ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು ಇಡಲು ಶಾಸ್ತ್ರ ಹೇಳುತ್ತದೆ. ಇದಕ್ಕೆ ಹನುಮಂತನು ಸೀತಾನ್ವೇಷಣೆಗಾಗಿ ಲಂಕಾ ನಗರವನ್ನು ಪ್ರವೇಶಿಸುವಾಗ ಎಡಗಾಲು ಇಟ್ಟಿದ್ದು ನಿದರ್ಶನವಾಗಿದೆ ಎಂದು ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ.
ದೇಶದಲ್ಲೇ ಅತಿ ಹೆಚ್ಚು ಎಲ್ಪಿಜಿ ಆಟೋ ಬೆಂಗಳೂರಿನಲ್ಲಿ!
ದೇಶದಲ್ಲೇ ಅತಿ ಹೆಚ್ಚು ಎಲ್ಪಿಜಿ ಆಟೋಗಳನ್ನು ಬಳಸುವ ನಗರ ಬೆಂಗಳೂರು. ಆದರೆ ಕಳೆದ ಕೆಲವು ದಿನಗಳಿಂದ ಗ್ಯಾಸ್ ಬಂಕ್ಗಳ ಮುಂದೆ ಆಟೋಗಳ ಕಿಲೋಮೀಟರ್ ಉದ್ದದ ಸಾಲು ಕಂಡುಬರುತ್ತಿದೆ. ಎಲ್ಪಿಜಿ ಸಿಗದೆ ಚಾಲಕರು ದಿನಪೂರ್ತಿ ಬಂಕ್ಗಳ ಮುಂದೆಯೇ ಕಳೆಯುವಂತಾಗಿದ್ದು, ಸರಿಯಾದ ಬಾಡಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಈ ಆರ್ಥಿಕ ಸಂಕಷ್ಟದ ಸರಪಳಿ ಈಗ ಇನ್ಶೂರೆನ್ಸ್ ಕಂಪನಿಗಳಿಗೂ ತಟ್ಟಿದೆ.
ಲ್ಯಾಪ್ಸ್ ಆಗುತ್ತಿದೆ ಇನ್ಶೂರೆನ್ಸ್
ಸಾಮಾನ್ಯವಾಗಿ ಪ್ರತಿ ತಿಂಗಳು ಸಾವಿರಾರು ಆಟೋ ಚಾಲಕರು ತಮ್ಮ ವಾಹನದ ವಿಮೆಯನ್ನು ನವೀಕರಿಸುತ್ತಿದ್ದರು (Renew). ಆದರೆ ಈಗ ಬಾಡಿಗೆ ಇಲ್ಲದೆ ತಿನ್ನಲು ಹಣವಿಲ್ಲದಂತಾಗಿದ್ದು, ಇನ್ಶೂರೆನ್ಸ್ ಕಟ್ಟಲು ಚಾಲಕರು ಹಿಂದೇಟು ಹಾಕುತ್ತಿದ್ದಾರೆ. ವಿಮಾ ಏಜೆಂಟರು ಕರೆ ಮಾಡಿದರೆ, ‘ಊಟಕ್ಕೇ ದುಡ್ಡಿಲ್ಲ, ಇನ್ಶೂರೆನ್ಸ್ ಎಲ್ಲಿಂದ ಕಟ್ಟೋದು?’ ಎಂಬ ಉತ್ತರ ಚಾಲಕರಿಂದ ಬರುತ್ತಿದೆ. ಇದರಿಂದಾಗಿ ವಿಮಾ ಕಂಪನಿಗಳಿಗೆ ಮತ್ತು ಏಜೆಂಟ್ಗಳಿಗೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಸಾವಿರಾರು ಆಟೋಗಳ ಇನ್ಶೂರೆನ್ಸ್ ಈಗ ಲ್ಯಾಪ್ಸ್ ಆಗುತ್ತಿದೆ ಎಂದು ಮೇಘನಾ ಇಂಟರ್ನ್ಯಾಷನಲ್ ಮಾಲೀಕ ವಸಂತ್ ರಾಜ್ ಅಳಲು ತೋಡಿಕೊಂಡಿದ್ದಾರೆ.
