Headlines

IPL 2026: ಸೋತ RCBಗೆ ನಾಳೆ ಮತ್ತೆ ಪಂದ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್​ಗಳಿಂದ ಬಗ್ಗು ಬಡಿದಿದ್ದರು. ಆದರೆ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ…

Read More

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

ಹಿಂದೂ ಸನಾತನ ಸಂಸ್ಕೃತಿಯಲ್ಲಿನ ಸಂಪ್ರದಾಯ, ಪದ್ಧತಿ ಮತ್ತು ವಿಧಿವಿಧಾನಗಳನ್ನು ಅನುಸರಿಸುವುದರಿಂದ ತಾಳ್ಮೆ, ಸಹನೆ ಮತ್ತು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದು ನಮ್ಮ ಮನಸ್ಸನ್ನು ಪ್ರಶಾಂತವಾಗಿಡಲು ಸಹಾಯ ಮಾಡುತ್ತದೆ. ಆಹಾರ, ಮಾತು, ಕಾರ್ಯಕ್ರಮಗಳು ಮತ್ತು ಮನಸ್ಸಿನ ಭಾವನೆಗಳು ನಮ್ಮ ಆಯಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಉತ್ತಮ ಪದ್ಧತಿಗಳು ಆಯಸ್ಸನ್ನು ಹೆಚ್ಚಿಸಿದರೆ, ನಕಾರಾತ್ಮಕ ಪದ್ಧತಿಗಳು ಅದನ್ನು ಕಡಿಮೆ ಮಾಡಬಹುದು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮಿಗಳು 110 ವರ್ಷಗಳ ಕಾಲ ಜೀವಿಸಿದ್ದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಮೃದು…

Read More

National Safe Motherhood Day 2026: ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುವುದೇಕೆ ಗೊತ್ತಾ?

ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ.  ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು…

Read More

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಧಾರವಾಡ, ಏಪ್ರಿಲ್ 11: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ….

Read More

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ…

Read More

ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!

IPL 2026: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ವೈಭವ್ ಸೂರ್ಯವಂಶಿಯ (Vaibhav Suryavanshi) ಆರ್ಭಟದಿಂದಾಗಿ. ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 201 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್​ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ….

Read More

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು…

Read More

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ. ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ…

Read More

Rajat Patidar: ತಪ್ಪುಗಳಾಗುತ್ತೆ, ಆದರೆ ಈ ತಪ್ಪುಗಳನ್ನು…!

IPL 2026: ಐಪಿಎಲ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಭರ್ಜರಿ ಗೆಲುವು ದಾಖಲಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 201 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ ಪಂದ್ಯ ಮುಗಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ರಾಯಲ್…

Read More

25 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಕೋಟಿಗೊಬ್ಬ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾನ ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More