Headlines

ಬಸ್ ಟಿಕೆಟ್ ದರ ಏರಿಕೆ ಆಗಿದ್ಯಾ? ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ – Kannada News | KSRTC Clarifies No Bengaluru to Mysuru Bus Fare Hike

ಬೆಂಗಳೂರು, ಫೆಬ್ರವರಿ 05: ಪ್ರಯಾಣಿಕರ ವಿರೋಧದ ನಡುವೆಯೂ ನಮ್ಮ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಅಸ್ತು ಎಂದಿದೆ. ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಸದ್ಯ ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಿರುವಾಗ ಸರ್ಕಾರಿ ಬಸ್​​ಗಳ ಟಿಕೆಟ್ ದರ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಸದ್ಯ ಈ ವಿಚಾರವಾಗಿ ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ಕೆಎಸ್ಆರ್​​ಟಿಸಿ ನಿಗಮ (KSRTC) ಸ್ಪಷ್ಟನೆ ನೀಡಿದೆ. ಪ್ರಕಟಣೆಯಲ್ಲಿ ಏನಿದೆ? ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣ…

Read More

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು – Kannada News | Mumbai shcoking news; DNA test confirms father Raped and impregnated disabled daughter

ಮುಂಬೈ, ಫೆಬ್ರವರಿ 5: 9 ತಿಂಗಳ ತುಂಬು ಗರ್ಭಿಣಿಯಾದ (Pregnant) 20 ವರ್ಷದ ಯುವತಿ ಗರ್ಭಿಣಿಯಾಗಿದ್ದಳು. ಆದರೆ, ಆಕೆಗೆ ತನ್ನ ಮಗುವಿಗೆ ತಂದೆ ಯಾರೆಂದೇ ಗೊತ್ತಿರಲಿಲ್ಲ. ಏಕೆಂದರೆ, ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು. ಹೀಗಾಗಿ, ತನ್ನ ಜೊತೆ ಯಾರು ಕೆಟ್ಟದಾಗಿ ವರ್ತಿಸಿದರು, ತನ್ನ ದೇಹದಲ್ಲಿ ಯಾವೆಲ್ಲ ಬದಲಾವಣೆಯಾಗುತ್ತಿದೆ, ತಾನು ತಾಯಿಯಾಗುತ್ತಿದ್ದೇನೆ ಎಂಬಿತ್ಯಾದಿ ಯಾವ ವಿಷಯವೂ ಆಕೆಗೆ ಗೊತ್ತಾಗುತ್ತಿರಲಿಲ್ಲ. ಹೀಗಾಗಿ, ಕಳೆದ 4 ತಿಂಗಳಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದವನನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಲೇ ಇದ್ದರು. ಇದಕ್ಕೆ ಕೊನೆಯ ಆಯ್ಕೆಯೆಂಬಂತೆ…

Read More

ಐಪಿಎಲ್​ನಿಂದ ಹೊರಬಿದ್ದ ಮುಸ್ತಾಫಿಜುರ್​ಗೆ ಪಿಎಸ್​ಎಲ್​ಲ್ಲಿ ಬಂಪರ್ ಬೆಲೆ – Kannada News | Mustafizur Rahman: IPL Exit Controversy to PSL Mega Deal and Cricket Politics

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿ, ಬಿಸಿಸಿಐ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಆ ಬಳಿಕ ಕ್ರಿಕೆಟ್ ಲೋಕದಲ್ಲಿ ದೊಡ್ಡ ವಿವಾದವೊಂದು ಹುಟ್ಟಿಕೊಂಡಿತು. ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ತನ್ನ ತಂಡದ ಹೆಸರನ್ನು ಹಿಂತೆಗೆದುಕೊಂಡಿತು. ಇತ್ತ ಪಾಕಿಸ್ತಾನ, ಟೀಂ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿತ್ತು. Source link

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

ಬೆಂಗಳೂರು ಚಿತ್ರೋತ್ಸವ: ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ – Kannada News | Lifetime Achievement Award for Hamsalekha at Bengaluru International Film Festival

