Headlines

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ರೌಡಿಗಳ ವಿರುದ್ಧ ಸಮರ ಸಾರಿದ ಪೊಲೀಸ್ರು, ವಿಚಾರಣೆಗೆ ಬರದೇ ಆಟವಾಡ್ತಿದ್ದ ರೌಡಿ ಅರೆಸ್ಟ್​ – Kannada News

ಬೆಂಗಳೂರು, (ಜೂನ್ 08): ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಪೊಲೀಸರು (Police), ರೌಡಿಗಳನ್ನು (Rowdy)  ಮಟ್ಟಹಾಕಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂತೆ ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಬೆಂಗಳೂರು ಸಿಸಿಬಿ ಹೆಡೆಮುರಿಕಟ್ಟಿದೆ. ಹೌದು….ಕೋರ್ಟ್​​ ವಾರಂಟ್ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ವಿನೋಬನಗರದ ರೌಡಿಶೀಟರ್ ಶಾಹಿದ್ ಪಾಷಾನನ್ನು ಬಂಧಿಸಿದ್ದಾರೆ.  ಶಾಹಿದ್ ಪಾಷಾ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು, ಪ್ರಕರಣಗಳ…

Read More

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್‌ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್ – Kannada News

ಬೆಂಗಳೂರು, ಜೂ.8 : ಕರ್ನಾಟಕದಲ್ಲಿ ಪುರುಷರ ನಡುವಿನ ಲೈಂಗಿಕ ಸಂಪರ್ಕದ (Male-to-Male Sexual Contact) ಕಾರಣದಿಂದಾಗಿ ಎಚ್‌ಐವಿ/ಏಡ್ಸ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರತಿಬಂಧಕ ಸೊಸೈಟಿ (KSAPS) ನೀಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಎಚ್‌ಐವಿ ಪ್ರಕರಣಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ದೊಡ್ಡ ಮಟ್ಟದಲ್ಲಿ ಜಿಗಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಪ್ರಕರಣ: 2023-2024ರ ಅವಧಿಯಲ್ಲಿ: 44,581 ಪ್ರಕರಣಗಳು 2024-2025ರ ಅವಧಿಯಲ್ಲಿ: 62,664 ಪ್ರಕರಣಗಳು 2025-2026ರ ಪ್ರಸ್ತುತ ಅವಧಿಯಲ್ಲಿ:…

Read More

Viral: ತಿಂಗಳಿಗೆ ಲಕ್ಷ ಸಂಪಾದನೆಯಿದ್ರೂ ವೀಕೆಂಡ್‌ನಲ್ಲಿ ರ‍್ಯಾಪಿಡೋ ಬೈಕ್ ಓಡಿಸುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್ – Kannada News

ಬೆಂಗಳೂರು, ಜೂನ್ 08: ಈಗಿನ ಕಾಲದಲ್ಲಿ ಸಂಪಾದನೆ ಎಷ್ಟಿದ್ರು ಕಡಿಮೆಯೇ. ಹೌದು, ಬೆಂಗಳೂರು (Bengaluru) ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆಂದು ಬಂದವರಲ್ಲಿ ಅನೇಕರು ಕೈಯಲ್ಲಿ ಒಂದು ಉದ್ಯೋಗವಿದ್ರೂ ಪಾರ್ಟ್ ಟೈಮ್ ಆಗಿ ಇನ್ನೊಂದು ಕೆಲಸ ಮಾಡ್ತಾರೆ. ಇದೀಗ ಎಂಎನ್‌ಸಿ ಕಂಪೆನಿಯಲ್ಲಿ ಕೈ ತುಂಬಾ ಸಂಬಳ ಪಡೆಯುವ ವ್ಯಕ್ತಿಯದ್ದು ಅದೇ ಕಥೆ. ಬೆಂಗಳೂರಿನ ಸಾಫ್ಟ್ ವೇರ್ ಉದ್ಯೋಗಿಯೊಬ್ಬರು ವಾರಾಂತ್ಯದಲ್ಲಿ ರ‍್ಯಾಪಿಡೋ ಬೈಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಈ ಪೋಸ್ಟ್ ಸದ್ಯ  ವೈರಲ್ ಆಗಿದ್ದು,…

Read More

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು – Kannada News

ದಾವಣಗೆರೆ ಕುಡಿಯುವ ನೀರಿನ ಸಮಸ್ಯೆ ದಾವಣಗೆರೆ ಜೂ.8: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಕುಡಿಯುವ ನೀರಿಗಾಗಿ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದ ಸಾರ್ವಜನಿಕರು, ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬಿಲ್ ಕಲೆಕ್ಟರ್ ಮೇಲೆ ಭೀಕರ ಹಲ್ಲೆ…

