಪ್ರಾರಂಭಿಸಿದಾಗ, ಅದಕ್ಕೆ ಚೈನಾಗ್ರಾಸ್ ನೀರು ಮತ್ತು ರೋಸ್ ಸಿರಪ್ ಸೇರಿಸಿ ಮತ್ತು ಮಿಶ್ರಣವನ್ನು ತಯಾರಿಸಿ. ಈ ಮಿಶ್ರಣವನ್ನು 2-3 ನಿಮಿಷಗಳ ಕಾಲ ಕಡಿಮೆ ಉರಿಯಲ್ಲಿ ಕುದಿಯಲು ಬಿಡಿ. ನಂತರ ಸ್ಟವ್‌ ಆಫ್‌ ಮಾಡಿ ಅದನ್ನು ಒಂದು ಬೌಲ್‌ಗೆ ಸರ್ವ್‌ ಮಾಡಿ ಅದರ ಮೇಲೆ ಗುಲಾಬಿ ದಳಗಳನ್ನು ಇಟ್ಟು ಅಲಂಕರಿಸಿ, ಎರಡರಿಂದ ಮೂರು ಗಂಟೆಗಳ ಕಾಲ ಫ್ರಿಡ್ಜ್‌ನಲ್ಲಿಟ್ಟರೆ ರೋಸ್‌ ಪುಡ್ಡಿಂಗ್‌ ರೆಡಿ.

ರೋಸ್ ಖೀರ್:

ಬೇಕಾಗುವ ಸಾಮಾಗ್ರಿಗಳು: ಹಾಲು, ಗುಲಾಬಿ ದಳ, ಏಲಕ್ಕಿ ಪುಡಿ, ಸಕ್ಕರೆ, ಪಿಸ್ತಾ, ಬಾದಾಮಿ.

ರೋಸ್‌ ಖೀರ್‌ ತಯಾರಿಸುವ ವಿಧಾನ:  ರೋಸ್ ಖೀರ್ ಮಾಡಲು, ಮೊದಲು ಹಾಲನ್ನು ಕುದಿಸಿ, ಅದಕ್ಕೆ ಸ್ವಚ್ಛಗೊಳಿಸಿದ ಗುಲಾಬಿ ದಳಗಳನ್ನು ಸೇರಿಸಿ.  ನಂತರ ಅದಕ್ಕೆ ಏಲಕ್ಕಿ ಪುಡಿ ಮತ್ತು ಸಕ್ಕರೆ ಸೇರಿಸಿ ಕಡಿಮೆ ಉರಿಯಲ್ಲಿ ಬೇಯಿಸಿ. ಈ ಮಿಶ್ರಣ ಹಾಲು ದಪ್ಪಗಾದ ನಂತರ ಗ್ಯಾಸ್‌ ಆಫ್‌ ಮಾಡಿ ತಣ್ಣಗಾದ ನಂತರ ಅದರ ಮೇಲೆ ಪಿಸ್ತಾ, ಬಾದಾಮಿ ಚೂರಗಳನ್ನು ಹಾಕಿ ಅಲಂಕರಿಸಿ.

ಇದನ್ನೂ ಓದಿ: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್

ರೋಸ್‌ ಲಡ್ಡು:

