Headlines

Womenʼs Day Wishes: ನಿಮ್ಮ ಜೀವನವನ್ನು ಬೆಳಗಿದ ಸ್ತ್ರೀಶಕ್ತಿಗೆ ಈ ರೀತಿ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿ

ಮಹಿಳೆ (Women) ಎಂದರೆ ಶಕ್ತಿ, ಮಹಿಳೆ ಎಂದರೆ ಧೈರ್ಯ, ಮಹಿಳೆ ಎಂದರೆ ಪ್ರೀತಿ, ಮಹಿಳೆ ಎಂದರೆ ಕಾಳಜಿ. ತಾಯಿಯಾಗಿ, ಸಹೋದರಿಯಾಗಿ, ಗೆಳತಿಯಾಗಿ, ಮಡದಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಆಕೆ ಜೀವವನ್ನು ನೀಡುವುದರ ಜೊತೆಗೆ ಜೀವನಕ್ಕೆ ಶಕ್ತಿ ತುಂಬುವವಳು. ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುವವಳು. ಈ ಸ್ತ್ರೀ ಶಕ್ತಿಗೆ ಧನ್ಯವಾದ ತಿಳಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಶುಭ ದಿನ ನಿಮ್ಮ ಜೀವನಕ್ಕೂ…

Read More

ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ – Kannada News | All crew members safe India Denies attack on another Indian crewed vessel targeted near Oman

ನವದೆಹಲಿ, ಜೂನ್ 13: ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರಿದ್ದ ಮತ್ತೊಂದು ವಾಣಿಜ್ಯ ಹಡಗಿನ ಮೇಲೆ ದಾಳಿಯಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದ್ದು, ಇವೆಲ್ಲವೂ ಸುಳ್ಳು ಸುದ್ದಿಗಳು ಎಂದು ಸ್ಪಷ್ಟಪಡಿಸಿದೆ. ಇತ್ತೀಚೆಗೆ ಒಮಾನ್ (Oman) ಸಮುದ್ರ ವಲಯದಲ್ಲಿ ಭಾರತೀಯ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದ ಬೆನ್ನಲ್ಲೇ, ಮತ್ತೊಂದು ಹಡಗು ಅಪಾಯಕ್ಕೆ ಸಿಲುಕಿದೆ ಎಂಬ ವದಂತಿಗಳು ಹರಡಿದ್ದವು. ಆದರೆ ವಿದೇಶಾಂಗ ಸಚಿವಾಲಯವು ಆ ಹಡಗಿನ ಕ್ಯಾಪ್ಟನ್ ಜೊತೆ ನೇರ ಸಂಪರ್ಕ ಸಾಧಿಸಿ, ನಾವಿಕರೆಲ್ಲರೂ ಕ್ಷೇಮವಾಗಿದ್ದಾರೆ…

Read More

‘ಉಸ್ತಾದ್ ಭಗತ್ ಸಿಂಗ್’ ಪ್ರೀ ರಿಲೀಸ್ ಇವೆಂಟ್​​ಗೆ ದಿನಾಂಕ ನಿಗದಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಪವನ್ ಕಲ್ಯಾಣ್, ಆಂಧ್ರ ಪ್ರದೇಶದ ಡಿಸಿಎಂ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೂರನೇ ಸಿನಿಮಾ ಇದಾಗಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಎದುರು ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗುತ್ತಿದ್ದು, ‘ಧುರಂಧರ್ 2’ಗೆ ಪೈಪೋಟಿ ನೀಡಲು ಭಾರಿ ಪ್ರಚಾರವನ್ನೇ ಚಿತ್ರತಂಡ ಮಾಡಬೇಕಿದೆ. ಆದರೆ ಈ ವರೆಗೂ ಸಿನಿಮಾದ ಮುಖ್ಯ ಆಕರ್ಷಣೆಯಾಗಿರುವ ಪವನ್ ಕಲ್ಯಾಣ್ ಪ್ರಚಾರಕ್ಕೆ…

Read More

ಸಿದ್ದರಾಮೇಶ್ವರ ಮಹಾಸಂಸ್ಥಾನದ ಸ್ವಾಮೀಜಿಗಳ ಮೇಲೆ ಹಲ್ಲೆ: ಆರೋಪಿ ಅರೆಸ್ಟ್​​ – Kannada News | Tumakuru: Siddarameshwara Matha Head Assaulted Over Temple Arch Dispute

ಹಲ್ಲೆಗೊಳಗಾದ ಸ್ವಾಮೀಜಿImage Credit source: Tv9 Kannada ತುಮಕೂರು, ಫೆಬ್ರವರಿ 27: ಸಿದ್ಧರಾಮೇಶ್ವರ ದೇವಾಲಯದ ಗೋಪುರ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಗೋಡೆಕೆರೆಯ ಸಿದ್ದರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿಗಳ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೃತ್ಯುಂಜಯ ಸ್ವಾಮೀಜಿಗಳ ಮೇಲೆ ದಾಳಿ ಸಂಬಂಧ ಸ್ಥಳೀಯ ಹಾಗೂ ಮಠದಲ್ಲಿ ಸ್ವಾಮೀಜಿಗಳ ಜೊತೆ ಓಡಾಡಿಕೊಂಡಿದ್ದ ಸಿದ್ಧರಾಮಯ್ಯ ಎಂಬಾತನನ್ನು ಬಂಧಿಸಲಾಗಿದೆ. ಫೆಬ್ರವರಿ 11ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಿಗ್ಗೆ ಸುಮಾರು 5.30ರ ಹೊತ್ತಿಗೆ ಮೃತ್ಯುಂಜಯ…

