2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ ತಂದೆಯ ಪರಿಶ್ರಮವನ್ನು ಕಣ್ಣಾರೆ ಕಂಡ ವಿಕಾಸ್, ಅದಕ್ಕೆ ತಕ್ಕ ಪ್ರತಿಫಲ ನೀಡಲು ಸತತವಾಗಿ ಶ್ರಮಿಸಿದ್ದಾರೆ. ಮುಂದೆ ಬಿಕಾಂ ಪದವಿಯೊಂದಿಗೆ ಸಿಎ ಓದುವ ಗುರಿಯನ್ನು ಹೊಂದಿದ್ದಾರೆ. ವಿಕಾಸ್ ‘ಟಿವಿ9’ ಜತೆ ನಡೆಸಿರುವ ಮಾತುಕತೆ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!

IPL 2026: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ವೈಭವ್ ಸೂರ್ಯವಂಶಿಯ (Vaibhav Suryavanshi) ಆರ್ಭಟದಿಂದಾಗಿ. ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 201 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್​ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ನಿರೀಕ್ಷೆಯಂತೆ ಈ ಪಂದ್ಯದಲ್ಲಿ 8 ಫೋರ್ ಹಾಗೂ 7 ಭರ್ಜರಿ ಸಿಕ್ಸರ್​ಗಳೊಂದಿಗೆ 78 ರನ್ ಬಾರಿಸಿದ ವೈಭವ್ ಸೂರ್ಯವಂಶಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವೈಭವ್ ಸೂರ್ಯವಂಶಿ, ಬೌಲರ್ ಯಾರೇ ಇರಲಿ, ನನ್ನ ಗುರಿ ಚೆಂಡಿನ ಮೇಲಷ್ಟೇ ಎಂದಿದ್ದಾರೆ. ಈ ಮೂಲಕ ತಾನು ಯಾವುದೇ ಬೌಲರ್​ನ ನೋಡಿ ಹೆದರಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ಮುಂಬೈ ಇಂಡಿಯನ್ಸ್ ವಿರುದ್ಧ ಅಬ್ಬರಿಸಿದ್ದರು. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಅವರ ಒಂದೇ ಓವರ್​ನಲ್ಲಿ  2 ಸಿಕ್ಸ್​ನೊಂದಿಗೆ 13 ರನ್ ಚಚ್ಚಿದ್ದರು. ಇದೀಗ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಝಲ್​ವುಡ್ ಅವರ ಬೆಂಡೆತ್ತಿದ್ದಾರೆ.

ಹೀಗಾಗಿಯೇ ಬುಮ್ರಾ ಮತ್ತು ಹೇಝಲ್‌ವುಡ್ ಅವರಂತಹ ದಿಗ್ಗಜರನ್ನು ಎದುರಿಸುವಾಗ ಭಯವಿತ್ತೇ ಎಂಬ ಪ್ರಶ್ನೆಯನ್ನು ವೈಭವ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಯುವ ದಾಂಡಿಗ, “ಬೌಲಿಂಗ್ ಮಾಡುತ್ತಿರುವುದು ಯಾರು ಎಂಬುದು ಮನಸ್ಸಿನ ಮೂಲೆಯಲ್ಲಿ ಇದ್ದೇ ಇರುತ್ತದೆ. ಆದರೆ ನಾನು ಬೌಲರ್ ಮುಖ ನೋಡಿ ಆಡುವುದಿಲ್ಲ, ಬದಲಿಗೆ ಬರುತ್ತಿರುವ ಚೆಂಡನ್ನು ನೋಡಿ ಆಡಲು ಪ್ರಯತ್ನಿಸುತ್ತೇನೆ. ನನ್ನ ಸಹಜ ಆಟಕ್ಕೆ ನಾನು ಬೆಂಬಲ ನೀಡುತ್ತೇನೆ. ಇಲ್ಲಿ ಬೌಲರ್ ಯಾರು ಎಂಬುದು ನನಗೆ ಮುಖ್ಯವಲ್ಲ. ನನ್ನು ಗುರಿ ಚೆಂಡಿನ ಮೇಲಷ್ಟೇ ಎಂದು ವೈಭವ್ ಸೂರ್ಯವಂಶಿ ಇತರೆ ಬೌಲರ್​ಗಳಿಗೂ ಎಚ್ಚರಿಕೆ ರವಾನಿಸಿದ್ದಾರೆ.

