ಜೂನ್​​ನಲ್ಲಿ ಶುಕ್ರ ಗೋಚಾರ ಫಲ: ಕರ್ಕಾಟಕದಲ್ಲಿ ಶುಕ್ರನ ಸಂಚಾರ; ಈ ರಾಶಿಯವರಿಗೆ ಒಲಿಯಲಿದೆ ಅಪಾರ ಸಂಪತ್ತು, ಧನಲಾಭದ ರಾಜಯೋಗ! – Kannada News

ಕಾಲಜ್ಞಾನ ಶಾಸ್ತ್ರದಲ್ಲಿ ಕರ್ಕಾಟಕ ರಾಶಿಯಲ್ಲಿರುವ ಶುಕ್ರನು ಸ್ಥಿತಿಯು ಗುರುವಿನ ದ್ರೇಕ್ಕಾಣ, ರವಿಯ ಹೋರೆ, ಶನಿಯ ನವಾಂಶ, ಕುಜನ ತ್ರಿಂಶಾಂಶ, ಶುಕ್ರನ ದ್ವಾದಶಾಂಶದಲ್ಲಿ ಜೂನ್ ತಿಂಗಳಿನಲ್ಲಿ ಇದ್ದು ಮಿಶ್ರಫಲ ನೀಡುವನು.

​ಮೇಷ ರಾಶಿ :

​ಶುಕ್ರನು ಸುಖಸ್ಥಾನದಲ್ಲಿದ್ದು ಮಿಶ್ರಫಲ ನೀಡುವನು. ರವಿಯ ಹೋರೆಯಿಂದಾಗಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶನಿಯ ನವಾಂಶದಲ್ಲಿದ್ದು ವೃತ್ತಿರಂಗದಲ್ಲಿ ಕಠಿಣ ಪರಿಶ್ರಮವನ್ನು ಬೇಡುತ್ತದೆ. ಕುಜನ ತ್ರಿಂಶಾಂಶದಿಂದಾಗಿ ಆತುರದ ನಿರ್ಧಾರಗಳು ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಕಲಾಪ್ರೇಮಿಗಳು, ಕೃಷಿಕರು ಮತ್ತು ಭೂ ವ್ಯವಹಾರಸ್ಥರಿಗೆ ಈ ತಿಂಗಳು ಆರ್ಥಿಕವಾಗಿ ಹೆಚ್ಚಿನ ಧನಲಾಭ ಹಾಗೂ ವಿಶೇಷ ಪ್ರಯೋಜನವನ್ನು ತಂದುಕೊಡಲಿದೆ.

​ವೃಷಭ ರಾಶಿ ;

​ಶುಕ್ರನು ತೃತೀಯದಲ್ಲಿದ್ದು ಧೈರ್ಯ ಹೆಚ್ಚಿಸುವನು. ಗುರುವಿನ ದ್ರೇಕ್ಕಾಣದಿಂದಾಗಿ ಸಹೋದರರೊಂದಿಗೆ ಬಾಂಧವ್ಯ ವೃದ್ಧಿ ಹಾಗೂ ಆಧ್ಯಾತ್ಮಿಕ ಪ್ರಗತಿಯಾಗಲಿದೆ. ಆದರೆ ಶನಿಯ ನವಾಂಶವು ಪ್ರಯಾಣದಲ್ಲಿ ಅಡೆತಡೆ ತರಬಹುದು. ಕುಜನ ಪ್ರಭಾವದಿಂದ ಕೋಪ ನಿಯಂತ್ರಿಸಿ. ರಾಶ್ಯಾಧಿಪತಿ ಶುಕ್ರನ ದಶೆ ನಡೆಯುತ್ತಿರುವ ವೃಷಭ ರಾಶಿಯ ಉದ್ಯಮಿಗಳು, ಚಿನ್ನದ ವ್ಯಾಪಾರಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಈ ತಿಂಗಳು ಅತ್ಯಂತ ಲಾಭದಾಯಕ ಹಾಗೂ ಯಶಸ್ವಿ ಎನಿಸಲಿದೆ.

​ಮಿಥುನ ರಾಶಿ :

​ಧನಸ್ಥಾನದ ಶುಕ್ರನು ಆರ್ಥಿಕ ಸುಧಾರಣೆ ತರುವನು. ರವಿ ಹೋರೆಯಿಂದಾಗಿ ಕಣ್ಣಿನ ಸಮಸ್ಯೆ ಅಥವಾ ತಲೆನೋವು ಕಾಡಬಹುದು. ಗುರು ದ್ರೇಕ್ಕಾಣವು ಹಿರಿಯರಿಂದ ಆಸ್ತಿ ಅಥವಾ ಧನಸಹಾಯವನ್ನು ಒದಗಿಸಲಿದೆ. ಶನಿ ನವಾಂಶವು ಸಾಲದ ಸುಳಿಗೆ ಸಿಲುಕದಂತೆ ಎಚ್ಚರಿಸುತ್ತದೆ. ಪ್ರಸ್ತುತ ಶುಕ್ರದಶೆ ನಡೆಯುತ್ತಿರುವ ಮಿಥುನ ರಾಶಿಯ ಬ್ಯಾಂಕಿಂಗ್ ಕ್ಷೇತ್ರ, ವಾಗ್ಮಿಗಳು, ಉಪನ್ಯಾಸಕರು ಮತ್ತು ವಿದೇಶಿ ವ್ಯಾಪಾರದಲ್ಲಿ ತೊಡಗಿರುವ ಜನರಿಗೆ ವಿಶೇಷ ಧನಲಾಭ ಹಾಗೂ ಅಭಿವೃದ್ಧಿಯ ಪ್ರಯೋಜನ ಸಿಗಲಿದೆ.

​ಕರ್ಕಾಟಕ ರಾಶಿ :

​ಲಗ್ನದಲ್ಲೇ ಶುಕ್ರನಿರುವುದರಿಂದ ಆಕರ್ಷಣೆ ಹೆಚ್ಚಲಿದೆ. ಗುರುವಿನ ದ್ರೇಕ್ಕಾಣದ ಶುಭ ಪ್ರಭಾವದಿಂದ ಮಾನಸಿಕ ನೆಮ್ಮದಿ, ಧಾರ್ಮಿಕ ಆಸಕ್ತಿ ಮೂಡುತ್ತದೆ. ರವಿಯ ಹೋರೆಯು ಸಮಾಜದಲ್ಲಿ ಗೌರವ ತರಲಿದೆ. ಆದರೆ ಕುಜ ತ್ರಿಂಶಾಂಶವು ದಾಂಪತ್ಯದಲ್ಲಿ ಸಣ್ಣ ಭಿನ್ನಾಭಿಪ್ರಾಯ ಉಂಟುಮಾಡಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಮಹಿಳೆಯರು, ಸೌಂದರ್ಯವರ್ಧಕ ವ್ಯಾಪಾರಿಗಳು, ಕಲಾಪ್ರತಿಭೆಗಳು ಮತ್ತು ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಈ ತಿಂಗಳು ಅಪಾರ ಗೌರವ ಮತ್ತು ಪ್ರಗತಿಯ ಪ್ರಯೋಜನ ನೀಡಲಿದೆ.

​ಸಿಂಹ ರಾಶಿ :

​ವ್ಯಯಸ್ಥಾನದ ಶುಕ್ರನಿಂದಾಗಿ ಐಷಾರಾಮಿ ವಸ್ತುಗಳಿಗೆ ವೆಚ್ಚ ಹೆಚ್ಚಾಗಲಿದೆ. ಗುರು ದ್ರೇಕ್ಕಾಣವು ಧರ್ಮಕಾರ್ಯಗಳಿಗೆ ಹಣ ವಿನಿಯೋಗಿಸುವಂತೆ ಮಾಡುತ್ತದೆ. ಶನಿ ನವಾಂಶವಿರುವುದರಿಂದ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಅತಿ ಜಾಗ್ರತೆ ಅಗತ್ಯ. ಕುಜ ತ್ರಿಂಶಾಂಶವು ಶತ್ರುಬಾಧೆ ತರಬಹುದು. ಶುಕ್ರದಶೆ ನಡೆಯುತ್ತಿರುವ ಸಿಂಹ ರಾಶಿಯ ವಿದೇಶಿ ಉದ್ಯೋಗಿಗಳು, ಆಸ್ಪತ್ರೆ ಮತ್ತು ಫಾರ್ಮಾ ರಂಗದವರು ಹಾಗೂ ರಫ್ತು-ಆಮದು ವ್ಯವಹಾರಸ್ಥರಿಗೆ ಈ ತಿಂಗಳು ಆರ್ಥಿಕವಾಗಿ ಹೆಚ್ಚಿನ ಲಾಭ ಮತ್ತು ಪ್ರಯೋಜನ ಸಿಗಲಿದೆ.

​ಕನ್ಯಾ ರಾಶಿ :

​ಲಾಭಸ್ಥಾನದ ಶುಕ್ರನು ಸರ್ವತೋಮುಖ ಪ್ರಗತಿ ನೀಡುವನು. ಗುರು ದ್ರೇಕ್ಕಾಣದಿಂದಾಗಿ ಸಂತಾನ ಭಾಗ್ಯ ಅಥವಾ ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ. ರವಿ ಹೋರೆಯು ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಕಾರಣವಾಗಲಿದೆ. ಶನಿ ನವಾಂಶವು ಹಳೆಯ ಬಾಕಿ ವಸೂಲಾತಿಗೆ ಸಹಕಾರಿ. ಶುಕ್ರದಶೆ ನಡೆಯುತ್ತಿರುವ ಕನ್ಯಾ ರಾಶಿಯ ಷೇರು ಮಾರುಕಟ್ಟೆ ಹೂಡಿಕೆದಾರರು, ಮಾಹಿತಿ ತಂತ್ರಜ್ಞಾನದ ಉದ್ಯೋಗಿಗಳು ಮತ್ತು ಶಿಕ್ಷಣ ಸಂಸ್ಥೆ ನಡೆಸುವವರಿಗೆ ಅತ್ಯುತ್ತಮ ಧನಲಾಭ ಹಾಗೂ ಯಶಸ್ಸಿನ ಪ್ರಯೋಜನ ಸಿಗಲಿದೆ.