Read More

Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ – Kannada News | Sunetra Pawar Assumes Office as Maharashtra’s Deputy Chief Minister

ಪುಣೆ, ಫೆಬ್ರವರಿ 10: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ…

Read More

‘ಚಾನ್ಸ್ ಕೊಡಿ ಕೊಡಿ ಅಂತ ಕೇಳಿಕೊಂಡ್ರಲ್ಲ’; ಡಾರ್ಲಿಂಗ್ ಕೃಷ್ಣ ವಿರುದ್ಧ ಕಿಡಿಕಾರಿದ ಗುರು ದೇಶಪಾಂಡೆ

ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ನಮ್ಮದು ಎಂದು ಹೇಳಿದ್ದಾರೆ. ಆದರೆ, ಇದನ್ನು ಕೃಷ್ಣ ಅಲ್ಲಗಳೆದಿದ್ದಾರೆ. ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡುವ ವ್ಯಕ್ತಿ ಎಂದು ಟೀಕಿಸಿದ್ದಾರೆ. ಇದಕ್ಕೆ ಗುರು ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ‘ಈ ಮೊದಲು ನಾನು ಸಿನಿಮಾ ಮಾಡುವಾಗ ಚಾನ್ಸ್ ಕೊಡಿ ಕೊಡಿ ಎಂದು ಕೇಳಿಕೊಂಡಿದ್ರಿ. ಆಗ ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡ್ತಾರೆ ಅನ್ನೋದು ಗೊತ್ತಿರಲಿಲ್ಲವೇ? ಪದೇ ಪದೇ ಚಾನ್ಸ್ ಕೊಡಿ ಅಂತ…

Read More

‘ಕೆಡಿ’ ಸಿನಿಮಾ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

ಸಂಜಯ್ ದತ್ ಮತ್ತು ನೋರಾ ಫತೇಹಿ ನಟಿಸಿದ ‘ಸರ್ಕೆ ಚುನರ್ ತೇರಿ’ (Sarke Chunar Teri Sarke) ಹಾಡಿನ ವಿರುದ್ಧ ದೇಶಾದ್ಯಂತ ವ್ಯಕ್ತವಾದ ತೀವ್ರ ಆಕ್ರೋಶದ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ (KD) ಸಿನಿಮಾದ ಈ ಹಾಡಿನಿಂದ ಇಡೀ ಕನ್ನಡ ಚಿತ್ರರಂಗಕ್ಕೆ ಮುಜುಗರ ಆದಂತಾಗಿದೆ….

Read More

ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ – Kannada News | Mekedatu Row: JD(S) Slams Congress for Aligning with Anti Project DMK

ಬೆಂಗಳೂರು, ಏಪ್ರಿಲ್​​ 21: ಮೇಕೆದಾಟು ಯೋಜನೆ ತಡೆಯುವ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹೀಗಿದ್ದರೂ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್​​ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಎಲ್ಲಾ ಮಂತ್ರಿಗಳು ತಮಿಳುನಾಡಿಗೆ ಹೋಗಿ, ವಾರಗಟ್ಟಲೆ ಠಿಕಾಣಿ ಹೂಡಿ ಡಿಎಂಕೆ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಹೀಗಾಗಿ “ನಮ್ಮ ನೀರು ನಮ್ಮ ಹಕ್ಕು” ಎಂದು ಹೋರಾಟದ ಬೃಹತ್ ನಾಟಕವಾಡಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್​​ ಕಿಡಿ ಕಾರಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು…

Read More

Union Budget 2026-27: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Union Budget 2026–27: Government Announces Major Push for Education, Skills and Employment

ನವದೆಹಲಿ, ಫೆ. 1: ಕೇಂದ್ರ ಬಜೆಟ್ 2026–27ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ–ಉದ್ಯೋಗ–ಉದ್ಯಮ’ ಕುರಿತ ಉನ್ನತ ಮಟ್ಟದ ಸ್ಥಾಯಿ ಸಮಿತಿ ಸ್ಥಾಪನೆ ಮಾಡುವುದಾಗಿ ಸಚಿವರು ಪ್ರಕಟಿಸಿದ್ದು, ಈ ಸಮಿತಿ ಸೇವಾ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಉದ್ಯೋಗ ಸೃಷ್ಟಿ, ಕೌಶಲ್ಯ ಅಗತ್ಯಗಳು ಹಾಗೂ ರಫ್ತು ಅವಕಾಶಗಳ ಕುರಿತು ಶಿಫಾರಸುಗಳನ್ನು ನೀಡಲಿದೆ. ಜೊತೆಗೆ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮವನ್ನು ಪರಿಶೀಲಿಸಿ, ಶಾಲಾ ಹಂತದಿಂದಲೇ ಪಠ್ಯಕ್ರಮದಲ್ಲಿ…

Read More