Read More

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ – Kannada News

ಜಗತ್ತಿನಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಆಡೆಸ್ಸಿ’ ಚಿತ್ರದ ಮುಂಗಡ ಬುಕಿಂಗ್ (The Odyssey Advance Booking) ಭಾರತದಲ್ಲಿ ಆರಂಭವಾಗಿದೆ. ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಬುಕಿಂಗ್ ಶುರು ಆಗುತ್ತಿದ್ದಂತೆಯೇ ಟಿಕೆಟ್‌ಗಳಿಗಾಗಿ ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ‘ದಿ ಆಡೆಸ್ಸಿ’ (The Odyssey) ಸಿನಿಮಾ ಮುಂದಿನ ತಿಂಗಳು (ಜುಲೈ 17) ಬಿಡುಗಡೆಯಾಗಲಿದ್ದರೂ, ಈಗಲೇ ಟಿಕೆಟ್‌ಗೆ ಈ ಮಟ್ಟದ ಬೇಡಿಕೆ ಸೃಷ್ಟಿಯಾಗಿರುವುದು ಚಿತ್ರರಂಗವನ್ನೇ ಬೆರಗುಗೊಳಿಸಿದೆ. ಇದರ ನಡುವೆ, ಉತ್ತರ ಭಾರತದಲ್ಲಿ ಟಿಕೆಟ್…

Read More

ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು? – Kannada News

ಐಷಾರಾಮಿ ಕಾರುಗಳು (Luxury cars) ಅಥವಾ ದೊಡ್ಡ ಬಂಗಲೆಗಳು ಒಬ್ಬರ ‘ಆರ್ಥಿಕ ಯಶಸ್ಸಿನ’ (Financial Success) ನಿಜವಾದ ಅಳತೆಗೋಲಾಗಲು ಸಾಧ್ಯವೇ ಇಲ್ಲ. ಆರ್ಥಿಕ ಸ್ವಾತಂತ್ರ್ಯದ ಬುಡ ಇಲ್ಲದ ಐಷಾರಾಮ್ಯತೆಯು ಅಡಿಪಾಯ ಇಲ್ಲದ ಕಟ್ಟಡಗಳಂತೆ ಯಾವಾಗ ಬೇಕಾದರೂ ಕುಸಿಯಬಹುದು. ಇತ್ತೀಚಿನ ದಿನಗಳಲ್ಲಿ ಇವೆಲ್ಲವೂ ಕೇವಲ ಸಾಲದ (EMI) ಮೇಲೆ ನಿಂತಿರುವ ‘ದೃಶ್ಯ ವೈಭವ’ ಅಷ್ಟೇ ಆಗಿರಬಹುದು. ಹಾಗಾದರೆ, ಒಬ್ಬ ವ್ಯಕ್ತಿ ನಿಜವಾಗಿಯೂ ಆರ್ಥಿಕವಾಗಿ ಯಶಸ್ವಿಯಾಗಿದ್ದಾನೆ ಅನ್ನಲು ಇರುವ ನೈಜ ಸಂಕೇತಗಳು ಯಾವುವು? ಆರ್ಥಿಕ ತಜ್ಞರ ಪ್ರಕಾರ, ಬ್ಯಾಂಕ್ ಬ್ಯಾಲೆನ್ಸ್…

Read More

IND vs AFG: ಚೊಚ್ಚಲ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಗೆದ್ದು ದಿಗ್ಗಜರ ಪಟ್ಟಿಗೆ ಸೇರಿದ ಮಾನವ್ – Kannada News

ಆತಿಥೇಯ ಟೀಂ ಇಂಡಿಯಾ, ಅಫ್ಘಾನಿಸ್ತಾನ (India vs Afghanistan) ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಮೂರು ದಿನಗಳಲ್ಲಿ ಗೆದ್ದುಕೊಂಡಿತು. ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 300 ರನ್‌ಗಳಿಂದ ಸೋಲಿಸಿತು. ಈ ಮೂಲಕ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆಯನ್ನು ನಿರ್ಮಿಸಿತು. ತಂಡದ ಈ ಐತಿಹಾಸಿಕ ಗೆಲುವಿನ ಪ್ರಮುಖ ಪಾತ್ರವಹಿಸಿದ್ದು, ಚೊಚ್ಚಲ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯವನ್ನಾಡಿದ ಮಾನವ್ ಸುತಾರ್ (Manav Suthar). ಈ ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು…