ಬೇಕಾಗುವ ಸಾಮಾಗ್ರಿಗಳು: ಒಣ ಗುಲಾಬಿ ದಳ,ಖೋವಾ, ತೆಂಗಿನಕಾಯಿ ಪುಡಿ, ಜೇನು ತುಪ್ಪ

ರೋಸ್‌ ಲಡ್ಡು ತಯಾರಿಸುವ ವಿಧಾನ:  ಮೊದಲಿಗೆ ಒಣಗಿದ ಗುಲಾಬಿ ದಳಗಳನ್ನು ನುಣ್ಣಗೆ ಪುಡಿಮಾಡಿ ಇಟ್ಟುಕೊಳ್ಳಿ. ಈಗ ಖೋವಾವನ್ನು ಒಂದು ಪಾತ್ರೆಯಲ್ಲಿ ಲಘುವಾಗಿ ಹುರಿಯಿರಿ, ಅದಕ್ಕೆ ಗುಲಾಬಿ ಪುಡಿ, ತೆಂಗಿನಕಾಯಿ ಪುಡಿ ಮತ್ತು ಸ್ವಲ್ಪ ಜೇನುತುಪ್ಪ ಸೇರಿಸಿ. ಈ ಮಿಶ್ರಣವನ್ನು ಚೆನ್ನಾಗಿ ಕಲಸಿ ಈ ಮಿಶ್ರಣ ದಪ್ಪಗಾದ ಬಳಿಕ ಸಣ್ಣ ಉಂಡೆಗಳನ್ನು ಕಟ್ಟಿದರೆ, ರೋಸ್‌ ಲಡ್ಡು ರೆಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | TMC Going To Supreme Court for Protect Illegal Immigrants PM Modi Attacks Mamata Banerjee in Rajya Sabha

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ” ಎಂದು ಟೀಕಿಸಿದ ಮೋದಿ, “ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಒಳನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ?” ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UPSC New Rule: ಸೇವೆಯಲ್ಲಿರುವ ಐಎಎಸ್​, ಐಎಫ್​ಎಸ್ ಅಧಿಕಾರಿಗಳಿಗೆ ಯುಪಿಎಸ್​ಸಿಯಿಂದ ಹೊಸ ನಿರ್ಬಂಧ – Kannada News | UPSC New Rules: IAS, IFS Officers Restricted from Reappearing for CSE 2026 Exams

ನವದೆಹಲಿ, ಫೆಬ್ರವರಿ 05: ಕೇಂದ್ರ ಲೋಕಸೇವಾ ಆಯೋಗ(UPSC) ತನ್ನ ನಾಗರಿಕ ಸೇವಾ ಪರೀಕ್ಷೆ (CSE)2026ರ ಅಧಿಸೂಚನೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪರಿಚಯಿಸಿದೆ. ಇದು ಈಗಾಗಲೇ ಸೇವೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮರು-ಪ್ರಯತ್ನಗಳನ್ನು ಸೀಮಿತಗೊಳಿಸುತ್ತದೆ. ಸೇವೆ ಸಲ್ಲಿಸುತ್ತಿರುವ ಐಎಎಸ್​ ಮತ್ತು ಐಎಫ್​ಎಸ್ ಅಧಿಕಾರಿಗಳು ಸಿಎಸ್​ಇ 2026ರಲ್ಲಿ ಹಾಜರಾಗುವುದನ್ನು ನಿಷೇಧಿಸಲಾಗಿದೆ.

ಮುಂದಿನ ಪ್ರಯತ್ನದಲ್ಲಿ ತಮ್ಮ ಶ್ರೇಣಿಯನ್ನು ಸುಧಾರಿಸಲು ಬಯಸುವ ಐಪಿಎಸ್ ಅಧಿಕಾರಿಗಳು ಗ್ರೂಪ್ ಎ ಸೇವೆಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳ ಮೇಲೆ ಅಧಿಕಸೂಚನೆಯು ಷರತ್ತುಗಳನ್ನು ವಿಧಿಸುತ್ತದೆ. ಈ ಕ್ರಮವು ಒಂದು ಬಾರಿಯ ಸುಧಾರಣಾ ವಿಂಡೋವನ್ನು ಔಪಚಾರಿಕಗೊಳಿಸುತ್ತದೆ ಮತ್ತು ರಾಜೀನಾಮೆ ನೀಡದೆ ಪುನರಾವರ್ತಿತ ಪ್ರಯತ್ನಗಳಿಗೆ ಅವಕಾಶ ನೀಡುವ ಹಿಂದಿನ ಅವಕಾಶವನ್ನು ಮುಚ್ಚುತ್ತದೆ.
ಹಿಂದಿನ ಪರೀಕ್ಷೆಯ ಆಧಾರದ ಮೇಲೆ ಐಎಎಸ್ ಅಥವಾ ಐಎಫ್​ಎಸ್ ಆಗಿ ನೇಮಕಗೊಂಡಿರುವ ಮತ್ತು ಆ ಸೇವೆಯ ಸದಸ್ಯರಾಗಿ ಮುಂದುವರೆದ ಯಾವುದೇ ಅಭ್ಯರ್ಥಿಯು ಸಿಎಸ್​ಇ 2026ರಲ್ಲಿ ಕಾಣಿಸಿಕೊಳ್ಳಲು ಅರ್ಹರಾಗುವುದಿಲ್ಲ ಎಂದು ಅಧಿಸೂಚನೆ ಸ್ಪಷ್ಟವಾಗಿ ಹೇಳುತ್ತದೆ.