​ತುಲಾ ರಾಶಿ :

​ದಶಮದ ಶುಕ್ರನು ವೃತ್ತಿಯಲ್ಲಿ ಸ್ಥಾನಪಲ್ಲಟ ಅಥವಾ ಬದಲಾವಣೆ ತರಬಹುದು. ಗುರುವಿನ ದ್ರೇಕ್ಕಾಣವು ಉದ್ಯೋಗದಲ್ಲಿ ಮೇಲಾಧಿಕಾರಿಗಳ ಬೆಂಬಲವನ್ನು ತಂದುಕೊಡುತ್ತದೆ. ಕುಜ ತ್ರಿಂಶಾಂಶದಿಂದಾಗಿ ಸಹೋದ್ಯೋಗಿಗಳೊಂದಿಗೆ ಸ್ಪರ್ಧೆ ಏರ್ಪಡಬಹುದು. ಶನಿಯ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ. ರಾಶ್ಯಾಧಿಪತಿ ಶುಕ್ರನ ದಶೆ ನಡೆಯುತ್ತಿರುವ ತುಲಾ ರಾಶಿಯ ಸ್ವಯಂ ಉದ್ಯೋಗಿಗಳು, ವಾಹನ ಡೀಲರ್ಸ್, ರಾಜಕಾರಣಿಗಳು ಮತ್ತು ನವೋದ್ಯಮಿಗಳಿಗೆ ಈ ತಿಂಗಳಲ್ಲಿ ಯಶಸ್ಸು ಹಾಗೂ ಆರ್ಥಿಕ ಸುಧಾರಣೆಯ ಪ್ರಯೋಜನ ದೊರೆಯಲಿದೆ.

​ವೃಶ್ಚಿಕ ರಾಶಿ :

​ಭಾಗ್ಯಸ್ಥಾನದ ಶುಕ್ರನು ಅದೃಷ್ಟವನ್ನು ತರಲಿದ್ದಾನೆ. ಗುರುವಿನ ದ್ರೇಕ್ಕಾಣದಿಂದಾಗಿ ಸುದೀರ್ಘ ಧಾರ್ಮಿಕ ಪೂಜಾ ಕಾರ್ಯಗಳು ಕೈಗೂಡಲಿವೆ. ರವಿಯ ಹೋರೆಯು ತಂದೆಯ ಕಡೆಯಿಂದ ಆಸ್ತಿ ಲಾಭವನ್ನು ಸೂಚಿಸುತ್ತದೆ. ಆದರೆ ಕುಜನ ತ್ರಿಂಶಾಂಶವು ಪಿತ್ತ ಸಂಬಂಧಿ ಆರೋಗ್ಯ ಸಮಸ್ಯೆ ನೀಡಬಹುದು. ಶುಕ್ರದಶೆ ನಡೆಯುತ್ತಿರುವ ವೃಶ್ಚಿಕ ರಾಶಿಯ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಬರಹಗಾರರು, ಪುರೋಹಿತರು ಮತ್ತು ಜ್ಯೋತಿಷ್ಯ ಕ್ಷೇತ್ರದವರಿಗೆ ಈ ತಿಂಗಳು ಕೀರ್ತಿ ಹಾಗೂ ಆರ್ಥಿಕ ಪ್ರಯೋಜನ ಲಭಿಸುವುದು.

​ಧನು ರಾಶಿ :

​ಅಷ್ಟಮದ ಶುಕ್ರನು ಅನಿರೀಕ್ಷಿತ ಧನಲಾಭದ ಜೊತೆಗೆ ಸಣ್ಣ ಆರೋಗ್ಯ ಸಮಸ್ಯೆಯನ್ನೂ ನೀಡುವನು. ಗುರು ದ್ರೇಕ್ಕಾಣವು ಸಂಶೋಧನೆ ಮತ್ತು ಗೂಢ ವಿದ್ಯೆಗಳಲ್ಲಿ ಆಸಕ್ತಿ ಮೂಡಿಸುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಅಡೆತಡೆ ಎದುರಾಗಬಹುದು. ಶನಿ ನವಾಂಶವು ಆಸ್ತಿ ವಿವಾದ ತರಬಹುದು. ಶುಕ್ರದಶೆ ನಡೆಯುತ್ತಿರುವ ಧನುರಾಶಿಯ ವಿಮಾ ಕ್ಷೇತ್ರದವರು, ಗಣಿ ಉದ್ಯಮಿಗಳು, ಪಿತ್ರಾರ್ಜಿತ ಆಸ್ತಿ ನಿರೀಕ್ಷೆಯಲ್ಲಿರುವವರು ಮತ್ತು ಸಂಶೋಧಕರಿಗೆ ಈ ತಿಂಗಳು ಅನಿರೀಕ್ಷಿತ ಧನಸಹಾಯದ ದೊಡ್ಡ ಪ್ರಯೋಜನ ಸಿಗಲಿದೆ.

​ಮಕರ ರಾಶಿ :

​ಸಪ್ತಮದ ಶುಕ್ರನು ದಾಂಪತ್ಯದಲ್ಲಿ ಪ್ರೀತಿ ಹೆಚ್ಚಿಸುವನು. ಗುರುವಿನ ದ್ರೇಕ್ಕಾಣದ ಶುಭ ದೃಷ್ಟಿಯಿಂದ ಹೊಸ ಪಾಲುದಾರಿಕೆ ವ್ಯವಹಾರಗಳು ಲಾಭದಾಯಕವಾಗಿ ಪರಿಣಮಿಸಲಿವೆ. ರವಿಯ ಹೋರೆಯು ಸಮಾಜದಲ್ಲಿ ಕೀರ್ತಿ ತರಲಿದ್ದರೂ, ಕುಜ ತ್ರಿಂಶಾಂಶವು ಸಂಗಾತಿಯೊಂದಿಗೆ ಸಣ್ಣ ಜಗಳ ತರಬಹುದು. ಶುಕ್ರದಶೆ ನಡೆಯುತ್ತಿರುವ ಮಕರ ರಾಶಿಯ ಅವಿವಾಹಿತರು, ಜವಳಿ ಉದ್ಯಮಿಗಳು, ಸಿನೆಮಾ ಮತ್ತು ನಾಟಕ ರಂಗದ ಕಲಾವಿದರಿಗೆ ಈ ತಿಂಗಳು ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶಗಳ ಸುಂದರ ಪ್ರಯೋಜನ ಸಿಗಲಿದೆ.

​ಕುಂಭ ರಾಶಿ :

​ಷಷ್ಠದ ಶುಕ್ರನು ಆರೋಗ್ಯದ ಕಡೆ ಗಮನಹರಿಸಲು ಎಚ್ಚರಿಸುವನು. ಗುರು ದ್ರೇಕ್ಕಾಣದಿಂದಾಗಿ ಸಾಲದ ಬಾಧೆಗಳು ಸದ್ಯಕ್ಕೆ ಹತೋಟಿಗೆ ಬರಲಿವೆ. ರವಿ ಹೋರೆಯು ತಾಯಿಯ ಕಡೆಯವರಿಂದ ವಿರೋಧ ತರಬಹುದು. ಶನಿ ನವಾಂಶವಿರುವುದರಿಂದ ಶ್ರಮಕ್ಕೆ ತಕ್ಕ ಫಲ ತಡವಾಗಿ ಸಿಗಲಿದೆ. ಶುಕ್ರದಶೆ ನಡೆಯುತ್ತಿರುವ ಕುಂಭ ರಾಶಿಯ ವಕೀಲರು, ಬ್ಯಾಂಕ್ ಉದ್ಯೋಗಿಗಳು, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಸಣ್ಣ ಕೈಗಾರಿಕೆ ಹೊಂದಿರುವವರಿಗೆ ಈ ತಿಂಗಳು ಕಠಿಣ ಶ್ರಮದ ಅನಂತರ ಯಶಸ್ಸಿನ ಪ್ರಯೋಜನ ಸಿಗಲಿದೆ.

ಇದನ್ನೂ ಓದಿ: ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್?

ಮೀನ ರಾಶಿ :

​ಪಂಚಮದ ಶುಕ್ರನು ಬುದ್ಧಿಶಕ್ತಿ ಹಾಗೂ ಸೃಜನಶೀಲತೆ ಹೆಚ್ಚಿಸುವನು. ಗುರು ದ್ರೇಕ್ಕಾಣವು ಉನ್ನತ ಜ್ಞಾನ ಮತ್ತು ಧಾರ್ಮಿಕ ಚಿಂತನೆಗಳನ್ನು ವೃದ್ಧಿಗೊಳಿಸುತ್ತದೆ. ರವಿ ಹೋರೆಯಿಂದಾಗಿ ಮಕ್ಕಳ ಪ್ರಗತಿ ಕಂಡು ಆನಂದಿಸುವಿರಿ. ಆದರೆ ಕುಜ ತ್ರಿಂಶಾಂಶವು ಅತಿಯಾದ ಆತುರದಿಂದ ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಮೀನ ರಾಶಿಯ ಗರ್ಭಿಣಿಯರು, ಕಲಾ ಶಿಕ್ಷಕರು, ಹೂಡಿಕೆದಾರರು ಮತ್ತು ಆಧ್ಯಾತ್ಮಿಕ ಕ್ಷೇತ್ರ ದಲ್ಲಿರುವ ಜನರಿಗೆ ಈ ತಿಂಗಳು ದೈವಿಕ ಅನುಗ್ರಹ ಹಾಗೂ ಮಾನಸಿಕ ಶಾಂತಿಯ ವಿಶೇಷ ಪ್ರಯೋಜನ ದೊರೆಯಲಿದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:11 pm, Mon, 8 June 26

Source link

IND vs AFG: ಭಾರತ- ಅಫ್ಘನ್ ಏಕದಿನ ಸರಣಿ ಯಾವಾಗ ಆರಂಭ? ಎಷ್ಟು ಪಂದ್ಯಗಳು ನಡೆಯಲಿವೆ? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಸಹ ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ಈ ಇಬ್ಬರು ದಿಗ್ಗಜರ ಅನುಪಸ್ಥಿತಿಯಲ್ಲಿ ಯುವ ಟೀಂ ಇಂಡಿಯಾ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ

  • ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಹಗಲು-ರಾತ್ರಿ ಪಂದ್ಯಗಳಾಗಿರುತ್ತವೆ.

ಮುಖಾಮುಖಿ ದಾಖಲೆ

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.

ಏಕದಿನ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಪ್ರತಿಯೊಂದು ಪಂದ್ಯವೂ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿವೆ. ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ ಹಾಟ್​ಸ್ಟಾರ್​ನಲ್ಲೂ ನೇರಪ್ರಸಾರವಿರಲಿದೆ.

