Headlines

‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ – Kannada News | Rahul Gandhi executive producer Dhurandhar movie fact check

ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್’ ಸಿನಿಮಾ ಇತ್ತೀಚೆಗೆ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಹ ಲಕ್ಷಾಂತರ ಜನ ಸಿನಿಮಾ ನೋಡಿದ್ದಾರೆ. ಅಲ್ಲದೆ, ಸಿನಿಮಾದ ಬಗ್ಗೆ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದೀಗ ನೆಟ್ಟಿಗರು ‘ಧುರಂಧರ್’ ಸಿನಿಮಾದ ಕ್ರೆಡಿಟ್ ಲಿಸ್ಟ್ ಅಥವಾ ನೇಮ್ ಕಾರ್ಡ್​​ನಲ್ಲಿ ವಿಶೇಷ ಅಂಶವೊಂದನ್ನು ಪತ್ತೆ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಕ್ರೆಡಿಟ್ಸ್‌ನಲ್ಲಿ ‘ಕಾರ್ಯಕಾರಿ ನಿರ್ಮಾಪಕ’ ಎಂಬ ಸ್ಥಾನದಲ್ಲಿ ರಾಹುಲ್ ಗಾಂಧಿ…

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More

ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ – Kannada News | Depending on commercial viability, India might crude oil from Venezuela and other regions, says MEA spokesperson

ನವದೆಹಲಿ, ಫೆಬ್ರುವರಿ 5: ರಷ್ಯಾ, ಇರಾನ್ ಬದಲು ವೆನೆಜುವೆಲಾ ಹಾಗೂ ಅಮೆರಿಕದಿಂದ ತೈಲ ಖರೀದಿ (Crude Oil) ಖರೀದಿಸಲು ಭಾರತಕ್ಕೆ ತಿಳಿಸಿರುವುದಾಗಿ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ವಿಚಾರವಾಗಿ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ವಾಣಿಜ್ಯಾತ್ಮಕವಾಗಿ ಲಾಭಕಾರಿಯಾಗುವುದಾದರೆ ವೆನೆಜುವೆಲಾ ಹಾಗೂ ಇತರ ಪ್ರದೇಶಗಳಿಂದ ಕಚ್ಚಾ ತೈಲ ಪಡೆಯುವ ಎಲ್ಲಾ ಆಯ್ಕೆಗಳನ್ನೂ ಭಾರತ ಪರಿಗಣಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಸ್ಪಷ್ಟನೆ ನೀಡಿದ್ದಾರೆ. ‘ಇಂಧನ ಎಲ್ಲಿಂದ…

Read More

RCB vs DC Live Score, WPL 2026 Final: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಫೈಟ್ – Kannada News | WPL 2026 Final RCB vs DC Live Score Royal Challengers Bengaluru Women vs Delhi Capitals Women Vadodara Full Scorecard in Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದರೆ, ದೆಹಲಿ ತಂಡವು ಎಲಿಮಿನೇಟರ್ ಪಂದ್ಯವನ್ನು ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ. ಇದು ಡೆಲ್ಲಿ ತಂಡಕ್ಕೆ ಸತತ ನಾಲ್ಕನೇ ಫೈನಲ್ ಆಗಿದ್ದು, ತನ್ನ ಮೊದಲ ಪ್ರಶಸ್ತಿಗಾಗಿ ಕಾಯುತ್ತಿದ್ದರೆ, ಇತ್ತ ಆರ್​ಸಿಬಿ 2024 ರಲ್ಲಿ ಮೊದಲ ಬಾರಿಗೆ ಫೈನಲ್‌ನಲ್ಲಿ ದೆಹಲಿಯನ್ನು…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ಆಡಲು ಸಿದ್ಧರಿದ್ದೇವೆ; ಪಾಕ್ ತಂಡದ ಪಂದ್ಯ ಬಹಿಷ್ಕಾರದ ಬಗ್ಗೆ ಸೂರ್ಯ ಅಚ್ಚರಿಯ ಹೇಳಿಕೆ – Kannada News | Pakistan Boycotts India Match at T20 WC: Surya Yadav Reacts, Political Fallout Explained

2026 ರ ಟಿ20 ವಿಶ್ವಕಪ್ (T20 World Cup) ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡ, ಟೀಂ ಇಂಡಿಯಾ (India vs Pakistan) ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ರದ್ದಾದರೆ ಐಸಿಸಿ ಜೊತೆಗೆ ಬಿಸಿಸಿಐ ಹಾಗೂ ಪಿಸಿಬಿಗೂ ನಷ್ಟವುಂಟಾಗಲಿದೆ. ಹೀಗಾಗಿ ಐಸಿಸಿ, ಪಾಕ್ ತಂಡ ತನ್ನ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸೂಚಿಸಿದೆ. ಆದಾಗ್ಯೂ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನದ ಪ್ರಧಾನಿ ನಾವು ನಿಮ್ಮ ನಿರ್ಧಾರಕ್ಕೆ…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಲಂಚ ನೀಡಲು ಹಣವಿಲ್ಲದ್ದಕ್ಕೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ – Kannada News | Tumakuru farmer brings radish to govt office, in lieu of bribe insted of Money

ತುಮಕೂರು, (ಫೆಬ್ರವರಿ 05): ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರಸ್ತೆ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ಕಾರಣ ರೈತ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಹೌದು.. ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರಿಗೆ ಜಮೀನಿಗೆ ರಸ್ತೆ ಮಾಡಿಕೊಡುವಂತೆ…

Read More

ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಜಾಗತಿಕ ಶಕ್ತಿಯಾಗುತ್ತಿರುವ ಭಾರತ: ನರೇಂದ್ರ ಮೋದಿ ಹೇಳಿಕೆ – Kannada News | India has unique combination of high growth and low inflation, PM Modi says in Rajya Sabha

ನವದೆಹಲಿ, ಫೆಬ್ರುವರಿ 5: ಬಹಳ ವೇಗವಾಗಿ ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಗುರುವಾರ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡುತ್ತಾ, ಭಾರತದ ಹೆಚ್ಚುತ್ತಿರುವ ಶಕ್ತಿಯ ಬಗ್ಗೆ ಗಮನ ಸೆಳೆದಿದ್ದಾರೆ. ‘ಎರಡನೇ ವಿಶ್ವ ಮಹಾಯುದ್ಧದ ನಂತರ ಹೊಸ ವಿಶ್ವ ಶ್ರೇಣಿ ನಿರ್ಮಾಣವಾಯಿತು. ಈಗ ಜಗತ್ತು ಮತ್ತೆ ಹೊಸ ಶ್ರೇಣಿಯತ್ತ ಸಾಗುತ್ತಿದೆ. ವಿಶ್ವ ಬಂಧು ಎನಿಸಿರುವ ಭಾರತದತ್ತ…

Read More