NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು ಅಂದಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ
ದಾವಣಗೆರೆ, ಜುಲೈ 26: ‘ಮುಲ್ಲಾ ಹೇಳಿಕೆಯನ್ನು ಯಾವುದೇ ಭಯವಿಲ್ಲದೆ, ನೂರಕ್ಕೆ ಸಾವಿರ ಸಾರಿ ಕೋರ್ಟ್ ಮುಂದೆ ಸಹ ಹೇಳುತ್ತೇನೆ. ಜೀವನದಲ್ಲಿ ಹಿಂದಿಟ್ಟ ಹೆಜ್ಜೆ ಇಲ್ಲ’ ಎಂದು ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಈ ಹೇಳಿಕೆಯು ಒಬ್ಬ ನಿರ್ದಿಷ್ಟ ವ್ಯಕ್ತಿಯ ಬಗ್ಗೆ ಹೇಳಿರುವುದು. ದೆಹಲಿಯಲ್ಲಿ ನೀಟ್ ಚಳುವಳಿಯ ಸಂದರ್ಭದಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ಹಚ್ಚಿದ ಮುಲ್ಲಾನನ್ನು ಉದ್ದೇಶಿಸಿ ನಾನು ಮಾತನಾಡಿದ್ದು, ಅವನನ್ನು ಸಮರ್ಥಿಸುವವರೆಲ್ಲರೂ ಪಾಪಿಗಳು ಮತ್ತು ಅಧರ್ಮಿಗಳು’ ಎಂದು ಅವರು ಆರೋಪಿಸಿದರು….