ಜೀವಕ್ಕೂ ಅಪಾಯ
ದುಡ್ಡಿದ್ದರೆ ಇನ್ಶೂರೆನ್ಸ್, ಇಲ್ಲದಿದ್ದರೆ ಇಲ್ಲ ಎಂಬ ಸ್ಥಿತಿಗೆ ಆಟೋ ಚಾಲಕರು ಬಂದಿದ್ದಾರೆ. ಆದರೆ ಇನ್ಶೂರೆನ್ಸ್ ಇಲ್ಲದೆ ಆಟೋ ಓಡಿಸುವಾಗ ಸಣ್ಣ ಪುಟ್ಟ ಅಪಘಾತಗಳಾದರೂ ಅದರ ಸಂಪೂರ್ಣ ಹೊಣೆಯನ್ನು ಚಾಲಕರೇ ಹೊರಬೇಕಾಗುತ್ತದೆ. ವಿಮೆಯ ಯಾವುದೇ ಸೌಲಭ್ಯಗಳು ಅವರಿಗೆ ದೊರೆಯುವುದಿಲ್ಲ.
‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ.
‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು ತೆಲುಗಿನ ನಟ ಚಿರಂಜೀವಿ, ನಟಿ ಖುಷ್ಬೂ ಸುಂದರ್ ಹೀಗೆ ಅನೇಕರು ಖಂಡನೆ ಮಾಡಿದ್ದಾರೆ. ಕೆವಿಎನ್ ಹೋರಾಟದಲ್ಲಿ ನಾವಿದ್ದೇವೆ ಎಂದಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅನೇಕರು ಒತ್ತಾಯಿಸಿದ್ದಾರೆ. ಕೆವಿಎನ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದೆ. ಆದರೆ, ವಿಜಯ್ ಈ ವಿಷಯದಲ್ಲಿ ಮಾತನಾಡುತ್ತಿಲ್ಲ.
ದಳಪತಿ ವಿಜಯ್ ಅವರು ‘ಜನ ನಾಯಗನ್’ ಚಿತ್ರದ ಹೀರೋ. ಸಿನಿಮಾ ಲೀಕ್ ವಿಷಯ ಅವರಿಗೆ ದೊಡ್ಡ ಚಿಂತೆ ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಹುಟ್ಟುಹಾಕಿದೆ. ಇದರ ಜೊತೆಗೆ ಚುನಾವಣೆ ಪ್ರಚಾರ ಮಾಡುವ ಕೆಲಸವನ್ನು ಅವರು ಮುಂದುವರಿಸಲೇಬೇಕಿದೆ. ಅವರು ಕೊನೆಯ ಪಕ್ಷ ಒಂದು ಟ್ವೀಟ್ ಆದರೂ ಮಾಡಬಹುದಿತ್ತು ಎಂದು ಫ್ಯಾನ್ಸ್ ಬಯಸಿದ್ದರು. ಅವರು ಮಾಧ್ಯಮದವರು ಪ್ರಶ್ನೆ ಮಾಡಿದಾಗ ಉತ್ತರಿಸಬೇಕು ಎಂದಿದ್ದರು. ಆದರೆ, ಯಾವುದನ್ನೂ ಅವರು ಮಾಡಿಲ್ಲ.
ವಿಜಯ್ ಅವರು ಏಪ್ರಿಲ್ 10ರಂದು ಚೆನ್ನೈಗೆ ಬಂದಿದ್ದಾರೆ. ಶಿವಗಂಗಾ ಜಿಲ್ಲೆಯ ಕರೈಕುಡಿಯಲ್ಲಿ ಚುನಾವಣೆ ಪ್ರಚಾರ ಮಾಡಿ ಅವರು ಮರಳಿದ್ದಾರೆ. ಆಗ ಅವರಿಗೆ ‘ಜನ ನಾಯಗನ್ ಸಿನಿಮಾ ಸೋರಿಕೆ ಬಗ್ಗೆ ಮಾತನಾಡಿ’ ಎಂದು ಕೇಳಲಾಯಿತು. ಆದರೆ, ಇದಕ್ಕೆ ವಿಜಯ್ ಉತ್ತರಿಸುವ ಮನಸ್ಸು ಮಾಡಿಲ್ಲ. ಬದಲಿಗೆ ಅವರು ನೇರವಾಗಿ ನಡೆದು ಹೋದರು. ಅವರು ಈ ಬಗ್ಗೆ ಉತ್ತರಿಸಬೇಕಿತ್ತು ಎಂದು ಫ್ಯಾನ್ಸ್ ಹೇಳಿದ್ದಾರೆ.
