ನವದೆಹಲಿ, ಏಪ್ರಿಲ್ 10: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾವಿರಾರು ವೀಡಿಯೊಗಳು ವೈರಲ್ (Viral Video) ಆಗುತ್ತವೆ. ಆದರೆ, ಕೆಲವು ವೀಡಿಯೊಗಳು ಮಾತ್ರ ಜನರ ಹೃದಯವನ್ನು ಮುಟ್ಟುತ್ತವೆ. ಅಂತಹ ಒಂದು ವೀಡಿಯೊ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ನಾಯಿಯೊಂದು ಬ್ರೆಡ್ ತುಂಡನ್ನು ಬಾಯಿಯಲ್ಲಿ ಕಚ್ಚಿಕೊಂಡು ಹೋಗಿ ಹಸುವಿಗೆ ತಿನ್ನಿಸುತ್ತಿದೆ. ಈ ದೃಶ್ಯವು ಜನರನ್ನು ಅಚ್ಚರಿಗೊಳಿಸಿದೆ ಮತ್ತು ಭಾವುಕರನ್ನಾಗಿ ಮಾಡಿದೆ. ಈ ಪ್ರಾಣಿಗಳ ನಡುವಿನ ಸ್ನೇಹ ಈಗ ಚರ್ಚೆಯ ವಿಷಯವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 100 ರನ್ಗಳ ಗಡಿ ದಾಟುವ ಮುನ್ನವೇ ಪ್ರಮುಖ 6 ವಿಕೆಟ್ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು.
ರಾಜಸ್ಥಾನ್ ವಿರುದ್ಧ ಪ್ರಮುಖ ಬ್ಯಾಟರ್ಗಳು ರನ್ಗಳಿಸಲು ಸಾಧ್ಯವಾಗದೆ ಬಹುಬೇಗನೇ ವಿಕೆಟ್ ಒಪ್ಪಿಸಿದಾಗ ನೆಲ ಕಚ್ಚಿ ನಿಂತ ರಜತ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ತಂಡವನ್ನು 150 ರನ್ಗಳ ಗಡಿ ಕೂಡ ದಾಟಿಸಿದರು. 96 ರನ್ಗಳಿಗೆ ಪ್ರಮುಖ 6 ವಿಕೆಟ್ಗಳು ಬಿದ್ದಾಗ ಆರ್ಸಿಬಿ 150 ರನ್ ಬಾರಿಸುವುದು ಕಷ್ಟಕರವಾಗಿತ್ತು.
ಈ ಹಂತದಲ್ಲಿ ಕೆಳಕ್ರಮಾಂಕದ ಬ್ಯಾಟರ್ಗಳ ಜೊತೆ ಇನ್ನಿಂಗ್ಸ್ ಕಟ್ಟಿದ ರಜತ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 63 ರನ್ಗಳ ಇನ್ನಿಂಗ್ಸ್ ಆಡಿದರು. ರಜತ್ ಔಟಾದಾಗ ತಂಡದ ಮೊತ್ತ 17 ಓವರ್ಗಳಿಗೆ 166 ರನ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ವೆಂಕಟೇಶ್ ಅಯ್ಯರ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿ 15 ಎಸೆತಗಳಲ್ಲಿ 2 ಸಿಕ್ಸರ್ಗಳ ಸಹಿತ ಅಜೇಯ 29 ರನ್ ಕಲೆಹಾಕಿದರು. ಅಂತಿಮವಾಗಿ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದಾವಣಗೆರೆ, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By Election) ಅಂತ್ಯವಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳ ಅಬ್ಬರದ ಪ್ರಚಾರ ಒಂದು ರೀತಿಯಲ್ಲಿ ಭರ್ಜರಿ ಮಳೆ ಸುರಿದು ನಿಂತ ಅನುಭವ. ಬಿರು ಬಿಸಿಲು, ಸೀಮೆಂಟ್ ರಸ್ತೆ ಉಲ್ಟಾ ಝಳ. ನಿರಂತರ ಹುರಿಯುತ್ತಿರುವ ಮಂಡಕ್ಕಿ ಭಟ್ಟಿಗಳ ಕಾವಿಗಿಂತ ಇದು ಸ್ವಲ್ಪ ಹೆಚ್ಚಾಗಿತ್ತು. ನಾವು ಹೇಳುತ್ತಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ಹಿರಿಯ ರಾಜಕಾರಣಿ ಆರು ಸಲ ಶಾಸಕ. ಒಮ್ಮೆ ಸಚಿವ, ಒಮ್ಮೆ ಸಂಸದ ಜೊತೆಗೆ ವೀರಶೈವ ಮಹಾಸಭೆಯ ರಾಷ್ಟೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರ ದಾವಣಗೆರ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮುಗಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.
