Headlines

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ – Kannada News | French President Emmanuel Macron meets PM Narendra Modi at Mumbai’s Lok Bhavan with a hug

ಮುಂಬೈ, ಫೆಬ್ರವರಿ 17: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) 3 ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Daily Devotional: ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Benefits of Parad Shivling Puja: Divine Blessings and Remedies by Dr. Basavaraja Guruji

ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೃಷ್ಟಿ, ಸ್ಥಿತಿ ಮತ್ತು ಲಯಕ್ಕೆ ಅಧಿಪತಿಗಳಾದ ಬ್ರಹ್ಮ, ವಿಷ್ಣು ಮತ್ತು ಶಿವನ ಅನುಗ್ರಹವು ಜೀವನದಲ್ಲಿ ಮಹತ್ವಪೂರ್ಣವಾಗಿದೆ. ಶಿವನು ಅಭಿಷೇಕ ಪ್ರಿಯನಾಗಿದ್ದು, ವಿವಿಧ ಶಿವಲಿಂಗಗಳ ಪೂಜೆಯಿಂದ ಆತನ ಕೃಪೆಗೆ ಪಾತ್ರರಾಗಬಹುದು. ಅಂತಹ ಶಿವಲಿಂಗಗಳಲ್ಲಿ ಪಾದರಸ ಶಿವಲಿಂಗವು ಬಹು ವಿಶೇಷ ಸ್ಥಾನವನ್ನು ಪಡೆದಿದೆ. ಇದು ತಕ್ಷಣವೇ ಪರಿಪೂರ್ಣ ಶಿವಾನುಗ್ರಹವನ್ನು ಕರುಣಿಸುತ್ತದೆ ಎಂದು ಹೇಳಲಾಗುತ್ತದೆ. ಯಾರು ಸಂಕಷ್ಟದಲ್ಲಿದ್ದಾರೋ, ದಾರಿ ಕಾಣದೆ ಇರುವವರಿಗೆ…

Read More

ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು – Kannada News | Another minority horror in Bangladesh: Hindu woman Physically Assaulted,tied to tree, hair cut off

ಢಾಕಾ, ಜನವರಿ 06: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕಳೆದ 18 ದಿನಗಳಲ್ಲಿ ಆರು ಹಿಂದೂ(Hindu)ಗಳನ್ನು ಹತ್ಯೆ ಮಾಡಲಾಗಿದೆ. ಜೆನೈದಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಅಷ್ಟೇ ಅಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಹಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ, ಮರಕ್ಕೆ ಕಟ್ಟಿ. ಬಲವಂತವಾಗಿ ಆಕೆಯ ಕೂದಲುಗಳನ್ನು ಕತ್ತರಿಸಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆಯನ್ನು ವಿಡಿಯೋದಲ್ಲಿ ರೆಕಾರ್ಡ್​…

Read More

ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ – Kannada News | Two Sisters in Jodhpur die on the day of marriage after consuming poison

ನವದೆಹಲಿ, ಫೆಬ್ರುವರಿ 22: ಇಬ್ಬರು ಹೆಣ್ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಮನೆಗೆ ದಿಢೀರನೇ ಸೂತಕದ ಛಾಯೆ ಒತ್ತರಿಸಿಬಂತು. ರಾಜಸ್ಥಾನದ ಗ್ರಾಮವೊಂದರಲ್ಲಿ ಒಂದೇ ದಿನದಂದು ಮದುವೆಯಾಗಬೇಕಿದ್ದ ಇಬ್ಬರು ಸಹೋದರಿಯರು ಮಸಣಕ್ಕೆ ಸೇರಬೇಕಾದ ಘಟನೆ ನಡೆದಿದೆ. ಜೋಧಪುರದ ಮನಾಯ್ ಎನ್ನುವ ಗ್ರಾಮದಲ್ಲಿ ಸಹೋದರಿಯರಾದ ಶೋಭಾ (25) ಮತ್ತು ವಿಮಲಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್​ಡಿಟಿವಿ ವಾಹಿನಿಯಲ್ಲಿ ವರದಿಯಾಗಿದೆ. ಈ ಇಬ್ಬರು ಅಕ್ಕ ತಂಗಿಯರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಶನಿವಾರ (ಫೆ. 21) ಇಬ್ಬರದ್ದೂ ಮದುವೆ…