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:53 pm, Mon, 8 June 26

Source link

ಬೆಂಗಳೂರಿನಲ್ಲಿ ಜೊಮಾಟೊ ಡೆಲಿವರಿ ಬಾಯ್ ಆಗಿದ್ದ ಸೂರಜ್ ಈಗ ಎಐ ಸ್ಟಾರ್ಟಪ್ ಫೌಂಡರ್ – Kannada News

ಕೆಲವೇ ವರ್ಷಗಳ ಹಿಂದೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ, ಕೈಯಲ್ಲೊಂದು ಝೊಮ್ಯಾಟೊ (Zomato) ಬ್ಯಾಗ್ ಇಟ್ಟುಕೊಂಡು ಬೈಕ್ ಓಡಿಸುತ್ತಿದ್ದ ಒಬ್ಬ ಹುಡುಗ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಸ್ಟಾರ್ಟ್‌ಅಪ್‌ನ ಮಾಲೀಕನಾಗಿದ್ದಾನೆ. ಇದು ಯಾವುದೋ ಸಿನಿಮಾ ಸ್ಟೋರಿ ಅಲ್ಲ, ಬೆಂಗಳೂರಿನಲ್ಲೇ ನೆಲೆಸಿ ಯಶಸ್ಸು ಕಂಡ ಯುವ ಉದ್ಯಮಿ ಸೂರಜ್ ಬಿಸ್ವಾಸ್ (Suraj Biswas) ಅವರ ನಿಜ ಜೀವನದ ಸಾಹಸಗಾಥೆ.

ವೈದ್ಯನಾಗಬೇಕೆಂಬ ತಂದೆಯ ಕನಸು ಮತ್ತು ಬಡತನದ ಸವಾಲು

ಸೂರಜ್ ಅವರ ತಂದೆ ಒಬ್ಬ ಸಾಮಾನ್ಯ ದಿನಗೂಲಿ ಕಾರ್ಮಿಕರಾಗಿದ್ದರು. ಮಗನನ್ನು ದೊಡ್ಡ ಡಾಕ್ಟರ್ ಮಾಡಬೇಕೆಂಬ ಹಠದ ಕನಸು ಅವರದ್ದಾಗಿತ್ತು. ಆದರೆ ಉನ್ನತ ಶಿಕ್ಷಣದ ದಾರಿ ಅಷ್ಟು ಸುಲಭವಾಗಿರಲಿಲ್ಲ. ಕಾಲೇಜು ಫೀಸು, ಬೆಂಗಳೂರಿನ ಮನೆ ಬಾಡಿಗೆ, ಊಟ, ಪ್ರಯಾಣದ ಖರ್ಚುಗಳು ಹೆಚ್ಚಾಗುತ್ತಾ ಹೋದಾಗ, ಸೂರಜ್ ಪರಿಸ್ಥಿತಿಗೆ ಶರಣಾಗದೆ ತಾವೇ ಏನಾದರೂ ಮಾಡಲು ನಿರ್ಧರಿಸಿದರು.

ಜೊಮ್ಯಾಟೊ ಡೆಲಿವರಿ ಪಾರ್ಟ್ನರ್ ಆಗಿ ಹೆಜ್ಜೆ

ಹಣದ ಅಗತ್ಯಕ್ಕಾಗಿ ಸೂರಜ್ 2020-21ರ ಅವಧಿಯಲ್ಲಿ ಜೊಮ್ಯಾಟೊ ಕಂಪನಿಗೆ ಡೆಲಿವರಿ ಬಾಯ್ ಆಗಿ ಸೇರಿಕೊಂಡರು. ಅಲ್ಲಿ ಅವರು ತಿಂಗಳಿಗೆ 40,000 ದಿಂದ 50,000 ರೂಗಳವರೆಗೆ ಸಂಪಾದಿಸುತ್ತಿದ್ದರು. ಆದರೆ ಅವರಿಗೆ ಸಿಕ್ಕ ದೊಡ್ಡ ಲಾಭ ಎಂದರೆ ಹಣ ಮಾತ್ರವಲ್ಲ, ‘ಸಮಯದ ಲಭ್ಯತ’ (Flexibility). ಈ ಗಿಗ್ ಕೆಲಸದ (Gig Work) ಕಾರಣದಿಂದಾಗಿ ಅವರಿಗೆ ಬೇಕಾದ ಸಮಯದಲ್ಲಿ ಡೆಲಿವರಿ ಮಾಡಿ, ಉಳಿದ ಸಮಯದಲ್ಲಿ ಕಾಲೇಜು ತರಗತಿಗಳಿಗೆ ಹಾಜರಾಗಲು ಮತ್ತು ಸ್ವಂತವಾಗಿ ಕಲಿಯಲು ಸಾಧ್ಯವಾಯಿತು.

ಇದನ್ನೂ ಓದಿ: ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು?

ಆರ್ಡರ್‌ಗಳ ನಡುವೆ ಕೋಡಿಂಗ್ ಕಲಿಕೆ

ಸೂರಜ್ ಅವರ ಬಳಿ ಇದ್ದದ್ದು ಒಂದು ಸ್ಮಾರ್ಟ್‌ಫೋನ್, ಒಂದು ಲ್ಯಾಪ್‌ಟಾಪ್ ಮತ್ತು ಇಂಟರ್ನೆಟ್ ಸಂಪರ್ಕ ಅಷ್ಟೇ. ಊಟದ ಆರ್ಡರ್ ಕೊಟ್ಟು ಕಾಯುವ ಮಧ್ಯದ ಬಿಡುವಿನ ಅವಧಿಯಲ್ಲಿ ಅವರು ಇಂಟರ್ನೆಟ್‌ನಲ್ಲಿ ಆನ್‌ಲೈನ್ ಟ್ಯುಟೋರಿಯಲ್ಸ್, ಓಪನ್ ಸೋರ್ಸ್ ಫೋರಂಗಳನ್ನು ನೋಡುತ್ತಾ ಸ್ವಂತವಾಗಿ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಕರಗತ ಮಾಡಿಕೊಂಡರು. ಅರ್ಧರಾತ್ರಿಯವರೆಗೂ ಇಂಟರ್ನೆಟ್‌ನಲ್ಲಿ ತಜ್ಞರ ಜೊತೆ ಚರ್ಚಿಸಿ ತಪ್ಪುಗಳನ್ನು ತಿದ್ದಿಕೊಳ್ಳುತ್ತಿದ್ದರು.

‘ಅಸೆಸ್ಲಿ’ (Assessli) ಎಐ ಸ್ಟಾರ್ಟ್‌ಅಪ್ ಉದಯ

ತಮ್ಮ ಈ ಕಠಿಣ ಪರಿಶ್ರಮ ಮತ್ತು ಎಐ ತಂತ್ರಜ್ಞಾನದ ಮೇಲಿನ ಜ್ಞಾನದಿಂದ ಸೂರಜ್ ‘ಅಸೆಸ್ಲಿ’ (Assessli) ಎಂಬ ಡೀಪ್-ಟೆಕ್ ಎಐ ಸ್ಟಾರ್ಟ್‌ಅಪ್ ಅನ್ನು ಸ್ಥಾಪಿಸಿದರು. ಇವರ ಕಂಪನಿಯು ಕೇವಲ ಕೃತಕ ಬುದ್ಧಿಮತ್ತೆಯನ್ನು ಮುನ್ಸೂಚನೆಗೆ ಬಳಸದೆ, “ಮಾನವನ ವರ್ತನೆ ಮತ್ತು ಬುದ್ಧಿಶಕ್ತಿಯನ್ನು ಅರ್ಥಮಾಡಿಕೊಳ್ಳುವ” ವಿಶಿಷ್ಟ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸುತ್ತದೆ.

“ನನ್ನ ಗುರಿ ಮಾರುಕಟ್ಟೆಯಲ್ಲಿ ದೊಡ್ಡ ಧ್ವನಿ ಮಾಡುವುದಲ್ಲ. ನನ್ನ ನಂತರವೂ ಉಳಿಯುವಂತಹ, ಕೇವಲ ಊಹೆ ಮಾಡುವುದರ ಬದಲಾಗಿ ಮನುಷ್ಯರನ್ನು ನಿಜವಾಗಿ ಅರ್ಥಮಾಡಿಕೊಳ್ಳುವ ತಂತ್ರಜ್ಞಾನವನ್ನು ಬಿಟ್ಟು ಹೋಗುವುದು” ಎಂದು ಸೂರಜ್ ಹೆಮ್ಮೆಯಿಂದ ಹೇಳುತ್ತಾರೆ.

ಜಾಗತಿಕ ಮಟ್ಟದ ಮನ್ನಣೆ

ಬೆಂಗಳೂರಿನ ರಸ್ತೆಗಳಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಸೂರಜ್ ಇಂದು 40 ಕ್ಕೂ ಹೆಚ್ಚು ತಾಂತ್ರಿಕ ತಜ್ಞರನ್ನು ಹೊಂದಿರುವ ಕಂಪನಿಯ ಸಿಇಒ. ಇವರ ‘ಅಸೆಸ್ಲಿ’ ಸಂಸ್ಥೆಯು ಜಾಗತಿಕ ಸ್ಟಾರ್ಟ್‌ಅಪ್ ಪ್ಲಾಟ್‌ಫಾರ್ಮ್ ಆದ F6S ನಲ್ಲಿ ವಿಶ್ವದ ‘ಟಾಪ್ 2 ಎಐ ಸ್ಟಾರ್ಟ್‌ಅಪ್‌ಗಳ’ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತದ ಅತಿ ದೊಡ್ಡ ಶಾಲಾ ನೆಟ್‌ವರ್ಕ್‌ಗಳ ಜೊತೆಗೂ ಇವರ ಕಂಪನಿ ಈಗ ಕೈಜೋಡಿಸಿದೆ.

ಇದನ್ನೂ ಓದಿ: ಎಐ ಅಬ್ಬರದಲ್ಲಿ ಮುಂದೋಡಿದ್ದ ದೇಶಗಳಿಗೆ ಅದೇ ಎಐ ಹೊಡೆತ; ಭಾರತದಕ್ಕಿಂತ ಕೆಳಗೆ ಕುಸಿದ ತೈವಾನ್, ಕೊರಿಯನ್ ಮಾರುಕಟ್ಟೆ

ಸೂರಜ್ ನೀಡುವ ಸಂದೇಶ

ಇತ್ತೀಚೆಗೆ ಗಿಗ್ ಕೆಲಸಗಾರರ (ಡೆಲಿವರಿ ಬಾಯ್ಸ್) ಹಕ್ಕುಗಳ ಬಗ್ಗೆ ಅಂತರ್ಜಾಲದಲ್ಲಿ ಭಾರಿ ಚರ್ಚೆ ನಡೆದಾಗ ಸೂರಜ್ ತಮ್ಮ ಲಿಂಕ್ಡ್‌ಇನ್ ಖಾತೆಯಲ್ಲಿ ಜೊಮ್ಯಾಟೊ ಸಂಸ್ಥೆಗೆ ಬೆಂಬಲ ಸೂಚಿಸಿ ಬರೆದುಕೊಂಡಿದ್ದರು. “ಯಾರೂ ನಮಗೆ ಭವಿಷ್ಯವನ್ನು ಕಟ್ಟಲು ಅನುಮತಿ ನೀಡಬೇಕಾಗಿಲ್ಲ. ನಾವು ಕಾಯುವುದನ್ನು ನಿಲ್ಲಿಸಿ, ಶ್ರಮ ಪಟ್ಟು ನಮ್ಮ ಭವಿಷ್ಯವನ್ನು ನಾವೇ ಗಳಿಸಿಕೊಳ್ಳಬೇಕು. ಆದರೆ, ನಾವು ಎಲ್ಲಿಂದ ಬಂದೆವು ಎಂಬುದನ್ನು ಎಂದಿಗೂ ಮರೆಯಬಾರದು” ಎನ್ನುತ್ತಾರೆ ಸೂರಜ್.

ಡಿಜಿಟಲ್ ಭಾರತದಲ್ಲಿ ಪ್ರತಿಭೆ ಮತ್ತು ಇಂಟರ್ನೆಟ್ ಇದ್ದರೆ ಒಬ್ಬ ಸಾಮಾನ್ಯ ಡೆಲಿವರಿ ಬಾಯ್ ಕೂಡ ಜಾಗತಿಕ ಮಟ್ಟದ ಟೆಕ್ ಉದ್ಯಮಿಯಾಗಬಹುದು ಎಂಬುದಕ್ಕೆ ಸೂರಜ್ ಬಿಸ್ವಾಸ್ ಅವರೇ ಅತ್ಯುತ್ತಮ ಉದಾಹರಣೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಇತ್ತ ಎಲ್ಲಾ ತಂಡಗಳು ಕೂಡ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿರುವ ಇಂಗ್ಲೆಂಡ್​ಗೆ ಬಂದಿಳಿದಿವೆ. ಈ ಪಂದ್ಯಾವಳಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಅದಕ್ಕೂ ಮೊದಲು ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. ಅದರಂತೆ ಸೋಮವಾರ (ಜೂನ್ 8) ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುವ ಮೂಲಕ ವಿಂಡೀಸ್ (India Women vs West Indies Warm-up) ತಂಡವನ್ನು 26 ರನ್​ಗಳಿಂದ ಸೋಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 8 ವಿಕೆಟ್‌ಗೆ 179 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ 153 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

179 ರನ್ ಕಲೆಹಾಕಿದ ಟೀಂ ಇಂಡಿಯಾ

ಈ ಅಭ್ಯಾಸ ಪಂದ್ಯದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ದೀಪ್ತಿ ಶರ್ಮಾ ಬ್ಯಾಟಿಂಗ್ ಮಾಡಲಿಲ್ಲ. ಇದರ ಹೊರತಾಗಿಯೂ ಭಾರ್ತಿ ಫುಲ್ಮಾಲಿ ಅವರ ಅರ್ಧಶತಕದ ಇನ್ನಿಂಗ್ಸ್ ಹಾಗೂ ಆರಂಭಿಕರು ನೀಡಿದ ಉತ್ತಮ ಆರಂಭದಿಂದ ಭಾರತ ತಂಡ ಬೃಹತ್ ಮೊತ್ತ ಕಲೆಹಾಕಿತು. ತಂಡದ ಪರ ಭಾರ್ತಿ ಫುಲ್ಮಾಲಿ 40 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಇದರಲ್ಲಿ 6 ಬೌಂಡರಿ ಮತ್ತು 1 ಸಿಕ್ಸ್ ಕೂಡ ಸೇರಿತ್ತು.

ಉಪನಾಯಕಿ ಸ್ಮೃತಿ ಮಂಧಾನ 23 ಎಸೆತಗಳಲ್ಲಿ 8 ಬೌಂಡರಿಗಳ ಸಹಾಯದಿಂದ 39 ರನ್ ಬಾರಿಸಿದರೆ, ಶಫಾಲಿ ವರ್ಮಾ 13 ಎಸೆತಗಳಲ್ಲಿ 29 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ಜೆಮಿಮಾ ರೊಡ್ರಿಗಸ್ 7, ಕ್ರಾಂತಿ ಗೌಡ್ 4, ಶ್ರೇಯಾಂಕ ಪಾಟೀಲ್ 2, ರಾಧಾ ಯಾದವ್ 1, ಮತ್ತು ರಿಚಾ ಘೋಷ್ ರನ್ ಗಳಿಸದೆ ಬಹುಬೇಗನೇ ಪೆವಿಲಿಯನ್‌ ಸೇರಿಕೊಂಡರು. ಶ್ರೀ ಚರಣಿ 2 ರನ್ ಗಳಿಸಿ ಅಜೇಯರಾಗಿ ಉಳಿದರು. ಇತ್ತ ವೆಸ್ಟ್ ಇಂಡೀಸ್ ಪರ, ಅಫಿ ಫ್ಲೆಚರ್ 4 ವಿಕೆಟ್ ಪಡೆದರೆ, ಕರಿಷ್ಮಾ ರಾಮ್ ಹರಾಕ್, ಆಲಿಯಾ ಅಲೆನ್ ಮತ್ತು ಡಿಯಾಂಡ್ರಾ ಡಾಟಿನ್ ತಲಾ 1 ವಿಕೆಟ್ ಪಡೆದರು.

Womens T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

4 ವಿಕೆಟ್ ಉರುಳಿಸಿದ ಶ್ರೇಯಾಂಕ

ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 8 ವಿಕೆಟ್‌ಗಳಿಗೆ 153 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಡಿಯಾಂಡ್ರಾ ಡಾಟಿನ್ ಅತ್ಯಧಿಕ 49 ರನ್​ಗಳ ಇನ್ನಿಂಗ್ಸ್ ಆಡಿದರು. ಇವರ ಜೊತೆಗೆ ಶೆಮೈನ್ ಕ್ಯಾಂಪ್‌ಬೆಲ್ 25, ಶೌನಿಶಾ ಹೆಕ್ಟರ್ ಔಟಾಗದೆ 19 ಮತ್ತು ಜನಿಲ್ಲೆ ಗ್ಲಾಸ್ಗೋ 19 ರನ್ ಗಳಿಸಿದರು. ಆಲಿಯಾ ಅಲೆನ್ 13 ರನ್ ಗಳಿಸಿ ಔಟಾದರೆ, ಅಫಿ ಫ್ಲೆಚರ್ ಔಟಾಗದೆ 7 ರನ್ ಗಳಿಸಿದರು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಶ್ರೇಯಾಂಕ ಪಾಟೀಲ್ 4 ಓವರ್​ಗಳಲ್ಲಿ 36 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ರಾಧಾ ಯಾದವ್​ ಕೂಡ 3 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral News: ಹೆಂಡತಿಗೆ ಕೈಕೊಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ! – Kannada News

ಕಾನ್ಪುರ, ಜೂನ್ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅತ್ಯಂತ ಅಚ್ಚರಿಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ. ಸದ್ಯ ಈ ವಿಲಕ್ಷಣ ಮದುವೆಯ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಇವರಿಬ್ಬರು ನ್ಯಾಯಾಲಯದಲ್ಲಿ ನೋಂದಾಯಿತ ವಿವಾಹ (ಕೋರ್ಟ್ ಮ್ಯಾರೇಜ್) ಮಾಡಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ಕೌಟುಂಬಿಕ ಸಂಬಂಧಗಳ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ವಿಲಕ್ಷಣ ಕೌಟುಂಬಿಕ ಬಿಕ್ಕಟ್ಟು ಸದ್ಯ ಕಾನ್ಪುರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಏನಿದು ಘಟನೆ?:

ಕಾನ್ಪುರದ ನಿವಾಸಿಯೊಬ್ಬರಿಗೆ ಕೆಲವು ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದ ಆರಂಭದಲ್ಲಿ ದಂಪತಿಯ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಾಲಕ್ರಮೇಣ ಪತ್ನಿಯ ತಾಯಿ ಈ ದಂಪತಿಗಳ ಮನೆಗೆ ಆಗಾಗ ಬಂದು ಉಳಿದುಕೊಳ್ಳಲು ಆರಂಭಿಸಿದ್ದರು. ಈ ಸಮಯದಲ್ಲಿ ಅಳಿಯ ಮತ್ತು ಅತ್ತೆಯ ನಡುವೆ ಪ್ರೇಮಾಂಕುರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ

ಅತ್ತೆಯೊಂದಿಗಿನ ಸಂಬಂಧ ದಿನದಿಂದ ದಿನಕ್ಕೆ ಆಳವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದ. ಕೌಟುಂಬಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳ ನೆಪವೊಡ್ಡಿ ಆತ ನ್ಯಾಯಾಲಯದ ಮೂಲಕ ತನ್ನ ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡಿದ್ದ. ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಆ ವ್ಯಕ್ತಿ ತನ್ನ ಮಾಜಿ ಪತ್ನಿಯ ತಾಯಿಯನ್ನು ಅಂದರೆ ತನ್ನ ಅತ್ತೆಯನ್ನು ಮದುವೆಯಾಗಲು ನಿರ್ಧರಿಸಿದ್ದ. ಇಬ್ಬರೂ ಒಮ್ಮತದಿಂದ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಚಿತ್ರವಾದ ಮದುವೆಗೆ ಕುಟುಂಬದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ!