ಮತದಾನದ ಅಂಕಿ ಸಂಖ್ಯೆ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತದಾನದ ಅಂಕಿ ಸಂಖ್ಯೆ ನೋಡುವುದಾದರೆ, ಒಟ್ಟು 158131 ಜನರಿಂದ ಮತದಾನ ಮಾಡಿದ್ದಾರೆ. ಅಂದ್ರೆ ಶೇ 68.43 ರಷ್ಟು ಮತದಾನ ದಾಖಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 50 ಮತಗಟ್ಟೆಗಳಲ್ಲಿ ಅತಿ ಹೆಚ್ಚು ಶೇ 70 ರಿಂದ 80 ರಷ್ಟು ಮತದಾನ ಆಗಿದೆ. ಕಳೆದ 2023 ಚುನಾವಣೆಯಲ್ಲಿ ಶೇ 69.48 ರಷ್ಟು ಮತದಾನವಾಗಿತ್ತು. ಆದ್ರೆ ಈ ಸಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಹೊಸದಾಗಿ 20397 ಮತದಾರ ಸೇರ್ಪಡೆ ಆಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಮತದಾನದಿಂದ 72141 ಜನರು ದೂರ ಉಳಿದಿದ್ದಾರೆ. 117690 ಮಹಿಳೆಯಲ್ಲಿ 79823ಮಹಿಳೆಯರು ಮತದಾನ ಮಾಡಿದ್ದಾರೆ. ಇನ್ನು 11339 ಪುರುಷರಲ್ಲಿ 78290 ಪುರುಷರು ತಮ್ಮ ಹಕ್ಕು ಚಲಾಯಿಸಿದ್ದಾರೆ. 43 ಇತರೇ ಮತದಾರರಲ್ಲಿ 18 ಜನ ಓಟ್ ಮಾಡಿದ್ದಾರೆ.
ಈಗ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದ ಕಾರಣ ಅವರು ತಮಗೆ ಟಿಕೆಟ್ ಕೇಳಿದ್ರು. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಮೊಮ್ಮಗ ಸಮರ್ಥ ಶಾಮನೂರ್ ಗೆ ಟಿಕೆಟ್ ನೀಡಿತ್ತು. ಸಿಎಂ ಮತ್ತು ಡಿಸಿಎಂ ತಲಾ ಮೂರು ದಿನ ಇಲ್ಲಿಯೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದರು. ಮುಸ್ಲಿಂ ಮುಖಂಡರ ಮನವೊಲಿಸಿ ಕಣದಿಂದ ಹಿಂದೆ ಸರಿಸಿದ್ದು, ಕೆಲ ಗೊಂದಲಗಳ ನಡುವೆ ಮತದಾನ ಮುಗಿದೆ. ಇನ್ನು ಅಂಕಿ-ಸಂಖ್ಯೆಗಳ ಲೆಕ್ಕಾಚಾರಕ್ಕೆ ಹೋದ್ರೆ ಮುಸ್ಲಿಂ ಮತದಾರರು ಹೆಚ್ಚಿರುವ ಮತಗಟ್ಟೆಯಲ್ಲಿ ಬರೋಬರಿ 56 ಸಾವಿರ ಮತದಾನವಾಗಿದೆ. ಈ ಮತ ಬುಟ್ಟಿಗೆ ಎಸ್ ಪಿಐ ಮತ್ತು ಮುಸ್ಲಿಂ ಪಕ್ಷೇತರರು ಕೈ ಹಾಕಿದ್ದಾರೆ ಎಂಬ ಚರ್ಚೆ ನಡೆದಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಮುಸ್ಲಿಮರ ಮತಗಳನ್ನ ಸೆಳೆಯಲು ಬಿಜೆಪಿ ಸಹ ಪ್ರಯತ್ನಿಸಿದೆ. ಕೇಸರಿ ಪಡೆ ಇದೇ ಮೊದಲು ಅಲ್ಪಸಂಖ್ಯಾತರ ಬಗ್ಗೆ ಅನುಕಂಪ ತೋರಿಸಿದ್ದು. ಜೊತೆಗೆ ಬಹುತೇಕ ಸಭೆಗಳಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡು ಪ್ರಚಾರ ನಡೆಸಿದೆ. ಹೀಗಾಗಿ ಮುಸ್ಲಿಮರ ಮತಗಳ ವಿಭಜನೆಯಾಗಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ಅಲ್ಪಸಂಖ್ಯಾತರ ಮತಕ್ಕೆ ಇನ್ನೊಬ್ಬರು ಕೈ ಹಾಕಿದ್ದಾರೆ ಎಂದು ಚುನಾವಣೆ ಬಳಿಕ ಕಾಂಗ್ರೆಸ್ ಮುಖಂಡರು ನೀಡುತ್ತಿರುವ ಹೇಳಿಕೆ ಸಂಶಯಕ್ಕೆ ಕಾರಣವಾಗಿದೆ.
ಗೆಲುವಿನ ಉತ್ಸಾಹದಲ್ಲಿ ಬಿಜೆಪಿ
ಕಳೆದ 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿಜಿ ಅಜಯಕುಮಾರ 56416 ಅಂದ್ರೆ ಶೇ. 38.50 ರಷ್ಟು ಮತಪಡೆದಿದ್ದು. ಗೆಲುವು ಕಂಡಿದ್ದ ಶಾಮನೂರು ಶಿವಶಂಕರಪ್ಪ 84298 ಮತ ಅಂದ್ರೆ 57.60 ರಷ್ಟು ಓಟ್ ಪಡೆದು 27888 ಮತಗಳಿಂದ ಗೆದಿದ್ದರು. ಆದ್ರೆ, ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮಾಜ ಮತಗಳ ವಿಭಜನೆಯಾಗಿದ್ದು, ಇದು ಬಿಜೆಪಿಗೆ ಪ್ಲಸ್ ಆಗಿ ಗೆಲುವು ಸಾಧಿಸಲಿದ್ದೇ ಎನ್ನುವ ಲೆಕ್ಕಾಚಾರ ಕೇಸರಿ ಪಡೆ ನಾಯುಕರದ್ದು. .
ಕಾಂಗ್ರೆಸ್ ಲೆಕ್ಕಾಚಾರವೇನು?
ಇನ್ನೊಂದೆಡೆ ಕಾಂಗ್ರೆಸ್ ನಾಯಕರ ಲೆಕ್ಕಾಚಾರವೇ ಬೇರೆ ಇದೆ. ಕಳೆದ ಚುನಾವಣೆಗಳನ್ನ ನೋಡಿದಾಗ ಮೇಲ್ಜಾತಿಯ ಜನ ಇರುವ ಮತಗಟ್ಟೆಯಲ್ಲಿ ಸಹ ಕಾಂಗ್ರೆಸ್ ಮತಗಳಿಸಿತ್ತು. ಇದು ಈ ಸಲ ಸಹ ಮುಂದುವರೆಯುವ ಸಾಧ್ಯತೆ ಇದೆ. ಮೇಲಾಗಿ ಶಾಮನೂರು ಶಿವಶಂಕರಪ್ಪ ವೀರಶೈವ ಸಮಾಜದ ಅಧ್ಯಕ್ಷ. ಹೀಗಾಗಿ ವೀರಶೈವದ ಮತಗಳ ಸಾಲಿಡ್ ಆಗಿ ಕಾಂಗ್ರೆಸ್ ಬಿದ್ದಿವೆ. ಇನ್ನು ಅಹಿಂದ ವರ್ಗದ ಮತಗಳು ಸಹ ತಮ್ಮ ಪರವಾಗಿ ಬಿದ್ದಿವೆ. ಹಾಗೇ ಅಲ್ಪಸಂಖ್ಯಾತರ ಮತಗಳು ಹೆಚ್ಚಾಗಿ ವಿಭಜನೆಯಾಗಿಲ್ಲ. ಅಲ್ಪ ಸ್ವಲ್ಪವಾಗಿರಬಹುದು. ಇದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರದ ಬದಲಿಗೆ ಗೆಲುವಿನ ಲೀಡ್ ಕಡಿಮೆಯಾಗಹುದು ಎನ್ನುವು ಕಾಂಗ್ರೆಸ್ಸಿಗರ ಲೆಕ್ಕಾಚಾರ.