Read More

ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…

Read More

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಉಡುಪಿ, ಮಾ.21: ಎಲ್ಲೋ ನಡೆಯುತ್ತಿರುವ ಯುದ್ಧವು ಕರಾವಳಿಯ ಮೀನುಗಾರರ ಬದುಕನ್ನು ಅಲ್ಲೋಲಕಲ್ಲೋಲಗೊಳಿಸಿದೆ. ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಇಂದು ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 100 ರಿಂದ 200 ರೂಪಾಯಿ ಇಳಿಕೆಯಾಗಿದೆ. ಮೀನುಗಾರ ಮಹಿಳೆಯರಿಗೆ ಅಸಲು ಕೂಡ ಸಿಗದಂತಾಗಿದ್ದು, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.ಅಡುಗೆ ಅನಿಲದ (LPG) ವ್ಯತ್ಯಯ ಮತ್ತು ಯುದ್ಧದ…

Read More

ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

ಟೆಹ್ರಾನ್, ಮಾರ್ಚ್ 20: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು 21ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ (Iran War) ಪ್ರಮುಖ ನಗರಗಳ ಮೇಲೆ ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ದಾಳಿ ನಡೆಸುತ್ತಿದೆ. ಒಂದೊಂದಾಗಿ ಕಮಾಂಡ್‌ನ ಸೇನೆಯ ಪ್ರಮುಖ ನಾಯಕರನ್ನು ಹತ್ಯೆ ಮಾಡುತ್ತಿದೆ. ಇತ್ತೀಚೆಗೆ, ಇಸ್ರೇಲ್ ಮತ್ತೊಮ್ಮೆ ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ಕೂಡ ಅಲಿ ಮೊಹಮ್ಮದ್…

Read More

BREAKING: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.     Source link

Read More

ಐತಿಹಾಸಿಕ ಲಕ್ಕುಂಡಿಯಲ್ಲಿ 6ನೇ ದಿನದ ಉತ್ಖನನದಲ್ಲಿ ಏನೇನು ಸಿಕ್ತು? ಇಲ್ಲಿದೆ ವಿವರ – Kannada News | Lakkundi Gold Treasure: Some old things Found during 6th day excavation

ಗದಗ, (ಜನವರಿ 21): ಲಕ್ಕುಂಡಿಯಲ್ಲಿ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದೇ ಸಿಕ್ಕಿದ್ದು ಗ್ರಾಮದ ಹೆಸರು ಭಾರೀ ಸದ್ದು ಮಾಡತೊಡಗಿದೆ. ಗ್ರಾಮದ ಶ್ರೀಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi excavation) ಭರದಿಂದ ಸಾಗಿದ್ದು,  6ನೇ ದಿನದ ಉತ್ಖನನ ಕಾರ್ಯ ಅಂತ್ಯವಾಗಿದೆ. ಇಂದು (ಜನವರಿ 21) 6ನೇ ದಿನದ ಉತ್ಖನನ ಕಾರ್ಯ ವೇಳೆ ಐದಾರು ಬಿಲ್ಲೆ, ನಾಗರಹಾವಿನ ಚಿತ್ರದ ಶಿಲೆ ಜತೆಗೆ ಮೂಳೆ ತುಣುಕುಗಳು ಸಹ ಸಿಕ್ಕಿರುವುದು ಕುತೂಹಲಕ್ಕೆ ಕಾರಣವಾಗಿದೆ. 6ನೇ ದಿನ…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More