ಪಂದ್ಯದ ಗೆಲುವಿನ ನಂತರ ಸಂಭ್ರಮಾಚರಣೆ ಅಥವಾ ಕೇಕ್ ಕತ್ತರಿಸುವ ಯೋಜನೆ ಇದೆಯೇ ಎಂದು ಕೇಳಿದಾಗ, “ಇಲ್ಲ ಸರ್, ಅಂತಹದ್ದೇನೂ ಇಲ್ಲ. ನಮಗೆ ನಾಳೆ ಬೆಳಿಗ್ಗೆ ಬೇಗ ವಿಮಾನ ಇರುವುದರಿಂದ ಇವತ್ತು ಬೇಗ ಮಲಗಬೇಕಿದೆ. ಶಿಸ್ತು ನಮಗೆ ಮುಖ್ಯ,” ಎಂದು ಹೇಳುವ ಮೂಲಕ ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ.

ಇದೇ ವೇಳೆ ತಮ್ಮ ಈ ಬೆಳವಣಿಗೆಗೆ ತಂದೆ ಮತ್ತು ಕೋಚ್‌ಗಳ ಮಾರ್ಗದರ್ಶನವೇ ಕಾರಣ ಎಂದು ಅವರು ಸ್ಮರಿಸಿರುವ ವೈಭವ್. “ನನ್ನ ತಂದೆ ಮತ್ತು ಕೋಚ್‌ಗಳು, ವಿಶೇಷವಾಗಿ ಇಲ್ಲಿನ ಗಾರ್ಡಿಯನ್ ರೋಮಿ ಸರ್ ಅವರು ಯಾವಾಗಲೂ ಒಂದು ಮಾತನ್ನು ಹೇಳುತ್ತಾರೆ – ಈ ಪ್ರಯಾಣ ಬಹಳ ದೀರ್ಘವಾಗಿದೆ, ಇದು ಕೇವಲ ಆರಂಭವಷ್ಟೇ. ಹೊರಗಿನ ವಿಚಾರಗಳತ್ತ ಗಮನ ಹರಿಸದೆ ಕೇವಲ ಆಟ ಮತ್ತು ಪ್ರಕ್ರಿಯೆಯಮೇಲೆ ಮಾತ್ರ ಗಮನ ಹರಿಸು ಎಂದು”. ನಾನು ಅವರ ಮಾತನ್ನು ಪಾಲಿಸುತ್ತಿದ್ದೇನೆ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ಇದೇ ವೇಳೆ ಬೇಗನೆ ಔಟಾದ ಬಗ್ಗೆ ಮಾತನಾಡಿದ ವೈಭವ್, “ನಾನು ಕ್ರೀಸ್‌ನಲ್ಲಿ ಇನ್ನೂ ಸ್ವಲ್ಪ ಸಮಯ ಉಳಿದಿದ್ದರೆ ತಂಡಕ್ಕೆ ಇನ್ನೂ 10-20 ರನ್ ಬರುತ್ತಿತ್ತು. ಗುರಿ ಬೆನ್ನಟ್ಟುವಾಗ ಪಂದ್ಯವನ್ನು ಇನ್ನೂ ಎರಡು ಓವರ್ ಮೊದಲೇ ಮುಗಿಸಬಹುದಿತ್ತು. ಅನಗತ್ಯ ಹೊಡೆತಕ್ಕೆ ಕೈಹಾಕಿ ಔಟ್ ಆದಾಗ ತಂಡಕ್ಕೆ ಹಿನ್ನಡೆಯಾಗುತ್ತದೆ ಎಂಬ ಬೇಸರ ನನಗಿರುತ್ತದೆ”.  ಇದಾಗ್ಯೂ ನನ್ನ ಆದ್ಯತೆ ತಂಡದ ಗೆಲುವು. ಹೀಗಾಗಿ ಕೆಲವೊಮ್ಮೆ ತಪ್ಪುಗಳಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Rajat Patidar: ತಪ್ಪುಗಳಾಗುತ್ತೆ, ಆದರೆ ಈ ತಪ್ಪುಗಳನ್ನು…!