‘ಜನ ನಾಯಗನ್’ ಸಿನಿಮಾಗೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ. ಇದು ಚಿತ್ರ ಮುಂದಕ್ಕೆ ಹೋಗಲು ಪ್ರಮುಖ ಕಾರಣ.ಚುನಾವಣೆ ಮುಗಿದ ಬಳಿಕ ಸಿನಿಮಾ ರಿಲೀಸ್ ಆಗಬಹುದು.
ಬೆಂಗಳೂರು, ಏಪ್ರಿಲ್ 11: ಪೀಣ್ಯ ಎಲಿವೇಟೆಡ್ ಫ್ಲೈಓವರ್ನ (Peenya Elevated Flyover) ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಈ ಐದು ದಿನಗಳ ಕಾಲ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.
ಪೀಣ್ಯ ಫ್ಲೈಓವರ್ ಬಂದ್ ಆಗುವ ಅವಧಿ
ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗಗಳು
ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ಅವುಗಳು ಹೀಗಿವೆ;
ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್ಆರ್ಎಸ್ (SRS) ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬೇಕು.
ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್ಆರ್ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮತ್ತು ಪಾರ್ಲೆ ಜಿ ಟೋಲ್ ಮೂಲಕ ಸಾಗಬೇಕು.
ದುಡುಕಿ ಏನನ್ನಾದರೂ ಮಾಡಿಕೊಳ್ಳುವಿರಿ. ಪತ್ನಿಯ ಜೊತೆ ಸುಖದಿಂದ ಕಾಲವನ್ನು ಕಳೆಯುವಿರಿ. ಸಂಬಂಧಿಕರ ಆಗಮನವಾಗಲಿದೆ. ಕೃಷಿಯ ಚಟುವಟಿಕೆಯಲ್ಲಿ ಅಸಕ್ತಿಯಿಂದ ಪಾಲ್ಗೊಳ್ಳುವಿರಿ. ಅಪರಿಚಿತರ ಜೊತೆ ಅಧಿಕ ಒಡನಾಟ. ಬೇಸರದಲ್ಲಿ ದಿನದ ಮುಕ್ತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ಬೆಂಕಿಯ ಸ್ಥಳದಲ್ಲಿ ಎಚ್ಚರಿಕೆಯಿಂದ ಕೆಲಸವನ್ನು ಮಾಡಿ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು.
ವೃಷಭ ರಾಶಿ:
ಇಂದು ವ್ಯಾವಹಾರಿಕವಾಗಿ ಮನಶ್ಚಾಂಚಲ್ಯ ನಿಮ್ಮನ್ನು ಅನೇಕ ವಿಧವಾಗಿ ಕಾಡಬಹುದು. ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಅಧಿಕಾರಿಗಳಿಂದ ನಿಮ್ಮ ಕಾರ್ಯದ ಪ್ರಗತಿ ಪರಿಶೀಲನೆ. ಇನ್ನೊಬ್ಬರ ಬಗ್ಗೆ ಮಾಡುವ ತಮಾಷೆಯು ನಿಮ್ಮ ತಲೆನೋವಾದೀತು. ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು.
ಮಿಥುನ ರಾಶಿ:
ಇಂದು ಅನ್ಯರ ಕಾರಣದಿಂದ ವಿಮಾನ ಸಂಚಾರ ಯೋಗ. ಹಿರಿಯರಿಗೆ ನಿಮ್ಮ ಕೈಲಾದ ಮತ್ತು ಅವರಿಗೆ ಅವಶ್ಯಕವಾದ ಕಾರ್ಯಗಳನ್ನು ಮಾಡಿಕೊಡಿ. ಸಂಗಾತಿಯೊಂದಿಗೆ ಸುತ್ತಾಟ ನಡೆಸುವಿರಿ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು. ಆಯುಧದಿಂದ ಗಾಯವನ್ನು ಮಾಡಿಕೊಂಡು ನೋವಾಗುವುದು. ಅಂತರ್ಜಾಲದಲ್ಲಿ ಅಧಿಕ ಸಮಯ ಕಳೆಯುವಿರಿ. ಇಂದು ನಿಮಗೆ ಸೌಂದರ್ಯದ ಬಗ್ಗೆ ಹೆಚ್ಚು ಆಸಕ್ತಿ ಇರಲಿದ್ದು ಅದಕ್ಕೆ ಸಮಯವು ಹೆಚ್ಚು ಹೋಗುವುದು.