ಈ ಫೋಟೋ ಮತ್ತು ವಿಡಿಯೋ ಎಕ್ಸ್ (ಟ್ವಿಟರ್)ನಲ್ಲಿ ವೈರಲ್ ಆಗಿದ್ದು, “ತಾಯಿಯೇ ತನ್ನ ಸ್ವಂತ ಮಗಳ ಸಂಸಾರವನ್ನು ಹೇಗೆ ಮುರಿಯಬಹುದು? ಈಕೆ ತಾಯಿ ಎಂದು ಕರೆಸಿಕೊಳ್ಳಲು ಲಾಯಕ್ಕಿಲ್ಲ” ಎಂಬ ಕ್ಯಾಪ್ಷನ್ ನೀಡಿ ಹಂಚಿಕೊಳ್ಳಲಾಗಿದೆ. ಇವರಿಬ್ಬರ ಈ ವರ್ತನೆ ಕೌಟುಂಬಿಕ ಸಂಬಂಧಗಳ ವ್ಯಾಖ್ಯಾನಕ್ಕೇ ಮಸಿ ಬಳಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ ಸ್ವಂತ ಮಗಳ ಸಂಸಾರವನ್ನು ಹಾಳುಗೆಡವಿ ಒಬ್ಬ ತಾಯಿಗೆ ಏನು ಸಿಗಲು ಸಾಧ್ಯ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಈ ಮಹಿಳೆಯು ಮಗಳು ಮತ್ತು ಗಂಡನ ಮನೆಯವರನ್ನು ಧಿಕ್ಕರಿಸಿ ತನ್ನ ಅಳಿಯನೊಂದಿಗೆ ಮನೆಯಿಂದ ಓಡಿಹೋಗಿ, ನಂತರ ಕೋರ್ಟ್‌ನಲ್ಲಿ ಮದುವೆಯಾಗಿದ್ದಾಳೆ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:37 pm, Mon, 8 June 26

Source link

ನಿತ್ಯ ಭವಿಷ್ಯ: ಯಾರಿಗೆ ಹೊಸ ಉದ್ಯೋಗದ ಶುಭ ಯೋಗ? ಸಾಲದ ಹಣ ವಾಪಸ್ ಬರದೇ ಆತಂಕಪಡುವವರಿಗೆ ಶುಭ ಸುದ್ದಿ – Kannada News

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಮಂಗಳವಾರದಂದು ಬಂಧನದ ಅನುಭವ, ಹೊಸ ಉದ್ಯೋಗ, ಶಿಕ್ಷೆಯ ಭಯ, ಪ್ರೀತಿಯಲ್ಲಿ ವಿವಾದ, ಹಿಂಪಡೆವ ಹೂಡಿಕೆ ಇವೆಲ್ಲ ಈ‌ ದಿನದ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ವಿಷ್ಕಂಭ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:37 – 17:14, ಯಮಗಂಡ ಕಾಲ 09:10 – 10:47, ಗುಳಿಕ ಕಾಲ 12:24 – 14:01

ಮೇಷ ರಾಶಿ :

ಹಣಕಾಸಿನ ಅಡಚಣೆಗಳಿಂದ ಹೊರಬರಲು ಸಾಧ್ಯವಿದೆ. ವ್ಯಾಪಾರಿಗಳಿಗೆ ಇದು ಶುಭಕರವಾದ ಸಮಯವಾಗಿದ್ದು, ಹೊಸ ಒಪ್ಪಂದಗಳು ಲಾಭ ತರಬಹುದು. ನಕಾರಾತ್ಮಕ ಸುದ್ದಿಗಳು ಬರುವ ಬಗ್ಗೆ ಗಮನ ಹೆಚ್ಚು. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಯನ್ನು ತೋರಿಸಲು ಹೆಚ್ಚಿನ ಶ್ರಮ ಬೇಕಾಗುತ್ತದೆ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ.

ವೃಷಭ ರಾಶಿ :

ವೈಯಕ್ತಿಕ ಜೀವನದಲ್ಲಿ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಅನಿರೀಕ್ಷಿತ ಸವಾಲುಗಳು ಎದುರಾಗಲಿವೆ. ದಿನದ ಪ್ರಾರಂಭದಲ್ಲಿ ಸಂಕಷ್ಟಗಳು ಹೆಚ್ಚಿದ್ದರೂ ನಿವಾರಣೆಯಾಗುತ್ತವೆ. ವ್ಯಾಪಾರದಲ್ಲಿ ತಾತ್ಕಾಲಿಕ ಏರಿಳಿತಗಳು ಕಂಡುಬಂದರೂ, ದೈರ್ಯದಿಂದ ಮುಂದುವರಿಯುವುದು ಮುಖ್ಯ. ಇಂದು ಆಸ್ತಿಯ ವಿವಾದವು ಬಗೆಹರಿಯಲಿದೆ. ಯಾರಾದರೂ ನಿಮ್ಮನ್ನು ಕಂಡು ಅವಮಾನಿಸುವರು. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ.

ಮಿಥುನ ರಾಶಿ :

ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಕೆಲಸದ ಒತ್ತಡ ಹೆಚ್ಚಿದರೂ, ಎಲ್ಲ ಕೆಲಸಗಳು ಅಡೆತಡೆಯಿಲ್ಲದೇ ಪೂರ್ಣಗೊಳ್ಳುತ್ತವೆ. ಶೀತಬಾಧೆಯಿಂದ ಕೂಡಲೇ ಆರಾಮ ಸಿಗದು. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಅವಕಾಶಗಳ ಕುರಿತು ವಿಷಯಗಳು ಕೇಳಿಬರಬಹುದು. ನಿಮ್ಮವರಿಂದ ನಿಮಗೆ ಕಷ್ಟಗಳು ಬರಬಹುದು ಎಂಬ ನಿರೀಕ್ಷೆಯಲ್ಲಿ ಇರುವಿರಿ. ಆಸ್ತಿ ಖರೀದಿಯ ಬಗ್ಗೆ ಚಿಂತನೆ ಇರುವುದು.

ಕರ್ಕಾಟಕ ರಾಶಿ :

ಆದಾಯದಲ್ಲಿ ಏರಿಳಿತ ಕಾಣಬಹುದು ಮತ್ತು ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಶುಭವಾರ್ತೆ ಕೇಳುವ ಸಾಧ್ಯತೆ ಇದೆ. ಅದು ನಿಮ್ಮ ಮನಸ್ಸಿಗೆ ಖುಷಿ ನೀಡಲಿದೆ. ಹೊಸತನಕ್ಕೆ ತಹತಹಿಸುವಿರಿ. ಉದ್ಯೋಗದಲ್ಲಿ ಬದಲಿ ಅಥವಾ ಸ್ಥಾನೋನ್ನತಿಗೆ ಸಂಭಾವ್ಯತೆ ಇರುವುದು. ವೈವಾಹಿಕ ಜೀವನದಲ್ಲಿ ಪ್ರೀತಿಯ ಬಾಂಧವ್ಯ ಹೆಚ್ಚಾಗುತ್ತದೆ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌

ಸಿಂಹ ರಾಶಿ :

ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ನಿರ್ಧರಿಸಿದ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಮಹಿಳೆಯರು ತಮ್ಮನ್ನು ಅತಿಮಾನುಷ ರೀತಿಯಲ್ಲಿ ಅಂದುಕೊಳ್ಳಬಹುದು. ಬೇರೆಯವರು ನೀಡುವ ಒತ್ತಡದಿಂದ ದೂರವಿರಿ. ಉದ್ಯೋಗವನ್ನು ಬಿಡುವುದಾಗಿ ಬೆದರಿಸಿಯಾರು. ಮನೆಯ ಹಿರಿಯರ ಮಾರ್ಗದರ್ಶನದಲ್ಲಿ ಕುಟುಂಬ ವ್ಯವಹಾರವು ಮತ್ತೆ ಬೆಳೆಯುತ್ತದೆ. ನಿಮ್ಮ ಬುದ್ಧಿಯನ್ನು ಪ್ರದರ್ಶಿಸಬೇಡಿ.

ಕನ್ಯಾ ರಾಶಿ :

ನಿಮ್ಮ ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ವಿದೇಶದ ವ್ಯಕ್ತಿಗಳ ಸ್ನೇಹವಾಗಲಿದೆ. ಹಣಕಾಸಿನ ಲಾಭದ ಸೂಚನೆ ಇದೆ, ಆದರೆ ಖರ್ಚುಗಳ ಮೇಲೂ ನಿಯಂತ್ರಣ ಅಗತ್ಯ. ಉದ್ಯೋಗದಲ್ಲಿ ಕೆಲಸದ ಒತ್ತಡ ಜಾಸ್ತಿಯಾಗಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಬೇಸರದ ನಿವಾರಣೆಗೆ ಒಳ್ಳೆಯ ಕೆಲಸದ ಕಡೆಗೆ ಗಮನಹರಿಸುವಿರಿ. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ.

ತುಲಾ ರಾಶಿ :

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ನಿಮ್ಮ ಯೋಜನೆಗಳು ಯಶಸ್ವಿಯಾಗಿ ಮುಂದುವರೆಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲವೊಂದು ತೊಂದರೆಗಳು ಎದುರಾಗಬಹುದು. ಆದರೆ ನೀವು ಅದರಲ್ಲಿಂದ ಹೊರಬಂದು ಗೆಲುವು ಸಾಧಿಸುವಿರಿ. ಯಾವುದೇ ಕಾರಣಕ್ಕೂ ವಿಷಾದಕ್ಕೆ ಆಸ್ಪದ ಬೇಡ. ಸಕಾರಾತ್ಮಕ ಆಲೋಚನೆ ಇರಲಿ. ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು. ಇದು ಜಾಣತನವೂ ಹೌದು.

ವೃಶ್ಚಿಕ ರಾಶಿ :

ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ನಿಮ್ಮ ಸಹಾಯದಿಂದ ಸದುಪಯೋಗ ಪಡೆದು ನಿಮ್ಮನ್ನು ಬಿಟ್ಟುಹೋಗಿದವರು ಕಳಪೆ ನಡೆ ತೋರುತ್ತಾರೆ. ಕಾರ್ಯಕ್ಷೇತ್ರದಲ್ಲಿ ನೀವು ಉತ್ತಮ ಪ್ರದರ್ಶನ ನೀಡುವಿರಿ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ.

ಧನು ರಾಶಿ :

ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಆರ್ಥಿಕವಾಗಿ ಲಾಭದ ಸಾಧ್ಯತೆ ಇದೆ, ಆದರೆ ಸಂಯಮ ಅಗತ್ಯ. ಅಲಕ್ಷ್ಯದಿಂದ ನಿಗದಿತ ಕಾರ್ಯಗಳಲ್ಲಿ ವಿಳಂಬ ಸಂಭವಿಸಬಹುದು. ಭಯ ಅಥವಾ ಆತಂಕ ಕಡಿಮೆಯಾಗುತ್ತದೆ, ಶಾಂತಿಗೆ ದಾರಿ ತೆರೆಯುತ್ತದೆ. ವಾಹನ ಚಾಲನೆಗೆ ಹೆಚ್ಚಿನ ಎಚ್ಚರತೆ ಅಗತ್ಯ. ವಿದೇಶಕ್ಕೆ ಬೇಕಾದ ತಯಾರಿಗಳನ್ನು ಮಾಡುವಿರಿ. ಸ್ನೇಹಿತನ ಮನೆಯಲ್ಲಿ ಇಂದು ಹಬ್ಬದ ವಾತಾವರಣವು ಇರಲಿದೆ.