ಒಟ್ಟಾರೆಯಾಗಿ, ವೈಭವ್ ಸೂರ್ಯವಂಶಿ ಅವರ ಈ ಮಾತುಗಳು ಭಾರತೀಯ ಕ್ರಿಕೆಟ್‌ನ ಮುಂದಿನ ದಿನಗಳಲ್ಲಿ ಒಬ್ಬ ಶಿಸ್ತಿನ ಮತ್ತು ಮಾನಸಿಕವಾಗಿ ಸದೃಢವಾದ ಆಟಗಾರ ಸಿದ್ಧವಾಗುತ್ತಿದ್ದಾನೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಇದೇ ರೀತಿ ಅಬ್ಬರಿಸಿದರೆ ಮುಂಬರುವ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ವೈಭವ್ ಸೂರ್ಯವಂಶಿ ಆಯ್ಕೆಯಾಗುವುದರಲ್ಲಿ ಡೌಟೇ ಇಲ್ಲ.

 

 

Source link

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು ಬಾರಿ ಗೆದ್ದಿರುವ ಅನುಭವಿ ಶಾಸಕರು ಸೇರಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸುವುದು ಶಾಸಕರ ಈ ಯಾತ್ರೆಯ ಮುಖ್ಯ ಉದ್ದೇಶ ಎಂದು ಉನ್ನತ ಮೂಲಗಳು ತಿಳಿಸಿವೆ.

ಶಾಸಕರ ಬೇಡಿಕೆ ಏನು?

ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆಯುತ್ತಾ ಬಂದಿವೆ. ಆರಂಭದಲ್ಲಿ ಎರಡೂವರೆ ವರ್ಷದ ನಂತರ ಸಂಪುಟ ಪುನರ್‌ ರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಪಕ್ಷಕ್ಕಾಗಿ ನಾವು ನಿರಂತರವಾಗಿ ದುಡಿದಿದ್ದೇವೆ. ಉಳಿದಿರುವ ಎರಡು ವರ್ಷದ ಅವಧಿಗಾದರೂ ನಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಶಾಸಕರ ವಾದವಾಗಿದೆ. ಇದಕ್ಕಾಗಿ ಸಂಪುಟ ಪುನರ್‌ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಹೈಕಮಾಂಡ್‌ಗೆ ಅವರು ಒತ್ತಾಯಿಸಲಿದ್ದಾರೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ‘ನಾಯಕತ್ವದ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಅನುಭವಿ ಶಾಸಕರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ಏಪ್ರಿಲ್ 17ರ ನಂತರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನವೇ ಈ ಶಾಸಕರ ತಂಡ ವರಿಷ್ಠರ ಮನವೊಲಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ.

ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ ಡಕಾಯಿತ್’ ಚಿತ್ರವನ್ನು ಜನರು ಅಷ್ಟಾಗಿ ಇಷ್ಟಪಟ್ಟಿಲ್ಲ. ಈ ಸಿನಿಮಾ ಮೊದಲ ದಿನದ ಹೀನಾಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಹೀಗೆಯೇ ಮುಂದುವರಿದರೆ ಸಿನಿಮಾದಿಂದ ನಿರ್ಮಾಪಕರು ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ.