ಕರ್ಕಾಟಕ ರಾಶಿ:
ದೃಢವಾದ ಮನಸ್ಸಿದ್ದರೆ ಅನಾರೋಗ್ಯದಿಂದಲೂ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ದೈವಾನುಗ್ರಹವಿಲ್ಲವೆಂದು ದೇವಾಲಯಕ್ಕೆ ಹೋಗುವುದನ್ನು ನಿಲ್ಲಿಸುವುದು ಬೇಡ. ಇಂದಿನ ಸತ್ಕಾರ್ಯವೆಡ ನಿಮಗೆ ಉತ್ತಮವಾದ ಫಲವನ್ನು ಕೊಡುವುದು. ಸಂಗಾತಿಯ ಪ್ರೀತಿಯು ನಿಮಗೆ ಬೇಸರವನ್ನು ಕೊಡಬಹುದು. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ.
ಸಿಂಹ ರಾಶಿ:
ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಪ್ರತಿಭೆಯ ಅನಾವರಣಕ್ಕೆ ಸುಕಾಲ. ಸಂಪತ್ತು ಉಳಿಸಿಕೊಳ್ಳಲು ಯತ್ನಿಸಿದಷ್ಟೂ ಅಪ್ರಯಾಸವಾಗಿ ಖರ್ಚಾಗುವುದು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು. ಇನ್ನೊಬ್ಬರ ಮಾತುಗಳನ್ನು ಕೇಳುವ ಸಹನೆಯು ಬೇಕು. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ಕೇಳುವಿರಿ.
ಕನ್ಯಾ ರಾಶಿ:
ಬೇಡದ ವಸ್ತುಗಳಿಗೆ ಹೊಸ ರೂಪವನ್ನು ಕೊಡುವಿರಿ. ಉದ್ಯಮದಲ್ಲಿ ಏನಾದರೂ ಏರಿಳಿತಗಳು ಆಗಬಹುದು. ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು. ಆಪ್ತರ ಜೊತೆ ಮನಸ್ಸು ಬಿಚ್ಚಿ ಮಾತನಾಡಿ. ಇಷ್ಟವಾಗುವ ಸ್ಥಳಗಳಿಗೆ ಇಷ್ಟವಾದವರನ್ನು ಕರೆದುಕೊಂಡು ಹೋಗಿ. ಕೆಲಸದ ಸ್ಥಳದಲ್ಲಿ ಒತ್ತಡದ ವಾತಾವರಣವಿರಬಹುದು. ಇಂದು ಬಿಟ್ಟು ಹೋದ ಆಪ್ತರ ಬಗ್ಗೆ ಹೆಚ್ಚು ಆಲೋಚನೆ ಬರಬಹುದು. ಬರುವ ಒತ್ತಡವನ್ನು ನೀವು ಯಾವುದಾದರೂ ವಿಧಾನದ ಮೂಲಕ ಸರಿ ಮಾಡಿಕೊಳ್ಳುವಿರಿ.
ತುಲಾ ರಾಶಿ:
ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಎತ್ತರದ ಪ್ರದೇಶಗಳನ್ನು ಏರುವ ಸಾಹಸಕ್ಕೆ ಹೋಗಬೇಡಿ. ಯಾರಿಗಾದರೂ ಯಾವ ಕೆಲಸಕ್ಕಾದರೂ ನಿಮ್ಮ ಕಡೆಯಿಂದ ಅದಕ್ಕೆ ನ್ಯಾಯ ಸಿಗುವಂತೆ ಇರಲಿ. ಅನ್ಯ ಮನಸ್ಕರಾಗಿ ಇರುವುದು ಬೇಡ. ಧರ್ಮದ ಕಾರ್ಯಗಳ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ಯಾವುದಾದರೂ ರೀತಿಯಲ್ಲಿ ನೋವನ್ನು ಪಡೆಯಬೇಕಾದೀತು. ನೀವು ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳದೇ ಅವರ ಜೊತೆ ಜಗಳವಾಡುವಿರಿ. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ.