ಏನೇ ಆಗಲಿ ಹಿಂದೆಂದು ಕಂಡರಿಯದ ಸ್ಪರ್ಧೆ ಈ ಸಲ ಆಗಿದೆ. ಜಿದ್ದಾಜಿದ್ದಿ ಸ್ವಲ್ಪ ಜಾಸ್ತಿಯೇ ಇತ್ತು. ಅವರು ಮತ ಕಿತ್ತರೇ, ಆ ಪ್ರದೇಶದಲ್ಲಿ ಇವರು ಸ್ವಲ್ಪ ಜಾಸ್ತಿ ತೆಗೆದುಕೊಂಡರೇ ನಮಗೆ ಅನುಕೂಲ ಎಂಬ ಮಾತುಗಳೇ ಕೇಳಿ ಬರುತ್ತಿವೆ. ಹೀಗಾಗಿ ಎರಡು ಪಕ್ಷಗಳ ಮುಖಂಡರಲ್ಲಿ ಗೆಲುವಿನ ವಿಶ್ವಾಸ ಅಂತು ಇದೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ‘ಜೈಲರ್ 2’ (Jailer 2) ಚಿತ್ರದ ಬಗ್ಗೆ ಈಗ ಒಂದು ಕುತೂಹಲಕಾರಿ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಬರಲಿರುವ ಒಂದು ಪ್ರಮುಖ ಅತಿಥಿ ಪಾತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಬದಲು ಟಾಲಿವುಡ್ನ ‘ಪವರ್ ಸ್ಟಾರ್’ ಪವನ್ ಕಲ್ಯಾಣ್ (Pawan Kalyan) ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆ ಮೂಲಕ ‘ಜೈಲರ್ 2’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚುವಂತಾಗಿದೆ.
ಮೊದಲಿಗೆ ಈ ಸಿನಿಮಾದಲ್ಲಿ ರಜನಿಕಾಂತ್ ಜೊತೆಗೆ ಶಾರುಖ್ ಖಾನ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಇತ್ತು. ಶಾರುಖ್ ಕೂಡ ಈ ಪಾತ್ರದ ಬಗ್ಗೆ ಆಸಕ್ತಿ ತೋರಿಸಿದ್ದರು ಎನ್ನಲಾಗಿತ್ತು. ಆದರೆ, ಪ್ರಸ್ತುತ ಅವರು ತಮ್ಮ ‘ಕಿಂಗ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಕಾರಣ, ಡೇಟ್ಸ್ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ‘ಜೈಲರ್ 2’ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಶಾರುಖ್ ಖಾನ್ ಡೇಟ್ಸ್ ಇಲ್ಲದ ಕಾರಣ ಚಿತ್ರತಂಡವು ಈಗ ಪವನ್ ಕಲ್ಯಾಣ್ ಅವರನ್ನು ಸಂಪರ್ಕಿಸಿದೆ ಎಂದು ವರದಿ ಆಗಿದೆ. ಒಂದು ವೇಳೆ ಇದು ನಿಜವಾದರೆ, ರಜನಿಕಾಂತ್ ಮತ್ತು ಪವನ್ ಕಲ್ಯಾಣ್ ಅವರನ್ನು ಒಂದೇ ಪರದೆಯ ಮೇಲೆ ನೋಡುವುದು ಅಭಿಮಾನಿಗಳಿಗೆ ಹಬ್ಬವೇ ಸರಿ. ಆದರೂ, ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಹೊರಬೀಳಬೇಕಿದೆ.