ಮಕರ ರಾಶಿ :

ಸಾರ್ವತ್ರಿಕವಾಗಿ ನಿಮ್ಮ ಸಂಗಾತಿಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಸಾಮಾಜಿಕ ಜೀವನ ಚಟುವಟಿಕೆಯಿಂದ ತುಂಬಿರುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವುದು ಸಂತೋಷ ನೀಡುತ್ತದೆ ಮತ್ತು ಹೊಸ ಸಂಪರ್ಕಗಳು ಉದಯಿಸುತ್ತವೆ. ಕೆಲಸದಲ್ಲಿ ಗಮನ ಕಡಿಮೆಯಾಗಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು.

ಕುಂಭ ರಾಶಿ :

ಕಾನೂನಿನಲ್ಲಿ ನಿಮಗೆಬಜಯ ಸಿಗದೆಂಬ ಬೇಸರ. ತಂದೆಗೆ ಸಮಾನವಾದವರ ಬಳಿ ಹಿತೋಪದೇಶವನ್ನು ಆಲಿಸಿ. ಸೌಮ್ಯವಾಗಿ ಕಾರ್ಯನಿರ್ವಹಿಸಬೇಕು. ಹಳೆಯ ವಿಚಾರಗಳು ಭುಗಿಲೇಳುವ ಸಾಧ್ಯತೆ ಇದೆ. ಭಾವನೆಗಳ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದು ಅಗತ್ಯ. ತೊಂದರೆಯಾಗುವುದು ಗೊತ್ತಿದ್ದರೂ ಬೇಕೆಂದೇ ಸಿಕ್ಕಿಹಾಕಿಕೊಳ್ಳುವಿರಿ. ವಿಷಯದಲ್ಲಿ ನೀವು ಗೊಂದಲವಿರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡುವಿರಿ.

ಇದನ್ನೂ ಓದಿ: ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್?

ಮೀನ ರಾಶಿ :

ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಅಪ್ರಬುದ್ಧರ ಎದುರು ನಿಮ್ಮ ಮನೆಯ ವ್ಯವಹಾರಗಳನ್ನು ಹೇಳಬೇಡಿ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ಆದರೆ ಸಹನೆ ಮತ್ತು ಅಂತರಾಳದ ನಿರ್ವಹಣೆ ಅಗತ್ಯ. ಕುಟುಂಬದೊಂದಿಗೆ ಕಳೆಯುವ ಸಮಯದಿಂದ ಮಾನಸಿಕ ಶಾಂತಿ ಲಭಿಸುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಮುಗಿಸಿಬಿಡಿ, ಕಾಯುವುದು ಬೇಡ.

– ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಡಿ ಇಲ್ಲದಿದ್ರೆ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ – Kannada News

ಬೆಂಗಳೂರು, (ಜೂನ್ 08): ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಬೆಂಗಳೂರು ನಗರದ ಪಬ್‌ಗಳು, ಬಾರ್‌ಗಳು ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ಕಠಿಣ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದಾರೆ.

ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಅವರಿಗೆ ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೆವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮದ್ಯ ಸರಬರಾಜು ಮಾಡುವ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಂಶೋಧಕರು ನಡೆಸಿದ ಅಧ್ಯಯನದಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಯಸ್ಸಿನ ಪರಿಶೀಲನೆ ಕಡ್ಡಾಯ

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿರುವ ಪ್ರಿಯಾಂಕ್ ಖರ್ಗೆ, ಎಲ್ಲ ಪಬ್‌ಗಳು, ಬ್ರೂವರೀಸ್, ಬಾರ್‌, ಕ್ಲಬ್‌ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್ ನೀಡುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಇತ್ತೀಚಿನ ಅಧ್ಯಯನವು ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಸೇವನೆಯಿಂದಾಗಿ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ 33% ಜನರು ಮದ್ಯಪಾನಕ್ಕೆ ದಾಸರಾಗಿದ್ದಾರೆ. ಸುಮಾರು 18% ಜನರು ತಂಬಾಕು ವ್ಯಸನಕ್ಕೆ ಒಳಗಾಗಿದ್ದಾರೆ. ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ. ಇದು ಕೇವಲ ಪರವಾನಗಿ ಸಮಸ್ಯೆಯಲ್ಲ. ಇದು ಯುವ ಸುರಕ್ಷತೆ ಮತ್ತು ಸಾರ್ವಜನಿಕ-ಆರೋಗ್ಯದ ವಿಚಾರ. ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳು ಗ್ರಾಹಕರ ಪ್ರವೇಶ ಮತ್ತು ಮದ್ಯ ಪೂರೈಕೆಯ ಮೊದಲು ಕಟ್ಟುನಿಟ್ಟಾದ ವಯಸ್ಸಿನ ಪರಿಶೀಲನಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ನಿರ್ದೇಶನಗಳು

  •  ಮಾನ್ಯವಾದ ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ
  •  ಸರ್ಕಾರ ನೀಡಿದ ವಯಸ್ಸಿನ ಪುರಾವೆ ಕಡ್ಡಾಯ
  •  ಅಪ್ರಾಪ್ತ ವಯಸ್ಕರಿಗೆ ಸೇವೆ ಸಲ್ಲಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ
  • ಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿ ಹೊಂದಿರುವವರೇ ಹೊಣೆಗಾರರು
  • ಪ್ರವೇಶ ದ್ವಾರದಲ್ಲಿರುವ ಸಿಸಿಟಿವಿ ಕಾರ್ಯನಿರ್ವಹಿಸಬೇಕು ಮತ್ತು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು
  •  ಸಂಸ್ಥೆಗಳು, ಆರ್‌ಡಬ್ಲ್ಯೂಎಗಳು ಮತ್ತು ನಾಗರಿಕ ಗುಂಪುಗಳೊಂದಿಗೆ ಪೊಲೀಸ್ ಸಮನ್ವಯ
  •  ವಾಣಿಜ್ಯ ಲಾಭಕ್ಕಾಗಿ ನಮ್ಮ ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ನಷ್ಟವನ್ನು ಭರಿಸಲು ಸಾಧ್ಯವಿಲ್ಲ.
  • ಕರ್ನಾಟಕವು ಅದಕ್ಕೆ ಅವಕಾಶ ಕೊಡುವ ಸಂಸ್ಥೆಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅನುಸರಿಸುತ್ತದೆ.
  • ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ”. ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಅಪರಾಧ.

ಹೀಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಟ್ಟುನಿಟ್ಟಿನಲ ನಿರ್ದೇಶನಗಳ ನೀಡುವ ಮೂಲಕ ಅಪ್ರಾಪ್ತರ ಮದ್ಯದ ಚಟದಿಂದ ದೂರ ಮಾಡುವ ಪ್ರಯತ್ನ ನಡೆಸಿದ್ದಾರೆ.

Source link

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ ಇಷ್ಟು ಕಡಿಮೆ ಮೊತ್ತ ಪಡೆದಿರುವುದರ ಹಿಂದೆ ದೊಡ್ಡದೊಂದು ಪ್ಲ್ಯಾನ್ ಅಡಗಿದೆ.

ವರದಿಗಳ ಪ್ರಕಾರ, ಅಕ್ಷಯ್ ಕುಮಾರ್ ಅವರು ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆಯುವ ಬದಲು ಪ್ರಾಫಿಟ್ ಶೇರಿಂಗ್, ಅಂದರೆ ಚಿತ್ರದ ಲಾಭದಲ್ಲಿ ಪಾಲು ಪಡೆಯುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಚಿತ್ರದ ಕಥೆ ಹಾಗೂ ಮಾರುಕಟ್ಟೆಯ ಮೇಲಿರುವ ನಂಬಿಕೆಯಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ಒಪ್ಪಂದದ ಪ್ರಕಾರ, ಸಿನಿಮಾ ಬಿಡುಗಡೆಯಾದ ನಂತರ ಗಳಿಸುವ ಒಟ್ಟು ಆದಾಯದಲ್ಲಿ ಬರೋಬ್ಬರಿ ಶೇ.72ರಷ್ಟು ದೊಡ್ಡ ಪಾಲು ಅಕ್ಷಯ್ ಕುಮಾರ್ ಅವರ ಜೇಬು ಸೇರಲಿದೆ. ಉಳಿದ ಶೇ.28ರಷ್ಟು ಪಾಲು ಮಾತ್ರ ನಿರ್ಮಾಪಕರ ಬಳಿ ಉಳಿಯಲಿದೆ. ಹೀಗಾಗಿ, ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದರೆ ಅಕ್ಷಯ್ ಕುಮಾರ್ ಅವರಿಗೆ ನೂರಾರು ಕೋಟಿ ರೂಪಾಯಿ ಲಾಭ ಸಿಗಲಿದೆ.

‘ಫ್ರೀ ಪ್ರೆಸ್ ಜರ್ನಲ್’ ವರದಿಯ ಪ್ರಕಾರ, ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಥಿಯೇಟರ್‌ಗೆ ಬರುವ ಮುನ್ನವೇ ತನ್ನ ಬಂಡವಾಳದ ಬಹುದೊಡ್ಡ ಭಾಗವನ್ನು ಸುರಕ್ಷಿತವಾಗಿ ರಿಕವರಿ ಮಾಡಿಕೊಂಡಿದೆ. ಚಿತ್ರದ ಒಟಿಟಿ, ಸ್ಯಾಟಲೈಟ್ ಮತ್ತು ಆಡಿಯೋ ಹಕ್ಕುಗಳ ಮಾರಾಟದಿಂದಲೇ ನಿರ್ಮಾಪಕರು ಈಗಾಗಲೇ ಸುಮಾರು 120 ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: 7.1 ಕೋಟಿ ರೂಪಾಯಿಗೆ 2 ಫ್ಲಾಟ್‌ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್

ಬಾಲಿವುಡ್‌ನಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರಂತಹ ಸೂಪರ್‌ಸ್ಟಾರ್‌ಗಳು ಹೆಚ್ಚಾಗಿ ಇಂತಹ ಪ್ರಾಫಿಟ್ ಶೇರಿಂಗ್ ಮಾದರಿಯನ್ನೇ ಅನುಸರಿಸುತ್ತಾರೆ. ಇತ್ತೀಚೆಗೆ ‘ಧುರಂಧರ್’ ಚಿತ್ರಕ್ಕಾಗಿ ನಟ ರಣವೀರ್ ಸಿಂಗ್ ಕೂಡ ಇದೇ ಹಾದಿ ಹಿಡಿದಿದ್ದರು. ಈಗ ಅಕ್ಷಯ್ ಕುಮಾರ್ ಕೂಡ ಅದೇ ಮಾದರಿಯನ್ನು ಅಳವಡಿಸಿಕೊಂಡಿದ್ದು, ಈ ಮಲ್ಟಿಸ್ಟಾರರ್ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್? – Kannada News

2026ರ ಜೂನ್ 07ರಿಂದ ಜೂನ್ 13ರವರೆಗೆ ಎರಡನೇ ವಾರವಾಗಿದ್ದು ಗ್ರಹಗಳ ಉಚ್ಚಸ್ಥಾನ ಸ್ವಕ್ಷೇತ್ರ ಸಂಚಾರದ ಫಲವಾಗಿ ಶುಭ ಫಲಗಳು ನಿಮಗೆ ಲಭ್ಯವಾಗಲಿ.