ವೃಶ್ಚಿಕ ರಾಶಿ:
ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ವ್ಯವಹಾರದಲ್ಲಿ ಬರುವ ಸಮಸ್ಯೆಯನ್ನು ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಮಾಡಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯಾಗಬಹುದು. ಭೂವ್ಯವಹಾರದಲ್ಲಿ ಲಾಭವನ್ನು ಪಡೆಯಲು ಅನ್ಯ ಮಾರ್ಗವನ್ನು ಆಶ್ರಯಿಸುವಿರಿ. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಣೆ ಮಾಡಬೇಕಾಗುವುದು. ನೂತನ ವಸ್ತುಗಳನ್ನು ಖರೀದಿಸಲಿದ್ಸೀರಿ. ಮಾಡದ ಕಾರ್ಯಕ್ಕೆ ಅಪವಾದ ಬರುವುದು.
ಧನು ರಾಶಿ:
ಹಠದ ಸ್ವಭಾವವೇ ನಿಮಗೆ ಮುಳುವಾಗಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಮುಂದಿನ ಕಾರ್ಯದಲ್ಲಿ ಆಗುವ ಖರ್ಚುಗಳ ಬಗ್ಗೆ ತಲೆಕೆಡಿಕೊಳ್ಳಬಹುದು. ಎಲ್ಲರ ಮೇಲೂ ನಂಬಿಕೆ ಇಟ್ಟುಕೊಳ್ಳುವುದು ಸಾಧ್ಯವಾಗದು. ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ವಿಘ್ನ ಬರಬಹುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.
ಮಕರ ರಾಶಿ:
ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ವ್ಯವಹಾರದಲ್ಲಿ ಎಚ್ಚರವಿರಲಿ. ಒಮ್ಮುಖ ನಿರ್ಧಾರಗಳನ್ನು ಮಾಡುವುದನ್ನು ಬಿಡಿ. ಹೊಸ ಶತ್ರುಗಳನ್ನು ನಿರ್ಮಿಸಿಕೊಳ್ಳಬೇಡಿ. ಆರಕ್ಕೇರದ ಮೂರಕ್ಕಿಳಿಯದ ಉದ್ಯಮದ ದಿನವಿಂದು ನಿಮಗೆ. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ಯಾರೇ ನಿಮ್ಮನ್ನು ನೆಚ್ಚಿವದರೂ ಅದು ಸ್ವಲ್ಪ ಕಾಲ ಮಾತ್ರ. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳುವಿರಿ. ಹಿತಶತ್ರುಗಳು ಲಾಭವನ್ನು ತಪ್ಪಿಸುವರು.
ಕುಂಭ ರಾಶಿ:
ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಆಲಸ್ಯದಿಂದ ಸಿಗುವ ಸಂಪತ್ತು ವ್ಯರ್ಥವಾಗುತ್ತದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಬೇಕು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು.
ಮೀನ ರಾಶಿ:
ಇಂದು ಬೇಡದ ವಿಚಾರಕ್ಕೆ ಸಂಗಾತಿಯೊಂದಿಗೆ ಕಲಹವಾಗಲಿದೆ. ಜಾಗರೂಕರಾಗಿ ಕಾಲಿಡಿ. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಕಲಾವಿದರಿಗೆ ಹೆಚ್ಚಿನ ಸ್ಥಾನಗಳು ಸಿಗಬಹುದು. ನಂಬಿಕೆಯನ್ನು ಕಳೆದುಕೊಳ್ಳಬೇಕಾದ ದಿನವೂ ಇದಾಗಿರುತ್ತದೆ. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 14 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:20 – 10:53, ಯಮಗಂಡ ಕಾಲ 13:58 – 15:31, ಗುಳಿಕ ಕಾಲ 06:15 – 07:47
ಐಪಿಎಲ್ 2026 ರ 16 ನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18 ಓವರ್ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು. ರಾಜಸ್ಥಾನದ ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧೃವ್ ಜುರೇಲ್ ಅವರ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ಸತತ 4ನೇ ಗೆಲುವು ದಾಖಲಿಸಿದರೆ, ಇತ್ತ ಆರ್ಸಿಬಿ ಈ ಆವೃತ್ತಿಯ ಮೊದಲ ಸೋಲು ಎದುರಿಸಿದೆ.