‘ಜೈಲರ್’ ಮೊದಲ ಭಾಗದಲ್ಲಿ ಮ್ಯಾಜಿಕ್ ಮಾಡಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮತ್ತು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಈ ಸೀಕ್ವೆಲ್ನಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ. ಇದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಅವರ ಜೊತೆ ಪವನ್ ಕಲ್ಯಾಣ್ ಕೂಡ ಸೇರಿಕೊಂಡರೆ ಸಿನಿಮಾದ ಮಾಸ್ ಎಲಿಮೆಂಟ್ ಹೆಚ್ಚಲಿದೆ.
ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದ್ದು, ಈ ವರ್ಷದ ಅಂತ್ಯದ ವೇಳೆಗೆ ‘ಜೈಲರ್ 2’ ಬೆಳ್ಳಿ ಪರದೆಯ ಮೇಲೆ ಅಬ್ಬರಿಸಲು ಸಿದ್ಧವಾಗುತ್ತಿದೆ ಎಂದು ಸ್ವತಃ ರಜನಿಕಾಂತ್ ಅವರೇ ಇತ್ತೀಚೆಗೆ ಸುಳಿವು ನೀಡಿದ್ದರು. ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಕೂಡ ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಈ ಎಲ್ಲ ಕಾರಣಗಳಿಂದ ಹೈಪ್ ಜಾಸ್ತಿ ಆಗಿದೆ.
ದೇವನಹಳ್ಳಿ, ಏಪ್ರಿಲ್ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್ಗೆ ಕ್ಲಿಯರೆನ್ಸ್ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.
2026 ರ ಐಪಿಎಲ್ನಲ್ಲಿ ತವರಿನಿಂದ ಹೊರಕ್ಕೆ ಮೊದಲ ಪಂದ್ಯವನ್ನಾಡಿದ ಆರ್ಸಿಬಿ, ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಪವರ್ಪ್ಲೇನಲ್ಲಿ ಅಂದರೆ ಮೊದಲ 6 ಓವರ್ಗಳಲ್ಲಿ 60 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿತು.
ಎಂದಿನಂತೆ ಆರ್ಸಿಬಿ ಪರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಇತ್ತ ರಾಜಸ್ಥಾನ್ ಪರ ಬೌಲಿಂಗ್ ಆರಂಭಿಸಿದ ಚೋಫ್ರಾ ಆರ್ಚರ್ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ಪಡೆದರು. ಆರ್ಚರ್ ಎಸೆದ ಬೌನ್ಸರ್ಗೆ ಸಾಲ್ಟ್ ಬಳಿ ಉತ್ತರವಿರಲಿಲ್ಲ. ಹೀಗಾಗಿ ಸಾಲ್ಟ್ ಕೀಪರ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು.
ಸಾಲ್ಟ್ ವಿಕೆಟ್ ಬಳಿಕ ಬಂದ ದೇವದತ್ ಪಡಿಕ್ಕಲ್ ಎಂದಿನಂತೆ ಕೊಹ್ಲಿ ಜೊತೆಗೂಡಿ ಉತ್ತಮ ಜೊತೆಯಾಟ ಕಟ್ಟುತ್ತಿದ್ದರು. ಹೀಗಾಗಿ ಮೊದಲ ಓವರ್ನಲ್ಲಿ ವಿಕೆಟ್ ಬಿದ್ದರೂ ಈ ಜೋಡಿ 2 ಓವರ್ಗಳ ಅಂತ್ಯಕ್ಕೆ 32 ರನ್ ಕಲೆಹಾಕಿತ್ತು. ಆರ್ಚರ್ ಎಸೆದ 3ನೇ ಓವರ್ನಲ್ಲೂ 13 ರನ್ ಬಂದಿತ್ತಾದರೂ, ಕೊನೆಯ ಎಸೆತದಲ್ಲಿ ಪಡಿಕ್ಕಲ್ ವಿಕೆಟ್ ಉರುಳಿತು.
ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್ ಈ ಪಂದ್ಯದಲ್ಲಿ 14 ರನ್ ಬಾರಿಸಿ ಔಟಾದರು. ಆರಂಭಿಕ ಎರಡು ವಿಕೆಟ್ ಪತನದ ಬಳಿಕ ಕೊಹ್ಲಿ ಮೇಲೆ ಹೆಚ್ಚಿನ ಜವಾಬ್ದಾರಿ ಬಿದ್ದಿತ್ತು. ಅದರಂತೆ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಕಲೆಹಾಕಿದರು. ಆದರೆ ಬಿಷ್ಣೋಯಿ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆದರು.
