Headlines

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು? – Kannada News | Karavali Box Office Collection Raj B Shetty Starrer Nears 4 Crore Mark After Strong Weekend

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕರಾವಳಿ’ (Karavali Movie) ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ಸಾಧಾರಣ ಕಲೆಕ್ಷನ್ ಮಾಡಿತ್ತು. ಆದರೆ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನ ಕೇವಲ 68 ಲಕ್ಷ ರೂಪಾಯಿ ಗಳಿಸಿದ್ದ ಈ ಚಿತ್ರ, ಆ ಬಳಿಕ ಪ್ರೇಕ್ಷಕರಿಂದ ಸಿಕ್ಕ ಪಾಸಿಟಿವ್ ವಿಮರ್ಶೆಗಳ ಬೆಂಬಲದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸುತ್ತಿದೆ. ಸದ್ಯ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚುತ್ತಿದೆ. ಸಿನಿಮಾದ ಒಟ್ಟೂ ಗಳಿಕೆ ನಾಲ್ಕು ಕೋಟಿ ರೂಪಾಯಿ…

Read More

CWG 2026: ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ! – Kannada News | India Won 4 Medals in Commonwealth Games 2026

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ನಾಲ್ಕನೇ ದಿನದ ಅಂತ್ಯಕ್ಕೆ  ಭಾರತ ಒಟ್ಟು 4 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಪದಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ. ‘ಗೋಲ್ಡನ್ ಹ್ಯಾಟ್ರಿಕ್’: ಭಾರತದ ಸ್ಟಾರ್ ವೇಟ್‌ಲಿಫ್ಟರ್, ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಸ್ನ್ಯಾಚ್‌ನಲ್ಲಿ ಗೇಮ್ಸ್ ದಾಖಲೆಯ 85…

Read More

ದೇಶದ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಮಿತಿ: ಕಾರ್ಯಪಡೆ ಮುನ್ನಡೆಸಲು ನೇಮಕಗೊಂಡ ನಂದನ್ ನಿಲೇಕಣಿ ಯಾರು? – Kannada News | Nandan Nilekani to Lead India’s Exam Reform Task Force for Transparency and Tech

ನವದೆಹಲಿ, ಜುಲೈ 27: ನೀಟ್(NEET) ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಹಾಗೂ ಪಾರದರ್ಶಕತೆ ತರಲು ಪ್ರಧಾನಿ ನರೇಂದ್ರ ಮೋದಿ ಅವರು ‘ಉನ್ನತಾಧಿಕಾರ ಕಾರ್ಯಪಡೆ’ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಈ ತಂತ್ರಜ್ಞಾನ ಆಧಾರಿತ ಸುಧಾರಣಾ ಸಮಿತಿಯ ಮುಖ್ಯಸ್ಥರನ್ನಾಗಿ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಹಾಗೂ ಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರನ್ನು ನೇಮಿಸಲಾಗಿದೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ವಿಷಯ ಪ್ರಕಟಿಸಿರುವ ಪ್ರಧಾನಿ ಮೋದಿ, “ನಮ್ಮ ಪರೀಕ್ಷಾ…

Read More

ನಾಲ್ಕು ದಿನಕ್ಕೆ 200 ಕೋಟಿ ರೂಪಾಯಿ ಗಳಿಸಿದ ‘ಜನ ನಾಯಗನ್’; ಅಸಲಿ ಪರೀಕ್ಷೆ ಈಗ ಶುರು – Kannada News | Jana Nayagan Box Office Collection Day 4: Vijay Starrer Crosses 200 Crore Mark Worldwide

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ (Jana Nayagan Movie) ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ನಾಲ್ಕೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 217.48 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ 200 ಕೋಟಿ ಕ್ಲಬ್ ಸೇರಿ ಧೂಳೆಬ್ಬಿಸಿದೆ. ಬಿಡುಗಡೆಯಾದ ನಾಲ್ಕನೇ ದಿನ ಒಟ್ಟು 12,107 ಶೋಗಳಿಂದ ಭಾರತದಾದ್ಯಂತ 32.00 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗ್ರಾಸ್ ಗಳಿಕೆ 145.98 ಕೋಟಿ ರೂಪಾಯಿಗೆ ತಲುಪಿದ್ದು,…

Read More

ಸಂಪುಟ ವಿಸ್ತರಣೆಗೆ ಇಂದು ದೆಹಲಿಯಲ್ಲಿ ಮಹತ್ವದ ಕಸರತ್ತು: ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆ – Kannada News | Karnataka Cabinet Expansion: CM DK Shivakumar Leaves for Delhi, High Command to Decide on New Ministers

ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷ ಕೆಪಿ ಹರಿಪ್ರಸಾದ್Image Credit source: tv9 ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ದೆಹಲಿಗೆ ತೆರಳಲಿದ್ದು, ಸಂಜೆ ರಾಜ್ಯದ ಸಂಸದರೊಂದಿಗೆ ಆಡಳಿತಾತ್ಮಕ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸುವ ಸಾಧ್ಯತೆ ಇದೆ….