ಈ ನಿರ್ಬಂಧವು ಎಲ್ಲಾ ಹಂತಗಳಿಗೂ ಅನ್ವಯಿಸುತ್ತದೆ, ಪ್ರಾಥಮಿಕ ಪರೀಕ್ಷೆಯ ನಂತರ ಆದರೆ ಮುಖ್ಯ ಪರೀಕ್ಷೆಗೂ ಮೊದಲು ಅಬ್ಯಥರ್ಥಯನ್ನು ಐಎಎಸ್ ಅಥವಾ ಐಎಫ್​ಎಸ್ಗೆ ನೇಮಿಸಿದರೆ, ಅವರು ಮುಖ್ಯ ಪರೀಕ್ಷೆಯನ್ನು ಬರೆಯಲು ಸಾಧ್ಯವಿಲ್ಲ. ಮುಖ್ಯ ಪರೀಕ್ಷೆ ಪ್ರಾರಂಭವಾದ ನಂತರ ಆದರೆ ಅಂತಿಮ ಫಲಿತಾಂಶ ಘೋಷಣೆಯಾಗುವ ಮೊದಲು ನೇಮಕಗೊಂಡರೆ ಅವರನ್ನು ಸಿಎಸ್​ಎ 2026ರ ಅಡಿಯಲ್ಲಿ ಹಂಚಿಕೆಗೆ ಪರಿಗಣಿಸಲಾಗುವುದಿಲ್ಲ. ಇದು ಸೇವೆಯಲ್ಲಿರುವ ಐಎಎಸ್​ ಮತ್ತು ಐಎಫ್​ಎಸ್ ಅಧಿಕಾರಿಗಳು ರಾಜೀನಾಮೆ ನೀಡದ ಹೊರತು ಮತ್ತೆ ಪರೀಕ್ಷೆ ಬರೆಯುವುದನ್ನು ತಡೆಯುತ್ತದೆ.

ಹಿಂದಿನ ಪರೀಕ್ಷೆಯ ಮೂಲಕ ಈಗಾಗಲೇ ಆಯ್ಕೆಯಾದ ಅಥವಾ ಪೊಲೀಸ್ ಸೇವೆಗೆ ನೇಮಕಗೊಂಡ ಅಭ್ಯರ್ಥಿಗಳು ಸಿಎಸ್​ಇ2026ರ ಮೂಲಕ ಮತ್ತೆ ಐಪಿಎಸ್ ಆಯ್ಕೆ ಮಾಡಲು ಅಥವಾ ಹಂಚಿಕೆ ಮಾಡಲು ಸಾಧ್ಯವಿಲ್ಲ.

ಮತ್ತಷ್ಟು ಓದಿ: SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!