ಹೀಗಾಗಿ ಆರ್ಸಿಬಿ ಪವರ್ ಪ್ಲೇ ಅಂತ್ಯಕ್ಕೆ 61 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿತು. ಕೊಹ್ಲಿ ವಿಕೆಟ್ ಬಿದ್ದ ಬಳಿಕ ಬ್ಯಾಟಿಂಗ್ನಲ್ಲಿ ಬಡ್ತಿ ಪಡೆದು ಬಂದಿದ್ದ ಕೃನಾಲ್ ಪಾಂಡ್ಯ ಹೆಚ್ಚು ಪರಿಣಾಮಕಾರಿಯಾಗದೆ ಕೇವಲ 1 ರನ್ಗೆ ಪೆವಿಲಿಯನ್ ಸೇರಿಕೊಂಡರು. ಜಿತೇಶ್ ಶರ್ಮಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಕೇವಲ 5 ರನ್ಗಳಿಗೆ ವಿಕೆಟ್ ಒಪ್ಪಿಸಿದರು.
ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ (Kotigobba) ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ‘ತುಂಬಾ ಖುಷಿ ಆಗುತ್ತಿದೆ. 25 ವರ್ಷಗಳ ಹಿಂದೆ ಈ ಚಿತ್ರವನ್ನು ನಾನು ಅಭಿಮಾನಿಗಳ ಜೊತೆ ನೋಡಲು ಸಾಧ್ಯವಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಈಗಲೂ ಅಭಿಮಾನಿಗಳಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ವಿಷ್ಣು ಸರ್ ಮ್ಯಾಜಿಕ್ ಇದು. ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಇಂದಿಗೂ ಈ ಸಿನಿಮಾ ಮತ್ತು ಹಾಡುಗಳು ಎಷ್ಟು ಫ್ರೆಶ್ ಆಗಿದೆ. ವಿಷ್ಣುವರ್ಧನ್ (Vishnuvardhan) ಅವರು ಎವರ್ಗ್ರೀನ್. ಇಂದು ನಾನು ಕೂಡ ಅವರಿಗೋಸ್ಕರವೇ ಬಂದಿದ್ದೇನೆ’ ಎಂದು ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ.
ಬೆಳಗಾವಿ, (ಏಪ್ರಿಲ್ 10): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ದಾವಣಗೆರೆಯಲ್ಲಿ ಶೇಕಡಾ 20ರಷ್ಟು ಕಮ್ಮಿ ಆಗಲಿದೆ. ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ. ಡ್ಯಾಮೆಜ್ ಅನ್ನು ಸಚಿವರಾದ ಮಲ್ಲಿಕಾರ್ಜುನ ಸರಿಪಡಿಸಬೇಕು. ಅವರು ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ ಕುಟುಂಬಕ್ಕೆ ಧೈರ್ಯ ತುಂಬಿದರು.
ಬರೋಬ್ಬರಿ 11 ಶಸ್ತ್ರಚಿಕಿತ್ಸೆ
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ 24 ವರ್ಷದ ಪೂಜಾ ಮಾರಕ ಕಾಯಿಲೆಗೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಲ್ಲಿಯೇ ನೆಲೆಸಿರುವ ಈ ಕುಟುಂಬಕ್ಕೆ ವಿಧಿ ಒಂದಾದ ಮೇಲೊಂದರಂತೆ ಕಷ್ಟಗಳನ್ನ ನೀಡಿದೆ. ಮಾರಕ ಕಾಯಿಲೆಗೆ ತುತ್ತಾದ ಪೂಜಾ, ಬರೋಬ್ಬರಿ 11 ಶಸ್ತ್ರಚಿಕಿತ್ಸೆಗಳನ್ನ ಎದುರಿಸಿದ್ದಾರೆ. ಅಂತಿಮವಾಗಿ ತನ್ನ ಎರಡೂ ಕಾಲುಗಳನ್ನೇ ಕಳೆದುಕೊಂಡು ಇಂದು ಹಾಸಿಗೆ ಹಿಡಿದಿದ್ದಾರೆ.
