Headlines

Gold Rate: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ – Kannada News | Gold Price Today on 17th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 17: ಚಿನ್ನದ ಬೆಲೆ ಸತತವಾಗಿ ತಗ್ಗಿದೆ. ನಿನ್ನೆ 25 ರೂ ಇಳಿದಿದ್ದ ಇದರ ಬೆಲೆ (Gold Rates) ಇಂದು ಶುಕ್ರವಾರ 70 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬಂಗಾರದ ದರ ಇಳಿದಿದೆ. ಇನ್ನು, ಬೆಳ್ಳಿ ಬೆಲೆಯೂ ಶುಕ್ರವಾರ ಗ್ರಾಮ್​ಗೆ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100…

Read More

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: ಪಿಂಕ್ ಹಾಗೂ ಬ್ಲೂ ಲೈನ್‌ನ ಸಿಬಿಟಿಸಿ ವ್ಯವಸ್ಥೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್! – Kannada News | Namma Metro Good News: Railway Board Approves CBTC Signaling for Bengaluru Pink and Blue Lines

ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಸಂಚಾರ ದಟ್ಟಣೆಗೆ ಬಹುದೊಡ್ಡ ಬ್ರೇಕ್ ಹಾಕಲಿರುವ ‘ನಮ್ಮ ಮೆಟ್ರೋ’ದ (Namma Metr0) ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಮಂಡಳಿಯಿಂದ ಅತ್ಯಂತ ಪ್ರಮುಖ ಹಾಗೂ ಮಹತ್ವದ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಇನ್ಮುಂದೆ ಈ ಮಾರ್ಗಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಇದಕ್ಕೆ ಬೇಕಾದ ರೈಲು ನಿಯಂತ್ರಣ ವ್ಯವಸ್ಥೆಗೆ ಹಸಿರು ನಿಶಾನೆ ಸಿಕ್ಕಿದೆ. ಮೆಟ್ರೋದ ಪಿಂಕ್ ಹಾಗೂ ಬ್ಲೂ ಲೈನ್ ಮಾರ್ಗಗಳ ಕಮ್ಯುನಿಕೇಷನ್‌ ಬೇಸ್ಡ್‌…

Read More

IPL 2027: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್​! – Kannada News | IPL 2027 is likely to begin on March 10

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೆ ತಾತ್ಕಾಲಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಐಪಿಎಲ್ 2027 ಮಾರ್ಚ್ 10 ರಿಂದ ಶುರುವಾಗಲಿದೆ. ಅಲ್ಲದೆ ಫೈನಲ್ ಪಂದ್ಯವನ್ನು ಮೇ 15 ರೊಳಗೆ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ ಹಾಗೂ ಆಟಗಾರರ ಹಿತದೃಷ್ಟಿಯಿಂದ ಪ್ರಸ್ತುತ ಇರುವ 74 ಪಂದ್ಯಗಳ ಸ್ವರೂಪದಲ್ಲೇ 2027ರ ಐಪಿಎಲ್ ಟೂರ್ನಿ ಮುಂದುವರಿಯಲಿದೆ.  ಇದರೊಂದಿಗೆ, ಭಾರತದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯಿಂದ…

Read More

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ – Kannada News | Tungabhadra Dam Water Supply Stopped For Canals Due to Severe 42 percent Monsoon Deficit in Karnataka

ತುಂಗಭದ್ರಾ ಜಲಾಶಯದಲ್ಲಿ ನೀರು ಕನಿಷ್ಠ ಮಟ್ಟಕ್ಕೆ ಕುಸಿದಿರುವುದುImage Credit source: tv9 ಕೊಪ್ಪಳ, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ (TB Dam) ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಒಳಹರಿವು ಇಲ್ಲದೇ ಇರುವುದರಿಂದ ಮುಂಗಾರು ಬೆಳೆಗೆ ನೀರು ಕೊಡಲು ಸಾಧ್ಯವೇ ಇಲ್ಲ ಎಂದು ನೀರಾವರಿ ವಲಯದ ಅಧಿಕಾರಿಗಳು ಅಧಿಕೃತ…

Read More

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ

ಬೆಂಗಳೂರು, (ಮಾರ್ಚ್ 16): ಎಸ್​​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗೆ (SSLC Exams) ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​​​​ಆರ್​​​ಟಿಸಿ (KSRTC) ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ.  ಹೌದು.. ಎಸ್​​ಎಸ್​​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್​ಆರ್​​ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು,…

Read More

ಹುಡುಗಿ ಆಸೆ ತೋರಿಸಿ ಸುಲಿಗೆ: ಆನ್ಲೈನ್ ನಲ್ಲಿ ನೋಡಿದ ಹುಡುಗಿ ಭೇಟಿಗೆ ಹೋಗಿ ತಗ್ಲಾಕೊಂಡ – Kannada News | CCB Arrests 11 Accused Who kidnap And robbing On girl Name In Bengaluru