ಮೇಷ ರಾಶಿ:

ಸ್ವಕ್ಷೇತ್ರದಲ್ಲಿರುವ ಲಗ್ನಾಧಿಪತಿ ಮಂಗಳ ನಿಮಗೆ ಅದ್ಭುತ ಶಕ್ತಿ ನೀಡಲಿದ್ದಾನೆ. ರಿಯಲ್ ಎಸ್ಟೇಟ್ ಹಾಗೂ ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ತಕ್ಷಣದ ಧನಲಾಭ ಕಾಯ್ದಿರಿಸಿದೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದ್ದು, ಶತ್ರುಗಳು ಪರಾಜಯಗೊಳ್ಳಲಿದ್ದಾರೆ. ಮಾತು ಕಠಿಣವಾಗದಂತೆ ನೋಡಿಕೊಳ್ಳಿ.

​ವೃಷಭ ರಾಶಿ:

ನಿಮ್ಮ ರಾಶಿಯಲ್ಲೇ ಸೂರ್ಯ ಮತ್ತು ಚಂದ್ರರ ಜುಗಲ್ಬಂದಿ ಇರುವುದರಿಂದ ಸಮಾಜದಲ್ಲಿ ಗೌರವ, ಕೀರ್ತಿ ಹೆಚ್ಚಲಿದೆ. ಆಡಳಿತಾತ್ಮಕ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿವೆ. ಕಣ್ಣಿನ ಸಣ್ಣಪುಟ್ಟ ಸಮಸ್ಯೆ ಅಥವಾ ಉಷ್ಣ ಬಾಧೆ ಇರಬಹುದು. ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಹರಿದುಬರಲಿದೆ.

​ಮಿಥುನ ರಾಶಿ:

ಬುಧನು ನಿಮ್ಮದೇ ರಾಶಿಯಲ್ಲಿ ಬಲಿಷ್ಠನಾಗಿರುವುದರಿಂದ ಕೌಶಲ್ಯ ಹಾಗೂ ಬುದ್ಧಿವಂತಿಕೆಗೆ ಭಾರಿ ಮನ್ನಣೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೊಸ ಒಪ್ಪಂದಗಳು ಕೈಗೂಡಲಿವೆ. ಕಲಾತ್ಮಕ ಮತ್ತು ಬರವಣಿಗೆ ಕ್ಷೇತ್ರದಲ್ಲಿರುವವರಿಗೆ ಸುವರ್ಣ ಅವಕಾಶಗಳು ಲಭಿಸಲಿವೆ. ದೂರದ ಪ್ರಯಾಣ ಯಶಸ್ವಿಯಾಗಲಿದೆ.

​ಕರ್ಕಾಟಕ ರಾಶಿ:

ಗುರು ಮತ್ತು ಶುಕ್ರರು ನಿಮ್ಮ ರಾಶಿಯಲ್ಲಿ ಉಚ್ಛ ಸ್ಥಿತಿಗೆ ಹತ್ತಿರ ಇರುವುದರಿಂದ ರಾಜಯೋಗದ ಅನುಭವವಾಗಲಿದೆ. ಧನಾಗಮನಕ್ಕೆ ಇದ್ದ ಅಡೆತಡೆಗಳು ಸಂಪೂರ್ಣ ನಿವಾರಣೆಯಾಗಲಿವೆ. ಮನೆಯಲ್ಲಿ ಮದುವೆ ಅಥವಾ ಶುಭ ಕಾರ್ಯಗಳ ಚರ್ಚೆ ಮುನ್ನೆಲೆಗೆ ಬರಲಿದೆ. ಆಭರಣ ಮತ್ತು ವಾಹನ ಖರೀದಿ ಯೋಗವಿದೆ.

ಸಿಂಹ ರಾಶಿ:

ವ್ಯಯ ಮತ್ತು ಲಾಭ ಸ್ಥಾನಗಳ ಏರುಪೇರಿನಿಂದಾಗಿ ಈ ವಾರ ಖರ್ಚುಗಳು ಹೆಚ್ಚಾಗಲಿವೆ. ಆದಾಗ್ಯೂ, ಪಿತ್ರಾರ್ಜಿತ ಆಸ್ತಿಯಿಂದ ಬರಬೇಕಿದ್ದ ಪಾಲು ನಿಮ್ಮ ಕೈ ಸೇರಬಹುದು. ತಾಯಿಯ ಆರೋಗ್ಯದ ಕಡೆ ಗಮನಹರಿಸಿ. ಆಧ್ಯಾತ್ಮಿಕ ಕ್ಷೇತ್ರ ಹಾಗೂ ಧಾರ್ಮಿಕ ಪ್ರವಾಸಗಳಿಗೆ ಮನಸ್ಸು ವಾಲುವುದರಿಂದ ನೆಮ್ಮದಿ ಸಿಗಲಿದೆ.

ಕನ್ಯಾ ರಾಶಿ:

ಹತ್ತನೇ ಮನೆಯ ಬುಧನ ದೃಷ್ಟಿಯಿಂದಾಗಿ ವೃತ್ತಿಜೀವನದಲ್ಲಿ ದೊಡ್ಡ ಜಿಗಿತ ಕಂಡುಬರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಈ ವಾರ ಶುಭ ವಾರ್ತೆ ಕೇಳುವಿರಿ. ಹಿರಿಯ ಅಧಿಕಾರಿಗಳು ಹಾಗೂ ಮಿತ್ರರಿಂದ ಸಂಪೂರ್ಣ ಸಹಕಾರ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಅತ್ಯಂತ ಆಶಾದಾಯಕವಾಗಿರುತ್ತದೆ.

​ತುಲಾ ರಾಶಿ:

ಭಾಗ್ಯಸ್ಥಾನ ಮತ್ತು ಕರ್ಮಸ್ಥಾನಗಳ ಗ್ರಹಬಲದಿಂದಾಗಿ ಹೊಸ ಉದ್ಯೋಗಾವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಆದರೆ, ಶನಿಯ ದೃಷ್ಟಿಯಿಂದಾಗಿ ಕೆಲಸಗಳು ಕೊನೆಯ ಕ್ಷಣದಲ್ಲಿ ವಿಳಂಬವಾಗಬಹುದು. ದಾಂಪತ್ಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡದಂತೆ ಪರಸ್ಪರ ಹೊಂದಾಣಿಕೆ ಕಾಯ್ದುಕೊಳ್ಳುವುದು ಅನಿವಾರ್ಯ.

ವೃಶ್ಚಿಕ ರಾಶಿ:

ಅಷ್ಟಮದಲ್ಲಿರುವ ಗ್ರಹಗಳ ಪ್ರಭಾವದಿಂದಾಗಿ ಅನಿರೀಕ್ಷಿತ ಧನಲಾಭ ಅಥವಾ ವಿಮೆಯ ಹಣ ಕೈಸೇರಲಿದೆ. ಆದರೆ ರಸ್ತೆ ಸಂಚಾರದಲ್ಲಿ ಅತಿ ಹೆಚ್ಚಿನ ಜಾಗ್ರತೆ ಅಗತ್ಯ. ರಹಸ್ಯ ಶತ್ರುಗಳ ಕಾಟವಿದ್ದರೂ ನಿಮ್ಮ ಆಂತರಿಕ ಶಕ್ತಿಯಿಂದ ಅವರನ್ನು ಮೆಟ್ಟಿ ನಿಲ್ಲುವಿರಿ. ದೇವತಾ ಆರಾಧನೆಯಿಂದ ಮಾನಸಿಕ ಶಾಂತಿ ಸಿಗಲಿದೆ.

ಧನು ರಾಶಿ:

ನಿಮ್ಮದೇ ಲಗ್ನದಲ್ಲಿ ಗುರು-ಶುಕ್ರರ ಶುಭ ದೃಷ್ಟಿ ಇರುವುದರಿಂದ ವ್ಯಕ್ತಿತ್ವದಲ್ಲಿ ಹೊಸ ತೇಜಸ್ಸು ಕಾಣಿಸಿಕೊಳ್ಳಲಿದೆ. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಂಡವರಿಗೆ ಉತ್ತಮ ಜನಬೆಂಬಲ ಸಿಗಲಿದೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ಆರೋಗ್ಯದಲ್ಲಿನ ಏರುಪೇರುಗಳು ಸುಧಾರಿಸಲಿವೆ.

ಮಕರ ರಾಶಿ:

ಆರನೇ ಮನೆಯ ಗ್ರಹಬಲದಿಂದಾಗಿ ಕೋರ್ಟ್ ಕಚೇರಿ ಕಲಾಪಗಳು ಹಾಗೂ ಹಳೆಯ ಸಾಲದ ಬಾಧ್ಯತೆಗಳಿಂದ ಮುಕ್ತಿ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವವರಿಗೆ ಈ ವಾರ ಅತ್ಯಂತ ಅನುಕೂಲಕರವಾಗಿದೆ. ಕೃಷಿ ಅಥವಾ ತಾಂತ್ರಿಕ ವಲಯದಲ್ಲಿರುವವರಿಗೆ ಆದಾಯದ ಮೂಲಗಳು ಹೆಚ್ಚಾಗಲಿವೆ.

​ಕುಂಭ ರಾಶಿ:

ಪಂಚಮ ಸ್ಥಾನದ ಗ್ರಹಚಾರದಿಂದಾಗಿ ಮಕ್ಕಳ ಕಡೆಯಿಂದ ಸಂತಸದ ಸುದ್ದಿ ಬರಲಿದೆ. ಷೇರು ಮಾರುಕಟ್ಟೆ ಅಥವಾ ಹಠಾತ್ ಲಾಭ ತರುವ ವ್ಯವಹಾರಗಳಲ್ಲಿ ಯೋಚಿಸಿ ಹೂಡಿಕೆ ಮಾಡಿ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಹಳೆಯ ಬಾಕಿ ವಸೂಲಿಯಾಗುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಡುವಿರಿ.