ಸಿಎಸ್​ಇ 2025 ಅಥವಾ ಅದಕ್ಕಿಂತ ಹಿಂದೆ ಯಾವುದೇ ಸೇವೆಗೆ ನಿಯೋಜಿಸಲಾದ ಅಭ್ಯರ್ಥಿಗಳು ರಾಜೀನಾಮೆ ನೀಡದೆ ಸಿಎಸ್​ಇ2027 ಅಥವಾ ಸಿಎಸ್​ಇ 2027ರಲ್ಲಿ ಹಾಜರಾಗಲು ಒಂದು ಬಾರಿ ಅವಕಾಶವಿರುತ್ತದೆ. 2028ರಲ್ಲಿ ಸಿಎಸ್​ಇ ಅಥವಾ ಇನ್ಯಾವುದೇ ಪರೀಕ್ಷೆಗೆ ಹಾಜರಾಗುವವರು ಸೇವೆಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಿರುತ್ತದೆ.

ಫೆಬ್ರವರಿ 24 ರೊಳಗೆ UPSC ನೇಮಕಾತಿ ನಮೂನೆಗಳನ್ನು ಭರ್ತಿ ಮಾಡಿ
UPSC CSE 2026 ಅಧಿಸೂಚನೆಯ ಪ್ರಕಾರ , ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 4 ರಂದು ಪ್ರಾರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 24, 2026 ರವರೆಗೆ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಈ ನೇಮಕಾತಿ ಡ್ರೈವ್ ವಿವಿಧ ನಾಗರಿಕ ಸೇವೆಗಳಲ್ಲಿ ಸುಮಾರು 933 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎಪ್ಸ್ಟೀನ್ ಫೈಲ್ಸ್ ಒಳಗೆ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು: ಏನಿದು ಕರ್ಮಕಾಂಡ? – Kannada News | Nandita Das Anurag Kashyap and other celebrities name in Epstein Files

ಲೈಂಗಿಕ ಅಪರಾಧಗಳಲ್ಲಿ ಸಿಕ್ಕಿ ಹಾಕಿಕೊಂಡ ಜೆಫ್ರಿ ಎಪ್ಸ್ಟೀನ್ (Jeffrey Epstein) ಮತ್ತು ಆತನ ಕರ್ಮಕಾಂಡದ ಬಗ್ಗೆ ಇಡೀ ಜಗತ್ತಿನಲ್ಲಿ ಚರ್ಚೆ ಆಗುತ್ತಿದೆ. ಜಗತ್ತಿನ ಶ್ರೀಮಂತ ವ್ಯಕ್ತಿಗಳಿಗಾಗಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೂಪಕ್ಕೆ ತಳ್ಳಿದ ಆರೋಪ ಆತನ ಮೇಲಿತ್ತು. ಜೆಫ್ರಿ ಎಪ್ಸ್ಟೀನ್ ನಡೆಸಿದ್ದ ಅಪರಾಧಿ ಚಟುವಟಿಕೆಗಳ ಬಗ್ಗೆ ಲಕ್ಷಾಂತರ ಪುಟಗಳ ದಾಖಲೆ (Epstein Files) ಕಲೆಹಾಕಲಾಗಿದೆ. ಈ ದಾಖಲೆಗಳಲ್ಲಿ ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರುಗಳು ಕೇಳಿಬರುತ್ತಿರುವುದು ಆಘಾತಕಾರಿ ಸಂಗತಿ. ಆ ಬಗ್ಗೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗುತ್ತಿದೆ.

ಹಲವು ವಿಡಿಯೋಗಳು, ಫೋಟೋಗಳು ಹಾಗೂ ಇ-ಮೇಲ್ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಬಿಲ್ ಗೇಟ್ಸ್, ಅನಿಲ್ ಅಂಬಾನಿ ಅವರಂತಹ ಪ್ರತಿಷ್ಠಿತ ವ್ಯಕ್ತಿಗಳ ಹೆಸರು ಕಾಣಿಸಿದೆ. ಜೆಫ್ರಿ ಎಪ್ಸ್ಟೀನ್ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಬಿಲ್ ಗೇಟ್ಸ್ ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರು ಕಾಣಿಸಿಕೊಂಡಿರುವುದು ಶಾಕಿಂಗ್ ಎನಿಸಿದೆ.