‘ಡಕಾಯಿತ್’ ಸಿನಿಮಾ ರೊಮ್ಯಾಂಟಿಕ್ ಆ್ಯಕ್ಷನ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಅಡಿವಿ ಶೇಷ್ ಹಾಗೂ ಮೃಣಾಲ್ ನಟನೆ ಗಮನ ಸೆಳೆದಿದೆ. ಬಿಜಿಎಂ ಕೂಡ ಮೆಚ್ಚುಗೆ ಗಳಿಸಿದೆ. ಆದರೆ, ಸಿನಿಮಾದಲ್ಲಿ ಇಷ್ಟ ಆಗದೇ ಇರುವ ಹಲವಿದೆ. ಈ ಚಿತ್ರದ ಕಥೆ ಹಳೆಯ ಕಾಲದ್ದಾಗಿದೆ. ಕಥೆಯ ನರೇಷನ್ ತುಂಬಾನೇ ಫ್ಲ್ಯಾಟ್ ಆಗಿದೆ ಎಂಬ ಆರೋಪ ಇದೆ. ಭಾವನಾತ್ಮಕವಾಗಿ ಸಿನಿಮಾ ಕನೆಕ್ಟ್ ಆಗಿದೆ. ಆ್ಯಕ್ಷನ್ ಸಿನಿಮಾಗಳಲ್ಲಿ ಹೊಸತನ ಇಲ್ಲ. ಇದೆಲ್ಲವೂ ಸಿನಿಮಾಗೆ ಹಿನ್ನಡೆ ತಂದಿದೆ.

ಇದನ್ನೂ ಓದಿ: ‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯಿತ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 6.50 ಕೋಟಿ ರೂಪಾಯಿ. ಈ ಚಿತ್ರಕ್ಕೆ ಸಿಕ್ಕಿದ್ದು ಬರೋಬ್ಬರಿ 3,800 ಶೋಗಳು. ಒಕ್ಯುಪೆನ್ಸಿ ಕೇವಲ 26 ಪರ್ಸೆಂಟ್ ಮಾತ್ರ ಇತ್ತು. ಸದ್ಯ ತೆಲುಗಿನಲ್ಲಿ ಯಾವುದೇ ದೊಡ್ಡ ಸಿನಿಮಾಗಳಿಲ್ಲ. ಆದಾಗ್ಯೂ ಚಿತ್ರದ ಬಳಿ ಅಬ್ಬರಿಸಲು ಸಾಧ್ಯವಾಗುತ್ತಿಲ್ಲ. ಒಂದೊಮ್ಮೆ ‘ಟಾಕ್ಸಿಕ್’ ಹಾಗು ‘ಡಕಾಯಿತ್’ ಚಿತ್ರಗಳು ಒಟ್ಟಿಗೆ ತೆರೆಗೆ ಬಂದಿದ್ದರೆ ಗೆಲ್ಲೋದು ಮತ್ತಷ್ಟು ಕಷ್ಟಕರವಾಗುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Rajat Patidar: ತಪ್ಪುಗಳಾಗುತ್ತೆ, ಆದರೆ ಈ ತಪ್ಪುಗಳನ್ನು…!

