Headlines

ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್ – Kannada News

ನಮ್ಮ ಮೆಟ್ರೋ ಪಿಂಕ್ ಲೈನ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ನಮ್ಮ ಮೆಟ್ರೋ ಪಿಂಕ್ ಲೈನ್ (Pink Line) ಮಾರ್ಗದ ಉದ್ಘಾಟನೆಗೆ ಕೊನೆಗೂ ಮುಹೂರ್ತ ಬಹುತೇಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪಿಂಕ್ ಲೈನ್‌ನ ಮೊದಲ ಹಂತದ ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮಹತ್ವದ ಯೋಜನೆಯ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ…

Read More

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ? – Kannada News

ಬೆಂಗಳೂರು, (ಜೂನ್ 08): ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ (DK Shivakumar) ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು…ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು (Karnataka former chief minister) ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ…

Read More

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ – Kannada News

ನವದೆಹಲಿ, ಜೂನ್ 8: ಇಂದು ಭಾರತದ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವೇಳೆ ಮರಣೋತ್ತರ ಪ್ರಶಸ್ತಿಯನ್ನು ಸ್ವೀಕರಿಸುವಾಗ ಆ ಸೈನಿಕರ ಕುಟುಂಬಸ್ಥರು ಕಣ್ಣೀರಿಟ್ಟ ದೃಶ್ಯಗಳು ನೋಡುಗರನ್ನು ಕೂಡ ಭಾವುಕರನ್ನಾಗಿಸಿದವು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರ ತಾಯಿಯು ತಮ್ಮ ಮಗನ ಪರವಾಗಿ ‘ಕೀರ್ತಿ ಚಕ್ರ’ ಪ್ರಶಸ್ತಿಯನ್ನು ಸ್ವೀಕರಿಸಿದ ಕ್ಷಣ ಇಡೀ ದೇಶವನ್ನೇ ಭಾವುಕಗೊಳಿಸಿದೆ. ಜುಲೈ…

Read More

ಮುಖ ವಿಪರೀತ ಊದಿಕೊಂಡಿದ್ದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ನಟಿ ಉರ್ಫಿ ಜಾವೇದ್ – Kannada News

ಮಾಡೆಲಿಂಗ್ ಹಾಗೂ ವಿಭಿನ್ನ ಫ್ಯಾಷನ್ ಉಡುಪುಗಳ ಮೂಲಕವೇ ಸದಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ಬಾಲಿವುಡ್ ನಟಿ ಉರ್ಫಿ ಜಾವೇದ್ (Uorfi Javed) ಕಳೆದ ವರ್ಷ ತಮ್ಮ ಮುಖದ ಕಾರಣಕ್ಕೆ ಭಾರಿ ಸುದ್ದಿಯಾಗಿದ್ದರು. ಅವರ ಕಣ್ಣು, ಕೆನ್ನೆ ಹಾಗೂ ತುಟಿಗಳು ವಿಪರೀತವಾಗಿ ಉಬ್ಬಿಕೊಂಡಿದ್ದ ಫೋಟೋಗಳು ವೈರಲ್ ಆದಾಗ, ನೆಟ್ಟಿಗರು ‘ಕಾಸ್ಮೆಟಿಕ್ ಫಿಲ್ಲರ್ಸ್ (Plastic Surgery/Fillers) ಮಾಡಿಸಿಕೊಳ್ಳಲು ಹೋಗಿ ಮುಖ ಹಾಳು ಮಾಡಿಕೊಂಡಿದ್ದಾರೆ’ ಎಂದು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದರು. ಆದರೆ, ತಮ್ಮ ಮುಖ ಆ ರೀತಿ ಉಬ್ಬಿಕೊಳ್ಳಲು ಯಾವುದೇ…

Read More

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ – Kannada News

ಮನಿಲಾ, (ಜೂನ್ 08): ದಕ್ಷಿಣ ಫಿಲಿಪೈನ್ಸ್‌ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್​ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್​, ಇಂಡೋನೇಷ್ಯಾ, ತೈವಾನ್ ಮತ್ತು…

Read More

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ – Kannada News

ನವದೆಹಲಿ, ಜೂನ್ 8: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಆಪರೇಷನ್ ಸಿಂಧೂರ್’ (Operation Sindoor) ಕಾರ್ಯಾಚರಣೆಯಲ್ಲಿ ತೋರಿದ ಅಪ್ರತಿಮ ಸಾಹಸ ಮತ್ತು ಧೀರತನಕ್ಕಾಗಿ ಭಾರತೀಯ ವಾಯುಪಡೆಯ (IAF) ವೀರ ಅಧಿಕಾರಿಗಳಿಗೆ ವೀರ ಚಕ್ರ (Vir Chakra) ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಕ್ಷಣಾ ಪಡೆಯ ಯೋಧರಿಗೆ ಕೀರ್ತಿ ಚಕ್ರ, ಶೌರ್ಯ ಚಕ್ರ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗಿದೆ. ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು 7…

Read More

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ – Kannada News

ಬೆಂಗಳೂರು, ಜೂ.8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಈ ಸೌಜನ್ಯದ ಭೇಟಿಯು ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ಭೇಟಿಯ ಸಂದರ್ಭದಲ್ಲಿ, ಡಿಕೆ ಶಿವಕುಮಾರ್ ಮತ್ತು ಜಗದೀಶ್ ಶೆಟ್ಟರ್ ನಡುವೆ ಮಾತುಕತೆ ನಡೆದಿತ್ತು. ಈ ಸಂದರ್ಭದಲ್ಲಿ ಅಲ್ಲಿದ್ದ ಹಲವರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಿಂದೆ ಪ್ರಮುಖ ನಾಯಕರಾಗಿ ಹಲವು ಬಾರಿ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳಲಾಯಿತು. ಮುಂದಿನ ರಾಜ್ಯಸಭೆ ಚುನಾವಣೆಗಳು,…

Read More

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? – Kannada News

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್ – Kannada News

ಬೆಂಗಳೂರು, ಜೂ.8: ಸಿಲಿಕಾನ್ ಸಿಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಪಾರ್ಟ್‌ಮೆಂಟ್ ಪರಿಶೀಲನೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕರನ್ನು (Deputy Chief Electrical Inspector) ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾ ಬಲೆಗೆ ಬಿದ್ದ ಈ ಭ್ರಷ್ಟ ಅಧಿಕಾರಿಯನ್ನು ಸಿದ್ದಪ್ಪ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿದ್ದ ಅಪಾರ್ಟ್‌ಮೆಂಟ್ ಕಟ್ಟಡದ ಆವರ್ತಕ ಪರಿಶೀಲನೆ ನಡೆಸಲು ಮತ್ತು ಅದಕ್ಕೆ ಸಂಬಂಧಿಸಿದ…

Read More

ಸಿಎಂ ಡಿಕೆ ಶಿವಕುಮಾರ್ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿವರು? – Kannada News

ಬೆಂಗಳೂರು, (ಜೂನ್ 08): 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚುನಾವಣಾ ತಂತ್ರಗಾರ ಸುನೀಲ್‌ ಕನುಗೋಳು (Poll strategist Sunil Kanugolu) ಅವರನ್ನು ಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಬಳ್ಳಾರಿ ಮೂಲದ ಈ ಸುನೀಲ್ ಕನುಗೋಳು ಹಿಂದೆ ಸಿದ್ದರಾಮಯ್ಯನವರ ಸಲಹೆಗಾರರಾಗಿದ್ದರು. ಇದೀಗ ಅವರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಡಿಕೆ ಶಿವಕುಮಾರ್ ಅವರ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ…

Read More