ಐಪಿಎಲ್ 2026 (IPL 2026) ರ 16 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ವಿಸ್ಫೋಟಕ ಇನ್ನಿಂಗ್ಸ್ ಆಡಿದರು. ಎಂದಿನಂತೆ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವೈಭವ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ರಾಜಸ್ಥಾನ್ ಪರ ಈ ಆವೃತ್ತಿಯಲ್ಲೇ ಎರಡನೇ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು.
15 ಎಸೆತಗಳಲ್ಲಿ ಅರ್ಧಶತಕ
ವಾಸ್ತವವಾಗಿ ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡ 21 ರನ್ಗಳಿದ್ದಾಗ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಕಳೆದುಕೊಂಡಿತು. ಆದಾಗ್ಯೂ ತನ್ನ ಎಂದಿನ ಆಟವನ್ನು ಮುಂದುವರೆಸಿದ ವೈಭವ್ ಸೂರ್ಯವಂಶಿ ಆರ್ಸಿಬಿಯ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್ವುಡ್ ಅವರಂತಹ ಅನುಭವಿ ಬೌಲರ್ಗಳಿಗೆ ಸಿಕ್ಸರ್ ಹಾಗೂ ಬೌಂಡರಿಗಳ ಮಳೆ ಸುರಿಸಿದರು. ಇದರ ಪರಿಣಾಮವಾಗಿ ಪವರ್ಪ್ಲೇನಲ್ಲಿಯೇ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಪವರ್ಪ್ಲೇನಲ್ಲಿ ಅತ್ಯಧಿಕ ರನ್
ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 15 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ಗಳ ಸಹಾಯದಿಂದ ಈ ಅರ್ಧಶತಕ ಪೂರೈಸಿದರು. ಈ ಮೂಲಕ ಇದೇ ಐಪಿಎಲ್ನಲ್ಲಿ ವೈಭವ್ ಸೂರ್ಯವಂಶಿ ಎರಡನೇ ಬಾರಿಗೆ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸಾಧನೆ ಮಾಡಿದರು. ಇದಕ್ಕೂ ಮುನ್ನ ಸಿಎಸ್ಕೆ ವಿರುದ್ಧದ ಪಂದ್ಯದಲ್ಲೂ ವೈಭವ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ವೈಭವ್ ಅವರ ಈ ಅಬ್ಬರದ ಇನ್ನಿಂಗ್ಸ್ನಿಂದಾಗಿ ರಾಜಸ್ಥಾನ್ ತಂಡ ಐಪಿಎಲ್ ಇತಿಹಾಸದಲ್ಲಿ ಪವರ್ಪ್ಲೇನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಮಾಡಿತು.
ರಾಜಸ್ಥಾನ್ ತಂಡ ಮೊದಲ 6 ಓವರ್ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 97 ರನ್ ಕಲೆಹಾಕಿತು. ಅರ್ಧಶತಕದ ಬಳಿಕವೂ ತನ್ನ ಹೊಡಿಬಡಿ ಆಟವನ್ನು ಮುಂದುವರೆಸಿದ ವೈಭವ್ 6.2 ಓವರ್ಗಳಲ್ಲಿ ತಂಡವನ್ನು 100 ರನ್ಗಳ ಗಡಿ ದಾಟಿಸಿದರು. ಹಾಗೆಯೇ 7.4 ಓವರ್ಗಳಲ್ಲಿ ಧೃವ್ ಜುರೇಲ್ ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಂಡರು. ಶತಕದತ್ತ ಸಾಗುತ್ತಿದ್ದ ವೈಭವ್ 26 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 78 ರನ್ ಬಾರಿಸಿ ಔಟಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
25 ವರ್ಷಗಳು ಕಳೆದಿದ್ದರೂ ಕೂಡ ‘ಕೋಟಿಗೊಬ್ಬ’ (Kotigobba) ಸಿನಿಮಾದ ಕ್ರೇಜ್ ಹಾಗೆಯೇ ಇದೆ. ಈಗ ಈ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದು ಸಂಭ್ರಮಿಸಿದ್ದಾರೆ. ಈ ವೇಳೆ ವಿಷ್ಣುವರ್ಧನ್ (Vishnuvardhan) ಅವರನ್ನು ಫ್ಯಾನ್ಸ್ ಸ್ಮರಿಸಿದ್ದಾರೆ. ‘ಕೋಟಿಗೊಬ್ಬ’ ಮರು ಬಿಡುಗಡೆ ಪ್ರಯುಕ್ತ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ‘ವಿಷ್ಣುವರ್ಧನ್ ಅವರ ಸಲುವಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ. ಭಾನುವಾರ (ಏಪ್ರಿಲ್ 12) ಹತ್ತು ಸಾವಿರ ಜನರಿಗೆ ವೆಜ್ ಮತ್ತು ನಾನ್ ವೆಜ್ ಊಟದ ವ್ಯವಸ್ಥೆ ಮಾಡುತ್ತೇವೆ. ನಮಗೆ ತುಂಬ ಸಂತೋಷ ಆಗುತ್ತಿದೆ. ಅಭಿಮಾನಿಗಳಿಗೆ ದೇವರು ಇನ್ನೂ ಹೆಚ್ಚಿನ ಶಕ್ತಿ ನೀಡಲಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ‘ಕೋಟಿಗೊಬ್ಬ’ ಸಿನಿಮಾ ಮರು ಬಿಡುಗಡೆ ಪ್ರಯುಕ್ತ ಹಲವು ಚಿತ್ರಮಂದಿರಗಳ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.