IPL 2026: ಐಪಿಎಲ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಭರ್ಜರಿ ಗೆಲುವು ದಾಖಲಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 201 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ ಪಂದ್ಯ ಮುಗಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಸೋಲಾಗಿದ್ದರೂ ಸಹ, ತಂಡವು ಆರಂಭಿಕ ಕುಸಿತದಿಂದ ಚೇತರಿಸಿಕೊಂಡು 200ರ ಗಡಿ ದಾಟಿದ್ದು ಒಂದು ಉತ್ತಮ ಸಂಕೇತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದ ಆರಂಭದಲ್ಲಿ ಆರ್‌ಸಿಬಿ ಸತತ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಸ್ವತಃ ನಾಯಕನ ಜವಾಬ್ದಾರಿ ಹೊತ್ತ ಪಾಟಿದಾರ್, ಕೇವಲ 40 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ಪವರ್‌ಪ್ಲೇನಲ್ಲಿ ನಾವು ವಿಕೆಟ್ ಕಳೆದುಕೊಂಡ ರೀತಿಗೆ ಹೋಲಿಸಿದರೆ, ಅಲ್ಲಿಂದ ಚೇತರಿಸಿಕೊಂಡು 201 ರನ್ ಗಳಿಸಿದ್ದು ನಮಗೆ ಪಾಸಿಟಿವ್ ಅಂಶ. ಹೀಗಾಗಿ ಈ ಸೋಲಿನ ನಡುವೆ ನಾನು ಸಕರಾತ್ಮಕ ಅಂಶಗಳನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇನ್ನು ವೈಭವ್ ಸೂರ್ಯವಂಶಿ ಅವರ ಆರ್ಭಟದ ಬಗ್ಗೆ ಮಾತನಾಡಿದ ಪಾಟಿದಾರ್, ವೈಭವ್ ಪವರ್‌ಪ್ಲೇನಲ್ಲಿ ಬ್ಯಾಟ್ ಮಾಡಿದ ರೀತಿ ಪಂದ್ಯದಲ್ಲಿ ದೊಡ್ಡ ವ್ಯತ್ಯಾಸವನ್ನುಂಟು ಮಾಡಿತು. ಅವರ ಬಿರುಸಿನ ಬ್ಯಾಟಿಂಗ್​ ನಮ್ಮ ಸೋಲಿಗೆ ಕಾರಣವಾಗಿದೆ ಎಂದರೆ ತಪ್ಪಾಗಲಾರದು ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ವೆಂಕಟೇಶ್ ಅಯ್ಯರ್ ಅವರನ್ನು ಇಂಪ್ಯಾಕ್ಟ್ ಸಬ್ ಆಗಿ ಬಳಸಿಕೊಂಡ ನಿರ್ಧಾರವನ್ನು ಸಮರ್ಥಿಸಿಕೊಂಡ ರಜತ್ ಪಾಟಿದಾರ್, ನಮ್ಮ ಬಳಿ ವೆಂಕಿ (ಅಯ್ಯರ್), ರೊಮಾರಿಯೋ ಶೆಫರ್ಡ್ ಮತ್ತು ಕೃಣಾಲ್ ಪಾಂಡ್ಯ ಅವರಂತಹ ಬೌಲಿಂಗ್ ಆಯ್ಕೆಗಳಿದ್ದವು. ಹಾಗಾಗಿ ಸುಯಶ್ ಶರ್ಮಾ ಅವರನ್ನು ತರದೇ ಇರುವುದು ದೊಡ್ಡ ಮಟ್ಟದ ಪರಿಣಾಮ ಬೀರಲಿಲ್ಲ,” ಎಂದರು.

ಇದನ್ನೂ ಓದಿ:  ಒಂದೇ ಪಂದ್ಯದಲ್ಲಿ 4 ವೈಭವಯುತ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಅಲ್ಲದೆ  ಐಪಿಎಲ್‌ನಂತಹ ಅತ್ಯಂತ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ತಪ್ಪುಗಳು ಸಹಜ ಎಂದು ಒಪ್ಪಿಕೊಂಡ ಪಾಟಿದಾರ್, ಮುಂದಿನ ಪಂದ್ಯಗಳಲ್ಲಿ ಈ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಭರವಸೆ ನೀಡಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳಲಿದೆ ಎಂದು ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source link

25 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಕೋಟಿಗೊಬ್ಬ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾನ ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಂದೇ ಪಂದ್ಯದಲ್ಲಿ 4 ವೈಭವಯುತ ದಾಖಲೆ ಬರೆದ ವೈಭವ್ ಸೂರ್ಯವಂಶಿ

Source link

ಆಟೋ ಚಾಲಕನ ಮಗ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೇ ಆರನೇ ರ್ಯಾಂಕ್!

