ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು – Kannada News
ಕಾರವಾರ, ಜೂನ್ 9: ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಐತಿಹಾಸಿಕ ಮಹಾಬಲೇಶ್ವರ ದೇಗುಲದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ದೇಗುಲದ ಗರ್ಭಗುಡಿಯಲ್ಲಿರುವ ಮಹಾಬಲೇಶ್ವರನ ಆತ್ಮಲಿಂಗ ಕೂಡ ಸಂಪೂರ್ಣವಾಗಿ ಕೊಳಚೆ ನೀರಿನಲ್ಲಿ ಮುಳುಗಿದೆ. ಇದು ಭಕ್ತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ದೇಗುಲದ ಅಕ್ಕಪಕ್ಕದ ಶೌಚಾಲಯಗಳು ಮತ್ತು ಇತರೆ ಭಾಗಗಳಿಂದ ಕೊಳಚೆ ನೀರು ಗರ್ಭಗುಡಿಗೆ ನುಗ್ಗಿದೆ. ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗುತ್ತಿರುವುದು ಇದೇನು ಮೊದಲ ಸಲವಲ್ಲ. ಈ ಹಿಂದೆ ಕೂಡ…