ಬೆಂಗಳೂರು, (ಜುಲೈ 20): ಹುಡುಗಿ ಆಸೆ ತೋರಿಸಿ ವ್ಯಕ್ತಿಯನ್ನು ಸುಲಿಗೆ ಮಾಡಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಮನು, ಶಾಬು , ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಬಂಧಿತ ಆರೋಪಿಗಳು. ಇವರು ಆ್ಯಪ್ ಒಂದರಲ್ಲಿ ಹುಡುಗಿಯರು ಇದ್ದಾರೆ ಎಂದು ಮೊದಲು ಪೋಸ್ಟ್ ಮಾಡಿದ್ದರು. ಇದನ್ನು ನಂಬಿ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ ವ್ಯಕ್ತಿಯನ್ನು ಆರೋಪಿಗಳು ಸುಲಿಗೆ ಮಾಡಿದ್ದರು. ಹೌದು…ವ್ಯಕ್ತಿಯೊಬ್ಬರು ವೆಬ್‌ಸೈಟ್‌ನಲ್ಲಿ ನೋಡಿದ ಹುಡುಗಿಯನ್ನ ಭೇಟಿ ಮಾಡಲು ಆಸೆಯಿಂದ ಹೆಚ್.ಆರ್.ಬಿ.ಆರ್ ಲೇಔಟ್‌ಗೆ ಸಿಕ್ಕಿಬಿದ್ದಿದ್ದು,…

Read More

ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ – Kannada News | CM Siddaramaiah Refuses Fan’s Mantralayam Raghavendra Swamy Photo, Sparks Political Row, Watch Video

ಬೆಂಗಳೂರು, ಜನವರಿ 19: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ…

Read More

Indian Railways: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ? – Kannada News | More Than Just Paint: The Meaning Behind India’s Colourful Trains

ನವದೆಹಲಿ, ಜನವರಿ 1: ಸಾಮಾನ್ಯವಾಗಿ ಭಾರತದವರು ರೈಲಿನಲ್ಲಿ ಪ್ರಯಾಣಿಸಿಯೇ ಇರುತ್ತಾರೆ. ಆದರೆ ರೈಲಿನ ಬೋಗಿಗಳು ಏಕರೂಪವಾಗಿಲ್ಲ ಎಂಬುದನ್ನು ಯಾರಾದರೂ ಗಮನಿಸಿದ್ದೀರಾ. ಕೆಲವು ರೈಲು(Train)ಗಳಲ್ಲಿ ಕೆಂಪು ಬೋಗಿಗಳು, ಕೆಲವು ಹಸಿರು ಇನ್ನೂ ಕೆಲವು ನೀಲಿ ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ. ಇದರ ಹಿಂದಿನ ಕಾರಣದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲಿರುತ್ತದೆ. ಭಾರತೀಯ ರೈಲು ಬೋಗಿಗಳ ಬಣ್ಣಗಳು ಕೇವಲ ಸೌಂದರ್ಯ ಮತ್ತು ನೋಟಕ್ಕಾಗಿ ಮಾತ್ರವಲ್ಲ, ಅವು ರೈಲಿನ ಬಗ್ಗೆಯೂ ಬಹಳಷ್ಟು ಬಹಿರಂಗಪಡಿಸುತ್ತವೆ. ಈ ಬಣ್ಣಗಳು ರೈಲಿನ ಪ್ರಕಾರ, ವೇಗ ಮತ್ತು ಬಳಸಿದ…

Read More

‘ನಿತ್ಯಾನಂದ ಸ್ವಾಮಿಯಿಂದ ಮೋಸ ಹೋಗುತ್ತಿದ್ದೆ’: ನಿರ್ದೇಶಕ ತೇಜ – Kannada News | Director Teja’s Son’s Illness and Nithyananda Cheque Bounce: A Bitter Life Lesson

ಪ್ರತಿಯೊಬ್ಬ ವ್ಯಕ್ತಿಯೂ ಒಂದು ನಿರ್ದಿಷ್ಟ ಕಾರ್ಯಕ್ಕಾಗಿಯೇ ಹುಟ್ಟುತ್ತಾನೆ. ಇಡೀ ಜೀವನ ಆ ಕಾರ್ಯಕ್ಕೇ ಮೀಸಲಾಗಿರುತ್ತದೆ ಎಂದು ತೆಲುಗಿನ ಖ್ಯಾತ ನಿರ್ದೇಶಕ ತೇಜ ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಜೀವನದ ಅತ್ಯಂತ ಕಹಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಒಮ್ಮೆ ನಿರ್ದೇಶಕ ತೇಜ ಅವರ ಮಗ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದನು. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಈ ಸಮಯದಲ್ಲಿ ತೇಜ ಅವರಿಗೆ ಯಾರೋ ಒಬ್ಬರು ನಿತ್ಯಾನಂದ ಸ್ವಾಮಿಯ ಬಗ್ಗೆ ತಿಳಿಸಿದರು ಎಂದು ಅವರು ಹೇಳಿದ್ದಾರೆ. ನಿತ್ಯಾನಂದ…

Read More

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More