ರಾಯಚೂರು, ಏಪ್ರಿಲ್ 11: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (PUC results) ಉತ್ತಮ ಶ್ರೇಣಿಯಲ್ಲಿ ಪಾಸಾದವರು ಹಲವರಿದ್ದಾರೆ. ಅದರಲ್ಲಿ ರಾಯಚೂರಿನ ಒಬ್ಬ ಬಡ ವಿದ್ಯಾರ್ಥಿಯ ಸಾಧನೆಯೂ ಸೇರಿದೆ. ಆರ್ಥಿಕ ಸಂಕಷ್ಟಗಳ ನಡುವೆಯೂ ಕಷ್ಟ ಪಟ್ಟು ಓದಿದರೆ ಯಾವುದೂ ಅಸಾಧ್ಯವಲ್ಲವೆಂದು ಈ ವಿದ್ಯಾರ್ಥಿ ಸಾಧಿಸಿ ತೋರಿಸಿದ್ದಾನೆ. ರಾಜ್ಯಕ್ಕೇ ಆರನೆ ಸ್ಥಾನ ಪಡೆದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾರ್ಥಕತೆ ಮೆರೆದಿದ್ದಾನೆ.

ತಂದೆಯ ಕಷ್ಟದ ಜೀವನವೇ ಸಾಧನೆಗೆ ಇಂಧನ!

ಆಟೋ ಚಾಲಕರಾದ ಹನಮಂತು ಅವರ ಮಗನಾದ ವಿಕಾಸ್, ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಆರನೇ ರ್ಯಾಂಕ್ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾನೆ. ಜಿಲ್ಲೆಯ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಈತ, 600ರಲ್ಲಿ 594 ಅಂಕಗಳನ್ನು ಗಳಿಸಿ ಶೇ99 ಫಲಿತಾಂಶ ಸಾಧಿಸಿದ್ದಾನೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಕಷ್ಟಕರವಾಗಿದ್ದರೂ ತಂದೆಯ ಶ್ರಮವನ್ನು ನೋಡಿ ಏನಾದರೂ ಸಾಧಿಸಬೇಕು ಎಂಬ ದೃಢಸಂಕಲ್ಪದಿಂದ, ಪರಿಶ್ರಮದಿಂದ ಓದಿದ್ದಕ್ಕೆ ತಕ್ಕ ಪ್ರತಿಫಲ ಸಿಕ್ಕಂತಾಗಿದೆ.

ಇದನ್ನೂ ಓದಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಸಾಲ ಮಾಡಿ ಓದಿಸಿದ್ದಕ್ಕೂ ಸಾರ್ಥಕವಾಯ್ತು ಎಂದ ಪೋಷಕರು!

ಮಗನ ಸಾಧನೆ ಕಂಡು ಕುಟುಂಬಸ್ಥರು ಆನಂದಭಾಷ್ಪ ಸುರಿಸಿದ್ದಾರೆ. ಟಿವಿ9 ಜೊತೆ ಮಾತನಾಡಿತ ವಿಕಾಸ್​ ತಂದೆ-ತಾಯಿ ಭಾವುಕರಾಗಿ, ಸಾಲ ಮಾಡಿ ಓದಿಸಿದ್ದ ಮಗ ಇಷ್ಟು ದೊಡ್ಡ ಸಾಧನೆ ಮಾಡಿದಿದ್ದಾನೆ. ಇದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ. ವಿಕಾಸ್ ಸಾಧನೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಸಂಕಷ್ಟಗಳ ನಡುವೆಯೂ ಗುರಿ ಸಾಧಿಸಬಹುದೆಂಬ ನಂಬಿಕೆಯನ್ನು ಬಲಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ಗಗನಯಾತ್ರಿಗಳ ತಂಡ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