ಇದನ್ನೂ ಓದಿ: ಗ್ರಹ ದೋಷ ಎಂದರೇನು? ಭಯಪಡುವ ಅಗತ್ಯವಿಲ್ಲ, ಇಲ್ಲಿವೆ ಸರಳ ಪರಿಹಾರಗಳು!

​ಮೀನ ರಾಶಿ:

ನಿಮ್ಮದೇ ರಾಶಿಯಲ್ಲಿ ಶನಿ ದೇವನ ಸಂಚಾರವಿರುವುದರಿಂದ ಜವಾಬ್ದಾರಿಗಳ ಹೊರೆ ಹೆಚ್ಚಾಗಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಡವಾಗಿ ಸಿಕ್ಕರೂ ನಿರಾಸೆಯಾಗುವುದಿಲ್ಲ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ವ್ಯಯವಾಗಲಿದೆ. ಉದ್ಯೋಗಸ್ಥರು ಸಹೋದ್ಯೋಗಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಸಿವಾದಾಗ ಸಿಕ್ಕಾಪಟ್ಟೆ ಕೋಪ ಬರೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಆಹಾರವು ನಮ್ಮ ದೇಹಕ್ಕೆ ಅತ್ಯಗತ್ಯವಾಗಿ ಬೇಕೇಬೇಕು. ನೀರಿನಂತೆ ಆಹಾರವು ನಮ್ಮ ದೇಹಕ್ಕೆ ಮೂಲಭೂತ ಅವಶ್ಯಕತೆಯಾಗಿದೆ. ಇದು ನಮ್ಮ ಸಕ್ರಿಯರಾಗಿಲು, ಚೈತನ್ಯಶೀಲರಾಗಿರಲು ಸಹಾಯ ಮಾಡುತ್ತದೆ. ಅದೇ ಹೊಟ್ಟೆಗೆ ಸರಿಯಾಗಿ ಊಟ ಬೀಳದಿದ್ದರೆ ಅಥವಾ ಸಿಕ್ಕಾಪಟ್ಟೆ ಹಸಿದಾಗ (hungry) ಹೆಚ್ಚಿನವರಿಗೆ ಕಿರಿಕಿರಿ ಉಂಟಾಗುತ್ತದೆ, ಸಣ್ಣಪುಟ್ಟ ವಿಚಾರಗಳಿಗೂ ಕೋಪ ಬರುತ್ತದೆ. ಇದೇ ರೀತಿ ನಿಮಗೂ ಹಸಿವಾದಾಗ ಜಾಸ್ತಿ ಕೋಪ ಬರುತ್ತಾ? ಹಸಿದಾಗ ಕೋಪ ಬರೋದೇಕೆ, ಇದರ ಹಿಂದಿನ ವೈಜ್ಞಾನಿಕ ಕಾರಣವೇನು ಎಂಬುದರ ಸಂಪೂರ್ಣ ವಿವರವನ್ನು ತಿಳಿಯಿರಿ.

ಹಸಿವಾದಾಗ ಕೋಪ ಬರೋದೇಕೆ?

ನಾವು ಊಟ ಮಾಡದಿದ್ದಾಗ, ನಮ್ಮ ರಕ್ತದಲ್ಲಿನ ಸಕ್ಕರೆ ಕಡಿಮೆಯಾಗುತ್ತದೆ, ಇದು ನಮ್ಮನ್ನು ಕಿರಿಕಿರಿಗೊಳಿಸುತ್ತದೆ.  ರಕ್ತದಲ್ಲಿನ ಸಕ್ಕರೆ ಕಡಿಮೆಯಾದಾಗ,  ದೇಹವು ಗ್ಲೂಕೋಸ್ ಮಟ್ಟವನ್ನು ಸಾಮಾನ್ಯಗೊಳಿಸಲು ಕಾರ್ಟಿಸೋಲ್ (ಒತ್ತಡದ ಹಾರ್ಮೋನ್) ಮತ್ತು ಅಡ್ರಿನಾಲಿನ್ (ಅಪಾಯದ ಸಂದರ್ಭಗಳಲ್ಲಿ ಸಕ್ರಿಯಗೊಳ್ಳುವ ಹಾರ್ಮೋನ್)  ಹಾರ್ಮೋನ್ ಅನ್ನು ಬಿಡುಗಡೆ ಮಾಡುತ್ತದೆ. ಈ ಎರಡೂ  ವ್ಯಕ್ತಿಯ ಹೋರಾಟ ಅಥವಾ ಒತ್ತಡ, ಕೋಪದ ಸ್ಥಿತಿಯನ್ನು ಪ್ರಚೋದಿಸುವ  ಹಾರ್ಮೋನುಗಳಾಗಿವೆ. ಈ ಹಾರ್ಮೋನ್‌ ಬಿಡುಗಡೆ ಕಾರಣದಿಂದಲೇ ಹೆಚ್ಚಿನವರು ಹಸಿವಾದಾಗ ಕೋಪಗೊಳ್ಳುವುದು. ಅಲ್ಲದೆ ದೇಹದಲ್ಲಿ ಗ್ಲೂಕೋಸ್‌ ಮಟ್ಟ ಕಡಿಮೆಯಾದ ತಕ್ಷಣ, ಮೆದುಳು ಒತ್ತಡಕ್ಕೊಳಗಾಗುತ್ತದೆ ಮತ್ತು ಮನಸ್ಥಿತಿ ಕಿರಿಕಿರಿಗೊಳ್ಳುತ್ತದೆ. ಇದೇ ಕಾರಣದಿಂದಲೇ ನಾವು ಹಸಿದಾಗ ಸುಲಭವಾಗಿ ಕೋಪಗೊಳ್ಳುವುದು.

ಹಸಿವಾದಾಗ ದೇಹದಲ್ಲಿ ಯಾವ ಬದಲಾವಣೆಗಳು ಸಂಭವಿಸುತ್ತವೆ?

ಹಸಿವಿನ ನಂತರ, ಕಿರಿಕಿರಿ ಹೆಚ್ಚಾಗುತ್ತದೆ, ಗಮನಹರಿಸಲು ಕಷ್ಟವಾಗುತ್ತದೆ. ತಲೆನೋವು ಅಥವಾ ಆಯಾಸ, ಹೆಚ್ಚಿದ ಹೃದಯ ಬಡಿತ, ನಿದ್ರೆ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಈ ಎಲ್ಲಾ ಸಂಕೇತಗಳು ನಿಮ್ಮ ದೇಹಕ್ಕೆ ಈಗ ಆಹಾರದ ಅಗತ್ಯವಿದೆ ಎಂದು ಸೂಚಿಸುತ್ತವೆ. ಆದರೆ ನೀವು ಅದನ್ನು ನಿರ್ಲಕ್ಷಿಸಿದರೆ, ನಿಮ್ಮ ಅಭ್ಯಾಸ ಕ್ರಮೇಣ ನಿಮ್ಮ ಮನಸ್ಥಿತಿ ಹದಗೆಡಲು ಕಾರಣವಾಗುತ್ತದೆ.

ಇದನ್ನೂ ಓದಿ: ಮೊಬೈಲ್‌ ಇಂಟರ್ನೆಟ್‌ ವ್ಯವಸ್ಥೆಯೇ ಇಲ್ಲದ ಜಗತ್ತಿನ ಏಕೈಕ ದೇಶವಿದು

ಹಸಿವಾಗಲು ಪ್ರಾರಂಭಿಸಿದಾಗ ಅದು ನಮ್ಮ ಭಾವನೆಗಳನ್ನು ಇನ್ನಷ್ಟು ಹದಗೆಡಿಸಬಹುದು. ಇದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಸಿವಾದಾಗ ಗ್ಲೂಕೋಸ್‌ ಮಟ್ಟ ಕಡಿಮೆಯಾಗುತ್ತದೆ. ಗ್ಲೂಕೋಸ್ ಕೊರತೆಯು ನಮ್ಮ ಭಾವನೆಗಳು ಮತ್ತು ನಡವಳಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಮೆದುಳಿನ ಭಾಗದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹಸಿದಾಗ ನಮ್ಮ ಭಾವನೆ ಹದಗೆಡುತ್ತವೆ. ಭಾವನೆಗಳನ್ನು ನಿರ್ವಹಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ, ಇದು ಸಣ್ಣ ವಿಷಯಗಳ ಮೇಲೂ ನಿಯಂತ್ರಣ ಕಳೆದುಕೊಳ್ಳಲು ಕಾರಣವಾಗುತ್ತದೆ.

ಹಾಗಾಗಿ ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ಸಣ್ಣ ಭಾಗಗಳಲ್ಲಿ ಊಟ ಮಾಡಬೇಕು, ಹಸಿವಾದ ತಕ್ಷಣ ಆರೋಗ್ಯಕ ಆಹಾರವನ್ನು ಸೇವಿಸಿ. ಆರೋಗ್ಯಕರ ಆಹಾರವು ನಿಮಿಷಗಳಲ್ಲಿ ನಿಮ್ಮನ್ನು ಮನಸ್ಥಿತಿಯನ್ನು  ಉತ್ತಮಗೊಳಿಸುತ್ತದೆ. ಅಲ್ಲದೆ ಹಸಿವನ್ನು ನಿಯಂತ್ರಿಸಲು ನೀವು ಹಣ್ಣುಗಳು ಅಥವಾ ಒಣಗಿದ ಹಣ್ಣುಗಳಂತಹ ಆರೋಗ್ಯಕರ ತಿನಿಸುಗಳನ್ನು ಸೇವಿಸಿ. ಪ್ರತಿ ಗಂಟೆಗೊಮ್ಮೆ ನೀರನ್ನು ಕುಡಿಯಿರಿ. ಇದು ದೇಹವನ್ನು ಹೈಡ್ರೇಟ್‌ ಆಗಿಡಲು ಕೂಡ ಸಹಾಯ ಮಾಡುತ್ತದೆ. ಯಾವುದೇ ಕಾರಣಕ್ಕೂ ಜಂಕ್‌ ಫುಡ್‌ ತಿನ್ನಲು ಹೋಗಬೇಡಿ, ಇವು ಆರೋಗ್ಯಕ್ಕೆ ಮತ್ತಷ್ಟು ಹಾನಿ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version