Read More

ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ – Kannada News

ಟೆಹ್ರಾನ್, ಜೂನ್ 8: ಇಸ್ರೇಲ್ ಮತ್ತು ಇರಾನ್ ನಡುವೆ ಇತ್ತೀಚೆಗೆ ನಡೆದ ಕ್ಷಿಪಣಿ ದಾಳಿಗಳ ಬಳಿಕ, ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಬೈರೂತ್ ಮತ್ತು ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಕಾರವಾಗಿ ಇರಾನ್ (Iran) ಇತ್ತೀಚೆಗೆ ಇಸ್ರೇಲ್ ಮೇಲೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಇರಾನ್‌ನ ಮಿಲಿಟರಿ ಜಂಟಿ ಕಮಾಂಡ್, ಇಸ್ರೇಲ್ ವಿರುದ್ಧದ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ….

Read More

ಮೊಬೈಲ್‌ ಇಂಟರ್ನೆಟ್‌ ವ್ಯವಸ್ಥೆಯೇ ಇಲ್ಲದ ಜಗತ್ತಿನ ಏಕೈಕ ದೇಶವಿದು – Kannada News

ಇಂದಿನ ಈ ಡಿಜಿಟಲ್‌ ಯುಗದಲ್ಲಿ ಇಂಟರ್‌ನೆಟ್‌ (internet) ಇಲ್ಲದೆ ಜೀವನವೇ ಇಲ್ಲ ಎಂಬಂತಾಗಿದೆ. ಈ ಜಗತ್ತಿನಲ್ಲಿರುವ ಬಹುತೇಕ ಜನರು ತಮ್ಮ ದೈನಂದಿನ ಜೀವನದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. ಫುಡ್‌  ಆರ್ಡರ್ ಮಾಡುವುದು, ಕ್ಯಾಬ್ ಬುಕ್ ಮಾಡುವುದು, ಹಣ ವರ್ಗಾವಣೆ ಮಾಡುವುದು, ಶಾಪಿಂಗ್‌ ಮಾಡುವುದು ಅಥವಾ ಪ್ರಪಂಚದ ಯಾವುದೇ ಮೂಲೆಯಲ್ಲಿರುವ  ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಮಾತನಾಡುವುದು ಈ ಎಲ್ಲವೂ ಇಂಟರ್‌ನೆಟ್‌ ಮೂಲಕವೇ ನಡೆಯುತ್ತಿವೆ. ಮುಖ್ಯವಾಗಿ ಉದ್ಯೋಗ ಸ್ಥಳದಲ್ಲೂ ಇಂಟರ್‌ನೆಟ್‌ ಬೇಕೇ ಬೇಕು. ಒಟ್ಟಿನಲ್ಲಿ…

Read More

ದಕ್ಷಿಣ ಅಮೆರಿಕಕ್ಕೆ ಅದಾನಿ ಲಗ್ಗೆ; ಅರ್ಜೆಂಟೀನಾದಲ್ಲಿ 10 ವರ್ಷದ ಗುತ್ತಿಗೆ ಪಡೆದ ಅದಾನಿ ಪೋರ್ಟ್ಸ್ – Kannada News

ನವದೆಹಲಿ, ಜೂನ್ 8: ಭಾರತದ ಅತಿದೊಡ್ಡ ಖಾಸಗಿ ಸಮಗ್ರ ಸಾರಿಗೆ ನಿರ್ವಹಣೆ ಸಂಸ್ಥೆಯಾದ ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್ (APSEZ), ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ದಕ್ಷಿಣ ಅಮೆರಿಕಾದ ಮಾರುಕಟ್ಟೆಗೆ ಮೊದಲ ಪ್ರವೇಶ ಪಡೆದಿದೆ. ಅದಾನಿ ಪೋರ್ಟ್ಸ್ ಸಂಸ್ಥೆಯು ಅರ್ಜೆಂಟೀನಾದಲ್ಲಿ 10 ವರ್ಷಗಳ ಸುದೀರ್ಘ ಅವಧಿಯ ಎಲ್‌ಎನ್‌ಜಿ (LNG – ದ್ರವೀಕೃತ ನೈಸರ್ಗಿಕ ಅನಿಲ) ಸಾಗಣೆ ಮತ್ತು ಮರೈನ್ ಸೇವೆಗಳ (Marine Services) ಗುತ್ತಿಗೆಯನ್ನು ಪಡೆದುಕೊಂಡಿದೆ. ಈ ಒಪ್ಪಂದದೊಂದಿಗೆ ಅದಾನಿ ಪೋರ್ಟ್ಸ್…

Read More