ನಂದಿತಾ ದಾಸ್, ಅನುರಾಗ್ ಕಶ್ಯಪ್, ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ಮುಂತಾದ ಸೆಲೆಬ್ರಿಟಿಗಳ ಹೆಸರುಗಳು ಎಪ್ಸ್ಟೀನ್ ಫೈಲ್ಸ್​ ಪುಟಗಳಲ್ಲಿ ಪ್ರಸ್ತಾಪ ಆಗಿವೆ ಎಂಬ ಮಾಹಿತಿ ಕೇಳಿಬಂದಿದೆ. ಅಷ್ಟಕ್ಕೂ, ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್​​ಗೂ ಈ ಸೆಲೆಬ್ರಿಟಿಗಳು ಯಾವ ರೀತಿಯ ನಂಟು ಇದೆ ಎಂಬ ಪ್ರಶ್ನೆ ಉದ್ಭವ ಆಗಿದೆ. ಅಭಿಮಾನಿಗಳಿಗೆ ಆಘಾತವಾಗಿದೆ.

ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ‘ನನ್ನನ್ನು ಅತಿಥಿಯಾಗಿ ಅನೇಕರು ಆಹ್ವಾನಿಸುತ್ತಾರೆ. ಆದರೆ ಬಹುತೇಕ ಆಹ್ವಾನಗಳಿಗೆ ನಾನು ಪ್ರತಿಕ್ರಿಯೆಯನ್ನೇ ನೀಡವುದಿಲ್ಲ’ ಎಂದು ಅನುರಾಗ್ ಕಶ್ಯಪ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಲ್ಲಿ ಮತ್ತೆ ಕಾಣಿಸಿಕೊಂಡ ಟ್ರಂಪ್ ಫೋಟೋ

ಎಪ್ಸ್ಟೀನ್ ಫೈಲ್ಸ್​ನಲ್ಲಿ ಹೆಸರು ಉಲ್ಲೇಖ ಆಗಿದೆ ಎಂದಮಾತ್ರಕ್ಕೆ ಅವರೆಲ್ಲರೂ ಅಪರಾಧಿಗಳು ಎಂದು ಅರ್ಥವಲ್ಲ. ಬೇರೆ ಬೇರೆ ಕಾರಣಗಳಿಂದ ಹೆಸರುಗಳು ಪ್ರಸ್ತಾಪ ಆಗಿರಬಹುದು. ಜೆಫ್ರಿ ಎಪ್ಸ್ಟೀನ್ ಪ್ರಭಾವಿ ವ್ಯಕ್ತಿ ಆಗಿದ್ದ. ಆತನ ಜೊತೆ ಜಗತ್ತಿನ ಪ್ರಖ್ಯಾತ ವ್ಯಕ್ತಿಗಳು ನಂಟು ಹೊಂದಿದ್ದರು. ಹಲವು ಕಾರ್ಯಕ್ರಮಗಳನ್ನು ಆತ ಆಯೋಜಿಸಿದ್ದ. ಅದಕ್ಕೆ ಸಂಬಂಧಿಸಿದಂತೆ ಹಲವರ ಹೆಸರು ಕೇಳಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು – Kannada News | 16 labourers from Assam killed many injured in illegal coal mine blast in Meghalaya

ಶಿಲ್ಲಾಂಗ್, ಫೆಬ್ರವರಿ 5: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ (Coal Mining) ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ಪೊಲೀಸರು ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ಸಹಾಯ ಪಡೆದುಕೊಂಡರು. ಇನ್ನೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆಗಳ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು; ಹಲವು ಕಾರ್ಮಿಕರು ಕಣ್ಮರೆ

ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆ ನಡೆಸಲಾಗುವುದು. ಪರಿಸರ ಹಾನಿ ಮತ್ತು ಗಂಭೀರ ಸುರಕ್ಷತಾ ಕಾಳಜಿಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 2014ರಲ್ಲಿ ಮೇಘಾಲಯದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಮತ್ತು ಇತರ ಅವೈಜ್ಞಾನಿಕ ಗಣಿಗಾರಿಕೆ ಪದ್ಧತಿಗಳ ಮೇಲೆ ನಿಷೇಧ ಹೇರಿತ್ತು. ಆದರೂ ಮೇಘಾಲಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಲೇ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ! – Kannada News | Bad Cholesterol: Winter Foods That Can Increase LDL

ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ. ಹಾಗಾದರೆ ಯಾವ ರೀತಿಯ ಆಹಾರಗಳ ಸೇವನೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸಬಹುದಾದ ಆಹಾರಗಳು:

ಹೆಚ್ಚು ತುಪ್ಪ ಸೇರಿಸಿದ ತರಕಾರಿಗಳು: ಯಾವುದೇ ತರಕಾರಿಗೆ ತುಪ್ಪ ಸೇರಿಸಿ ಅದನ್ನು ಬಿಸಿ ಮಾಡಿ ತಿನ್ನುವುದು ಬಹಳ ಹಾನಿಕಾರಕವಾಗಿದೆ. ಏಕೆಂದರೆ ಇದರಲ್ಲಿ ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬಿದ್ದು, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ, ತುಪ್ಪವನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು. ತುಪ್ಪವನ್ನು ಹೊರತುಪಡಿಸಿ, ಸಮೋಸಾಗಳು, ಕಚೋರಿ ಅಥವಾ ಪಕೋಡಾಗಳಂತಹ ಕರಿದ ಆಹಾರಗಳ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಬೇಕು. ಇದರಲ್ಲಿ ಹೆಚ್ಚಾಗಿ ಸಂಸ್ಕರಿಸಿದ ಎಣ್ಣೆಯನ್ನು ಬಳಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ.

ಇದನ್ನೂ ಓದಿ: ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯವನ್ನು ರಕ್ಷಿಸಿಕೊಳ್ಳಲು ಈ ರೀತಿ ಮಾಡಿ; ಹೃದಯಾಘಾತ, ಪಾರ್ಶ್ವವಾಯುವಿನಿಂದ ದೂರವಿರಿ

ಕೆಂಪು ಮಾಂಸ: ಚಳಿಗಾಲದ ಹೊರತಾಗಿಯೂ, ಹೆಚ್ಚಿನ ಪ್ರಮಾಣದಲ್ಲಿ ಕೆಂಪು ಮಾಂಸ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ. ಇದು ಹೆಚ್ಚಿನ ಪ್ರಮಾಣದ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಅನ್ನು ಹೊಂದಿರುತ್ತದೆ. ಆದ್ದರಿಂದ, ಇದನ್ನು ಮಿತವಾಗಿ ಸೇವಿಸಿ. ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ, ಅದನ್ನು ಸೇವಿಸದಿರುವುದೇ ಒಳ್ಳೆಯದು. ಜೊತೆಗೆ, ಚಳಿಗಾಲದಲ್ಲಿ, ಹೆಚ್ಚು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುವುದನ್ನು ತಪ್ಪಿಸಬೇಕು.

ಚಳಿಗಾಲದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು

  • ಪ್ರತಿದಿನ 30 ನಿಮಿಷಗಳ ನಡಿಗೆ ಮತ್ತು ಲಘು ವ್ಯಾಯಾಮ ಮಾಡಿ.
  • ಆಹಾರದಲ್ಲಿ ಹಸಿರು ತರಕಾರಿ ಮತ್ತು ಹಣ್ಣುಗಳ ಸೇವನೆ ಮಾಡಿ.
  • ಕನಿಷ್ಠ ತಿಂಗಳಿಗೊಮ್ಮೆ ಕೊಲೆಸ್ಟ್ರಾಲ್ ಮಟ್ಟವನ್ನು ಪರೀಕ್ಷಿಸಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು.