ಕ್ಯಾಲಿಫೋರ್ನಿಯಾ, ಏಪ್ರಿಲ್ 11: ಸುಮಾರು ಐದು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಚಂದ್ರನತ್ತ ಪ್ರಯಾಣ ಬೆಳೆಸಿದ್ದ ನಾಸಾದ ‘ಆರ್ಟೆಮಿಸ್-2 (Artemis II)’ ಗಗನಯಾತ್ರಿಗಳ ತಂಡ ಯಶಸ್ವಿಯಾಗಿ ಭೂಮಿಗೆ ಮರಳಿದೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಒರಿಯಾನ್ ಕ್ಯಾಪ್ಸೂಲ್ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಇಳಿದಿದೆ (Splashdown). ಈ ತಂಡವು ಚಂದ್ರನ ಅಂಗಳಕ್ಕೆ ಇಳಿಯದಿದ್ದರೂ, ಚಂದ್ರನ ಕಕ್ಷೆಯಲ್ಲಿ ಸುತ್ತು ಹಾಕಿ ಭವಿಷ್ಯದ ಮಾನವ ಚಂದ್ರಯಾನ ಯೋಜನೆಗಳಿಗೆ ಪೂರಕವಾದ ಮಹತ್ವದ ಅಧ್ಯಯನ ಮತ್ತು ತಾಂತ್ರಿಕ ಪರಿಶೀಲನೆಗಳನ್ನು ನಡೆಸಿ ಬಂದಿದೆ. ಇದು ಚಂದ್ರನ ಮೇಲೆ ಮಾನವನನ್ನು ಮತ್ತೆ ಇಳಿಸುವ ನಾಸಾದ ಮಹತ್ವಾಕಾಂಕ್ಷೆಯ ಯೋಜನೆಗೆ ಬಲ ನೀಡಿದೆ. ಸುರಕ್ಷಿತವಾಗಿ ಮರಳಿದ ಗಗನಯಾತ್ರಿಗಳನ್ನು ನಾಸಾ ವಿಜ್ಞಾನಿಗಳು ಮತ್ತು ನೌಕಾಪಡೆಯ ತಂಡ ಸಂಭ್ರಮದಿಂದ ಸ್ವಾಗತಿಸಿತು. ಮುಂದಿನ ದಿನಗಳಲ್ಲಿ ಚಂದ್ರನ ಮೇಲೆ ಮನುಷ್ಯನನ್ನು ಇಳಿಸುವ ಆರ್ಟೆಮಿಸ್-3 ಮಿಷನ್‌ಗೆ ಈ ಯಶಸ್ಸು ಭದ್ರ ಬುನಾದಿ ಹಾಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ.

ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್ ತಂಡವು ಅತ್ಯುತ್ತಮವಾಗಿ ಆಡಿರುವುದು ಸ್ಪಷ್ಟ. ಈ ಭರ್ಜರಿ ಆಟದೊಂದಿಗೆ ಆರ್​ಸಿಬಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳು ಈ ಕೆಳಗಿನಂತಿದೆ…

ವೈಭವ್ ಸೂರ್ಯವಂಶಿ ಬಿರುಗಾಳಿ: ರಾಜಸ್ಥಾನ್ ರಾಯಲ್ಸ್​ ತಂಡದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 78 ರನ್ (7 ಸಿಕ್ಸರ್, 8 ಬೌಂಡರಿ) ಸಿಡಿಸಿ ಆರ್‌ಸಿಬಿ ಬೌಲರ್‌ಗಳನ್ನು ಕಂಗೆಡಿಸಿದರು. ಪವರ್‌ಪ್ಲೇನಲ್ಲಿ ಅವರು ನೀಡಿದ ಈ ಸ್ಫೋಟಕ ಆರಂಭವೇ ಪಂದ್ಯದ ದಿಕ್ಕನ್ನು ಬದಲಿಸಿತು.

ಧ್ರುವ್ ಜುರೆಲ್ ಜವಾಬ್ದಾರಿಯುತ ಆಟ: ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಾಗ ಧ್ರುವ್ ಜುರೆಲ್ ಅಜೇಯ 81* ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರ ಸ್ಥಿರ ಆಟದಿಂದಾಗಿ ರಾಜಸ್ಥಾನ್ ರಾಯಲ್ಸ್​ ತಂಡ ಸುಲಭವಾಗಿ ಗುರಿ ತಲುಪಲು ಸಾಧ್ಯವಾಯಿತು.