ನವದೆಹಲಿ, ಏಪ್ರಿಲ್ 10: ಈ ವರ್ಷದ ಅಮರನಾಥ ಯಾತ್ರೆಗೆ (Amarnath Yatra) ಮುಂಗಡ ನೋಂದಣಿ ಏಪ್ರಿಲ್ 15ರಿಂದ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್ಸ್ಗಳನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಶ್ರೀ ಅಮರನಾಥ ಯಾತ್ರೆ ಮಂಡಳಿಯು 550ಕ್ಕೂ ಹೆಚ್ಚು ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ನೋಂದಣಿಗಳು ಲಭ್ಯವಿರುತ್ತವೆ ಎಂದು ಘೋಷಿಸಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸುತ್ತದೆ.
13ರಿಂದ 70 ವರ್ಷ ವಯಸ್ಸಿನ ಯಾತ್ರಿಕರು ಮಾತ್ರ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದು ಮಾರ್ಗಸೂಚಿಗಳು ತಿಳಿಸಿವೆ. 6 ವಾರಗಳಿಗಿಂತ ಹೆಚ್ಚು ಗರ್ಭಿಣಿಯರಿಗೆ ಸಹ ತೀರ್ಥಯಾತ್ರೆಯನ್ನು ಕೈಗೊಳ್ಳಲು ಅನುಮತಿ ಇಲ್ಲ. ಏಪ್ರಿಲ್ 15ರಿಂದ ದೇಶಾದ್ಯಂತ 550 ಕ್ಕೂ ಹೆಚ್ಚು ಅಧಿಕೃತ ಬ್ಯಾಂಕ್ ಶಾಖೆಗಳಲ್ಲಿ ಯಾತ್ರಿಕರು ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳಬಹುದು.
ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವು ಎಲ್ಲಾ ಯಾತ್ರಿಕರಿಗೆ ಕಡ್ಡಾಯವಾಗಿರುತ್ತದೆ. ಈ ಹಂತವು ಸುರಕ್ಷತೆಯನ್ನು ಸುಧಾರಿಸುವ ಮತ್ತು ಪ್ರಯಾಣ ಕೈಗೊಳ್ಳುವ ಯಾತ್ರಿಕರ ನಿಖರವಾದ ದಾಖಲೆಗಳನ್ನು ನಿರ್ವಹಿಸುವ ಗುರಿಯನ್ನು ಹೊಂದಿದೆ. ಇದು ತುರ್ತು ಸಂದರ್ಭಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸಹಾಯ ಮಾಡುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಾಮರಾಜನಗರ, ಏಪ್ರಿಲ್ 10: ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಯರ ನಿದ್ದೆಗೆಡಿಸಿದ್ದ ಸೈಕೋ ಪಾತ್ನನ್ನು (Psychopath) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಒಳ ಉಡುಪು ಕಳವು (Female Innerwear) ಮಾಡುತ್ತಿದ್ದ. ದೂರು ನೀಡಿದರೂ ಕ್ಯಾರೆ ಎನ್ನದ ಪೊಲೀಸರು ಟಿವಿ9 ನಲ್ಲಿ ಸುದ್ದಿ ಬಿತ್ತರಿಸಿದ 24 ಗಂಟೆ ಒಳಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಮೃತ್ ಅಲಿಯಾಸ್ ಅಮೃತ್ ಆಚಾರ್ಯ ಬಂಧಿತ ವ್ಯಕ್ತಿ.