Source link

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದಕ್ಕೆ ಸಂಬಂಧ ಬೆಂಗಳೂರಿನ ಚನ್ನಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದತಿ ಕೋರಿ ಪುನೀತ್‌ ಕೆರೆಹಳ್ಳಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ಮಾಡಿದೆ.

ಇದನ್ನೂ ಓದಿ: ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್

ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ  ಪ್ರಕರಣಗಳ ಪೈಕಿ ಒಂದು ಪ್ರಕರಣಕ್ಕೆ ನಿನ್ನೆ ಹೈಕೋರ್ಟ್ ತಡೆ ನೀಡಿತ್ತು. ಆ ಬಳಿಕ ಪುನೀತ್ ಕೆರೆಹಳ್ಳಿ ಸೋಶಿಯಲ್ ಮೀಡಿಯಾದಲ್ಲಿ ಪೊಲೀಸರನ್ನು ನಿಂದಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್​ಗೆ ಹೆಚ್ಚುವರಿ ಎಸ್‌ಪಿಪಿ ಬಿ.ಎನ್.ಜಗದೀಶ್ ಹೇಳಿಕೆ ನೀಡಿದ್ದಾರೆ.

ಈ ವೇಳೆ ಬಾಕಿ ಕೇಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಪುನೀತ್ ಕೆರೆಹಳ್ಳಿಯನ್ನ ತರಾಟೆಗೆ ತೆಗೆದುಕೊಂಡಿದೆ. ರೀಲ್ಸ್, ಫೇಸ್ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು. ಸಬ್ ಜುಡೀಸ್​ ಪ್ರಕರಣದ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದು ಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ

ಸದ್ಯ ಬಾಕಿ ಕೇಸ್ ಬಗ್ಗೆ ಫೇಸ್ ಬುಕ್ ಪೋಸ್ಟ್ ಮಾಡದಂತೆ, ಡಿಸಿಪಿ ಮುಂದೆ ಹಾಜರಾಗಿ ಬಾಂಡ್ ನೀಡಲು ಹೈಕೋರ್ಟ್ ಸೂಚನೆ ನೀಡಿದೆ. ಅಕ್ರಮ ವಲಸಿಗರ ಬಗ್ಗೆ ಹೇಳುವುದು ತಪ್ಪೆನ್ನುತ್ತಿಲ್ಲ, ಆದರೆ ಹೇಳುವ ವಿಧಾನ ಸರಿಯಿಲ್ಲವೆಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Source link

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ – Kannada News | Shivamogga Murder Case: Husband Mahesh reveals Wife Suchitra And Kamalakar Bhat Relationship

ಶಿವಮೊಗ್ಗ, (ಫೆಬ್ರವರಿ 05): ಕೊಲೆ ಕೇಸ್‌ನಲ್ಲಿ  (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್‌ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟಿವಿಯಲ್ಲಿ ಬರುತ್ತಿದ್ದ ಕಮಲಾಕರ, ರಾತ್ರಿ ಆಗುತ್ತಿದ್ದಂತೆಯೇ  ಸುಚಿತ್ರಾಳ ಜತೆ ಮಂಚ ಏರ್ತಿದ್ದ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾಗ ಆಡಿಯೋ ವೈರಲ್ ಆಗಿದೆ. ಇನ್ನು ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೇ ವೇಳೆ ಹೆಂಡ್ತಿ ಸುಚಿತ್ರಾಳ ಮತ್ತಷ್ಟು ನವರಂಗಿ ಆಟವನ್ನು ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು

Source link

Exit mobile version