Headlines

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…

Read More

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ…

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ – Kannada News | Delhi High Court judge Swarna Kanta Sharma recuses from excise policy case hear Contempt action aganist Arvind Kejriwal

ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ. ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ…

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…

Read More

ಕೆಟ್ಟ ವಿಮರ್ಶೆ ಪಡೆದರೂ ‘ರಾಜಾ ಸಾಬ್’ ಚಿತ್ರದಿಂದ ಭರ್ಜರಿ ಕಲೆಕ್ಷನ್ – Kannada News | The Raja Saab First day Collection Movie Bangs on Box office amid bad review

ಪ್ರಭಾಸ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ. ಇದಾದ ಬಳಿಕ ಹೀರೋ ಆಗಿ ಅವರು ಯಾವ ಸಿನಿಮಾದಲ್ಲೂ ನಟಿಸಿಲ್ಲ. ಅವರು ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರಗಳನ್ನು ಮಾಡಿದರು. ಈಗ ಪ್ರಭಾಸ್ ಅವರು ‘ರಾಜಾ ಸಾಬ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ಹೇಗಿದೆ ಎಂಬುದರ ಲೆಕ್ಕ ಸಿಕ್ಕಿದೆ. ಈ ಚಿತ್ರ ಉತ್ತಮ ವಿಮರ್ಶೆ ಪಡೆದ ಹೊರತಾಗಿಯೂ ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ ಎಂಬುದು ವಿಶೇಷ. ಪ್ರಭಾಸ್…

Read More

ಮತ್ತೊಂದು ‘ಪುಷ್ಪ’ ಚಿತ್ರ? ಆನೆ ದಂತದ ಕಳ್ಳಸಾಗಣೆಯ ಕಥೆ ‘ಕಾಟಾಳನ್’ – Kannada News | Kattalan Movie Teaser: Ivory Smuggling and Action Saga Multi Language Release details

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ರಕ್ತ ಚಂದನದ ಕಳ್ಳ ಸಾಗಣೆಯ ಕಥೆಯನ್ನು ಹೇಳಲಾಗಿತ್ತು. ಈಗ ‘ಕಾಟಾಳನ್’ ಹೆಸರಿನ ಮಲಯಾಳಂ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಆನೆ ದಂತದ ಕಳ್ಳ ಸಾಗಣೆಯ ಕರಾಳ ಜಗತ್ತನ್ನು ತೆರೆದಿಡಲು ನಿರ್ದೇಶಕರು ಪ್ರಯತ್ನಿಸಿದಂತಿದೆ. ಇದರ ಜೊತೆಗೆ ಭರ್ಜರಿ ಆ್ಯಕ್ಷನ್ ಕೂಡ ಸಿನಿಮಾದಲ್ಲಿ ಇರಲಿದೆ. ‘ಕಾಟಾಳನ್’ ಸಿನಿಮಾದ ಟೀಸರ್ ರಿಲೀಸ್ ಬಿಡುಗಡೆ ಕಂಡಿದೆ. ಇದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಈ…

Read More

Video: ಬಾಯಾರಿದ ಮಂಗಕ್ಕೆ ನೀರು ಕುಡಿಸಿ ಮಾನವೀಯತೆ ಮೆರೆದ ಯುವಕ

ಈ ಸ್ವಾರ್ಥ (selfish) ತುಂಬಿದ ಪ್ರಪಂಚದಲ್ಲಿ ಮಾನವೀಯತೆ, ಬೆಲೆಯಿಲ್ಲ ಎಂಬ ಮಾತಿದೆ. ಸ್ವಾರ್ಥ ಜನರ ನಡುವೆ ಹೃದಯವಂತ ಹಾಗೂ ಸಹಾಯ ಮಾಡುವ ಗುಣವಿರುವ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಹೆಮ್ಮೆಯಾಗುತ್ತದೆ. ನಾವು ಮಾಡುವ ಸಣ್ಣ ಪುಟ್ಟ ಸಹಾಯವು ಕೂಡ ಇನ್ನೊಬ್ಬರ ಜೀವ ಉಳಿಸುತ್ತದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನು (young man) ಮಂಗನಿಗೆ ನೀರು ಕುಡಿಸಿ ಅದರ ಬಾಯಾರಿಕೆ ನೀಗಿಸಿ ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಕನ ಮಾನವೀಯ ಕೆಲಸವನ್ನು ಹಾಡಿಹೊಗಳಿದ್ದಾರೆ….

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Viral News: ಹೆಂಡತಿಗೆ ಕೈಕೊಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ! – Kannada News

ಕಾನ್ಪುರ, ಜೂನ್ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅತ್ಯಂತ ಅಚ್ಚರಿಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ. ಸದ್ಯ ಈ ವಿಲಕ್ಷಣ ಮದುವೆಯ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಇವರಿಬ್ಬರು ನ್ಯಾಯಾಲಯದಲ್ಲಿ ನೋಂದಾಯಿತ ವಿವಾಹ (ಕೋರ್ಟ್ ಮ್ಯಾರೇಜ್) ಮಾಡಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ಕೌಟುಂಬಿಕ ಸಂಬಂಧಗಳ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು…

Read More