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ (Lifetime Achievement Award) ನೀಡಿ ಗೌರವಿಸಲಾಗುತ್ತದೆ. ಕಳೆದ ಗುರುವಾರ (ಜನವರಿ 29) ಪ್ರಾರಂಭವಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು (Bengaluru Film Festival) ಶುಕ್ರವಾರ (ಫೆಬ್ರವರಿ 6) ಸಮಾರೋಪ ಕಾಣಲಿದ್ದು, ಈ ಸಮಾರಂಭದಲ್ಲಿ ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು…

Read More

ಬೆನ್ ಸ್ಟೋಕ್ಸ್​ಗೆ ಕಣ್ಣು, ಮುಖಕ್ಕೆ ಗಂಭೀರ ಗಾಯ – Kannada News | Ben Stokes’ Facial Injury: England Captain Narrowly Escapes Permanent Eye Damage

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಗಾಯದ ತೀವ್ರತೆ ಹೇಗಿದೆ ಎಂದರೇ ಸ್ಟೋಕ್ಸ್ ಅವರ ಮುಖವೇ ವಿರೂಪಗೊಂಡಿದೆ. ಬೆನ್ ಸ್ಟೋಕ್ಸ್ ಅವರ ಬಲ ಕಣ್ಣು ಹಾಗೂ ಕಣ್ಣಿನ ಕೆಳ ಭಾಗಕ್ಕೆ ಗಾಯವಾಗಿದೆ. ಸ್ವತಃ ಈ ವಿಚಾರವನ್ನು ಬೆನ್​ ಸ್ಟೋಕ್ಸ್ ಅವರೇ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಸ್ಟೋಕ್ಸ್ ಅವರ ಮುಖಕ್ಕೆ ಚೆಂಡು ಬಲವಾಗಿ ಬಡಿದಿದೆ ಎಂಬುದು ಸ್ಟೋಕ್ಸ್ ಅವರು ನೀಡಿರುವ ಮಾಹಿತಿಯಿಂದಲೇ ಖಚಿತವಾಗಿದೆ. ಬೆನ್…

Read More

ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | 10 Best movies to watch on last day in 17th Bengaluru International Film Festival

ಜನವರಿ 29ರಿಂದ ಫೆಬ್ರವರಿ 6ರ ತನಕ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ನಡೆದಿದೆ. ಫೆಬ್ರವರಿ 6ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟಿ, ನಿರ್ಮಾಪಕಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಪಾರ್ವತಮ್ಮ ಪರವಾಗಿ ಅವರ ಪುತ್ರಿ ಪೂರ್ಣಿಮಾ ರಾಮ್​ಕುಮಾರ್, ಎಸ್. ರಾಮಚಂದ್ರ ಪರವಾಗಿ ಅವರ ಪುತ್ರಿ ಉಷಾ…

Read More

ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ – Kannada News | Dokulagi Village Mystery: Strange Ground Sounds Terrify Bidar Residents, Officials Investigate

ಗ್ರಾಮಕ್ಕೆ ಅಧಿಕಾರಿಗಳ ಭೇಟಿImage Credit source: tv9 kannada ಬೀದರ್, ಫೆಬ್ರವರಿ 05: ಜಿಲ್ಲೆಯ ಹುಮ್ನಾಬಾದ್ (Humnabad) ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ಬರುತ್ತಿದ್ದ ಭಯಂಕರ ಶಬ್ದದಿಂದಾಗಿ (sound) ಜನರು ಆತಂಕಗೊಂಡಿದ್ದಾರೆ. ಬುಧವಾರ ರಾತ್ರಿ ನಾಲ್ಕೈದು ಭಾರೀ ಭೂಮಿ ಒಳಗಡೆಯಿಂದ ಬರುತ್ತಿದ್ದ ಶಬ್ಧದಿಂದಾಗಿ ಜನ ಮನೆಯೊಳಗಿರಲು ಹೆದರುತ್ತಿದ್ದಾರೆ. ರಾತ್ರಿ ಭಯಂಕರ ಶಬ್ದ ಬಂದು ಭೂಮಿ ನಡುಗಿದಂತಾಗಿದ್ದು, ಜನರು ಮನೆಯಿಂದ ಹೊರ ಓಡಿಬಂದಿದ್ದಾರೆ. ಸದ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ….

Read More

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು…

Read More

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | TMC Going To Supreme Court for Protect Illegal Immigrants PM Modi Attacks Mamata Banerjee in Rajya Sabha

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ”…

Read More