Read More

Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ – Kannada News | Karnataka Weather Forecast: Heavy Rain Alert for Coastal Karnataka on July 27 28, IMD Predicts Strong Winds Across State

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವೆಡೆ ಭಾರಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿಯಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇಂದು (ಜುಲೈ 27 ರಂದು)…

Read More

Bengaluru Air Quality: ಬೆಂಗಳೂರಿನಲ್ಲಿ ಸುಧಾರಿಸಿದ ವಾಯು ಗುಣಮಟ್ಟ! ನಿಮ್ಮ ಏರಿಯಾದ AQI ಎಷ್ಟು? – Kannada News | Karnataka AQI Today: Bengaluru Air Quality Improves to Good Level

ಬೆಂಗಳೂರಿನಲ್ಲಿ ಸುಧಾರಿಸಿದ ವಾಯು ಗುಣಮಟ್ಟ ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ (AQI) ‘ಉತ್ತಮ’ ಮತ್ತು ‘ಸಾಧಾರಣ’ ಮಟ್ಟದಲ್ಲಿದೆ. ಐಟಿ ಸಿಟಿ ಬೆಂಗಳೂರಿನಲ್ಲಿ ನಿರಂತರ ಮಳೆ ಹಾಗೂ ತಂಪಾದ ಹವಾಮಾನದಿಂದಾಗಿ ಗಾಳಿಯ ಶುದ್ಧತೆ ಹೆಚ್ಚಾಗಿದೆ. ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 47ರಷ್ಟಿದ್ದು, ಇದು ಅತ್ಯುತ್ತಮ ವಾಯು ಮಟ್ಟವನ್ನು…

Read More

ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mangala Trayodashi Horoscope Today: July 27, 2026 Daily Horoscope for All 12 Zodiac Signs in Kannada

ಇಂದು 2026 ಜುಲೈ 27 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9’ ಕನ್ನಡ ಡಿಜಿಟಲ್​ನ ದಿನ ಭವಿಷ್ಯ ಕಾರ್ಯಮದಲ್ಲಿ ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ಶುಕ್ಲಪಕ್ಷದ ತ್ರಯೋದಶಿ ತಿಥಿಯಂದು ಚಂದ್ರನು ಧನುಸ್ಸು ರಾಶಿಯ ಮೂಲಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ದಿನವು ಮಂಗಳ ತ್ರಯೋದಶಿಯಾಗಿದ್ದು, ಶುಭಕರವಾದ ಫಲಗಳನ್ನು ನೀಡುತ್ತದೆ. ಅಲ್ಲದೆ, ಲಯಕಾರಕ ಶಿವನ ಆರಾಧನೆಗೆ ಉತ್ತಮ ದಿನವಾಗಿದೆ. ಬೆಳಗ್ಗೆ 7:40…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅನ್ಯಾಯದಲ್ಲಿ ಗೊತ್ತಿಲ್ಲದೇ ಸಿಕ್ಕಿಹಾಕಿಕೊಳ್ಳುವರು – Kannada News | Daily Horoscope for July 27, 2026: Uttarayan Greeshma season, Ashada Masa shukla Paksha Monday astrology Prediction

ಮೇಷ ರಾಶಿ : ಇಂದು ನಿಮ್ಮ ಅನಪೇಕ್ಷಿತ ಹಸ್ತಕ್ಷೇಪದಿಂದಾ ಲಾಭದ ಹಾದಿಯ ಮೇಲೆ ವಿಪರೀತ ಪರಿಣಾಮ ಉಂಟಾಗಬಹುದು. ಎಲ್ಲವನ್ನೂ ನೀವು ನಿಭಾಯಿಸಲು ಸಾಧ್ಯವಾಗದು. ಎಷ್ಟೋ ದಿನಗಳಿಂದ ಅನುಭವಿಸಬೇಕಾದುದನ್ನು ನೀವು ಇಂದು ಅನುಭವಿಸುವಿರಿ. ಇಂದು ಬರುವ ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸೀತು. ನಿಮ್ಮ ಮಾತೇ ನಿಮಗೆ ಮುಳುವಾಗಬಹುದು. ನಿಮಗೆ ಬೇಕಾದ ಯಾವುದನ್ನೂ ಇಂದು ಸುಲಭವಾಗಿ ಪಡೆಯಲಾಗದು. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಇಂದು ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ತೊಂದರೆಗಳು ನಿಮ್ಮನ್ನು ಮತ್ತಷ್ಟು ಒತ್ತಡಕ್ಕೆ…

Read More

‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ – Kannada News | Bigg Boss ex contestant Bhavya talks about Devi movie

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ ಮತ್ತು ನಟಿ ಭವ್ಯಾ ಅವರು ‘ದೇವಿ’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ನಟಿ ಭವ್ಯಾ ಅವರು ‘ದೇವಿ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ದೇವಿ’ ಸಿನಿಮಾನಲ್ಲಿ ತಮ್ಮದು ಕಾಲೇಜು ಯುವತಿಯ ಪಾತ್ರ ಎಂದ ನಟಿ, ಬಹಳ ಮಾಡರ್ನ್ ಅಲ್ಲದ ಹಾಗೆಯೇ ಬಹಳ ಗ್ರಾಮೀಣ ಸಹ ಅಲ್ಲದ ರೀತಿಯ ಯುವತಿಯ ಪಾತ್ರ ತಮ್ಮದು ಎಂದಿದ್ದಾರೆ. ಅಲ್ಲದೆ, ತಾವು ‘ದೇವಿ’ ಸಿನಿಮಾ ಅನ್ನು ಒಪ್ಪಿಕೊಳ್ಳಲು ಕಾರಣ ಏನೆಂಬುದನ್ನು ಸಹ…

Read More