ದುಬಾರಿಯಾದ ಬೌಲಿಂಗ್: ಆರ್‌ಸಿಬಿ ಬೌಲರ್‌ಗಳು ರನ್ ನಿಯಂತ್ರಿಸುವಲ್ಲಿ ವಿಫಲರಾದರು. ಅದರಲ್ಲೂ ಅಭಿನಂದನ್ ಸಿಂಗ್ 3 ಓವರ್‌ಗಳಲ್ಲಿ 54 ರನ್ ನೀಡಿ ಅತ್ಯಂತ ದುಬಾರಿಯಾದರು. ಪಂದ್ಯದ ನಂತರ ಮಾತನಾಡಿದ ನಾಯಕ ರಜತ್ ಪಾಟಿದಾರ್, ಬೌಲಿಂಗ್ ವೈಫಲ್ಯವೇ ಸೋಲಿಗೆ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.

ಮಧ್ಯಮ ಕ್ರಮಾಂಕದ ಕುಸಿತ: ಬ್ಯಾಟಿಂಗ್ ವೇಳೆ ಒಂದು ಹಂತದಲ್ಲಿ ಆರ್‌ಸಿಬಿ 94 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ರವಿ ಬಿಷ್ಣೋಯ್ ಮತ್ತು ಬ್ರಿಜೇಶ್ ಶರ್ಮಾ ಅವರ ಸ್ಪಿನ್ ದಾಳಿಗೆ ಬ್ಯಾಟರ್‌ಗಳು ತತ್ತರಿಸಿದರು. ಅಂತಿಮವಾಗಿ ವೆಂಕಟೇಶ್ ಅಯ್ಯರ್ ಅವರ ಅಬ್ಬರದಿಂದಾಗಿ ತಂಡ 200ರ ಗಡಿ ದಾಟಿತು.

ಪವರ್​ಪ್ಲೇನಲ್ಲಿ ಇಲ್ಲದ ಪವರ್​: ಆರ್​ಸಿಬಿ ತಂಡವು ಪವರ್​ಪ್ಲೇನಲ್ಲಿ ಪವರ್​ ತೋರಿಸುವಲ್ಲಿ ವಿಫಲವಾಗಿದ್ದರು. ಅಂದರೆ ಮೊದಲ 6 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು 61 ರನ್​ಗಳು. ಈ 61 ರನ್​ಗಳಲ್ಲಿ ಒಂದೇ ಒಂದು ಸಿಕ್ಸ್​ ಇರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಪವರ್​ಪ್ಲೇನಲ್ಲಿ ಬಿಗ್ ಹಿಟ್​ಗಳ ಮೂಲಕ ಆರ್​ಸಿಬಿ ಬೃಹತ್ ಮೊತ್ತವನ್ನು ಕಲೆಹಾಕುವಲ್ಲಿ ವಿಫಲವಾಗಿದ್ದಾರೆ ಎಂದೇ ಹೇಳಬಹುದು.

ಈ ಕಾರಣಗಳಿಂದಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ಅಚ್ಚರಿ ಎನಿಸಿದರೂ ಸತ್ಯ… ಒಂದು ಸಿಕ್ಸ್​​ಗಾಗಿ 11.3 ಓವರ್​ ಆಡಿದ RCB

ಪಂದ್ಯದ ಸಂಕ್ಷಿಪ್ತ ಸ್ಕೋರ್:

  • ರಾಯಲ್ ಚಾಲೆಂಜರ್ಸ್​ ಬೆಂಗಳೂರು: 201/8 (20 ಓವರ್) – ರಜತ್ ಪಾಟಿದಾರ್ 63, ವೆಂಕಟೇಶ್ ಅಯ್ಯರ್ 29*.
  • ರಾಜಸ್ಥಾನ್ ರಾಯಲ್ಸ್: 202/4 (18 ಓವರ್) – ಧ್ರುವ್ ಜುರೆಲ್ 81*, ವೈಭವ್ ಸೂರ್ಯವಂಶಿ 78.

Source link

Exit mobile version