ನನ್ನ ಸಂಕಷ್ಟವನ್ನ ಕುಮಾರಣ್ಣನಿಗೆ ತಲುಪಿಸಿ
ಪೂಜಾಗೆ ಗಾಯದ ಮೇಲೆ ಬರೆ ಎಳೆದಂತೆ ಪತಿ ರವಿ ಕೂಡ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಟ್ಟ ಮಕ್ಕಳನ್ನ ಕಟ್ಟಿಕೊಂಡು ಜೀವನ ನಡೆಸಲು ದಾರಿಯೇ ಇಲ್ಲದಂತಾದಾಗ, ಪೂಜಾ ಮನವಿ ಮಾಡಿದ್ದು ಕುಮಾರಣ್ಣನಿಗೆ. “ನನ್ನ ಸಂಕಷ್ಟವನ್ನ ಹೇಗಾದರೂ ಮಾಡಿ ಅವರಿಗೆ ತಲುಪಿಸಿ” ಎಂದು ಬೇಡಿಕೊಂಡಿದ್ದರು. ಪೂಜಾರ ಕೂಗು ಕುಮಾರಸ್ವಾಮಿ ಅವರಿಗೆ ತಲುಪಿದೆ. ಹಾಗಾಗಿ ಇಂದು ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ನೇರವಾಗಿ ಪೂಜಾರ ಮನೆಗೆ ಭೇಟಿ ನೀಡಿದ್ದಾರೆ.
ಹಾಸಿಗೆಯಲ್ಲಿ ಮಲಗಿದ್ದ ಪೂಜಾರನ್ನ ಕಂಡು ಮರುಗಿದ ಹೆಚ್ಡಿ ಕುಮಾರಸ್ವಾಮಿ, ಕುಟುಂಬದ ಪರಿಸ್ಥಿತಿಯನ್ನ ಆಲಿಸಿದರು. ಪೂಜಾ ತಂದೆ ಕುಮಾರ ಮತ್ತು ತಾಯಿ ಶೀಲಾರಿಗೆ ಧೈರ್ಯ ತುಂಬಿದರು. ಸ್ಥಳದಲ್ಲೇ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಅಷ್ಟೇ ಅಲ್ಲ, ಕುಟುಂಬದ ದೊಡ್ಡ ತಲೆನೋವಾಗಿದ್ದ ಮನೆಯ ಲೀಸ್ ಹಣವನ್ನ ತಾವೇ ಪಾವತಿಸುವುದಾಗಿ ಭರವಸೆ ನೀಡುವ ಮೂಲಕ ಕುಟುಂಬಕ್ಕೆ ಆಸರೆಯಾದರು. ಪತಿ ರವಿ ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸುವಂತೆ ಸೂಚನೆ ನೀಡಿದರು.
ಇನ್ನು ಈ ವೇಳೆ ಹೆಚ್ಡಿ ಕುಮಾರಸ್ವಾಮಿಗೆ ಶಾಸಕ ಹರೀಶ್ ಗೌಡ, ಎಂಎಲ್ಸಿ ಮಂಜೇಗೌಡ ಸೇರಿದಂತೆ ಜೆಡಿಎಸ್ ಪ್ರಮುಖ ಮುಖಂಡರು ಸಾಥ್ ನೀಡಿದರು. ಒಟ್ಟಿನಲ್ಲಿ, ರಾಜಕೀಯ ಜಂಜಾಟಗಳ ನಡುವೆಯೂ ಕೇಂದ್ರ ಸಚಿವರು ತೋರಿದ ಈ ಮಾನವೀಯತೆ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಧಿಯ ಆಟಕ್ಕೆ ಸೋತಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೀಡಿದ ಭರವಸೆ ಹೊಸ ಜೀವನದ ಕಿರಣ ಮೂಡಿಸಿದೆ.
ವಾಷಿಂಗ್ಟನ್, ಏಪ್ರಿಲ್ 10: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಇಂದು ಇರಾನ್ ಜೊತೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾರೆ. ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