ರಾತ್ರಿ 1 ಗಂಟೆಯ ಸಮಯ. ಎಲ್ಲರೂ ಗಾಢ ನಿದ್ದೆಗೆ ಜಾರಿರುತ್ತಾರೆ. ಊರೆಲ್ಲಾ ಮಲಗಿದ್ದರೆ ಓರ್ವ ಮಾತ್ರ ಮನೆಯಿಂದ ಆಚೆ ಬರ್ತಾಯಿದ್ದ. ಮನೆ ಮುಂದೆ ಒಗೆದು ಒಣ ಹಾಕಿದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ. ಚಾಮರಾಜನಗರದ ಹೌಸಿಂಗ್ ಬೋರ್ಡ್ನಲ್ಲಿ ಘಟನೆ ನಡೆದಿತ್ತು. ಸೈಕೋ ಪಾತ್ನ ಕೃತ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಮನೆಯ ಮಾಲೀಕ ಗಣೇಶ್ ಪ್ರಸಾದ್ ಸಿಸಿ ಕ್ಯಾಮೆರಾದಲ್ಲಿ ಸೆರೆ ವಿಡಿಯೋ ಸಮೇತ ಲಿಖಿತ ದೂರು ನೀಡಿದ್ದರು. ಪಟ್ಟಣ ಠಾಣಾ ಪೊಲೀಸರು ಎಫ್ಐಆರ್ ಮಾಡಿ ಸುಮ್ಮನಾಗಿದ್ದಾರೆ. ಯಾವಾಗ ಟಿವಿ9 ನಲ್ಲಿ ಸುದ್ದಿ ಬಿತ್ತರವಾಯಿತೋ ಅಲರ್ಟ್ ಆದ ಪೊಲೀಸರು, ಇದೀಗ ಸೈಕೋ ಪಾತ್ನನ್ನ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಲ್ಯಾಬ್ ಟೆಕ್ನಿಷಿಯನ್
ಇನ್ನು ಬಂಧಿತ ಅಮೃತ್ ಕೂಡ ಹೌಸಿಂಗ್ ಬೋರ್ಡ್ ನಿವಾಸಿ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. 10ನೇ ತರಗತಿಯಲ್ಲಿ ಓದುವಾಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ರಾತ್ರಿ ಆದರೆ ಸಾಕು ಮನೆಯ ಅಂಗಳದಲ್ಲಿ ಮಹಿಳೆಯರ ಒಳ ಉಡುಪು ಹಾಕಿಕೊಂಡು ಓಡಾಡುತ್ತಿದ್ದ. ದಿನ ಕಳೆದಂತೆ ರಾತ್ರಿ ಅಕ್ಕ-ಪಕ್ಕದ ಮನೆಗೆ ನುಗ್ಗುವುದು ಒಗೆದು ಒಣ ಹಾಕಿರುವ ಮಹಿಳೆಯರ ಒಳ ಉಡುಪುಗಳನ್ನ ಕಳ್ಳತನ ಮಾಡಿಕೊಂಡು ಬಂದು ಹಾಕಿಕೊಂಡು ವಿಕೃತಿ ಮೆರೆಯುತ್ತಿದ್ದ. ಈ ವಿಚಾರ ತಿಳಿದ ಮಹಿಳೆಯರು, ಯುವತಿಯರು ಅಕ್ಷರಶಃ ಬೆಚ್ಚಿಬಿದ್ದಿದ್ದರು.
ಸದ್ಯ ಟಿವಿ9 ಸುದ್ದಿ ಪ್ರಸಾರವಾದ 24 ಗಂಟೆಯಲ್ಲೇ ಆರೋಪಿಯ ಕೈಗೆ ಕೋಳ ಬಿದ್ದಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿರುವ ಪೊಲೀಸರು, ಆತನನ್ನು ಮಾನಸಿಕ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಹಿಳೆಯರು ನಿಟ್ಟುಸಿರು ಬಿಟ್ಟಿದ್ದಾರೆ.